Subscribe to Updates
Get the latest creative news from FooBar about art, design and business.
Author: kannadanewsnow09
ಗಾಝಾದಲ್ಲಿ ಇಸ್ರೇಲ್ ಮತ್ತು ಹಮಾಸ್ ನಡುವಿನ ಕದನ ವಿರಾಮ ಭಾನುವಾರ ಮಧ್ಯಾಹ್ನ ಪ್ರಾರಂಭವಾಯಿತು. ಕೆಲವು ಗಂಟೆಗಳ ನಂತರ ಒತ್ತೆಯಾಳುಗಳ ಬಿಡುಗಡೆಯನ್ನು ಯೋಜಿಸಲಾಗಿದೆ. ಇದು ಪಶ್ಚಿಮ ಏಷ್ಯಾವನ್ನು ಮುಳುಗಿಸಿದ 15 ತಿಂಗಳ ಯುದ್ಧವನ್ನು ಕೊನೆಗೊಳಿಸುವ ಆರಂಭವನ್ನು ಸೂಚಿಸುತ್ತದೆ. ಹಮಾಸ್ ಬಿಡುಗಡೆ ಮಾಡಬೇಕಾದ ಒತ್ತೆಯಾಳುಗಳ ಪಟ್ಟಿಯನ್ನು ಇಸ್ರೇಲ್ಗೆ ಹಸ್ತಾಂತರಿಸಿದ ನಂತರ ಕದನ ವಿರಾಮವು ಆರಂಭದಲ್ಲಿ ವಿಳಂಬವಾಯಿತು ಮತ್ತು ಪ್ರಾರಂಭವಾಯಿತು. ಇದೀಗ ಗಾಝಾದಲ್ಲಿ ಮೂವರು ಇಸ್ರೇಲಿ ಒತ್ತೆಯಾಳುಗಳನ್ನು ಬಿಡುಗಡೆ ಮಾಡಲಾಗಿದೆ. ಮೂರು ಹಂತದ ಕದನ ವಿರಾಮ ಈಗ ಜಾರಿಗೆ ಬಂದಿದ್ದು, ಹಮಾಸ್ ರೋಮಿ ಗೊನೆನ್, ಎಮಿಲಿ ದಮರಿ ಮತ್ತು ಡೋರಾನ್ ಸ್ಟೈನ್ಬ್ರೆಚರ್ ಅವರನ್ನು ಗಾಝಾ ಸೆರೆಯಿಂದ ಬಿಡುಗಡೆ ಮಾಡುವ ನಿರೀಕ್ಷೆಯಿದೆ. ಇದಕ್ಕೆ ಪ್ರತಿಯಾಗಿ, ಕದನ ವಿರಾಮದ ಮೊದಲ ದಿನದಂದು ಕೈದಿ-ಒತ್ತೆಯಾಳುಗಳ ವಿನಿಮಯದ ಭಾಗವಾಗಿ ಬಿಡುಗಡೆಯಾಗಲಿರುವ 90 ಫೆಲೆಸ್ತೀನ್ ಕೈದಿಗಳ ಪಟ್ಟಿಯನ್ನು ಹಮಾಸ್ ನಿರೀಕ್ಷಿಸುತ್ತಿದೆ. ಗಾಝಾ ಗಡಿಯ ಬಳಿ ಒತ್ತೆಯಾಳುಗಳನ್ನು ಸ್ವಾಗತಿಸಲು ಇಸ್ರೇಲ್ ಸಿದ್ಧತೆ ನಡೆಸುತ್ತಿದ್ದು, ಹಮಾಸ್ ಅವರನ್ನು ಭಾನುವಾರದ ನಂತರ ರೆಡ್ ಕ್ರಾಸ್ ಗೆ ಹಸ್ತಾಂತರಿಸಿದೆ.…
ಬೆಳಗಾವಿ: ಗಾಂಧಿ ಭಾರತದ ಅಂಗವಾಗಿ ಜ.21ರಂದು ನಡೆಯಲಿರುವ ಗಾಂಧಿ ಪ್ರತಿಮೆ ಅನಾವರಣ ಹಾಗೂ ಜೈ ಬಾಪು, ಜೈ ಭೀಮ್, ಜೈ ಸಂವಿಧಾನ ಸಮಾವೇಶದ ತಯಾರಿ ನಡೆಯುತ್ತಿದ್ದು, ಸಚಿವರುಗಳು ತಮ್ಮ ಜವಾಬ್ದಾರಿ ನಿಭಾಯಿಸುತ್ತಿದ್ದಾರೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ಬೆಳಗಾವಿಯ ಸರ್ಕಿಟ್ ಹೌಸ್, ಕಪಿಲೇಶ್ವರ ದೇವಾಲಯ ಹಾಗೂ ಫಿರೋಜ್ ಸೇಠ್ ಅವರ ನಿವಾಸದ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಭಾನುವಾರ ಪ್ರತಿಕ್ರಿಯೆ ನೀಡಿದರು. “ಜ.21ರ ಕಾರ್ಯಕ್ರಮಕ್ಕೆ ಸಕಲ ಸಿದ್ಧತೆಗಳು ಭರದಿಂದ ಸಾಗುತ್ತಿದೆ. ಇಂದು ಮಧ್ಯಾಹ್ನ ಕಾರ್ಯಕ್ರಮಕ್ಕೆ ಬರುವವರ ವಾಹನ ನಿಲುಗಡೆ ಸ್ಥಳ ಪರಿಶೀಲನೆ ಮಾಡಲಿದ್ದೇನೆ. ಆಹಾರ ಸಮಿತಿ ಜವಾಬ್ದಾರಿ ಹೊತ್ತಿರುವ ಸಚಿವರಾದ ಕೆ.ಹೆಚ್. ಮುನಿಯಪ್ಪ, ವಸತಿ ಸಮಿತಿ ಮುಖ್ಯಸ್ಥರಾದ ಸುಧಾಕರ್ ಅವರು ಈಗಾಗಲೇ ಬೆಳಗಾವಿಗೆ ಆಗಮಿಸಿದ್ದು, ಸ್ವಾಗತ ಸಮಿತಿ ಮುಖ್ಯಸ್ಥರಾದ ಪರಮೇಶ್ವರ್ ಅವರು ಶೀಘ್ರದಲ್ಲೇ ಆಗಮಿಸಲಿದ್ದಾರೆ. ನಾವು ಯಾರಿಗೆಲ್ಲ ಜವಾಬ್ದಾರಿ ವಹಿಸಿದ್ದೇವೋ ಅವರು ಸಮರ್ಥವಾಗಿ ನಿಭಾಯಿಸುತ್ತಿದ್ದಾರೆ. ಜಿಲ್ಲಾ ಸಚಿವರು ಸಂಘಟನೆಯಲ್ಲಿ ತೊಡಗಿದ್ದಾರೆ” ಎಂದು ತಿಳಿಸಿದರು. “21ರ ಬೆಳಗ್ಗೆ ಎಐಸಿಸಿ ಅಧ್ಯಕ್ಷರಾದ…
ಗುವಾಹಟಿ: ‘ಭಾರತೀಯ ರಾಜ್ಯ’ ಎಂಬ ಹೇಳಿಕೆಗಾಗಿ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ವಿರುದ್ಧ ಅಸ್ಸಾಂನ ಗುವಾಹಟಿಯಲ್ಲಿ ಎಫ್ಐಆರ್ ದಾಖಲಿಸಲಾಗಿದೆ. ಬಿಜೆಪಿ ಆಡಳಿತದ ಗುವಾಹಟಿಯ ಪಾನ್ ಬಜಾರ್ ಪೊಲೀಸ್ ಠಾಣೆಯಲ್ಲಿ ರಾಹುಲ್ ಗಾಂಧಿ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ ಎಂದು ಸುದ್ದಿ ಸಂಸ್ಥೆ ಎಎನ್ಐ ವರದಿ ಮಾಡಿದೆ. ಭಾರತದ ಸಾರ್ವಭೌಮತ್ವ, ಏಕತೆ ಮತ್ತು ಸಮಗ್ರತೆಗೆ ಅಪಾಯವನ್ನುಂಟು ಮಾಡುವ ಕೃತ್ಯಗಳಿಗಾಗಿ ಭಾರತೀಯ ನ್ಯಾಯ ಸಂಹಿತೆಯ ಸೆಕ್ಷನ್ 152 ಮತ್ತು 197 (1) ಡಿ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಮೊನ್ಜಿತ್ ಚೇಟಿಯಾ ತಮ್ಮ ದೂರಿನಲ್ಲಿ, ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕ ‘ಅನುಮತಿಸಲಾದ ವಾಕ್ ಸ್ವಾತಂತ್ರ್ಯದ ಮಿತಿಗಳನ್ನು ಮೀರಿದ್ದಾರೆ’ ಮತ್ತು ರಾಹುಲ್ ಗಾಂಧಿ ‘ಸಾರ್ವಜನಿಕ ಸುವ್ಯವಸ್ಥೆ ಮತ್ತು ರಾಷ್ಟ್ರೀಯ ಭದ್ರತೆಗೆ ಗಂಭೀರ ಬೆದರಿಕೆಯಾಗಿದ್ದಾರೆ’ ಎಂದು ಹೇಳಿದ್ದಾರೆ. “ತನ್ನ ಹೋರಾಟವು ‘ಭಾರತೀಯ ರಾಜ್ಯದ ವಿರುದ್ಧ’ ಎಂದು ಘೋಷಿಸುವ ಮೂಲಕ, ಆರೋಪಿಯು ಪ್ರಜ್ಞಾಪೂರ್ವಕವಾಗಿ ಜನರಲ್ಲಿ ವಿಧ್ವಂಸಕ ಚಟುವಟಿಕೆಗಳು ಮತ್ತು ದಂಗೆಯನ್ನು ಪ್ರಚೋದಿಸಿದ್ದಾನೆ. ಇದು ರಾಜ್ಯದ ಅಧಿಕಾರವನ್ನು ನಿಷ್ಕ್ರಿಯಗೊಳಿಸುವ ಮತ್ತು ಅದನ್ನು ಪ್ರತಿಕೂಲ…
ಬೆಂಗಳೂರು: ಬಸವನಗೌಡ ಪಾಟೀಲ್ ಯತ್ನಾಳ ಹಾವು ರಮೇಶ್ ಜಾರಕಿಹೊಳಿ ವಿರುದ್ದ ಶೀಘ್ರದಲ್ಲೇ ಹೈಕಮಾಂಡ್ ಗೆ ದೂರು ನೀಡುವುದಾಗಿ ಮಾಜಿ ಸಚಿವ ರೇಣುಕಾಚಾರ್ಯ ಹೇಳಿದ್ದಾರೆ. ಇಂದು ಬೆಂಗಳೂರಿನಲ್ಲಿ ಸುದ್ದಿಗಾರೊಂದಿಗೆ ಮಾತನಾಡಿದ ಅವರು ಯತ್ನಾಳ್ ಅವರನ್ನು ಈ ಹಿಂದೆ ಪಕ್ಷ ಉಚ್ಚಾಟನೆ ಮಾಡಿತ್ತು ಆಗ ಯಡಿಯೂರಪ್ಪ ಅವರ ಕಾಲಿಗೆ ಬಿದ್ದಿ ಬಿಜೆಪಿಗೆ ಬಂದಿದ್ದೀರಿ. ನಿಮಗೆ ಯಡಿಯೂರಪ್ಪ ಬಗ್ಗೆ ಮಾತಾಡಲು ಯಾವ ನೈತಿಕತೆ ಇದೆ? ಅಂತ ಪ್ರಶ್ನೆ ಮಾಡಿದರು. ಯಡಿಯೂರಪ್ಪ ಅವರು ಕಾಲಿಗೆ ಚಕ್ರ ಕಟ್ಟಿ, ಸೈಕಲ್, ಸ್ಕೂಟರ್, ಬಸ್, ಕಾರಲ್ಲಿ ಓಡಾಡಿ ಪಕ್ಷ ಕಟ್ಟಿದ್ದಾರೆ ಯಡಿಯೂರಪ್ಪ ಪಕ್ಷ ಕಟ್ತಿದ್ದಾಗ ಯತ್ನಾಳದ ಕಣ್ ಬಿಟ್ಟಿರಲಿಲ್ಲ ಎಚ್ಚರಿಕೆಯಿಂದ ಯತ್ನಾಳ್ ಮಾತನಾಡಬೇಕು ಹೀಗೆಲ್ಲ ಮಾತಾಡೋದನ್ನ ಇನ್ನುಮುಂದೆ ಸಹಿಸಲು ಸಾದ್ಯವಿಲ್ಲ. ವಿಜಯೇಂದ್ರ ಅವರರನ್ನ ಅಧ್ಯಕ್ಷ ಮಾಡಿದ್ದು ಹೈಕಮಾಂಡ್ ವಿಜಯೇಂದ್ರ ಅವರಿಗೆ ಬೈದರೆ ಹೈಕಮಾಂಡ್ ಗೆ ಬೈದಂತೆ. ನೀವು ಏನೇ ಮಾಡಿದ್ರೂ ವಿಜಯೇಂದ್ರ ವರ್ಚಸ್ಸು ಕುಗ್ಗಲ್ಲ. ನಿಮಗೆ ಯಡಿಯೂರಪ್ಪ ಬಗ್ಗೆ ಮಾತಾಡೋಕ್ಕೆ ಯಾವ ನೈತಿಕತೆ ಇದೆ? ಯತ್ನಾಳ್ ಒಬ್ಬ ಗೋಮುಖ ವ್ಯಾಘ್ರ? ಯತ್ನಾಳ್ ಕಾಂಗ್ರೆಸ್…
ಬೆಂಗಳೂರು: ಕುಂಭಮೇಳದ ಸಮಯದಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ಪೂರೈಸಲು, ಶ್ರೀ ಸಿದ್ಧಾರೂಢ ಸ್ವಾಮೀಜಿ ಹುಬ್ಬಳ್ಳಿ ಮತ್ತು ಉತ್ತರ ಪ್ರದೇಶದ ತುಂಡ್ಲಾ ನಿಲ್ದಾಣಗಳ ನಡುವೆ ಎರಡು ವಿಶೇಷ ಎಕ್ಸ್ ಪ್ರೆಸ್ ರೈಲುಗಳನ್ನು ಓಡಿಸಲು ರೈಲ್ವೆ ಮಂಡಳಿ ಅನುಮೋದನೆ ನೀಡಿದೆ. ಈ ರೈಲುಗಳು ಯಾತ್ರಾರ್ಥಿಗಳಿಗೆ ಅನುಕೂಲಕರ ಪ್ರಯಾಣದ ಆಯ್ಕೆಗಳನ್ನು ಒದಗಿಸುವ ಗುರಿಯನ್ನು ಹೊಂದಿವೆ. ವಿವರಗಳು ಈ ಕೆಳಗಿನಂತಿವೆ: 1.ಹುಬ್ಬಳ್ಳಿ-ತುಂಡ್ಲಾ ನಿಲ್ದಾಣಗಳ ನಡುವೆ ಒಂದು ಟ್ರಿಪ್ ವಿಶೇಷ ರೈಲು (07379/07380) ಸಂಚಾರ ರೈಲು ಸಂಖ್ಯೆ 07379 ಎಸ್ಎಸ್ಎಸ್ ಹುಬ್ಬಳ್ಳಿ-ತುಂಡ್ಲಾ ವಿಶೇಷ ಎಕ್ಸ್ ಪ್ರೆಸ್ ರೈಲು ಜನವರಿ 20 ರಂದು (ಸೋಮವಾರ) 00:45 ಗಂಟೆಗೆ ಎಸ್ಎಸ್ಎಸ್ ಹುಬ್ಬಳ್ಳಿಯಿಂದ ಹೊರಟು, ಜನವರಿ 22 ರಂದು (ಬುಧವಾರ) 02:30 ಗಂಟೆಗೆ ಉತ್ತರ ಪ್ರದೇಶದ ತುಂಡ್ಲಾ ನಿಲ್ದಾಣಕ್ಕೆ ತಲುಪಲಿದೆ. ರೈಲು ಸಂಖ್ಯೆ 07380 ತುಂಡ್ಲಾ-ಎಸ್ಎಸ್ಎಸ್ ಹುಬ್ಬಳ್ಳಿ ವಿಶೇಷ ಎಕ್ಸ್ ಪ್ರೆಸ್ ರೈಲು ಜನವರಿ 23 ರಂದು (ಗುರುವಾರ) 16:00 ಗಂಟೆಗೆ ತುಂಡ್ಲಾದಿಂದ ಹೊರಟು, ಜನವರಿ 25 ರಂದು (ಶನಿವಾರ) 18:40 ಗಂಟೆಗೆ ಹುಬ್ಬಳ್ಳಿ…
ಶಿವಮೊಗ್ಗ: ಕೆಲ ದಿನಗಳ ಹಿಂದೆ ಜಿಲ್ಲೆಯ ಸಾಗರ ತಾಲ್ಲೂಕಿನ ಮಾದಾಪುರ ಗ್ರಾಮದಲ್ಲಿ ಆನೆ ದಾಳಿ ನಡೆಸಿ, ಬೆಳೆ ಹಾನಿಗೊಳಿಸಿತ್ತು. ಈ ಸ್ಥಳಕ್ಕೆ ಸಾಗರ ಶಾಸಕ ಗೋಪಾಲಕೃಷ್ಣ ಬೇಳೂರು ಅವರು ಭೇಟಿ ನೀಡಿ, ಪರಿಶೀಲಿಸಿದರು. ಇಂದು ಸಾಗರ ಶಾಸಕಹಾಗೂ ಕರ್ನಾಟಕ ರಾಜ್ಯ ಅರಣ್ಯ ಕೈಗಾರಿಕಾ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಗೋಪಾಲಕೃಷ್ಣ ಬೇಳೂರು ಅವರು ಮಾದಾಪುರದಲ್ಲಿ ಆನೆ ದಾಳಿಯಿಂದ ಹಾನಿಗೊಳಗಾದ ಪ್ರದೇಶಗಳಿಗೆ ಭೇಟಿ ನೀಡಿ, ಪರಿಶೀಲನೆ ನಡೆಸಿದರು. ಇನ್ನೂ ಆನೆ ದಾಳಿಯಿಂದ ಬೆಳೆಹಾನಿಗೊಂಡಿದ್ದಂತ ರೈತನಿಗೆ ಧೈರ್ಯ ತುಂಬಿದಂತ ಅವರು, ಬೆಳೆಹಾನಿಗೆ ಸರ್ಕಾರದಿಂದ ಪರಿಹಾರ ಕೊಡಿಸುವಂತ ಭರವಸೆಯನ್ನು ನೀಡಿದರು. ಜೊತೆಗೆ ಆನೆ ದಾಳಿಯಿಂದ ಬೆಳೆ ನಷ್ಟ ಹೊಂದಿದಂತ ರೈತರಿಗೆ ವೈಯಕ್ತಿಕವಾಗಿ ಧನ ಸಹಾಯವನ್ನು ಮಾಡಿದರು. ಇದೇ ಸಂದರ್ಭದಲ್ಲಿ ಸ್ಥಳದಲ್ಲಿದ್ದಂತ ಅರಣ್ಯ ಇಲಾಖೆಯ ಅಧಿಕಾರಿಗಳಿಗೆ ಆನೆಗಳ ದಾಳಿಯಿಂದ ರೈತರ ಜಮೀನು, ತೋಟಗಳಿಗೆ ಹಾನಿಯಾಗದಂತೆ ಸೂಕ್ತ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಸೂಚಿಸಿದರು. https://kannadanewsnow.com/kannada/kumbh-mela-to-be-held-at-t-narasipur-in-mysuru/ https://kannadanewsnow.com/kannada/breaking-priests-bless-deputy-cm-dk-shivakumar-with-trident-as-next-cm/ https://kannadanewsnow.com/kannada/now-bone-marrow-transplant-free-under-ayushman-bharat-arogya-karnataka-scheme/
ಮೈಸೂರು: ಉತ್ತರ ಪ್ರದೇಶದ ಪ್ರಯಾಗ್ ರಾಜ್ ನಲ್ಲಿನ ಮಹಾ ಕುಂಭಮೇಳದ ಬೆನ್ನಲ್ಲೇ ಕರ್ನಾಟಕದಲ್ಲೂ ಕುಂಭಮೇಳ ಆಯೋಜಿಸಲು ಡೇಟ್ ಫಿಕ್ಸ್ ಆಗಿದೆ. ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿ ಮಾಹಿತಿ ನೀಡಿದಂತ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಹೆಚ್.ಸಿ ಮಹದೇವಪ್ಪ ಅವರು, ಫೆಬ್ರವರಿ 10, 11 ಮತ್ತು 12ರಂದು ಮೂರು ದಿನಗಳ ಕಾಲ ಟಿ.ನರಸೀಪುರದ ಮೂರು ನದಿಗಳ ಸಂಗಮ ಸ್ಥಳದಲ್ಲಿ ಕುಂಭಮೇಳವನ್ನು ನಡೆಸಲು ನಿರ್ಧರಿಸಿರುವುದಾಗಿ ತಿಳಿಸಿದರು. ಪ್ರತಿ ಮೂರು ವರ್ಷಗಳಿಗೊಮ್ಮೆ ಟಿ.ನರಸೀಪುರದಲ್ಲಿ ಕುಂಭಮೇಳ ನಡೆಯುತ್ತದೆ. ಇದಕ್ಕಾಗಿ ರಾಜ್ಯ ಸರ್ಕಾರಕ್ಕೆ 10 ಕೋಟಿ ನೀಡುವಂತೆ ಜಿಲ್ಲಾಡಳಿತ ಪ್ರಸ್ತಾವನೆಯನ್ನು ಸಲ್ಲಿಸಿದೆ. ಕಳೆದ ಬಾರಿ 4 ಕೋಟಿ ಕೊಡಲಾಗಿತ್ತು. ಈ ಬಾರಿ 5 ರಿಂದ 6 ಕೋಟಿ ನೀಡುವ ನಿರೀಕ್ಷೆಯಿದೆ ಎಂದರು. ಮೂರು ದಿನಗಳ ಕಾಲ ಜನರು ಹೆಚ್ಚಿನ ಸಂಖ್ಯೆಯಲ್ಲಿ ಟಿ.ನರಸೀಪುರದಲ್ಲಿನ ಕುಂಭಮೇಳದಲ್ಲಿ ಭಾಗಿಯಾಗುವ ಸಾಧ್ಯತೆ ಇದೆ. ನಾನು ಕೂಡ ಪುಣ್ಯಸ್ನಾನ ಮಾಡುತ್ತೇನೆ. ನನಗೆ ಧಾರ್ಮಿಕ ಆಚರಣೆಗಳಿಗೆ ವೈಯಕ್ತಿಕವಾಗಿ ವಿರೋಧವಿಲ್ಲ. ಅವರವರ ಧಾರ್ಮಿಕ ನಂಬಿಕೆಯಂತೆ ಆಚರಣೆ ಮಾಡುತ್ತಾರೆ. ಇದು ಸಂವಿಧಾನಾತ್ಮಕ…
ಉತ್ತರ ಪ್ರದೇಶ: ಪ್ರಯಾಗ್ ರಾಜ್ ನಲ್ಲಿ ಮಹಾಕುಂಭ ಮೇಳ ನಡೆಯುತ್ತಿದೆ. ಇಂದು ಸೆಕ್ಟರ್ 19ರಲ್ಲಿ ಗ್ಯಾಸ್ ಸಿಲಿಂಡರ್ ಸ್ಪೋಟಗೊಂಡು ಬೆಂಕಿ ಅವಘಡ ಸಂಭವಿಸಿ ಹಲವು ಟೆಂಟ್ ಗಳು ಸುಟ್ಟು ಭಸ್ಮವಾಗಿದ್ದವು. ಈ ಘಟನಾ ಸ್ಥಳಕ್ಕೆ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಭೇಟಿ ನೀಡಿದ್ದಾರೆ. https://twitter.com/ANI/status/1880944252836098415 ಉತ್ತರ ಪ್ರದೇಶದ ಪ್ರಯಾಗ್ ರಾಜ್ ನ ಮಹಾಕುಂಭ ಮೇಳದ ಸೆಕ್ಟರ್ 19ರಲ್ಲಿ ಸಿಲಿಂಡರ್ ಸ್ಪೋಟದಿಂದಾಗಿ ಟೆಂಟ್ ಒಂದರಲ್ಲಿ ಅಗ್ನಿ ಅವಘಡ ಉಂಟಾಗಿತ್ತು. ಈ ಬಳಿಕ ಅದೇ ಸಾಲಿನಲ್ಲಿನ ಇತರೆ ಟೆಂಟ್ ಗಳಿಗೂ ಬೆಂಕಿ ವ್ಯಾಪಿಸಿದ ಪರಿಣಾಮ 12ಕ್ಕೂ ಹೆಚ್ಚು ಸಿಲಿಂಡರ್ ಸ್ಪೋಟಗೊಂಡು ಭೀಕರ ಅಗ್ನಿ ದುರಂತವೇ ಸಂಭವಿಸಿದೆ. https://twitter.com/IndiaToday/status/1880938790434513136 ಪ್ರಯಾಗ್ರಾಜ್ನಲ್ಲಿ ನಡೆದ ಮಹಾಕುಂಭಮೇಳ 2025 ರಲ್ಲಿ ಸಂಭವಿಸಿದ ಅಗ್ನಿ ದುರಂತದ ಬಗ್ಗೆ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಮಾಹಿತಿ ಪಡೆದಿದ್ದಾರೆ. ಅಲ್ಲದೇ ಅಗ್ನಿಶಾಮಕ ಸಿಬ್ಬಂದಿಗಳಿಗೆ ಬೆಂಕಿ ನಿಯಂತ್ರಣಕ್ಕೆ ತರುವಂತೆ ಸೂಚಿಸಿದ್ದಾರೆ. ಜೊತೆಗೆ ಹಿರಿಯ ಅಧಿಕಾರಿಗಳಿಗೆ ಸ್ಥಳದಲ್ಲೇ ಇದ್ದು ಬೆಂಕಿ ನಂದಿಸುವ…
ಉತ್ತರಪ್ರದೇಶ: ಇಲ್ಲಿನ ಪ್ರಯಾಗ್ ರಾಜ್ ನಲ್ಲಿ ನಡೆಯುತ್ತಿರುವಂತ ಮಹಾಕುಂಭಮೇಳದಲ್ಲಿ ಭೀಕರ ಅಗ್ನಿ ಅವಘಡ ಸಂಭವಿಸಿದೆ. ಕ್ಷಣ ಕ್ಷಣಕ್ಕೂ ಗಾಳಿಯಿಂದಾಗಿ ಬೆಂಕಿ ಒಂದು ಟೆಂಟ್ ನಿಂದ ಮತ್ತೊಂದು ಟೆಂಟಿಗೆ ವ್ಯಾಪಿಸುತ್ತಿದ್ದು, ನಿಯಂತ್ರಣಕ್ಕೆ ತರಲು ಅಗ್ನಿಶಾಮಕ ಸಿಬ್ಬಂದಿಗಳು ಹರಸಾಹಸ ಪಡುತ್ತಿದ್ದಾರೆ. https://twitter.com/ANI/status/1880944252836098415 ಉತ್ತರ ಪ್ರದೇಶದ ಪ್ರಯಾಗ್ ರಾಜ್ ನ ಮಹಾಕುಂಭ ಮೇಳದ ಸೆಕ್ಟರ್ 19ರಲ್ಲಿ ಸಿಲಿಂಡರ್ ಸ್ಪೋಟದಿಂದಾಗಿ ಟೆಂಟ್ ಒಂದರಲ್ಲಿ ಅಗ್ನಿ ಅವಘಡ ಉಂಟಾಗಿತ್ತು. ಈ ಬಳಿಕ ಅದೇ ಸಾಲಿನಲ್ಲಿನ ಇತರೆ ಟೆಂಟ್ ಗಳಿಗೂ ಬೆಂಕಿ ವ್ಯಾಪಿಸಿದ ಪರಿಣಾಮ 12ಕ್ಕೂ ಹೆಚ್ಚು ಸಿಲಿಂಡರ್ ಸ್ಪೋಟಗೊಂಡು ಭೀಕರ ಅಗ್ನಿ ದುರಂತವೇ ಸಂಭವಿಸಿದೆ. https://twitter.com/IndiaToday/status/1880938790434513136 ಪ್ರಯಾಗ್ರಾಜ್ನಲ್ಲಿ ನಡೆದ ಮಹಾಕುಂಭಮೇಳ 2025 ರಲ್ಲಿ ಸಂಭವಿಸಿದ ಅಗ್ನಿ ದುರಂತದ ಬಗ್ಗೆ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಮಾಹಿತಿ ಪಡೆದಿದ್ದಾರೆ. ಅಲ್ಲದೇ ಅಗ್ನಿಶಾಮಕ ಸಿಬ್ಬಂದಿಗಳಿಗೆ ಬೆಂಕಿ ನಿಯಂತ್ರಣಕ್ಕೆ ತರುವಂತೆ ಸೂಚಿಸಿದ್ದಾರೆ. ಜೊತೆಗೆ ಹಿರಿಯ ಅಧಿಕಾರಿಗಳಿಗೆ ಸ್ಥಳದಲ್ಲೇ ಇದ್ದು ಬೆಂಕಿ ನಂದಿಸುವ ಕಾರ್ಯದಲ್ಲಿ ಅಗತ್ಯ ಕ್ರಮ ಕೈಗೊಳ್ಳುವಂತೆ ತಿಳಿಸಿದ್ದಾರೆ. https://twitter.com/ANI/status/1880941229791494518…
ಪ್ರಯಾಗ್ ರಾಜ್: ಉತ್ತರ ಪ್ರದೇಶದ ಪ್ರಯಾಗ್ ರಾಜ್ ನ ಮಹಾಕುಂಭಮೇಳದಲ್ಲಿ ಅಗ್ನಿ ಅವಘಡ ಸಂಭವಿಸಿದೆ. ಉಡಾಸಿನ್ ಕ್ಯಾಂಪ್ ಪ್ರದೇಶದ ಸೆಕ್ಟರ್ 19ರಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಬೆಂಕಿ ಕಾಣಿಸಿಕೊಂಡ ಕೂಡಲೇ ನಾಲ್ಕು ಅಗ್ನಿಶಾಮಕ ವಾಹನಗಳು ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸುವ ಕಾರ್ಯಾಚರಣೆಯನ್ನು ಪ್ರಾರಂಭಿಸಿದವು. ಎಸ್ಡಿಆರ್ಎಫ್ ತಂಡವೂ ಸ್ಥಳದಲ್ಲಿತ್ತು. ತ್ವರಿತ ಪ್ರಯತ್ನಗಳ ನಂತರ, ಬೆಂಕಿಯನ್ನು ನಿಯಂತ್ರಣಕ್ಕೆ ತರಲಾಯಿತು. https://twitter.com/ANI/status/1880934473359102359 ಬೆಂಕಿಯ ಕಾರಣ ಇನ್ನೂ ಸ್ಪಷ್ಟವಾಗಿಲ್ಲ, ಆದಾಗ್ಯೂ, ಅಧಿಕಾರಿಗಳ ಜಾಗರೂಕತೆಯು ನಿಮಿಷಗಳಲ್ಲಿ ಬೆಂಕಿಯನ್ನು ನಂದಿಸಿದ್ದರಿಂದ ದೊಡ್ಡ ಘಟನೆಯನ್ನು ತಪ್ಪಿಸಿದೆ ಮತ್ತು ಇಲ್ಲಿಯವರೆಗೆ ಯಾವುದೇ ಪ್ರಾಣಹಾನಿ ವರದಿಯಾಗಿಲ್ಲ. ಆರಂಭಿಕ ವರದಿಗಳ ಪ್ರಕಾರ, ಶಿಬಿರದ ಸ್ಥಳದಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಈ ಪ್ರದೇಶದಲ್ಲಿ ಸ್ಥಾಪಿಸಲಾದ ಹಲವಾರು ಡೇರೆಗಳನ್ನು ಆವರಿಸಿದೆ. ಬೆಂಕಿ ನಂದಿಸಲು ಅಗ್ನಿಶಾಮಕ ಅಧಿಕಾರಿಗಳಿಗೆ ಸಹಾಯ ಮಾಡಲು ರಾಷ್ಟ್ರೀಯ ವಿಪತ್ತು ಪ್ರತಿಕ್ರಿಯೆ ಪಡೆ (ಎನ್ಡಿಆರ್ಎಫ್) ತಂಡವೂ ಘಟನಾ ಸ್ಥಳಕ್ಕೆ ಆಗಮಿಸಿದೆ. https://twitter.com/ANI/status/1880931730120638946 ಹತ್ತಿರದ ಸೇತುವೆಯ ಮೇಲೆ ಪ್ರಯಾಣಿಸುತ್ತಿದ್ದ ರೈಲು ಪ್ರಯಾಣಿಕರೊಬ್ಬರು ಸೆರೆಹಿಡಿದ ವೀಡಿಯೊದಲ್ಲಿ ಕ್ಯಾಂಪ್ ಸೈಟ್ ಅನ್ನು ಭಾರಿ ಜ್ವಾಲೆಗಳು…













