Subscribe to Updates
Get the latest creative news from FooBar about art, design and business.
Author: kannadanewsnow09
ಕಲಬುರಗಿ: ಕೃಷಿ ಕ್ಷೇತ್ರಕ್ಕೆ ಉತ್ತೇಜನ ನೀಡಲು ಭಾರತೀಯ ರಿಸರ್ವ್ ಬ್ಯಾಂಕ್ (ಆರ್ ಬಿ ಐ) ಹೊಸ ಘೋಷಣೆಯನ್ನು ಮಾಡಿದೆ. ಕೃಷಿ ಸಾಲದ ಮೇಲಿನ ಮಿತಿಯನ್ನು ಏರಿಕೆ ಮಾಡಲಾಗಿದ್ದು, 2025ರ ಜನವರಿ 1 ರಿಂದ ರೈತರು ಈ ಹೊಸ ಘೋಷಣೆಯ ಸಹಾಯವನ್ನು ಪಡೆಯಬಹುದು. ಆರ್ ಬಿ ಐ ನ ಈ ಘೋಷಣೆಯಿಂದ ದೇಶದ ಸುಮಾರು ಶೇ 86ರಷ್ಟು ಸಣ್ಣ ರೈತರಿಗೆ ಅನುಕೂಲವಾಗಲಿದೆ ಎಂದು ಅಂದಾಜಿಸಲಾಗಿದೆ. ಆರ್ ಬಿ ಐ ನ. ಈ ಘೊಷಣೆಗೆ ಮಾಜಿ ಶಾಸಕ ರಾಜಕುಮಾರ ಪಾಟೀಲ್ ತೇಲ್ಕೂರ ಆರ್ ಬಿ ಐ ಗೆ ಅಭಿನಂದನೆ ಸಲ್ಲಿಸಿದರು. ಈ ಕುರಿತು ಪಾತ್ರಿಕಾ ಪ್ರಕಟಣೆ ಹೊರಡಿಸಿರುವ ಅವರು ಆರ್ ಬಿ ಐ ನಹೊಸ ಗವರ್ನರ್ ಆಗಿ ಅಧಿಕಾರವಹಿಸಿಕೊಂಡ ಸಂಜಯ್ ಮಲ್ಲೊತ್ರಾ ಅವರು ಮಾಡಿದ ಮೊದಲ ಘೋಷಣೆ ಇದಾಗಿದೆ. ರೈತರಿಗೆ ಸುಲಭವಾಗಿ ಹೆಚ್ಚು ಮೊತ್ತದ ಕೃಷಿ ಸಾಲ ಲಭ್ಯವಾಗುವಂತೆ ಮಾಡುವ ಮೂಲಕ ಕೃಷಿ ಕ್ಷೇತ್ರದ ಉತ್ತೇಜನಕ್ಕೆ ಒತ್ತು ನೀಡಲಾಗುತ್ತದೆ , ಭಾರತೀಯ ರಿಸರ್ವ್ ಬ್ಯಾಂಕ್ ಅಡವು…
ಒಂದು ಮಂತ್ರ ಸಾಕು ಸಾಲ ತೀರುತ್ತೆ. ಈ ಮಂತ್ರ ಹೇಳಿದರೆ ಮೂವತ್ತು ದಿನಗಳಲ್ಲಿ ಸಾಲ ತೀರುತ್ತೆ ಅನ್ನೋ ಕುತೂಹಲಕಾರಿ ಮತ್ತು ರಹಸ್ಯ ಮಾಹಿತಿಯನ್ನು ಇಲ್ಲಿ ನಾವು ನಿಮಗೆ ತಿಳಿಸಿಕೊಡುತ್ತೇವೆ. ಕಾಲಭೈರವ ಅಂದ್ರೆ ಶಿವನ ಸ್ವರೂಪ. 64 ಭೈರವ ರೂಪದಲ್ಲಿ ಕಾಲಭೈರವನೇ ಪ್ರಮುಖವಾದವನು. ಕಾಲ ಅಂದ್ರೆ ಸಮಯವನ್ನು ಸೂಚಿಸುವವನು ಎಂದರ್ಥ. ಭೈರವನ ಪೂಜೆ ಮಾಡೋದ್ರಿಂದ ಶ್ರೀ ಸಿಗಂಧೂರು ಚೌಡೇಶ್ವರಿ ದೇವಿಯನ್ನು ಆರಾಧನೆ ಮಾಡುವ ದೈವಜ್ಞ ವಿದ್ವಾನ್ ವಿದ್ಯಾಧರ್ ತಂತ್ರಿ ದೈವಜ್ಞ ಪ್ರಧಾನ ತಾಂತ್ರಿಕ್ ಹಾಗೂ ಮಾಂತ್ರಿಕರು 9686268564 ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ ಧನವಶ, ಜನವಶ, ಶತ್ರುನಾಶ, ಸ್ತ್ರೀ– ಪುರುಷ ವಶೀಕರಣ, ದಿಗ್ಭಂಧನ, ಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ…
ಬೆಳಗಾವಿ ಸುವರ್ಣಸೌಧ: ರಿಂಗರ್ ಲ್ಯಾಕ್ಟೇಟ್ ಐವಿ ದ್ರಾವಣ ಪೂರೈಸಿದ್ದ ಪಶ್ಚಿಮ ಬಂಗಾ ಕಂಪನಿಯನ್ನ ಈಗಾಗಲೇ ಬ್ಲಾಕ್ ಲಿಸ್ಟ್ ಗೆ ಸೇರಿಸಲಾಗಿದ್ದು, ಪ್ರಕರಣದ ತನಿಖೆ ನಡೆಯುವ ವರೆಗು ಕಂಪನಿ ಐವಿ ದ್ರಾವಣ ಉತ್ಪಾದನೆ ಮಾಡದಂತೆ ಕಂಪನಿಯ ಮೇಲೆ ನಿರ್ಬಂಧ ಹೇರಲಾಗಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ಬೆಳಗಾವಿಯ ಚಳಿಗಾಲದ ಅಧಿವೇಶನದಲ್ಲಿ ಇಂದು ವಿಧಾನ ಪರಿಷತ್ ನಲ್ಲಿ ಬಾಣಂತಿಯರ ಸಾವುಗಳ ಕುರಿತು ಮಾಹಿತಿ ನೀಡಿದ ಸಚಿವ ದಿನೇಶ್ ಗುಂಡೂರಾವ್, ದೇಶದಲ್ಲಿ ಔಷಧ ನಿಯಂತ್ರಣ ವ್ಯವಸ್ಥೆಯಲ್ಲಿ ಇರುವ ಲೋಪ ದೋಷಗಳು ಈ ರೀತಿಯ ಪ್ರಕರಣಗಳಿಗೆ ಕಾರಣವಾಗಿದೆ ಎಂದರು. ಬಳ್ಳಾರಿ ಜಿಲ್ಲಾಸ್ಪತ್ರೆಯಲ್ಲಿ ಐವರು ಬಾಣಂತಿಯರ ಸಾವಿನ ಪ್ರಕರಣ ಹಿನ್ನೆಲೆಯಲ್ಲಿ ರಾಜೀವ್ ಗಾಂಧಿ ಆರೋಗ್ಯ ವಿಶ್ವ ವಿದ್ಯಾಲಯದ ತಜ್ಞ ವೈದ್ಯರ ತಂಡವನ್ನ ರಚಿಸಿ ಪರಿಶೀಲಿಸಲಾಗಿತ್ತು. ತಜ್ಞರ ತಂಡ ಐವಿ ರಿಂಗರ್ ಲ್ಯಾಕ್ಟೇಟ್ ಬಗ್ಗೆ ಸಂಶಯ ವ್ಯಕ್ತಪಡಿಸಿತು. ವರದಿಯ ಹಿನ್ನೆಲೆಯಲ್ಲಿ ಮುಂಜಾಗ್ರತ ಕ್ರಮವಾಗಿ ಪಶ್ಚಿಮ ಬಂಗಾ ಕಂಪನಿ ಪೂರೈಸಿದ್ದ ಎಲ್ಲ ಬ್ಯಾಚ್ ಗಳ ದ್ರಾವಣವನ್ನ ತಡೆಹಿಡಿದು, ಟೆಸ್ಟಿಂಗ್ ಮಾಡಿಸಲಾಗಿದೆ.…
ಬೆಳಗಾವಿ ಸುವರ್ಣಸೌಧ: ವಿಶ್ವ ವಿದ್ಯಾಲಯಗಳ ಮೇಲಿನ ರಾಜ್ಯಪಾಲರ ಅಧಿಕಾರ ಮೊಟಕುಗೊಳಿಸುವಂತ ಚಾಣಕ್ಯ ವಿವಿ ತಿದ್ದುಪಡಿ ವಿಧೇಯಕಕ್ಕೆ ವಿಧಾನಸಭೆಯ ಬಳಿಕ ವಿಧಾನ ಪರಿಷತ್ತಿನಲ್ಲಿ ಇಂದು ಅಂಗೀಕಾರ ದೊರೆತಿದೆ. ಮುಖ್ಯಮಂತ್ರಿ ಸಿದ್ಧರಾಮಯ್ಯ ನೇತೃತ್ವದಲ್ಲಿ ನಡೆದಿದ್ದಂತ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಚಾಣಕ್ಯ ವಿವಿ ತಿದ್ದುಪಡಿ ವಿಧೇಯಕಕ್ಕೆ ಅನುಮೋದಿಸಲಾಗಿತ್ತು. ಈ ತಿದ್ದುಪಡಿ ವಿಧೇಯಕದಂತೆ ವಿವಿಗಳಿಗೆ ಸರ್ಕಾರಿ ಅಧಿಕಾರಿ ಉಸ್ತುವಾರಿ ನೇಮಕಕ್ಕೆ ಅವಕಾಶ ನೀಡಲಾಗಿತ್ತು. ನಿನ್ನೆ ವಿಧಾನಸಭೆಯಲ್ಲಿ ಚಾಣಕ್ಯ ವಿವಿ ತಿದ್ದುಪಡಿ ವಿಧೇಯಕಕ್ಕೆ ಅಂಗೀಕಾರ ದೊರೆತಿತ್ತು. ಇಂದು ಬೆಳಗಾವಿಯ ಚಳಿಗಾಲದ ವಿಧಾನ ಪರಿಷತ್ತಿನಲ್ಲಿ ಸರ್ಕಾರ ಮಂಡಿಸಿತ್ತು. ಇಂತಹ ಚಾಣಕ್ಯ ವಿವಿಯ ತಿದ್ದುಪಡಿ ವಿಧೇಯಕಕ್ಕೆ ಅಂಗೀಕಾರ ದೊರೆತಿದೆ. ಹೀಗಾಗಿ ಇನ್ಮುಂದೆ ವಿವಿ ಮೇಲಿನ ರಾಜ್ಯಪಾಲರ ಅಧಿಕಾರಕ್ಕೆ ಬ್ರೇಕ್ ಹಾಕಲಾಗಿದೆ. https://kannadanewsnow.com/kannada/union-minister-dharmendra-pradhan-said-that-neet-exam-will-be-conducted-online/ https://kannadanewsnow.com/kannada/good-news-for-self-employed-aspirants-in-the-state-applications-invited-for-loan-facility-under-various-schemes/
ಶಿವಮೊಗ್ಗ: ಮೆಸ್ಕಾಂ ಇಲಾಖೆಯಿಂದ ತುರ್ತು ವಿದ್ಯುತ್ ನಿರ್ವಹಣಾ ಕಾಮಗಾರಿಯನ್ನು ಕೈಗೊಳ್ಳುತ್ತಿರುವ ಕಾರಣ, ಡಿಸೆಂಬರ್.19ರಿಂದ 22ರವರೆಗೆ ಸೊರಬ ತಾಲ್ಲೂಕಿನ ವಿವಿಧ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ( Power Cut ) ಉಂಟಾಗಲಿದೆ. ಈ ಕುರಿತಂತೆ ಪತ್ರಿಕಾ ಪ್ರಕಟಣೆಯಲ್ಲಿ ಮೆಸ್ಕಾಂನ ( MESCOM ) ಸೊರಬಾ ತಾಲ್ಲೂಕು ಎಇಇ ಮಾಹಿತಿ ನೀಡಿದ್ದು, ದಿನಾಂಕ 19-12-2024ರಂದು ಬೆಳಿಗ್ಗೆ 10ರಿಂದ ಸಂಜೆ 6 ಗಂಟೆಯವರೆಗೆ ಉಳವಿ ವಿದ್ಯುತ್ ವಿತರಣಾ ಕೇಂದ್ರ ವ್ಯಾಪ್ತಿಯ ಕಾನಹಳ್ಳಿ, ಉಳವಿ, ಹೊಸಬಾಳೆ ಹಾಗೂ ದೂಗೂರು ಪ್ರದೇಶಗಳಲ್ಲಿ ಪವರ್ ಕಟ್ ಆಗಲಿದೆ ಎಂದಿದೆ. ದಿನಾಂಕ 20-12-2024ರಂದು ಮಾವಲಿ ವಿದ್ಯುತ್ ಕೇಂದ್ರದಿಂದ ವಿದ್ಯುತ್ ಪೂರೈಕೆಯಾಗುವಂತ ಹರೂರು, ಕೋಲ್ಗುಣಸಿ, ಮನೆಮನೆ, ಗೇರುಕೊಪ್ಪ ಹಾಗೂ ಮಾವಲಿಯಲ್ಲಿ ಪವರ್ ಕಟ್ ಆಗಲಿದೆ. ಅಲ್ಲದೇ ಸಂಡಾ ವಿದ್ಯುತ್ ಕೇಂದ್ರದಲ್ಲಿ ತುರ್ತು ವಿದ್ಯುತ್ ನಿರ್ವಹಣಾ ಕಾಮಗಾರಿ ಕೈಗೊಳ್ಳುತ್ತಿರುವ ಕಾರಣ, ಮಳಲಿಕೊಪ್ಪ, ಚಿಟ್ಟೂರು ಗ್ರಾಮ ವ್ಯಾಪ್ತಿಯ ಸುತ್ತಮುತ್ತಲ ಪ್ರದೇಶಗಳಲ್ಲಿ ಬೆಳಿಗ್ಗೆ 10ರಿಂದ ಸಂಜೆ 6ರವರೆಗೆ ವಿದ್ಯುತ್ ವ್ಯತ್ಯಯ ಉಂಟಾಗಲಿದೆ ಎಂದು ತಿಳಿಸಿದೆ. ದಿನಾಂಕ 21-12-2024ರಂದು…
ಬೆಳಗಾವಿ: ಡಿಸೆಂಬರ್ 17ಕರ್ನಾಟಕ ಸೋಪ್ಸ್ ಅಂಡ್ ಡಿಟರ್ಜೆಂಟ್ಸ್ (ಕೆಎಸ್.ಡಿ.ಎಲ್) ಕಾರ್ಖಾನೆಯು 2023-24ನೇ ಸಾಲಿನಲ್ಲಿ ಮಾಡಿರುವ 362.07 ಕೋಟಿ ರೂಪಾಯಿ ಲಾಭದ ಪೈಕಿ 108.62 ಕೋಟಿ ರೂಪಾಯಿಗಳ ಲಾಂಭಾಂಶದ ಚೆಕ್ ಅನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ ಮತ್ತು ಕಾರ್ಖಾನೆ ಅಧ್ಯಕ್ಷ ಸಿ.ಎಸ್.ನಾಡಗೌಡ ಅವರು ಮಂಗಳವಾರ ಇಲ್ಲಿ ಹಸ್ತಾಂತರಿಸಿದರು. ವಿಧಾನಸಭೆ ಸಭಾಂಗಣದಲ್ಲಿ ನಡೆದ ಸರಳ ಕಾರ್ಯಕ್ರಮದಲ್ಲಿ ಈ ಚೆಕ್ ನೀಡಲಾಯಿತು. ಇದಲ್ಲದೆ, ಮುಖ್ಯಮಂತ್ರಿಯವರ ಪರಿಹಾರ ನಿಧಿಗೆ ಇದೇ ಸಂದರ್ಭದಲ್ಲಿ ಐದು ಕೋಟಿ ರೂಪಾಯಿಗಳ ಚೆಕ್ ನೀಡಲಾಯಿತು. ಕಾರ್ಖಾನೆ ಇತಿಹಾಸದಲ್ಲಿ ಇಷ್ಟು ಮೊತ್ತದ ಲಾಭಾಂಶದ ಚೆಕ್ ನೀಡಿರುವುದು ಇದೇ ಮೊದಲು. ನಂತರ ಮಾತನಾಡಿದ ಮುಖ್ಯಮಂತ್ರಿಯವರು, ‘ಸಾರ್ವಜನಿಕ ಉದ್ದಿಮೆಗಳು ಲಾಭದಾಯಕ ವಹಿವಾಟು ನಡೆಸುವುದು ಒಳ್ಳೆಯ ಬೆಳವಣಿಗೆಯಾಗಿದೆ. ಐದು ವರ್ಷಗಳ ಹಿಂದೆ 15.91 ಕೋಟಿ ರೂಪಾಯಿ ಲಾಭಾಂಶ ಕೊಟ್ಟಿದ್ದ ಈ ಉದ್ದಿಮೆಯು ಈ ವರ್ಷ 108 ಕೋಟಿ ರೂ.ಗಳಿಗೂ ಹೆಚ್ಚಿನ ಡಿವಿಡೆಂಡ್ ಕೊಟ್ಟಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.…
ಬಾಗಲಕೋಟೆ: ಜಿಲ್ಲೆಯ ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ ಆವಣದಲ್ಲಿ ಇದೇ ಡಿಸೆಂಬರ್.21, 22 ಹಾಗೂ 23ರಂದು ತೋಟಗಾರಿಕಾ ಮೇಳ-2024 ಆಯೋಜಿಸಲಾಗಿದೆ. ಈ ಕುರಿತಂತೆ ಪತ್ರಿಕಾ ಪ್ರಕಟಣೆಯಲ್ಲಿ ವಿವಿಯಿಂದ ಮಾಹಿತಿ ನೀಡಲಾಗಿದ್ದು, ಆರ್ಥಿಕತೆ ಹಾಗೂ ಪೌಷ್ಠಿಕತೆಗಾಗಿ ತೋಟಗಾರಿಕೆ ಎನ್ನುವ ಶ್ಲೋಗನ್ ಅಡಿಯಲ್ಲಿ ಡಿಸೆಂಬರ್ 21, 22, 23ರಂದು ತೋಟಗಾರಿಕಾ ಮೇಳವನ್ನು ಆಯೋಜಿಸಲಾಗಿದೆ. ಸಾರ್ವಜನಿಕರು ಈ ಮೇಳದ ಸದುಪಯೋಗ ಪಡಿಸಿಕೊಳ್ಳುವಂತೆ ಮನವಿ ಮಾಡಿದೆ. ತೋಟಗಾರಿಕಾ ಮೇಳದಲ್ಲಿ ಪೌಷಿಕತೆಗಾಗಿ ತೋಟಗಾರಿಕಾ ಬೆಳೆಗಳು, ಸಸ್ಯ ಸಂರಕ್ಷಣೆಯಲ್ಲಿ ಡ್ರೋನ್ ಗಳ ಬಳಕೆ, ತೋಟಗಾರಿಕೆಯಲ್ಲಿ ನಿಖರ ಬೇಸಾಯ, ಸಂರಕ್ಷಿತ ಬೇಸಾಯ, ನೀರು ಸಂರಕ್ಷಣೆಗಾಗಿ ತಂತ್ರಜ್ಞಾನ ಸೇರಿದಂತೆ ವಿವಿಧ ವಿಶೇಷಯತೆಗಳನ್ನು ಒಳಗೊಂಡಿದೆ. ಇದಲ್ಲದೇ ಜೇನು ಕೃಷಿ, ಮಧುವನ ಪ್ರದರ್ಶನ್, ಕೃಷಿ ಯಂತ್ರೋಪಕರಣ, ಪರಿಕರಗಳ ಪ್ರದರ್ಶನ, ಶ್ರೇಷ್ಠ ತೋಟಗಾರಿಕಾ ರೈತ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಆಯೋಜಿಸಲಾಗಿದೆ. ಇನ್ನೂ ರೈತರಿಗೆ ಕೃಷಿ ಬ್ಯಾಂಕಿಂಗ್ ವ್ಯವಹಾರಗಳ ಮಾಹಿತಿ, ಕೃಷಿ ಮತ್ತು ತೋಟಗಾರಿಕಾ ಪ್ರಕಟಣೆಗಳು, ಕೃಷಿಯಲ್ಲಿ ಡಿಜಿಟಲ್ ಆಪ್ ಗಳ ಬಳಕೆ, ಸಾವಯವ ಹಾಗೂ ನೈಸರ್ಗಿಕ ಕೃಷಿಯ ಬಗ್ಗೆಯೂ…
ಬೆಂಗಳೂರು: 2024-25ನೇ ಸಾಲಿನ ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮದ ವತಿಯಿಂದ ಸ್ವಯಂ ಉದ್ಯೋಗ ನೇರಸಾಲ-ಕುರಿ ಸಾಕಾಣಿಕೆ ಯೋಜನೆ, ಸ್ವಾವಲಂಬಿತ ಸಾರಥಿ-ಫುಡ್ ಕಾರ್ಟ್ ಯೋಜನೆಗಳಡಿ ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಇಚ್ಛಿಸುವ ಅಭ್ಯರ್ಥಿಗಳು ನಿಗಮದ ವ್ಯಾಪ್ತಿಯಲ್ಲಿ ಬರುವ ಸಮುದಾಯಗಳು ಅರ್ಜಿ ಸಲ್ಲಿಸಬೇಕಾದ ವೆಬ್ಸೈಟ್ ವಿಳಾಸ https://sevasindhu.karnataka.gov.in ಆಗಿದೆ. ಸ್ವಯಂ ಉದ್ಯೋಗ ನೇರಸಾಲ-ಕುರಿ ಸಾಕಾಣಿಕೆ ಯೋಜನೆ : ಸ್ವಯಂ ಉದ್ಯೋಗ ನೇರಸಾಲ ಯೋಜನೆಯಡಿ ಎಲ್ಲಾ ವಿಧಾನಸಭಾ ಕ್ಷೇತ್ರಗಳ ವ್ಯಾಪ್ತಿಯಲ್ಲಿ ಕುರಿ ಸಾಕಾಣಿಕೆ ಉದ್ದೇಶಕ್ಕಾಗಿ ಸಹಾಯಧನ ಹಾಗೂ ಸಾಲ ಮಂಜೂರು ಮಾಡಲಾಗುವುದು. ಘಟಕ ವೆಚ್ಚ ರೂ.1 ಲಕ್ಷ, ಸಹಾಯಧನ ರೂ. 50 ಸಾವಿರ, ಸಾಲ ರೂ. 50 ಸಾವಿರ. ಸ್ವಾವಲಂಬಿತ ಸಾರಥಿ-ಫುಡ್ ಕಾರ್ಟ್ : ಸ್ವಾವಲಂಬಿತ ಸಾರಥಿ ಯೋಜನೆಯಡಿ ಫುಡ್ಕಾರ್ಟ್ ಉದ್ದೇಶಕ್ಕಾಗಿ ಜಿಲ್ಲಾ ಕೇಂದ್ರಗಳ ವ್ಯಾಪ್ತಿಯಲ್ಲಿ ಮಾತ್ರ ಬ್ಯಾಂಕ್ಗಳ ಸಹಯೋಗದೊಂದಿಗೆ ಯೋಜನೆ ಅನುಷ್ಟಾನ. ಸಾಲದ ಮೊತ್ತಕ್ಕೆ ಶೇ.75 ರಷ್ಟು ಅಥವಾ ಗರಿಷ್ಟ ರೂ.4 ಲಕ್ಷಗಳ ಸಹಾಯಧನ. ಉಳಿದ ಮೊತ್ತ ಬ್ಯಾಂಕ್ ಸಾಲ ಆಗಿರುತ್ತದೆ. ಅರ್ಜಿ…
ಬೆಂಗಳೂರು: 500 ಅಸಿಸ್ಟೆಂಟ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ ಎಂದು ನ್ಯೂ ಇಂಡಿಯ ಅಶುರನ್ಸ್ ಕಂಪನಿ ಲಿಮಿಟೆಡ್ ತಿಳಿಸಿದೆ. 21 ರಿಂದ 30 ವರ್ಷದೊಳಗಿನ ಪದವೀಧರ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು. ಅರ್ಹ ಅಭ್ಯರ್ಥಿಗಳು 2025 ರ ಜನವರಿ, 01 ರೊಳಗೆ ವೆಬ್ಸೈಟ್ ವಿಳಾಸ https://www.newindia.co.in/ ಕ್ಕೆ ಭೇಟಿ ನೀಡಿ ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ. ಡಿಸೆಂಬರ್, 27 ರಂದು ಹಾಸನದ ಸಾಲಗಾಮೆ ರಸ್ತೆಯಲ್ಲಿರುವ ಕೃಷಿಕ್ ಸರ್ವೋದಯ ಫೌಂಡೇಶನ್ನಲ್ಲಿ ಈ ನೇಮಕಾತಿ ಪರೀಕ್ಷೆ ಹಾಗೂ ವಿವಿಧ ಬ್ಯಾಂಕ್ ಮತ್ತು ಇನ್ಶುರೆನ್ಸ್ ಕಂಪನಿಗಳ ನೇಮಕಾತಿ ಪರೀಕ್ಷೆಗಳ ಬಗ್ಗೆ ಉಚಿತ ಜಾಗೃತಿ ಮತ್ತು ಮಾರ್ಗದರ್ಶನ ಕಾರ್ಯಕ್ರಮ ಆಯೋಜಿಸಲಾಗಿದೆ. ಹೆಚ್ಚಿನ ಮಾಹಿತಿಗೆ 8660217739 ಸಂಖ್ಯೆಗೆ ಕರೆ ಅಥವಾ ವಾಟ್ಸಾಪ್ ಮಾಡಬಹುದಾಗಿದೆ ಎಂದು ಕೃಷಿಕ್ ಸರ್ವೋದಯ ಫೌಂಡೇಶನ್ ಗೌರವ ಕಾರ್ಯದರ್ಶಿ ಎಚ್.ಪಿ.ಮೋಹನ್ ಅವರು ತಿಳಿದ್ದಾರೆ. https://kannadanewsnow.com/kannada/officials-who-made-an-elderly-couple-wait-were-sentenced-to-30-minutes-of-standing-and-working/ https://kannadanewsnow.com/kannada/union-minister-dharmendra-pradhan-said-that-neet-exam-will-be-conducted-online/
ನೋಯ್ಡಾ: ನೋಯ್ಡಾ ಪ್ರಾಧಿಕಾರದ ಕಚೇರಿಗೆ ತಮ್ಮ ಕೆಲಸಕ್ಕಾಗಿ ಭೇಟಿ ನೀಡಿದ ವೃದ್ಧ ದಂಪತಿಗೆ ಹಾಜರಾಗದ ಕಾರಣ ಶಿಕ್ಷೆಯಾಗಿ ನೋಯ್ಡಾ ಪ್ರಾಧಿಕಾರದ ಅಧಿಕಾರಿಗಳನ್ನು 30 ನಿಮಿಷಗಳ ಕಾಲ ನಿಂತ ಸ್ಥಿತಿಯಲ್ಲಿ ಕೆಲಸ ಮಾಡುವಂತೆ ಶಿಕ್ಷೆಯನ್ನು ಕಚೇರಿಯ ಸಿಬ್ಬಂದಿಗಳಿಗೆ ನೀಡಿದಂತ ಘಟನೆ ನಡೆದಿದೆ. ನೋಯ್ಡಾ ಪ್ರಾಧಿಕಾರದ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ (ಸಿಇಒ) ಲೋಕೇಶ್ ಎಂ ಅವರು ಡಿಸೆಂಬರ್ 16 ರಂದು ವಸತಿ ಪ್ಲಾಟ್ ವಿಭಾಗದ ಅಧಿಕಾರಿಗಳಿಗೆ 50 ನಿಮಿಷಗಳ ಕಾಲ ವೃದ್ಧ ದಂಪತಿಯನ್ನು ನಿರ್ಲಕ್ಷಿಸಿದ್ದನ್ನು ಗಮನಿಸಿದ ನಂತರ ಶಿಕ್ಷೆ ವಿಧಿಸಿದ್ದಾರೆ. ಸಿಸಿಟಿವಿ ದೃಶ್ಯಾವಳಿಗಳಲ್ಲಿ, ವೃದ್ಧ ದಂಪತಿಗಳು ನಿಂತಿರುವುದು ಕಂಡುಬಂದಿದೆ. ಆದಾಗ್ಯೂ, ಸಿಇಒ 15-20 ನಿಮಿಷಗಳ ನಂತರ ಮತ್ತೆ ಸಿಸಿಟಿವಿಯನ್ನು ಪರಿಶೀಲಿಸಿದಾಗ, ವೃದ್ಧ ದಂಪತಿಗಳು ಇನ್ನೂ ನಿಂತಿರುವುದು ಕಂಡುಬಂದಿತು. ನಂತರ ಅವರು 30 ನಿಮಿಷಗಳ ಕಾಲ ಕುರ್ಚಿಗಳ ಮೇಲೆ ಕುಳಿತುಕೊಳ್ಳದೆ ಕೆಲಸ ಮಾಡುವಂತೆ ವಸತಿ ನಿವೇಶನ ಇಲಾಖೆಯ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. ನೋಯ್ಡಾ ಪ್ರಾಧಿಕಾರದ ಕಚೇರಿಯೊಳಗಿನ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದ್ದು, ಅಧಿಕೃತ ಕರ್ತವ್ಯಗಳಲ್ಲಿ…














