Author: ವಸಂತ ಬಿ ಈಶ್ವರಗೆರೆ

ವಸಂತ ಬಿ ಈಶ್ವರಗೆರೆ (Vasantha B Eshwaragere) ಅವರು ಕರ್ನಾಟಕದ ಪತ್ರಕರ್ತರು ಮತ್ತು ಕವಿ. ಉದಯ ನ್ಯೂಸ್, ಟಿವಿ5 ಕನ್ನಡ ಸೇರಿದಂತೆ ವಿವಿಧ ಸುದ್ದಿ ಮಾಧ್ಯಮಗಳಲ್ಲಿ ಸುಮಾರು 15 ವರ್ಷಗಳ ಅನುಭವವನ್ನು ಹೊಂದಿದ್ದಾರೆ. ಪ್ರಸ್ತುತ ಅವರು Kannada News Now ಡಿಜಿಡಿಲ್‌ ಮಾಧ್ಯಮದಲ್ಲಿ ಸಂಪಾದಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಇವರು ತಾಜಾ ಸುದ್ದಿ, ಸಾಹಿತ್ಯ, ಸಾಮಾಜಿಕ ವರದಿಗಾರಿಕೆ, ನ್ಯಾಯಾಂಗ ಸಂಬಂಧಿತ ವರದಿ ಮತ್ತು ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿದ ಸುದ್ದಿಗಳ ವರದಿಯಲ್ಲಿ ಸಕ್ರಿಯರಾಗಿದ್ದಾರೆ. ಗುಡವಿ ಪಕ್ಷಿಧಾಮದಂತಹ ಪ್ರವಾಸಿ ತಾಣಗಳ ಕುರಿತು ಲೇಖನಗಳನ್ನು ಬರೆದಿದ್ದಾರೆ.

ಬೆಂಗಳೂರು: ರಾಜ್ಯದ ಕಾಂಗ್ರೆಸ್ ಸರಕಾರವು ಗ್ಯಾರಂಟಿಗಳ ಅನುಷ್ಠಾನಕ್ಕೆ ಬಜೆಟ್‍ನಲ್ಲಿ ಮೀಸಲಿಟ್ಟ 52,009 ಕೋಟಿ ರೂ. ಹಣ ಎಲ್ಲಿ ಹೋಗುತ್ತಿದೆ? ಯಾರು ನುಂಗುತ್ತಿದ್ದಾರೆ ಎಂಬುದಕ್ಕೆ ಸರಕಾರ ಉತ್ತರಿಸಬೇಕು ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ಆಗ್ರಹಿಸಿದ್ದಾರೆ. ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ” ದಲ್ಲಿ ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಅವರು, ನಿಗದಿತ ಸಮಯಕ್ಕೆ ಗ್ಯಾರಂಟಿಗಳು ತಲುಪುತ್ತಿಲ್ಲವೇಕೆ? ಎಂದು ಪ್ರಶ್ನಿಸಿದರು. ಕಾಂಗ್ರೆಸ್ ಪಕ್ಷ ಮತ್ತು ಸರಕಾರದ ಒಳಗಡೆ ಗ್ಯಾರಂಟಿ ಕೊಡಬೇಕೇ ಬೇಡವೇ ಎಂಬ ವಿಚಾರ ಚರ್ಚೆಯಲ್ಲಿದೆ ಎಂದು ವಿಶ್ಲೇಷಿಸಿದರು. ಈ ಕಾರಣದಿಂದ ಜನರಿಗೆ ಅನುಮಾನ ಬರುವಂತಾಗಿದೆ ಎಂದರು. ದಲಿತರ ಹಣ 25 ಸಾವಿರ ಕೋಟಿಯನ್ನೂ ನುಂಗಿದ್ದೀರಿ. 52 ಸಾವಿರ ಕೋಟಿಯನ್ನು ಬಜೆಟ್‍ನಲ್ಲಿ ಇಟ್ಟಿದ್ದೀರಿ. 6 ತಿಂಗಳಿನಿಂದ ಅಕ್ಕಿ ಕೊಡುವುದಕ್ಕೂ ತಿಲಾಂಜಲಿ ಹಾಡಿದ್ದಾರೆ. ಮನೆ ಒಡತಿಗೆ ಕೊಡುತ್ತಿದ್ದ 2 ಸಾವಿರ ರೂ. ಬರುತ್ತಿಲ್ಲ. ಯುವನಿಧಿ ಮರೀಚಿಕೆಯಾಗಿದೆ; ಅದು ಯಾರಿಗೂ ಸಿಗುತ್ತಿಲ್ಲ ಎಂದು ಟೀಕಿಸಿದರು. ಹಣ ಎಲ್ಲಿ ಹೋಗಿದೆ? ಇದು ಸಕಾಲಕ್ಕೆ ಜನರಿಗೆ…

Read More

ಹಾವೇರಿ: ರಾಜ್ಯದಲ್ಲಿ ಖಾಲಿ ಇರುವ 3,000 ಸಾವಿರ ಲೈನ್‌ಮನ್‌ ಹುದ್ದೆಗಳ ನೇಮಕಾರತಿ ಪ್ರಕ್ರಿಯೆ ಏಪಿಲ್‌ ತಿಂಗಳೊಳಗಾಗಿ ಪೂರ್ಣಗೊಳ್ಳಲಿದೆ ಎಂದು ಇಂಧನ ಸಚಿವ ಕೆ.ಜೆ ಜಾರ್ಜ್‌ ಹೇಳಿದ್ದಾರೆ. ಇಲ್ಲಿನ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಸೋಮವಾರ ಜಿಲ್ಲೆಯ ಜನ ಪ್ರತಿನಿಧಿಗಳೊಂದಿಗೆ ನಡೆದ ಪ್ರಗತಿ ಪರಿಶೀಲನೆ ಸಭೆಯಲ್ಲಿ ದೊಳಗೆ ಲೈನ್‌ಮನ್‌ಗಳ ನೇಕ ಪ್ರಕ್ರಿಯೆ ಪೂರ್ಣಗೊಳ್ಳಲಿದ್ದು, ಬಳಿಕ ಸಮಸ್ಯೆ ಬಹುತೇಕ ಬಗೆಹರಿಯಲಿದೆ ಎಂದು ತಿಳಿಸಿದರು. ರಾಜ್ಯದಲ್ಲಿ ಕಳೆದ ವರ್ಷತೀವ್ರ ಬರಗಾಲವಿದ್ದುದರಿಂದ ವಿದ್ಯುತ್‌ ಕೊರತೆಯಿದ್ದರೂ ಕೇವಲ ಒಂದು ತಿಂಗಳು ಮಾತ್ರ ಸಮಸ್ಯೆಯಾಗಿತ್ತು. ಉಳಿದ 11 ತಿಂಗಳಿನಲ್ಲಿ ಸಮರ್ಪಕವಾಗಿ ವಿದ್ಯುತ್‌ ಪೂರೈಸಲಾಗಿದೆ. ಪ್ರಸ್ತಕ ವರ್ಷ 19 ಸಾವಿರ ಮೆಗಾ ವ್ಯಾಟ್ ವಿದ್ಯುತ್‌ ಬೇಡಿಕೆ ಇದ್ದ. ಗ್ರಾಹಕರಿಗೆ ಸಮರ್ಪಕ ವಿದ್ಯುತ್ ಪೂರೈಕೆಗೆ ಇಂಧನ ಇಲಾಖೆ ಸನ್ನದ್ಧವಾಗಿದೆ. ರಾಜ್ಯದಲ್ಲಿ ಯಾವುದೇ ವಿದ್ಯುತ್‌ ಕೊರತೆಯಿಲ್ಲ ಎಂದು ಸ್ಪಷ್ಟಪಡಿಸಿದರು. ಜನಪ್ರತಿನಿಧಿಗಳ ಸಲಹೆ ಪಡೆಯಿರಿ ಜನರು ತಮ್ಮ ತೊಂದರೆಗಳನ್ನು ಜನಪ್ರತಿನಿಧಿಗಳ ಬಳಿ ಹೇಳಿಕೊಳ್ಳುತ್ತಾರೆ. ಜತೆಗೆ ಜನಪ್ರತಿನಿಧಿಗಳಲ್ಲಿಯೂ ಕ್ಷೇತದ ಸಮಸ್ಯೆ ಬಗೆಹರಿಸಲು ಸಾಕಷ್ಟು ಯೋಚನೆಗಳಿರುತ್ತವೆ. ಆದ್ದರಿಂದ ಅವರನ್ನು ಭೇಟಿಯಾಗಿ…

Read More

ಶಿವಮೊಗ್ಗ : ಸರ್ವರಿಗೂ ಉದ್ಯೋಗ” ಶೀರ್ಷಿಕೆಯಡಿ ಫೆ.24 ರಂದು ನಗರದ ಎಟಿಎನ್‌ಸಿಸಿ ಕಾಲೇಜಿನಲ್ಲಿ ಜಿಲಾ ಮಟ್ಟದ ಉದ್ಯೋಗ ಮೇಳವನ್ನು ಆಯೋಜಿಸಲಾಗಿದೆ ಎಂದು ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಟಾನ ಪ್ರಾಧಿಕಾರದ ಅಧ್ಯಕ್ಷರಾದ ಸಿ.ಎಸ್.ಚಂದ್ರಭೂಪಾಲ ತಿಳಿಸಿದರು. ಜಿಲ್ಲಾ ಮಟ್ಟದ ಉದ್ಯೋಗ ಮೇಳ(ಕೌಶಲ್ಯ ಮತ್ತು ರೋಜ್‌ಗಾರ್ ಮೇಳ) ಆಯೋಜಿಸುವ ಕುರಿತು ಜಿ.ಪಂ ಸಭಾಂಗಣದಲ್ಲಿ ಸೋಮವಾರ ಏರ್ಪಡಿಸಲಾಗಿದ್ದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಕೌಶಲ್ಯಾವೃದ್ದಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರ ಇವರ ಸಹಯೋಗದೊಂದಿಗೆ ಫೆ.24ರ ಬೆಳಿಗ್ಗೆ 9.30 ಕ್ಕೆ ನಗರದ ಎಟಿಎನ್‌ಸಿ ಕಾಲೇಜಿನಲ್ಲಿ ಉದ್ಯೋಗ ಮೇಳ ಆಯೋಜಿಸಿದ್ದು, ಮಾನ್ಯ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಮಧು ಬಂಗಾರಪ್ಪ ಮೇಳವನ್ನು ಉದ್ಘಾಟಿಸುವರು. ಶಿಷ್ಟಾಚಾರದಂತೆ ಉದ್ಘಾಟನಾ ಕಾರ್ಯಕ್ರಮಕ್ಕೆ ಸಂಸತ್ ಸದಸ್ಯರು, ವಿಧಾನ ಸಭೆ ಹಾಗೂ ವಿಧಾನ ಪರಿಷತ್ ಶಾಸಕರು, ವಿವಿಧ ನಿಗಮ, ಮಂಡಳಿ,…

Read More

ಬೆಂಗಳೂರು: ರಾಜ್ಯ ಕಾಂಗ್ರೆಸ್ ಪಕ್ಷದ ಶಾಸಕರೇ ಕರ್ನಾಟಕ ಪೊಲೀಸರ ನಡೆಯ ವಿರುದ್ಧ ಕಿಡಿಕಾರಿದ್ದಾರೆ. ವಾಹನ ಹಿಡಿಯೋದು, ದುಡ್ಡು ವಸೂಲಿ ಮಾಡೋದೇ ಆಗಿದೆ ಅಂತ ಶಾಸಕ ವಿನಯ್ ಕುಲಕರ್ಣಿ ಕಿಡಿಕಾರಿದ್ದಾರೆ. ಧಾರವಾಡ ಹೊರವಲಯದಲ್ಲಿ ಪೊಲೀಸರು ವಾಹನಗಳನ್ನು ಹಿಡಿಯೋದನ್ನು ಕಂಡು ವಾಗ್ಧಾಳಿ ನಡೆಸಿದ್ದಾರೆ. ಪೊಲೀಸರಿಗೆ ಉದ್ಯೋಗವೇ ಇಲ್ಲ. ಬರೀ ವಸೂಲಿ ಮಾಡೋದು ಅಂತ ಕಿಡಿಕಾರಿದರು. ಪೊಲೀಸರು ರಸ್ತೆಯಲ್ಲಿ ನಿಂತು ವಾಹನ ಲೂಡಿ ಮಾಡ್ತಿದ್ದಾರೆ. ಟಂಟಂಗೆ 5 ರಿಂದ 10 ಸಾವಿರ ರೂಪಾಯಿ ದಂಡ ಹಾಕಿದ್ದಾರೆ. ದಾಖಲೆ ಪರಿಶೀಲಿಸ ನನ್ನ ಅಭ್ಯಂತರವಿಲ್ಲ. ಆದರೇ ಎಲ್ಲಾ ದಾಖಲೆ ಇದ್ದರೂ ಹಿಡುಕೊಂಡು ಕೂರ್ತಿರಿ ಎಂಬುದಾಗಿ ಗುಡುಗಿದರು. ಈ ಪೊಲೀಸರಿಂದ ವಾಹನ ಸವಾರರು ಬೇಸತ್ತು ಹೋಗಿದ್ದಾರೆ ಅಂತ ಪೊಲೀಸರ ನಡೆಗೆ ಧಾರವಾಡ ಕ್ಷೇತ್ರದ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ವಾಗ್ಧಾಳಿ ನಡೆಸಿದರು. https://kannadanewsnow.com/kannada/bengaluru-power-outages-in-these-areas-on-february-18-adds/ https://kannadanewsnow.com/kannada/a-p-natesh-elected-to-mayo-hall-section-of-bangalore-bar-association/

Read More

ಬೆಂಗಳೂರು : ಬೆಂಗಳೂರು ವಕೀಲರ ಸಂಘಕ್ಕೆ ಭಾನುವಾರ ನಡೆದ ಚುನಾವಣೆಯ ಫಲಿತಾಂಶ ಪ್ರಕಟವಾಗಿದ್ದು ಅಧ್ಯಕ್ಷರಾಗಿ ವಿವೇಕ್ ಸುಬ್ಬಾರೆಡ್ಡಿ ಪುನರಾಯ್ಕೆಯಾಗಿದ್ದಾರೆ. ಇನ್ನೂ ವಕೀಲರ ಸಂಘದ ಮೇಯೋ ಹಾಲ್ ವಿಭಾಗಕ್ಕೆ ನಟೇಶ್ ಆಯ್ಕೆಯಾಗಿದ್ದಾರೆ. ಮೆಯೋ ಹಾಲ್ ವಿಭಾಗದ ಕಾರ್ಯಕಾರಿ ಸಮಿತಿಯ ಸದಸ್ಯರಾಗಿ ನಟೇಶ್.ಎ.ಪಿ., ಮೋಹನ್.ಕೆ., ಗುಣಶೇಖರ್.ಡಿ, ಹಿತೇಶ್ ಕುಮಾರ್, ಭಕ್ತವತ್ಸಲ ಆಯ್ಕೆಯಾಗಿದ್ದಾರೆ. ಮಹಿಳಾ ಸಮಿತಿಗೆ ರವೀಲ ಕೆ.ವಿ., ಉದೀತ ರಮೇಶ್ ಆಯ್ಕೆಯಾಗಿದ್ದಾರೆ. ಅಧ್ಯಕ್ಷ, ಉಪಾಧ್ಯಕ್ಷ, ಖಜಾಂಚಿ ಸೇರಿ 38 ಹುದ್ದೆಗಳಿಗೆ 180 ಅಭ್ಯರ್ಥಿಗಳು ಸ್ಫರ್ಧಿಸಿದ್ದರು. https://kannadanewsnow.com/kannada/bengaluru-power-outages-in-these-areas-on-february-18-adds/ https://kannadanewsnow.com/kannada/centre-to-take-major-steps-for-crowd-control-at-railway-stations-ai-technology-to-be-used-report/

Read More

ರಾಮನಗರ: ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ವಿರುದ್ಧ ಸರ್ಕಾರಿ ಭೂಮಿ ಒತ್ತುವರಿ ಆರೋಪ ಕೇಳಿ ಬಂದಿತ್ತು. ಈ ಹಿನ್ನಲೆಯಲ್ಲಿ ಬಿಡದಿಯ ಕೇತಗಾನಹಳ್ಳಿ ಬಳಿಯಲ್ಲಿ ಕಂದಾಯ ಇಲಾಖೆಯ ಅಧಿಕಾರಿಗಳಿಂದ ಸರ್ವೇ ಕಾರ್ಯವನ್ನು ನಡೆಸಿದರು. ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಅವರು ಬಿಡದಿ ಬಳಿಯ ಕೇತಗಾನಹಳ್ಳಿಯಲ್ಲಿ 14 ಎಕರೆ ಸರ್ಕಾರಿ ಭೂಮಿ ಒತ್ತುವರಿ ಮಾಡಿರುವುದಾಗಿ ಆರೋಪ ಕೇಳಿ ಬಂದಿತ್ತು. ಈ ಹಿನ್ನಲೆಯಲ್ಲಿ ರೆವಿನ್ಯೂ ಇನ್ಸ್ ಪೆಕ್ಟರ್ ಪ್ರಕಾಶ್ ಹಾಗೂ ಗ್ರಾಮ ಆಡಳಿತಾಧಿಕಾರಿ ವಿಶಾಲಾಕ್ಷಿ ಜೊತೆಗೂಡಿ ಸರ್ವೆ ನಡೆಸಿದರು. ಸುಮಾರು 35ಕ್ಕೂ ಹೆಚ್ಚು ಸರ್ವೇ ನಂಬರ್ ಗಳನ್ನು ಇಂದು ಸರ್ವೇ ಮಾಡಿ ಪರಿಶೀಲಿಸಲಾಯಿತು. ಹೆಚ್ ಡಿ ಕೆ ಸಹೋದರಿ ಅನುಸೂಯ ಮಂಜುನಾಥ್ ಹಾಗೂ ಸಂಬಂಧಿ ಡಿಸಿ ತಮ್ಮಣ್ಣ ಹೆಸರಿನಲ್ಲಿರುವ 110 ಎಕರೆಗೂ ಹೆಚ್ಚು ಜಮೀನನ್ನು ಸರ್ವೇ ಅಧಿಕಾರಿಗಳು ಸರ್ವೇ ಮಾಡಿದರು. ಅಂದಹಾಗೇ ಹೆಚ್ ಡಿ ಕೆ 14 ಎಕರೆ ಸರ್ಕಾರಿ ಜಮೀನು ಒತ್ತುವರಿ ಮಾಡಿದ್ದಾರೆ ಅಂತ ಆರೋಪಿಸಿ ಸಾಮಾಜಿಕ ಹೋರಾಟಗಾರರು ದೂರು ನೀಡಿದ್ದರು. ಈ…

Read More

ಬೆಂಗಳೂರು: 220/66/11 kV ಎನ್.ಆರ್.ಎಸ್, 66/11 ಕೆ.ವಿ. ಟೆಲಿಕಾಂ ಲೇಔಟ್ ಉಪಕೇಂದ್ರದಲ್ಲಿ ಕೆಪಿಟಿಸಿಎಲ್ ವತಿಯಿಂದ ತುರ್ತು ನಿರ್ವಹಣಾ ಕಾಮಗಾರಿ ಹಿನ್ನೆಲೆಯಲ್ಲಿ ಈ ಕೆಳಕಂಡ ಪ್ರದೇಶಗಳಲ್ಲಿ ದಿನಾಂಕ 18.02.2025 (ಮಂಗಳವಾರ) ರಂದು ಬೆಳಗ್ಗೆ 10:00 ಯಿಂದ ಮಧ್ಯಾಹ್ನ 05:00 ಗಂಟೆವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ. ರಾಜಾಜಿನಗರ ೧ನೇ ಬ್ಲಾಕ್, 2ನೇ ಬ್ಲಾಕ್, ೩ನೇ ಬ್ಲಾಕ್, ೪ನೇ ಬ್ಲಾಕ್, ೫ನೇ ಬ್ಲಾಕ್ & ೬ನೇ ಬ್ಲಾಕ್ ಮತ್ತು ಸುತ್ತಮುತ್ತಲಿನ ಪ್ರದೇಶಗಳು, ಗುಬ್ಬಣ್ಣ ಇಂಡಸ್ಟ್ರೀಯಲ್ ಏರಿಯಾ, ಡಾ| ಮೋದಿ ಹಾಸ್ಪಿಟಲ್ ರೋಡ್, ಮಂಜುನಾಥನಗರ, ಶಿವನಗರ, ಅಗ್ರಹಾರ ದಾಸರಹಳ್ಳಿ, ವೆಸ್ಟ್ ಆಫ್ ಕಾರ್ಡ್ ರೋಡ್ ೧ನೇ ಕ್ರಾಸ್, ೨ನೇ ಕ್ರಾಸ್, ೩ನೇ ಕ್ರಾಸ್, ೪ನೇ ಕ್ರಾಸ್, ೫ನೇ ಕ್ರಾಸ್, ಮಹಾಗಣಪತಿನಗರ, ಕೆ.ಹೆಚ್.ಬಿ.ಕಾಲೋನಿ ೨ನೇ ಹಂತ, ಗಾಯಿತ್ರಿನಗರ ಡಿ ಬ್ಲಾಕ್, ಡಾ| ರಾಜ್‌ಕುಮಾರ್ ರೋಡ್, ರಾಜಾಜಿನಗರ ೬ ಬ್ಲಾಕ್, ಲಕ್ಷಿನಾರಾಯಣಪುರ, ಬ್ರಿಗೇಡ್ ಗೇಟ್ ವೆ, ಸುಬ್ರಮಣ್ಯನಗರ ಎ ಯಿಂದ ಡಿ ಬ್ಲಾಕ್, ವೆಸ್ಟ್ ಆಫ್ ಕಾರ್ಡ್ ರೋಡ್,…

Read More

ಉತ್ತರ ಕನ್ನಡ: ನೌಕಾನೆಲೆಯ ಮಾಹಿತಿ ಸೋರಿಕೆ ಸಂಬಂಧ ಈಗಾಗಲೇ ರಾಷ್ಟ್ರೀಯ ತನಿಖಾ ದಳದ ಅಧಿಕಾರಿಗಳು ಮೂವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದರು. ಇಂದು ಮತ್ತೆ ನೌಕಾನೆಲೆಗೆ ಆಗಮಿಸಿದ್ದು, ಮತ್ತಷ್ಟು ವಿಚಾರಣೆ ನಡೆಸುವ ಸಾಧ್ಯತೆ ಇದೆ ಎನ್ನಲಾಗಿದೆ. ಕಾರವಾರದ ನೌಕಾನೆಲೆಗೆ ಮತ್ತೆ ಎನ್ಐಎ ಅಧಿಕಾರಿಗಳು ಆಗಮಿಸಿದ್ದಾರೆ. 2024ರ ಆಗಸ್ಟ್ ನಲ್ಲಿ ವಿಚಾರಣೆ ನಡೆಸಿದ್ದಂತ ಎನ್ಐಎ ಇಂದು ಮತ್ತೆ ಆಗಮಿಸಿದ್ದಾರೆ. ಮೂವರನ್ನು ವಿಚಾರಣೆ ನಡೆಸಿ, ನೋಟಿಸ್ ನೀಡಿದ್ದರು. ಮುದಗಾದ ವೇತನ್ ತಾಂಡೇಲ್, ತೊಡೂರು ಸುನೀಲ್ ಹಾಗೂ ಅಕ್ಷಯ್ ನಾಯ್ಕ್ ಎಂಬುವರನ್ನು ಎನ್ಐಎ ವಿಚಾರಣೆ ನಡೆಸಿತ್ತು. ಇದೀಗ ಮತ್ತೆ ತನಿಖೆ ನಡೆಸಲು ಕಾರವಾರದ ನೌಕಾನೆಲೆಗೆ ಎನ್ಐಎ ತಂಡ ಆಗಮಿಸಿದೆ. ನೌಕಾನೆಲೆಯ ಅಧಿಕಾರಿಗಳನ್ನು ಭೇಟಿಯಾಗಲಿರುವಂತ ಎನ್ಐಎ, ಮಾಹಿತಿ ಸೋರಿಕೆ ಸಂಬಂಧ ತನಿಖೆ ನಡೆಸೋ ಸಾಧ್ಯತೆ ಇದೆ. https://kannadanewsnow.com/kannada/good-news-for-arya-vaishya-community-from-state-government/ https://kannadanewsnow.com/kannada/good-news-for-tcs-employees-salary-hike-likely-to-be-4-8-in-march/

Read More

ನವದೆಹಲಿ: ಭಾರತದ ಅತಿದೊಡ್ಡ ಐಟಿ ಸೇವೆಗಳ ಕಂಪನಿಯಾದ ಟಾಟಾ ಕನ್ಸಲ್ಟೆನ್ಸಿ ಸರ್ವೀಸಸ್ (Tata Consultancy Services – TCS) ಮಾರ್ಚ್ನಲ್ಲಿ ವಾರ್ಷಿಕ ವೇತನ ಹೆಚ್ಚಳವನ್ನು ಘೋಷಿಸುವ ನಿರೀಕ್ಷೆಯಿದೆ. ಏಪ್ರಿಲ್ 2025 ರಿಂದ ಜಾರಿಗೆ ಬರಲಿರುವ ಇನ್ಕ್ರಿಮೆಂಟ್ಗಳು ಶೇಕಡಾ 4 ರಿಂದ 8 ರ ನಡುವೆ ಉಳಿಯುವ ಸಾಧ್ಯತೆಯಿದೆ ಎಂದು ಎಕನಾಮಿಕ್ ಟೈಮ್ಸ್ ವರದಿ ಮಾಡಿದೆ. ವರದಿಯ ಪ್ರಕಾರ, ಐಟಿ ಕ್ಷೇತ್ರದ ಮೇಲೆ ಪರಿಣಾಮ ಬೀರುವ ಜಾಗತಿಕ ಆರ್ಥಿಕ ಸಂಕಷ್ಟಗಳ ಮಧ್ಯೆ ಹೆಚ್ಚಿನ ಉನ್ನತ ಶ್ರೇಣಿಯ ಕಂಪನಿಗಳಲ್ಲಿ ವಾರ್ಷಿಕ ಹೆಚ್ಚಳವು ಮಂದಗತಿಯನ್ನು ಕಂಡಿದೆ. ಕೋವಿಡ್ -19 ಅವಧಿಯಲ್ಲಿ, ಐಟಿ ಉದ್ಯೋಗಿಗಳು ಎರಡಂಕಿಗಳಲ್ಲಿ ವೇತನ ಹೆಚ್ಚಳವನ್ನು ಕಂಡರು. “ಹೆಚ್ಚಳವು ಶೇಕಡಾ 4-8 ರಷ್ಟಿರುತ್ತದೆ ಎಂದು ನಮಗೆ ತಿಳಿಸಲಾಗಿದೆ. ಉತ್ತಮವಾಗಿ ಕಾರ್ಯನಿರ್ವಹಿಸಿದ ವ್ಯವಹಾರ ಲಂಬಗಳು ಸಾಮಾನ್ಯವಾಗಿ ಹೆಚ್ಚಿನ ಹೆಚ್ಚಳವನ್ನು ಪಡೆಯುತ್ತವೆ ಆದರೆ ಒಟ್ಟಾರೆ ಇನ್ಕ್ರಿಮೆಂಟ್ಗಳು ತುಂಬಾ ಉತ್ತಮವಾಗಿಲ್ಲ “ಎಂದು ಉದ್ಯೋಗಿಯನ್ನು ಉಲ್ಲೇಖಿಸಿ ಇಟಿ ವರದಿ ತಿಳಿಸಿದೆ. 2022ರ ಹಣಕಾಸು ವರ್ಷದಲ್ಲಿ ಟಿಸಿಎಸ್ನಲ್ಲಿ ಸರಾಸರಿ ವೇತನ ಹೆಚ್ಚಳವು…

Read More

ಬೆಂಗಳೂರು: ರಾಜ್ಯ ಸರ್ಕಾರದಿದಂ ಆರ್ಯ ವೈಶ್ಯ ಸಮುದಾಯದವರಿಗೆ ಭರ್ಜರಿ ಸಿಹಿಸುದ್ದಿ ಎನ್ನುವಂತೆ ಸ್ವಯಂ ಉದ್ಯೋಗ ನೇರ ಸಾಲ ಯೋಜನೆಗೆ ಅರ್ಜಿ ಸಲ್ಲಿಸಿದ್ದವರಿಗೆ ಡಿಬಿಟಿ ಮೂಲಕ ವರ್ಗಾವಣೆಗೆ ಕಂದಾಯ ಸಚಿವ ಕೃಷ್ಣ ಬೈರೇಗೌಡ ಚಾಲನೆ ನೀಡಿದ್ದಾರೆ. ಈ ಬಗ್ಗೆ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿರುವಂತ ಅವರು, ಕರ್ನಾಟಕ ಆರ್ಯ ವೈಶ್ಯ ಸಮುದಾಯ ಅಭಿವೃದ್ಧಿ ನಿಗಮದ (ನಿಯಮಿತ) ವತಿಯಿಂದ ಪ್ರತಿ ವರ್ಷ ಹಲವಾರು ಉತ್ತಮ ಕೆಲಸಗಳನ್ನು ನಿರ್ವಹಿಸಲಾಗುತ್ತಿದೆ. ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಸಾಲ ನೀಡುವುದರಿಂದ, ಯುವ ಉದ್ಯಮಿಗಳಿಗೆ ಸೂಕ್ತ ಸಮಯದಲ್ಲಿ ಸಾಲ ಸೌಲಭ್ಯ ನೀಡುವವರೆಗೆ ಹಲವು ಮಹತ್ವದ ಯೋಜನೆಗಳನ್ನು ನಿಗಮದ ಅಡಿಯಲ್ಲಿ ನಿರ್ವಹಿಸಲಾಗುತ್ತಿದೆ ಎಂದಿದ್ದಾರೆ. ಸ್ವಯಂ ಉದ್ಯೋಗ ನೇರ ಸಾಲ ಯೋಜನೆ, ಅರಿವು ಶೈಕ್ಷಣಿಕ ಸಾಲ ಯೋಜನೆ, ಬ್ಯಾಂಕ್‌ಗಳ ಸಹಯೋಗದೊಂದಿಗೆ ಆರ್ಯ ವೈಶ್ಯ ಆಹಾರ ವಾಹಿನಿ/ವಾಹಿನಿ ಯೋಜನೆ, ವಾಸವಿ ಜಲಶಕ್ತಿ ಯೋಜನೆ ನಿಗಮದ ಅಡಿಯಲ್ಲಿ ಸಮಾಜದ ಜನರಿಗೆ ಸಹಾಯ ಹಸ್ತ ಚಾಚುತ್ತಿರುವ ಪ್ರಮುಖ ಯೋಜನೆಯಾಗಿದ್ದು, ರಾಜ್ಯದಲ್ಲಿಯೇ ಪ್ರಪ್ರಥಮ ಬಾರಿಗೆ ಸಾಲ ಪಡೆದು ಸಕಾಲದಲ್ಲಿ ಸಾಲ ತೀರಿಸಿದಂತಹ…

Read More