Author: kannadanewsnow09

ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದಿದ್ದಂತ ಕೋಟ್ಯಂತರ ಹಣ ಅವ್ಯವಹಾರ ಆರೋಪ ಪ್ರಕರಣ ಸಂಬಂಧ ಎಸ್ಐಟಿ ಅಧಿಕಾರಿಗಳು ಇಂದು ಕಚೇರಿಯ ಮೇಲೆ ದಾಳಿ ನಡೆಸಿದ್ದಾರೆ. ಈ ಮೂಲಕ ತನಿಖೆಯನ್ನು ಚುರುಕುಗೊಳಿಸಿದ್ದಾರೆ. ಬೆಂಗಳೂರಿನ ವಸಂತನಗರದಲ್ಲಿರುವಂತ ವಾಲ್ಮೀಕಿ ಅಭಿವೃದ್ಧಿ ನಿಗಮದ ಕಚೇರಿಯ ಮೇಲೆ ಎಸ್ ಐ ಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಇಂದು ಇಬ್ಬರು ಆರೋಪಿಗಳ ಜೊತೆಗೆ ಸ್ಥಳ ಮಹಜರನ್ನು ಎಸ್ಐಟಿ ಅಧಿಕಾರಿಗಳು ನಡೆಸುತ್ತಿದ್ದಾರೆ. ಬೆಂಗಳೂರಿನ ವಸಂತನಗರದಲ್ಲಿರುವಂತ ವಾಲ್ಮೀಕಿ ಅಭಿವೃದ್ಧಿ ನಿಗಮದ ಕಚೇರಿಯ ಮೇಲೆ ದಾಳಿ ನಡೆಸಿರುವಂತ ಎಸ್ಐಟಿ ಅಧಿಕಾರಿಗಳು ಡಿಜಿಟಲ್ ಎವಿಡೆನ್ಸ್ ಗಾಗಿ ಕಚೇರಿಯಲ್ಲಿ ಶೋಧ ಕಾರ್ಯ ನಡೆಸುತ್ತಿದ್ದಾರೆ. ಈಗಾಗಲೇ ರಾಜ್ಯ ಸರ್ಕಾರ ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣವನ್ನು ಎಸ್ಐಟಿ ತನಿಖೆಗೆ ವಹಿಸಿತ್ತು. ತನಿಖೆಯನ್ನು ಚುರುಕುಗೊಳಿಸಿದ್ದಂತ ಎಸ್ಐಟಿ ಅಧಿಕಾರಿಗಳು ನಿಗಮದ ಇಬ್ಬರು ಅಧಿಕಾರಿಗಳನ್ನು ಬಂಧಿಸಿದ್ದರು. ಅಲ್ಲದೇ ಹೆಚ್ಚಿನ ವಿಚಾರಣೆಗಾಗಿ ಕೋರ್ಟ್ ಮೂಲಕ ತಮ್ಮ ವಶಕ್ಕೆ ಪಡೆದಿದ್ದಾರೆ. ಈಗ ನಿಗಮದ ಕಚೇರಿಯ ಮೇಲೆ ದಾಳಿ ನಡೆಸಿದ್ದಾರೆ. https://kannadanewsnow.com/kannada/wont-be-surprised-if-siddaramaiah-govt-brands-peddler-as-innocent-just-because-he-is-brother-bjp/ https://kannadanewsnow.com/kannada/case-registered-against-dr-sudhakar-for-misusing-state-governments-letterhead/

Read More

ನವದೆಹಲಿ: ವೆಸ್ಟ್ ಇಂಡೀಸ್ ಮತ್ತು ಯುಎಸ್ಎಯಲ್ಲಿ ಜೂನ್ 2 ರಿಂದ ಆಯೋಜಿಸಲಾಗುತ್ತಿರುವ ಟಿ 20 ವಿಶ್ವಕಪ್ ( T20 World Cup ) ಅನ್ನು ಡಿಡಿ ಫ್ರೀ ಡಿಶ್ ಪ್ಲಾಟ್ಫಾರ್ಮ್ನಲ್ಲಿ ಪ್ರಸಾರ ಮಾಡುವುದಾಗಿ ಪ್ರಸಾರ ಭಾರತಿ ಇಂದು ಪ್ರಕಟಿಸಿದೆ. ದೂರದರ್ಶನವು ಹಲವಾರು ಪ್ರಮುಖ ಜಾಗತಿಕ ಅಂತರರಾಷ್ಟ್ರೀಯ ಕ್ರೀಡಾಕೂಟಗಳ ಪ್ರಸಾರದೊಂದಿಗೆ ಟಿ 20 ವಿಶ್ವ ಕಪ್ ನ ಉನ್ನತ ಮಟ್ಟದ ಪ್ರಸಾರವನ್ನು ಅನುಸರಿಸುತ್ತದೆ. ಇದರಲ್ಲಿ ಪ್ಯಾರಿಸ್ ಒಲಿಂಪಿಕ್ಸ್ ಗೇಮ್ಸ್ 2024 (ಜುಲೈ 26-ಆಗಸ್ಟ್ 11, 2024), ಪ್ಯಾರಿಸ್ ಪ್ಯಾರಾಲಿಂಪಿಕ್ಸ್ ಗೇಮ್ಸ್ (ಆಗಸ್ಟ್ 28 ರಿಂದ ಸೆಪ್ಟೆಂಬರ್ 8, 2024), ಭಾರತ ವಿರುದ್ಧ ಜಿಂಬಾಬ್ವೆ (ಜುಲೈ 6 ರಿಂದ ಜುಲೈ 1, 2024) ಮತ್ತು ಭಾರತ ವಿರುದ್ಧ ಶ್ರೀಲಂಕಾ (ಜುಲೈ 27 ರಿಂದ ಆಗಸ್ಟ್ 7, 2024) ಮತ್ತು ಫ್ರೆಂಚ್ ಓಪನ್ 2024 ರ ಮಹಿಳಾ ಮತ್ತು ಪುರುಷರ ಫೈನಲ್ಸ್ನ ನೇರ ಪ್ರಸಾರ ಮತ್ತು ಮುಖ್ಯಾಂಶಗಳು ಸೇರಿವೆ. ಪ್ರಸಾರ ಭಾರತಿ ಸಿಇಓ ಗೌರವ್ ದ್ವಿವೇದಿ…

Read More

ಬೆಂಗಳೂರು: ಕಳೆದ 24 ವರ್ಷದಿಂದ ರಾಜ್ಯದ ಆರೋಗ್ಯ ಇಲಾಖೆಯಲ್ಲಿ ಅಧಿಕಾರಿಯಾಗಿ ಸೇವೆ ಸಲ್ಲಿಸುತ್ತಿದ್ದರು. ಅನುಕಂಪದ ಆಧಾರದ ನೌಕರಿಗೆ ಸೇರಿದ್ದಂತ ಅವರು ಸಹಾಯ ಆಡಳಿತಾಧಿಕಾರಿಯಾಗಿಯೂ ಕೆಲಸ ಮಾಡ್ತಿದ್ದರು. ಆದ್ರೇ 24 ವರ್ಷಗಳ ಬಳಿಕ ಸುಳ್ಳಿ ಆದಾಯ ಪ್ರಮಾಣ ಪತ್ರ ನೀಡಿದ ಕಾರಣಕ್ಕೆ ರಾಜ್ಯ ಸರ್ಕಾರ ಸೇವೆಯಿಂದ ಅಮಾನತುಗೊಳಿಸಿ ಆದೇಶಿಸಿದೆ. ಈ ಕುರಿತಂತೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ಆಯುಕ್ತರಾದಂತ ಡಿ.ರಂದೀಪ್ ಅವರು ಆದೇಶ ಹೊರಡಿಸಿದ್ದಾರೆ. ಅದರಲ್ಲಿ ಆರ್. ವಾಣಿ, ಸಹಾಯಕ ಆಡಳಿತಾಧಿಕಾರಿಗಳು, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ನಿರ್ದೇಶನಾಲಯ, ಆರೋಗ್ಯ ಸೌಧ, ಬೆಂಗಳೂರು ಇವರು ಅಕ್ರಮವಾಗಿ ಅನುಕಂಪದ ಆಧಾರದ ಮೇಲೆ ಸರ್ಕಾರಿ ನೇಮಕಾತಿ ಪಡೆದಿರುತ್ತಾರೆಂಬ ಎಂದು ಸಿ. ಆರ್. ಮಂಜುನಾಥ ಹಾಸನ ಶಿವಣ್ಣ ಕೆ.ಹೆಚ್. ಮತ್ತು ಮಂಜುನಾಥ ನಿಲಸೋಗೆ ಬೆಂಗಳೂರು ಇವರುಗಳು ಮೇಲೆ ಓದಲಾದ (1) ಮತ್ತು (2)ರಲ್ಲಿ ದೂರು ಸಲ್ಲಿಸಿದ್ದು ಸದರಿ ದೂರಿಗೆ ಸಂಬಂಧಿಸಿದಂತೆ ಮುಖ್ಯ ಜಾಗೃತಾಧಿಕಾರಿಗಳು, ಜಾಗೃತಕೋಶ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳು, ಬೆಂಗಳೂರು ಇವರು…

Read More

ನವದೆಹಲಿ: ಅಂತರರಾಷ್ಟ್ರೀಯ ಕ್ರಿಕೆಟ್ ಕೌನ್ಸಿಲ್ (International Cricket Council -ICC) ಸೋಮವಾರ ಪುರುಷರ ಟಿ 20 ವಿಶ್ವಕಪ್ 2024 ಗಾಗಿ ( Men’s T20 World Cup 2024 ) 11.25 ಮಿಲಿಯನ್ ಡಾಲರ್ ಬಹುಮಾನದ ಮೊತ್ತವನ್ನು ಘೋಷಿಸಿದೆ. “ಐಸಿಸಿ ಪುರುಷರ ಟಿ 20 ವಿಶ್ವಕಪ್ 2024 ರ ವಿಜೇತರು ಕನಿಷ್ಠ 2.45 ಮಿಲಿಯನ್ ಡಾಲರ್ ಪಡೆಯಲಿದ್ದಾರೆ – ಇದು ಈವೆಂಟ್ ಇತಿಹಾಸದಲ್ಲಿ ಅತಿ ಹೆಚ್ಚು ಬಹುಮಾನದ ಮೊತ್ತವಾಗಿದೆ” ಎಂದು ಐಸಿಸಿ ಮಾಧ್ಯಮ ಪ್ರಕಟಣೆಯಲ್ಲಿ ತಿಳಿಸಿದೆ. ಪಂದ್ಯಾವಳಿಯ ಒಂಬತ್ತನೇ ಆವೃತ್ತಿಯು ವೆಸ್ಟ್ ಇಂಡೀಸ್ ಮತ್ತು ಯುಎಸ್ಎಯ ಒಂಬತ್ತು ಸ್ಥಳಗಳಲ್ಲಿ 28 ದಿನಗಳ ಅವಧಿಯಲ್ಲಿ 20 ತಂಡಗಳು ಭಾಗವಹಿಸಲಿದ್ದು, ಇದು ಈ ರೀತಿಯ ಅತಿದೊಡ್ಡ ಘಟನೆಯಾಗಿದೆ. ರನ್ನರ್ ಅಪ್ ಸ್ಥಾನ ಪಡೆಯುವವರು ಕನಿಷ್ಠ 1.28 ಮಿಲಿಯನ್ ಡಾಲರ್ ಪಡೆಯಲಿದ್ದು, ಸೆಮಿಫೈನಲ್ನಲ್ಲಿ ಸೋತ ತಂಡಗಳು ತಲಾ 787,500 ಡಾಲರ್ ಪಡೆಯಲಿದ್ದಾರೆ. ಎರಡನೇ ಸುತ್ತನ್ನು ದಾಟಲು ವಿಫಲವಾದ ತಂಡಗಳು ತಲಾ $ 382,500 ಮತ್ತು ಒಂಬತ್ತನೇ…

Read More

ಮುಂಬೈ: ಲೋಕಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ 24 ಗಂಟೆಗಳಲ್ಲಿ ಪ್ರತಿಪಕ್ಷ ಇಂಡಿ ಮೈತ್ರಿಕೂಟವು ತನ್ನ ಪ್ರಧಾನಿ ಅಭ್ಯರ್ಥಿಯನ್ನು ಘೋಷಿಸಲಿದೆ ಎಂದು ಶಿವಸೇನೆ (ಯುಬಿಟಿ) ಮುಖಂಡ ಸಂಜಯ್ ರಾವತ್ ಸೋಮವಾರ ಹೇಳಿದ್ದಾರೆ. ಜೂನ್ 1 ರಂದು ಕೊನೆಗೊಂಡ ಏಳು ಹಂತಗಳ ಚುನಾವಣೆಯ ಮತ ಎಣಿಕೆ ಮಂಗಳವಾರ ಬೆಳಿಗ್ಗೆ 8 ರಿಂದ ನಡೆಯಲಿದೆ. ಶಿವಸೇನೆ (ಯುಬಿಟಿ) ಮತ್ತು ಕಾಂಗ್ರೆಸ್ ನೇತೃತ್ವದ ಹಲವಾರು ವಿರೋಧ ಪಕ್ಷಗಳನ್ನು ಒಳಗೊಂಡಿರುವ ಭಾರತೀಯ ರಾಷ್ಟ್ರೀಯ ಅಭಿವೃದ್ಧಿ ಅಂತರ್ಗತ ಒಕ್ಕೂಟದ (ಇಂಡಿಯಾ) ಪ್ರಧಾನಿ ಅಭ್ಯರ್ಥಿಯ ಬಗ್ಗೆ ಕೇಳಿದಾಗ, “ನಾವು ಪ್ರಧಾನಿ ಹುದ್ದೆಗೆ ಅನೇಕ ಅಭ್ಯರ್ಥಿಗಳನ್ನು ಹೊಂದಿದ್ದೇವೆ. ಆದರೆ ಬಿಜೆಪಿ ಬಗ್ಗೆ ಏನು? ಫಲಿತಾಂಶ ಪ್ರಕಟವಾದ 24 ಗಂಟೆಗಳಲ್ಲಿ ಇಂಡಿ ಮೈತ್ರಿಕೂಟ ತನ್ನ ಪ್ರಧಾನಿ ಅಭ್ಯರ್ಥಿಯನ್ನು ಘೋಷಿಸಲಿದೆ. ವಿರೋಧ ಬಣದ ಎಲ್ಲಾ ನಾಯಕರು ದೆಹಲಿಯಲ್ಲಿ ಸಭೆ ಸೇರುತ್ತಾರೆ ಮತ್ತು ಅಲ್ಲಿ ಘೋಷಣೆ ಮಾಡಲಾಗುವುದು ಎಂದು ಶಿವಸೇನೆ (ಯುಬಿಟಿ) ರಾಜ್ಯಸಭಾ ಸಂಸದ ಪ್ರತಿಪಾದಿಸಿದರು. ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ‘ರಾಮ್ ಲಲ್ಲಾ’ ಹೆಸರಿನಲ್ಲಿ…

Read More

ಬೆಂಗಳೂರು: ಮತದಾನೋತ್ತರ ಸಮೀಕ್ಷೆ ಬಗ್ಗೆ ಕಾಂಗ್ರೆಸ್ ಮಾಡಿರುವ ಟೀಕೆಯ ಬಗ್ಗೆ ಉತ್ತರ ಕೊಟ್ಟ ಕುಮಾರಸ್ವಾಮಿ ಅವರು; ಇದು ಮೋದಿ ಎಕ್ಸಿಟ್ ಪೋಲ್, ಮಿಡಿಯಾ ಎಕ್ಸಿಟ್ ಪೋಲ್ ಎಂದು ಕಾಂಗ್ರೆಸ್ ನಾಯಕರು ಹೇಳಿದ್ದಾರೆ. ಅದು ಅವರ ಅಭಿಪ್ರಾಯ. ನಾಳೆ ಮಧ್ಯಾಹ್ನದವರೆಗೆ ಅವರು ಸಂತೋಷವಾಗಿರಲಿ. ಅವರ ಸಂತೋಷಕ್ಕೆ ನಾನು ಯಾಕೆ ಅಡ್ಡಿಪಡಿಸಲಿ, ಅವರು ಸಂತೋಷವಾಗಿರಲಿ ಬಿಡಿ ಎಂದರು. ಲೋಕಸಭೆ ಚುನಾವಣೆಯಲ್ಲಿ ನಾವು ರಾಜ್ಯದಲ್ಲಿ ಕೊನೆಪಕ್ಷ 25 ಸೀಟು ಗೆಲ್ಲುತ್ತೇವೆ. ಮತಗಟ್ಟೆ ಸಮೀಕ್ಷೆ ಇದನ್ನೇ ಹೇಳುತ್ತಿದೆ. ಜೆಡಿಎಸ್ ಪಕ್ಷ ಮೂರು ಕ್ಷೇತ್ರಗಳಲ್ಲಿ ಗೆಲುವು ಪಡೆಯಲಿದೆ ಎಂದರು ಕುಮಾರಸ್ವಾಮಿ ಅವರು. ದೇಶದಲ್ಲಿ ಎನ್ ಡಿಎ ಪರವಾದ ಅಲೆ ಇದೆ. ಮೂರನೇ ಬಾರಿಗೆ ಮೋದಿ ಸರ್ಕಾರ ಬರುವುದು ಖಚಿತ. ರಾಜ್ಯದಲ್ಲಿ ಜೆಡಿಎಸ್ ಬಿಜೆಪಿ ಮೈತ್ರಿ ಉತ್ತಮ ಫಲಿತಾಂಶ ನೀಡಲಿದೆ. ಅದನ್ನೇ ಮತಗಟ್ಟೆ ಸಮೀಕ್ಷೆ ಹೇಳಿದೆ. ವಿಧಾನಸಭೆ ಚುನಾವಣೆ ನಂತರ ಕೇಂದ್ರದ ಗೃಹ ಸಚಿವರು, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರು ಮೈತ್ರಿಗೆ ಒಪ್ಪಿದರು. ಎರಡೂ ಪಕ್ಷಗಳ ಮೈತ್ರಿಯಲ್ಲಿ ಒಟ್ಟಾಗಿ ಹೋಗಬೇಕೆಂದು ಸಲಹೆ ನೀಡಿದರು. ಮೈತ್ರಿಯಾಗಿ…

Read More

ಬೆಂಗಳೂರು: ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರ ಪ್ರಕರಣ ವಿಚಾರ ಏನಿದ್ದರೂ ತನಿಖೆ ಮಾಡುತ್ತಿರುವ ಎಸ್ ಐಟಿ ಹಾಗೂ ಸರಕಾರಕ್ಕೆ ಬಿಟ್ಟಿದ್ದು ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಸ್ಪಷ್ಟಪಡಿಸಿದರು. ಪ್ರಜ್ವಲ್ ಘಟನೆಯಲ್ಲಿ ಏನೆಲ್ಲಾ ನಡೆಯಿತು ಎಂಬುದನ್ನು ಒಂದು ತಿಂಗಳಿಂದ ನೋಡಿದ್ದೇನೆ. ಅವರು ವಿದೇಶದಿಂದ ವಾಪಸ್ ಬಂದು ಎಸ್ ಐಟಿ ಮುಂದೆ ಹಾಜರಾಗಬೇಕು ಎಂದು ನಾನು ಮತ್ತು ದೇವೇಗೌಡರು ಹೇಳಿದ್ದೆವು. ಜತೆಗೆ ದೇವೇಗೌಡರು ಕೊನೆಯ ಎಚ್ಚರಿಕೆ ನೀಡಿದ್ದರು. ನಮ್ಮ ಮಾತಿನಂತೆ ಅವರು ಬಂದು ಹಾಜರಾಗಿದ್ದಾರೆ. ಅಲ್ಲಿಗೆ ನಮ್ಮ ಕುಟುಂಬದ ಪಾತ್ರ ಮುಗಿಯಿತು. ಇನ್ನು ಎಸ್ ಐಟಿ ಮತ್ತು ಸರ್ಕಾರದ್ದೇ ಜವಾಬ್ದಾರಿ ಎಂದು ಅವರು ಸ್ಪಷ್ಟ ಮಾತುಗಳಲ್ಲಿ ಹೇಳಿದರು. ಈಗ ಅವರು ವಾಪಸ್ ಬಂದಿದ್ದಾರೆ. ತನಿಖೆ ನಡೆಯುತ್ತಿದೆ. ಅವರು ಗೆದ್ದ ಮೇಲೆ ಏನೂ ಅಂತ ನೋಡೋಣ ಎಂದು ಅವರು ಪ್ರಶ್ನೆಯೊಂದಕ್ಕೆ ಉತ್ತರ ಕೊಟ್ಟರು. ಭಾವಾನಿ ರೇವಣ್ಣ ಅವರಿಗೆ ನೋಟೀಸ್ ನೀಡಿರುವ ವಿಚಾರದ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು; ಕಾನೂನು ಪ್ರಕಾರ ಭವಾನಿ ರೆವಣ್ಣ…

Read More

ಬೆಂಗಳೂರು: ಕಳೆದ ರಾತ್ರಿ ಇಷ್ಟು ಮಳೆ ಸುರಿದರೂ ಮಾನ್ಯ ಡಿಸಿಎಂ ಸಾಹೇಬರು ಯಾಕೆ ಸಿಟಿ ರೌಂಡ್ಸ್ ಕೈಗೊಂಡಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಡಿಸಿಎಂ ಡಿಕೆ ಶಿವಕುಮಾರ್ ಅವರನ್ನು ವ್ಯಂಗ್ಯವಾಗಿ ಪ್ರಶ್ನಿಸಿದರು. ಮಾಧ್ಯಮಗಳು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು; ಇಷ್ಟು ದೊಡ್ಡ ಪ್ರಮಾಣದಲ್ಲಿ ಮಳೆ ಆಗಿದ್ದರೂ ಅವರು ಇನ್ನೂ ಯಾಕೋ ನಗರ ಪ್ರದಕ್ಷಿಣೆಗೆ ಹೋಗಿಲ್ವಾ? ಶೋ ಕೊಡುವುದಕ್ಕೆ ಕಳೆದ ವಾರ ಹೋಗಿದ್ದರಲ್ಲ? ಆಗ ಏನು ಕ್ರಮ ಕೈಗೊಂಡಿದ್ದರು ಇವರು? ಕೆರೆಗಳನ್ನು ನುಂಗಿ ನೀರು ಕುಡಿದರಲ್ಲಾ..? ಯಾವ ಪುರುಷಾರ್ಥಕ್ಕೆ ನಗರ ಪ್ರದಕ್ಷಿಣೆ ಮಾಡುತ್ತಾರೆ? ಡಿಸಿಎಂ ಅಂತಿದ್ರಪ್ಪ.. ಹೋಲ್ ನೈಟ್ ಓಡಾಡ್ತೀನಿ ಅಂತ. ಅದೇನು ನಿದ್ದೆ ಮಾಡ್ತಾ ಇದ್ರೊ ಗೊತ್ತಿಲ್ಲ ಎಂದು ಕುಟುಕಿದರು ಮಾಜಿ ಮುಖ್ಯಮಂತ್ರಿಗಳು. https://kannadanewsnow.com/kannada/cm-siddaramaiah-directly-responsible-for-money-laundering-in-valmiki-development-corporation-hdk/ https://kannadanewsnow.com/kannada/wont-be-surprised-if-siddaramaiah-govt-brands-peddler-as-innocent-just-because-he-is-brother-bjp/

Read More

ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದಿರುವ ಅಕ್ರಮ ಹಣದ ವರ್ಗಾವಣೆಗೆ ಹಣಕಾಸು ಖಾತೆ ಹೊಂದಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ ನೇರ ಹೊಣೆ ಹೊರಬೇಕು ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಹೇಳಿದರು. ವಿಧಾನಸೌಧದಲ್ಲಿ ಮಾಧ್ಯಮಗಳ ಜತೆ ಮಾತನಾಡಿದ ಅವರು; ಎಲ್ಲವನ್ನೂ ಸಚಿವ ನಾಗೇಂದ್ರ ಅವರ ತಲೆಗೆ ಕಟ್ಟುವ ಷಡ್ಯಂತ್ರ ನಡೆಯುತ್ತಿದೆ. ಇಡೀ ಅಕ್ರಮದಲ್ಲಿ ಸರ್ಕಾರದ ಇಡೀ ಸಂಪುಟವೇ ಭಾಗಿಯಾಗಿರುವ ಅನುಮಾನವಿದೆ. ಹೀಗಾಗಿ ಎಲ್ಲಾ ನಿಗಮ ಮಂಡಳಿಗಳಲ್ಲಿ ಇರುವ ಹಣದ ಬಗ್ಗೆ ಜನರ ಮುಂದೆ ಲೆಕ್ಕ ಇಡಬೇಕು ಎಂದು ಒತ್ತಾಯ ಮಾಡಿದರು. ನಿಗಮದ ಹಣ ಹಲವಾರು ನಕಲಿ ಖಾತೆಗಳಿಗೆ ವರ್ಗಾವಣೆ ಆಗಿದೆ. ಈ ಬಗ್ಗೆ ದಾಖಲೆಗಳೇ ಬಹಿರಂಗ ಆಗಿವೆ. ಕೇವಲ ತೆಲಂಗಾಣಕ್ಕೆ ಮಾತ್ರ ಈ ಹಣ ಯಾಕೆ ಹೋಯಿತು? ಯಾರು ವರ್ಗಾವಣೆ ಮಾಡಿಸಿದರು? ಇಲ್ಲಿ ಯೂನಿಯನ್ ಬ್ಯಾಂಕ್ ಖಾತೆಯಿಂದ ಹಣ ವರ್ಗಾವಣೆ ಅದ ಕೆಲ ಹೊತ್ತಿನಲ್ಲಿ ನಕಲಿ ಬ್ಯಾಂಕ್ ಖಾತೆಗಳಿಂದ ರಾಕೆಟ್ ವೇಗದಲ್ಲಿ ಅಷ್ಟೂ ದೊಡ್ಡ ಮೊತ್ತ ಹಣವನ್ನು ಡ್ರಾ ಮಾಡಲಾಗಿದೆ. ಇದು…

Read More

ಇಸ್ಲಾಮಾಬಾದ್: ಹಲವಾರು ಆರೋಪಗಳಲ್ಲಿ ಜೈಲಿನಲ್ಲಿರುವ ಮಾಜಿ ಪ್ರಧಾನಿ ಇಮ್ರಾನ್ ಖಾನ್ ( Pak Former prime minister Imran Khan ) ವಿರುದ್ಧದ ದೇಶದ್ರೋಹ ಪ್ರಕರಣವನ್ನು ಇಸ್ಲಾಮಾಬಾದ್ ಹೈಕೋರ್ಟ್ ಸೋಮವಾರ ರದ್ದುಗೊಳಿಸಿದೆ ಎಂದು ಎಎಫ್ಪಿ ವರದಿ ಮಾಡಿದೆ. ಮುಖ್ಯ ನ್ಯಾಯಮೂರ್ತಿ ಅಮೀರ್ ಫಾರೂಕ್ ನೇತೃತ್ವದ ಇಸ್ಲಾಮಾಬಾದ್ ಹೈಕೋರ್ಟ್ನ ದ್ವಿಸದಸ್ಯ ಪೀಠ ಈ ನಿರ್ಧಾರವನ್ನು ಪ್ರಕಟಿಸಿದೆ ಎಂದು ವರದಿ ತಿಳಿಸಿದೆ. ಇಮ್ರಾನ್ ಖಾನ್ ಅವರ ಪಾಕಿಸ್ತಾನ್ ತೆಹ್ರೀಕ್-ಇ-ಇನ್ಸಾಫ್ ಪಕ್ಷದ ವಕೀಲ ಸಲ್ಮಾನ್ ಸಫ್ದರ್ ಖುಲಾಸೆಯನ್ನು ದೃಢಪಡಿಸಿದ್ದಾರೆ. ಒಟ್ಟಾರೆಯಾಗಿ ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಗೆ ಬಿಗ್ ರಿಲೀಫ್ ಎನ್ನುವಂತೆ ಅವರ ವಿರುದ್ಧದ ದೇಶ ದ್ರೋಹ ಪ್ರಕರಣದಲ್ಲಿ ವಿಧಿಸಲಾಗಿದ್ದಂತ ಶಿಕ್ಷೆಯನ್ನು ಕೋರ್ಟ್ ಖುಲಾಸೆಗೊಳಿಸಿದೆ. https://kannadanewsnow.com/kannada/fire-breaks-out-in-four-coaches-of-taj-express-in-delhi/ https://kannadanewsnow.com/kannada/wont-be-surprised-if-siddaramaiah-govt-brands-peddler-as-innocent-just-because-he-is-brother-bjp/

Read More