Author: ವಸಂತ ಬಿ ಈಶ್ವರಗೆರೆ

ವಸಂತ ಬಿ ಈಶ್ವರಗೆರೆ (Vasantha B Eshwaragere) ಅವರು ಕರ್ನಾಟಕದ ಪತ್ರಕರ್ತರು ಮತ್ತು ಕವಿ. ಉದಯ ನ್ಯೂಸ್, ಟಿವಿ5 ಕನ್ನಡ ಸೇರಿದಂತೆ ವಿವಿಧ ಸುದ್ದಿ ಮಾಧ್ಯಮಗಳಲ್ಲಿ ಸುಮಾರು 15 ವರ್ಷಗಳ ಅನುಭವವನ್ನು ಹೊಂದಿದ್ದಾರೆ. ಪ್ರಸ್ತುತ ಅವರು Kannada News Now ಡಿಜಿಡಿಲ್‌ ಮಾಧ್ಯಮದಲ್ಲಿ ಸಂಪಾದಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಇವರು ತಾಜಾ ಸುದ್ದಿ, ಸಾಹಿತ್ಯ, ಸಾಮಾಜಿಕ ವರದಿಗಾರಿಕೆ, ನ್ಯಾಯಾಂಗ ಸಂಬಂಧಿತ ವರದಿ ಮತ್ತು ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿದ ಸುದ್ದಿಗಳ ವರದಿಯಲ್ಲಿ ಸಕ್ರಿಯರಾಗಿದ್ದಾರೆ. ಗುಡವಿ ಪಕ್ಷಿಧಾಮದಂತಹ ಪ್ರವಾಸಿ ತಾಣಗಳ ಕುರಿತು ಲೇಖನಗಳನ್ನು ಬರೆದಿದ್ದಾರೆ.

ಚಿತ್ರದುರ್ಗ : 66/11 ಕೆ.ವಿ ಹೆಚ್.ಡಿ.ಪುರ ವಿದ್ಯುತ್ ವಿತರಣಾ ಕೇಂದ್ರದಲ್ಲಿ ಹಾಲಿ ಅಸ್ತಿತ್ವದಲ್ಲಿರುವ ಕಾರಿಡಾರ್‍ನಲ್ಲಿ ದ್ವಿಮಾರ್ಗ ಟವರ್‍ಗಳಿಂದ ಅಸ್ತಿತ್ವದಲ್ಲಿರುವ ಏಕ ಮಾರ್ಗ ಟವರ್‍ಗಳನ್ನು ಬದಲಿಸುವ ಮೂಲಕ ಹೆಚ್.ಡಿ. ಪುರ ಟ್ಯಾಪ್ ಪಾಯಿಂಟ್‍ನಿಂದ ಹೆಚ್.ಡಿ ಪುರ ವಿವಿ ಕೇಂದ್ರದ ನಡುವೆ 66/11 ಕೆವಿ ಹೆಚ್.ಡಿ ಪುರದಲ್ಲಿ ಲಿಲೋ ವ್ಯವಸ್ಥೆ ಒದಗಿಸಲು ಕೊಯೊಟ್ ಕಂಡಕ್ಟರ್‍ನೊಂದಿಗೆ 9.163 ಕಿಮೀ ದೂರಕ್ಕೆ ಹೆಚ್ಚುವರಿ 66 ಕೆವಿ ಸಕ್ರ್ಯೂಟ್‍ಅನ್ನು ಒದಗಿಸಲು 66/11 ಕೆವಿ ಹೆಚ್.ಡಿ ಪುರ ವಿ.ವಿ ಕೇಂದ್ರಕ್ಕೆ ಮಾರ್ಗ ಮುಕ್ತತೆ ನೀಡಬೇಕಾಗಿರುವುದರಿಂದ ಈ ವಿ.ವಿ.ಕೇಂದ್ರದಿಂದ ವಿದ್ಯುತ್ ಸರಬರಾಜಾಗುವ ಎಲ್ಲ 11 ಕೆ.ವಿ.ಮಾರ್ಗಗಳಲ್ಲಿ ಇದೇ ಮಾರ್ಚ್ 06 ಮತ್ತು 08ರಂದು ಬೆಳಿಗ್ಗೆ 9 ರಿಂದದ ಸಂಜೆ 5 ರವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ. ವಿದ್ಯುತ್ ಅಡಚಣೆ ಯಾಗುವ ಪ್ರದೇಶಗಳು ತಾಳ್ಯ ಕಾವಲು, ಉಪ್ಪರಿಗೇನಹಳ್ಳಿ, ಬೂದಿಪುರ, ನಲ್ಲಿಕಟ್ಟೆ, ತಾಳ್ಯ, ಮತ್ತಿಘಟ್ಟ, ಕೆರೆಯಾಗಲಹಳ್ಳಿ, ಚೌಡಗೊಂಡನಹಳ್ಳಿ, ತೇಕಲವಟ್ಟಿ, ತೋಡರನಾಳ್, ಕೋಳಾಳ್ , ಬಿ.ಆರ್. ಗುಡಿ ಮತ್ತು ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ. ಗ್ರಾಹಕರು ಸಹಕರಿಸಬೇಕು ಎಂದು…

Read More

ಚಿತ್ರದುರ್ಗ : ಹೊಸದುರ್ಗ ತಾಲ್ಲೂಕು ಶ್ರೀರಾಂಪುರ ಹೋಬಳಿ ಶ್ರೀರಾಂಪುರ ಹಾಗೂ ಕುರುಬರಹಳ್ಳಿ ಕಂದಾಯ ವೃತ್ತಕ್ಕೆ ಮತ್ತು ಕಸಬಾ ಹೋಬಳಿ ಹುಣವಿನಡು ಕಂದಾಯ ವೃತ್ತಕ್ಕೆ ಹೆಚ್ಚುವರಿ ಗ್ರಾಮ ಸಹಾಯಕರ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ. ಮಾರ್ಚ್ 25 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಅಭ್ಯರ್ಥಿಯು ಅರ್ಜಿ ಸಲ್ಲಿಸಲು ಕಡೆಯ ದಿನಾಂಕದಂದು 25 ವರ್ಷ ಪೂರ್ಣಗೊಂಡಿರಬೇಕು. 45ವರ್ಷ ವಯೋಮಿತಿ ಒಳಗಿರಬೇಕು.. ಎಸ್‍ಎಸ್‍ಎಲ್‍ಸಿ, ವರ್ಗಾವಣೆ ಪ್ರಮಾಣ ಪತ್ರ, ಶಾಲಾ ದಾಖಲಾತಿ ಪ್ರಮಾಣ ಪತ್ರದಲ್ಲಿ ದಾಖಲಿಸಿರುವ ಜನ್ಮ ದಿನಾಂಕವನ್ನು ಮಾತ್ರವೇ ಪರಿಗಣಿಸಲಾಗುವುದು. ಅಭ್ಯರ್ಥಿಯು ಕನ್ನಡ ಓದುವ, ಬರೆಯುವ ಜ್ಞಾನವುಳ್ಳ ಅಕ್ಷರಸ್ಥರಾಗಿರುವ ಬಗ್ಗೆ ಸೂಕ್ತ ದಾಖಲೆಗಳನ್ನು ಸಲ್ಲಿಸಬೇಕು. ಅರ್ಜಿಯನ್ನು ನಿಗಧಿತ ನಮೂನೆ-1ರಲ್ಲಿ ಸಲ್ಲಿಸಬೇಕು. ಗ್ರಾಮ ಸಹಾಯಕ ಹುದ್ದೆಯ ತಾತ್ಕಾಲಿಕ ಹುದ್ದೆಯಾಗಿದ್ದು, ಸರ್ಕಾರದಿಂದ ಕಾಲಕಾಲಕ್ಕೆ ನಿಗಧಿ ಆಗುವಂತಹ ಗೌರವಧನ ಪಾವತಿಸಲಾಗುವುದು. ಗ್ರಾಮ ಸಹಾಯಕ ಹುದ್ದೆ ನೇಮಕಾತಿಗಾಗಿ ಈ ಹಿಂದೆ ಈ ಕಂದಾಯ ವೃತ್ತಕ್ಕೆ ಸೇರಿದ ಗ್ರಾಮಗಳಲ್ಲಿ ಕರ್ತವ್ಯ ನಿರ್ವಹಿಸಿದ ಕೆಳಮಟ್ಟದ ಗ್ರಾಮ ನೌಕರರ ವಂಶಸ್ಥರಿಗೆ ಆದ್ಯತೆ ನೀಡಲಾಗುವುದು. ಕೆಳಮಟ್ಟದ ನೌಕರರ ವಂಶಸ್ಥರೆಂಬುವ ಬಗ್ಗೆ…

Read More

ಬೆಂಗಳೂರು; ಕಾಡುಗೊಲ್ಲ ಸಮುದಾಯದವರಿಗೆ ಕಾಡುಗೊಲ್ಲ ಎಂಬುದಾಗಿ ಜಾತಿ ಪ್ರಮಾಣಪತ್ರ ವಿತರಿಸುವಲ್ಲಿನ ಸಮಸ್ಯೆ ನಿವಾರಣೆಗೆ ಕ್ರಮ ಕೈಗೊಳ್ಳುವುದಾಗಿ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಶಿರವಾಜ ತಂಡರಿಗೆ ಹೇಳಿದ್ದಾರೆ. ತುಮಕೂರು, ಚಿತ್ರದುರ್ಗ ಹೊರತುಪಡಿಸಿ ಉಳಿದ ಜಿಲ್ಲೆಗಳಲ್ಲಿ ಕಾಡುಗೊಲ್ಲರಿಗೆ ಪ್ರಮಾಣಪತ್ರ ವಿತರಿಸುವಲ್ಲಿ ಸಮಸ್ಯೆಗಳಾಗುತ್ತಿದ್ದು, ಅವುಗಳನ್ನು ನಿವಾರಿಸಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರಾದ ಶಿವರಾಜ ತಂಗಡಗಿ ಅವರು ವಿಧಾನ ಮಂಡಲದ ಬಜೆಟ್ ಅಧಿವೇಶನದಲ್ಲಿ ಪ್ರಶ್ನೋತ್ತರ ಕಲಾಪದ ವೇಳೆ ತಿಳಿಸಿದರು. https://twitter.com/KarnatakaVarthe/status/1897281569833750740 ಅಂದಹಾಗೇ ರಾಜ್ಯದಲ್ಲಿ ಅತ್ಯಂತ ಹಿಂದುಳಿದ ಕಾಡುಗೊಲ್ಲ ಸಮುದಾಯದವರಿಗೆ ಕೇವಲ ತುಮಕೂರು ಮತ್ತು ಚಿತ್ರದುರ್ಗ ಜಿಲ್ಲೆಯಲ್ಲಿ ಮಾತ್ರ ಜಾತಿ ಪ್ರಮಾಣ ಪತ್ರವನ್ನು ನೀಡುತ್ತಿದ್ದು, ರಾಜ್ಯದ ಇತರೆ ಜಿಲ್ಲೆಗಳಲ್ಲೂ ಜಾತಿ ಪ್ರಮಾಣ ಪತ್ರವನ್ನು ವಿತರಿಸುವಂತೆ ಮಾನ್ಯ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವರಲ್ಲಿ ಹೆಚ್ ಸಿ ಬಾಲಕೃಷ್ಣ ಅವರು ಮನವಿ ಮಾಡಿದ್ದರು. ಈ ಮನವಿಗೆ ಮೇಲಿನಂತೆ ಸಚಿವರು ಉತ್ತರಿಸಿದ್ದಾರೆ. https://kannadanewsnow.com/kannada/minister-ishwar-khandre-orders-probe-into-leopard-death-in-tumkur/ https://kannadanewsnow.com/kannada/shivamogga-power-outages-in-these-areas-of-soraba-taluk-on-march-7/

Read More

ಶಿವಮೊಗ್ಗ: ಜಿಲ್ಲೆಯ ಸೊರಬ ತಾಲ್ಲೂಕಿನಲ್ಲಿ ಮೆಸ್ಕಾಂ ಇಲಾಖೆಯಿಂದ ತುರ್ತು ವಿದ್ಯುತ್ ನಿರ್ವಹಣಾ ಕಾಮಗಾರಿಯನ್ನು ಕೈಗೊಳ್ಳುತ್ತಿರುವುದರಿಂದ ಮಾರ್ಚ್.7ರಂದು ವಿವಿಧ ಪ್ರದೇಶಗಳಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ( Power Cut ) ಉಂಟಾಗಲಿದೆ. ಈ ಬಗ್ಗೆ ಸೊರಬ ಎಇಇ ಸತ್ಯಪ್ರಕಾಶ್ ಅವರು ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿದ್ದು, ದಿನಾಂಕ 07-03-2025ರಂದು 110/11 ಕವಿ ಉಳವಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ಮೆಸ್ಕಾಂನಿಂದ ತ್ರೈಮಾಸಿಕ ನಿರ್ವಹಣಾ ಕಾಮಗಾರಿಯನ್ನು ಕೈಗೊಳ್ಳಲಾಗುತ್ತಿದೆ. ಈ ಹಿನ್ನಲೆಯಲ್ಲಿ ಮಾರ್ಚ್.7ರಂದು ಬೆಳಗ್ಗೆ 10ರಿಂದ ಸಂಜೆ 6 ಗಂಟೆಯವರೆಗೆ ಈ ಕೆಳಕಂಡ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ ಅಂತ ತಿಳಿಸಿದ್ದಾರೆ. ಮಾರ್ಚ್.7ರಂದು ಸೊರಬ ತಾಲ್ಲೂಕಿನ ಈ ಪ್ರದೇಶಗಳಲ್ಲಿ ಪವರ್ ಕಟ್ ಪುರ, ಕಾನಳ್ಳಿ, ಉಳವಿ, ಹೊಸಬಾಳೆ, ದೂಗೂರು ವ್ಯಾಪ್ತಿಯ ಎಲ್ಲಾ ಗ್ರಾಮಗಳಲ್ಲಿ ಪವರ್ ಕಟ್ ಆಗಲಿದೆ. ಮಾರ್ಚ್.7ರಂದು ಬೆಳಿಗ್ಗೆ 10ರಿಂದ ಸಂಜೆ 6 ಗಂಟೆಯವರೆಗೆ ಕರೆಂಟ್ ಇರೋದಿಲ್ಲ. ಸಾರ್ವಜನಿಕರು ಸಹಕರಿಸುವಂತೆ ಮನವಿ ಮಾಡಿದ್ದಾರೆ. ವರದಿ: ವಸಂತ ಬಿ ಈಶ್ವರಗೆರೆ https://kannadanewsnow.com/kannada/minister-ishwar-khandre-orders-probe-into-leopard-death-in-tumkur/ https://kannadanewsnow.com/kannada/16-hospitals-fined-for-violating-kpme-norms-in-bengaluru-fir-lodged-against-2-firms/

Read More

ಬೆಂಗಳೂರು: ತುಮಕೂರಲ್ಲಿ ಬೋನಿಗೆ ಬಿದ್ದಿದ್ದಂತ ಚಿರತೆಯೊಂದು ಆ ಬಳಿಕ ತೋಟದಲ್ಲಿ ಸಂಭವಿಸಿದಂತ ಅಗ್ನಿ ಅನಾಹುತದಲ್ಲಿ ಸಾವನ್ನಪ್ಪಿತ್ತು. ಈ ಪ್ರಕರಣದ ಬಗ್ಗೆ ಅರಣ್ಯ ಸಚಿವ ಈಶ್ವರ್ ಖಂಡ್ರೆ ಅವರು ತನಿಖೆಗೆ ಆದೇಶಿಸಿದ್ದಾರೆ. ಈ ಸಂಬಂಧ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಹಾಗೂ ಅರಣ್ಯ ಪಡೆಯ ಮುಖ್ಯಸ್ಥರಿಗೆ ಪತ್ರ ಬರೆದಿದ್ದಾರೆ. ಅದರಲ್ಲಿ ತುಮಕೂರು ಜಿಲ್ಲೆ ತಿಪಟೂರು ವಲಯದ ಚೌಡ್ಲಾಪುರ ಗಸ್ತು ಮಧ್ಯೆಹಳ್ಳ ಗ್ರಾಮದ ತೋಟದಲ್ಲಿ ಬೋನಿಗೆ ಬಿದ್ದ ಚಿರತೆ, ನಂತರ ತೋಟದಲ್ಲಿ ಸಂಭವಿಸಿದ ಅಗ್ನಿ ಅನಾಹುತದ ವೇಳೆ ಹೊಗೆಯಿಂದ ಉಸಿರುಕಟ್ಟಿ ಮೃತಪಟ್ಟದ್ದು, ಇದಕ್ಕೆ ಅರಣ್ಯ ಸಿಬ್ಬಂದಿಯ ನಿರ್ಲಕ್ಷ್ಯವೇ ಕಾರಣ ಎಂದು ಮಾಧ್ಯಮಗಳಲ್ಲಿ ವರದಿಯಾಗಿದ್ದು, ಸರ್ಕಾರ ಇದನ್ನು ಗಂಭೀರವಾಗಿ ಪರಿಗಣಿಸಿದೆ ಎಂಬುದಾಗಿ ತಿಳಿಸಿದ್ದಾರೆ. ಚಿರತೆಯ ಅಸಹಜ ಸಾವಿನ ಬಗ್ಗೆ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ದರ್ಜೆಯ ಅಧಿಕಾರಿಯಿಂದ ಸ್ಥಳ ತನಿಖೆ ನಡೆಸಿ, ಅರಣ್ಯ ಸಿಬ್ಬಂದಿಯ ನಿರ್ಲಕ್ಷ್ಯ ಇದ್ದಲ್ಲ. ಕಾನೂನು ರೀತ್ಯ ಕ್ರಮ ಕೈಗೊಳ್ಳಲು ಸೂಚಿಸಿದ್ದಾರೆ. https://kannadanewsnow.com/kannada/16-hospitals-fined-for-violating-kpme-norms-in-bengaluru-fir-lodged-against-2-firms/ https://kannadanewsnow.com/kannada/mangaluru-jail-food-poisoning-case-one-prisoners-condition-critical/

Read More

ಬೆಂಗಳೂರು: ರಾಜ್ಯದಲ್ಲಿ ಕೆಪಿಎಂಇ ನಿಯಮಗಳನ್ನು ಉಲ್ಲಂಘಿಸಿದಂತ ಖಾಸಗಿ ವೈದ್ಯಕೀಯ ಸಂಸ್ಥೆಗಳ ವಿರುದ್ಧ ಆರೋಗ್ಯ ಇಲಾಖೆ ದಂಡದ ಮೂಲಕ ಬಿಗ್ ಶಾಕ್ ನೀಡಿದೆ. 16 ಸಂಸ್ಥೆಗಳ ವಿರುದ್ಧ ದಂಡಾಸ್ತ್ರ ಪ್ರಯೋಗಿಸಿದ್ದರೇ, 2 ಸಂಸ್ಥೆಗಳ ವಿರುದ್ಧ FIR ದಾಖಲಿಸಲಾಗಿದೆ. ಈ ಬಗ್ಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಮಾಹಿತಿ ನೀಡಲಾಗಿದ್ದು, ಬೆಂಗಳೂರು ನಗರ ಜಿಲ್ಲಾ ವ್ಯಾಪ್ತಿಯಲ್ಲಿ ಕೆಪಿಎಂಇ ನಿಯಮಗಳನ್ನು ಉಲ್ಲಂಘನೆ ಮಾಡಿರುವ ಖಾಸಗಿ ವೈದ್ಯಕೀಯ ಸಂಸ್ಥೆಗಳು, ಆಸ್ಪತ್ರೆಗಳು, ಕ್ಲಿನಿಕ್, ಪುನರ್ವಸತಿ ಕೇಂದ್ರಗಳ ಒಟ್ಟು 39 ಪ್ರಕರಣಗಳನ್ನು ಮಂಡಿಸಲಾಗಿತ್ತು. ಸದರಿ ಸಂಸ್ಥೆಗಳಿಗೆ ಜಿಲ್ಲಾಧಿಕಾರಿಗಳು ಈ ಕೆಳಕಂಡ ಕ್ರಮ ಕೈಗೊಳ್ಳಲು ಆದೇಶಿಸಿದ್ದಾರೆ ಎಂದು ತಿಳಿಸಿದ್ದಾರೆ. 16 ಸಂಸ್ಥೆಗಳ ವಿರುದ್ಧ ದಂಡ ಕೆಪಿಎಂಇ ನಿಯಮ ಉಲ್ಲಂಘಿಸಿದ ಕಾರಣಕ್ಕಾಗಿ ಬೆಂಗಳೂರಿನ ಸುಂಕದಕಟ್ಟೆಯಲ್ಲಿನ ಕೀರ್ತನ ಫೌಂಡೇಶನ್ ಗೆ ರೂ.50,000 ದಂಡವನ್ನು ವಿಧಿಸಲಾಗಿದೆ. ಹೆಚ್ ಎಸ್ ಆರ್ ಲೇಔಟ್ ನ ಕೋಸ್ಮೆಡಿಕ್ಸ್ ಕ್ಲಿನಿಕ್ ಗೆ ರೂ.25,000 ದಂಡ ಹಾಕಲಾಗಿದೆ. ಇನ್ನೂ ಗಿಡ್ಡಕೊನ್ನೇನಹಳ್ಳಿಯಲ್ಲಿನ ಅನನ್ಯ ಆಸ್ಪತ್ಪೆಗೆ ರೂ.50,000, ನೆಲಗದರನಹಳ್ಳಿ ಮುಖ್ಯ ರಸ್ತೆಯಲ್ಲಿನ ಸಮೃದ್ಧಿ…

Read More

ಮಂಗಳೂರು: ಜಿಲ್ಲೆಯ ಕಾರಾಗೃಹದಲ್ಲಿ ಪುಡ್ ಪಾಯಿಸನ್ ಆಗಿದ್ದರಿಂದ 40ಕ್ಕೂ ಹೆಚ್ಚು ಕೈದಿಗಳು ಅಸ್ವಸ್ಥಗೊಂಡಿದ್ದರು. ಅವರನ್ನು ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಇವರಲ್ಲಿ ಓರ್ವ ಕೈದಿಯ ಸ್ಥಿತಿ ಗಂಭೀರಗೊಂಡಿರುವುದಾಗಿ ತಿಳಿದು ಬಂದಿದೆ. ಈ ಸಂಬಂಧ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳು ಜೈಲಿಗೆ ಭೇಟಿ ನೀಡಿ, ನೀರಿನ ಸ್ಯಾಂಪಲ್ ಹಾಗೂ ಆಹಾರದ ಮಾದರಿಯನ್ನು ಸಂಗ್ರಹಿಸಿದ್ದಾರೆ. ಈ ವೇಳೆ ಅವಲಕ್ಕಿ, ಅನ್ನ, ಸಾಂಬಾರ್ ಊಟವನ್ನು ಮಧ್ಯಾಹ್ನ ಖೈದಿಗಳಿಗೆ ನೀಡಿರೋದಾಗಿ ತಿಳಿದು ಬಂದಿದೆ. ಪೊಲೀಸ್ ಕಮೀಷನರ್ ಅನುಪಮ್ ಅಗರ್ವಾಲ್ ಅವರು ಮಾತನಾಡಿ, ಇಂದು ಸಂಜೆ 4.30ಕ್ಕೆ ಕೈದಿಗಳಿಗೆ ವಾಂತಿ, ಬೇಧಿ ಕಾಣಿಸಿಕೊಂಡಿದೆ. ಅವರನ್ನು ಕೂಡಲೇ ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. 45 ಕೈದಿಗಳ ಪೈಕಿ ಓರ್ವನ ಸ್ಥಿತಿ ಗಂಭೀರಗೊಂಡಿದೆ ಎಂದಿದ್ದಾರೆ. ಪುಡ್ ಪಾಯಿಸನ್ ಹೇಗೆ ಆಯ್ತು ಎನ್ನುವ ಬಗ್ಗೆ ತನಿಖೆ ನಡೆಸಲಾಗುತ್ತದೆ. ಆಹಾರದ ಮಾದರಿಯನ್ನು ಪರೀಕ್ಷೆಗೆ ಕಳುಹಿಸಲಾಗಿದೆ. ವರದಿಯ ಬಳಿಕ ಕಾರಣ ತಿಳಿಯಲಿದೆ ಎಂದರು. https://kannadanewsnow.com/kannada/cabinet-approves-revised-livestock-health-programme-pm-modi/ https://kannadanewsnow.com/kannada/job-fair-to-be-held-in-kodagu-on-mar-8/

Read More

ಮಡಿಕೇರಿ: ಸಂಜೀವಿನಿ ಕೆಎಸ್‍ಆರ್‍ಎಲ್‍ಪಿಎಸ್ ನ ಡಿಡಿಯುಜಿಕೆವೈ ಯೋಜನೆಯಡಿ ಉದ್ಯೋಗ ಮೇಳ ನಡೆಯಲಿದೆ. ಜಿಲ್ಲೆಯ ಕನಿಷ್ಠ 800 ಅಭ್ಯರ್ಥಿಗಳಿಗೆ ಉದ್ಯೋಗದಾತ ಸಂಸ್ಥೆಗಳ ಮೂಲಕ ಉದ್ಯೋಗವಕಾಶ ಕಲ್ಪಿಸುವ ಮೂಲಕ ಕೊಡಗು ಜಿಲ್ಲಾ ಪಂಚಾಯಿತಿ ವತಿಯಿಂದ ಮಾರ್ಚ್, 08 ರಂದು ಬೆಳಗ್ಗೆ 10 ಗಂಟೆಯಿಂದ ನಗರದ ಜಿಲ್ಲಾ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆ(ಐಟಿಐ) ಯಲ್ಲಿ ‘ಜಿಲ್ಲಾ ಮಟ್ಟದ ಉದ್ಯೋಗ ಮೇಳ’ ನಡೆಯಲಿದೆ. ಈ ಉದ್ಯೋಗ ಮೇಳದಲ್ಲಿ ಹಲವಾರು ಪ್ರತಿಪ್ಠಿತ ಕಂಪನಿಗಳು ಭಾಗವಹಿಸುತ್ತಿದ್ದು, ಸ್ಥಳದಲ್ಲಿಯೇ ಉದ್ಯೋಗಾವಕಾಶ ಕಲ್ಪಿಸಿ ತರಬೇತಿಗೆ ಆಯ್ಕೆ ಮಾಡಿಕೊಳ್ಳಲಾಗುವುದು. ಆದ್ದರಿಂದ ಜಿಲ್ಲೆಯ 18 ರಿಂದ 35 ವರ್ಷದೊಳಗಿನ ನಿರುದ್ಯೋಗಿ ಯುವಕ/ ಯುವತಿಯರು ಈ ಅವಕಾಶವನ್ನು ಸದುಪಯೋಗ ಪಡಿಸಿಕೊಳ್ಳುವಂತೆ ಜಿ.ಪಂ.ಸಿಇಒ ಆನಂದ ಪ್ರಕಾಶ್ ಮೀನಾ ಅವರು ತಿಳಿಸಿದ್ದಾರೆ. ಮಾ.06ರ ನಾಳೆ ವಿದ್ಯುತ್ ವ್ಯತ್ಯಯ 66/11 ಕೆ.ವಿ ಸೋಮವಾರಪೇಟೆ ವಿದ್ಯುತ್ ವಿತರಣಾ ಕೇಂದ್ರದಿಂದ ಹೊರಹೊಮ್ಮುವ 11 ಕೆವಿ ಎಫ್3 ಶನಿವಾರಸಂತೆ ಮಾರ್ಗದಲ್ಲಿ, ಶನಿವಾರಸಂತೆ ಶಾಖಾ ವ್ಯಾಪ್ತಿಯ ಕೆಎಸ್‍ಆರ್‍ಟಿಸಿ ಬಸ್ ನಿಲ್ದಾಣದ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಮಾರ್ಚ್, 06 ರಂದು…

Read More

ನವದೆಹಲಿ: ಪರಿಷ್ಕೃತ ಜಾನುವಾರು ಆರೋಗ್ಯ ಮತ್ತು ರೋಗ ನಿಯಂತ್ರಣ ಕಾರ್ಯಕ್ರಮಕ್ಕೆ (ಎಲ್ಎಚ್ಡಿಸಿಪಿ) ಕೇಂದ್ರ ಸಚಿವ ಸಂಪುಟದ ಅನುಮೋದನೆಯನ್ನು ಪ್ರಧಾನಿ ನರೇಂದ್ರ ಮೋದಿ ಬುಧವಾರ ಶ್ಲಾಘಿಸಿದ್ದಾರೆ. ಇದು ಪ್ರಾಣಿಗಳ ಆರೋಗ್ಯವನ್ನು ಸುಧಾರಿಸುವ, ಉತ್ಪಾದಕತೆಯನ್ನು ಹೆಚ್ಚಿಸುವ ಮತ್ತು ರೈತರನ್ನು ಬೆಂಬಲಿಸುವ ಮಹತ್ವದ ಹೆಜ್ಜೆ ಎಂದು ಕರೆದಿದ್ದಾರೆ. “ಪರಿಷ್ಕೃತ ಎಲ್ಎಚ್ಡಿಸಿಪಿ ರೋಗ ನಿಯಂತ್ರಣ ಕ್ರಮಗಳನ್ನು ಹೆಚ್ಚಿಸುತ್ತದೆ, ವ್ಯಾಕ್ಸಿನೇಷನ್ ವ್ಯಾಪ್ತಿಯನ್ನು ವಿಸ್ತರಿಸುತ್ತದೆ, ಹೆಚ್ಚಿನ ಸಂಚಾರಿ ಪಶುವೈದ್ಯಕೀಯ ಘಟಕಗಳನ್ನು ನಿಯೋಜಿಸುತ್ತದೆ ಮತ್ತು ಪ್ರಾಣಿಗಳಿಗೆ ಕೈಗೆಟುಕುವ ಔಷಧಿಗಳನ್ನು ಖಚಿತಪಡಿಸುತ್ತದೆ” ಎಂದು ಪಿಎಂ ಮೋದಿ ಹೇಳಿದರು. https://twitter.com/narendramodi/status/1897277823666282686?ref_src=twsrc%5Etfw%7Ctwcamp%5Etweetembed%7Ctwterm%5E1897277823666282686%7Ctwgr%5Ed47ae95bbd65a485a362f3aeb19bffd9b9f4fc0c%7Ctwcon%5Es1_&ref_url=https%3A%2F%2Fwww.indiatvnews.com%2Fnews%2Findia%2Fcabinet-approves-livestock-health-programme-boosts-rural-farmers-pm-modi-lhdcp-2025-03-05-979268 https://kannadanewsnow.com/kannada/cards-of-26-lakh-fake-workers-cancelled-in-karnataka-santosh-lad/ https://kannadanewsnow.com/kannada/minister-santosh-lad-gives-good-news-to-construction-workers-who-were-expecting-release-of-child-marriage-incentive/

Read More

ಧಾರವಾಡ : ಕಟ್ಟಡ ಕಾರ್ಮಿಕರ ಮಕ್ಕಳ ವಿವಾಹಕ್ಕೆ ದೊರೆಯುವ ಪ್ರೋತ್ಸಾಹಧನ 2024-25ನೇ ಸಾಲಿನಲ್ಲಿ ಮಂಜೂರಾಗಿರುವ 23,121 ಫಲಾನುಭವಿಗಳ ಪೈಕಿ 6,595 ಫಲಾನುಭವಿಗಳಿಗೆ ಸಹಾಯ ಧನದ ಮೊತ್ತವನ್ನು ಅವರ ಖಾತೆಗೆ ಡಿಬಿಟಿ ಮೂಲಕ ನೇರ ಜಮಾ ಮಾಡುವ ಪ್ರಕ್ರಿಯೆ ಪ್ರಗತಿಯಲ್ಲಿದೆ ಎಂದು ಕಾರ್ಮಿಕ ಸಚಿವರಾದ ಸಂತೋಷ ಲಾಡ್ ಅವರು ತಿಳಿಸಿದರು. ಅವರು ಇಂದು (ಮಾ.5) ಬೆಳಿಗ್ಗೆ ವಿಧಾನ ಸಭೆಯ ಕಲಾಪದಲ್ಲಿ ಭಾಗವಹಿಸಿ, ಹುಬ್ಬಳ್ಳಿ ಧಾರವಾಡ ಕೇಂದ್ರಿಯ ಕ್ಷೇತ್ರದ ಶಾಸಕರಾದ ಮಹೇಶ ಟೆಂಗಿನಕಾಯಿ ಅವರು ಕೇಳಿದ ಚುಕ್ಕೆ ಗುರುತಿನ ಪ್ರಶ್ನೆಗೆ ಉತ್ತರಿಸಿದರು. 2022 ರಿಂದ ಇಲ್ಲಿಯವರೆಗೆ ಮದುವೆ ಧನ ಸಹಾಯಕ್ಕಾಗಿ 2022-23 ನೇ ಸಾಲಿನಲ್ಲಿ 66,514 ಅರ್ಜಿಗಳು ಸಲ್ಲಿಕೆಯಾಗಿದ್ದು, ಅವುಗಳಲ್ಲಿ 48,366 ಅರ್ಜಿಗಳು ಮಂಜೂರಾಗಿವೆ. 2023-24 ನೇ ಸಾಲಿನಲ್ಲಿ 50,398 ಅರ್ಜಿಗಳು ಸಲ್ಲಿಕೆಯಾಗಿದ್ದು, 34,604 ಅರ್ಜಿಗಳು ಮಂಜೂರಾಗಿವೆ. ಮತ್ತು 2024-25 ನೇ ಸಾಲಿನಲ್ಲಿ 40,262 ಅರ್ಜಿಗಳು ಸಲ್ಲಿಕೆಯಾಗಿದ್ದು, 23,121 ಅರ್ಜಿಗಳು ಮಂಜೂರಾಗಿವೆ. ಒಟ್ಟಾರೆಯಾಗಿ ಕಳೆದ ಮೂರು ವರ್ಷಗಳಲ್ಲಿ ಒಟ್ಟು ರಾಜ್ಯಾಂದತ್ಯ 1,57,174 ಅರ್ಜಿಗಳು ಮದುವೆ…

Read More