Subscribe to Updates
Get the latest creative news from FooBar about art, design and business.
Author: ವಸಂತ ಬಿ ಈಶ್ವರಗೆರೆ
ವಸಂತ ಬಿ ಈಶ್ವರಗೆರೆ (Vasantha B Eshwaragere) ಅವರು ಕರ್ನಾಟಕದ ಪತ್ರಕರ್ತರು ಮತ್ತು ಕವಿ. ಉದಯ ನ್ಯೂಸ್, ಟಿವಿ5 ಕನ್ನಡ ಸೇರಿದಂತೆ ವಿವಿಧ ಸುದ್ದಿ ಮಾಧ್ಯಮಗಳಲ್ಲಿ ಸುಮಾರು 15 ವರ್ಷಗಳ ಅನುಭವವನ್ನು ಹೊಂದಿದ್ದಾರೆ. ಪ್ರಸ್ತುತ ಅವರು Kannada News Now ಡಿಜಿಡಿಲ್ ಮಾಧ್ಯಮದಲ್ಲಿ ಸಂಪಾದಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಇವರು ತಾಜಾ ಸುದ್ದಿ, ಸಾಹಿತ್ಯ, ಸಾಮಾಜಿಕ ವರದಿಗಾರಿಕೆ, ನ್ಯಾಯಾಂಗ ಸಂಬಂಧಿತ ವರದಿ ಮತ್ತು ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿದ ಸುದ್ದಿಗಳ ವರದಿಯಲ್ಲಿ ಸಕ್ರಿಯರಾಗಿದ್ದಾರೆ. ಗುಡವಿ ಪಕ್ಷಿಧಾಮದಂತಹ ಪ್ರವಾಸಿ ತಾಣಗಳ ಕುರಿತು ಲೇಖನಗಳನ್ನು ಬರೆದಿದ್ದಾರೆ.
ಬೆಂಗಳೂರು: ಬೆಂಗಳೂರಿನ ಜ್ವಲಂತ ಸಮಸ್ಯೆಗಳ ಪರಿಹಾರಕ್ಕೆ ಆಗ್ರಹಿಸಿ 28ರಂದು ನಮ್ಮೆಲ್ಲ ಸಂಸದರು, ಶಾಸಕರು, ವಿಧಾನಪರಿಷತ್ ಸದಸ್ಯರು ಹಣಕಾಸಿನ ಸಚಿವರೂ ಆದ ಮುಖ್ಯಮಂತ್ರಿಗಳನ್ನು ಭೇಟಿ ಮಾಡಲಿದ್ದೇವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಶಾಸಕ ಬಿ.ವೈ. ವಿಜಯೇಂದ್ರ ಅವರು ತಿಳಿಸಿದ್ದಾರೆ. ಇಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ಬೆಂಗಳೂರು ಮಹಾನಗರದ ಅಭಿವೃದ್ಧಿಗೆ ಬಜೆಟ್ನಲ್ಲಿ ಹೆಚ್ಚು ಅನುದಾನ ನೀಡಬೇಕೆಂದು ಒತ್ತಾಯಿಸಿ ಮನವಿ ನೀಡುತ್ತೇವೆ ಎಂದು ಹೇಳಿದರು. ಬೆಂಗಳೂರಿನ ಜ್ವಲಂತ ಸಮಸ್ಯೆಗಳ ಕುರಿತು ಮುಂದಿನ ದಿನಗಳಲ್ಲಿ ಪ್ರತಿ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಹೋರಾಟ ಕೈಗೆತ್ತಿಕೊಳ್ಳಲಿದ್ದು, ಅದರ ಬಗ್ಗೆಯೂ ಚರ್ಚೆ ಆಗಿದೆ ಎಂದರು. ಬೆಂಗಳೂರಿನಲ್ಲಿ ಬಿಬಿಎಂಪಿ ಚುನಾವಣೆ ಆಗಬೇಕು. ಗ್ರೇಟರ್ ಬೆಂಗಳೂರು ಪ್ರಸ್ತಾಪ ಕೈಬಿಡಬೇಕು. ಟನೆಲ್ ರಸ್ತೆ ಯೋಜನೆ ಕೈಬಿಟ್ಟು ಬೆಂಗಳೂರಿನ ಟ್ರಾಫಿಕ್ ಸಮಸ್ಯೆ ಪರಿಹರಿಸಲು ಸರಕಾರ ಚಿಂತಿಸಬೇಕಿದೆ ಎಂದು ಒತ್ತಾಯಿಸಿದರು. ಬೆಂಗಳೂರು ನಗರದ ರಸ್ತೆ ಗುಂಡಿಗಳನ್ನು ಮುಚ್ಚಲೂ ಈ ಸರಕಾರಕ್ಕೆ ಆಗುತ್ತಿಲ್ಲ. ಆದರೆ, ಟನೆಲ್ ರಸ್ತೆ ಕುರಿತು ಮಾತನಾಡುತ್ತಿದ್ದಾರೆ. ಟನೆಲ್ ರಸ್ತೆ ಯೋಜನೆ ಕೈಬಿಟ್ಟು…
ಬೆಂಗಳೂರು: ರಾಜ್ಯದ ವಿದ್ಯಾರ್ಥಿಗಳಿಗೆ ಉದ್ಯೋಗ ಲಭ್ಯವಾಗುವ ನಿಟ್ಟಿನಲ್ಲಿ ತರಬೇತಿ ನೀಡಲು ರಾಜ್ಯದಲ್ಲಿ 7 ಕಡೆಯಲ್ಲಿ ಕೌಶಲ್ಯ ತರಬೇತಿ ಕೇಂದ್ರಗಳು ಸ್ಥಾಪನೆಯಾಗಲಿದ್ದಾವೆ. ಈ ಬಗ್ಗೆ ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ ಸುಧಾಕರ್ ಮಾಹಿತಿ ನೀಡಿದ್ದು, ವಿದ್ಯಾರ್ಥಿಗಳಿಗೆ ಉದ್ಯೋಗ ಲಭ್ಯವಾಗುವ ನಿಟ್ಟಿನಲ್ಲಿ ವಿವಿಧ ಕೈಗಾರಿಕೆಗಳು, ಕಂಪನಿಗಳು, ವಿದೇಶಿ ವಿವಿಗಳೊಂದಿಗೆ ವಿವಿಧ ಉದ್ದೇಶಗಳಿಗೆ ಸುಮಾರು 20 ಒಡಂಬಡಿಕೆಗಳನ್ನು ಮಾಡಿಕೊಂಡಿದ್ದೇವೆ ಎಂದಿದ್ದಾರೆ. ಮುಂದುವರೆದ ಭಾಗವಾಗಿ ವಿಶ್ವಬ್ಯಾಂಕ್ ನೆರವಿನಲ್ಲಿ ರಾಜ್ಯದ ಏಳೆಂಟು ಕಡೆ ಸೆಂಟರ್ಸ್ ಆಫ್ ಎಕ್ಸಲೆನ್ಸ್ ಸ್ಥಾಪಿಸುವ ಮಹತ್ವದ ಯೋಜನೆ ರೂಪಿಸಲಾಗಿದೆ. ಜೂನ್ ವೇಳೆಗೆ ಅನುಮೋದನೆ ಸಿಗುವ ನಿರೀಕ್ಷೆ ಇದೆ ಎಂದು ಉನ್ನತ ಶಿಕ್ಷಣ ಸಚಿವರಾದ ಡಾ. ಎಂ.ಸಿ.ಸುಧಾಕರ್ ತಿಳಿಸಿದ್ದಾರೆ. https://twitter.com/KarnatakaVarthe/status/1894269269774606833 https://kannadanewsnow.com/kannada/ima-case-victims-to-get-relief-before-ramzan-minister-krishna-byre-gowda/ https://kannadanewsnow.com/kannada/nhm-employees-protest-intensifies-health-services-disrupted-across-the-state-from-tomorrow/
ಮುಂಬರುವ ಮಹಾ ಶಿವರಾತ್ರಿಯಂದು (26/0272025) ಬ್ರಹ್ಮ ಮೂರ್ಹತ ಸಮಯದಲ್ಲಿ, ಶಿವನ ಈ ಒಂದು ಸಾಲಿನ ಮಂತ್ರವನ್ನು ಜಪಿಸಿದರೆ ಸಾಕು, ಜೀವನದಲ್ಲಿ ಎಲ್ಲಾ ಸಂಪತ್ತು ಲಾಭಗಳು ಸಿಗುತ್ತವೆ. ಮಹಾ ಶಿವರಾತ್ರಿ ದಿನವನ್ನು ಈ ತಿಂಗಳಲ್ಲಿ 26/02/2025 ರಂದು ಆಚರಿಸಲಾಗುತ್ತದೆ. ಶಿವನಿಗೆ ಅನೇಕ ವಿಶೇಷ ದಿನಗಳು ಮತ್ತು ಉಪವಾಸ ದಿನಗಳು ಇದ್ದರೂ, ಈ ಮಹಾ ಶಿವರಾತ್ರಿಯು ಬಹಳ ಮುಖ್ಯವಾದ ಉಪವಾಸ ದಿನವಾಗಿದೆ. ಈ ದಿನ ಶಿವನನ್ನು ಪ್ರಾರ್ಥಿಸಿದರೆ ನಾವು ಕೇಳಿದ್ದೆಲ್ಲ ಸಿಗುತ್ತದೆ ಎಂಬ ನಂಬಿಕೆ ಇದೆ. ಈ ಮಹತ್ವದ ದಿನದಂದು ನಾವು ಶಿವನನ್ನು ಪ್ರಾರ್ಥಿಸಬೇಕು ಮತ್ತು ದಿನದ ಆರಂಭದಲ್ಲಿ ಶಿವನ ಈ ಒಂದು ಮಂತ್ರವನ್ನು ಹೇಳಬೇಕು. ಈ ಮೂಲಕ ನಾವು ನಮ್ಮ ಜೀವನದಲ್ಲಿ ಎಲ್ಲಾ ಸಂಪತ್ತು ಲಾಭಗಳನ್ನು ಪಡೆಯಬಹುದು ಎಂದು ಹೇಳಲಾಗುತ್ತದೆ. ಆಧ್ಯಾತ್ಮದ ಕುರಿತಾದ ಈ ಪೋಸ್ಟ್ನಲ್ಲಿ ಮಂತ್ರ ಯಾವುದು ಮತ್ತು ಅದನ್ನು ಹೇಗೆ ಹೇಳಬೇಕು ಎಂಬುದನ್ನು ನೀವು ಕಂಡುಹಿಡಿಯಬಹುದು. ಶ್ರೀ ಸಿಗಂದೂರು ಚೌಡೇಶ್ವರಿ ಜ್ಯೋತಿಷ್ಯ ಪೀಠ ನಂ 1ಕೇರಳ ಕೊಳ್ಳೇಗಾಲದ ಮಹಾ ಮಾಂತ್ರಿಕ ಜ್ಯೋತಿಷ್ಯರು ವಿದ್ವಾನ್…
ಬೆಂಗಳೂರು: ಐಎಂಎ (ಐ- ಮಾನಿಟರಿ ಅಡ್ವೈಸರಿ) ಬಹುಕೋಟಿ ವಂಚನೆ ಪ್ರಕರಣದಲ್ಲಿ ಹಣ ಕಳೆದುಕೊಂಡ ಎಲ್ಲ ಠೇವಣಿದಾರರಿಗೂ ರಂಜಾನ್ಗೂ ಮೊದಲೇ ನಿಗದಿತ ಪರಿಹಾರದ ಹಣ ನೀಡಲು ಕ್ರಮ ಕೈಗೊಳ್ಳಲಾಗುವುದು ಎಂದು ಕಂದಾಯ ಸಚಿವರಾದ ಕೃಷ್ಣ ಬೈರೇಗೌಡ ಅವರು ತಿಳಿಸಿದ್ದಾರೆ. https://twitter.com/KarnatakaVarthe/status/1894310215874744673 ಐಎಂಎ ಹಗರಣದ ಮೊತ್ತ ಎಷ್ಟು? ಈ ವರೆಗೆ ಈ ಸಂಸ್ಥೆಯ ಎಷ್ಟು ಕೋಟಿ ಮೌಲ್ಯದ ಸ್ಥಿರಾಸ್ತಿ/ಚರಾಸ್ತಿಗಳನ್ನು ಮುಟ್ಟುಗೋಲು ಹಾಕಿಕೊಳ್ಳಲಾಗಿದೆ? ಕಳೆದ ಏಳು ವರ್ಷದಲ್ಲಿ ಈ ಕಂಪೆನಿಯಲ್ಲಿ ಹಣ ಹೂಡಿ ಕಳೆದುಕೊಂಡ ಎಷ್ಟು ಜನರಿಗೆ ಎಷ್ಟು ಪ್ರಮಾಣದಲ್ಲಿ ಹಣ ಹಿಂತಿರುಗಿಸಲಾಗಿದೆ ಮತ್ತು ಉಳಿದ ಸಂತ್ರಸ್ತರಿಗೆ ಯಾವಾಗ ಮತ್ತು ಹೇಗೆ ಹಣ ಹಿಂತಿರುಗಿಸಬೇಕು? ಎಂಬ ಕುರಿತು ಸೋಮವಾರ ವಿಕಾಸಸೌಧ ಕಚೇರಿಯಲ್ಲಿ ಸಭೆ ನಡೆಸಿ ಚರ್ಚಿಸಲಾಯಿತು. ಈ ಸಭೆಯಲ್ಲಿ ಸಚಿವರಾದ ಜಮೀರ್ ಅಹ್ಮದ್, ಶಾಸಕರಾದ ರಿಜ್ವಾನ್ ಅರ್ಷದ್, ಮುಖ್ಯಮಂತ್ರಿ ರಾಜಕೀಯ ಕಾರ್ಯದರ್ಶಿ ನಸೀರ್ ಅಹಮದ್ ಅವರ ಜೊತೆಗೆ ಐಎಂಎ ಹಗರಣದಿಂದ ಹಣ ಕಳೆದುಕೊಂಡ ಹಲವರು ಭಾಗಿಯಾಗಿದ್ದರು. ಈ ವೇಳೆ ಸಂತ್ರಸ್ತರಿಗೆ ಭರವಸೆ ನೀಡಿದ ಸಚಿವ ಕೃಷ್ಣ…
ಬೆಂಗಳೂರು: ರಾಜ್ಯ ಸರ್ಕಾರದಿಂದ ಬಿಳಿಜೋಳ ಬೆಳೆಗಾರರಿಗೆ ಗುಡ್ ನ್ಯೂಸ್ ಎನ್ನುವಂತೆ ಕನಿಷ್ಠ ಬೆಂಬಲಬೆಲೆ ಯೋಜನೆಯಡಿ ಬಿಳಿಜೋಳ ಖರೀದಿಸುವುದಾಗಿ ಘೋಷಿಸಿದೆ. ರಾಜ್ಯ ಸರ್ಕಾರ 2024-25ನೇ ಸಾಲಿನಲ್ಲಿ ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ಎಫ್ಎಕ್ಯೂ ಗುಣಮಟ್ಟದ ಬಿಳಿಜೋಳ ಖರೀದಿಸಲು ಆದೇಶ ಮಾಡಿದೆ. ಜಿಲ್ಲಾ ಟಾಸ್ಕ್ಫೋರ್ಸ್ಗಳ ಶಿಫಾರಸ್ಸಿನಂತೆ ವಿಜಯಪುರ, ಕಲಬುರಗಿ, ಬಾಗಲಕೋಟೆ, ಯಾದಗಿರಿ, ಬೀದರ್, ಕೊಪ್ಪಳ, ರಾಯಚೂರು, ವಿಜಯನಗರ, ಬಳ್ಳಾರಿ, ಬೆಳಗಾವಿ, ಗದಗ, ಹಾವೇರಿ ಹಾಗೂ ಧಾರವಾಡ ಜಿಲ್ಲೆಗಳಲ್ಲಿ ಖರೀದಿ ಕೇಂದ್ರಗಳನ್ನು ಆರಂಭಿಸಲಾಗಿದೆ. https://twitter.com/KarnatakaVarthe/status/1894273171932762592 ರೈತಬಾಂಧವರು ಮಾರುಕಟ್ಟೆಯಲ್ಲಿ ಕಡಿಮೆ ಬೆಲೆಗೆ ಬಿಳಿಜೋಳವನ್ನು ಮಾರಾಟ ಮಾಡದೇ ಖರೀದಿ ಕೇಂದ್ರಗಳಲ್ಲಿ ಮಾರಾಟ ಮಾಡಿ ಸರ್ಕಾರದ ಬೆಂಬಲ ಬೆಲೆ ಯೋಜನೆಯ ಸದುಪಯೋಗ ಪಡೆದುಕೊಳ್ಳಬೇಕು. ಬೆಂಬಲ ಬೆಲೆ ಎಷ್ಟು? ಹೈಬ್ರಿಡ್ ಜೋಳ ಪ್ರತಿ ಕ್ವಿಂಟಾಲ್ ಗೆ ರೂ.3371 ಮಾಲ್ದಂಡಿ ಜೋಳ ಪ್ರತಿ ಕ್ವಿಂಟಾಲ್ ಗೆ ರೂ.3421 ಪ್ರತಿ ಎಕರೆಗೆ ನಿಗದಿಪಡಿಸಿರುವ ಪ್ರಮಾಣ 20 ಕ್ವಿಂಟಾಲ್ ಪ್ರತಿ ರೈತರಿಂದ ಖರೀದಿ ಪ್ರಮಾಣ 150 ಕ್ವಿಂಟಾಲ್ ಮಾರಾಟ ಹೇಗೆ.? ಬಿಳಿಜೋಳ ಬೆಳಗಾರರು ಪ್ರೂಟ್ಸ್ ಐಡಿಯೊಂದಿಗೆ…
ಬೆಂಗಳೂರು: ತಮ್ಮ ಬಟ್ಟೆ ಅಂಗಡಿಗೆ ಬಟ್ಟೆ ಖರೀದಿಸಿ ತರೋದಕ್ಕೆ ದೆಹಲಿ, ಮುಂಬೈಗೆ ತೆರಳೋದಕ್ಕೆ ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಆರೋಪಿ ಪವಿತ್ರಾ ಗೌಡಗೆ ಕೋರ್ಟ್ ಅನುಮತಿ ನೀಡಿದೆ. ಈ ಸಂಬಂಧ ರೇಣುಕಾಸ್ವಾಮಿ ಕೊಲೆ ಪ್ರಕರಣದ ಎ1 ಆರೋಪಿ ಪವಿತ್ರಾ ಗೌಡ ಪರವಾಗಿ ರವೀಂದ್ರ ಗೌಡ ಎಂಬುವರು ಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯನ್ನು ಬೆಂಗಳೂರಿನ 57ನೇ ಸಿಸಿಹೆಚ್ ಕೋರ್ಟ್ ನ ನ್ಯಾಯಮೂರ್ತಿ ಜೈಶಂಕರ್ ವಿಚಾರಣೆ ನಡೆಸಿದರು. ಮಾರ್ಚ್ 3ರಿಂದ 10 ಹಾಗೂ ಮಾರ್ಚ್ 17ರಿಂದ 26ರವರೆಗೆ ದೆಹಲಿ ಹಾಗೂ ಮುಂಬೈಗೆ ಪವಿತ್ರಾ ಗೌಡ ಅವರು ತಮ್ಮ ಅಂಗಡಿಗೆ ಬಟ್ಟೆ ಖರೀದಿಸಲು ತೆರಳುತ್ತಿದ್ದಾರೆ. ಇದಕ್ಕೆ ಅನುಮತಿ ನೀಡುವಂತೆ ಮನವಿ ಮಾಡಲಾಗಿತ್ತು. ಈ ಮನವಿ ಪುರಸ್ಕರಿಸಿರುವಂತ ಕೋರ್ಟ್, ಪವಿತ್ರಾ ಗೌಡ ಅವರಿಗೆ ದೆಹಲಿ, ಮುಂಬೈಗೆ ತೆರಳಲು ಅನುಮತಿ ನೀಡಿದೆ. https://kannadanewsnow.com/kannada/man-arrested-for-stealing-gold-from-sai-gold-palace-gold-ornaments-worth-rs-63-lakh-seized/ https://kannadanewsnow.com/kannada/nhm-employees-protest-intensifies-health-services-disrupted-across-the-state-from-tomorrow/
ಬೆಂಗಳೂರು: ಜೆಡಿಎಸ್ ಎಂಎಲ್ಸಿ ಶರವಣ ಮಾಲೀಕತ್ವದ ಸಾಯಿ ಗೋಲ್ಡ್ ಪ್ಯಾಲೇಸ್ ನಲ್ಲಿ ಕಳ್ಳತನ ಮಾಡಲಾಗಿತ್ತು. ಈ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಕಳ್ಳರನ್ನು ಬಂಧಿಸಿರುವಂತ ಪೊಲೀಸರು 63 ಲಕ್ಷ ಮೌಲ್ಯದ ಚಿನ್ನಾಭರಣವನ್ನು ವಶಕ್ಕೆ ಪಡೆದಿದ್ದಾರೆ. ಕಳೆದ 15 ದಿನಗಳ ಹಿಂದೆ ಚಿನ್ನದ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದಂತ ಮೌನೇಶ್ ಎಂಬಾತನ ಕೈಗೆ ಒಂದೂವರೆ ಕೆಜಿ ಚಿನ್ನ ಕೊಟ್ಟು ಹಾಲ್ ಮಾರ್ಕ್ ಹಾಕಿಸಿಕೊಂಡು ಬರೋದಕ್ಕೆ ಕಳುಹಿಸಲಾಗಿತ್ತು. ಆದರೇ ಆ ಚಿನ್ನದೊಂದಿಗೆ ಮೌನೇಶ್ ರಾಜಸ್ಥಾನಕ್ಕೆ ಪರಾರಿಯಾಗಿದ್ದನು. ಈ ಪ್ರಕರಣ ಸಂಬಂಧ ಹಲಸೂರು ಗೇಟ್ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿತ್ತು. ಕಳ್ಳತನ ಮಾಡಿದ್ದಂತ ಚಿನ್ನಾಭರಣವನ್ನು ಸ್ನೇಹಿತ ಮಹಾವೀರ್ ಮನೆಯಲ್ಲಿ ಮಾರಾಟ ಮಾಡಲು ಆಗದೇ ಇರಿಸಿದ್ದನು. ಆದರೇ ಮಹಾವೀರ್ ಎರಡು ದಿನಗಳ ಬಳಿಕ ಮೌನೇಶ್ ಗೆ ಕರೆ ಮಾಡಿ ನನ್ನ ಮನೆ ಮೇಲೆ ಪೊಲೀಸರು ದಾಳಿ ನಡೆಸಿ, ಚಿನ್ನವನ್ನು ತೆಗೆದುಕೊಂಡು ಹೋಗಿದ್ದಾರೆ ಅಂತ ಕತೆ ಹೇಳಿದ್ದಾನೆ. ಇತ್ತ ಹಲಸೂರು ಗೇಟ್ ಪೊಲೀಸರು ರಾಜಸ್ಥಾನಕ್ಕೆ ತೆರಳಿ ಆರೋಪಿ ಮೌನೇಶ್ ಬಂಧಿಸಿ…
ಬೆಂಗಳೂರು: ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿಗೆ ಸಂಕಷ್ಟ ಎದುರಾಗಿದೆ. ಡಿನೋಟಿಫಿಕೇಷನ್ ಪ್ರಕರಣದಲ್ಲಿ ಲೋಕಾಯುಕ್ತದಿಂದ ಸಲ್ಲಿಕೆಯಾಗಿದ್ದಂತ ಬಿ ರಿಪೋರ್ಟ್ ರದ್ದುಗೊಳಿಸುವಂತ ಸಲ್ಲಿಸಿದ್ದಂತ ಮೇಲ್ಮನವಿ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ. ಹೆಚ್.ಡಿ ಕುಮಾರಸ್ವಾಮಿ ಅವರು ಜೂನ್ 2006ರಿಂದ ಅಕ್ಟೋಬರ್ 2007ರಲ್ಲಿ ಮುಖ್ಯಮಂತ್ರಿಯಾಗಿದ್ದಂತ ಸಂದರ್ಭದಲ್ಲಿ ಬಿಡಿಎ ಸ್ವಾಧೀನಪಡಿಸಿಕೊಂಡಿದ್ದಂತ ಜಮೀನನ್ನು ಡಿನೋಟಿಫಿಕೇಷನ್ ಮಾಡಿದ್ದರು. ಈ ಸಂಬಂಧ ಪ್ರಕರಣ ದಾಖಲಾಗಿತ್ತು. ಈ ಕೇಸ್ ವಿಚಾರಣೆ ನಡೆಸಿದ್ದಂತ ಹೈಕೋರ್ಟ್ ಲೋಕಾಯುಕ್ತದಿಂದ ಸಲ್ಲಿಸಿದ್ದಂತ ಬಿ-ರಿಪೋರ್ಟ್ ಅನ್ನು ವಜಾಗೊಳಿಸಿತ್ತು. ಈ ಆದೇಶವನ್ನು ಪ್ರಶ್ನಿಸಿ ಹೆಚ್.ಡಿ ಕುಮಾರಸ್ವಾಮಿ ಅವರು ಸುಪ್ರೀಂ ಕೋರ್ಟ್ ಗೆ ಮೇಲ್ಮನವಿ ಸಲ್ಲಿಸಿದ್ದರು. ಇಂದು ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ದೀಪಂಕರ್ ದತ್ತ, ರಾಜೇಶ್ ಬಿಂದಾರ್ ಅವರಿದ್ದಂತ ನ್ಯಾಯಪೀಠವು ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಲೋಕಾಯುಕ್ತ ಬಿ-ರಿಪೋರ್ಟ್ ರದ್ದುಕೋರಿದ್ದಂತ ಅರ್ಜಿಯನ್ನು ವಜಾಗೊಳಿಸಿದೆ. ಹೀಗಾಗಿ ಹೆಚ್.ಡಿ ಕುಮಾರಸ್ವಾಮಿಗೆ ಹಲಗೆವಡೇರಹಳ್ಳಿ ಡಿನೋಟಿಫಿಕೇಷನ್ ಹಗರದಲ್ಲಿ ಸಂಕಷ್ಟ ಎದುರಾದಂತೆ ಆಗಿದೆ. https://kannadanewsnow.com/kannada/karnataka-international-tourism-expo-to-be-held-from-feb-26-to-28-minister-h-k-patil/ https://kannadanewsnow.com/kannada/nhm-employees-protest-intensifies-health-services-disrupted-across-the-state-from-tomorrow/
ಹುಬ್ಬಳ್ಳಿ / ಬೆಂಗಳೂರು : ವಿಶ್ವಕ್ಕೆ ರಾಜ್ಯದ ಅದ್ಭುತ ಪ್ರವಾಸಿ ತಾಣಗಳ ಪರಿಚಯ ಮಾಡಿಸುವ ದೃಷ್ಟಿಯಿಂದ ಪ್ರವಾಸೋದ್ಯಮ ಇಲಾಖೆ ಹಾಗೂ ಕರ್ನಾಟಕ ಟೂರಿಸಮ್ ಸೊಸೈಟಿಯ ಸಹಯೋಗದೊಂದಿಗೆ ಫೆಬ್ರವರಿ 26 ರಿಂದ 28 ರವರೆಗೆ ಕರ್ನಾಟಕ ಇಂಟರನ್ಯಾಶನಲ್ ಟೂರಿಸಮ್ ಎಕ್ಸಪೋವನ್ನು ಬೆಂಗಳೂರಿನಲ್ಲಿ ಆಯೋಜಿಸಲಾಗಿದೆ. ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಎಕ್ಸಪೋವನ್ನು ಉದ್ಘಾಟಿಸುವರು ಎಂದು ಕಾನೂನು, ನ್ಯಾಯ, ಮಾನವ ಹಕ್ಕುಗಳು, ಸಂಸದೀಯ ವ್ಯವಹಾರ, ಶಾಸನ ರಚನೆ ಹಾಗೂ ಪ್ರವಾಸೋದ್ಯಮ ಸಚಿವರಾದ ಎಚ್.ಕೆ.ಪಾಟೀಲ್ ಹೇಳಿದರು. ಇಂದು ಸರ್ಕ್ಯೂಟ್ ಹೌಸ್ ನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಫೆಬ್ರವರಿ 27 ಮತ್ತು 28 ರಂದು 2 ದಿನಗಳ ಕಾಲ ವ್ಯವಹಾರಿಕ ಸಭೆಗಳು ನಡೆಯಲಿವೆ. ನಮ್ಮ ರಾಜ್ಯದಲ್ಲಿ ಅಸಂಖ್ಯಾತ ಪ್ರವಾಸಿ ತಾಣಗಳು, ಸ್ಮಾರಕಗಳು ಇವೆ. 25 ಸಾವಿರಕ್ಕೂ ಹೆಚ್ಚು ಅರಕ್ಷಿತ ಸ್ಮಾರಕಗಳಿದ್ದು, ಅವುಗಳಲ್ಲಿ 800 ಕ್ಕೂ ಹೆಚ್ಚು ಸ್ಮಾರಕಗಳನ್ನು ರಕ್ಷಿತ ಸ್ಮಾರಕಗಳಾಗಿ ಘೋಷಿಸಲಾಗಿದೆ. ಮುಂದಿನ ಪೀಳಿಗೆಗೆ ಇವುಗಳ ಮಹತ್ವವನ್ನು ತಿಳಿಸಲು ಹಾಗೂ ಅವುಗಳ ಸಂರಕ್ಷಣೆಯ ಮಹತ್ವವನ್ನು ತಿಳಿಸುವ ಮಹಾತ್ಕಾರ್ಯಕ್ಕೆ ನಮ್ಮ ಸರ್ಕಾರ ಮುಂದಾಗಿದೆ.…
ಬೆಂಗಳೂರು: ರೈಲ್ವೆ ಪ್ರಯಾಣಿಕರಿಗೆ ಬಹುಮುಖ್ಯ ಮಾಹಿತಿ ಎನ್ನುವಂತೆ ಕೆಲ ರೈಲುಗಳ ಸಂಚಾರ ರದ್ದತಿ ವಿಸ್ತರಣೆ ಮಾಡಲಾಗಿದೆ. ಇನ್ನೂ ಕೆಲವು ರೈಲುಗಳ ಸಂಚಾರವನ್ನು ಭಾಗಶಃ ರದ್ದುಗೊಳಿಸಲಾಗಿದೆ. ರೈಲು ಸೇವೆಗಳ ರದ್ದತಿ ವಿಸ್ತರಣೆ ವಿವಿಧ ಕಾರ್ಯಾಚರಣೆಯ ಕಾರಣಗಳಿಂದಾಗಿ, ಈಗಾಗಲೇ ತಾತ್ಕಾಲಿಕವಾಗಿ ರದ್ದುಗೊಂಡಿರುವ ಕೆಲವು ರೈಲು ಸೇವೆಗಳ ರದ್ದತಿಯನ್ನು ದಕ್ಷಿಣ ಮಧ್ಯ ರೈಲ್ವೆಯು ವಿಸ್ತರಿಸಿದೆ. ವಿವರಗಳು ಈ ಕೆಳಗಿನಂತಿವೆ. ರೈಲು ಸಂಖ್ಯೆ 57405 ತಿರುಪತಿ-ಕದಿರಿದೇವರಪಲ್ಲಿ ಡೈಲಿ ಪ್ಯಾಸೆಂಜರ್ ರೈಲು ಮಾರ್ಚ್ 7, 2025 ರವರೆಗೆ ಮತ್ತೆ ತಾತ್ಕಾಲಿಕವಾಗಿ ರದ್ದುಗೊಳ್ಳಲಿದೆ. ಈ ರೈಲನ್ನು ಮೊದಲು ಫೆಬ್ರವರಿ 28, 2025 ರವರೆಗೆ ರದ್ದುಪಡಿಸಲಾಗಿದೆ ಎಂದು ಸೂಚಿಸಲಾಗಿತ್ತು. ರೈಲು ಸಂಖ್ಯೆ 57406 ಕದಿರಿದೆವರಪಲ್ಲಿ-ತಿರುಪತಿ ಡೈಲಿ ಪ್ಯಾಸೆಂಜರ್ ರೈಲು ಮಾರ್ಚ್ 8, 2025 ರವರೆಗೆ ರದ್ದುಗೊಳ್ಳಲಿದೆ. ಈ ರೈಲು ಮೊದಲು ಮಾರ್ಚ್ 1, 2025 ರವರೆಗೆ ರದ್ದುಪಡಿಸಲಾಗಿದೆ ಎಂದು ಸೂಚಿಸಲಾಗಿತ್ತು. ರೈಲು ಸಂಖ್ಯೆ 57401 ತಿರುಪತಿ-ಎಸ್ಎಸ್ಎಸ್ ಹುಬ್ಬಳ್ಳಿ ಡೈಲಿ ಪ್ಯಾಸೆಂಜರ್ ರೈಲು ಮಾರ್ಚ್ 7, 2025 ರವರೆಗೆ ರದ್ದಾಗಿರುತ್ತದೆ. ಈ ರೈಲು…














