Subscribe to Updates
Get the latest creative news from FooBar about art, design and business.
Author: ವಸಂತ ಬಿ ಈಶ್ವರಗೆರೆ
ವಸಂತ ಬಿ ಈಶ್ವರಗೆರೆ (Vasantha B Eshwaragere) ಅವರು ಕರ್ನಾಟಕದ ಪತ್ರಕರ್ತರು ಮತ್ತು ಕವಿ. ಉದಯ ನ್ಯೂಸ್, ಟಿವಿ5 ಕನ್ನಡ ಸೇರಿದಂತೆ ವಿವಿಧ ಸುದ್ದಿ ಮಾಧ್ಯಮಗಳಲ್ಲಿ ಸುಮಾರು 15 ವರ್ಷಗಳ ಅನುಭವವನ್ನು ಹೊಂದಿದ್ದಾರೆ. ಪ್ರಸ್ತುತ ಅವರು Kannada News Now ಡಿಜಿಡಿಲ್ ಮಾಧ್ಯಮದಲ್ಲಿ ಸಂಪಾದಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಇವರು ತಾಜಾ ಸುದ್ದಿ, ಸಾಹಿತ್ಯ, ಸಾಮಾಜಿಕ ವರದಿಗಾರಿಕೆ, ನ್ಯಾಯಾಂಗ ಸಂಬಂಧಿತ ವರದಿ ಮತ್ತು ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿದ ಸುದ್ದಿಗಳ ವರದಿಯಲ್ಲಿ ಸಕ್ರಿಯರಾಗಿದ್ದಾರೆ. ಗುಡವಿ ಪಕ್ಷಿಧಾಮದಂತಹ ಪ್ರವಾಸಿ ತಾಣಗಳ ಕುರಿತು ಲೇಖನಗಳನ್ನು ಬರೆದಿದ್ದಾರೆ.
ಬೆಂಗಳೂರು: ಮಹಿಳೆಯರು ತಮ್ಮ ಆರೋಗ್ಯ ಬಗ್ಗೆ ಕಾಳಜಿ ವಹಿಸುವ ಕುರಿತು ಜಾಗೃತಿ ಮೂಡಿಸುವ ಉದ್ದೇಶದಿಂದ ಆಲ್ಟಿಯಸ್ ಆಸ್ಪತ್ರೆಯ ನೇತೃತ್ವದಲ್ಲಿ “ಮಹಿಳಾ ದಿನಾಚರಣೆ” ಪ್ರಯುಕ್ತವಾಗಿ 3ನೇ ಆವೃತ್ತಿಯ “ಮಹಿಳಾ ವಾಕಥಾನ್”ನನ್ನು ಆಯೋಜಿಸಲಾಗಿತ್ತು. ಬೆಂಗಳೂರಿನ ಕಲ್ಯಾಣ ನಗರದ ಕೆಬಿಸಿ ಬ್ಯಾಸ್ಕೆಟ್ ಬಾಲ್ ಕೋರ್ಟ್ನಿಂದ ಬೆಳಗ್ಗೆ 6 ಗಂಟೆಗೆ ಪ್ರಾರಂಭಗೊಂಡ ವಾಕಥಾನ್ನನ್ನು ಆಲ್ಟಿಯಸ್ ಆಸ್ಪತ್ರೆಯ ಪ್ರಸೂತಿ ಮತ್ತು ಸ್ತ್ರೀರೋಗ ತಜ್ಞೆ ಡಾ. ಪ್ರಿಯಾ ಎಸ್. ಪಿ. ಪಾಟೀಲ್ ಚಾಲನೆ ನೀಡಿದರು. ಈ ವೇಳೆ ಮಾತನಾಡಿದ ಅವರು, ಕುಟುಂಬ ನಿರ್ವಹಣೆಯ ಜವಾಬ್ದಾರಿ ನಿಭಾಯಿಸುವ ಭರದಲ್ಲಿ ತಮ್ಮ ಆರೋಗ್ಯದ ಬಗ್ಗೆಯೇ ಮಹಿಳೆಯರು ನಿರ್ಲಕ್ಷಿಸುತ್ತಿದ್ದಾರೆ. ಶೇ.70 ರಷ್ಟು ಮಹಿಳೆಯರು ತಮ್ಮ ಆರೋಗ್ಯದ ಬಗ್ಗೆ ಕಾಳಜಿ ವಹಿಸುತ್ತಿಲ್ಲ ಎಂದು ಅನೇಕ ಅಧ್ಯಯನಗಳು ತಿಳಿಸಿವೆ. ಇದರಿಂದ ಮಹಿಳೆಯರು ಅನೇಕ ಆರೋಗ್ಯ ಸಮಸ್ಯೆಗೆ ಒಳಗಾಗುತ್ತಿದ್ದಾರೆ. ಮಹಿಳೆಯರೂ ಸಹ ಕುಟುಂಬ ನಿರ್ಹಣೆಯ ಜೊತೆ ಜೊತೆಗೆ ತಮ್ಮ ಆರೋಗ್ಯ ನಿಭಾಯಿಸಲು ಸಮಯ ಮೀಸಲಿಡಬೇಕು. ನಿತ್ಯ ದೈಹಿಕ ವ್ಯಾಯಾಮ ಮಾಡುವುದು, ಪೌಷ್ಠಿಕಾಂಶಯುಕ್ತ ಆಹಾರ ಸೇವಿಸುವುದರ ಬಗ್ಗೆ ಗಮನವಹಿಸಬೇಕು ಎಂದರು.…
ಮಂಡ್ಯ: ಜಿಲ್ಲೆಯ ದೇವರ ಪ್ರಸಾದ ಸೇವಿಸಿದಂತ ಒಂದೇ ಗ್ರಾಮದ 50ಕ್ಕೂ ಹೆಚ್ಚು ಜನರು ಅಸ್ವಸ್ಥಗೊಂಡು, ಆಸ್ಪತ್ರೆಗೆ ದಾಖಲಾಗಿರುವಂತ ಘಟನೆ ನರಹಳ್ಳಿಯಲ್ಲಿ ನಡೆದಿದೆ. ಮಂಡ್ಯ ಜಿಲ್ಲೆಯ ಪಾಂಡವಪುರ ತಾಲ್ಲೂಕಿನ ನರಹಳ್ಳಿಯಲ್ಲಿ ನಿನ್ನೆ ಗ್ರಾಮದ ಚನ್ನಬೀರೇಶ್ವರ ಹಬ್ಬವನ್ನು ನಡೆಸಲಾಗಿತ್ತು. ಈ ಹಬ್ಬದ ಸಂದರ್ಭದಲ್ಲಿ ಪ್ರಸಾದವನ್ನು ಜನರಿಗೆ ವಿತರಿಸಲಾಗಿತ್ತು. ಇಂತಹ ಪ್ರಾಸದ ತಿಂದಂತ 50ಕ್ಕೂ ಹೆಚ್ಚು ಜನರಿಗೆ ವಾಂತಿ, ಬೇಧಿ ಕಾಣಿಸಿಕೊಂಡಿದೆ. ಹೀಗಾಗಿ ಅಸ್ವಸ್ಥರಾಗಿದ್ದಾರೆ. ಅವರನ್ನು ಪಾಂಡವಪುರ ತಾಲ್ಲೂಕು ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿದೆ. ಇದೀಗ ವಾಂತಿ, ಬೇಧಿಯಿಂದ ಅಸ್ವಸ್ಥಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಂತ ಜನರ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ. ಎಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂಬುದಾಗಿ ವೈದ್ಯರು ತಿಳಿಸಿದ್ದಾರೆ. https://kannadanewsnow.com/kannada/in-a-shocking-incident-in-the-state-a-couple-was-brutally-murdered-in-a-farmhouse/ https://kannadanewsnow.com/kannada/jds-to-stage-protest-near-gandhi-statue-in-vidhana-soudha-demanding-release-of-grihalakshmi-funds-tomorrow/
ಮೈಸೂರು: ರಾಜ್ಯದಲ್ಲಿ ಬೆಚ್ಚಿ ಬೀಳಿಸುವಂತ ಘಟನೆ ಎನ್ನುವಂತೆ ತೋಟದ ಮನೆಯಲ್ಲಿದ್ದಂತ ದಂಪತಿಗಳನ್ನು ಒಳಕಲ್ಲಿನಿಂದ ಜಜ್ಜಿ ಬರ್ಬರವಾಗಿ ಕಗ್ಗೊಲೆ ಮಾಡಿರುವಂತ ಘಟನೆ ಮೈಸೂರಿನಲ್ಲಿ ನಡೆದಿದೆ. ಮೈಸೂರು ಜಿಲ್ಲೆಯ ಹುಣಸೂರು ತಾಲ್ಲೂಕಿನ ನಾಡಪನಳ್ಳಿಯಲ್ಲಿ ತೋಟದ ಮನೆಯಲ್ಲಿ ರಂಗಸ್ವಾಮಿ ಗೌಡ(65) ಹಾಗೂ ಶಾಂತಮ್ಮ ಎಂಬುವರು ವಾಸವಾಗಿದ್ದರು. ಅವರನ್ನು ಒಳಕಲ್ಲಿನಿಂದ ಜಜ್ಜಿ ದುಷ್ಕರ್ಮಿಗಳು ಬರ್ಬರವಾಗಿ ಕೊಲೆ ಮಾಡಿದ್ದಾರೆ. ದುಷ್ಕರ್ಮಿಗಳ ಈ ಕಗ್ಗೊಲೆಯಿಂದಾಗಿ ಮೈಸೂರು ಜಿಲ್ಲೆಯ ತೋಟದ ಮನೆಯ ನಿವಾಸಿಗಳು ಬೆಚ್ಚಿ ಬಿದ್ದಿದ್ದಾರೆ. ವಿಷಯ ತಿಳಿದು ಸ್ಥಳಕ್ಕೆ ಬಿಳಿಕೆರೆ ಠಆಣೆಯ ಪೊಲೀಸರು ಆಗಮಿಸಿ ಪರಿಶೀಲಿಸಿ ಪ್ರಕರಣ ದಾಖಲಿಸಿಕೊಂಡು ತನಿಖೆಗೆ ಇಳಿದಿದ್ದಾರೆ. ದಂಪತಿಗಳ ಕೊಲೆಯ ಹಿಂದಿನ ಕಾರಣ ತನಿಖೆಯ ನಂತ್ರವೇ ತಿಳಿಯಬೇಕಿದೆ. https://kannadanewsnow.com/kannada/jds-to-stage-protest-near-gandhi-statue-in-vidhana-soudha-demanding-release-of-grihalakshmi-funds-tomorrow/ https://kannadanewsnow.com/kannada/dont-shut-down-9-universities-in-karnataka-bjp-delegation-to-governor/
ಬೆಂಗಳೂರು : ಈ ಪ್ರತಿಭಟನೆ ಇವತ್ತು ಬೆಂಗಳೂರು ನಗರದಲ್ಲಿ ಪ್ರಾರಂಭ ಮಾಡಿದ್ದೀವಿ. ಇದು ಇಡೀ ರಾಜ್ಯಾದ್ಯಂತ ಎಲ್ಲಾ ಜಿಲ್ಲಾ ಮತ್ತು ತಾಲ್ಲೂಕು ಕೇಂದ್ರಗಳಲ್ಲಿ ನಮ್ಮ ಹೋರಾಟ ಮುದುವರೆಯುತ್ತೆ ಎಂದು ನಿಖಿಲ್ ಕುಮಾರಸ್ವಾಮಿ ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ ಎಚ್ಚರಿಕೆ ನೀಡಿದರು. ಗೃಹಲಕ್ಷ್ಮಿ ಹಣ ಬಿಡುಗಡೆ ಆಗ್ರಹಿಸಿ ನಾಳೆ (ಮಂಗಳವಾರ ) ನಮ್ಮ ಪಕ್ಷದ ಶಾಸಕರು, ವಿಧಾನಪರಿಷತ್ ಸದ್ಯಸರು ಎಲ್ಲರೂ ಸೇರಿ ವಿಧಾನಸೌಧದ ಮುಂಭಾಗ ಇರುವ ಗಾಂಧಿ ಪ್ರತಿಮೆ ಬಳಿ ಪ್ರತಿಭಟನೆ ನಡೆಸಲಿದ್ದಾರೆ. ಗೃಹಲಕ್ಷ್ಮೀ ಹಣ ಬಿಡುಗಡೆಗೆ ಆಗ್ರಹಿಸಿ ಬೃಹತ್ ಪ್ರತಿಭಟನೆ ನಂತರ ಮಾಧ್ಯಮಗಳ ಜತೆ ಮಾತನಾಡಿದ ನಿಖಿಲ್ ಅವರು ; ನಮ್ಮ ಹೋರಾಟ ಮುದುವರೆಯುತ್ತೆ ಇಲ್ಲಿಗೆ ನಿಲ್ಲುವುದಿಲ್ಲ, ಇಡೀ ರಾಜ್ಯಾದ್ಯಂತ ನಮ್ಮ ಜಿಲ್ಲಾ ಮತ್ತು ತಾಲ್ಲೂಕು ಕೇಂದ್ರಗಳಲ್ಲಿ ಹೋರಾಟದ ಕರೆ ಕೊಟ್ಟರು. ನಾಡಿನ ಜನತೆಯ ಪರವಾಗಿ ರಾಜ್ಯ ಸರ್ಕಾರಕ್ಕೆ ಪ್ರಶ್ನೆ ಮಾಡ್ತೀನಿ ಗೃಹಲಕ್ಷ್ಮಿ ಯಾವ ದಿನಾಂಕಕ್ಕೆ ಕೊಡ್ತೀರಾ.? ಕ್ಯಾಲೆಂಡರ್ ನಲ್ಲಿ ಯಾವ ದಿನಾಂಕಕ್ಕೆ ಜಮೆ ಮಾಡ್ತೀರಾ ಎಂದು ಉತ್ತರ ಕೊಡಬೇಕು ಎಂದು ನಿಖಿಲ್…
ಬೆಂಗಳೂರು: ರಾಜ್ಯದ 9 ವಿಶ್ವವಿದ್ಯಾಲಯಗಳನ್ನು ಮುಚ್ಚುವ ನಿರ್ಧಾರದ ವಿರುದ್ಧ ಬಿಜೆಪಿ ನಿಯೋಗವು ಇಂದು ಗೌರವಾನ್ವಿತ ರಾಜ್ಯಪಾಲರಿಗೆ ಮನವಿ ಸಲ್ಲಿಸಿದೆ. ವಿಧಾನಪರಿಷತ್ತಿನ ಸದಸ್ಯರಾದ ಎನ್.ರವಿಕುಮಾರ್, ಶಶೀಲ್ ನಮೋಶಿ, ಹನುಮಂತ ನಿರಾಣಿ, ಡಿ.ಎಸ್.ಅರುಣ್, ಶಿಕ್ಷಣ ಪ್ರಕೋಷ್ಠದ ರಾಜ್ಯ ಸಂಚಾಲಕ ಡಾ.ಸಿ.ಬಿ.ಶಶಿಧರ್, ರಾಜ್ಯ ಸಹ ಸಂಚಾಲಕರಾದ ಎಂ.ಜಿ.ಭಟ್, ಹರೀಶ್.ಕೆ, ಡಾ.ರಾಘವೇಂದ್ರ ಹಾಗೂ ಅಶ್ವಿನಿ ಶಂಕರ್ ಅವರ ನಿಯೋಗವು ಈ ಮನವಿ ಸಲ್ಲಿಸಿತು. 9 ವಿಶ್ವವಿದ್ಯಾಲಯಗಳನ್ನು ಮುಚ್ಚುವ ನಿರ್ಧಾರವು ಅವೈಜ್ಞಾನಿಕ, ಅಸಾಂವಿಧಾನಿಕ ಮಾತ್ರವಲ್ಲದೆ ಇದೊಂದು ಅನ್ಯಾಯದ ನಿರ್ಧಾರ ಎಂದು ಗಮನ ಸೆಳೆಯಲಾಯಿತು. ಅದರಿಂದ ಆಗುವ ದುಷ್ಪರಿಣಾಮಗಳ ಕುರಿತು ಗಮನಕ್ಕೆ ತರಲಾಯಿತು. ರಾಜ್ಯ ಸರಕಾರದ ಈ ಕ್ರಮವನ್ನು ತಕ್ಷಣ ಹಿಂಪಡೆದುಕೊಳ್ಳುವಂತೆ ಸೂಚಿಸಿ, ಸೂಕ್ತ ನಿರ್ಧಾರ ಕೈಗೊಂಡು ಲಕ್ಷಾಂತರ ಗ್ರಾಮೀಣ ಬಡ ವಿದ್ಯಾರ್ಥಿಗಳ ಭವಿಷ್ಯವನ್ನು ಕಾಪಾಡಬೇಕೆಂದು ಮನವಿ ವಿನಂತಿಸಿದೆ. https://kannadanewsnow.com/kannada/time-is-not-far-when-congress-will-be-taught-a-lesson-rajkumar-patil-telkur/ https://kannadanewsnow.com/kannada/do-you-know-why-cm-siddaramaiah-was-late-in-the-house-today/
ಕಲಬುರಗಿ : ಕಲ್ಯಾಣ ಕರ್ನಾಟಕವನ್ನು ಸಂಪೂರ್ಣ ಕಡೆಗಣಿಸಿ ಈ ಭಾಗದ ಜನರಿಗೆ ಮಣ್ಣೆರಚಿದ್ದೇ ಕಾಂಗ್ರೆಸ್ ಸರ್ಕಾರದ ಸಾಧನೆ. ಸ್ವಜನ ಪಕ್ಷಪಾತ ಹಾಗೂ ಭ್ರಷ್ಟಾಚಾರದಲ್ಲಿ ಮುಳುಗಿ ಕಲ್ಯಾಣ ಕರ್ನಾಟಕದ ಜನರ ಆರೋಗ್ಯ, ಶಿಕ್ಷಣ, ಸಾಕ್ಷರತೆ, ಆರ್ಥಿಕತೆ ಸುಧಾರಿಸುವಲ್ಲಿ ಸಂಪೂರ್ಣ ವಿಫಲವಾಗಿದೆ ಎಂದು ಮಾಜಿ ಶಾಸಕ ರಾಜಕುಮಾರ ಪಾಟೀಲ್ ತೇಲ್ಕೂರ ಆರೋಪಿಸಿದರು. ಈ ಕುರಿತು ಪತ್ರಿಕಾ ಪ್ರಕಟಣೆ ಹೊರಡಿಸಿರುವ ಅವರು ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಗೆ 2024-25 ನೇ ಸಾಲಿನ ಬಜೆಟ್ ನಲ್ಲಿ ₹5 ಸಾವಿರ ಕೋಟಿ ಮೊತ್ತದ ಕ್ರಿಯಾ ಯೋಜನೆ ರೂಪಿಸಲು ಅನುಮೋದನೆ ನೀಡಿದ್ದ ಕಾಂಗ್ರೆಸ್ ಸರ್ಕಾರ ಆರ್ಥಿಕ ವರ್ಷದ ಅಂತ್ಯ ತಲುಪಿದರೂ ಈ ಸಾಲಿನ ಅನುದಾನದಲ್ಲಿ ನಯಾ ಪೈಸೆ ಬಿಡುಗಡೆ ಮಾಡದೇ ತನ್ನ ಬೊಕ್ಕಸ ಬರಿದಾಗಿಸಿಕೊಂಡು ಆರ್ಥಿಕವಾಗಿ ದಿವಾಳಿ ಅಂಚಿನತ್ತ ತಲುಪಿರುವುದಕ್ಕೆ ನಿದರ್ಶನ. ಜೊತೆಗೆ ಕಲ್ಯಾಣ ಕರ್ನಾಟಕದ ಅಭಿವೃದ್ಧಿಯ ಬಗ್ಗೆ ಈ ಸರ್ಕಾರಕ್ಕೆ ಎಳ್ಳಷ್ಟೂ ಕಾಳಜಿಯಿಲ್ಲ ಎನ್ನುವುದನ್ನು ಸಾಕ್ಷೀಕರಿಸುತ್ತಿದೆ. ಹಿಂದುಳಿದ ಪ್ರದೇಶಗಳೆನಿಸಿಕೊಂಡಿರುವ ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ ಈ ಸರ್ಕಾರದ ಕೊಡುಗೆಗಳು ಏನೇನೂ…
ಶನಿವಾರ ಆಂಜನೇಯ ಸ್ವಾಮಿಗೆ ವಿಶೇಷ ದಿನವಾಗಿದ್ದು ಈ ದಿನ ಈ ಆರು ಪವರ್ ಫುಲ್ ಮಂತ್ರಗಳನ್ನು ಹೇಳಿದರೆ ನಿಮ್ಮ ಕಷ್ಟಗಳು ದೂರವಾಗುವುದು. ಆ ಮಂತ್ರಗಳು ಯಾವುವು ನೋಡಿ.ಓಂ ಹನುಮತೇ ನಮಃ- ಈ ಮಂತ್ರ ಹೇಳುವುದರಿಂದ ನಿಮಗೆ ಕಾನೂನಿನ ವಿವಾದಗಳು, ಸಂಕಷ್ಟಗಳಿದ್ದರೆ ನಿವಾರಣೆಯಾಗುವುದು. ಓಂ ಹಂ ಹನುಮತೇ ರುದ್ರಾತ್ಮಕಾಯಂ ಹಮ್ ಫಟ್- ಈ ಮಂತ್ರವು ನಿಮ್ಮನ್ನು ಮೃತ್ಯುಭಯದಿಂದ ದೂರ ಮಾಡುತ್ತದೆ. ಅಕಾಲ ಮೃತ್ಯು ಭಯವಿದ್ದರೆ ತಪ್ಪದೇ ಈ ಮಂತ್ರವನ್ನು ಜಪಿಸಿ. ಓಂ ಹಂ ಪವನ ನಂದನಾಯೇ ಸ್ವಾಹ- ಈ ಮಂತ್ರವನ್ನು ಹೇಳುವುದರಿಂದ ಹನುಮಂತನ ಆಶೀರ್ವಾದ ಪಡೆಯುತ್ತೀರಿ. ವಿಶೇಷವಾಗಿ ಇದನ್ನು ಬ್ರಹ್ಮಚಾರಿಗಳು ಹೇಳಿದರೆ ಉತ್ತಮ. ಓಂ ನಮೊ ಹರಿ ಮರ್ಕಟ ಮರ್ಕಟಾಯೇ ಸ್ವಾಹ- ಈ ಮಂತ್ರವನ್ನು ಹೇಳುವುದರಿಂದ ಶತ್ರುಭಯ ನಾಶವಾಗುತ್ತದೆ. ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ವಿದ್ವಾನ್ ವಿದ್ಯಾಧರ್ ತಂತ್ರಿ ಜ್ಯೋತಿಷ್ಯರ ಮೊಬೈಲ್ ಸಂಖ್ಯೆ 9686268564 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ…
ಬೆಂಗಳೂರು: ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರಿಗೆ ವಿಧಾನಮಂಡಲದ ಜಂಟಿ ಅಧಿವೇಶನ ಭಾಷಣಕ್ಕಾಗಿ ವಿಧಾನಸೌಧದ ಮುಂದೆ ಸ್ವಾಗತ ಕೋರಿದ ಬಳಿಕ, ರಾಜ್ಯಪಾಲರು ಸದನಕ್ಕೆ ಬಂದರೂ, ಸಿದ್ಧರಾಮಯ್ಯ ಮಾತ್ರ ಆಗಮಿಸದೇ ಇರೋದಕ್ಕೆ ಕಾರಣವನ್ನು ಸಿಎಂ ಕಚೇರಿ ನೀಡಿದೆ. ಈ ಬಗ್ಗೆ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿರುವಂತ ಮುಖ್ಯಮಂತ್ರಿಗಳ ಕಚೇರಿಯು, ಜಂಟಿ ಅಧಿವೇಶನವನ್ನು ಉದ್ದೇಶಿಸಿ ಮಾತನಾಡಲು ಆಗಮಿಸಿದ್ದ ರಾಜ್ಯಪಾಲರು, ಮುಖ್ಯಮಂತ್ರಿಗಳಿಗಾಗಿ ಕಾದಿದ್ದರು ಎನ್ನುವ ತಪ್ಪು ಅಭಿಪ್ರಾಯ ವ್ಯಕ್ತವಾಗಿದೆ. ಸಿಎಂ ಬರಲು ತಡವಾದ ಕಾರಣ ರಾಜ್ಯಪಾಲರು ಸದನದಲ್ಲಿ ಕೆಲಹೊತ್ತು ಕಾದರು ಎಂಬ ತಪ್ಪು ವರದಿಯಾಗುತ್ತಿದೆ ಎಂದಿದೆ. ಆದರೆ, ಮುಖ್ಯಮಂತ್ರಿಗಳು ರಾಜ್ಯಪಾಲರನ್ನು ಸ್ವಾಗತಿಸಿದ ಬಳಿಕ, ಕಾಲು ನೋವಿನ ಕಾರಣದಿಂದ ಮೆಟ್ಟಿಲು ಹತ್ತಿ ತಕ್ಷಣ ಬರಲಾಗದ ಕಾರಣ, ಸದನದ ಒಳಗೆ ಬರಲು ಕೆಲ ನಿಮಿಷ ತಡವಾಗಿದೆ ಅಷ್ಟೆ ಎಂಬುದಾಗಿ ಸ್ಪಷ್ಟ ಪಡಿಸಿದೆ. https://kannadanewsnow.com/kannada/man-killed-as-ksrtc-bus-collides-with-bus-in-bengaluru/ https://kannadanewsnow.com/kannada/permanent-solution-to-hassan-kodagu-elephant-problems-minister-eshwar-khandre/ https://kannadanewsnow.com/kannada/breaking-kalaburagi-man-commits-suicide-after-wifes-harassment/
ಬೆಂಗಳೂರು: ರಾಜ್ಯ ಸರ್ಕಾರ ಜಾರಿಗೆ ತಂದಿರುವಂತ ಮಹತ್ವದ ಯೋಜನೆಯಲ್ಲಿ ಗೃಹಲಕ್ಷ್ಮೀ ಯೋಜನೆಯೂ ಒಂದಾಗಿದೆ. ಈ ಯೋಜನೆಯ ಅಡಿಯಲ್ಲಿ ರೂ.2000 ಹಣವನ್ನು ಕುಟುಂಬದ ಯಜಮಾನಿ ಮಹಿಳೆಯರ ಖಾತೆಗೆ ಜಮಾ ಮಾಡಲಾಗುತ್ತಿದೆ. ಇಂದು ಗೃಹಲಕ್ಷ್ಮೀ ಯೋಜನೆಯ ಬಾಕಿ ಹಣವನ್ನು ಸರ್ಕಾರ ಡಿಬಿಟಿ ಮೂಲಕ ವರ್ಗಾವಣೆ ಮಾಡಲಾಗಿದೆ. ಈ ಮೂಲಕ ಗೃಹಲಕ್ಷ್ಮೀ ಯೋಜನೆ ಫಲಾನುಭವಿಗಳಿಗೆ ಸಿಹಿಸುದ್ದಿ ನೀಡಿದೆ. ಫೆಬ್ರವರಿ.21ರಂದು ಈ ವಿಷಯವಾಗಿ ಮಾತನಾಡಿದ್ದಂತ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಅವರು, ಇನ್ನೊಂದು ವಾರದಲ್ಲಿ ಗೃಹಲಕ್ಷ್ಮೀ ಯೋಜನೆಯ ಫಲಾನುಭವಿಗಳ ಖಾತೆಗೆ ಹಣ ಸಂದಾಯವಾಗಲಿದೆ. ತಾಲೂಕು ಪಂಚಾಯಿತಿ ಮುಖಾಂತರ ಫಲಾನುಭವಿಗಳ ಬ್ಯಾಂಕ್ ಖಾತೆಗೆ ಹಣ ಬಿಡುಗಡೆ ಮಾಡಲಾಗುವುದು ಎಂದಿದ್ದರು. ಇದುವರೆಗೆ ಬೆಂಗಳೂರಿನ ಕೇಂದ್ರ ಕಚೇರಿ ಮೂಲಕ ಹಣ ಬಿಡುಗಡೆ ಮಾಡಲಾಗುತ್ತಿತ್ತು. ಇದನ್ನು ವಿಕೇಂದ್ರೀಕರಣ ಮಾಡುವ ನಿಟ್ಟಿನಲ್ಲಿ ತಾಲೂಕು ಪಂಚಾಯಿತಿ ಮೂಲಕ ಹಣ ಬಿಡುಗಡೆ ಮಾಡಿ, ನಂತರ ನಮ್ಮ ಇಲಾಖೆಯ ಶಿಶು ಯೋಜನಾಭಿವೃದ್ಧಿ ಅಧಿಕಾರಿಗಳ (ಸಿಡಿಪಿಓ) ಖಾತೆಗೆ ಹಣವನ್ನು ವರ್ಗಾವಣೆ ಮಾಡಲಾಗುತ್ತದೆ. ಇನ್ನೊಂದು ವಾರದಲ್ಲಿ ಹಣ…
ಬೇಲೂರು : ಹಾಸನ, ಕೊಡಗು ಜಿಲ್ಲೆಗಳಲ್ಲಿ ನಿವಾಸಿ ಆನೆಗಳ ಸಂಖ್ಯೆಯಲ್ಲಿ ಹೆಚ್ಚಳವಾಗಿದ್ದು, ಸಾವು-ನೋವೂ ಹೆಚ್ಚುತ್ತಿರುವುದು ಅತ್ಯಂತ ದುಃಖದ ಸಂಗತಿಯಾಗಿದೆ. ಈ ನಿಟ್ಟಿನಲ್ಲಿ ಎರಡೂ ಜಿಲ್ಲೆಗಳ ಕಾಡಾನೆ ಕಾಟಕ್ಕೆ ಶಾಶ್ವತ ಪರಿಹಾರ ಒದಗಿಸಲು ಸರ್ಕಾರ ಪ್ರಯತ್ನಶೀಲವಾಗಿದೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ತಿಳಿಸಿದ್ದಾರೆ. ಬೇಲೂರು ತಾಲೂಕು ಬಿಕ್ಕೋಡು ಬಳಿ ಇತ್ತೀಚೆಗೆ ಆನೆ ದಾಳಿಯಿಂದ ಮೃತಪಟ್ಟ ಅನಿಲ್ ಮನೆಗೆ ಭೇಟಿ ನೀಡಿ ಅವರ ತಾಯಿ ಪಾರ್ವತಮ್ಮ ಮತ್ತು ಕುಟುಂಬದ ಸದಸ್ಯರಿಗೆ ಸಾಂತ್ವನ ಹೇಳಿದ ಅವರು ಈ ಸಂಕಷ್ಟದ ಸಮಯದಲ್ಲಿ ಸರ್ಕಾರ ನಿಮ್ಮೊಂದಿಗಿದೆ. ಮುಖ್ಯಮಂತ್ರಿಗಳೊಂದಿಗೆ ಮಾತನಾಡಿ, ಹೆಚ್ಚಿನ ಪರಿಹಾರ ದೊರಕಿಸಲು ಪ್ರಯತ್ನಿಸುವುದಾಗಿ ಹೇಳಿದರು. ಅರಣ್ಯ ಸಚಿವನಾದ ಬಳಿಕ ತಾವು 5ನೇ ಬಾರಿ ಹಾಸನಕ್ಕೆ ಭೇಟಿ ನೀಡಿದ್ದು, ಮಾನವ-ವನ್ಯಜೀವಿ ಸಂಘರ್ಷ ತಗ್ಗಿಸಲು ಹಲವು ಯೋಜನೆ ರೂಪಿಸಲಾಗಿದೆ. ಆನೆಗಳ ಚಲನವಲನದ ಬಗ್ಗೆ ನಿಗಾ ಇಡಲು ಹಾಸನದಲ್ಲಿ ನಿಯಂತ್ರಣ ಕೊಠಡಿ ಸ್ಥಾಪಿಸಲಾಗಿದೆ. ಕಳೆದ 2 ವರ್ಷದಲ್ಲಿ ರೈಲ್ವೆ ಬ್ಯಾರಿಕೇಡ್ ಅಳವಡಿಸಲು 31.6 ಕೋಟಿ…













