Subscribe to Updates
Get the latest creative news from FooBar about art, design and business.
Author: kannadanewsnow09
ಬೆಂಗಳೂರು: ಮೂಡಾ ಹಗರಣದಿಂದ ಜನರ ಗಮನವನ್ನು ಬೇರೆಡೆಗೆ ಸೆಳೆಯಲು ಜಾತಿಗಣತಿ ವಿಷಯವನ್ನು ಮುನ್ನಲೆಗೆ ತಂದು ನಾಟಕ ಆಡಲಾಗುತ್ತಿದೆ ಎಂದು ಕೇಂದ್ರದ ಭಾರೀ ಕೈಗಾರಿಕೆ ಹಾಗೂ ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು ದೂರಿದ್ದಾರೆ. ತಮ್ಮ ನಿವಾಸದ ಸೋಮವಾರ ಬೆಳಗ್ಗೆ ಮಾಧ್ಯಮಗಳು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು; ಸರ್ಕಾರದ ವಿರುದ್ಧ ಗುರುತರ ಆರೋಪಗಳು ಕೇಳಿ ಬಂದಾಗಲೆಲ್ಲ ಜನರ ಗಮನ ಬೇರೆಡೆಗೆ ಹೊರಳಿಸಲು ತಂತ್ರಗಾರಿಕೆ ಮಾಡುತ್ತಿದ್ದಾರೆ. ಈಗ ಮೂಡಾ ಹಗರಣದ ಮೂಲಕ ಜನರ ದಿಕ್ಕು ತಪ್ಪಿಸಲು ಜಾತಿಗಣತಿಯ ವಿಚಾರವನ್ನು ಮುಂದಕ್ಕೆ ತಂದಿದೆ ಎಂದು ಆರೋಪಿಸಿದರು. ಚುನಾವಣೆಗೆ ಮೊದಲೇ ವರದಿ ಕೊಟ್ಟಿದ್ದರು!! ಕಾಂತರಾಜು ಆಯೋಗ ರಚನೆ ಮಾಡಿದ್ದು 10 ವರ್ಷಗಳ ಹಿಂದೆ. ಈಗ ಅ ವರದಿಗೆ 10 ವರ್ಷ ಆಗಿ ಹೋಗಿದೆ. 10 ವರ್ಷಗಳಲ್ಲಿ ಅನೇಕ ಬೆಳವಣಿಗೆಗಳು ಆಗಿವೆ. ಹಳೆಯ ಜಾತಿಗಣತಿ ವರದಿಯನ್ನು ಇಷ್ಟು ದಿನ ಯಾಕೆ ಬಿಡುಗಡೆ ಮಾಡಿರಲಿಲ್ಲ? ಎಂದು ಕೇಂದ್ರ ಸಚಿವ ಕುಮಾರಸ್ವಾಮಿ ಅವರು ಪ್ರಶ್ನಿಸಿದರು. ಕುಮಾರಸ್ವಾಮಿ ಜಾತಿಗಣತಿ ವರದಿಯನ್ನು ಬಿಡುಗಡೆ ಮಾಡಲು…
ಬೆಂಗಳೂರು: ಡಾ|| ಬಾಬು ಜಗಜೀವನ ರಾಂ ಚರ್ಮ ಕೈಗಾರಿಕಾ ಅಭಿವೃದ್ಧಿ ನಿಗಮವು 2024-25ನೇ ಸಾಲಿನಲ್ಲಿ ಪರಿಶಿಷ್ಟ ಜಾತಿಗೆ ಸೇರಿದ ಚರ್ಮಕೈಗಾರಿಕೆಯಲ್ಲಿ ತೊಡಗಿರುವ ಕುಶಲಕರ್ಮಿಗಳಿಗೆ ವಿವಿಧ ಯೋಜನೆಗಳಾದ ತರಬೇತಿ, ಸ್ವಯಂ ಉದ್ಯೋಗ, ಸ್ವಾವಲಂಭಿ ಮಾರಾಟ ಮಳಿಗೆ, ಸಂಚಾರಿ ಮಾರಾಟ ಮಳಿಗೆ, ನೇರ ಸಾಲ ಯೋಜನೆ, ಪಾದುಕೆ ಕುಟೀರ ಯೋಜನೆ, ವಸತಿ ಹಾಗೂ ಇನ್ನಿತರೆ ಯೋಜನೆಗಾಗಿ ಆಸಕ್ತರಿಂದ ಆನ್ಲೈನ್ ಅರ್ಜಿ ಆಹ್ವಾನಿಸಿದೆ. ಆಸಕ್ತರು https://sevasindhu.karnataka.gov.in ಪೋರ್ಟಲ್ ಮೂಲಕ ಅ. 30 ರೊಳಗಾಗಿ ಅರ್ಜಿ ಸಲ್ಲಿಸುವಂತೆ ಲಿಡ್ಕರ್ ಜಿಲ್ಲಾ ಸಂಯೋಜಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಸಂಯೋಜಕರು, ಲಿಡ್ಕರ್, ನೆಹರು ರಸ್ತೆ, ಶಿವಮೊಗ್ಗ ಇವರನ್ನು ಸಂಪರ್ಕಿಸುವುದು. https://kannadanewsnow.com/kannada/bad-news-for-thimmappas-devotees-no-laddu-prasadam-for-another-week-in-bengaluru/ https://kannadanewsnow.com/kannada/breaking-former-minister-b-sriramulus-facebook-instagram-accounts-hacked/
ಬೆಂಗಳೂರು: ತಿರುಮಲ ಗಿರಿ ನಿವಾಸ ತಿಮ್ಮಪ್ಪನ ಲಡ್ಡು ಪ್ರಸಾದ ವಿವಾದಕ್ಕೆ ಕಾರಣವಾದ ನಂತ್ರ, ಭಕ್ತರಿಗೆ ದೊರೆಯೋದು ಕಡಿಮೆಯಾಗಿದೆ. ಇದೇ ಹೊತ್ತಲ್ಲಿ ಬೆಂಗಳೂರಲ್ಲೂ ತಿಮ್ಮಪ್ಪನ ಭಕ್ತರಿಗೆ ಬ್ಯಾಡ್ ನ್ಯೂಸ್ ಎನ್ನುವಂತೆ ಇನ್ನೂ ಒಂದು ವಾರದ ಲಡ್ಡು ಪ್ರಸಾದ ದೊರೆಯೋದಿಲ್ಲ. ಈ ಬಗ್ಗೆ ಬೆಂಗಳೂರಿನ ಟಿಟಿಡಿ ದೇವಸ್ಥಾನದ ಸೂಪರಿಟೆಂಡೆಂಟ್ ಜಯಂತಿ ಮಾಹಿತಿ ನೀಡಿದ್ದು, ಬೆಂಗಳೂರಲ್ಲಿ ತಿರುವತಿ ತಿಮ್ಮಪ್ಪನ ಲಡ್ಡು ಪ್ರಸಾದ ಇನ್ನೂ ಒಂದು ವಾರ ಲಭ್ಯವಿರೋದಿಲ್ಲ. ಅಕ್ಟೋಬರ್ 13ರವರೆಗೆ ಸಿಗುವುದಿಲ್ಲ ಎಂಬುದಾಗಿ ಹೇಳಿದ್ದಾರೆ. ಅಂದಹಾಗೇ ಈಗಾಗಲೇ ಕಳೆದ ಶುಕ್ರವಾರದಿಂದಲೇ ಬೆಂಗಳೂರಿನ ಟಿಟಿಡಿಯಲ್ಲಿ ತಿರುಪತಿ ತಿಮ್ಮಪ್ಪನ ಪ್ರಸಾದವಾಗಿರುವಂತ ಲಡ್ಡು ಪ್ರಸಾದ ಸ್ಥಗಿತಗೊಂಡಿತ್ತು. ಯಾವಾಗ ವಿತರಣೆ ಆರಂಭವಾಗಲಿದೆ ಎಂಬುದಾಗಿ ಹಲವರು ಕೇಳುತ್ತಿದ್ದರು. ಈಗ ಇನ್ನೂ ಒಂದು ವಾರದ ಬೆಂಗಳೂರಲ್ಲಿ ಲಡ್ಡು ಪ್ರಸಾದ ಸಿಗುವುದಿಲ್ಲ ಎಂಬುದಾಗಿ ಟಿಟಿಡಿ ಸ್ಪಷ್ಟ ಪಡಿಸಿದೆ. https://kannadanewsnow.com/kannada/praying-at-arunachaleshwar-for-everyones-well-being-dk-shivakumar/ https://kannadanewsnow.com/kannada/breaking-former-minister-b-sriramulus-facebook-instagram-accounts-hacked/
ತಿರುವಣ್ಣಾಮಲೈ : “ಕಳೆದ ವಿಧಾನಸಭಾ ಚುನಾವಣೆ ಫಲಿತಾಂಶಕ್ಕೆ ಮುಂಚಿತವಾಗಿ ಈ ದೇವಾಲಯಕ್ಕೆ ಭೇಟಿ ನೀಡಿ, ರಾಜ್ಯದಲ್ಲಿ ಉತ್ತಮ ಆಡಳಿತ ಮಾಡುವ ಶಕ್ತಿ ದೊರೆಯಲಿ ಮತ್ತು ಸಮೃದ್ಧಿಯಾಗಿ ಮಳೆ ಬೀಳಲಿ ಎಂದು ಪ್ರಾರ್ಥಿಸಿದ್ದೆ. ಈ ಕಾರಣಕ್ಕೆ ಮತ್ತೆ ದೇವರ ದರ್ಶನ ಮಾಡಿದೆ. ಎಲ್ಲರ ಒಳಿತಿಗಾಗಿ ದೇವರಲ್ಲಿ ಪ್ರಾರ್ಥನೆ ಸಲ್ಲಿಸಿದೆ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದರು. ತಮಿಳುನಾಡಿನ ತಿರುವಣ್ಣಾಮಲೈನ ಅರುಣಾಚಲೇಶ್ವರ ದೇಗುಲಕ್ಕೆ ಸೋಮವಾರ ಭೇಟಿ ನೀಡಿ ಪೂಜೆ ಸಲ್ಲಿಸಿದ ನಂತರ ಮಾಧ್ಯಮಗಗಳಿಗೆ ಪ್ರತಿಕ್ರಿಯೆ ನೀಡಿದರು. “ಈ ದೇವಾಲಯ ಅತ್ಯುತ್ತಮ ವಸ್ತುಶಿಲ್ಪದಿಂದ ಕೂಡಿದ್ದು, ಸುಂದರವಾಗಿದೆ. ನಮ್ಮ ನೆಲದ ಶಿಲ್ಪಿಗಳು ಒಂದು ಸಾವಿರ ವರ್ಷಗಳ ಹಿಂದೆಯೇ ಅದ್ಬುತ ಕೈಚಳಕ ತೋರಿಸಿದ್ದಾರೆ” ಎಂದರು. “ಕಳೆದ ವರ್ಷಕ್ಕೆ ಹೋಲಿಸಿದರೆ, ದೇವಸ್ಥಾನವನ್ನು ತಮಿಳುನಾಡು ಸರ್ಕಾರ ಅತ್ಯುತ್ತಮವಾಗಿ ಅಭಿವೃದ್ಧಿಗೊಳಿಸಿದೆ. ಇದು ನನಗೆ ಹೆಚ್ಚು ಸಂತೋಷವನ್ನು ನೀಡಿತು” ಎಂದು ಹೇಳಿದರು. https://kannadanewsnow.com/kannada/chief-minister-siddaramaiah-to-chair-crucial-state-cabinet-meeting-on-october-10/ https://kannadanewsnow.com/kannada/breaking-former-minister-b-sriramulus-facebook-instagram-accounts-hacked/
ಬೆಂಗಳೂರು: ದಿನಾಂಕ 10-10-2024ರಂದು ಸಿಎಂ ಸಿದ್ಧರಾಮಯ್ಯ ನೇತೃತ್ವದಲ್ಲಿ ಮಹತ್ವದ ರಾಜ್ಯ ಸಚಿವ ಸಂಪುಟ ಸಭೆ ನಡೆಯಲಿದೆ. ಈ ಸಭೆಯಲ್ಲಿ ಹಲವು ಮಹತ್ವದ ನಿರ್ಣಯಗಳಿಗೆ ಅನುಮೋದನೆ ನೀಡುವ ಸಾಧ್ಯತೆ ಇದೆ. ಇಂದು ಸಚಿವ ಸಂಪುಟದ ಸರ್ಕಾರದ ಜಂಟಿ ಕಾರ್ಯದರ್ಶಿ ಆರ್.ಚಂದ್ರಶೇಖರ್ ಮಾಹಿತಿ ಹಂಚಿಕೊಂಡಿದ್ದು ದಿನಾಂಕ 10-10-2024ರ ಗುರುವಾರ ಬೆಳಿಗ್ಗೆ 11 ಗಂಟೆಗೆ ಸಚಿವ ಸಂಪುಟದ 2024ನೇ ಸಾಲಿನ 21ನೇ ಸಭೆಯನ್ನು ವಿಧಾನಸೌಧದ ಸಚಿವ ಸಂಪುಟ ಸಭಾಮಂದಿರದಲ್ಲಿ ಕರೆಯಲಾಗಿದೆ ಎಂದಿದ್ದಾರೆ. ಅ.10ರಂದು ನಡೆಯುವಂತ ಸಿಎಂ ಸಿದ್ಧರಾಮಯ್ಯ ನೇತೃತ್ವದ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ, ರಾಜ್ಯದ ಅಭಿವೃದ್ಧಿ ಕಾಮಗಾರಿಗಳು, ಜನಪರ ಕಾರ್ಯಗಳಿಗೆ ಅನುದಾನ ಒದಗಿಸುವುದು ಸೇರಿದಂತೆ ವಿವಿಧ ನಿರ್ಣಯವನ್ನು ಕೈಗೊಳ್ಳುವ ಸಾಧ್ಯತೆ ಇದೆ. ಅಲ್ಲಿಯವರೆಗೆ ಕಾದು ನೋಡಬೇಕಿದೆ. https://kannadanewsnow.com/kannada/breaking-former-minister-b-sriramulus-facebook-instagram-accounts-hacked/ https://kannadanewsnow.com/kannada/2-kg-hair-found-in-womans-stomach-hair-found-in-womans-stomach/
ಚೆನ್ನೈ: ಭಾರತೀಯ ವಾಯುಪಡೆಯ (ಐಎಎಫ್) ಅಕ್ಟೋಬರ್ 6 ರ ವೈಮಾನಿಕ ಪ್ರದರ್ಶನದ ನಂತರ ಮರೀನಾ ಬೀಚ್ನಲ್ಲಿ ಕಾಲ್ತುಳಿತ ಉಂಟಾಗಿ ಮೂವರು ಸಾವನ್ನಪ್ಪಿದ್ದಾರೆ ಮತ್ತು 20 ಕ್ಕೂ ಹೆಚ್ಚು ಜನರು ಮೂರ್ಛೆ ಹೋದರು ಎಂದು ಸುದ್ದಿ ವರದಿಗಳು ತಿಳಿಸಿವೆ. ಕನಿಷ್ಠ 96 ಜನರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ದಿ ನ್ಯೂಸ್ ಮಿನಿಟ್ ವರದಿ ಮಾಡಿದೆ. ಪ್ರದರ್ಶನವನ್ನು ವೀಕ್ಷಿಸಲು ರೈಲು, ಸುರಂಗಮಾರ್ಗ, ಮೆಟ್ರೋ, ಕಾರುಗಳು ಮತ್ತು ಬಸ್ಸುಗಳ ಮೂಲಕ 13 ಲಕ್ಷಕ್ಕೂ ಹೆಚ್ಚು ಪ್ರೇಕ್ಷಕರು ಸ್ಥಳಕ್ಕೆ ಆಗಮಿಸಿದರು. ಇದು ಇದುವರೆಗೆ ದಾಖಲಾದ ಅತಿದೊಡ್ಡ ಏರ್ ಶೋ ಜನಸಮೂಹವಾಗಿದೆ ಎಂದು ಲಿಮ್ಕಾ ಬುಕ್ ಆಫ್ ರೆಕಾರ್ಡ್ಸ್ ತಿಳಿಸಿದೆ. ಆದಾಗ್ಯೂ, ಘಟನೆಯ ನಂತರ ಜನರು ಪ್ರದೇಶವನ್ನು ತೊರೆಯಲು ಪ್ರಯತ್ನಿಸಿದ್ದರಿಂದ, ಸಂಚಾರ ಅಧಿಕಾರಿಗಳಿಗೆ ಜನಸಂದಣಿಯನ್ನು ನಿಯಂತ್ರಿಸಲು ಸಾಧ್ಯವಾಗಲಿಲ್ಲ. ಭಾರತೀಯ ವಾಯುಪಡೆಯು ತನ್ನ ತೊಂಬತ್ತೆರಡು ನೇ ವಾರ್ಷಿಕೋತ್ಸವದ ಅಂಗವಾಗಿ ಈ ಕಾರ್ಯಕ್ರಮವನ್ನು ಆಯೋಜಿಸಿತ್ತು. ಬೆಳಿಗ್ಗೆ 11 ಗಂಟೆಗೆ ಏರ್ ಶೋ ಪ್ರಾರಂಭವಾಯಿತು, ಎಐಎಫ್ನ ವಿಶೇಷ ಗರುಡ್ ಫೋರ್ಸ್ ಕಮಾಂಡೋಗಳು ಸಿಮ್ಯುಲೇಟೆಡ್…
ಬೆಂಗಳೂರು : ವಿ.ಎಸ್.ಉಗ್ರಪ್ಪ ಅವರು ಸಮರ್ಥರೂ ಹೌದು, ಜನ ನಾಯಕರೂ ಹೌದು. ಧ್ವನಿ ಇಲ್ಲದವರ ದನಿ ಆಗಿರುವವರು ವಿ.ಎಸ್.ಉಗ್ರಪ್ಪ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು. ಮಾಜಿ ಸಂಸದರಾದ ವಿ.ಎಸ್.ಉಗ್ರಪ್ಪ ಅವರ ಬದುಕು, ಹೋರಾಟವನ್ನು ಕಟ್ಟಿಕೊಟ್ಟಿರುವ ಸಮರ್ಥ ಜನ ನಾಯಕ ಕೃತಿಯನ್ನು ಬಿಡುಗಡೆ ಮಾಡಿ ಮಾತನಾಡಿದರು. ಉಗ್ರಪ್ಪ ಅವರು ಸಮರ್ಥರೂ ಹೌದು, ಜನ ನಾಯಕರೂ ಹೌದು. ವಿದ್ಯಾರ್ಥಿ ಜೀವನದಲ್ಲೇ ಜನಹೋರಾಟದಲ್ಲಿ ಭಾಗಿಯಾಗಿ ಜೈಲು ಸೇರಿದ್ದವರು ಎಂದು ಉಗ್ರಪ್ಪ ಅವರ ಹೋರಾಟದ ದಿನಗಳನ್ನು ಸ್ಮರಿಸಿದರು. ಉಗ್ರಪ್ಪ ಬಹಳ ನಿಷ್ಠುರವಾದಿ. ಸಾರ್ವಜನಿಕ ಜೀವನದಲ್ಲಿ ಮೌಲ್ಯಗಳ ವಿಚಾರದಲ್ಲಿ ಯಾರ ಜೊತೆಗೂ ರಾಜಿ ಮಾಡಿಕೊಳ್ಳುವುದಿಲ್ಲ. ರಾಜಕೀಯ ಹೋರಾಟದಲ್ಲಿ ಉಗ್ರರಾಗಿದ್ದರೂ ಮನೆಯಲ್ಲಿ ಮಾತ್ರ ಸೌಮ್ಯವಾದಿ ಎಂದು ಹಾಸ್ಯ ಚಟಾಕಿ ಹಾರಿಸಿದರು. ಸಂವಿಧಾನದ ಆಚೆಗೆ ಯೋಚಿಸುವವರಲ್ಲ. ವಕೀಲರಾಗಿ ಹಲವಾರು ವರ್ಷ ಸಂವಿಧಾನದ ಪಾಠ ಮಾಡಿ ಈಗ ಸಂವಿಧಾನ ನಾಲಗೆ ತುದಿಯಲ್ಲೇ ಇದೆ. ತಪ್ಪುಗಳನ್ನು ಹುಡುಕುವುದರಲ್ಲಿ ಉಗ್ರಪ್ಪರು ನಿಸ್ಸೀಮರು ಎಂದು ಮೆಚ್ಚುಗೆ ಸೂಚಿಸಿದರು. ಎಲ್ಲಾ ಕಾಲದಲ್ಲೂ ದ್ವನಿ ಇಲ್ಲದವರ ಪರವಾಗಿ ಕೆಲಸ ಮಾಡುತ್ತಾ…
ಬೆಂಗಳೂರು: ಪದವಿ ವ್ಯಾಸಂಗದ ನಿರೀಕ್ಷೆಯಲ್ಲಿದ್ದ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ ಎನ್ನುವಂತೆ, ಸರ್ಕಾರಿ ಪದವಿ ಕಾಲೇಜುಗಳಲ್ಲಿ ಹೊಸ ಸ್ನಾತಕ ಕೋರ್ಸ್, ವಿಷಯಗಳನ್ನು ಪ್ರಾರಂಭಿಸಲು ಕಾಲೇಜು ಶಿಕ್ಷಣ ಇಲಾಖೆ ಗ್ರೀನ್ ಸಿಗ್ನಲ್ ನೀಡಿದೆ. ಈ ಸಂಬಂಧ ಕಾಲೇಜು ಶಿಕ್ಷಣ ಇಲಾಖೆಯ ಆಯುಕ್ತರು ಸುತ್ತೋಲೆ ಹೊರಡಿಸಿದ್ದು, ಕರ್ನಾಟಕ ರಾಜ್ಯ ವಿಶ್ವವಿದ್ಯಾಲಯಗಳ ಅಧಿನಿಯಮ, 2000ರ ಪುಕರಣ 59ರಡಿ ಕ್ರಮವಹಿಸುವ ಸಂಯೋಜನಾ ಪುಸ್ತಾವನೆಗಳಿಗೆ ಸಂಬಂಧಿಸಿದಂತೆ, 2025-26ನೇ ಶೈಕ್ಷಣಿಕ ಸಾಲಿನ ಸಂಯೋಜನಾ ವೇಳಾಪಟ್ಟಿಯನ್ನು ಕಡ್ಡಾಯವಾಗಿ ಜಾರಿಗೊಳಿಸಲು ದಿನಾಂಕ ನಿಗದಿಪಡಿಸಿ ಆದೇಶಿಸಲಾಗಿದೆ ಎಂದಿದ್ದಾರೆ. ಈ ಹಿನ್ನೆಲೆಯಲ್ಲಿ, ಇಲಾಖಾ ವ್ಯಾಪ್ತಿಯ ಸರ್ಕಾರಿ ಪದವಿ ಕಾಲೇಜುಗಳ ಪ್ರಾಂಶುಪಾಲರುಗಳು ಕಾಲೇಜಿಗೆ ಅಗತ್ಯವಿರುವ ಹೊಸ ಸ್ನಾತಕ ಕೋರ್ಸ್ / ವಿಷಯಗಳ ಬಗ್ಗೆ, ಹೊಸ ಸಂಯೋಜನೆ / ಶಾಶ್ವತ ಸಂಯೋಜನೆ ಬಗ್ಗೆ ವಿದ್ಯಾರ್ಥಿ ಪ್ರಮಾಣ ಹೆಚ್ಚಳ / ಕಡಿಮೆ ಮಾಡುವ ಹಾಗೂ ಇತರೆ ಬದಲಾವಣೆಗಳ ಬಗ್ಗೆ ಪ್ರಸ್ತಾವನೆಯನ್ನು ಸಲ್ಲಿಸುವ ವಿಷಯಕ್ಕೆ ಸಂಬಂಧಿಸಿದಂತೆ, ಈ ಸುತ್ತೋಲೆಯೊಂದಿಗೆ ಲಗತ್ತಿಸಿರುವ ನಿಗದಿತ ನಮೂನೆಯ ಅನುಬಂಧದಲ್ಲಿ ಸೂಚಿಸಿರುವಂತೆ ದಿನಾಂಕ: 25.10.2024 ರೊಳಗೆ ಕೇಂದ್ರ ಕಛೇರಿಗೆ ಇ-ಮೇಲ್…
ನವದೆಹಲಿ: ದೇಶದ ಅತಿದೊಡ್ಡ ಬ್ಯಾಂಕ್ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ( State Bank of India – SBI) ಪ್ರಸಕ್ತ ಹಣಕಾಸು ವರ್ಷದಲ್ಲಿ ಸುಮಾರು 10,000 ಹೊಸ ಉದ್ಯೋಗಿಗಳನ್ನು ನೇಮಕ ಮಾಡುವ ಯೋಜನೆಯನ್ನು ಘೋಷಿಸಿದೆ. ಈ ಮೂಲಕ ಉದ್ಯೋಗಾಕಾಂಕ್ಷಿಗಳಿಗೆ ಸಿಹಿಸುದ್ದಿಯನ್ನು ನೀಡಿದೆ. ಈ ಉಪಕ್ರಮವು ಅದರ ಸಾಮಾನ್ಯ ಬ್ಯಾಂಕಿಂಗ್ ಅಗತ್ಯಗಳನ್ನು ಪೂರೈಸುವ ಮತ್ತು ಅದರ ತಾಂತ್ರಿಕ ಸಾಮರ್ಥ್ಯಗಳನ್ನು ಹೆಚ್ಚಿಸುವ ಗುರಿಯನ್ನು ಹೊಂದಿದೆ. ಗ್ರಾಹಕ ಸೇವೆಯನ್ನು ಸುಧಾರಿಸಲು ಮತ್ತು ಅದರ ಡಿಜಿಟಲ್ ಚಾನೆಲ್ ಗಳ ದೃಢತೆಯನ್ನು ಹೆಚ್ಚಿಸಲು ಬ್ಯಾಂಕ್ ತಂತ್ರಜ್ಞಾನದಲ್ಲಿ ಗಮನಾರ್ಹ ಹೂಡಿಕೆಗಳನ್ನು ಮಾಡಿದೆ. ನೇಮಕಾತಿ ಡ್ರೈವ್ ಟೆಕ್ ಮತ್ತು ಬ್ಯಾಂಕಿಂಗ್ ಕ್ಷೇತ್ರಗಳನ್ನು ಗುರಿಯಾಗಿಸಿಕೊಂಡಿದೆ ಎಸ್ಬಿಐ ಅಧ್ಯಕ್ಷ ಸಿ.ಎಸ್.ಶೆಟ್ಟಿ ಪಿಟಿಐಗೆ ನೀಡಿದ ಸಂದರ್ಶನದಲ್ಲಿ, ತಂತ್ರಜ್ಞಾನ ಮತ್ತು ಸಾಮಾನ್ಯ ಬ್ಯಾಂಕಿಂಗ್ ಕ್ಷೇತ್ರಗಳಲ್ಲಿ ಬ್ಯಾಂಕ್ ತನ್ನ ಉದ್ಯೋಗಿಗಳನ್ನು ಹೆಚ್ಚಿಸುತ್ತಿದೆ ಎಂದು ಹೇಳಿದ್ದಾರೆ. ಅವರು ಇತ್ತೀಚೆಗೆ ಪ್ರವೇಶ ಮತ್ತು ಸ್ವಲ್ಪ ಹೆಚ್ಚಿನ ಮಟ್ಟದಲ್ಲಿ ಸುಮಾರು 1,500 ತಂತ್ರಜ್ಞಾನ ವೃತ್ತಿಪರರ ನೇಮಕಾತಿಯನ್ನು ಘೋಷಿಸಿದ್ದಾರೆ ಎಂದು ಅವರು ಬಹಿರಂಗಪಡಿಸಿದರು.…
ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿನ ಕಡತ ನಾಪತ್ತೆಯಾಗಿದ್ದಾವೆ. ಇದಕ್ಕೆ ಸಚಿವ ಭೈರತಿ ಸುರೇಶ್ ಮತ್ತು ಹಿಂದಿನ ಲೋಕಾಯುಕ್ತ ಎಸ್ ಪಿ ಸಜಿತ್ ಕಾರಣ. ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ರಾಜ್ಯ ಪೊಲೀಸ್ ಮಹಾನಿರ್ದೇಶ ಅಲೋಕ್ ಮೋಹನ್ ಅವರಿಗೆ ಆರ್ ಟಿಐ ಕಾರ್ಯದರ್ತ ಸ್ನೇಹಮಯಿ ಕೃಷ್ಣ ಅವರು ದೂರು ನೀಡಿದ್ದಾರೆ. ಈ ಸಂಬಂಧ ರಾಜ್ಯ ಪೊಲೀಸ್ ಮಹಾನಿರ್ದೇಶಕರನ್ನು ಭೇಟಿಯಾಗಿ ಆರ್ ಟಿ ಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ದೂರು ನೀಡಿದ್ದಾರೆ. ಅವರು ನೀಡಿರುವಂತ ದೂರಿನಲ್ಲಿ ಸಚಿವ ಭೈರತಿ ಸುರೇಶ್ ಅವರು ಮೈಸೂರಿಗೆ ಹೆಲಿಕಾಪ್ಟರ್ ನಲ್ಲಿ ಬಂದು ಮುಡಾದಲ್ಲಿನ ಕೆಲವು ಪ್ರಮುಖ ಕಡತಗಳನ್ನು ತೆಗೆದುಕೊಂಡು ಹೋಗಿದ್ದಾರೆ ಎಂಬುದಾಗಿ ಆರೋಪಿಸಿದ್ದಾರೆ. ಸಚಿವ ಭೈರತಿ ಸುರೇಶ್ ಅವರು ತೆಗೆದುಕೊಂಡು ಹೋಗಿದ್ದಂತ ಪ್ರಮುಖ ಕಡತಗಳನ್ನು ಇಟ್ಟುಕೊಂಡೇ ಸಿಎಂ ಸಿದ್ಧರಾಮಯ್ಯ ಅವರು ವಿಧಾನಸೌಧದಲ್ಲಿ ಪತ್ರಿಕಾ ಗೋಷ್ಠಿಯನ್ನು ನಡೆಸಿದ್ದರು. ಇದಕ್ಕೆ ಮೈಸೂರು ಲೋಕಾಯುಕ್ತದಲ್ಲಿ ಪೊಲೀಸ್ ಅಧೀಕ್ಷಕರಾಗಿದ್ದಂತ ಸುಜೀತ್ ಸಹಾಯ ಮಾಡಿದ್ದಾರೆ. ಹೀಗಾಗಿ ಅವರನ್ನು ಬೆಂಗಳೂರಿನ ಆಯಕಟ್ಟಿನ ಜಾಗಕ್ಕೆ ವರ್ಗಾವಣೆ ಮಾಡಲಾಗಿದೆ.…













