Subscribe to Updates
Get the latest creative news from FooBar about art, design and business.
Author: kannadanewsnow09
ಬೆಂಗಳೂರು: ರಾಜ್ಯದ ಕಾಂಗ್ರೆಸ್ ಸರ್ಕಾರ ಚುನಾವಣೆಯ ಹೊಂದಾಣಿಕೆಗಾಗಿ ಕಾವೇರಿ ನೀರನ್ನು ತಮಿಳುನಾಡಿಗೆ ಹರಿಸುತ್ತಿದೆ. ಈ ಪಾಪರ್ ಸರ್ಕಾರದ ಬಳಿ ಬರ ಪರಿಹಾರ ನೀಡಲು ಹಣವಿಲ್ಲ. ಆದರೆ ನೀರನ್ನು ಮಾತ್ರ ನೀಡುತ್ತಿದ್ದಾರೆ ಎಂದು ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್.ಅಶೋಕ ಆಕ್ರೋಶ ವ್ಯಕ್ತಪಡಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯ ಕಾಂಗ್ರೆಸ್ ಸರ್ಕಾರ ತಮಿಳುನಾಡಿಗೆ ನಿರಂತರವಾಗಿ ಕಾವೇರಿ ನೀರು ಹರಿಸಿದೆ. ರೈತರು ಹೋರಾಟ ಮಾಡುತ್ತಿದ್ದಾರೆ, ಜನರು ಖಾಲಿ ಬಿಂದಿಗೆ ಹಿಡಿದುಕೊಂಡು ಬೀದಿಗಿಳಿದಿದ್ದಾರೆ, ಬೆಂಗಳೂರಿನಲ್ಲಿ ನೀರಿಗೆ ಕೊರತೆಯಾಗಿದೆ. ಇಷ್ಟಾದರೂ ಕಾವೇರಿ ನೀರನ್ನು ತಮಿಳುನಾಡಿಗೆ ಹರಿಸುತ್ತಾರೆ ಎಂದರೆ ಇಂತಹ ನಾಚಿಕೆಗೆಟ್ಟ ಸರ್ಕಾರ ಇತಿಹಾಸದಲ್ಲೇ ಇಲ್ಲ ಎನ್ನಬೇಕು. ನಮ್ಮ ಕುಡಿಯುವ ನೀರನ್ನು ಚುನಾವಣಾ ಹೊಂದಾಣಿಕೆಗಾಗಿ ಬಿಟ್ಟುಕೊಡುತ್ತಾರೆ. ಈಗಾಗಲೇ ಓಟಿಗಾಗಿ ಅಲ್ಪಸಂಖ್ಯಾತರನ್ನು ಓಲೈಸುವ ಕೆಲಸ ಮಾಡಿದ್ದಾರೆ. ಈಗ ಹೊಂದಾಣಿಕೆಗಾಗಿ ರಾಜ್ಯಕ್ಕೆ ಕಾಂಗ್ರೆಸ್ ದ್ರೋಹ ಬಗೆಯುತ್ತಿದೆ ಎಂದು ಹೇಳಿದರು. ಮೇಕೆದಾಟು ಯೋಜನೆ ಜಾರಿ ಮಾಡುತ್ತೇವೆಂದು ಹೋರಾಟ ಮಾಡಿ, ಈಗ ಕೇಂದ್ರ ಸರ್ಕಾರ ಮಾಡಬೇಕು ಎನ್ನುತ್ತಿದ್ದಾರೆ. ಆಯವ್ಯದಲ್ಲಿ ಮೇಕೆದಾಟು ಯೋಜನೆಗೆ ನಯಾ ಪೈಸೆ ನೀಡಿಲ್ಲ. ಇವರಿಗೆ…
ಮಂಡ್ಯ: ನಮ್ಮ ಪಕ್ಷದಲ್ಲಿ ದಿವಂಗತ ನಟ ಅಂಬರೀಶ್ ಮಂತ್ರಿಯಾಗಿದ್ದರು. ಅವರ ಹೆಸರಲ್ಲೇ ರಸ್ತೆ ಮಾಡುತ್ತೇವೆ. ಅಂಬರೀಶ್ ಸ್ನೇಹಿತನನ್ನೇ ಮಂಡ್ಯದಲ್ಲಿ ಕಾಂಗ್ರೆಸ್ ಅಭ್ಯರ್ಥಿಯನ್ನಾಗಿ ಮಾಡಿದ್ದೇವೆ. ಸ್ಟಾರ್ ಚಂದ್ರು ಅವರು ಸೂರ್ಯ ಚಂದ್ರರಷಅಟೇ ಮಂಡ್ಯದಲ್ಲಿ ಗೆಲುವು ಸತ್ಯ. ಮಂಡ್ಯಕ್ಕೆ ಹೊಸ ಗಂಡು ರೆಡಿ ಮಾಡಿದ್ದೇವೆ ಎಂಬುದಾಗಿ ಸಂಸದೆ ಸುಮಲತಾ ಅಂಬರೀಶ್ ಗೆ ಡಿಸಿಎಂ ಡಿಕೆ ಶಿವಕುಮಾರ್ ಟಾಂಗ್ ನೀಡಿದ್ದಾರೆ. ನಗರದಲ್ಲಿ ಕಾಂಗ್ರೆಸ್ ಗ್ಯಾರಂಟಿ ಫಲಾನುಭವಿಗಳ ಸಮಾವೇಶದಲ್ಲಿ ಭಾಗಿಯಾಗಿ ಮಾತನಾಡಿದಂತ ಅವರು, ಮಂಡಕ್ಕೆ ಹೊಸ ಗಂಡು ರೆಡೆ ಮಾಡಿದ್ದೇವೆ. ಅವರು ಯಾರು ಅಂತ ನಿಮಗೆ ಗೊತ್ತಲ್ವ ಎಂಬುದಾಗಿ ಹೇಳಿದರು. ಅಲ್ಲದೇ ಸ್ಟಾರ್ ಚಂದ್ರು ಅವರನ್ನೇ ಕಾರ್ಯಕ್ರಮದಲ್ಲಿ ಪರಿಚಯ ಮಾಡಿದರು. ನಟ ಅಂಬರೀಶ್ ಅವರು ನಮ್ಮ ಪಕ್ಷದಲ್ಲಿ ಮಂತ್ರಿಯಾಗಿದ್ದರು. ಪ್ರಾಣ ಬಿಡುವಾಗಲೂ ಅವರು ಕಾಂಗ್ರೆಸ್ ಪಕ್ಷದವರಾಗಿಯೇ ಬಿಟ್ಟರು. ಈಗ ಅಂಬರೀಶ್ ಸ್ನೇಹಿತನನ್ನೇ ಮಂಡ್ಯಕ್ಕೆ ಅಭ್ಯರ್ಥಿಯನ್ನಾಗಿ ಮಾಡಿದ್ದೇವೆ. ಇದೆಲ್ಲ ನಿಮ್ಮ ತಲೆಯಲ್ಲಿ ಇರಲಿ. ಸ್ಟಾರ್ ಚಂದ್ರು ಅವರನ್ನು ಗೆಲ್ಲಿಸುವಂತೆ ಮನವಿ ಮಾಡಿದರು. https://kannadanewsnow.com/kannada/breaking-mandya-activists-arrested-for-protesting-against-government-release-of-water-to-tamil-nadu/ https://kannadanewsnow.com/kannada/lok-sabha-elections-likely-to-be-announced-on-march-13-14-dk-shivakumar/
ಬೆಂಗಳೂರು: ಇಂಧಾನ ಇಲಾಖೆಯ ವೆಬ್ ಸೈಟ್ ಸಾಫ್ಟ್ ವೇರ್ ಅಪ್ ಡೇಟ್ ಕಾರಣದಿಂದಾಗಿ ಮಾರ್ಚ್.10ರ ಇಂದಿನಿಂದ ಮಾ.19ರವರೆಗೆ 10 ದಿನಗಳ ಕಾಲ ಆನ್ ಲೈನ್ ಸೇವೆಯಲ್ಲಿ ವ್ಯತ್ಯಯ ಉಂಟಾಗಲಿದೆ. ಬಿಲ್ ಸೇರಿದಂತೆ ಇತರೆ ಸೇವೆಗಳು ಸ್ಥಗತಗೊಳಿಸಲಾಗುತ್ತಿದೆ. ಈ ಕುರಿತಂತೆ ಇಂಧನ ಇಲಾಖೆಯಿಂದ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿದ್ದು, ರಾಜ್ಯದ ಎಲ್ಲಾ ಎಸ್ಕಾಂಗಳ ಆನ್ ಲೈನ್ ಸೇವೆಗಳು ಹತ್ತು ದಿನಗಳ ಕಾಲ ಸೇವೆಗಳು ಲಭ್ಯವಿರುವುದಿಲ್ಲ. ಮಾರ್ಚ್.10ರ ಇಂದಿನಿಂದ ಮಾ. 19ರವರೆಗೆ ಹತ್ತು ದಿನಗಳ ಕಾಲ ಲಭ್ಯವಿರುವುದಿಲ್ಲ ಎಂದಿದೆ. ತಂತ್ರಾಂಶವು ಕಾರ್ಯಾರಂಭಗೊಂಡ ನಂತ್ರ ಪರೀಕ್ಷೆಯ ಬಳಿಕ ಸುಮಾರು 15 ದಿನಗಳ ಕಾಲಾವಕಾಶ ಬೇಕಿರುವುದರಿಂದ ಈ ಸಮಯದಲ್ಲಿ ತಂತ್ರಾಂಶದ ಕಾರ್ಯನಿರ್ವಹಣೆಯಲ್ಲಿ ಸ್ವಲ್ಪ ಮಟ್ಟದ ವ್ಯತ್ಯಯ ಉಂಟಾಗಲಿದೆ ಎಂದು ತಿಳಿಸಿದೆ. ಮಾರ್ಚ್.20ರ ನಂತ್ರ ಈ ಆನ್ ಲೈನ್ ಸೇವೆ ಸರಿಯಾಗಲಿದ್ದು, ಗ್ರಾಹಕರು ವಿದ್ಯುತ್ ಪಾವತಿ ಮಾಡದೇ ಇದ್ದರೂ ಸಂಪರ್ಕ ಕಡಿತಗೊಳಿಸೋದಿಲ್ಲ ಅಂತ ಎಸ್ಕಾಂ ಪತ್ರಿಕಾ ಪ್ರಕಟಣೆಯಲ್ಲಿ ಸ್ಪಷ್ಟ ಪಡಿಸಿದೆ. ನಾಳೆಯಿಂದ ಈ ಎಲ್ಲಾ ಜಿಲ್ಲೆಗಳ ಎಸ್ಕಾಂ ಸೇವೆಯಲ್ಲಿ…
ಶಿವಮೊಗ್ಗ: ಶಿವಮೊಗ್ಗ ತಾಲ್ಲೂಕು, ಕುಂಸಿ ಗ್ರಾಮದ 110/11ಕೆವಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣೆ ಕಾರ್ಯ ಹಾಗೂ ತುರ್ತು ಕಾಮಗಾರಿ ಇರುವುದರಿಂದ ಮಾ. 10 ರಂದು ಬೆಳಗ್ಗೆ 10.00 ರಿಂದ ಸಂಜೆ 6.00 ರವರೆಗೆ ಕುಂಸಿ ವಿದ್ಯುತ್ ವಿತರಣಾ ಕೇಂದ್ರದಿಂದ ಸರಬರಾಜಾಗುವ ಹಳ್ಳಿಗಳಾದ ಕುಂಸಿ, ಬಾಳೆಕೊಪ್ಪ, ಚೋರಡಿ, ತುಷ್ಟೂರು, ಕೋಣಿಹೂಸೂರು, ಹೊರಬೈಲು ಇನ್ನಿತರೆ ಸುತ್ತಮುತ್ತಲ ಹಳ್ಳಿಗಳು ಹಾಗೂ ಹಾರ, ರಾಮನಗರ, ಮುದುವಾಲ, ಯಡವಾಲ, ದೇವಬಾಳು, ತ್ಯಾಜವಳ್ಳಿ, ಕೊನಗವಳ್ಳಿ, ಹಿಟ್ಟೂರು, ನಾರಾಯಣಪುರ, ಮಲ್ಲಾಪುರ, ರಟ್ಟೆಹಳ್ಳಿ ಹಾಗೂ ಇನ್ನಿತರೆ ಸುತ್ತಮುತ್ತಲ ಗ್ರಾಮಗಳ ವ್ಯಾಪ್ತಿಯಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸಬೇಕಾಗಿ ಕೋರಲಾಗಿದೆ. https://kannadanewsnow.com/kannada/good-news-for-state-government-employees-full-time-pension-limit-reduced-to-30-years/ https://kannadanewsnow.com/kannada/congress-government-will-be-in-power-for-10-years-ramalinga-reddy/
ಬೆಂಗಳೂರು: ರಾಜ್ಯ ಸರ್ಕಾರದಿಂದ ಸರ್ಕಾರಿ ನೌಕರರಿಗೆ ಮತ್ತೊಂದು ಗುಡ್ ನ್ಯೂಸ್ ನೀಡಲಾಗಿದೆ. ಅದೇ ಪೂರ್ಣ ಪ್ರಮಾಣದ ನಿವೃತ್ತಿ ವೇತನ ಪಡೆಯುವ ಅದ್ದೇಶಕ್ಕಾಗಿ ಗರಿಷ್ಠ ಅರ್ಹತಾದಾಯಕ ಸೇವೆಯ ಪ್ರಮಾಣವನ್ನು 30 ವರ್ಷಕ್ಕೆ ಇಳಿಕೆ ಮಾಡಿದೆ. ಈ ಕುರಿತಂತೆ ಆರ್ಥಿಕ ಇಲಾಖೆಯ ಸರ್ಕಾರದ ಉಪ ಕಾರ್ಯದರ್ಶಿ ನಡವಳಿಗಳನ್ನು ಹೊರಡಿಸಿದ್ದಾರೆ. ಅದರಲ್ಲಿ ಸರ್ಕಾರದ ಆದೇಶ ಸಂಖ್ಯೆ: ಆಇ 22 ಎಸ್ಆರ್ಪಿ 2017, ದಿನಾಂಕ 01.06.2017ರನ್ವಯ ರಚಿಸಲಾಗಿದ್ದ ಆರನೇ ರಾಜ್ಯ ವೇತನ ಆಯೋಗವು ದಿನಾಂಕ 31.01.2018ರಂದು ತನ್ನ ವರದಿಯನ್ನು (ಮೊದಲ ಸಂಪುಟ) ಸಲ್ಲಿಸಿದೆ. ಈ ಕುರಿತಾದ ಆರನೇ ರಾಜ್ಯ ವೇತನ ಆಯೋಗದ ಶಿಫಾರಸ್ಸನ್ನು ಸರ್ಕಾರವು ಪರಿಗಣಿಸಿದೆ. ಮತ್ತು ರಾಜ್ಯ ಸರ್ಕಾರಿ ನೌಕರರು ಪೂರ್ಣ ಪ್ರಮಾಣದ ನಿವೃತ್ತಿ ವೇತನ ಪಡೆಯುವಲ್ಲಿನ ಗರಿಷ್ಠ ಅರ್ಹತಾದಾಯಕ ಸೇವೆಯ ಪರಿಷ್ಕರಣೆ ಸಂಬಂಧದ ಶಿಫಾರಸ್ಸನ್ನು ಅಂಗೀಕರಿಸಿ, ಈ ಕೆಳಕಂಡಂತೆ ಆದೇಶವನ್ನು ಹೊರಡಿಸಲು ಹರ್ಷಿಸುತ್ತದೆ ಎಂದಿದ್ದಾರೆ. ರಾಜ್ಯ ಸರ್ಕಾರಿ ನೌಕರರು ಪೂರ್ಣ ಪ್ರಮಾಣದ ನಿವೃತ್ತಿ ವೇತನ ಪಡೆಯುವ ಉದ್ದೇಶಕ್ಕಾಗಿ ಕರ್ನಾಟಕ ನಾಗರೀಕ ಸೇವಾ ನಿಯಮಗಳಲ್ಲಿ ವಿಧಿಸಲಾಗಿರುವ…
ಬೆಂಗಳೂರು: ವಿಧಾನಸಭೆಯಲ್ಲಿ ಪಾಕಿಸ್ತಾನ ಪರ ಘೋಷಣೆ ಕೂಗುವವರನ್ನು ಗುಂಡಿಕ್ಕಿ ಕೊಲ್ಲಬೇಕು ಎಂದು ಸಚಿವ ಕೆ.ಎನ್.ರಾಜಣ್ಣ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ರಾಜ್ಯಸಭಾ ಚುನಾವಣೆಯಲ್ಲಿ ಜಯಗಳಿಸಿದ ನಂತರ ಕಾಂಗ್ರೆಸ್ ಮುಖಂಡ ಸೈಯದ್ ನಾಸೀರ್ ಹುಸೇನ್ ಅವರ ಬೆಂಬಲಿಗರು ಕರ್ನಾಟಕ ವಿಧಾನಸಭೆಯಲ್ಲಿ ‘ಪಾಕಿಸ್ತಾನ್ ಜಿನಾದಾಬಾದ್’ ಘೋಷಣೆಗಳನ್ನು ಕೂಗಿದ್ದಾರೆ ಎಂದು ಆರೋಪಿಸಲಾಗಿದೆ. “ಏನಾಯಿತು? ಕಾಂಗ್ರೆಸ್ ನ ವರ್ಚಸ್ಸು ಚೆನ್ನಾಗಿದೆ. ವಾಸ್ತವವಾಗಿ, ಅದು ಸುಧಾರಿಸಿದೆ. ಯಾರಾದರೂ ಘೋಷಣೆಗಳನ್ನು ಕೂಗಿದ್ದರೆ ಅಥವಾ ಪಾಕಿಸ್ತಾನವನ್ನು ಬೆಂಬಲಿಸಿದ್ದರೆ, ಆ ವ್ಯಕ್ತಿಯನ್ನು ಗುಂಡಿಕ್ಕಿ ಕೊಲ್ಲಲಿ. ಇದರಲ್ಲಿ ಯಾವುದೇ ತಪ್ಪಿಲ್ಲ’ ಎಂದು ರಾಜಣ್ಣ ಹೇಳಿದ್ದಾರೆ. ಉತ್ತರ ಪ್ರದೇಶದಲ್ಲಿ ಬುಲ್ಡೋಜರ್ ಕ್ರಮವನ್ನು ಬೆಂಬಲಿಸಿದ ಕರ್ನಾಟಕ ಸಚಿವರು, ಬುಲ್ಡೋಜರ್ಗಳನ್ನು ಬಳಸಿ ಆರೋಪಿಗಳ ಮನೆಗಳನ್ನು ನೆಲಸಮಗೊಳಿಸುವಂತಹ ಸರ್ಕಾರದ ಕ್ರಮಗಳಿಂದ ಜನನಿಬಿಡ ರಾಜ್ಯದಲ್ಲಿ ಕಾನೂನು ಮತ್ತು ಸುವ್ಯವಸ್ಥೆಯನ್ನು ನಿಯಂತ್ರಣಕ್ಕೆ ತರಲಾಗಿದೆ ಎಂದು ಹೇಳಿದರು. “ಉತ್ತರ ಪ್ರದೇಶದಲ್ಲಿ ಮನೆಗಳನ್ನು ನೆಲಸಮ ಮಾಡಲಾಗಿದೆ. ಅದಕ್ಕೆ ಯಾವುದೇ ಕಾನೂನು ಇಲ್ಲ, ಆದರೆ ಕಾನೂನು ಮತ್ತು ಸುವ್ಯವಸ್ಥೆ ನಿಯಂತ್ರಣದಲ್ಲಿಲ್ಲವೇ? ನಾವು ಅದನ್ನು ವಿರೋಧಿಸುವುದಿಲ್ಲ” ಎಂದು ಅವರು ಹೇಳಿದರು.…
ಬೆಂಗಳೂರು : ರಾಜ್ಯ ಸರ್ಕಾರ ಸಮಗ್ರ ಕೃಷಿಗೆ ಒತ್ತು ನೀಡುತ್ತದೆ. ಹೈನುಗಾರಿಕೆ, ಮೀನುಗಾರಿಕೆ ತೋಟಗಾರಿಕೆ ಸೇರಿದಂತೆ ಬಹು ಕೃಷಿ ಪದ್ಧತಿ ರೂಢಿಸಿಕೊಂಡಾಗ ಮಾತ್ರ ರೈತರ ಆದಾಯ ಹೆಚ್ಚಲು ಸಾಧ್ಯ. ಅದೇ ರೀತಿ ಕೃಷಿ ಕ್ಷೇತ್ರದಲ್ಲಿ ಸೌರಶಕ್ತಿಯ ಬಳಕೆ ಮೂಲಕ ರೈತರು ಸ್ವಾವಲಂಬನೆ ಸಾಧಿಸಬೇಕು,”ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಜಿಕೆವಿಕೆ ಆವರಣದಲ್ಲಿ ಇಂಧನ ಇಲಾಖೆ ವತಿಯಿಂದ ಶನಿವಾರ ಆಯೋಜಿಸಿದ್ದ ‘ರೈತ ಸೌರಶಕ್ತಿ ಮೇಳ’ವನ್ನು ಉದ್ಘಾಟಿಸಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, “ಅತ್ಯಂತ ಸಂತೋಷದಿಂದ ಮೇಳ ಉದ್ಘಾಟಿಸಿದ್ದೇನೆ. ಇಂಧನ ಸಚಿವ ಕೆ.ಜೆ ಜಾರ್ಜ್ ಅವರ ನೇತೃತ್ವದಲ್ಲಿ ರೈತ ಸೌರ ಶಕ್ತಿ ಮೇಳ ಏರ್ಪಾಡಾಗಿದೆ. ಸೌರ ಶಕ್ತಿ ಕ್ಷೇತ್ರದಲ್ಲಿ ಆಗಿರುವಂಥ ಬೆಳವಣಿಗೆ ರೈತರನ್ನು ತಲುಪಿ, ಕೃಷಿಯಲ್ಲಿ ಬಳಸಿಕೊಂಡಾಗ ಮಾತ್ರ ಅದು ಸಾರ್ಥಕವಾಗುತ್ತದೆ,”ಎಂದರು. “ಕೃಷಿ ಕ್ಷೇತ್ರದಲ್ಲಿ ಹೆಚ್ಚೆಚ್ಚು ಸಂಶೋಧನೆಗಳಾಗಿ, ಅದು ರೈತರಿಗೆ ತಲುಪಿದಾಗ ಮಾತ್ರ ದೇಶದ ಅಭಿವೃದ್ಧಿ ಸಾಧ್ಯ. ಎಲ್ಲ ಪ್ರದೇಶಗಳಿಗೆ ನೀರಾವರಿ ಒದಗಿಸಲು ಸಾಧ್ಯವಾಗದು. ರಾಜಸ್ಥಾನ ಹೊರತುಪಡಿಸಿದರೆ ಹೆಚ್ಚು ಒಣ ಭೂಮಿ ಇರುವುದು ಕರ್ನಾಟಕದಲ್ಲಿ. ರೈತರು ಇಂಥ…
ಬೆಂಗಳೂರು: ರಾಜ್ಯ ಸರ್ಕಾರದಿಂದ ಕಾಂಗ್ರೆಸ್ ನಿಷ್ಠಾವಂತ ಕಾರ್ಯಕರ್ತನಾಗಿದ್ದಂತ ಡಾ.ಯೋಗೇಶ್ ಬಾಬು ಅವರಿಗೆ ಕರ್ನಾಟಕ ದ್ರಾಕ್ಷಿ ಮತ್ತು ವೈನ್ ಬೋರ್ಡ್ ಅಧ್ಯಕ್ಷರನ್ನಾಗಿ ನೇಮಕ ಮಾಡಿತ್ತು. ಇಂತಹ ಹುದ್ದೆಯನ್ನು ಮಾ.11ರಂದು ಪದಗ್ರಹಣ ಮಾಡಲಿದ್ದಾರೆ. ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮೂರು ಕ್ಷೇತ್ರದ ಕಾಂಗ್ರೆಸ್ ನಿಷ್ಠಾಪಂತ ಕಾರ್ಯಕರ್ತ ಡಾ.ಬಿ ಯೇಗೇಶ್ ಬಾಬು ಅವರನ್ನು ಕರ್ನಾಟಕ ದ್ರಾಕ್ಷಿ ಮತ್ತು ವೈನ್ ಬೋರ್ಡ್ ಅಧ್ಯಕ್ಷರನ್ನಾಗಿ ನೇಮಿಸಿ ಆದೇಶಿಸಿದ್ದರು. ಡಾ.ಬಿ ಯೋಗೇಶ್ ಬಾಬು ಅವರು ನೂತನವಾಗಿ ಕರ್ನಾಟಕ ದ್ರಾಕ್ಷಿ ಮತ್ತು ವೈನ್ ಬೋರ್ಡ್ ಅಧ್ಯಕ್ಷರಾಗಿ ನೇಮಕವಾದಂತ ಹುದ್ದೆಗೆ ದಿನಾಂಕ 11-03-2024ರಂದು ಅಧಿಕಾರ ಪದಗ್ರಹಣ ಮಾಡಲಿದ್ದಾರೆ. ಮಾ.11ರಂದು ಬೆಂಗಳೂರಿನ ಕಬ್ಬನ್ ಉದ್ಯಾನವನದಲ್ಲಿ ಇರುವಂತ ಕರ್ನಾಟಕ ದ್ರಾಕ್ಷಿ ಮತ್ತು ವೈನ್ ಬೋರ್ಡ್ ಕಚೇರಿಯಲ್ಲಿ ಅಧ್ಯಕ್ಷರಾಗಿ ಡಾ.ಬಿ ಯೋಗೇಶ್ ಬಾಬು ಅಧಿಕಾರ ಸ್ವೀಕರಿಸಲಿದ್ದಾರೆ. https://kannadanewsnow.com/kannada/congress-government-will-be-in-power-for-10-years-ramalinga-reddy/ https://kannadanewsnow.com/kannada/big-relief-for-bengaluru-people-rs-5000-fine-for-using-water-for-other-purposes-after-march-15/
ಬೆಂಗಳೂರು: ನಗರದ ಗ್ಯಾರೇಜ್ ವೊಂದರಲ್ಲಿ ಗ್ಯಾಸ್ ಸಿಲಿಂಡರ್ ಸ್ಪೋಟಗೊಂಡ ಪರಿಣಾಮ ನಾಲ್ವರು ಗಾಯಗೊಂಡಿರೋ ಘಟನೆ ನಡೆದಿದೆ. ಅಲ್ಲದೇ ಗ್ಯಾಸ್ ಸಿಲಿಂಡರ್ ಸ್ಪೋಟದಿಂದ ಉಂಟಾದಂತ ಭಾರೀ ಶಬ್ದರಿಂದ ಅಕ್ಕಪಕ್ಕದ ಜನರು ಬೆಚ್ಚಿ ಬಿದ್ದಿದ್ದಾರೆ. ಬೆಂಗಳೂರಿನ ಬಸವೇಶ್ವರ ನಗರದಲ್ಲಿರುವಂತ ಗ್ಯಾರೇಜ್ ನಲ್ಲಿ ವೇಲ್ಡಿಂಗ್ ಮಾಡುವಂತ ಸಂದರ್ಭದಲ್ಲಿ ಗ್ಯಾಸ್ ಸಿಲಿಂಡರ್ ಸ್ಪೋಟಗೊಂಡಿದೆ. ಈ ಘಟನೆಯಲ್ಲಿ ಸ್ವಿಫ್ಟ್ ಡಿಸೈರ್ ಕಾರು, ದ್ವಿಚಕ್ರ ವಾಹನ ಸಂಪೂರ್ಣ ಹಾನಿಯಾಗಿದೆ. ಈ ಗ್ಯಾಸ್ ಸಿಲಿಂಡರ್ ಸ್ಪೋಟದಲ್ಲಿ ಗ್ಯಾರೇಜ್ ಮಾಲೀಕ ಜಾರ್ಜ್, ಕೆಲಸಗಾರ ಶಿವು ಸೇರಿದಂತೆ ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಅವರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಈ ವಿಷಯ ತಿಳಿದು ಬೆಂಗಳೂರಿನ ಪಶ್ಚಿಮ ವಿಭಾಗದ ಡಿಸಿಪಿ ಎಸ್ ಗಿರೀಶ್ ಘಟನಾ ಸ್ಥಳಕ್ಕೆ ಭೇಟಿ ನೀಡಿ, ಪರಿಶೀಸಿ ಮಾಹಿತಿ ಪಡೆದರು. ಈ ಸಂಬಂಧ ಮಾಗಡಿ ರಸ್ತೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. https://kannadanewsnow.com/kannada/bengalureans-dont-worry-cauvery-water-supply-bwssb/ https://kannadanewsnow.com/kannada/pedestrian-killed-in-hit-and-run-on-nelamangala-highway/
ಬೆಂಗಳೂರು : ಬೆಂಗಳೂರು ಜಲಮಂಡಳಿ ವ್ಯಾಪ್ತಿಯ ಪ್ರದೇಶಗಳಿಗೆ 1470 ಎಂಎಲ್ಡಿ ಕಾವೇರಿ ನೀರನ್ನು ನಿತ್ಯ ಸರಬರಾಜು ಮಾಡಲಾಗುತ್ತಿದೆ. ಈ ಸರಬರಾಜಿನಲ್ಲಿ ಯಾವುದೇ ರೀತಿಯಲ್ಲಿ ವ್ಯತ್ಯಯವಾಗಿಲ್ಲ. ಬೆಂಗಳೂರು ನಗರಕ್ಕೆ ಬರುವ ನೀರು ಬರುತ್ತಿದೆ. ನಗರದಲ್ಲಿ ಸಮರ್ಪಕ ನೀರು ಸರಬರಾಜಿಗೂ ಸಹ ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಬದ್ಧವಾಗಿದ್ದು ಬೆಂಗಳೂರಿಗರು ಯಾವುದೇ ಸುಳ್ಳುವದಂತಿಗಳಿಗೆ ಕಿವಿಗೊಡಬೇಡಿ ಎಂದು ಮಂಡಳಿ ಅಧ್ಯಕ್ಷ ಡಾ.ವಿ.ರಾಮ್ ಪ್ರಸಾತ್ ಮನೋಹರ್ ಅವರು ಮನವಿ ಮಾಡಿದ್ದಾರೆ. ಮಂಡಳಿಯ ಸಭಾಂಗಣದಲ್ಲಿ ಶನಿವಾರ ಮಧ್ಯಾಹ್ನ ಕರೆದಿದ್ದ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು. ಬೆಂಗಳೂರು ನಗರಕ್ಕೆ 1.54ಟಿಎಂಸಿ ನೀರು ತಿಂಗಳಿಗೆ ಅಗತ್ಯವಾಗಿದ್ದು,ಮಾರ್ಚ್ ತಿಂಗಳಿಂದ ಜುಲೈ ಅಂತ್ಯದವರೆಗೆ 8 ಟಿಎಂಸಿ ಅಗತ್ಯವಿದೆ. ಬೆಂಗಳೂರು ಸೇರಿದಂತೆ ಕಾವೇರಿ ನೀರಿನ ಮೇಲೆ ಅವಲಂಬನೆಯಾಗಿರುವ ನಗರಗಳಿಗೆ ಜುಲೈ ಅಂತ್ಯದವರೆಗೆ 17 ಟಿಎಂಸಿ ನೀರು ಬೇಕಾಗಿದ್ದು,ಕಾವೇರಿ ಜಲಾಶಯಗಳಲ್ಲಿ 34 ಟಿಎಂಸಿ ನೀರು ಸಂಗ್ರಹವಿದೆ. ಬೇಡಿಕೆಗಿಂತ ಎರಡುಪಟ್ಟು ನೀರು ಸಂಗ್ರಹವಿದ್ದು;ಯಾವುದೇ ರೀತಿಯ ಆತಂಕ ಬೇಡ. ನೀರನ್ನು ನಗರಕ್ಕೆ ಸಮರ್ಪಕವಾಗಿ ಸರಬರಾಜು ಮಾಡಲು ಬದ್ಧವಾಗಿದ್ದೇವೆ ಎಂದರು.…