Subscribe to Updates
Get the latest creative news from FooBar about art, design and business.
Author: kannadanewsnow09
ಬೆಂಗಳೂರು: ರಾಜ್ಯದಲ್ಲಿ ವಿಧಾನಪರಿಷತ್ತಿನ ಚುನಾವಣೆ ಘೋಷಣೆಯಾಗಿದೆ. ವಿಧಾನಸಭೆಯಿಂದ ವಿಧಾನ ಪರಿಷತ್ತಿನ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಘೋಷಣೆ ಮಾಡಲಾಗಿದೆ. ಸಿಎಂ ಸಿದ್ಧರಾಮಯ್ಯ ಅವರ ಪುತ್ರ ಡಾ.ಯತೀಂದ್ರ ಸಿದ್ಧರಾಮಯ್ಯಗೂ ಟಿಕೆಟ್ ನೀಡಲಾಗಿದೆ. ಈಗಾಗಲೇ ಬಿಜೆಪಿಯಿಂದ ವಿಧಾನಪರಿಷತ್ತಿನ ಚುನಾವಣೆಗೆ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಲಾಗಿದೆ. ಸಿಟಿ ರವಿ, ಎನ್ ರವಿಕುಮಾರ್ ಹಾಗೂ ಎಂ.ಜಿ ಮುಳೆಗೆ ವಿಧಾನಸಭೆಯಿಂದ ವಿಧಾನಪರಿಷತ್ತಿಗೆ ಚುನಾಯಿತರಾಗಲು ಅಭ್ಯರ್ಥಿಯಾಗಿ ಘೋಷಣೆ ಮಾಡಿದೆ. ಈ ಬೆನ್ನಲ್ಲೇ ಕಾಂಗ್ರೆಸ್ ಪಕ್ಷದಿಂದಲೂ ಅಭ್ಯರ್ಥಿಗಳನ್ನು ಘೋಷಣೆ ಮಾಡಲಾಗಿದೆ. ಕಾಂಗ್ರೆಸ್ ಪಕ್ಷದಿಂದ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ಪುತ್ರ ಡಾ.ಯತೀಂದ್ರ ಸಿದ್ಧರಾಮಯ್ಯ, ಎನ್ ಎಸ್ ಬೋಸರಾಜು, ಡಾ.ಕೆ ಗೋವಿಂದರಾಜು, ವಸಂತ್ ಕುಮಾರ್, ಜಗದೇವ ಗುತ್ತೇದಾರ, ಐವಾನ್ ಡಿಸೋಜಗೆ ಟಿಕೆಟ್ ನೀಡಲಾಗಿದೆ. ಇನ್ನೂ ಬಿಜೆಪಿ ಪಕ್ಷಕ್ಕೆ ಹೋದಂತ ಜಗದೀಶ್ ಶೆಟ್ಟರ್ ತೆರವಾದಂತ ಸ್ಥಾನಕ್ಕೆ ಉಪ ಚುನಾವಣೆ ಘೋಷಣೆಯಾಗಿತ್ತು. ಈ ಉಪ ಚುನಾವಣೆಗೆ ಕಾಂಗ್ರೆಸ್ ಪಕ್ಷದಿಂದ ಬಸನಗೌಡ ಬಾರ್ದಲಿ ಅವರಿಗೆ ಟಿಕೆಟ್ ಹಂಚಿಕೆ ಮಾಡಲಾಗಿದೆ. ಈ ಮೂಲಕ ವಿಧಾನ ಪರಿಷತ್ ಚುನಾವಣೆಗೆ ಕಾಂಗ್ರೆಸ್ ಪಕ್ಷದಿಂದ 7…
ಓಹಿಯೋ: ಓಹಿಯೋದ ಅಕ್ರಾನ್ ನಲ್ಲಿ ಭಾನುವಾರ ಮುಂಜಾನೆ ಹುಟ್ಟುಹಬ್ಬದ ಪಾರ್ಟಿಯ ಮೇಲೆ ಗುಂಡಿನ ದಾಳಿ ನಡೆಸಲಾಗಿದೆ. ಈ ದಾಳಿಯಲ್ಲಿ ಓರ್ವ ಸಾವನ್ನಪ್ಪಿದ್ದು, 27 ಜನರನ್ನು ಗಾಯಗೊಂಡಿರೋದಾಗಿ ತಿಳಿದು ಬಂದಿದೆ. ಶಂಕಿತ ಇನ್ನೂ ತಲೆಮರೆಸಿಕೊಂಡಿದ್ದಾನೆ. ಸ್ಥಳೀಯ ವರದಿಗಳ ಪ್ರಕಾರ, ಶೂಟಿಂಗ್ ಘಟನೆಯ ನಂತರ ಅನೇಕ ಆಸ್ಪತ್ರೆಗಳನ್ನು ಲಾಕ್ ಡೌನ್ ಮಾಡಲಾಗಿದೆ. ಗಾಯಾಳುಗಳಿಗೆ ಸ್ಥಳೀಯ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. https://twitter.com/tecas2000/status/1797175520997597373 ಸುರಕ್ಷತಾ ಕಾರಣಗಳಿಗಾಗಿ ಶೂಟಿಂಗ್ ಸ್ಥಳದಿಂದ ದೂರವಿರಲು ಅಧಿಕಾರಿಗಳು ಸ್ಥಳೀಯರಿಗೆ ಸೂಚಿಸಿದ್ದಾರೆ. ಇದರಿಂದ ಅವರು ಯಾವುದೇ ಅಡೆತಡೆಯಿಲ್ಲದೆ ತಮ್ಮ ತನಿಖೆಯನ್ನು ಮುಂದುವರಿಸಬಹುದು. ಕೆಲ್ಲಿ ಅವೆನ್ಯೂದಲ್ಲಿನ ಶೂಟಿಂಗ್ ಸ್ಥಳದಲ್ಲಿ ಗೊಂದಲದ ದೃಶ್ಯಗಳು ಉಂಟಾಗಿದ್ದು, ಹಲವಾರು ಗುಂಡುಗಳು ಕೇಳಿ ಜನರು ತಮ್ಮ ಪ್ರಾಣಕ್ಕಾಗಿ ಓಡುತ್ತಿದ್ದಾರೆ ಎಂದು ಪ್ರತ್ಯಕ್ಷದರ್ಶಿಗಳು ಹೇಳಿದ್ದಾರೆ. https://kannadanewsnow.com/kannada/upi-sets-new-record-crosses-rs-20-trillion-turnover/ https://kannadanewsnow.com/kannada/shimoga-new-journalists-association-launched-in-sagar-taluk/
ಬೆಂಗಳೂರು: ರಾಜ್ಯದಲ್ಲಿ ವಿಧಾನಪರಿಷತ್ತಿನ ಚುನಾವಣೆ ಘೋಷಣೆಯಾಗಿದೆ. ವಿಧಾನಸಭೆಯಿಂದ ವಿಧಾನ ಪರಿಷತ್ತಿನ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಘೋಷಣೆ ಮಾಡಲಾಗಿದೆ. ಸಿಎಂ ಸಿದ್ಧರಾಮಯ್ಯ ಅವರ ಪುತ್ರ ಡಾ.ಯತೀಂದ್ರ ಸಿದ್ಧರಾಮಯ್ಯಗೂ ಟಿಕೆಟ್ ನೀಡಲಾಗಿದೆ. ಈಗಾಗಲೇ ಬಿಜೆಪಿಯಿಂದ ವಿಧಾನಪರಿಷತ್ತಿನ ಚುನಾವಣೆಗೆ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಲಾಗಿದೆ. ಸಿಟಿ ರವಿ, ಎನ್ ರವಿಕುಮಾರ್ ಹಾಗೂ ಎಂ.ಜಿ ಮುಳೆಗೆ ವಿಧಾನಸಭೆಯಿಂದ ವಿಧಾನಪರಿಷತ್ತಿಗೆ ಚುನಾಯಿತರಾಗಲು ಅಭ್ಯರ್ಥಿಯಾಗಿ ಘೋಷಣೆ ಮಾಡಿದೆ. ಈ ಬೆನ್ನಲ್ಲೇ ಕಾಂಗ್ರೆಸ್ ಪಕ್ಷದಿಂದಲೂ ಅಭ್ಯರ್ಥಿಗಳನ್ನು ಘೋಷಣೆ ಮಾಡಲಾಗಿದೆ. ಕಾಂಗ್ರೆಸ್ ಪಕ್ಷದಿಂದ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ಪುತ್ರ ಡಾ.ಯತೀಂದ್ರ ಸಿದ್ಧರಾಮಯ್ಯ, ಎನ್ ಎಸ್ ಬೋಸರಾಜು, ಡಾ.ಕೆ ಗೋವಿಂದರಾಜು, ವಸಂತ್ ಕುಮಾರ್, ಜಗದೇವ ಗುತ್ತೇದಾರ, ಐವಾನ್ ಡಿಸೋಜ ಹಾಗೂ ಬಸನಗೌಡ ಬಾರ್ದಲಿ ಅವರಿಗೆ ಟಿಕೆಟ್ ಘೋಷಣೆ ಮಾಡಲಾಗಿದೆ. https://kannadanewsnow.com/kannada/upi-sets-new-record-crosses-rs-20-trillion-turnover/ https://kannadanewsnow.com/kannada/shimoga-new-journalists-association-launched-in-sagar-taluk/
ಬೆಂಗಳೂರು: ರಾಜ್ಯದಲ್ಲಿ ವಿಧಾನಪರಿಷತ್ತಿನ ಚುನಾವಣೆ ಘೋಷಣೆಯಾಗಿದೆ. ವಿಧಾನಸಭೆಯಿಂದ ವಿಧಾನ ಪರಿಷತ್ತಿನ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಫೈನಲ್ ಆಗಿದ್ದು, ಅಧಿಕೃತ ಘೋಷಣೆ ಮಾತ್ರವೇ ಬಾಕಿ ಉಳಿದಿದೆ. ಈಗಾಗಲೇ ಬಿಜೆಪಿಯಿಂದ ವಿಧಾನಪರಿಷತ್ತಿನ ಚುನಾವಣೆಗೆ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಲಾಗಿದೆ. ಸಿಟಿ ರವಿ, ಎನ್ ರವಿಕುಮಾರ್ ಹಾಗೂ ಎಂ.ಜಿ ಮುಳೆಗೆ ವಿಧಾನಸಭೆಯಿಂದ ವಿಧಾನಪರಿಷತ್ತಿಗೆ ಚುನಾಯಿತರಾಗಲು ಅಭ್ಯರ್ಥಿಯಾಗಿ ಘೋಷಣೆ ಮಾಡಿದೆ. ಈ ಬೆನ್ನಲ್ಲೇ ಕಾಂಗ್ರೆಸ್ ಪಕ್ಷದಿಂದಲೂ ಅಭ್ಯರ್ಥಿಗಳನ್ನು ಫೈನಲ್ ಮಾಡಲಾಗಿದೆ. ಕಾಂಗ್ರೆಸ್ ಪಕ್ಷದಿಂದ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ಪುತ್ರ ಡಾ.ಯತೀಂದ್ರ ಸಿದ್ಧರಾಮಯ್ಯ, ಎನ್ ಎಸ್ ಬೋಸರಾಜು, ಡಾ.ಕೆ ಗೋವಿಂದರಾಜು, ವಸಂತ ಕುಮಾರ್, ಜಗದೇವ ಗುತ್ತೇದಾರ, ಐವಾನ್ ಡಿಸೋಜ ಹಾಗೂ ತಮಟಗಾರ ಹೆಸರು ಅಂತಿಮಗೊಳಿಸಲಾಗಿದೆ. ಈ ಹೆಸರುಗಳನ್ನು ಕಾಂಗ್ರೆಸ್ ಪಕ್ಷದಿಂದ ಅಧಿಕೃತವಾಗಿ ಘೋಷಣೆ ಮಾಡೋದು ಮಾತ್ರವೇ ಬಾಕಿ ಇದೆ. https://kannadanewsnow.com/kannada/read-this-news-before-you-stand-by-the-roadside/ https://kannadanewsnow.com/kannada/upi-sets-new-record-crosses-rs-20-trillion-turnover/
ಅಹ್ಮದಾಬಾದ್: ವಿವಿಧ ಕಾರಣಗಳಿಂದಾಗಿ ರಸ್ತೆ ಬದಿಯಲ್ಲಿ ನಿಂತುಕೊಳ್ಳೋರು ಅನೇಕರಿದ್ದಾರೆ. ಬಸ್ಸಿಗಾಗಿ ಕಾಯುತ್ತಲೋ, ಯಾರೋ ಬರ್ತಿದ್ದಾರೆ ಅಂತಲೋ ಇನ್ನೂ ಅನೇಕ ಸಂದರ್ಭಗಳಲ್ಲಿ ರಸ್ತೆ ಬದಿಯಲ್ಲಿ ನಿಂತುಕೊಳ್ಳುತ್ತಾರೆ. ಆದ್ರೇ ನೀವು ರಸ್ತೆ ಬದಿಯಲ್ಲಿ ನಿಂತುಕೊಳ್ಳೋ ಮುನ್ನ ಎಚ್ಚರಿಕೆ ವಹಿಸಬೇಕಿದೆ. ಅದ್ಯಾಕೆ ಅಂತ ಮುಂದೆ ಸುದ್ದಿ ಓದಿ. ಶನಿವಾರ ರಾತ್ರಿ ನಿಕೋಲ್ನಲ್ಲಿ ರಸ್ತೆ ಬದಿಯಲ್ಲಿ ನಿಂತುಕೊಂಡಿದ್ದಂತ ಒಂದೇ ಕುಟುಂಬದ ಮೂವರು ಸದಸ್ಯರ ಮೇಲೆ ಕಾರು ಡಿಕ್ಕಿಯಾಗಿರುವ ದೃಶ್ಯ ಸಿಸಿಟಿವಿ ದೃಶ್ಯಾವಳಿಗಳ ನಂತರ ಅಹಮದಾಬಾದ್ನ ಪೊಲೀಸರು ಚಾಲಕನಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ. ವಾಕಿಂಗ್ ಗೆ ತೆರಳಿದ್ದ ಸಂತ್ರಸ್ತರು, ವೇಗವಾಗಿ ಬರುತ್ತಿದ್ದ ಕಾರಿಗೆ ಡಿಕ್ಕಿ ಹೊಡೆದು ಈ ಭೀಕರ ಅಪಘಾತ ಸಂಭವಿಸಿದೆ. ಇದಕ್ಕೆ ಕಾರಣ ವಾಕಿಂಗ್ ಗೆ ತೆರಳೋ ಮೊದಲು ರಸ್ತೆ ಬದಿಯಲ್ಲಿ ಸ್ವಲ್ಪ ಹೊತ್ತು ನಿಂತುಕೊಂಡು ಹರಟೆ ಹೊಡೆದಿದ್ದಾರೆ. ಇದೇ ಸಂದರ್ಭದಲ್ಲಿ ಕಾರೊಂದು ದಿಢೀರ್ ಅವರಿಗೆ ಡಿಕ್ಕಿಯಾಗಿದೆ. ಕಾರು ಡಿಕ್ಕಿಯಾದ ರಬಸಕ್ಕೆ ಓರ್ವ ವ್ಯಕ್ತಿ ಹಾರಿ ಕೆಳಗೆ ಬೀಳುವುದನ್ನು ಸಿಸಿಟಿವಿ ದೃಶ್ಯಾವಳಿಯಲ್ಲಿ ಕಾಣಬಹುದಾಗಿದೆ. https://twitter.com/NewsCapitalGJ/status/1796955624288198756 ಇನ್ನೂ ಹೀಗೆ ಒಂದೇ…
ಬೆಂಗಳೂರು: ಸಿದ್ದರಾಮಯ್ಯನವರಿಗೆ ಘನತೆ, ಗೌರವ ಇದ್ದರೆ, ನೈತಿಕತೆ ಇದ್ದರೆ ಮೊದಲು ರಾಜೀನಾಮೆ ಕೊಡಬೇಕು ಎಂದು ವಿಧಾನಪರಿಷತ್ ವಿಪಕ್ಷದ ಮುಖ್ಯ ಸಚೇತಕ ಎನ್. ರವಿಕುಮಾರ್ ಅವರು ಆಗ್ರಹಿಸಿದರು. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಬ್ಯಾಂಕ್ ಆಫ್ ಬರೋಡದಿಂದ 144 ಕೋಟಿ ರೂಪಾಯಿ ಓವರ್ ಡ್ರಾಫ್ಟ್ (ಸಾಲ) ಪಡೆದಿದ್ದರು. ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣ ಸಂಬಂಧ ವಿವಿಧ ಬ್ಯಾಂಕ್ ಖಾತೆಗಳಿಗೆ ಹಣ ವರ್ಗಾವಣೆಗೆ ಇದನ್ನು ಪಡೆಯಲಾಯಿತೇ? ಆ ಕಂಪನಿಗಳಿಗೆ ಚುನಾವಣೆ ವೇಳೆ ಯಾಕೆ ಹಣ ಹಾಕಿದ್ದೀರಿ? ಆ ಕಂಪನಿಗಳ ಮಾಲೀಕರು ಯಾರು? ಆ ಕಂಪನಿಗಳು ಮತ್ತು ಡಿ.ಕೆ.ಶಿವಕುಮಾರರಿಗೆ, ನಾಗೇಂದ್ರರಿಗೆ, ಸಿದ್ದರಾಮಯ್ಯರಿಗೆ ಏನು ಸಂಬಂಧ ಎಂದು ಕೇಳಿದರು. ಈ ಓವರ್ ಡ್ರಾಫ್ಟ್ ಪಡೆಯಲು ಕ್ಯಾಬಿನೆಟ್ ನಿರ್ಣಯ ಮಾಡಿಲ್ಲವೇಕೆ ಎಂದೂ ಪ್ರಶ್ನಿಸಿದರು. ಇದರೊಳಗೆ ನಾಗೇಂದ್ರ ಮಾತ್ರವಲ್ಲದೆ ಅನೇಕ ಅಧಿಕಾರಿಗಳಿದ್ದಾರೆ. ತೆಲಂಗಾಣದಲ್ಲಿ ಚುನಾವಣೆಗೆ ನಿಂತ ಅನೇಕ ಅಭ್ಯರ್ಥಿಗಳೂ ಇದರಲ್ಲಿದ್ದಾರೆ. ಹಣ ಕೊಟ್ಟ ಅನೇಕ ಮಂತ್ರಿಗಳೂ ಕರ್ನಾಟಕದಲ್ಲಿದ್ದಾರೆ. ಇದೊಂದು ಅಂತರರಾಜ್ಯ ಭ್ರಷ್ಟಾಚಾರ.…
ಶಿವಮೊಗ್ಗ: ಸಾಗರ ತಾಲೂಕಿನಲ್ಲಿ ಈಗಾಗಲೇ ಪತ್ರಕರ್ತರ ಅನೇಕ ಸಂಘಗಳಿದ್ದಾವೆ. ಇದರ ನಡುವೆ ಈಗ ಹೊಸ ಪತ್ರಕರ್ತರ ಸಂಘವೊಂದು ಆರಂಭಗೊಂಡಿದೆ. ಅದೇ ಪ್ರೆಸ್ ಕ್ಲಬ್ ಅಸೋಸಿಯೇಷನ್ ಟ್ರಸ್ಟ್(ರಿ) ಸಾಗರ ಎಂಬುದಾಗಿದೆ. ಶಿವಮೊಗ್ಗ ಜಿಲ್ಲೆ ಸಾಗರ ತಾಲೂಕಿನಲ್ಲಿ ಪತ್ರಕರ್ತರ ಕ್ಷೇಮಾಭಿವೃದ್ದಿಗಾಗಿ ಹೊಸದೊಂದು ಸಂಘ ಆರಂಭಗೊಂಡಿದೆ. ಶಶಿಕಾಂತ್ ಎಂ.ಎಸ್ ಅವರ ಅಧ್ಯಕ್ಷತೆಯಲ್ಲಿ ಪ್ರೆಸ್ ಕ್ಲಬ್ ಅಸೋಸಿಯೇಷನ್ ಟ್ರಸ್ಟ್ (ರಿ) ಸಾಗರ ಎನ್ನುವಂತ ಹೊಸ ಸಂಘ ಶುರುವಾಗಿದೆ. ಈ ಸಂಘದಲ್ಲಿ ಉಪಾಧ್ಯಕ್ಷರಾಗಿ ಸುಭಾಷ್ ಚಂದ್ರ.ಡಿ, ವಸಂತ ಬಿ ಈಶ್ವರಗೆರೆ ಇದ್ದರೇ, ಪ್ರಧಾನ ಕಾರ್ಯದರ್ಶಿಯಾಗಿ ಷಣ್ಮುಖ.ಎಂ.ಸಿ, ಖಜಾಂಚಿಯಾಗಿ ಪ್ರಭಾಕರ.ಸಿ, ಸಹ ಕಾರ್ಯದರ್ಶಿಯಾಗಿ ಸತೀಶ್ ಕುಮಾರ್.ಡಿ, ನಿರ್ದೇಶಕರಾಗಿ ಫ್ರಾಂಕಿ ಲೋಬೋ, ಪಿ.ಗೋಪಾಲಕೃಷ್ಣ, ಮನ್ಸೂರ್ ಅಹಮ್ಮದ್ ಜೊತೆಯಾಗಿದ್ದಾರೆ. ರಾಜ್ಯದ ನೋಂದಣಿ ಅಧಿನಿಮಯಗಳ ಅನುಸಾರ ಪ್ರೆಸ್ ಕ್ಲಬ್ ಅಸೋಸಿಯೇಷನ್ ಟ್ರಸ್ಟ್(ರಿ) ಸಾಗರ ಎನ್ನುವಂತ ಸಂಘವು ನೋಂದಣಿಗೊಂಡಿದೆ. https://kannadanewsnow.com/kannada/it-is-not-exit-poll-it-is-modi-media-poll-it-is-his-fantasy-poll-say-congress-leader-rahul-gandhi/ https://kannadanewsnow.com/kannada/upi-sets-new-record-crosses-rs-20-trillion-turnover/
ನವದೆಹಲಿ: ನಿನ್ನೆ ಚುನಾವಣೋತ್ತರ ಮಾಧ್ಯಮ ಸಮೀಕ್ಷಾ ವರದಿ ಪ್ರಕಟವಾಗಿತ್ತು. ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಮತ್ತೊಮ್ಮೆ ಮೋದಿ ಸರ್ಕಾರ ರಚನೆಯಾಗೋದು ಗ್ಯಾರಂಟಿ. ಎನ್ ಡಿಎ ಅತಿ ಹೆಚ್ಚು ಸ್ಥಾನ ಗೆದ್ದುಕೊಳ್ಳಲಿದೆ ಅಂತ ಚುನಾವಣೋತ್ತರ ಸಮೀಕ್ಷಾ ವರದಿಯಲ್ಲಿ ತಿಳಿಸಿದ್ದವು. ಆದ್ರೇ ಇದು ಎಕ್ಸಿಟ್ ಪೋಲ್ ಅಲ್ಲ, ಮೋದಿ ಮಾಧ್ಯಮ ಸಮೀಕ್ಷೆ ಅಂತ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವ್ಯಂಗ್ಯವಾಡಿದ್ದಾರೆ. ಈ ಬಗ್ಗೆ ಸುದ್ದಿಗಾರರು ಕೇಳಿದಂತ ಪ್ರಶ್ನೆಗೆ ಉತ್ತರಿಸಿರುವಂತ ಅವರು, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, “ಇದು ಎಕ್ಸಿಟ್ ಪೋಲ್ ಅಲ್ಲ, ಇದು ಮೋದಿ ಮಾಧ್ಯಮ ಸಮೀಕ್ಷೆ. ಇದು ಅವರ ಫ್ಯಾಂಟಸಿ ಪೋಲ್ ಎಂಬುದಾಗಿ ವಾಗ್ಧಾಳಿ ನಡೆಸಿದರು. ಎನ್ಡಿಎ ಮೈತ್ರಿಕೂಟದ ಸ್ಥಾನಗಳ ಸಂಖ್ಯೆಯ ಬಗ್ಗೆ ಕೇಳಿದಾಗ, “ಸಿಧು ಮೂಸ್ ವಾಲಾ ಅವರ 295 ಹಾಡನ್ನು ನೀವು ಕೇಳಿದ್ದೀರಾ? 295 ಸ್ಥಾನವನ್ನು ಕಾಂಗ್ರೆಸ್ ಪಕ್ಷವು ಲೋಕಸಭಾ ಚುನಾವಣೆಯಲ್ಲಿ ಗೆದ್ದುಕೊಳ್ಳಲಿದೆ ಅಂತ ವಿಶ್ವಾಸ ವ್ಯಕ್ತ ಪಡಿಸಿದರು. https://twitter.com/ANI/status/1797167742010990592 ಅಂದಹಾಗೇ ಲೋಕಸಭಾ ಚುನಾವಣೆಯ ಏಳನೇ ಮತ್ತು ಅಂತಿಮ ಹಂತದ ಮತದಾನ…
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಭಾನುವಾರ ಹೊಸ ಸರ್ಕಾರದ ಮೊದಲ 100 ದಿನಗಳ ಕಾರ್ಯಸೂಚಿಯನ್ನು ಪರಿಶೀಲಿಸಲು ಚಿಂತನ-ಮಂಥನ ಅಧಿವೇಶನ ಸೇರಿದಂತೆ ವ್ಯಾಪಕ ಶ್ರೇಣಿಯ ವಿಷಯಗಳ ಬಗ್ಗೆ ಏಳು ಸಭೆಗಳನ್ನು ನಡೆಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ. ಸರ್ಕಾರದ ಮೂಲಗಳ ಪ್ರಕಾರ, ಚಂಡಮಾರುತದ ನಂತರದ ಪರಿಸ್ಥಿತಿಯನ್ನು ಪರಿಶೀಲಿಸಲು ಮೊದಲ ಸಭೆ ನಡೆಯಲಿದೆ. ವಿಶೇಷವಾಗಿ ಈಶಾನ್ಯ ರಾಜ್ಯಗಳಲ್ಲಿ. ನಂತರ, ಅವರು ದೇಶದ ಬಿಸಿಗಾಳಿ ಪರಿಸ್ಥಿತಿಯನ್ನು ಪರಿಶೀಲಿಸಲು ಸಭೆ ನಡೆಸಲಿದ್ದಾರೆ. ವಿಶ್ವ ಪರಿಸರ ದಿನವನ್ನು (ಜೂನ್ 5) ದೊಡ್ಡ ಪ್ರಮಾಣದಲ್ಲಿ ಆಚರಿಸುವ ಸಿದ್ಧತೆಗಳನ್ನು ಪರಿಶೀಲಿಸಲು ಅವರು ಸಭೆ ನಡೆಸಲಿದ್ದಾರೆ. ಚುನಾವಣೋತ್ತರ ಸಮೀಕ್ಷೆಗಳು ಬಿಜೆಪಿಗೆ ಭಾರಿ ಗೆಲುವು ಸಾಧಿಸಲಿದೆ ಎಂದು ಭವಿಷ್ಯ ನುಡಿದ ನಂತರ ಹೊಸ ಸರ್ಕಾರದ 100 ದಿನಗಳ ಕಾರ್ಯಕ್ರಮದ ಕಾರ್ಯಸೂಚಿಯನ್ನು ಪರಿಶೀಲಿಸಲು ಅವರು ಸುದೀರ್ಘ ಅಧಿವೇಶನವನ್ನು ನಡೆಸಲಿದ್ದಾರೆ. ಲೋಕಸಭಾ ಚುನಾವಣೆಯ ಏಳನೇ ಮತ್ತು ಅಂತಿಮ ಹಂತದ ಮತದಾನ ಶನಿವಾರ ಮುಕ್ತಾಯಗೊಂಡ ನಂತರ ಎಕ್ಸಿಟ್ ಪೋಲ್ ಫಲಿತಾಂಶಗಳನ್ನು ಘೋಷಿಸಲಾಯಿತು. ಆಡಳಿತಾರೂಢ ಬಿಜೆಪಿ ನೇತೃತ್ವದ ಎನ್ಡಿಎ 2019…
ಕೆಎನ್ಎನ್ ಸ್ಪೋರ್ಟ್ಸ್ ಡೆಸ್ಕ್: ಡಲ್ಲಾಸ್ನಲ್ಲಿ ಕೆನಡಾ ವಿರುದ್ಧ ನಡೆದ ಐಸಿಸಿ ಪುರುಷರ ಟಿ 20 ವಿಶ್ವಕಪ್ 2024 ರ ಪಂದ್ಯದಲ್ಲಿ ಯುಎಸ್ಎ ಬ್ಯಾಟ್ಸ್ಮನ್ ಆರೋನ್ ಜೋನ್ಸ್ ಭಾನುವಾರ (ಯುಎಸ್ಎಯಲ್ಲಿ ಶನಿವಾರ) 10 ಸಿಕ್ಸರ್ಗಳನ್ನು ಗಳಿಸುವ ಮೂಲಕ ಇತಿಹಾಸ ನಿರ್ಮಿಸಿದ್ದಾರೆ. 29 ವರ್ಷದ ಬಲಗೈ ಬ್ಯಾಟ್ಸ್ಮನ್ ಟಿ 20 ವಿಶ್ವಕಪ್ ಪಂದ್ಯದಲ್ಲಿ 10 ಸಿಕ್ಸರ್ಗಳನ್ನು ಬಾರಿಸಿದ ವಿಶ್ವದ ಎರಡನೇ ಕ್ರಿಕೆಟಿಗ ಮತ್ತು ಯಾವುದೇ ಅಸೋಸಿಯೇಟ್ ರಾಷ್ಟ್ರದ ಮೊದಲ ಕ್ರಿಕೆಟಿಗ ಎಂಬ ಹೆಗ್ಗಳಿಕೆಗೆ ಪಾತ್ರರಾದರು. ಟಿ20 ವಿಶ್ವಕಪ್ನ ಆರಂಭಿಕ ಪಂದ್ಯದಲ್ಲಿ ಅತಿ ಹೆಚ್ಚು ಸಿಕ್ಸರ್ಗಳನ್ನು ಬಾರಿಸಿದ ವೆಸ್ಟ್ ಇಂಡೀಸ್ನ ಮಾಜಿ ಬ್ಯಾಟ್ಸ್ಮನ್ ಕ್ರಿಸ್ ಗೇಲ್ ಅವರ ದಾಖಲೆಯನ್ನು ಅವರು ಸರಿಗಟ್ಟಿದರು. ಸೆಪ್ಟೆಂಬರ್ 11, 2017 ರಂದು ಜೋಹಾನ್ಸ್ಬರ್ಗ್ನಲ್ಲಿ ವೆಸ್ಟ್ ಇಂಡೀಸ್ ಮತ್ತು ದಕ್ಷಿಣ ಆಫ್ರಿಕಾ ನಡುವೆ ನಡೆದ ಮೊದಲ ಟಿ 20 ವಿಶ್ವಕಪ್ ಪಂದ್ಯದಲ್ಲಿ, ಗೇಲ್ 55 ಎಸೆತಗಳಲ್ಲಿ 117 ರನ್ ಗಳಿಸುವ ಮೂಲಕ 10 ಸಿಕ್ಸರ್ಗಳನ್ನು ಬಾರಿಸಿದರು. ಭಾನುವಾರ ನಡೆದ ಕೆನಡಾ ವಿರುದ್ಧದ…