Subscribe to Updates
Get the latest creative news from FooBar about art, design and business.
Author: kannadanewsnow09
ಬಳ್ಳಾರಿ : ಡಾ.ಬಾಬು ಜಗಜೀವನ ರಾಂ ಚರ್ಮ ಕೈಗಾರಿಕಾ ಅಭಿವೃದ್ಧಿ ನಿಗಮದ ವತಿಯಿಂದ ಪ್ರಸಕ್ತ ಸಾಲಿಗೆ ಅನುಷ್ಟಾನಗೊಳಿಸುತ್ತಿರುವ ವಿವಿಧ ಯೋಜನೆಗಳಡಿ ಸಾಲ ಸೌಲಭ್ಯ ಪಡೆಯಲು ಅರ್ಹರಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಯೋಜನೆಗಳ ವಿವರ ಚರ್ಮ ಕುಶಲಕರ್ಮಿ ಕುಟುಂಬಗಳ ತರಬೇತಿ ಪಡೆಯಲು ಅಧ್ಯಯನ ಪ್ರವಾಸ ಯೋಜನೆ ಮತ್ತು ಮಾನವ ಸಂಪನ್ಮೂಲ ಅಭಿವೃದ್ಧಿ ಮತ್ತು ಕೌಶಲ್ಯಾಭಿವೃದ್ಧಿ ಯೋಜನೆಯಡಿ ಮೂರು ವರ್ಷಗಳ ಡಿಪ್ಲೋಮಾ ಇನ್ ಲೆದರ್ ಅಂಡ್ ಫ್ಯಾಷನ್ ಟೆಕ್ನಾಲಜಿ (ಕನಿಷ್ಠ ಎಸ್ಎಸ್ಎಲ್ಸಿ ಉತ್ತೀðಣರಾಗಿರಬೇಕು). ಸ್ವಯಂ ಉದ್ಯೋಗಗಳಾದ ಸ್ವಾವಲಂಭಿ ಅಥವಾ ಸಂಚಾರಿ ಮಾರಾಟ ಮಳಿಗೆ, ನೇರ ಸಾಲ ಯೋಜನೆ, ಚರ್ಮ ಶಿಲ್ಪಿ ಯೋಜನೆ, ಮಹಿಳಾ ಕುಶಲಕರ್ಮಿಗಳಿಗೆ ಕಾಯಕ ಸ್ಪೂರ್ತಿ ಯೋಜನೆ, ಪಾದುಕೆ ಕುಟೀರ ಯೋಜನೆ ಹಾಗೂ ಮಾರುಕಟ್ಟೆ ಸಹಾಯಧನ ಯೋಜನೆ ಹಾಗೂ ಡಾ.ಬಾಬು ಜಗಜೀವನ ರಾಂ ಚರ್ಮಕಾರರ ವಸತಿ ಯೋಜನೆಗಳಡಿ ಸೌಲಭ್ಯ ಪಡೆಯಲು ಅರ್ಜಿ ಸಲ್ಲಿಸಬಹುದು. ಆಸಕ್ತ ಅರ್ಹ ಅರ್ಜಿದಾರರು ಅ.30ರೊಳಗಾಗಿ ನಿಗಮದ ವೆಬ್ಸೈಟ್ನ https://suvidha.karnataka.gov.in ಲಿಂಕ್ ಮೂಲಕ ಅರ್ಜಿ ಸಲ್ಲಿಸಿ, ಅರ್ಜಿಯ ಪ್ರತಿಯನ್ನು ಸ್ವ-ವಿವರದೊಂದಿಗೆ…
ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯ ಆಸ್ತಿ ಮಾಲೀಕರು ಇ-ಖಾತಾ ಮಾಡಿಸಿಕೊಳ್ಳಲು ಯಾವುದೇ ಡೆಡ್ ಲೈನ್ ಇಲ್ಲ. ಹೀಗಾಗಿ ಸಾರ್ವಜನಿಕರು ಗಾಬರಿಯಾಗುವ ಅಥವಾ ಆತುರಪಡುವ ಅಗತ್ಯ ಇಲ್ಲ ಎಂದು ಸಚಿವ ಕೃಷ್ಣ ಬೈರೇಗೌಡ ಅವರು ಸ್ಪಷ್ಟನೆ ನೀಡಿದ್ದಾರೆ. ಇ-ಖಾತಾ ಬಗೆಗಿನ ಗೊಂದಲಗಳ ಬಗ್ಗೆ ಸೋಮವಾರ ಬಿಬಿಎಂಪಿ ಅಧಿಕಾರಿಗಳ ಜೊತೆ ಸಭೆ ನಡೆಸಿ ಚರ್ಚಿಸಿದ ಬೆನ್ನಿಗೆ ತುರ್ತು ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿ, “ಬಿಬಿಎಂಪಿ ವ್ಯಾಪ್ತಿಯ ಕೆಲವು ಭಾಗದಲ್ಲಿ ಮಧ್ಯವರ್ತಿಗಳು ಇ-ಖಾತಾ ಗೆ ಸರ್ಕಾರ ಸಮಯ ನಿಗಧಿ ಮಾಡಿದೆ ಎಂದು ಜನರಲ್ಲಿ ಗೊಂದಲ ಸೃಷ್ಟಿಸಿ, ಇ-ಖಾತೆ ಮಾಡಿಸಿಕೊಡುವುದಾಗಿ ಜನರನ್ನು ಸುಲಿಗೆ ಮಾಡಿರುವ ಘಟನೆ ಗಮನಕ್ಕೆ ಬಂದಿದೆ. ಆದರೆ, ಆಸ್ತಿ ಮಾಲೀಕರು ಇ-ಖಾತಾ ಮಾಡಿಸಿಕೊಳ್ಳಲು ಸರ್ಕಾರ ಯಾವುದೇ ಸಮಯ ನಿಗದಿ ಮಾಡಿಲ್ಲ. ಹೀಗಾಗಿ ಸಾರ್ವಜನಿರಕರು ಗಾಬರಿಗೊಳಗಾಗದೆ, ಆತುರಪಡದೆ ತಮ್ಮ ಸಮಯ ನೋಡಿಕೊಂಡು ಇ-ಖಾತಾ ಮಾಡಿಸಿಕೊಳ್ಳಬಹುದು. ಊಹಾಪೋಹಗಳಿಗೆ ಕಿವಿಕೊಟ್ಟು ಆತಂಕಕ್ಕೆ ಒಳಗಾಗಬೇಡಿ” ಎಂದು ಹೇಳುವ ಮೂಲಕ ಗೊಂದಲಕ್ಕೆ ತೆರೆ ಎಳೆದರು. “ನಕಲಿ ನೋಂದಣಿ ಪ್ರಕರಣಗಳನ್ನು ತಡೆಯೊಡ್ಡುವ ಸಲುವಾಗಿಯೇ ಇ-ಖಾತಾ ವ್ಯವಸ್ಥೆಯನ್ನು ಜಾರಿಗೆ…
ಬೆಂಗಳೂರು: ಮೈಸೂರಿನ ಪ್ರಸಿದ್ಧ ದಸರಾ ಮಹೋತ್ಸವದ ಸಮಯದಲ್ಲಿ ಪ್ರಯಾಣಿಕರ ನಿರೀಕ್ಷಿತ ದಟ್ಟಣೆಯನ್ನು ತೆರವುಗೊಳಿಸಲು, ರೈಲು ಸಂಖ್ಯೆ 17301/17302 ಮೈಸೂರು-ಬೆಳಗಾವಿ-ಮೈಸೂರು ಡೈಲಿ ಎಕ್ಸ್ ಪ್ರೆಸ್ ರೈಲುಗಳಿಗೆ ಈ ಕೆಳಗಿನ ನಿಲ್ದಾಣಗಳಲ್ಲಿ ತಾತ್ಕಾಲಿಕ ನಿಲುಗಡೆ ನೀಡಲು ನೈಋತ್ಯ ರೈಲ್ವೆ ನಿರ್ಧರಿಸಿದೆ. ತಾತ್ಕಾಲಿಕ ನಿಲುಗಡೆಗಳ ವಿವರಗಳು ಈ ಕೆಳಗಿನಂತಿವೆ: ಅಕ್ಟೋಬರ್ 9 ರಿಂದ ಅಕ್ಟೋಬರ್ 13, 2024 ರವರೆಗೆ ಮೈಸೂರಿನಿಂದ ಪ್ರಾರಂಭವಾಗುವ, ರೈಲು ಸಂಖ್ಯೆ 17301 ಮೈಸೂರು-ಬೆಳಗಾವಿ ಡೈಲಿ ಎಕ್ಸ್ ಪ್ರೆಸ್ ರೈಲು ಬೆಳಗುಳ (9:43/9:44 PM), ಸಾಗರಕಟ್ಟೆ (9:56/9:57 PM) , ಹೊಸ ಅಗ್ರಹಾರ (10:29/10:30 PM), ಅಕ್ಕಿಹೆಬ್ಬಾಳು (10:37/10:38 PM), ಬೀರಹಳ್ಳಿ ಹಾಲ್ಟ್ (10:43/10:44 PM) ಮತ್ತು ಮಾವಿನಕೆರೆ (11:09/11:10 PM) ನಿಲ್ದಾಣಗಳಲ್ಲಿ ತಾತ್ಕಾಲಿಕ ನಿಲುಗಡೆಯನ್ನು ಹೊಂದಿರುತ್ತದೆ. ಅಕ್ಟೋಬರ್ 11, 2024 ರಂದು ಬೆಳಗಾವಿ ನಿಲ್ದಾಣದಿಂದ ಹೊರಡುವ ರೈಲು ಸಂಖ್ಯೆ 17302 ಬೆಳಗಾವಿ-ಮೈಸೂರು ಡೈಲಿ ಎಕ್ಸ್ ಪ್ರೆಸ್ ರೈಲು ಮಾವಿನಕೆರೆ (3:22/3:23 AM), ಬೀರಹಳ್ಳಿ ಹಾಲ್ಟ್ (4:02/4:03 AM), ಅಕ್ಕಿಹೆಬ್ಬಾಳು (4:09/4:10 AM), ಹೊಸ…
ಬೆಂಗಳೂರು : ರಾಜ್ಯದಲ್ಲಿ ನೇಮಕಾತಿ ವ್ಯವಸ್ಥೆಯಲ್ಲಿ ಸಮಗ್ರ ಸುಧಾರಣೆ ತಂದು ಯುಪಿಎಸ್ಸಿ ಮಾದರಿಯಲ್ಲಿ ಏಕರೀತಿಯ ನೇಮಕಾತಿ ವ್ಯವಸ್ಥೆಯನ್ನು ಜಾರಿಗೊಳಿಸುವ ಕುರಿತು ಕ್ರಮ ಕೈಗೊಳ್ಳಲು ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚಿಸಿದರು. ಅವರು ಇಂದು ಕೃಷ್ಣಾದಲ್ಲಿ ಸರ್ಕಾರದ ಹಂತದಲ್ಲಿ ವಿವಿಧ ಇಲಾಖೆಗಳ ನೇಮಕಾತಿಗಳ ಬಗ್ಗೆ ಪ್ರಗತಿ ಪರಿಶೀಲನೆ ನಡೆಸಿದರು. ನೇಮಕಾತಿ ಪ್ರಕ್ರಿಯೆಯಲ್ಲಿ ಸುಧಾರಣೆ ಕುರಿತು ಸರ್ಕಾರದ ಮುಖ್ಯ ಕಾರ್ಯದರ್ಶಿ ಅವರ ಅಧ್ಯಕ್ಷತೆಯಲ್ಲಿ ಕಳೆದ ವಾರ ಎಲ್ಲಾ ನೇಮಕಾತಿ ಪ್ರಾಧಿಕಾರಗಳ ಸಭೆಯನ್ನು ನಡೆಸಲಾಗಿದೆ. ಸಭೆಯಲ್ಲಿ ಕೈಗೊಂಡಿರುವ ಶಿಫಾರಸುಗಳನ್ನು ಪರಿಶೀಲಿಸಿ ಸುಧಾರಣಾ ಕ್ರಮಗಳನ್ನು ಜಾರಿಗೊಳಿಸಲು ಮುಖ್ಯಮಂತ್ರಿ ಅವರು ಸೂಚನೆ ನೀಡಿದರು. ಯುಪಿಎಸ್ಸಿಯಲ್ಲಿ ಕೇವಲ ಗ್ರೂಪ್ ಎ ಮತ್ತು ಗ್ರೂಪ್ ಬಿ ಹುದ್ದೆಗಳನ್ನು ಮಾಡಲು ನೇಮಕಾತಿ ಮಾಡಲಾಗುತ್ತಿದೆ. ಇದೇ ರೀತಿ ಕೆಪಿಎಸ್ಸಿ ಕೇವಲ ಗ್ರೂಪ್ ಎ ಮತ್ತು ಬಿ ಮಾತ್ರ ನೇಮಕಾತಿ ಪ್ರಕ್ರಿಯೆ ನಡೆಸಿ, ಗ್ರೂಪ್ ಸಿಯಂತಹ ಬೇರೆ ನೇಮಕಾತಿಗಳನ್ನು ಕೆಇಎ ಮಾಡುವ ಕುರಿತು ಚರ್ಚೆ ನಡೆಸಲಾಗಿದೆ. 371ಜೆ ಗೆ ಸಂಬಂಧಿಸಿದಂತೆ ಕಲ್ಯಾಣ ಕರ್ನಾಟಕದ ಸ್ಥಳೀಯ ವ್ಯಕ್ತಿಗಳಿಗೆ ಮೀಸಲಿರಿಸಿರುವ ನೇರ…
ಬೆಂಗಳೂರು: ಮೈಸೂರು ದಸರಾ ವೀಕ್ಷಣೆಗೆ ತೆರಳುತ್ತಿರೋರಿಗೆ ಗುಡ್ ನ್ಯೂಸ್ ಎನ್ನುವಂತೆ KSRTCಯಿಂದ ದಸರಾ ವಿಶೇಷ ಬಸ್ ಕಾರ್ಯಾಚರಣೆಗೆ ಚಾಲನೆ ನೀಡಲಾಗಿದೆ. ನಾಡಹಬ್ಬ ದಸರಾ ಪ್ರಯುಕ್ತ ನಾಡಿನ ಜನತೆಗೆ ಆರಾಮದಾಯಕ, ಸುರಕ್ಷಿತ ಮತ್ತು ಬೇಡಿಕೆಯನುಸಾರ ತ್ವರಿತ ಸಾರಿಗೆ ಸೌಲಭ್ಯವನ್ನು ಕಲ್ಪಿಸುವ ಉದ್ದೇಶದಿಂದ ಇಂದು ಬೆಂಗಳೂರು ಕೇಂದ್ರೀಯ ವಿಭಾಗದ ವತಿಯಿಂದ ಮೈಸೂರು ಸ್ಯಾಟಲೈಟ್ ಬಸ್ ನಿಲ್ದಾಣದಲ್ಲಿ ದಸರಾ ವಿಶೇಷ ಕಾರ್ಯಾಚರಣೆ ಅಂಗವಾಗಿ ಅಲಂಕೃತ ದಸರಾ ವಿಶೇಷ ವಾಹನಗಳಿಗೆ ಪೂಜೆ ಸಲ್ಲಿಸುವ ಮುಖೇನ ಚಾಲನೆ ನೀಡಲಾಯಿತು. ಮುಂದಿನ 10 ದಿನಗಳವರೆಗೆ ಮೈಸೂರು ರಸ್ತೆ ಬಸ್ ನಿಲ್ದಾಣದಲ್ಲಿ ದಸರಾ ಕ್ಯಾಂಪ್ ಇರಲಿದ್ದು, ಬೆಂಗಳೂರು ಕೇಂದ್ರೀಯ ವಿಭಾಗ, ರಾಮನಗರ, ಚಿಕ್ಕಬಳ್ಳಾಪುರ ಕೋಲಾರ ಹಾಗೂ ಮೈಸೂರು ವಿಭಾಗಗಳಿಂದ ಒಟ್ಟು 700 ಹೆಚ್ಚುವರಿ ವಾಹನಗಳನ್ನು ಬೆಂಗಳೂರು ಮೈಸೂರು ನಡುವೆ ಕಾರ್ಯಾಚರಣೆ ಮಾಡಲಾಗುತ್ತದೆ. ಇದರೊಂದಿಗೆ ಬೆಂಗಳೂರಿನಿಂದ ರಾಜ್ಯದ ವಿವಿಧ ಊರುಗಳಿಗೆ 2000 ವಿಶೇಷ ಬಸ್ಸುಗಳ ಕಾರ್ಯಾಚರಣೆ ನಡೆಯಲಿದೆ. ಈ ಸಂದರ್ಭದಲ್ಲಿ ನಿಗಮದ ಹಿರಿಯ ಅಧಿಕಾರಿಗಳು ವಿಭಾಗೀಯ ನಿಯಂತ್ರಣಾಧಿಕಾರಿ ಬೆಂಗಳೂರು ಕೇಂದ್ರಿಯ ವಿಭಾಗ ಮತ್ತು ಕೆಂಪೇಗೌಡ…
ಬೆಂಗಳೂರು: ಕೋವಿಡ್ ಸಂದರ್ಭದಲ್ಲಿ ಪಿಪಿಇ ಕಿಟ್ ಮತ್ತು ಇತರೆ ಸಾಮಾಗ್ರಿಗಳ ಖರೀದಿಯಲ್ಲಿ ಆಗಿರುವಂತ ಅಕ್ರಮಗಳ ಬಗ್ಗೆ ವೈದ್ಯಕೀಯ ಶಿಕ್ಷಣ ಇಲಾಖೆಯ ಹಿಂದಿನ ಆರ್ಥಿಕ ಸಲಹೆಗಾರ ಹಾಗೂ ಪ್ರಸ್ತುತ ಕಿದ್ವಾಯಿ ಸ್ಮರಕ ಗ್ರಂಥಿ ಸಂಸ್ಥೆಯ ಆರ್ಥಿಕ ಸಲಹೆಗಾರ ರಘು ಜಿ.ಪಿ ಎಂಬುವರನ್ನು ರಾಜ್ಯ ಸರ್ಕಾರ ಅಮಾತನಗೊಳಿಸಿ ಆದೇಶಿಸಿದೆ. ಈ ಕುರಿತಂತೆ ಆರ್ಥಿಕ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ನಡವಳಿಯನ್ನು ಹೊರಡಿಸಿದ್ದು, ವೈದ್ಯಕೀಯ ಶಿಕ್ಷಣ ನಿರ್ದೇಶನಾಲಯದಲ್ಲಿ ಸರ್ಕಾರದ ಅನುಮೋದನ ಇಲ್ಲದ ಪಿಪಿಇ ಕಿಟ್ ಮತ್ತು ಇತರೆ ಸಾಮಾಗ್ರಿಗಳನ್ನು ಖರೀದಿಸಿರುವ ಟೆಂಡರ್ ಪ್ರಕ್ರಿಯೆಯಲ್ಲಿ ನಿಯಮಗಳನ್ನು ಉಲ್ಲಂಘಿಸಿರುವ ಕುರಿತಂತೆ ತನಿಖೆ ನಡೆಸಲು ಕುರಿತಂತೆ ರಚಿಸಲಾದ ತನಿಖಾ ಸಮಿತಿಯು ನೀಡಿರುವ ವರದಿಯನ್ವಯ ಸದರಿ ಅವಧಿಯಲ್ಲಿ ಅಥಿಕ ಸಲಹೆಗಾರರು (ಜಂಟಿ ನಿಯಂತ್ರಕರು), ವೈದ್ಯಕೀಯ ಶಿಕ್ಷಣ ಇಲಾಖೆ, ಹುದ್ದೆಯಲ್ಲಿ ಸೇವೆ ಸಲ್ಲಿಸಿದ ಶ್ರೀ ರಘು ಜಿ.ಪಿ., ಇವರ ವಿರುದ್ಧ ಕರ್ನಾಟಕ ನಾಗರೀಕ ಸೇವಾ (ವರ್ಗೀಕರಣ, ನಿಯಂತ್ರಣ ಮತ್ತು ಮೇಲ್ಮನವಿ) ನಿಯಮಗಳು 1957ರ ನಿಯಮ 13ರಡಿ ಜಂಟಿ ಇಲಾಖಾ ವಿಚಾರಣೆಯನ್ನು ಕೈಗೊಳ್ಳಲು ಉದ್ದೇಶಿಸಲಾಗಿರುತ್ತದೆ.…
ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ವಿದ್ವಾನ್ ವಿದ್ಯಾಧರ್ ತಂತ್ರಿ ಜ್ಯೋತಿಷ್ಯರು ಮೊಬೈಲ್ ಸಂಖ್ಯೆ 9686268564 ಹುಂಡಿಗೆ ಹಣ ಸೇರಿಸುವುದು ಅನಾದಿ ಕಾಲದಿಂದಲೂ ನಾವೆಲ್ಲರೂ ಪಾಲಿಸಿಕೊಂಡು ಬಂದಿರುವ ಉತ್ತಮ ಪದ್ಧತಿ. ನಮ್ಮ ಪೂರ್ವಜರು ನಮಗೆ ಕಲಿಸಿದ್ದನ್ನು ನಾವು ಮುಂದಿನ ಪೀಳಿಗೆಗೆ ಕಲಿಸುತ್ತಿದ್ದೇವೆ. ಹಣವನ್ನು ಬ್ಯಾಂಕಿಗೆ ಸೇರಿಸಲು ಸರಿಯಾದ ಸಮಯವನ್ನು ಹೇಳಿದರೆ, ಹಣವು ಕಡಿಮೆಯಾಗದೆ ಹೆಚ್ಚಾಗುತ್ತದೆ ಎಂದು ಶಾಸ್ತ್ರಗಳು ಹೇಳುತ್ತವೆ. ಆ ಸಮಯ ಯಾವುದು? ಈ ಆಧ್ಯಾತ್ಮಿಕ ದಾಖಲೆಯ ಮೂಲಕ ನಾವು ರಹಸ್ಯವನ್ನು ನೋಡುವುದನ್ನು ಮುಂದುವರಿಸಲಿದ್ದೇವೆ . ವಿನಿಮಯ ವ್ಯವಸ್ಥೆ ಹೋಯಿತು, ಹಣ ವಿನಿಮಯ ವ್ಯವಸ್ಥೆ ಬಂತು. ಅಂದಿನಿಂದ ಇಂದಿನವರೆಗೂ ಹಣ ಕೊಟ್ಟರೆ ಏನು ಬೇಕಾದರೂ ಸಿಗುತ್ತದೆ ಎಂಬ ಸ್ಥಿತಿ ಮುಂದುವರಿದಿದೆ. ಅಂತಹ ಹಣವನ್ನು ಸಂಗ್ರಹಿಸಲು ಎಲ್ಲರೂ ಹೆಣಗಾಡುತ್ತಿದ್ದಾರೆ. ಜ್ಯೋತಿಷ್ಯ ಮತ್ತು ಆಧ್ಯಾತ್ಮಿಕವಾಗಿ ಕೆಲವೊಮ್ಮೆ, ನಾವು ಕೆಲವು ಕೆಲಸಗಳನ್ನು ಮಾಡಿದಾಗ ನಾವು ಫಲಿತಾಂಶಗಳನ್ನು ನೋಡುತ್ತೇವೆ. ನೀವು ಸರಿಯಾದ ಸಮಯವನ್ನು ಕಳೆದುಕೊಂಡರೆ, ನೀವು ಅದನ್ನು ಎಂದಿಗೂ ಹಿಂತಿರುಗಿಸುವುದಿಲ್ಲ ಎಂದು ಅವರು ಹೇಳುತ್ತಾರೆ. ಶಕುನ…
ಬೆಂಗಳೂರು: ಬೆಂಗಳೂರಿನ ಆರ್.ಆರ್ ನಗರ ವಲಯ ವ್ಯಾಪ್ತಿಯಲ್ಲಿ ರಸ್ತೆಯಲ್ಲಿ ಅನಧಿಕೃತವಾಗಿ ಕೊಳವೆ ಬಾವಿ ಕೊರೆಸಿದವರ ಮೇಲೆ ಎಫ್ಐಆರ್ ದಾಖಲಿಸಲಾಗಿದೆ. ಈ ಮೂಲಕ ಬೆಂಗಳೂರಲ್ಲಿ ಅನಧಿಕೃತವಾಗಿ ಕೊಳವೆ ಬಾವಿ ಕೊರೆದಂತವರಿಗೆ ಬಿಬಿಎಂಪಿ ಶಾಕ್ ನೀಡಿದೆ. ಇಂದು ಪತ್ರಿಕಾ ಪ್ರಕಟಣೆಯಲ್ಲಿ ಬಿಬಿಎಂಪಿ ಮಾಹಿತಿ ನೀಡಿದ್ದು, ಆರ್.ಆರ್ ನಗರ ವಲಯ ಹೇರೋಹಳ್ಳಿ ವಾರ್ಡ್ನ ವೀರಭದ್ರೇಶ್ವರ ನಗರ ಓಂ ಸಾಯಿ ಪಬ್ಲಿಕ್ ಮುಖ್ಯ ರಸ್ತೆಯಲ್ಲಿ ಅನಧಿಕೃತವಾಗಿ ಹಾಗೂ ಪಾಲಿಕೆ ವತಿಯಿಂದ ಯಾವುದೇ ಅನುಮತಿ ಪಡೆಯದೆ ಕೊಳವೆ ಬಾವಿ ಕೊರೆಸುತ್ತಿರುವವರ ಮೇಲೆ ಎಫ್.ಐ.ಆರ್ ದಾಖಲಿಸಲಾಗಿದೆ ಎಂದಿದೆ. ವೀರಭದ್ರೇಶ್ವರ ನಗರ ಓಂ ಸಾಯಿ ಪಬ್ಲಿಕ್ ಮುಖ್ಯ ರಸ್ತೆಯಲ್ಲಿ ಪಾಲಿಕೆಯಿಂದ ಯಾವುದೇ ಪೂರ್ವಾನುಮತಿ ಪಡೆಯದೆ 3ನೇ ಅಕ್ಟೋಬರ್ 2024 ರಿಂದ 4ನೇ ಅಕ್ಟೋಬರ್ 2024ರ ಸಂಜೆಯವರೆಗೆ ಕೊಳವೆ ಬಾವಿ ಕೊರೆಸುವ ಕಾರ್ಯ ನಡೆದಿರುತ್ತದೆ. ಈ ಸಂಬಂಧ ಪಾಲಿಕೆಗೆ ದೂರು ಬಂದ ಹಿನ್ನೆಲೆಯಲ್ಲಿ ಪಾಲಿಕೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿರುತ್ತಾರೆ ಎಂದು ತಿಳಿಸಿದೆ. ಸಾರ್ವಜನಿಕ ರಸ್ತೆಯನ್ನು ಅಗೆದು ಹಾಳು ಮಾಡಿ ಕೊಳವೆ…
ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಕಟ್ಟಡ ನಿರ್ಮಾಣ ಕಾರ್ಯದ ವೇಳೆ ಸಾರ್ವಜನಿಕ ಆಸ್ತಿಗೆ ಹಾನಿಮಾಡಿರುವವರ ಮೇಲೆ ಬಿಬಿಎಂಪಿಯಿಂದ ಎಫ್.ಐ.ಆರ್ ದಾಖಲಿಸಿದೆ. ಹೀಗಾಗಿ ಬೆಂಗಳೂರಿಗರು ಕಟ್ಟಡ ನಿರ್ಮಾಣದ ವೇಳೆ ಎಚ್ಚರಿಕೆ ವಹಿಸೋದು ಅಗತ್ಯವಿದೆ. ಈ ಕುರಿತು ಬಿಬಿಎಂಪಿಯಿಂದ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ರಾಜರಾಜೇಶ್ವರಿ ನಗರ ವಲಯದ ಕೆಂಚೇನಹಲ್ಲಿಯ ಐಡಿಯಲ್ ಹೋಮ್ಸ್ ಪೆಟ್ರೋಲ್ ಬ್ಯಾಂಕ್ ಬಳಿ ಮಂಜೇಗೌಡ ಎಂಬುವವರು ಕಟ್ಟಡ ನಿರ್ಮಿಸಲು ನಕ್ಷೆ ಮಂಜೂರಾತಿ ಪಡೆಯದೆ ಸುಮಾರು 6-8 ಅಡಿ ಆಳ ತಳಪಾಯದ(Earth Work Excavation) ಕಾಮಗಾರಿಯನ್ನು ಮಾಡುತ್ತಿದ್ದು, ಇದರಿಂದ ಸುಮಾರು 70 ಅಡಿ ಉದ್ದದಷ್ಟು ಪಾದಚಾರಿ ರಸ್ತೆ ಹಾಗೂ ಒಳಚರಂಡಿಯು ಕುಸಿದು ಬಿದ್ದು, ಸಾರ್ವಜನಿಕರು ಓಡಾಡಲು ತೊಂದರೆಯಾಗುತ್ತಿರುತ್ತದೆ ಎಂದಿದೆ. ಅಲ್ಲದೇ ಒಳಚರಂಡಿ ಮುಂಭಾಗದಲ್ಲಿರುವ ಬಿ.ಎಂ.ಟಿ.ಸಿ ಬಸ್ ನಿಲ್ದಾಣವು ಸಹ ಕುಸಿಯುವ ಸಂಭವವಿರುತ್ತದೆ. ಇದರಿಂದ ಇಲಾಖೆಗೆ ಸರಿ ಸುಮಾರು 20 ಲಕ್ಷ ರೂ.ಗಳವರೆಗೂ ನಷ್ಟ ಉಂಟಾಗಿರುತ್ತದೆ ಎಂದು ಹೇಳಿದೆ. ಮುಂದುವರಿದು, ಕಟ್ಟಡ ಕಾಮಗಾರಿ ವೇಳೆಯಲ್ಲಿ ಯಾವುದೇ ಮುಂಜಾಗೃತ ಕ್ರಮ ಅನುಸರಿಸದೆ ಕಾಮಗಾರಿ ಮಾಡುತ್ತಿರುವುದರಿಂದ ಅಕ್ಕ-ಪಕ್ಕದ ಮನೆಗಳಿಗೂ ಸಹ…
ಬೆಂಗಳೂರು: ರೈಲ್ವೆ ಪ್ರಯಾಣಿಕರಿಗೆ ಗುಡ್ ನ್ಯೂಸ್ ಎನ್ನುವಂತೆ ಸಿಕಂದರಾಬಾದ್-ವಾಸ್ಕೋ-ಡ-ಗಾಮಾ ನಿಲ್ದಾಣಗಳ ನಡುವೆ ಹೊಸ ರೈಲು ಸಂಚಾರ ಪ್ರಾರಂಭಗೊಂಡಿದೆ. ಈ ಬಗ್ಗೆ ನೈರುತ್ಯ ರೈಲ್ವೆಯಿಂದ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಲಾಗಿದ್ದು, ತೆಲಂಗಾಣ ಮತ್ತು ಗೋವಾ ರಾಜ್ಯಗಳ ನಡುವಿನ ಪ್ರವಾಸೋದ್ಯಮ ಮತ್ತು ಸಂಪರ್ಕಕ್ಕೆ ಪ್ರಮುಖ ಉತ್ತೇಜನ ನೀಡುವ ನಿಟ್ಟಿನಲ್ಲಿ, ಸಿಕಂದರಾಬಾದ್ ಮತ್ತು ವಾಸ್ಕೋ-ಡ-ಗಾಮಾ ನಿಲ್ದಾಣಗಳ ನಡುವೆ ಹೊಸ ದ್ವಿ-ಸಾಪ್ತಾಹಿಕ ಎಕ್ಸ್ಪ್ರೆಸ್ ರೈಲು ಸೇವೆಯನ್ನು (ರೈಲುಗಳ ಸಂಖ್ಯೆ 17039/17040) ಪರಿಚಯಿಸಲು ರೈಲ್ವೆ ಮಂಡಳಿಯು ಅನುಮೋದನೆ ನೀಡಿದೆ ಎಂದಿದೆ. ನಿಯಮಿತ ಸೇವೆಯ ವಿವರ ಈ ಕೆಳಗಿನಂತಿವೆ: 1. ಅಕ್ಟೋಬರ್ 9, 2024 ರಿಂದ ಜಾರಿಗೆ ಬರುವಂತೆ, ರೈಲು ಸಂಖ್ಯೆ 17039 ಸಿಕಂದರಾಬಾದ್-ವಾಸ್ಕೋ-ಡ-ಗಾಮಾ ಬೈ-ವೀಕ್ಲಿ ಎಕ್ಸ್ಪ್ರೆಸ್ ರೈಲು ಸಿಕಂದರಾಬಾದ್ನಿಂದ ಪ್ರತಿ ಬುಧವಾರ ಮತ್ತು ಶುಕ್ರವಾರ ಬೆಳಿಗ್ಗೆ 10:05 ಗಂಟೆಗೆ ಹೊರಟು, ಮರುದಿನ ಬೆಳಿಗ್ಗೆ 5:45 ಕ್ಕೆ ವಾಸ್ಕೋ-ಡ-ಗಾಮಾವನ್ನು ತಲುಪಲಿದೆ. ಮಾರ್ಗದಲ್ಲಿ, ಈ ರೈಲು ಕಾಚಿಗುಡ (10:18/10:20 AM), ಶಾದ್ನಗರ (11:04/11:05 AM), ಜಡ್ಚೆರ್ಲಾ (11:37/11:38 AM), ಮಹಬೂಬ್ನಗರ (11:55/11:57 AM), ಗದ್ವಾಲ್…











