Subscribe to Updates
Get the latest creative news from FooBar about art, design and business.
Author: kannadanewsnow09
ಬೆಂಗಳೂರು : ರಾಷ್ಟ್ರಪಿತ ,ಮಹಾತ್ಮ ಗಾಂಧೀಜಿಯವರ 155 ನೇ ಜಯಂತಿ ಅಂಗವಾಗಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯು ಪ್ರೌಢಶಾಲೆ, ಪದವಿಪೂರ್ವ ಹಾಗೂ ಪದವಿ/ಸ್ನಾತಕೋತ್ತರ ಪದವಿ ವಿಭಾಗಗಳಿಗೆ ಪ್ರತ್ಯೇಕವಗಿ ಆಯೋಜಿಸಿದ್ದ ರಾಜ್ಯ ಮಟ್ಟದ ಬಾಪೂಜಿ ಪ್ರಬಂಧ ಸ್ಪರ್ಧೆಯ ಫಲಿತಾಂಶ ಪ್ರಕಟವಾಗಿದೆ. ಪ್ರೌಢಶಾಲೆ ವಿಭಾಗ ಫಲಿತಾಂಶ ದಿವ್ಯಾ ಶ್ರೀಶೈಲ ಗಾಣಿಗೇರ,ಸರ್ಕಾರಿ ಪ್ರೌಢಶಾಲೆ, ಕೆಎಸ್ಆರ್ಪಿ,ಮಚ್ಚೆ,ಬೆಳಗಾವಿ(ಪ್ರಥಮ),ಸಮರ್ಥ ನಾಗರಾಜ ಅರ್ಕಸಾಲಿ , ಸರ್ಕಾರಿ ಪ್ರೌಢಶಾಲೆ, ಹುನಗುಂದ, ತಾ.ಮುಂಡಗೋಡ, ಉತ್ತರ ಕನ್ನಡ ಜಿಲ್ಲೆ(ದ್ವಿತೀಯ), ಚೈತನ್ಯ ಕೆ.ಎಂ.ಸಂತ ಅನ್ನಮ್ಮ ಪ್ರೌಢಶಾಲೆ, ವಿರಾಜಪೇಟೆ, ಕೊಡಗು ಜಿಲ್ಲೆ(ತೃತೀಯ) ಪದವಿಪೂರ್ವ ಕಾಲೇಜು ವಿಭಾಗ ಫಲಿತಾಂಶ ವಿಜಯಕುಮಾರ್ ಬ.ದೊಡ್ಡಮನಿ, ಸರ್ಕಾರಿ ಪ.ಪೂ.ಕಾಲೇಜು, ಮುಳಗುಂದ, ಗದಗ ಜಿಲ್ಲೆ (ಪ್ರಥಮ), ಪರೀಕ್ಷಾನಂದ್, ಮರಿಮಲ್ಲಪ್ಪ ಪ.ಪೂ.ಕಾಲೇಜು, ಮೈಸೂರು (ದ್ವಿತೀಯ), ಗೋರಮ್ಮ, ಬಾಲಕಿಯರ ಸರ್ಕಾರಿ ಪ.ಪೂ.ಕಾಲೇಜು, ಕೋಲಾರ(ತೃತೀಯ) ಪದವಿ/ಸ್ನಾತಕೋತ್ತರ ವಿಭಾಗ ಫಲಿತಾಂಶ ಪ್ರವೀಣ್ ನಿಂಗಪ್ಪ ಕಿತ್ನೂರ,ಕನ್ನಡ ವಿ.ವಿ.ಹಂಪಿ, ವಿಜಯನಗರ ಜಿಲ್ಲೆ (ಪ್ರಥಮ), ಶರಣಪ್ಪ, ತುಮಕೂರು ವಿ.ವಿ.ತುಮಕೂರು(ದ್ವಿತೀಯ), ನಸೀಮಾ ಇ.ಚಪ್ಪರಬಂದ್, ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ವಿಜಯಪುರ (ತೃತೀಯ) ಗಾಂಧೀಜಿಯವರ ತತ್ವಗಳಿಂದ ದೇಶ ಕಟ್ಟುವ…
ಗದಗ: ಪ್ರೊ.ಕೆ. ಎಸ್ ಭಗವಾನ್ ತಾಯಿ ಚಾಮುಂಡೇಶ್ವರಿ ವಿಚಾರದಲ್ಲಿ ಜನರ ದಾರಿ ತಪ್ಪಿಸುವ ಕೆಲಸ ಮಾಡುತ್ತಿದ್ದಾರೆ. ಅವರ ಮಾತಿಗೆ ಯಾರೂ ಮಹತ್ವ ಕೊಟ್ಟಿಲ್ಲ, ಕೊಡಬಾರದು ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ. ಗದಗದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಪ್ರೊ. ಭಗವಾನ್ ಅವರು ಹೆಸರಿಗೆ ತಕ್ಕಂಗೆ ಭಗವಂತನ ಮೇಲೆ ನಂಬಿಕೆ ಇಟ್ಟಿದ್ದಾರೆ ಇಲ್ಲಾ ನೋಡಿ, ಭಗವಂತನ ಮೇಲೆ ನಂಬಿಕೆ ಇಲ್ಲಾ ಅಂದರೆ, ಭಗವಾನ್ ಅಂತ ಹೆಸರು ಇಟ್ಟಿಕೊಂಡಿದ್ದೆ ಅಪಾರ್ಥವಾಗಿದೆ ಎಂದು ಹೇಳಿದರು. ಒಂದು ಧರ್ಮದ ವಿರುದ್ಧ ಮಾತನಾಡುವುದು ಯಾವುದೇ ಮಾನವೀಯ ಧರ್ಮವಿಲ್ಲ ಚಾಮುಂಡೇಶ್ವರಿ ಕಾಲ್ಪನಿಕ ಅಂತ ಹೇಳುತ್ತಾರೆ. ಚಾಮುಂಡೇಶ್ವರಿ ಕಾಲ್ಪನಿಕ ಅಂದರೆ, ಮಹಿಷಾಸುರನು ಕಾಲ್ಪನಿಕನಾ? ಮಹಿಷಾಸುರನ ಆರಾಧನೆ ಮಾಡುತ್ತಾರೆ. ಇತರಹ ದ್ವಂದ್ವ ವಿಪರ್ಯಾಸದಿಂದ ಜನರ ದಾರಿ ತಪ್ಪಿಸುವ ಕೆಲಸ ಮಾಡುತ್ತಾರೆ. ಇದಕ್ಕೆ ಯಾರೂ ಮಹತ್ವ ಕೊಟ್ಟಿಲ್ಲ. ಯಾರೂ ಕೊಡಬಾರದು. ವಾಸ್ತವ ಅಂಶ ಗೊತ್ತಿದ್ದರೂ ದಾರಿ ತಪ್ಪಿಸುವ ಕೆಲಸ ಮಾಡುತ್ತಿದ್ದಾರೆ ಎಂದು ಹೇಳಿದರು. ಶ್ರೀರಾಮನ ಬಗ್ಗೆ ಹಿಂದೇ ಏನು ಮಾತಾಡಿದ್ದರು,…
ಮೈಸೂರು : ಮುಡಾ ಪ್ರಕರಣದ ತನಿಖೆ ಪ್ರಸ್ತುತ ಲೋಕಾಯುಕ್ತದಲ್ಲಿದ್ದು, ನಾನು ಅದರಲ್ಲಿ ಯಾವುದೇ ರೀತಿಯ ಹಸ್ತಕ್ಷೇಪ ಮಾಡುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಮೈಸೂರಿನ ತಮ್ಮ ನಿವಾಸದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಮುಡಾ ಪ್ರಕರಣ ಸಂಬಂಧ ಸಿಎಂ ವಿರುದ್ಧ ಇಡಿಯಲ್ಲಿ ದೂರು ದಾಖಲಾಗಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಇಡಿಯಲ್ಲಿ ದೂರು ದಾಖಲಾಗಿದ್ದರೆ, ಕಾನೂನು ರೀತಿ ಕ್ರಮ ಜರುಗಿಸಲಾಗುತ್ತದೆ ಎಂದರು. ಅಧಿಕಾರಿಗಳ ವಿರುದ್ಧ ಟೀಕೆ ಸರಿಯಲ್ಲ ಕುಮಾರಸ್ವಾಮಿಯವರು ಲೋಕಾಯುಕ್ತ ಎಡಿಜಿಪಿ ಮೇಲೆಯೂ ಟೀಕೆ ಮಾಡುತ್ತಿರುವ ಬಗ್ಗೆ ಬಗ್ಗೆ ಪ್ರತಿಕ್ರಿಯೆ ನೀಡಿ, ಕುಮಾರಸ್ವಾಮಿಯವರು ತಪ್ಪೆಸೆಗಿಸಿದ್ದು, ಅಧಿಕಾರಗಳ ವಿರುದ್ಧ ಟೀಕೆ ಮಾಡುವುದು ಸರಿಯಲ್ಲ. ಇಂತಹ ಹೇಳಿಕೆಗಳ ಮೇಲೆ ನಾನು ಪ್ರತಿಕ್ರಿಯೆ ನೀಡುವುದಿಲ್ಲ ರೇವ್ ಪಾರ್ಟಿ ವಿರುದ್ದ ಪೊಲೀಸರ ಕ್ರಮ ಮೈಸೂರಿನಲ್ಲಿ ರೇವ್ ಪಾರ್ಟಿ ನಡೆದಿರುವ ಬಗ್ಗೆ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿ, ರೇವ್ ಪಾರ್ಟಿ ನಡೆದಿರುವ ಬಗ್ಗೆ ಮಾಹಿತಿ ಬಂದಿದ್ದು,ಈ ಬಗ್ಗೆ ಪೊಲೀಸರು ಸೂಕ್ತ ಕ್ರಮ ಕೈಗೊಳ್ಳಲಿದ್ದಾರೆ ಎಂದರು. ಅಕ್ಟೋಬರ್ 2 ರಂದು ದಸರಾ ಸಿದ್ದತೆ…
ಬೆಂಗಳೂರು: ADGP ಚಂದ್ರಶೇಖರ್ ಒಬ್ಬ ಬ್ಲ್ಯಾಕ್ ಮೇಲರ್, ಕ್ರಿಮಿನಲ್ ಎಂದು ಕೇಂದ್ರದ ಭಾರೀ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವರಾದ ಹೆಚ್.ಡಿ.ಕುಮಾರಸ್ವಾಮಿ ಅವರು ಗುಡುಗಿದರು. ಆತ ತನ್ನ ಸಹೋದ್ಯೋಗಿಗಳಿಗೆ ಬರೆದಿರುವ ಪತ್ರವನ್ನು ಚೆನ್ನಾಗಿ ತಯಾರು ಮಾಡಿದ್ದಾರೆ. ಆ ಪತ್ರವನ್ನು ಯಾರು, ಎಲ್ಲಿ ತಯಾರು ಮಾಡಿಕೊಟ್ಟರು ಎನ್ನುವುದು ನನಗೂ ಚೆನ್ನಾಗಿ ಗೊತ್ತಿದೆ. ಉತ್ತರ ಕೊಡುವ ಜಾಗದಲ್ಲಿ, ಸಂದರ್ಭದಲ್ಲಿ ಇದಕ್ಕೆ ಉತ್ತರ ಕೊಡುತ್ತೇನೆ ಎಂದು ಅವರು ಹೇಳಿದರು. ಅಧಿಕಾರಿ ತನ್ನ ಸಹೋದ್ಯೋಗಿಗಳಿಗೆ ಬರೆದಿರುವ ಪತ್ರದ ಬಗ್ಗೆ ಭಾನುವಾರ ಬೆಳಗ್ಗೆ ಮಾಧ್ಯಮಗಳು ಕೇಳಿದ ಪ್ರಶ್ನೆಗಳಿಗೆ ಸಚಿವರು ಉತ್ತರಿಸಿದರು. ಆತ ಹೇಳಿರುವಂತೆ ನಾನು ಪ್ರಕರಣದಲ್ಲಿ ಆರೋಪಿ ಇರಬಹುದು. ಆದರೆ, ಆತ ಅಧಿಕಾರಿ ಸೋಗಿನಲ್ಲಿರುವ ಕ್ರಿಮಿನಲ್. ಆತನ ವಿರುದ್ಧ ಸರಣಿ ಅಪರಾಧ ಕೃತ್ಯಗಳನ್ನು ಎಸಗಿರುವ ಆರೋಪಗಳಿವೆ ಎಂದು ಸಚಿವರು ಕಿಡಿಕಾರಿದರು. ಲೋಕಾಯುಕ್ತರಿಗೆ ರಾಜ್ಯಪಾಲರು ಬರೆದ ಪತ್ರವು ಸರಕಾರಿ ಪ್ರಾಯೋಜಿತ ಒಂದು ನಿರ್ದಿಷ್ಟ ಸುದ್ದಿ ವಾಹಿನಿಗೆ ಸೋರಿಕೆ ಆಗಿತ್ತು. ಅದನ್ನು ಸೋರಿಕೆ ಮಾಡಿದ್ದು ಯಾರು ಎನ್ನುವುದು ಎಲ್ಲರಿಗೂ ಗೊತ್ತಿದೆ. ಆದರೆ,…
ನವದೆಹಲಿ: ತಿರುಪತಿ ಲಡ್ಡು ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬು ಪತ್ತೆ ವಿವಾದಕ್ಕೆ ಸಂಬಂಧಿಸಿದಂತೆ ಪ್ರಕರಣದ ಕುರಿತು ವಿಚಾರಣೆಯನ್ನು ನಾಳೆ ಸುಪ್ರೀಂ ಕೋರ್ಟ್ ನಡೆಸಲಿದೆ. ತಿರುಪತಿ ಲಡ್ಡು ವಿವಾದಕ್ಕೆ ಸಂಬಂದಿಸಿದಂತೆ ವಿಚಾರಣೆ ನಡೆಸುವಂತೆ ಕೋರಿ ಸಲ್ಲಿಸಲಾಗಿದ್ದಂತ ಅರ್ಜಿಗಳನ್ನು ನಾಳೆ ಸುಪ್ರೀಂ ಕೋರ್ಟ್ ಕೈಗೆತ್ತಿಕೊಳ್ಳಲಿದೆ. ಬಿಜೆಪಿ ನಾಯಕ ಸುಬ್ರಮಣಿಯನ್ ಸ್ವಾಮಿ ಮತ್ತು ರಾಜ್ಯ ಸಭಾ ಸಂಸದ ತಿರುಮಲ ತಿರುಪತಿ ದೇವಸ್ಥಾನದ ಮಾಜಿ ಅಧ್ಯಕ್ಷ ವೈ.ವಿ ಸುಬ್ಬಾ ರೆಡ್ಡಿ ಅವರು ಸಲ್ಲಿಸಿದ್ದಂತ ಅರ್ಜಿಗಳ ವಿಚಾರಣೆಯನ್ನು ನಡೆಸಲಿದೆ. ಮಾಜಿ ಸಿಎಂ ಜಗನ್ ಮೋಹನ್ ರೆಡ್ಡಿ ನೇತೃತ್ವದ ಹಿಂದಿನ ವೈಎಸ್ ಆರ್ ಕಾಂಗ್ರೆಸ್ ಸರ್ಕಾರದಲ್ಲಿ ತಿರುಪತಿ ದೇವಸ್ಥಾನದಿಂದ ಲಡ್ಡುಗಳನ್ನು ಪ್ರಸಾದವಾಗಿ ನೀಡಿದ್ದಾಗ ಅದರಲ್ಲಿ ಪ್ರಾಣಿಗಳ ಕೊಬ್ಬನ್ನು ಬಳಸಲಾಗುತ್ತಿತ್ತು ಎಂದು ಆಂಧ್ರ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಆರೋಪ ಮಾಡಿದ್ದರು. ಇದು ತೀವ್ರ ವಿವಾದಕ್ಕೆ ಕಾರಣವಾಗಿತ್ತು. ಇಂತಹ ಲಡ್ಡು ವಿವಾದದ ಬಗ್ಗೆ ಸಲ್ಲಿಸಿದ್ದಂತ ಅರ್ಜಿಗಳನ್ನು ನಾಳೆ ಸುಪ್ರೀಂ ಕೋರ್ಟ್ ವಿಚಾರಣೆ ನಡೆಸಲಿದೆ. https://kannadanewsnow.com/kannada/govt-should-conduct-proper-probe-into-irregularities-committed-by-ips-officer-m-chandrasekhar-jds/ https://kannadanewsnow.com/kannada/rape-case-sit-raids-11-locations-belonging-to-munirathna-seizes-crucial-documents/
ಬೆಂಗಳೂರು: ಐಪಿಎಸ್ ಅಧಿಕಾರಿ ಎಂ. ಚಂದ್ರಶೇಖರ್ ಅವರ ಅಕ್ರಮಗಳ ಬಗ್ಗೆಯೂ ಸರ್ಕಾರ ಸೂಕ್ತ ತನಿಖೆ ನಡೆಸಬೇಕು. ಐಪಿಎಸ್ ಅಸೋಷಿಯೇಷನ್ ಮತ್ತು ಕೇಂದ್ರ ಗೃಹ ಇಲಾಖೆಯು ಈ IPS ಅಧಿಕಾರಿಯ ಮೇಲೆ ಕ್ರಮ ಕೈಗೊಳ್ಳಬೇಕು ಎಂಬುದಾಗಿ ಕರ್ನಾಟಕ ಜೆಡಿಎಸ್ ಆಗ್ರಹಿಸಿದೆ. ಇಂದು ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವಂತ ಜೆಡಿಎಸ್, “ಕಳ್ಳನ ಮನಸ್ಸು ಹುಳ್ಳಳ್ಳಗೆ”.., ಐಪಿಎಸ್ ಅಧಿಕಾರಿ ಎಂ. ಚಂದ್ರಶೇಖರ್ ಅವರೇ ನಿಮ್ಮ ಮೇಲಿನ ಆರೋಪಗಳು ನಿಜವಲ್ಲವಾದರೇ, ಕಾನೂನಿನಡಿಯಲ್ಲಿ ಉತ್ತರ ನೀಡಬಹುದಿತ್ತು… ಅದನ್ನು ಬಿಟ್ಟು ನೀವೊಬ್ಬ ಐಪಿಎಸ್ ಅಧಿಕಾರಿ ಎಂಬುದನ್ನು ಮರೆತು, ಕೇಂದ್ರ ಸಚಿವರಾದ ಹೆಚ್.ಡಿ. ಕುಮಾರಸ್ವಾಮಿ ಅವರು ವಿರುದ್ಧ ಹತಾಶೆ, ಸಿಟ್ಟು, ಆಕ್ರೋಶದಿಂದ ಕೀಳು ಮಟ್ಟದ, ಅವಹೇಳನಕಾರಿ ಪದಗಳನ್ನು ಬಳಸಿ ಉತ್ತರಿಸಿದ್ದೀರಿ ಎಂದಿದೆ. ನಿಮ್ಮ ಅಕ್ರಮ, ಭ್ರಷ್ಟಾಚಾರಗಳನ್ಮು ದಾಖಲೆಗಳ ಸಮೇತ ಮಾಧ್ಯಮಗಳ ಮುಂದೆ ಬಯಲು ಮಾಡಿದ್ದು ಅಪರಾಧವೇ ..? ಅದಕ್ಕೆ ಕೇಂದ್ರ ಸಚಿವರ ಕುರಿತು ನೀವು ಕೀಳು ಮಟ್ಟದ ಪದ ಬಳಸಿರುವುದು ಅಕ್ಷಮ್ಯ.. ನೀವೊಬ್ಬ ಐಪಿಎಸ್ ಅಧಿಕಾರಿಯಾಗಿರಲು ಅನರ್ಹ. ಭೂ ವ್ಯವಹಾರವೊಂದರಲ್ಲಿ 20…
ಬೆಂಗಳೂರು: ಮೈಸೂರು ಹೊರ ವಲಯದಲ್ಲಿ ರೇವ್ ಪಾರ್ಟಿ ನಡೆಸಿದಂತ ವಿಚಾರ ಗಮನಕ್ಕೆ ಬಂದಿದೆ. ಈ ಬಗ್ಗೆ ಪೊಲೀಸರು ಸೂಕ್ತ ಕಾನೂನು ಕ್ರಮ ಕೈಗೊಳ್ಳಲಿದ್ದಾರೆ ಎಂಬುದಾಗಿ ಸಿಎಂ ಸಿದ್ಧರಾಮಯ್ಯ ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಮೈಸೂರಿನಲ್ಲಿ ರೇವ್ ಪಾರ್ಟಿ ಆಯೋಜನೆ ವಿಚಾರವನ್ನು ಮೈಸೂರು ಎಸ್ಪಿಯಿಂದ ಮಾಹಿತಿ ಪಡೆದಿದ್ದೇನೆ. ರೇವ್ ಪಾರ್ಟಿ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ. ಈ ರೇವ್ ಪಾರ್ಟಿ ವಿರುದ್ಧ ಕಾನೂನು ರೀತಿಯಲ್ಲಿ ಪೊಲೀಸರು ಕ್ರಮ ಕೈಗೊಳ್ಳುತ್ತಾರೆ ಎಂದರು. ಅಂದಹಾಗೆ ಮೈಸೂರು ಹೊರ ವಲಯದಲ್ಲಿ ರೇವ್ ಪಾರ್ಟಿಯನ್ನು ನಿನ್ನೆ ಆಯೋಜಿಸಲಾಗಿತ್ತು. ಈ ಖಚಿತ ಮಾಹಿತಿಯ ಮೇರೆಗೆ ಮೈಸೂರು ಹೆಚ್ಚುವರಿ ಎಸ್ಪಿ, ಡಿವೈಎಸ್ಪಿ ನೇತೃತ್ವದಲ್ಲಿ ದಾಳಿ ನಡೆಸಲಾಗಿತ್ತು. 150ಕ್ಕೂ ಹೆಚ್ಚು ಮಂದಿಯನ್ನು ವಶಕ್ಕೆ ಪಡೆಯಲಾಗಿತ್ತು. ತಲಾ 2000ದಂತೆ ವಸೂಲಿ ಮಾಡಿ ರೇವ್ ಪಾರ್ಟಿ ಆಯೋಜಿಸಲಾಗಿದೆ ಎನ್ನಲಾಗಿತ್ತು. ಆದರೇ ರೇವ್ ಪಾರ್ಟಿಯಲ್ಲಿ ಡ್ರಗ್ಸ್ ಸರಬರಾಜು, ಸೇವನೆಯ ಬಗ್ಗೆ ಮಾದರಿ ಸಂಗ್ರಹಿಸಿದ್ದು, ವರದಿಯ ಬಳಿಕ ತಿಳಿಯಲಿದೆ. https://kannadanewsnow.com/kannada/bengaluru-two-wheeler-owners-get-crucial-information-from-city-police/ https://kannadanewsnow.com/kannada/rape-case-sit-raids-11-locations-belonging-to-munirathna-seizes-crucial-documents/
ಬೆಂಗಳೂರು: ನಗರದಲ್ಲಿ ದಿನೇ ದಿನೇ ವಾಹನಗಳ ಕಳವು ಪ್ರಕರಣಗಳು ಹೆಚ್ಚಾಗುತ್ತಿವೆ. ಈ ಹೊತ್ತಿನಲ್ಲಿಯೇ ಬೆಂಗಳೂರು ನಗರ ಪೊಲೀಸರಿಂದ ಮಹತ್ವದ ಮನವಿಯನ್ನು ಮಾಲೀಕರಿಗೆ ಮಾಡಲಾಗಿದೆ. ಅದೇನು ಅಂತ ಮುಂದೆ ಓದಿ. ಈ ಸಂಬಂಧ ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ.ದಯಾನಂದ್ ಅವರು ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿದ್ದು, ಬೆಂಗಳೂರು ನಗರದಲ್ಲಿ ಸುಮಾರು 80 ಲಕ್ಷ ದ್ವಿಚಕ್ರ ವಾಹನಗಳು ನೋಂದಣಿಯಾಗಿವೆ. ಪ್ರತಿದಿನ ಸುಮಾರು 1500 ರಿಂದ 2000 ಹೊಸ ವಾಹನಗಳು ನೋಂದಣಿಯಾಗುತ್ತಿವೆ. ಕಳೆದ 3 ವರ್ಷಗಳಿಂದ ಪ್ರತಿದಿನ ಸರಾಸರಿ 14 ರಿಂದ 16 ವಾಹನಗಳು ಕಳ್ಳತನವಾಗುತ್ತಿವೆ. ಆದ್ದರಿಂದ ನಗರದಲ್ಲಿ ದ್ವಿಚಕ್ರ ವಾಹನ ಕಳ್ಳತನವಾಗದಂತೆ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳಲು ಸಾರ್ವಜನಿಕರಿಗೆ ಈ ಕೆಳಗಿನ ಸೂಚನೆಗಳನ್ನು ನೀಡಿದ್ದಾರೆ. ದ್ವಿಚಕ್ರ ವಾಹನಗಳ ಕಳ್ಳತನಕ್ಕೆ ಕಾರಣಗಳು 1. ವಾಹನಗಳನ್ನು ಅಜಾಗರೂಕತೆಯಿಂದ ನಿಲ್ಲಿಸುವುದು. 2. ನಿಲ್ಲಿಸಿರುವ ವಾಹನದಲ್ಲಿ ಕೀಲಿಯನ್ನು ಬಿಡುವುದು. 3. ಸುಲಭವಾಗಿ ಒಡೆಯಬಹುದಾದ ಹ್ಯಾಂಡಲ್ ಲಾಕ್ ಗಳನ್ನು ಹೊಂದಿರುವ ವಾಹನಗಳನ್ನು ಬಳಸುವುದು. 4. ಸರಿಯಾದ ಲಾಕಿಂಗ್ ವ್ಯವಸ್ಥೆಗಳಿಲ್ಲದ ಹಳೆಯ ವಾಹನಗಳನ್ನು ಬಳಸುವುದು. 5.…
ನವದೆಹಲಿ: ಮುಂಬರುವ ಹಬ್ಬಗಳ ಸಂದರ್ಭದಲ್ಲಿ ‘ಮೇಡ್ ಇನ್ ಇಂಡಿಯಾ’ ಉತ್ಪನ್ನಗಳನ್ನು ಖರೀದಿಸುವಂತೆ ಪ್ರಧಾನಿ ಮೋದಿ ಜನತೆಗೆ ಮನವಿ ಮಾಡಿದ್ದಾರೆ. ಇಂದು ಮನ್ ಕೀ ಬಾತ್ ನ 114ನೇ ಎಪಿಸೋಡ್ ನಲ್ಲಿ ಮಾತನಾಡಿದಂತ ಅವರು, ಮನ್ ಕೀ ಬಾತ್ ಗೆ 10 ವರ್ಷ ಆಗಿದ್ದನ್ನು ನೆನೆದು ಭಾವುಕರಾದರು. ಪ್ರಧಾನಿ ನರೇಂದ್ರ ಮೋದಿ ಅವರು ಭಾನುವಾರ ತಮ್ಮ ರೇಡಿಯೋ ಕಾರ್ಯಕ್ರಮ ಮನ್ ಕಿ ಬಾತ್ ನಲ್ಲಿ ಮಾತನಾಡಿದರು. ಪ್ರಧಾನಿ ನರೇಂದ್ರ ಮೋದಿಯವರ ಜನಪ್ರಿಯ ರೇಡಿಯೋ ಕಾರ್ಯಕ್ರಮ ಹತ್ತು ವರ್ಷಗಳನ್ನು ಪೂರೈಸಿದೆ. ಜಲ ಸಂರಕ್ಷಣೆಗೆ ಮಹಿಳಾ ರೈತರು ನೀಡಿದ ಕೊಡುಗೆಯನ್ನು ಪ್ರಧಾನಿ ಶ್ಲಾಘಿಸಿದರು. ಪ್ರತಿ ತಿಂಗಳು ಕಾರ್ಯಕ್ರಮಕ್ಕಾಗಿ ಪತ್ರಗಳು ಮತ್ತು ಸಲಹೆಗಳನ್ನು ಕಳುಹಿಸುವ ಅಸಂಖ್ಯಾತ ಜನರಿಗೆ ಪ್ರಧಾನಿ ಕೃತಜ್ಞತೆಯನ್ನು ವ್ಯಕ್ತಪಡಿಸುತ್ತಾರೆ. ಕಳೆದ ಕೆಲವು ವಾರಗಳಿಂದ, ದೇಶದ ವಿವಿಧ ಭಾಗಗಳಲ್ಲಿ ಭಾರಿ ಮಳೆಯಾಗುತ್ತಿದೆ, ಈ ಮಳೆಗಾಲವು ‘ಜಲ ಸಂರಕ್ಷಣೆ’ ಎಷ್ಟು ಮುಖ್ಯ ಎಂಬುದನ್ನು ನಮಗೆ ನೆನಪಿಸುತ್ತದೆ ಎಂದು ಪ್ರಧಾನಿ ಮೋದಿ ಹೇಳಿದರು. ಪ್ರತಿಭೆ ಮತ್ತು ಸೃಜನಶೀಲತೆಯನ್ನು ಪೋಷಿಸಲು…
ಮೈಸೂರು: ಜಿಲ್ಲೆಯ ಹೊರ ವಲಯದಲ್ಲಿ ರೇವ್ ಪಾರ್ಟಿ ನಡೆಸುತ್ತಿದ್ದಂತ ಖಚಿತ ಮಾಹಿತಿಯ ಮೇರೆಗೆ ಪೊಲೀಸರು ದಾಳಿ ನಡೆಸಿದ್ದಾರೆ. ಈ ದಾಳಿಯ ವೇಳೆಯಲ್ಲಿ ನೂರಾರು ಜನರನ್ನು ಪೊಲೀಸರು ವಶಕ್ಕೆ ಪಡೆದು, ಅವರ ರಕ್ತದ ಮಾದರಿಯನ್ನು ಸಂಗ್ರಹಿಸಿ ಪರೀಕ್ಷೆಗೆ ಕಳುಹಿಸಿಕೊಟ್ಟಿದ್ದಾರೆ. ಮೈಸೂರು ಹೊರ ವಲಯದಲ್ಲಿ ನಿನ್ನೆ ತಡರಾತ್ರಿ ರೇವ್ ಪಾರ್ಟಿ ನಡೆಸಲಾಗಿದೆ. ಈ ವಿಷಯ ತಿಳಿದಂತ ಮೈಸೂರು ಜಿಲ್ಲಾ ಪೊಲೀಸರು ಅಲರ್ಟ್ ಆಗಿ ಪಾರ್ಟಿಯ ಮೇಲೆ ದಾಳಿಯನ್ನು ನಡೆಸಿದ್ದಾರೆ. ಮೈಸೂರು ಹೆಚ್ಚುವರಿ ಎಸ್ಪಿ ನಾಗೇಶ್, ಡಿವೈಎಸ್ಪಿ ಕರೀಮ್ ನೇತೃತ್ವದಲ್ಲಿ ರೇವ್ ಪಾರ್ಟಿಯ ಮೇಲೆ ದಾಳಿ ನಡೆಸಲಾಗಿದೆ. ತಡರಾತ್ರಿ ನಡೆಯುತ್ತಿದ್ದ ಪಾರ್ಟಿಯಲ್ಲಿ ನೂರಾರು ಜನರು ಭಾಗಿಯಾಗಿದ್ದರು ಎನ್ನಲಾಗಿದೆ. ರೇವ್ ಪಾರ್ಟಿಯಲ್ಲಿ ಭಾಗಿಯಾಗಿದ್ದಂತ 150ಕ್ಕೂ ಹೆಚ್ಚು ಯುವತಿ, ಯುವಕರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಈ ಕಾರ್ಯಾಚರಣೆಯ ವೇಳೆಯಲ್ಲಿ ಪೊಲೀಸರ ಮೇಲೆ ಹಲ್ಲೆಯನ್ನು ನಡೆಸಿದಂತ ಆರೋಪ ಕೂಡ ಕೇಳಿ ಬಂದಿದೆ. ಮೈಸೂರು ಹೊರ ವಲಯದ ರೇವ್ ಪಾರ್ಟಿಯಲ್ಲಿ ಭಾಗಿಯಾದವರಿಂದ ತಲಾ 2000 ಹಣವನ್ನು ವಸೂಲಿ ಮಾಡಲಾಗಿದೆ ಎಂದು ಹೇಳಲಾಗುತ್ತಿದೆ.…













