Subscribe to Updates
Get the latest creative news from FooBar about art, design and business.
Author: kannadanewsnow09
ಬೆಂಗಳೂರು: ಮಹಾರಾಷ್ಟ್ರದಲ್ಲಿ ಆದಂತೆ ಕರ್ನಾಟಕಲ್ಲೂ ಆಪರೇಷನ್ ಆಗಲಿದೆ. ಲೋಕಸಭಾ ಚುನಾವಣೆ ಬಳಿಕ ಕಾಂಗ್ರೆಸ್ ಸರ್ಕಾರ ಪತನಗೊಳ್ಳಲಿದೆ ಎಂಬುದಾಗಿ ಮಹಾರಾಷ್ಟ್ರ ಸಿಎಂ ಏಕನಾಥ ಶಿಂಧೆ ಹೇಳಿದ್ದರು. ಆದ್ರೇ ಕರ್ನಾಟಕದಲ್ಲಿ ಯಾವುದೇ ಕಾರಣಕ್ಕೂ ಆಪರೇಷನ್ ನಾಥ ಸಾಧ್ಯವಿಲ್ಲ. ನಮ್ಮ ಶಾಸಕರು ಯಾರು ಮಾರಾಟಕ್ಕೆ ಇಲ್ಲ ಎಂಬುದಾಗಿ ಸಿಎಂ ಸಿದ್ಧರಾಮಯ್ಯ ತಿರುಗೇಟು ನೀಡಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಮಹಾರಾಷ್ಟ್ರ ಸಿಎಂ ಭ್ರಮೆಯಲ್ಲಿ ಇದ್ದಾರೆ. ಈಗಾಗಲೇ ಆಪರೇಷನ್ ಮಾಡೋದಕ್ಕೆ ಪ್ರಯತ್ನ ಪಟ್ಟು ವಿಫಲವಾಗಿದೆ. ಈಗ ಮತ್ತೆ ಪ್ರಯತ್ನ ಮಾಡ್ತಾರೆ. ಆದರೇ ಯಾವುದೇ ಕಾರಣಕ್ಕೂ ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರವನ್ನು ಆಪರೇಷನ್ ಮಾಡೋಕೆ ಸಾಧ್ಯವಿಲ್ಲ ಎಂದರು. ಲೋಕಸಭಾ ಚುನಾವಣೆಯಲ್ಲಿ ನಾವು ಕರ್ನಾಟಕದಲ್ಲಿ 20 ಸೀಟು ಗೆಲ್ಲುತ್ತೇವೆ. ಅವರು ಸೋಲಲಿದ್ದಾರೆ. ಅದಕ್ಕೆ ಹೀಗೆ ಹತಾಶರಾಗಿ ಕಾಂಗ್ರೆಸ್ ಸರ್ಕಾರವನ್ನು ಬೀಳಿಸೋ ಹೇಳಿಕೆ ನೀಡುತ್ತಿದ್ದಾರೆ ಎಂಬುದಾಗಿ ಮಹಾರಾಷ್ಟ್ರ ಸಿಎಂ ಶಿಂಧೆಗೆ ಮುಖ್ಯಮಂತ್ರಿ ಸಿದ್ಧರಾಮಯ್ಯ ತಿರುಗೇಟು ನೀಡಿದರು. https://kannadanewsnow.com/kannada/big-trouble-for-congress-government-in-karnataka-will-it-fall-after-lok-sabha-elections-maha-cms-hint/ https://kannadanewsnow.com/kannada/pornographic-video-case-sit-plans-to-issue-red-corner-notice-to-prajwal-revanna/
ಬೆಂಗಳೂರು: ಲೋಕಸಭಾ ಚುನಾವಣೆಯ ಬಳಿಕ ಕರ್ನಾಟಕ ಕಾಂಗ್ರೆಸ್ ಸರ್ಕಾರ ಇರಲ್ಲ. ಪತನವಾಗಲಿದೆ ಅಂತ ಅನೇಕ ರಾಜಕೀಯ ನಾಯಕರು ಈಗಾಗಲೇ ಹೇಳಿದ್ದಾರೆ. ಮತ್ತೆ ಈ ವಿಷಯ ಮುನ್ನೆಲೆಗೆ ಬಂದಿದ್ದು, ಕರ್ನಾಟಕ ಕಾಂಗ್ರೆಸ್ ಸರ್ಕಾರಕ್ಕೆ ಬಿಗ್ ಆಪತ್ತು ಎದುರಾಗಿದೆ. ಲೋಕಸಭಾ ಚುನಾವಣೆ ಬಳಿಕ ಪತನವಾಗಲಿದೆ ಅಂತ ಮಹಾರಾಷ್ಟ್ರ ಸಿಎಂ ಏನಾಂಥ ಶಿಂಧೆ ಸುಳಿವು ನೀಡಿದ್ದಾರೆ. ಹೌದು ಲೋಕಸಭಾ ಚುನಾವಣೆಯ ಬಳಿಕ ಕರ್ನಾಟಕ ರಾಜಕೀಯದಲ್ಲಿ ಕ್ಷಿಪ್ರ ಬೆಳವಣಿಗೆ ನಡೆಯೋ ಸಾಧ್ಯತೆ ಇದೆ. ಬಿಜೆಪಿ-ಜೆಡಿಎಸ್ ನಾಯಕರು ಜೂನ್ ಬಳಿಕ ರಾಜ್ಯ ಸರ್ಕಾರ ಪತನವಾಗಲಿದೆ ಅಂತ ಈಗಾಗಲೇ ಹೇಳಿಕೆ ನೀಡಿದ್ದಾರೆ. ಈ ನಡುವೆ ಮಹಾರಾಷ್ಟ್ರ ಸಿಎಂ ಏಕನಾಥ ಶಿಂಧೆ ಅವರು ನೀಡಿರುವಂತ ಹೇಳಿಕೆ ಮಹತ್ವ ಪಡೆದುಕೊಂಡಿದೆ. ಮಹಾರಾಷ್ಟ್ರ ಮಾದರಿಯಲ್ಲೇ ಕರ್ನಾಟಕದಲ್ಲೂ ಆಪರೇಷನ್ ನಡೆಯುವ ಸುಳಿವನ್ನು ಮಹಾ ಸಿಎಂ ಏಕನಾಥ ಶಿಂಧೆ ನೀಡಿದ್ದಾರೆ. ಸತಾರದಲ್ಲಿ ಮಾತನಾಡಿರುವಂತ ಅವರು, ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರದ ಪತನಕ್ಕೆ ತೆರೆಮರೆಯಲ್ಲಿ ಸರ್ಕಸ್ ನಡೆಯುತ್ತಿದೆ ಎಂಬುದಾಗಿ ಸ್ಪೋಟಕ ಹೇಳಿಕೆ ನೀಡಿದ್ದಾರೆ. ನಾನು ಇತ್ತೀಚೆಗೆ ಕರ್ನಾಟಕದ ಒಂದು ಸಭೆಗೆ…
ಜಾರ್ಖಂಡ್: ಜಾರ್ಖಂಡ್ ನ ಪಲಮು ಎಂಬಲ್ಲಿ ಭಾನುವಾರ ಸಂಭವಿಸಿದ ಸ್ಫೋಟದಲ್ಲಿ ಮೂವರು ಅಪ್ರಾಪ್ತರು ಸೇರಿದಂತೆ ಕನಿಷ್ಠ ನಾಲ್ವರು ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ರಾಜ್ಯ ರಾಜಧಾನಿ ರಾಂಚಿಯಿಂದ 190 ಕಿ.ಮೀ ದೂರದಲ್ಲಿರುವ ಮನತು ಪೊಲೀಸ್ ಠಾಣೆ ಪ್ರದೇಶದ ಸ್ಕ್ರ್ಯಾಪ್ ಡೀಲರ್ ಸ್ಥಳದಲ್ಲಿ ಸ್ಫೋಟ ಸಂಭವಿಸಿದೆ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಪಲಮು ಸೇರಿದಂತೆ ನಾಲ್ಕು ಸ್ಥಾನಗಳಿಗೆ ಲೋಕಸಭಾ ಚುನಾವಣೆಯ ಮುನ್ನಾದಿನದಂದು ಈ ಘಟನೆ ನಡೆದಿದೆ. ಘಟನೆಯಲ್ಲಿ ಮೂವರು ಅಪ್ರಾಪ್ತರು ಸೇರಿದಂತೆ ನಾಲ್ವರು ಸಾವನ್ನಪ್ಪಿದ್ದಾರೆ ಎಂದು ಪಲಮು ಪೊಲೀಸ್ ವರಿಷ್ಠಾಧಿಕಾರಿ ರೀಷ್ಮಾ ರಮೇಸನ್ ಪಿಟಿಐಗೆ ತಿಳಿಸಿದ್ದಾರೆ. “ಬಾಂಬ್ ಸ್ಫೋಟದ ಸಾಧ್ಯತೆ ಸೇರಿದಂತೆ ಎಲ್ಲಾ ಕೋನಗಳಿಂದ ನಾವು ಘಟನೆಯ ಬಗ್ಗೆ ತನಿಖೆ ನಡೆಸುತ್ತಿದ್ದೇವೆ” ಎಂದು ಅವರು ಹೇಳಿದರು.
ನವದೆಹಲಿ: ಲೋಕಸಭಾ ಚುನಾವಣೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತೊಮ್ಮೆ ಪ್ರಧಾನಿಯಾಗೋ ವಿಶ್ವಾಸ ಹೊಂದಿದ್ದಾರೆ. ಇದೇ ಕಾರಣಕ್ಕಾಗಿ ತಮ್ಮ ಮುಂದಿನ ಸರ್ಕಾರದ 100 ದಿನಗಳ ಕಾರ್ಯಸೂಚಿಯನ್ನು ರಚಿಸಲು 10 ಸಮಿತಿಗಳನ್ನು ನಮೋ ರಚಿಸಿದ್ದಾರೆ. ದೇಶದಲ್ಲಿ ಇದೀಗ ಲೋಕಸಭಾ ಚುನಾವಣೆ ನಡೆಯುತ್ತಿದೆ. ಏತನ್ಮಧ್ಯೆ, ನಾಲ್ಕನೇ ಹಂತದ ಮತದಾನವು ಮೇ 13 ರ ಸೋಮವಾರ ನಡೆಯಲಿದೆ. ಲೋಕಸಭಾ ಚುನಾವಣೆಯ ಫಲಿತಾಂಶಕ್ಕೂ ಮುನ್ನವೇ ಪ್ರಧಾನಿ ಮೋದಿ ಮೂರನೇ ಅವಧಿಗೆ ತಯಾರಿ ಆರಂಭಿಸಿದ್ದಾರೆ. ಮುಂದಿನ 100 ದಿನಗಳ ಸರ್ಕಾರದ ಕಾರ್ಯಸೂಚಿಯನ್ನು ಜೂನ್ 4 ರಂದು ಫಲಿತಾಂಶಗಳು ಹೊರಬಂದ ಕೂಡಲೇ ಮಂತ್ರಿಮಂಡಲದ ಮೊದಲ ಸಭೆಯಲ್ಲಿ ಜಾರಿಗೆ ತರಲಾಗುವುದು. ಮೋದಿ ಪ್ರಸ್ತುತ ಚುನಾವಣಾ ಪ್ರಚಾರದಲ್ಲಿ ನಿರತರಾಗಿದ್ದಾರೆ. ಆದರೆ ಅವರು ತಮ್ಮ ಸರ್ಕಾರದ 100 ದಿನಗಳ ಕಾರ್ಯಸೂಚಿಯನ್ನು ಕಾರ್ಯಗತಗೊಳಿಸಲು ತಮ್ಮ ಉನ್ನತ ಕಾರ್ಯದರ್ಶಿಗಳ 10 ಸಮಿತಿಗಳನ್ನು ನೇಮಿಸಿದ್ದಾರೆ. ಸರ್ಕಾರ ಅಧಿಕಾರಕ್ಕೆ ಬಂದ ಕೂಡಲೇ ಕೆಲಸದ ಕಾರ್ಯಸೂಚಿಯನ್ನು ಅಂತಿಮಗೊಳಿಸಲು ಕಾರ್ಯದರ್ಶಿಗಳ 10 ಗುಂಪುಗಳನ್ನು ರಚಿಸಲಾಗಿದೆ ಎಂದು ಸರ್ಕಾರಿ ಮೂಲಗಳು ಇಂಡಿಯಾ ಟುಡೇಗೆ ತಿಳಿಸಿವೆ. ಪ್ರಧಾನಿ…
ಪ್ರತಿಯೊಬ್ಬರ ಜೀವನದಲ್ಲಿ ಪ್ರಗತಿ ಬಹಳ ಮುಖ್ಯ. ಹೀಗಾಗಿ, ನಾವು ನಮ್ಮ ವ್ಯಾಪಾರ, ಕೆಲಸ ಅಥವಾ ಕುಟುಂಬದ ಆರ್ಥಿಕತೆಯಲ್ಲಿ ಪ್ರಗತಿಯನ್ನು ಸಾಧಿಸಿದಾಗ, ನಮಗೆ ತಿಳಿಯದೆ ಶತ್ರುಗಳು ಮತ್ತು ದೇಶದ್ರೋಹಿಗಳು ಸೃಷ್ಟಿಯಾಗುತ್ತಾರೆ. ಕನಿಷ್ಠ ನಾವು ನಮ್ಮ ಶತ್ರುಗಳನ್ನು ಒಂದು ರೀತಿಯಲ್ಲಿ ನಂಬಬಹುದು. ಆದರೆ ದೇಶದ್ರೋಹಿಗಳನ್ನು ಹುಡುಕುವುದು ತುಂಬಾ ಕಷ್ಟ. ಶ್ರೀ ಸಿಗಂದೂರು ಚೌಡೇಶ್ವರಿ ಜ್ಯೋತಿಷ್ಯ ಪೀಠ ನಂ 1ಕೇರಳ ಕೊಳ್ಳೇಗಾಲದ ಮಹಾ ಮಾಂತ್ರಿಕ ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ತಂತ್ರಿ ನಂ:- 9686268564. ನಂ 1ವಶೀಕರಣ ಸ್ಪೆಷಲಿಸ್ಟ್ ಒಂದು ಕರೆಯಲ್ಲಿ ಪರಿಹಾರ ತಿಳಿಸುತ್ತಾರೆ ತಾವು ಎಷ್ಟೋ ಜ್ಯೋತಿಷ್ಯರಲ್ಲಿ ಕೇಳಿಯು ಪರಿಹಾರ ಸಿಗದೇ ಮನನೊಂದಿದ್ದರೆ ಪರಿಹಾರ ನಿಮ್ಮ ಸಮಸ್ಯೆಗಳಾದ ಅತ್ತೆ-ಸೊಸೆ ಕಿರಿಕಿರಿ, ಪ್ರೀತಿಯಲ್ಲಿ ನಂಬಿ ಮೋಸ, ಇಷ್ಟ ಪಟ್ಟವರು ನಿಮ್ಮಂತೆ ಆಗಲು, ಗಂಡ ಹೆಂಡತಿ ಕಿರಿಕಿರಿ, ಮದುವೆಯಲ್ಲಿ ಅಡೆತಡೆ, ಸಂತಾನ ಸಮಸ್ಯೆ, ಮಕ್ಕಳು ಹೇಳಿದ ಮಾತು ಕೇಳದಿದ್ದರೆ, ವಿದ್ಯಾಭ್ಯಾಸದಲ್ಲಿ ಕಿರಿಕಿರಿ, ಆರೋಗ್ಯ ಸಮಸ್ಯೆ, ಆಸ್ತಿಯಲ್ಲಿ ಕಿರಿಕಿರಿ, ಮಾಟ ಮಂತ್ರ, ಶತ್ರು ನಾಶ, ಶತ್ರು ವಶೀಕರಣ,ಭಾನಮತಿ ಕೃತಿಮ ವಶೀಕರಣ ಇನ್ನೂ ನಿಮ್ಮ ಜೀವನದ…
ಬೆಂಗಳೂರು: ಅರವಿಂದ ಕೇಜ್ರಿವಾಲ್ ಬಹಳ ದಿನ ಜೈಲಲ್ಲಿದ್ದಿದ್ದರಿಂದ ಹುಚ್ಚರಂತೆ ವರ್ತಿಸುತ್ತಿದ್ದಾರೆ. ವಯಸ್ಸಿನ ಆಧಾರದ ಮೇಲೆ ಟಿಕೆಟ್ ನೀಡುವ ಕುರಿತು ಬಿಜೆಪಿಯಲ್ಲಿ ತೀರ್ಮಾನ ಕೈಗೊಂಡಿಲ್ಲ ಎಂದು ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್.ಅಶೋಕ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಂಡಿಯಾ ಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಅವರಿಗೆ ಗೊತ್ತಿಲ್ಲ. ಈಗಾಗಲೇ ನರೇಂದ್ರ ಮೋದಿಯವರೇ ಮತ್ತೆ ಪ್ರಧಾನಿಯಾಗುವುದು ನಿಶ್ಚಿತವಾಗಿದೆ. 75 ವರ್ಷ ಕಳೆದವರಿಗೆ ಟಿಕೆಟ್ ನೀಡಲಾಗುತ್ತಿದೆ. ಟಿಕೆಟ್ ನೀಡುವುದಿಲ್ಲ ಎಂಬ ನಿರ್ಧಾರ ಪಕ್ಷದಲ್ಲಿ ಆಗಿಲ್ಲ. ಇದನ್ನು ಕಾಂಗ್ರೆಸ್ನವರೇ ಸೃಷ್ಟಿ ಮಾಡಿಕೊಂಡಿದ್ದಾರೆ. ಕೇಜ್ರಿವಾಲ್ ಅವರು ಮರಳಿ ಜೈಲಿಗೆ ಹೋಗಬೇಕಿದೆ. ಅವರು ಮತ್ತೆ ಬಿಡುಗಡೆಯಾಗುವುದಿಲ್ಲ ಎಂದರು. ಅವರು ತಪ್ಪು ಮಾಡಿಲ್ಲವಾದರೆ ನ್ಯಾಯಾಲಯ ಕೂಡಲೇ ಜಾಮೀನು ನೀಡುತ್ತದೆ. ಲಾಲೂ ಪ್ರಸಾದ್ ಕೂಡ ಜೈಲಿಗೆ ಹೋಗಿದ್ದಾರೆ. ಜಾಮೀನು ಸಿಕ್ಕಿಲ್ಲ ಎಂದಾದರೆ ಅದಕ್ಕೆ ಸೂಕ್ತವಾದ ಪುರಾವೆ ಇದೆ ಎಂದರ್ಥ. ಅನೇಕ ವಿರೋಧ ಪಕ್ಷಗಳಿದ್ದರೂ ತಪ್ಪು ಮಾಡಿದವರು ಮಾತ್ರ ಜೈಲಿಗೆ ಹೋಗಿದ್ದಾರೆ ಎಂದರು. ವಿಧಾನಪರಿಷತ್ ಚುನಾವಣೆಯಲ್ಲಿ ಹೊಂದಾಣಿಕೆ ದೃಷ್ಟಿಯಿಂದ ಪಕ್ಷದಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ. ಅಭ್ಯರ್ಥಿಗಳ…
ಬೆಂಗಳೂರು: ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ನೇತೃತ್ವದ ಇಂಡಿಯಾ ಮೈತ್ರಿಕೂಟ ಅಧಿಕಾರಕ್ಕೆ ಬರಲಿದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ವಿಶ್ವಾಸ ವ್ಯಕ್ತಪಡಿಸಿದರು. ಕೆಪಿಸಿಸಿ ಕಚೇರಿಯಲ್ಲಿ ನಡೆದ ಪಕ್ಷದ ಸಭೆ ಬಳಿಕ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಭಾನುವಾರ ಪ್ರತಿಕ್ರಿಯಿಸಿದರು. ಬಿಜೆಪಿ ಅಧಿಕಾರಕ್ಕೆ ಬಂದರೆ ಮೋದಿ ಅವರ ಅವಧಿ ಕೇವಲ ಒಂದು ವರ್ಷ ಮಾತ್ರ ಎಂಬ ಕೇಜ್ರಿವಾಲ್ ಅವರ ಹೇಳಿಕೆಗೆ ಬಿಜೆಪಿ ಟೀಕೆ ಮಾಡಿರುವ ಬಗ್ಗೆ ಕೇಳಿದಾಗ ಅವರು ಉತ್ತರಿಸಿದ್ದು ಹೀಗೆ; “ಈ ಬಾರಿ ಕಾಂಗ್ರೆಸ್ ನೇತೃತ್ವದ ಇಂಡಿಯಾ ಒಕ್ಕೂಟ ಅಧಿಕಾರಕ್ಕೆ ಬರಲಿದ್ದು, ಬಿಜೆಪಿಯವರು ಪ್ರಧಾನಿಯಾಗಲು ಸಾಧ್ಯವಿಲ್ಲ. ದೇಶದಲ್ಲಿ ಕಾಂಗ್ರೆಸ್ ಹಾಗು ಇಂಡಿಯಾ ಮೈತ್ರಿಕೂಟ ಆಡಳಿತ ಮಾಡಲಿದೆ ಎಂಬ ವಿಶ್ವಾಸ ನನ್ನದು” ಎಂದರು. ಲೋಕಸಭೆ ಮಾದರಿಯಲ್ಲಿ ಪರಿಷತ್ ಚುನಾವಣೆ ಎದುರಿಸುತ್ತೇವೆ: ಪರಿಷತ್ ಚುನಾವಣೆ ಪೂರ್ವಭಾವಿ ಸಭೆ ಬಗ್ಗೆ ಕೇಳಿದಾಗ, “ಶಿಕ್ಷಕರ ಹಾಗು ಪದವೀಧರ ಕ್ಷೇತ್ರಗಳ ಅಭ್ಯರ್ಥಿ ಆಯ್ಕೆ ವಿಚಾರವಾಗಿ ನಮ್ಮ ಪಕ್ಷದ ನಾಯಕರು ಹಾಗು ಪದಾಧಿಕಾರಿಗಳ ಜತೆ ಚರ್ಚೆ ಮಾಡಿದ್ದೇವೆ. ಬ್ಲಾಕ್ ಕಾಂಗ್ರೆಸ್…
ಬೆಂಗಳೂರು: ನಗರದ ಹಲವು ಶಾಲೆಗಳಿಗೆ ಈಗಾಗಲೇ ಬಾಂಬ್ ಬೆದರಿಕೆ ಹಾಕಲಾಗಿತ್ತು. ಈಗ ಬೆಂಗಳೂರಿನ ಪ್ರತಿಸ್ಠಿತ ಆಸ್ಪತ್ರೆಯೊಂದಕ್ಕೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ ಹಾಕಿರುವಂತದ್ದು ಬೆಳಕಿಗೆ ಬಂದಿದೆ. ಬೆಂಗಳೂರಿನ ಹತ್ತಾರು ಶಾಲೆಗಳಿಗೆ ಬಾಂಬ್ ಬೆದರಿಕೆ ಇ-ಮೇಲ್ ಗಳಿಂದ ರಾಜ್ಯದ ರಾಜಧಾನಿ ಜನರು, ಶಾಲಾ ಮಕ್ಕಳ ಪೋಷಕರು ಬೆಚ್ಚಿ ಬಿದ್ದಿದ್ದರು. ಈ ಘಟನೆ ಮಾಸೋ ಮುನ್ನವೇ ನಗರದ ಪ್ರತಿಷ್ಠಿತ ಆಸ್ಪತ್ರೆಗಳಲ್ಲಿ ಒಂದಾಗಿರುವಂತ ಸೇಂಟ್ ಫಿಲೋಮಿನಾ ಆಸ್ಪತ್ರೆಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ ಹಾಕಲಾಗಿದೆ. ಬೆಂಗಳೂರಿನ ನಾಗಾವಾರದಲ್ಲಿರುವಂತ ಸೇಂಟ್ ಫಿಲೋಮಿನಾ ಆಸ್ಪತ್ರೆಯಲ್ಲಿ ಬಾಂಬ್ ಇಟ್ಟಿರುವುದಾಗಿ ಬೆಂಗಳೂರು ಪೊಲೀಸರ ಅಕೌಂಟ್ ಖಾತೆಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ ಹಾಕಲಾಗಿದೆ. ಪೊಲೀಸ್ ಇಲಾಖೆಯ ಸಿಟಿ ಎಸ್ ಬಿಗೆ ಬಂದಿದ್ದಂತ ಇ-ಮೇಲ್ ನಿಂದಾಗಿ ತಕ್ಷಣವೇ ಕಾರ್ಯಪ್ರವೃತ್ತರಾದರು. ನಾಗವಾರದ ಸೇಂಟ್ ಫಿಲೋಮಿನಾ ಆಸ್ಪತ್ರೆಗೆ ಶ್ವಾನದಳ, ಬಾಂಬ್ ನಿಷ್ಕ್ರೀಯ ದಳದ ಅಧಿಕಾರಿಗಳು ಭೇಟಿ ನೀಡಿ, ಇಡೀ ಆಸ್ಪತ್ರೆಯನ್ನು ಪರಿಶೀಲನೆ ನಡೆಸಿದರು. ಆದ್ರೇ ಯಾವುದೇ ಬಾಂಬ್ ಪತ್ತೆಯಾಗಿಲ್ಲ. ಹೀಗಾಗಿ ಇದೊಂದು ಹುಸಿ ಬಾಂಬ್ ಬೆದರಿಕೆ…
ಕೆಎನ್ಎನ್ ಸಿನಿಮಾ ಡೆಸ್ಕ್. ನಿಂತ ನಿಲುವಿನಲ್ಲೇ ಆವರಿಸಿಕೊಳ್ಳಬಲ್ಲ ಹಾಡೊಂದಕ್ಕಾಗಿ ಅನುಕ್ಷಣವೂ ಹಾತೊರೆಯುವ ದೊಡ್ಡದೊಂದು ಸಂಗೀತ ಪ್ರೇಮಿಗಳ ದಂಡು ನಮ್ಮ ನಡುವಲ್ಲಿದೆ. ಯಾವ ಸುಳಿವೂ ಕೊಡದೆ ಚೆಂದದ್ದೊಂದು ಹಾಡು ಅಚಾನಕ್ಕಾಗಿ ಕಿವಿ ಸೋಕಿದರೆ ಅವರಿಗೆಲ್ಲ ಅಕ್ಷರಶಃ ರೋಮಾಂಚನ. ಬೃಂದಾ ಆಚಾರ್ಯ ಮತ್ತು ಭರತ್ ಬೋಪಣ್ಣ ನಟಿಸಿರುವ ಆಲ್ಬಂ ಸಾಂಗ್ ಇದೀಗ ಅಂಥಾದ್ದೊಂದು ಅನುಭೂತಿಯನ್ನು ಬೇಷರತ್ತಾಗಿ ಕೊಡಮಾಡಿದೆ. ಸಾಹಿತ್ಯ, ಸಂಗೀತ, ಪರಿಕಲ್ಪನೆ, ನಟನೆ ಸೇರಿದಂತೆ ಎಲ್ಲದರಲ್ಲಿಯೂ ವಿಶೇಷವಾಗಿರುವ `ಸಾವಿರ ಗುಂಗಲ್ಲಿ’ ಆಲ್ಬಂ ಸಾಂಗ್ ಈಗ ಟ್ರೆಂಡಿಂಗಿನತ್ತ ದಾಪುಗಾಲಿಡುತ್ತಿದೆ. ಇತ್ತೀಚಿನ ದಿನಮಾನದಲ್ಲಿ ಸಿನಿಮಾಗಳಾಚೆಗೆ ಹಾಡುಗಳು ರೂಪುಗೊಳ್ಳೋದೇ ಅಪರೂಪ. ಆಲ್ಬಂ ಸಾಂಗ್ ಅನ್ನೋ ರೋಮಾಂಚಕ ಪರಿಕಲ್ಪನೆ ಅದೇಕೋ ಬರಬರುತ್ತಾ ನೇಪಥ್ಯಕ್ಕೆ ಸರಿದುಬಿಟ್ಟಿದೆ. ಇಂಥಾ ಹೊತ್ತಲ್ಲಿ `ಸಾವಿರ ಗುಂಗಲ್ಲಿ’ ಎಂಬ ಆಲ್ಬಂ ಸಾಂಗ್ ತನ್ನ ನವಿರು ಶೈಲಿಯೊಂದಿಗೆ ಕೇಳುಗರನ್ನೆಲ್ಲ ಸೋಕುತ್ತಿದೆ. ಮತ್ತಷ್ಟು ಮನಸುಗಳನ್ನು ಆವರಿಸಿಕೊಳ್ಳುತ್ತಾ ಮುಂದುವರೆಯುತ್ತಿದೆ. ಅಂದಹಾಗೆ, ಕೃಷ್ಣ ನಂಜುಂಡಯ್ಯನವರ ಪರಿಕಲ್ಪನೆ, ನಿರ್ದೇಶನದಲ್ಲಿ ಮೂಡಿ ಬಂದಿದೆ. ಬೃಂದಾ ಆಚಾರ್ಯ, ಭರತ್ ಬೋಪಣ್ಣ, ಮಯೂರ್ ಸಾಗರ್, ಕೃತಿಕಾ ಗೌಡ, ಮಾನಿನಿ…
ಮಂಡ್ಯ :- ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ ಕುಟುಂಬದ ವಿರುದ್ಧ ಕಾಂಗ್ರೆಸ್ ಪಕ್ಷದ ನಾಯಕರು ನಡೆಸುತ್ತಿರುವ ವ್ಯವಸ್ಥಿತ ಷಡ್ಯಂತ್ರವನ್ನು ಖಂಡಿಸಿ ಜೆಡಿಎಸ್ ಮತ್ತು ಬಿಜೆಪಿ ಪಕ್ಷದ ವತಿಯಿಂದ ಮದ್ದೂರು ಪಟ್ಟಣದ ಬೆಂಗಳೂರು ಮೈಸೂರು ಹೆದ್ದಾರಿಯಲ್ಲಿ ರಸ್ತೆ ಸಂಚಾರ ತಡೆದು ಭಾನುವಾರ ಬೃಹತ್ ಪ್ರತಿಭಟನೆ ಮಾಡಲಾಯಿತು. ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹಾಗೂ ಮಾಜಿ ಸಂಸದ ಎಲ್.ಆರ್.ಶಿವರಾಮೇಗೌಡರ ಪ್ರತಿಕೃತಿ ದಹಿಸಿ ಅವರ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿ, ಹೆದ್ದಾರಿ ಸಂಚಾರ ತಡೆದ ಪರಿಣಾಮ ಕೆಲಕಾಲ ಸಂಚಾರದಲ್ಲಿ ಅಸ್ತವ್ಯಸ್ತಗೊಂಡಿತ್ತು. ಪ್ರತಿಭಟನೆಯ ನೇತೃತ್ವ ವಹಿಸಿದ್ದ ಮಾಜಿ ಸಚಿವ ಡಿ.ಸಿ.ತಮ್ಮಣ್ಣ ಅವರು ಮಾತನಾಡಿ, ಪೆನ್ ಡ್ರೈವ್ ವಿಚಾರದಲ್ಲಿ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ ಕುಟುಂಬವನ್ನು ರಾಜಕೀಯವಾಗಿ ಅಣಿಯಲು ಕಾಂಗ್ರೆಸ್ ಪಕ್ಷದ ನಾಯಕರು ಮುಂದಾಗಿರುವುದು ಸರಿಯಲ್ಲ. ಕಾಂಗ್ರೆಸ್ ಪಕ್ಷದ ನಾಯಕರು ನಾಲಿಗೆ ಇದೆ ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಮತ್ತು ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಅವರ ವಿರುದ್ಧ ಲಘುವಾಗಿ ಮಾತನಾಡುವುದು ಸರಿಯಲ್ಲ ಎಂದು ಎಚ್ಚರಿಕೆ ನೀಡಿದರು. ಹೆಣ್ಣು ಮಕ್ಕಳ ಬಗ್ಗೆ ಕಾಳಜಿ…