Author: kannadanewsnow09

ಬೆಂಗಳೂರು: ಲೋಕಸಭಾ ಚುನಾವಣೆಗೆ ಇಂದು ನಾಮಪತ್ರ ಹಿಂಪಡೆಯಲು ಕೊನೆಯ ದಿನವಾಗಿತ್ತು. ಈ ಹಿನ್ನಲೆಯಲ್ಲಿ ರಾಜ್ಯದಲ್ಲಿ ಮೊದಲ ಹಂತದ ಲೋಕಸಭಾ ಚುನಾವಣೆಯ ಕಣದಿಂದ 53 ಅಭ್ಯರ್ಥಿಗಳು ನಾಮಪತ್ರ ಹಿಂಪಡೆದ್ರೆ, ಕಣದಲ್ಲಿ ಬರೋಬ್ಬರಿ 247 ಅಭ್ಯರ್ಥಿಗಳಿದ್ದಾರೆ. ಈ ಕುರಿತಂತೆ ಚುನಾವಣಾ ಆಯೋಗದಿಂದ ಮಾಹಿತಿ ನೀಡಲಾಗಿದ್ದು, ಇಂದು ಮೊದಲ ಹಂತದ ಲೋಕಸಭಾ ಚುನಾವಣೆಗೆ ನಾಮಪತ್ರ ಹಿಂಪಡೆಯಲು ಕೊನೆಯ ದಿನವಾಗಿತ್ತು. ಏಪ್ರಿಲ್.6ರಂದು ಒಬ್ಬರು ಹಾಗೂ ಇಂದು 52 ಸೇರಿದಂತೆ 53 ಅಭ್ಯರ್ಥಿಗಳು ನಾಮಪತ್ರವನ್ನು ಹಿಂಪಡೆದಿದ್ದಾರೆ ಎಂದು ತಿಳಿಸಿದೆ. ರಾಜ್ಯದ ಮೊದಲ ಹಂತದ ಲೋಕಸಭಾ ಚುನಾವಣೆ ಕಣದಲ್ಲಿ ಒಟ್ಟು 247 ಅಭ್ಯರ್ಥಿಗಳಿದ್ದಾರೆ. ಇವರಲ್ಲಿ 226 ಪುರುಷ ಅಭ್ಯರ್ಥಿಗಳು ಹಾಗೂ 21 ಮಹಿಳಾ ಅಭ್ಯರ್ಥಿಗಳು ಆಗಿದ್ದಾರೆ ಎಂದು ಹೇಳಿದೆ. ಮೊದಲ ಹಂತದ ಲೋಕಸಭಾ ಯಾವ ಕ್ಷೇತ್ರದಲ್ಲಿ ಎಷ್ಟು ಅಭ್ಯರ್ಥಿಗಳು ಕಣದಲ್ಲಿದ್ದಾರೆ.? ಉಡುಪಿ-ಚಿಕ್ಕಮಗಳೂರು: 10 ಹಾಸನ: 15 ದಕ್ಷಿಣ ಕನ್ನಡ: 9 ಚಿತ್ರದುರ್ಗ: 20 ತುಮಕೂರು: 18 ಮಂಡ್ಯ: 14 ಮೈಸೂರು: 18 ಚಾಮರಾಜನಗರ: 14 ಬೆಂಗಳೂರು ಗ್ರಾಮೀಣ: 15 ಬೆಂಗಳೂರು…

Read More

ಬೆಂಗಳೂರು: ಇಂದು ಸಿಎಂ ಸಿದ್ಧರಾಮಯ್ಯ ಅವರು ಲೋಕಸಭಾ ಚುನಾವಣೆಯ ಸಂದರ್ಭದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸೌಮ್ಯ ರೆಡ್ಡಿ ಪರವಾಗಿ ಪ್ರಚಾರ ಮಾಡುತ್ತಿದ್ದವೇಳೆಯಲ್ಲಿ ಭದ್ರತಾ ವೈಫಲ್ಯ ಉಂಟಾಗಿತ್ತು. ರಿಯಾಜ್ ಎಂಬಾತ ಗನ್ ಇಟ್ಟುಕೊಂಡು ಸಿಎಂ ಸಿದ್ಧರಾಮಯ್ಯ ಅವರಿಗೆ ಹಾರ ಹಾಕಿದ್ದನು. ಈ ಸಂಬಂಧ ಆತನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ. ಬೆಂಗಳೂರಿನ ಸಿದ್ಧಾಪುರ ಪೊಲೀಸ್ ಠಾಣೆಯಲ್ಲಿ ನಗರ ಪೊಲೀಸ್ ಆಯುಕ್ತ ಬಿ.ದಯಾನಂದ್ ಅವರ ಸೂಚನೆ ಮೇರೆಗೆ ಸಿಎಂ ಸಿದ್ಧರಾಮಯ್ಯ ಅವರಿಗೆ ಗನ್ ಇಟ್ಟುಕೊಂಡು ಹಾರ ಹಾಕಿದಂತ ರಿಯಾಜ್ ಎಂಬಾತನನ್ನು ವಿಚಾರಣೆ ನಡೆಸಲಾಗುತ್ತಿದೆ. ಹೆಚ್ಚುವರಿ ಪೊಲೀಸ್ ಆಯುಕ್ತ ಸತೀಶ್ ಅವರು ಸಿಎಂ ಸಿದ್ಧರಾಮಯ್ಯಗೆ ಗನ್ ಇಟ್ಟುಕೊಂಡು ಹಾರ ಹಾಕಿದಂತ ರಿಯಾಜ್ ನನ್ನು ತೀವ್ರವಾಗಿ ವಿಚಾರಣೆ ಮಾಡುತ್ತಿದ್ದಾರೆ. ಅಂದಹಾಗೆ ಲೋಕಸಭಾ ಚುನಾವಣೆ ಘೋಷಣೆಯ ನಂತ್ರ ಗನ್ ಲೈಸೆನ್ಸ್ ಹೊಂದಿದ್ದಂತವರು ವಾಪಾಸು ಸರೆಂಡರ್ ಮಾಡೋದಕ್ಕೆ ಸೂಚಿಸಲಾಗಿತ್ತು. ಆದ್ರೇ ಜೀವ ಭಯವಿದೆ ಎಂಬುದಾಗಿ ಹೇಳಿದ್ದಂತ ರಿಯಾಜ್ ಗನ್ ಇಟ್ಟುಕೊಳ್ಳೋದಕ್ಕೆ ಅನುಮತಿಯನ್ನು ಪಡೆದಿದ್ದನು. ಝಡ್ ಪ್ಲಸ್ ಭದ್ರತೆಯನ್ನು ಹೊಂದಿರುವಂತ ಸಿಎಂ ಸಿದ್ಧರಾಮಯ್ಯ…

Read More

ಬೆಂಗಳೂರು: ಸಂಜ್ಞೆ ಭಾಷಾ ವ್ಯಾಖ್ಯಾನಕಾರನ ಸಹಾಯದಿಂದ ಪ್ರಕರಣವೊಂದರಲ್ಲಿ ವಾದ ಮಂಡಿಸಿದ ಶ್ರವಣದೋಷವುಳ್ಳ ವಕೀಲೆ ಸಾರಾ ಸನ್ನಿ ಅವರನ್ನು ಕರ್ನಾಟಕ ಹೈಕೋರ್ಟ್ ಸೋಮವಾರ ಶ್ಲಾಘಿಸಿದೆ. ವಾಕ್ ಮತ್ತು ಶ್ರವಣದೋಷವುಳ್ಳ ವಕೀಲೆ ಸಾರಾ ಸನ್ನಿ ಅವರು ಪ್ರಮಾಣೀಕೃತ ಸಂಕೇತ ಭಾಷಾ ವ್ಯಾಖ್ಯಾನಕಾರರ ಮೂಲಕ ಸಲ್ಲಿಸಿದ ಸಲ್ಲಿಕೆಗಳನ್ನು ಆಲಿಸುವ ಮೂಲಕ ಕರ್ನಾಟಕ ಹೈಕೋರ್ಟ್ ಸೋಮವಾರ ಇತಿಹಾಸ ನಿರ್ಮಿಸಿದೆ. ವಾಸ್ತವವಾಗಿ, ಸಾರಾ ಸನ್ನಿ ಶ್ರವಣದೋಷ ಹೊಂದಿರುವ ವಕೀಲರಾಗಿ ನೋಂದಾಯಿಸಿಕೊಂಡ ಭಾರತದ ಮೊದಲ ವಕೀಲರಾಗಿದ್ದಾರೆ. ಕರ್ನಾಟಕ ಹೈಕೋರ್ಟ್ ನ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರ ವಾದವನ್ನು ಉಲ್ಲೇಖಿಸಿದ ಬಾರ್ ಅಂಡ್ ಬೆಂಚ್, “ಪ್ರತಿವಾದಿ-ಪತ್ನಿ ಸಾರಾ ಸನ್ನಿ ಅವರು ಸಂಜ್ಞೆ ಭಾಷೆಯ ವ್ಯಾಖ್ಯಾನಕಾರರ ಮೂಲಕ ಶ್ರವಣ ಮತ್ತು ವಾಕ್ ದೌರ್ಬಲ್ಯದ ಅಂಗವೈಕಲ್ಯವನ್ನು ಸೋಲಿಸುವ ಮೂಲಕ ವಿಸ್ತಾರವಾದ ಸಲ್ಲಿಕೆಗಳನ್ನು ಮಾಡಿದ್ದಾರೆ. ಸಾರಾ ಸನ್ನಿ ಸಲ್ಲಿಸಿದ ಸಲ್ಲಿಕೆಗಳನ್ನು ಶ್ಲಾಘಿಸಬೇಕಾಗಿದೆ ಮತ್ತು ಮೆಚ್ಚುಗೆಯನ್ನು ದಾಖಲೆಯಲ್ಲಿ ಇಡಬೇಕಾಗಿದೆ. ಆದರೆ ಸಲ್ಲಿಕೆಗಳು ಸಂಕೇತ ಭಾಷೆಯ ವ್ಯಾಖ್ಯಾನಕಾರರ ಮೂಲಕವಾಗಿದೆ ಎಂದು ಹೇಳಿದ್ದಾರೆ ಎಂದಿದೆ. ಭಾಷಾಂತರಕಾರರ ಮೂಲಕ ವಿಚಾರಣೆ ಮತ್ತು ಭಾಷಣ…

Read More

ಮಹಾರಾಷ್ಟ್ರ: ಪುಣೆಯ ಪಿಂಪ್ರಿ-ಚಿಂಚ್ವಾಡ್ನ ಪ್ರತಿಷ್ಠಿತ ಕಂಪನಿಯ ಕ್ಯಾಂಟೀನ್ನಲ್ಲಿ ನೀಡಲಾಗುವ ಸಮೋಸಾಗಳಲ್ಲಿ ಕಾಂಡೋಮ್ಗಳು, ಕಲ್ಲುಗಳು, ತಂಬಾಕು, ಗುಟ್ಕಾ ಮತ್ತು ಇತರ ಹಲವಾರು ವಸ್ತುಗಳು ಪತ್ತೆಯಾಗಿವೆ ಎಂದು ಸ್ಥಳೀಯ ದಿನಪತ್ರಿಕೆಯೊಂದು ವರದಿ ಮಾಡಿದೆ. ವರದಿಯ ಪ್ರಕಾರ, ಮಾರ್ಚ್ 27 ರಂದು ಬೆಳಕಿಗೆ ಬಂದ ಈ ಘಟನೆಯು ಪೊಲೀಸರು ಐದು ವ್ಯಕ್ತಿಗಳ ವಿರುದ್ಧ ಪ್ರಕರಣ ದಾಖಲಿಸಲು ಕಾರಣವಾಯಿತು. ಇಲ್ಲಿಯವರೆಗೆ ಒಬ್ಬರನ್ನು ಬಂಧಿಸಲಾಗಿದೆ. ಕಂಪನಿಯೊಂದಿಗಿನ ತನ್ನ ಸ್ವಂತ ಒಪ್ಪಂದವನ್ನು ಕೊನೆಗೊಳಿಸಿದ ನಂತರ ಹೊಸ ಗುತ್ತಿಗೆದಾರರಿಂದ ಕ್ಯಾಟರಿಂಗ್ ಒಪ್ಪಂದವನ್ನು ಪಡೆಯುವ ಪ್ರಯತ್ನದಲ್ಲಿ ಉದ್ಯಮಿಯೊಬ್ಬರು ಈ ಕೃತ್ಯವನ್ನು ಎಸಗಿರೋದಾಗಿ ತನಿಖೆಯಿಂದ ತಿಳಿದುಬಂದಿದೆ ಎಂದು ವರದಿ ತಿಳಿಸಿದೆ. ಈ ವರ್ಷದ ಆರಂಭದಲ್ಲಿ ಉತ್ತರ ಪ್ರದೇಶದ ಡಂಕೌರ್ನ ದ್ರೋಣಾಚಾರ್ಯ ಪದವಿ ಕಾಲೇಜಿನ ಸುಮಾರು 20 ಶಿಕ್ಷಕರು ಹೊಸ ವರ್ಷದ ಆಚರಣೆಯ ಸಂದರ್ಭದಲ್ಲಿ ಸ್ಥಳೀಯ ಸಿಹಿತಿಂಡಿ ಅಂಗಡಿಯಿಂದ ಸಮೋಸಾ ಸೇವಿಸಿದ ನಂತರ ಆಸ್ಪತ್ರೆಗೆ ದಾಖಲಾದ ಇದೇ ರೀತಿಯ ಆತಂಕಕಾರಿ ಘಟನೆಯನ್ನು ವರದಿಯಾಗಿದೆ. https://kannadanewsnow.com/kannada/20-mlc-ta-saravana-appointed-as-jds-spokespersons/ https://kannadanewsnow.com/kannada/how-is-pm-modis-horoscope-from-ugadi-here-is-the-prediction-made-by-famous-astrologers/

Read More

ಬೆಂಗಳೂರು: ಜೆಡಿಎಸ್ ಪಕ್ಷದ 20 ಮುಖಂಡರನ್ನು ಬೆಂಗಳೂರು ನಗರ ಜೆಡಿಎಸ್ ವಕ್ತಾರರನ್ನಾಗಿ ನೇಮಕ ಮಾಡಲಾಗಿದೆ. ನಗರ ಘಟಕದ ಅಧ್ಯಕ್ಷ ಹೆಚ್.ಎಂ.ರಮೇಶ್ ಗೌಡ ಅವರು ಪ್ರಕಟಣೆ ಹೊರಡಿಸಿದ್ದಾರೆ. ವಿಧಾನ ಪರಿಷತ್ ಸದಸ್ಯರಾದ ಟಿ.ಎ.ಶರವಣ, ಕೆ.ಟಿ.ಶ್ರೀಕಂಠೇಗೌಡ, ಆರ್.ಪ್ರಕಾಶ್, ಗಂಗಾಧರ ಮೂರ್ತಿ, ಹೆಚ್.ಎನ್.ದೇವರಾಜು, ಶೀಲಾ ನಾಯಕ್, ಪ್ರಶಾಂತಿ ಗಾವಂಕರ್, ತಾರಾ ಲೋಕೇಶ್, ಶ್ವೇತಾ ಯಾದವ್, ಛಾಯಾ, ಜಿ. ಟಿ.ರೇವಣ್ಣ, ಪ್ರವೀಣ್ ಕುಮಾರ್ ಎ.ಎಂ., ಪ್ರದೀಪ್ ಕುಮಾರ್, ಎ.ನಾಗೇಂದ್ರ ಪ್ರಸಾದ್ ಬಾಬು, ಎಸ್.ಜಿ.ವೀರಣ್ಣ, ಪಿ.ವಿ.ಎಸ್.ಪ್ರಸಾದ್, ಎನ್. ಚಂದ್ರಶೇಖರ್, ಶೈಲಾ ರಾವ್, ನರಸಿಂಹ ಮೂರ್ತಿ, ಎಂ.ಗೋಪಾಲ ಅವರನ್ನು ವಕ್ತಾರರನ್ನಾಗಿ ನೇಮಕ ಮಾಡಲಾಗಿದೆ. ಇವರೆಲ್ಲರೂ ಸುದ್ದಿ ಮಾಧ್ಯಮಗಳಲ್ಲಿ ಜೆಡಿಎಸ್ ಪಕ್ಷದ ವಿಚಾರ, ನಿಲುವುಗಳನ್ನು ಮಂಡಿಸಬೇಕಾಗಿ ಸೂಚಿಸಲಾಗಿದೆ ಎಂದು ಹೆಚ್.ಎಂ.ರಮೇಶ್ ಗೌಡ ಅವರು ತಿಳಿಸಿದ್ದಾರೆ. https://kannadanewsnow.com/kannada/congress-is-a-goonda-state-police-department-is-dead-opposition-leader-r-ashoka/ https://kannadanewsnow.com/kannada/how-is-pm-modis-horoscope-from-ugadi-here-is-the-prediction-made-by-famous-astrologers/

Read More

ಬೆಂಗಳೂರು: ಕಾಂಗ್ರೆಸ್‌ ಕಾರ್ಯಕರ್ತರು ಗನ್‌ ಇಟ್ಟುಕೊಂಡು ಓಡಾಡುವ ಮೂಲಕ ತಮ್ಮದು ಗೂಂಡಾ ರಾಜ್ಯ ಎಂದು ತೋರಿಸಿಕೊಂಡಿದ್ದಾರೆ. ಇಂತಹ ಘಟನೆಯಿಂದ ಪೊಲೀಸ್‌ ಇಲಾಖೆ ಬದುಕಿದ್ದೂ ಸತ್ತಂತಾಗಿದೆ ಎಂದು ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್‌.ಅಶೋಕ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚುನಾವಣೆಯ ಸಂದರ್ಭದಲ್ಲಿ ಒಂದು ತಿಂಗಳು ಮುಂಚಿತವಾಗಿ ಗನ್‌ ವಾಪಸ್‌ ಕೊಡಬೇಕಾಗಿತ್ತು. ಕಾಂಗ್ರೆಸ್‌ ಸರ್ಕಾರ ಅಧಿಕಾರದಲ್ಲಿದೆ ಎಂಬ ಕಾರಣಕ್ಕೆ ಕಾಂಗ್ರೆಸ್‌ ಕಾರ್ಯಕರ್ತರು ಪೊಲೀಸರ ಮೇಲೆ ಒತ್ತಡ ಹಾಕಿ ಗನ್‌ ಅನ್ನು ಜೇಬಿನಲ್ಲಿ ಇಟ್ಟುಕೊಂಡು ಓಡಾಡುತ್ತಿದ್ದಾರೆ. ಇದು ಕಾಂಗ್ರೆಸ್‌ ಕಾರ್ಯಕರ್ತರೇ ಮಾಡುತ್ತಿರುವ ರೌಡಿಸಂ. ಅಂತಹವರು ಮುಖ್ಯಮಂತ್ರಿಗಳಿಗೆ ಹಾರ ಹಾಕುವ ಮೂಲಕ ನಾವು ಕಾನೂನು ಪಾಲನೆ ಮಾಡಲ್ಲ ಎಂಬ ಸಂದೇಶ ರವಾನಿಸಿದ್ದಾರೆ. ಇದೇ ಕಾಂಗ್ರೆಸ್ಸಿನ ಗೂಂಡಾ ರಾಜ್ಯ ಎಂದರು. ಇದು ಅತಿ ದೊಡ್ಡ ಭದ್ರತಾ ವೈಫಲ್ಯವಾಗಿದೆ. ಇನ್ನು ನಾಳೆಯ ದಿನಗಳಲ್ಲಿ ಯಾರಾದರೂ ಬಾಂಬ್‌ ಇಟ್ಟುಕೊಂಡು ಓಡಾಡಬಹುದು. ಇಂತಹ ಘಟನೆಯಿಂದ ಪೊಲೀಸ್‌ ಇಲಾಖೆ ಬದುಕಿದ್ದೂ ಸತ್ತಂತಾಗಿದೆ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ ಎಂದು ನಾನು ಸದನದಲ್ಲೇ ಹೇಳಿದ್ದೆ. ಇದು ಕೂಡ…

Read More

ಸಂಸಾರದಲ್ಲಿನ ಕಣ್ಣಿನ ಆಯಾಸ ದೂರವಾಗಬೇಕಾದರೆ ಪ್ರತಿ ತಿಂಗಳು ಬರುವ ಅಮಾವಾಸ್ಯೆಯಂದು ನಮ್ಮ ಮನೆಯಲ್ಲಿದ್ದವರಿಗೆ ದೃಷ್ಠಿ ನಿವಾಳಿಸುವ ತಂತ್ರ ಮಾಡಬೇಕು. ಅಮಾವಾಸಿ ತಿಥಿಯಂದು ದೃಷ್ಟಿ ಸುತ್ತಿದರೆ ನಮ್ಮ ಕುಟುಂಬದಲ್ಲಿ ಜನರ ಕಣ್ಣಿನ ದೃಷ್ಟಿ ದೂರವಾಗುತ್ತದೆ ಮತ್ತು ಕುಟುಂಬದ ಸದಸ್ಯರಿಗೆ ಯಾವುದೇ ಹಾನಿಯಾಗುವುದಿಲ್ಲ ಎಂಬುದು ನಮ್ಮ ಪೂರ್ವಜರ ನಂಬಿಕೆಯಾಗಿದೆ. ಶ್ರೀ ಸಿಗಂದೂರು ಚೌಡೇಶ್ವರಿ ಜ್ಯೋತಿಷ್ಯ ಪೀಠ ನಂ 1ಕೇರಳ ಕೊಳ್ಳೇಗಾಲದ ಮಹಾ ಮಾಂತ್ರಿಕ ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ನಕ್ಷತ್ರಿ ತಂತ್ರಿ ನಂ:- 9686268564. ನಂ 1ವಶೀಕರಣ ಸ್ಪೆಷಲಿಸ್ಟ್ ಒಂದು ಕರೆಯಲ್ಲಿ ಪರಿಹಾರ ತಿಳಿಸುತ್ತಾರೆ ತಾವು ಎಷ್ಟೋ ಜ್ಯೋತಿಷ್ಯರಲ್ಲಿ ಕೇಳಿಯು ಪರಿಹಾರ ಸಿಗದೇ ಮನನೊಂದಿದ್ದರೆ ಪರಿಹಾರ ನಿಮ್ಮ ಸಮಸ್ಯೆಗಳಾದ ಅತ್ತೆ-ಸೊಸೆ ಕಿರಿಕಿರಿ, ಪ್ರೀತಿಯಲ್ಲಿ ನಂಬಿ ಮೋಸ, ಇಷ್ಟ ಪಟ್ಟವರು ನಿಮ್ಮಂತೆ ಆಗಲು, ಗಂಡ ಹೆಂಡತಿ ಕಿರಿಕಿರಿ, ಮದುವೆಯಲ್ಲಿ ಅಡೆತಡೆ, ಸಂತಾನ ಸಮಸ್ಯೆ, ಮಕ್ಕಳು ಹೇಳಿದ ಮಾತು ಕೇಳದಿದ್ದರೆ, ವಿದ್ಯಾಭ್ಯಾಸದಲ್ಲಿ ಕಿರಿಕಿರಿ, ಆರೋಗ್ಯ ಸಮಸ್ಯೆ, ಆಸ್ತಿಯಲ್ಲಿ ಕಿರಿಕಿರಿ, ಮಾಟ ಮಂತ್ರ, ಶತ್ರು ನಾಶ, ಶತ್ರು ವಶೀಕರಣ,ಭಾನಮತಿ ಕೃತಿಮ…

Read More

ಮಂಡ್ಯ: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರನ್ನು ಮೂರನೇ ಬಾರಿಗೆ ಪ್ರಧಾನಿಮಂತ್ರಿಯನ್ನಾಗಿ ಮಾಡಲು ಮತ್ತು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರನ್ನು ಈ ಬಾರಿ ಸಂಸದರನ್ನಾಗಿ ಮಾಡಬೇಕೆಂಬ ಉದ್ದೇಶದಿಂದ ತಾಲೂಕಿನಾದ್ಯಂತ ಅನ್ಯ ಪಕ್ಷದ ನೂರಾರು ಸಂಖ್ಯೆಯಲ್ಲಿ ಕಾರ್ಯಕರ್ತರು ಮತ್ತು ಮುಖಂಡರು ಜೆಡಿಎಸ್ಗೆ ಸೇರ್ಪಡೆಗೊಳ್ಳುತ್ತಿದ್ದಾರೆಂದು ಮಾಜಿ ಸಚಿವ ಡಿ.ಸಿ.ತಮ್ಮಣ್ಣ ತಿಳಿಸಿದರು. ಮದ್ದೂರು ಪಟ್ಟಣದ ಜೆಡಿಎಸ್ ಕಚೇರಿಯಲ್ಲಿ ಕೆಸ್ತೂರು ಭಾಗದ ತಾಪಂ ಮಾಜಿ ಸದಸ್ಯ ಕೆ.ಟಿ.ರಾಜಣ್ಣ, ಎಪಿಎಂಸಿ ಮಾಜಿ ಉಪಾಧ್ಯಕ್ಷ ಬಿಳಿಯಪ್ಪ ಸೇರಿದಂತೆ ಹಲವಾರು ಮುಖಂಡರನ್ನು ಜೆಡಿಎಸ್ ಪಕ್ಷಕ್ಕೆ ಬರಮಾಡಿಕೊಂಡು ಮಾತನಾಡಿದರು. ಈ ಇಬ್ಬರು ಮುಖಂಡರು ಕಾಂಗ್ರೆಸ್ ತೊರೆದು ಜೆಡಿಎಸ್ ಸೇರಿರುವುದರಿಂದ ಆತಗೂರು ಹೋಬಳಿಯಲ್ಲಿ ಜೆಡಿಎಸ್ ಪಕ್ಷಕ್ಕೆ ಆನೆ ಬಲ ಬಂದಿದೆ. ಮುಂದಿನ ದಿನಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಅನ್ಯ ಪಕ್ಷಗಳ ಮುಖಂಡರು ಮತ್ತು ಕಾರ್ಯಕರ್ತರು ಜೆಡಿಎಸ್ ಪಕ್ಷಕ್ಕೆ ಬರಲಿದ್ದಾರೆಂದು ವಿಶ್ವಾಸ ವ್ಯಕ್ತಪಡಿಸಿದರು. ಕುಮಾರಸ್ವಾಮಿ ಅವರು 2 ಬಾರಿ ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ರೈತರ ಸಾಲ ಮನ್ನಾ ಮಾಡಿ ಅನುಕೂಲ ಕಲ್ಪಿಸುವ ಜತೆಗೆ ಎಲ್ಲಾ ವರ್ಗದವರಿಗೆ ಅನುಕೂಲವಾಗುವ ಯೋಜನೆಗಳನ್ನು ಜಾರಿಗೆ…

Read More

ಶಿವಮೊಗ್ಗ: ಇಂದು ಸಾಗರದಲ್ಲಿ ಖಾಸಗಿ ಬಸ್ ಒಂದು ಬ್ರೇಕ್ ಫೇಲ್ ಆಗಿ ಸರಣಿ ಅಪಘಾತ ಸಂಭವಿಸಿದೆ. ಈ ಅಪಘಾತದಲ್ಲಿ 9ಕ್ಕೂ ಹೆಚ್ಚು ಬೈಕ್ ಗಳು ನಜ್ಜುಗುಜ್ಜಾಗಿರೋ ಘಟನೆ ನಡೆದಿದೆ. ಶಿವಮೊಗ್ಗ ಜಿಲ್ಲೆಯ ಸಾಗರ ನಗರದಲ್ಲಿ ಹಳೆಬಸ್ ನಿಲ್ದಾಣದ ಹತ್ತಿರ ಗಜಾನನ ಸಾರಿಗೆ ಸಂಸ್ಥೆಗೆ ಸೆರಿದ KA 15 2944 ಬಸ್ ಪ್ರಯಾಣಿಕರನ್ನು ಇಳಿಸಿದ ನಂತರದಲ್ಲಿ ಬ್ರೇಕ್ ಪೇಲ್ ಆಗಿ, ಚಾಲಕನ ನಿಯಂತ್ರಣ ತಪ್ಪಿದೆ. ಬಸ್ ಬ್ರೇಕ್ ಫೇಲ್ ಆದ ಪರಿಣಾಮ ಬಸ್ ನಿಲ್ದಾಮದ ಬಳಿಯಲ್ಲಿ ನಿಲ್ಲಿಸಿದ್ದಂತ ಬೈಕ್ ಗಳಿಗೆ ಡಿಕ್ಕಿ ಹೊಡೆದ ಪರಿಣಾಮ 10ಕ್ಕೂ ಹೆಚ್ಚು ಬೈಕ್ ಗಳು ನಜ್ಜುಗುಜ್ಜಾಗಿದ್ದಾವೆ. ಇಂದು 5.50ರ ಸುಮಾರಿಗೆ ಈ ಘಟನೆ ನಡೆದಿದೆ. ಈ ಸರಣಿ ಅಪಘಾತದಲ್ಲಿ ಯಾವುದೇ ಸಾವು ನೋವು ಸಂಭವಿಸಿಲ್ಲ. ಈ ಸಂಬಂಧ ಸಾಗರ ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. https://kannadanewsnow.com/kannada/railway-passengers-note-special-train-service-between-mysuru-and-bhubaneswar/ https://kannadanewsnow.com/kannada/how-is-pm-modis-horoscope-from-ugadi-here-is-the-prediction-made-by-famous-astrologers/

Read More

ಬಂಗಳೂರು: ಬೇಸಿಗೆಯಲ್ಲಿ ಹೆಚ್ಚುವರಿ ಪ್ರಯಾಣಿಕರನ್ನು ತೆರವುಗೊಳಿಸಲು ಬೇಡಿಕೆಯ ಮೇರೆಗೆ ಮೈಸೂರು-ಭುವನೇಶ್ವರ ನಿಲ್ದಾಣಗಳ ನಡುವೆ ಒಂದು ಟ್ರಿಪ್ ವಿಶೇಷ ರೈಲು ಓಡಿಸಲಾಗುವುದು. ಅವುಗಳ ಮಾಹಿತಿ ಈ ಕೆಳಗಿನಂತಿವೆ: 1. ಏಪ್ರಿಲ್ 9 ರಂದು ರೈಲು ಸಂಖ್ಯೆ 06215 ಮೈಸೂರು-ಭುವನೇಶ್ವರ ವಿಶೇಷ ಎಕ್ಸ್ ಪ್ರೆಸ್ ರೈಲು ಮೈಸೂರಿನಿಂದ ಬೆಳಿಗ್ಗೆ 4:15 ಗಂಟೆಗೆ ಹೊರಟು ಮರುದಿನ ಬೆಳಿಗ್ಗೆ 10:40 ಗಂಟೆಗೆ ಭುವನೇಶ್ವರವನ್ನು ತಲುಪಲಿದೆ. 2. ಏಪ್ರಿಲ್ 10 ರಂದು ರೈಲು ಸಂಖ್ಯೆ 06216 ಭುವನೇಶ್ವರ-ಮೈಸೂರು ವಿಶೇಷ ಎಕ್ಸ್ ಪ್ರೆಸ್ ರೈಲು ಭುವನೇಶ್ವರದಿಂದ ಮಧ್ಯಾಹ್ನ 1 ಗಂಟೆಗೆ ಹೊರಟು ಮರುದಿನ ಸಂಜೆ 07:15 ಗಂಟೆಗೆ ಮೈಸೂರು ನಿಲ್ದಾಣಕ್ಕೆ ಆಗಮಿಸಲಿದೆ. ವಿಶೇಷ ರೈಲು ಮಂಡ್ಯ, ಕೆಎಸ್ಆರ್ ಬೆಂಗಳೂರು, ಬೆಂಗಳೂರು ಕಂಟೋನ್ಮೆಂಟ್, ಕೃಷ್ಣರಾಜಪುರಂ, ವೈಟ್ ಫೀಲ್ಡ್, ಬಂಗಾರಪೇಟೆ, ಜೋಲಾರಪೆಟ್ಟೈ , ಕಟಪಾಡಿ, ರೇಣಿಗುಂಟ, ಗುಡೂರು, ನೆಲ್ಲೂರು, ಒಂಗೋಲ್, ತೆನಾಲಿ, ವಿಜಯವಾಡ, ಎಲೂರು, ರಾಜಮಂಡ್ರಿ, ಸಾಮಲಕೋಟೆ, ದುವ್ವಾಡ, ಕೊಟ್ಟವಲಸಾ, ವಿಜಯನಗರಂ, ಶ್ರೀಕಾಕುಳಂ ರೋಡ, ಪಾಲಸಾ, ಬ್ರಹ್ಮಪುರ ಮತ್ತು ಖುರ್ದಾ ರೋಡ ನಿಲ್ದಾಣಗಳಲ್ಲಿ ನಿಲುಗಡೆ…

Read More