Author: kannadanewsnow09

ನವದೆಹಲಿ: ದೆಹಲಿ ಮುಖ್ಯಮಂತ್ರಿಯಾಗಿ ಎಎಪಿ ನಾಯಕಿ ಅತಿಶಿ ಅವರು ಪ್ರಮಾಣವಚನ ಸ್ವೀಕರಿಸಿದರು. ಈ ಮೂಲಕ ದೆಹಲಿಯ ನೂತನ ಮುಖ್ಯಮಂತ್ರಿಯಾಗಿ ಅತಿಶಿ ಪದಗ್ರಹಣ ಮಾಡಿದ್ದಾರೆ. ದೆಹಲಿಯ ರಾಜಭವನ ಕಚೇರಿಯಲ್ಲಿ ನಡೆದಂತ ಸರಳ ಸಮಾರಂಭದಲ್ಲಿ ಇಂದು ದೆಹಲಿಯ ನೂತನ ಮುಖ್ಯಮಂತ್ರಿಯಾಗಿ ಅತಿಶಿ ಅವರು ಪ್ರಮಾಣ ವಚನ ಸ್ವೀಕರಿಸಿದರು. https://twitter.com/ANI/status/1837448438306558271 ಲೆಫ್ಟಿನೆಂಟ್ ಗವರ್ನರ್ ವಿ.ಕೆ.ಸಕ್ಸೇನಾ ಅವರು ಸಂಜೆ 4.30ಕ್ಕೆ ರಾಜ್ ನಿವಾಸದಲ್ಲಿ ಅತಿಶಿ ಮತ್ತು ಅವರ ಮಂತ್ರಿಮಂಡಲಕ್ಕೆ ಪ್ರಮಾಣ ವಚನ ಬೋಧಿಸಿದರು. ಸಿಸೋಡಿಯಾ ಮತ್ತು ಕೇಜ್ರಿವಾಲ್ (ಹಿಂದೂಸ್ತಾನ್ ಟೈಮ್ಸ್) ಬಂಧನದ ಸಮಯದಲ್ಲಿ ಅತಿಶಿ ದೆಹಲಿ ಸರ್ಕಾರದ ಮುಖವಾಗಿ ಹೊರಹೊಮ್ಮಿದ್ದಾರೆ. https://twitter.com/ANI/status/1837448448821678183 ದೆಹಲಿ ಮುಖ್ಯ ಕಾರ್ಯದರ್ಶಿ ಧರ್ಮೇಂದ್ರ ಅವರು ಎಎಪಿ ರಾಷ್ಟ್ರೀಯ ಸಂಚಾಲಕ ಮತ್ತು ಮಾಜಿ ಸಿಎಂ ಅರವಿಂದ್ ಕೇಜ್ರಿವಾಲ್ ಅವರನ್ನು ರಾಜ್ ನಿವಾಸದಲ್ಲಿ ಸ್ವಾಗತಿಸಿದರು. ಹಾಲಿ ಸಚಿವರಾದ ಗೋಪಾಲ್ ರಾಯ್, ಕೈಲಾಶ್ ಗೆಹ್ಲೋಟ್, ಸೌರಭ್ ಭಾರದ್ವಾಜ್ ಮತ್ತು ಇಮ್ರಾನ್ ಹುಸೇನ್ ತಮ್ಮ ಸ್ಥಾನಗಳನ್ನು ಉಳಿಸಿಕೊಳ್ಳಲಿದ್ದು, ದಲಿತ ಶಾಸಕ ಮುಖೇಶ್ ಅಹ್ಲಾವತ್ ಸಂಪುಟದಲ್ಲಿ ಹೊಸ ಮುಖವಾಗಲಿದ್ದಾರೆ. ಇನ್ನೂ…

Read More

ಬೆಂಗಳೂರು: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣ ಸಂಬಂಧ ನಟ ದರ್ಶನ್ ಮೊದಲ ಬಾರಿಗೆ ಇಂದು ಕೋರ್ಟ್ ಗೆ ಜಾಮೀನಿಗಾಗಿ ಅರ್ಜಿಯನ್ನು ಸಲ್ಲಿಸಿದ್ದರು. ಇಂತಹ ಅರ್ಜಿಯನ್ನು ಸೋಮವಾರಕ್ಕೆ ಕೋರ್ಟ್ ಮುಂದೂಡಿದೆ. ಇಂದು ನಟ ದರ್ಶನ್ ಸಲ್ಲಿಸಿದ್ದಂತ ಜಾಮೀನು ಅರ್ಜಿಯ ವಿಚಾರಣೆಯನ್ನು 57ನೇ ಸಿಸಿಹೆಚ್ ಕೋರ್ಟ್ ನಲ್ಲಿ ನ್ಯಾಯಮೂರ್ತಿ ಜೈ.ಶಂಕರ್ ಅವರು ವಿಚಾರಣ ನೆಡಸಿದರು. ಎಸ್ ಪಿಪಿಗೆ ನೋಟಿಸ್ ಜಾರಿಗೆ ಕೋರ್ಟ್ ಆದೇಶಿಸಿ, ಜಾಮೀನು ಅರ್ಜಿಯ ವಿಚಾರಣೆಯನ್ನು ಸೋಮವಾರಕ್ಕೆ ಮುಂದೂಡಿದೆ. ಅಂದಹಾಗೇ ನಟ ದರ್ಶನ್ ಪರಪ್ಪನ ಅಗ್ರಹಾರ ಜೈಲಿನಲ್ಲಿ ರಾಜಾತಿಥ್ಯ ವಿಚಾರ ಬೆಳಕಿಗೆ ಬಂದ ನಂತ್ರ ಬಳ್ಳಾರಿ ಜೈಲಿನಲ್ಲಿದ್ದಾರೆ. ಅವರು ಅಲ್ಲಿಂದಲೇ ತಮ್ಮ ಪರ ವಕೀಲ ಸುನೀಲ್ ಮೂಲಕ ಜಾಮೀನಿಗಾಗಿ ಮೊದಲ ಬಾರಿಗೆ ಅರ್ಜಿಯನ್ನು ಸಲ್ಲಿಸಿದ್ದರು. https://kannadanewsnow.com/kannada/bengaluru-in-yet-another-shocking-incident-a-young-woman-was-brutally-murdered/ https://kannadanewsnow.com/kannada/nipah-scare-rises-in-bengaluru-one-person-diagnosed-with-symptoms-41-under-home-quarantine/

Read More

ಬೆಂಗಳೂರು: ನಗರದಲ್ಲಿ ದೆಹಲಿಯ ಶ್ರದ್ಧಾ ವಾಕರ್ ಹತ್ಯೆ ಮಾಡರಿಯಲ್ಲೇ ಯುವತಿಯೊಬ್ಬಳನ್ನು ಬರ್ಬರವಾಗಿ ಕೊಲೆ ಮಾಡಿರುವಂತ ಬೆಚ್ಚಿ ಬೀಳಿಸೋ ಘಟನೆ ನಡೆದಿದೆ. ಯುವತಿಯೊಬ್ಬಳನ್ನು ಕೊಲೆಗೈದಿರುವಂತ ದುಷ್ಕರ್ಮಿಗಳು, ಆಕೆಯ ದೇಹವನ್ನು ಪೀಸ್ ಪೀಸ್ ಮಾಡಿ ಪ್ರಿಡ್ಜ್ ನಲ್ಲಿ ಇಟ್ಟಿರುವುದಾಗಿ ತಿಳಿದು ಬಂದಿದೆ. ಬೆಂಗಳೂರಿನ ವೈಯಾಲಿಕಾವ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಕಳೆದ ಹತ್ತರಿಂದ ಹದಿನೈದು ದಿನಗಳ ಹಿಂದೆ ನಡೆದಿರುವಂತ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಸುಮಾರು 25 ರಿಂದ 26 ವರ್ಷದ ಯುವತಿಯನ್ನು ಕೊಲೆಗೈದಿರುವಂತ ಆರೋಪಿಗಳು, ಪ್ರಿಡ್ಜ್ ನಲ್ಲಿ ದೇಹವನ್ನು ಪೀಸ್ ಪೀಸ್ ಮಾಡಿ ಇಟ್ಟಿರುವುದಾಗಿ ಹೇಳಲಾಗುತ್ತಿದೆ. ಈ ವಿಷಯ ತಿಳಿದು ಘಟನಾ ಸ್ಥಳಕ್ಕೆ ವಯಾಲಿಕಾವಲ್ ಠಾಣೆಯ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸುತ್ತಿದ್ದಾರೆ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವಂತ ವೈಯಾಲಿಕಾವಲ್ ಠಾಣೆಯ ಪೊಲೀಸರು, ಆರೋಪಿಗಳ ಪತ್ತೆಗೆ ಮಲೆ ಬೀಸಿದ್ದಾರೆ. https://kannadanewsnow.com/kannada/bengaluru-youth-hacked-to-death-in-tamil-nadu/ https://kannadanewsnow.com/kannada/nipah-scare-rises-in-bengaluru-one-person-diagnosed-with-symptoms-41-under-home-quarantine/

Read More

ಬೆಂಗಳೂರು: ತಮಿಳುನಾಡಿನಲ್ಲಿ ಬೆಂಗಳೂರಿನ ಯುವಕನನ್ನು ಬರ್ಬರವಾಗಿ ಕೊಲೆ ಮಾಡಿರುವಂತ ಘಟನೆ ತಡವಾಗಿ ಬೆಳಕಿಗೆ ಬಂದಿದೆ.  ಬೆಂಗಳೂರಿನ ಯುವಕನನ್ನು ತಮಿಳುನಾಡಿನಲ್ಲಿ ಬರ್ಬರವಾಗಿ ಕೊಲೆ ಮಾಡಿರುವುದಾಗಿ ತಿಳಿದು ಬಂದಿದೆ. ಗಣಪತಿ ಇಡುವ ವಿಚಾರಕ್ಕಾಗಿ ಜಗಳ ನಡೆದು, ಯುವಕ ರೇವಂತ್ ಎಂಬಾತನನ್ನು ಬರ್ಬರವಾಗಿ ಕೊಲೆ ಮಾಡಲಾಗಿದೆ. 2 ದಿನಗಳ ಹಿಂದೆಯೇ ರೇವಂತ್ ಕೊಲೆಯಾಗಿರುವ ಮಾಹಿತಿ ತಿಳಿದು ಬಂದಿದೆ. ಕೈಯಲ್ಲಿದ್ದಂತ ಹಚ್ಚೆಯ ಆಧಾರದ ಮೇಲೆ ಕೊಲೆಯಾದಂತ ಯುವಕ ಬೆಂಗಳೂರು ಮೂಲದ ರೇವಂತ್ ಎಂಬುದಾಗಿ ತಮಿಳುನಾಡು ಪೊಲೀಸರು ಗುರುತು ಪತ್ತೆ ಹಚ್ಚಿದ್ದಾರೆ. ತಮಿಳುನಾಡಿಗೆ ಬೆಂಗಳೂರಿನಿಂದ ಪರಿಚಯಸ್ಥರೊಬ್ಬರು ತಮ್ಮ ಕಾರಿನಲ್ಲಿ ಯುವಕ ರೇವಂತ್ ಕರೆದೊಯ್ದಿದ್ದರು ಎನ್ನುವ ಮಾಹಿತಿ ಲಭ್ಯವಾಗಿದೆ. ಈ ಸಂಬಂಧ ತಮಿಳುನಾಡಿನ ಬಾಗಲೂರು ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ. https://kannadanewsnow.com/kannada/nipah-scare-rises-in-bengaluru-one-person-diagnosed-with-symptoms-41-under-home-quarantine/ https://kannadanewsnow.com/kannada/air-marshal-ap-singh-appointed-as-next-chief-of-air-staff-air-marshal-a-p-singh/

Read More

ಮಡಿಕೇರಿ :-ಸರ್ಕಾರದ ಮಹತ್ತರ ಯೋಜನೆಯಾದ ನೇಕಾರ್ ಸಮ್ಮಾನ್ ಯೋಜನೆಯಡಿ ಕೈಮಗ್ಗ ಹಾಗೂ ವಿದ್ಯುತ್ ಮಗ್ಗ ನೇಕಾರರಿಗೆ ವಾರ್ಷಿಕವಾಗಿ ಒಂದು ಬಾರಿಗೆ ರೂ. 5 ಸಾವಿರ ಗಳ ಸಹಾಯಧನವನ್ನು ಸರ್ಕಾರದಿಂದ ಡಿ.ಬಿ.ಟಿ ಮೂಲಕ (ನೇರ ನಗದು ವರ್ಗಾವಣೆ) ನೀಡಲಾಗುತ್ತಿದೆ. 2024-25 ನೇ ಸಾಲಿಗೆ ಸಹಾಯಧನವನ್ನು ಪಡೆಯಲು ಜಿಲ್ಲೆಯ ಕೈಮಗ್ಗ ಹಾಗೂ ವಿದ್ಯುತ್ ಮಗ್ಗ ನೇಕಾರರು ಹಾಗೂ ನೇಕಾರಿಕೆ ಪೂರಕ ವೃತ್ತಿಯನ್ನು ಅವಲಂಬಿಸಿರುವ ಎಲ್ಲಾ ನೇಕಾರರು ಈ ಯೋಜನೆಯಡಿ ರೂ. 5 ಸಾವಿರ ಗಳ ವಾರ್ಷಿಕ ಒಂದು ಬಾರಿಯ ಸಹಾಯಧನ ಪಡೆಯಲು ಅರ್ಹರಿದ್ದು, ಅರ್ಜಿ ನಮೂನೆಗಳನ್ನು ತಮ್ಮ ನೇಕಾರ ಸಹಕಾರ ಸಂಘಗಳಿಂದ/ ಕಚೇರಿಯಿಂದ ಪಡೆದು ಸಂಘದ ಮೂಲಕ ಸಲ್ಲಿಸಬೇಕಿದೆ. ವೈಯಕ್ತಿಕ ನೇಕಾರರಾಗಿದ್ದಲ್ಲಿ ನೇಕಾರ್ ಸಮ್ಮಾನ್ ಅರ್ಜಿ ನಮೂನೆಗಳನ್ನು ಈ ಕಚೇರಿಯಿಂದ ಪಡೆದು ಸಲ್ಲಿಸಬಹುದಾಗಿದೆ. ಕೈಮಗ್ಗ ನೇಕಾರರಿಂದ ಸಲ್ಲಿಸಬೇಕಾದ ದಾಖಲಾತಿಗಳು: ಆಧಾರ್ ಕಾರ್ಡ್, ರೇಷನ್ ಕಾರ್ಡ್, ನೇಕಾರ್ ಸಮ್ಮಾನ್ ಐಡಿ/ ಪೆಹಚಾನ್ ಕಾರ್ಡ್, ಆಧಾರ್ ಜೋಡಣೆಯಾದ ಬ್ಯಾಂಕ್ ಖಾತೆ ಪಾಸ್‍ಬುಕ್ ಪ್ರತಿ, ಕೈಮಗ್ಗ ನೇಕಾರಿಕೆ ವೃತ್ತಿಯಲ್ಲಿ…

Read More

ಮಡಿಕೇರಿ: ಪ್ರಸಕ್ತ (2024-25) ಶೈಕ್ಷಣಿಕ ವರ್ಷದಲ್ಲಿ ಉಡುಪಿ ಜಿಲ್ಲೆಯ ಬ್ರಹ್ಮಾವರದ ಕೃಷಿ ಡಿಪ್ಲೋಮಾ ಕೋರ್ಸ್‍ಗೆ ಪ್ರವೇಶಾತಿ ಅರ್ಜಿ ಆಹ್ವಾನಿಸಲಾಗಿದ್ದು, ಡಿಪ್ಲೋಮಾ ಕೃಷಿ ದಾಖಲಾತಿಗೆ ಈ ಹಿಂದೆ ಭರ್ತಿ ಮಾಡಿದ ಅರ್ಜಿಗಳನ್ನು ಸಲ್ಲಿಸಲು ಅಂತಿಮ ದಿನಾಂಕವನ್ನು 14.09.2024 ಎಂದು ಅಧಿಸೂಚನೆ ಹೊರಡಿಸಲಾಗಿತ್ತು. ಅರ್ಜಿ ಸಲ್ಲಿಸಲು ಅಂತಿಮ ದಿನಾಂಕವನ್ನು ಸೆಪ್ಟೆಂಬರ್, 30 ರವರೆಗೆ ವಿಸ್ತರಿಸಲಾಗಿದೆ. ಅರ್ಜಿಯನ್ನು www.uahs.edu.in ವೈಬ್‍ಸೈಟ್ ಇಲ್ಲಿ ಎಲ್ಲಾ ಅಧಿಸೂಚನೆಗಳು ಶೀರ್ಷಿಕೆ ಅಡಿಯಲ್ಲಿ ಡೌನ್‍ಲೋಡ್ ಮಾಡಿ ಭರ್ತಿ ಮಾಡಿದ ಅರ್ಜಿಗಳನ್ನು ಸೆಪ್ಟೆಂಬರ್ 30 ರೊಳಗೆ ಸಲ್ಲಿಸಬಹುದಾಗಿದೆ. ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ತೇರ್ಗಡೆಯಾದ, ಕನಿಷ್ಠ ಶೇ.45 (ಕನಿಷ್ಠ ಶೇ. 40 ಪ.ಜಾ. ಮತ್ತು ಪ.ಪಂ./ ಪ್ರವರ್ಗ-1) ಅಂಕಗಳೊಂದಿಗೆ ಉತ್ತೀರ್ಣರಾದ, 19 ವರ್ಷ ವಯಸ್ಸು ಮೀರದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ರೈತರ ಹಾಗೂ ಕೃಷಿ ಕಾರ್ಮಿಕರ ಮಕ್ಕಳಿಗೆ ಶೇ. 50 ರಷ್ಟು ಮೀಸಲಾತಿ ಇರುತ್ತದೆ. ಈ ಎರಡು ವರ್ಷದ ಡಿಪ್ಲೋಮಾ ಕೋರ್ಸ್‍ನಲ್ಲಿ ಕೃಷಿ, ತೋಟಗಾರಿಕೆ, ಪಶುಸಂಗೋಪನೆ, ಮೀನುಗಾರಿಕೆ, ಹೈನುವಿಜ್ಞಾನ, ರೇಷ್ಮೆ ಕೃಷಿ, ಜೇನು ಕೃಷಿ ಹೀಗೆ…

Read More

ಉತ್ತರ ಕನ್ನಡ: ಜಿಲ್ಲೆಯ ಶಿರೂರು ಬಳಿಯ ಹೆದ್ದಾರಿ 66ರಲ್ಲಿ ಬೆಟ್ಟ ಕುಸಿತ ಉಂಟಾಗಿ, ಕೇರಳ ಮೂಲದ ಅರ್ಜುನ್ ಎಂಬುವರ ಲಾರಿ ನಾಪತ್ತೆಯಾಗಿತ್ತು. ಇಂದು ಲಾರಿಯು ಗಂಗಾವಳಿ ನದಿಯಲ್ಲಿ ಪತ್ತೆಯಾಗಿದೆ. ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಶಿರೂರು ಬಳಿಯ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಗುಡ್ಡ ಕುಸಿತಗೊಂಡು 10 ಮಂದಿ ನಾಪತ್ತೆಯಾಗಿ ಸಾವನ್ನಪ್ಪಿದ್ದರು. ಈ ದುರಂತದಲ್ಲಿ ಕೇರಳ ಮೂಲಕ ಅರ್ಜುನ್ ಎಂಬುವರಿಗೆ ಸೇರಿದಂತ ಲಾರಿ ಕೂಡ ನಾಪತ್ತೆಯಾಗಿತ್ತು. ಇಂದು ಮುಳುಗು ತಜ್ಞ ಈಶ್ವರ್ ಮಲ್ಪೆ ತಂಡದಿಂದ ಗಂಗಾವಳಿ ನದಿಯಲ್ಲಿ ಮುಳುಗಿದ್ದಂತ ಕೇರಳ ಮೂಲದ ಅರ್ಜುನ್ ಎಂಬುವರಿಗೆ ಸೇರಿದಂತೆ ಲಾರಿಯನ್ನು ಪತ್ತೆ ಹಚ್ಚಲಾಗಿದೆ. ಇದೀಗ ಲಾರಿಗೆ ಹಗ್ಗವನ್ನು ಕಟ್ಟಿ, ಮೇಲೆ ಎಳೆಯುವಂತ ಕಾರ್ಯಾಚರಣೆ ನಡೆಯುತ್ತಿದೆ. https://kannadanewsnow.com/kannada/bjp-accuses-congress-of-being-behind-nagamangala-riots/ https://kannadanewsnow.com/kannada/nipah-scare-rises-in-bengaluru-one-person-diagnosed-with-symptoms-41-under-home-quarantine/

Read More

ಬೆಂಗಳೂರು: ಮಂಡ್ಯ ಜಿಲ್ಲೆಯ ನಾಗಮಂಗಲದಲ್ಲಿ ಗಣೇಶ ಮೂರ್ತಿ ವಿಸರ್ಜನೆಯ ವೇಳೆಯಲ್ಲಿ ನಡೆದಂತ ಗಲಭೆಯ ಹಿಂದೆ ಕಾಂಗ್ರೆಸ್ ಕೈವಾಡವಿದೆ ಎಂಬುದಾಗಿ ಬಿಜೆಪಿ ಗಂಭೀರ ಆರೋಪ ಮಾಡಿದೆ. ಇಂದು ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವಂತ ಕರ್ನಾಟಕ ಬಿಜೆಪಿಯು, ಕಾಂಗ್ರೆಸ್ ಸರ್ಕಾರದ ತುಷ್ಠೀಕರಣದ ನೀತಿಯಿಂದಾಗಿಯೇ ನಾಗಮಂಗಲದಲ್ಲಿ ಗಲಭೆಯಾಗಿದೆ ಎಂದು ಬಿಜೆಪಿಯ ಸತ್ಯಶೋಧನಾ ಸಮಿತಿ ವರದಿ ನೀಡಿದೆ ಎಂದಿದೆ. ಈ ಗಲಭೆ ಪೂರ್ವನಿಯೋಜಿತವಾಗಿದ್ದು, ಹಿಂದೂ ಸಮುದಾಯದ ಅಂಗಡಿಗಳಿಗೆ ಮಾತ್ರ ಬೆಂಕಿ ‌ಹಚ್ಚಲಾಗಿದೆ. ಕಳೆದ ವರ್ಷವೂ ಇದೇ ರೀತಿ ಗಲಭೆ ನಡೆದಿದ್ದರೂ ಸರ್ಕಾರ ನಿರ್ಲಕ್ಷ್ಯ ವಹಿಸಿ, ಗಣೇಶ ಮೂರ್ತಿಯ ವಿಸರ್ಜನೆಗೆ ವಿಘ್ನ ತರಲು ಮುಂದೆ ನಿಂತು ಸಹಕಾರ ನೀಡಿದೆ ಎಂಬುದಾಗಿ ಆರೋಪಿಸಿದೆ. ಹಿಂದೂ ಸಮುದಾಯ ಅಭದ್ರವಾಗಿದ್ದಷ್ಟೂ ತನಗೆ ಲಾಭ ಎಂದು ಅರಿತುಕೊಂಡಿರುವ ಕಾಂಗ್ರೆಸ್ ಸರ್ಕಾರ ಪದೇ ಪದೇ ಹಿಂದೂ ಸಮುದಾಯವನ್ನು ಅವಮಾನಿಸುತ್ತಿದೆ ಎಂಬುದಾಗಿ ಕಿಡಿಕಾರಿದೆ. https://twitter.com/BJP4Karnataka/status/1837379965106409835 https://kannadanewsnow.com/kannada/decision-to-conduct-prasadam-testing-in-all-temples-in-the-state-minister-ramalinga-reddy/ https://kannadanewsnow.com/kannada/nipah-scare-rises-in-bengaluru-one-person-diagnosed-with-symptoms-41-under-home-quarantine/

Read More

ಬೆಂಗಳೂರು: ತಿರುಪತಿ ಲಡ್ಡು ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬು ಪತ್ತೆ ಬೆನ್ನಲ್ಲೇ, ರಾಜ್ಯ ಸರ್ಕಾರ ಎಚ್ಚೆತ್ತುಕೊಂಡಿದೆ. ರಾಜ್ಯದ ಮುಜರಾಯಿ ಇಲಾಖೆಯ ದೇವಾಲಯಗಳ ಪ್ರಸಾದ ವಿವಾದಕ್ಕೆ ಕಾರಣವಾಗುವ ಮುನ್ನವೇ ಎಲ್ಲಾ ದೇವಾಲಗಳ ಪ್ರಸಾದವನ್ನು ಪರೀಕ್ಷೆ ಮಾಡುವಂತ ನಿರ್ಧಾರವನ್ನು ಕೈಗೊಂಡಿದೆ. ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿ ಮಾಹಿತಿ ಹಂಚಿಕೊಂಡಂತ ಸಾರಿಗೆ ಹಾಗೂ ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಅವರು, ರಾಜ್ಯದ ಎಲ್ಲಾ ದೇವಾಲಯಗಳ ಪ್ರಸಾದವನ್ನು ಟೆಸ್ಟ್ ಮಾಡಿಸುತ್ತೇನೆ. ನಮ್ಮ ರಾಜ್ಯದಲ್ಲಿ ಶೇ.99%ನಷ್ಟು ದೇವಾಲಯಗಳು ನಂದಿನಿ ತುಪ್ಪವನ್ನೇ ಬಳಸಿಕೊಳ್ಳುತ್ತಾ ಇದ್ದಾರೆ ಎಂದರು. ತಿರುಪತಿ ಲಡ್ಡು ವಿವಾದದಂತೆ ನಮ್ಮಲ್ಲೂ ಆಗುವುದಕ್ಕಿಂತ ಮುಂಚೆಯೇ ಜನರಿಗೆ ಸಂಶಯ ಬೇಡ ಅಂತ ನಂದಿನಿ ತುಪ್ಪ ಬಳಕೆ ಮಾಡಬೇಕು ಎಂಬುದಾಗಿ ಆದೇಶ ಮಾಡಲಾಗಿದೆ. ಕೇಂದ್ರ ಸಚಿವರೊಬ್ಬರು ರಾಜ್ಯದ ದೇವಾಲಯಗಳ ಪ್ರಸಾದ ಪರೀಕ್ಷೆ ಮಾಡಬೇಕು ಎಂದಿದ್ದಾರೆ. ನನ್ನ ಅಭಿಪ್ರಾಯ ಅಂದ್ರೆ ದೇಶದ ಎಲ್ಲಾ ದೇವಸ್ಥಾನಗಳ ಪ್ರಸಾದ ಟೆಸ್ಟ್ ಮಾಡಲಿ ಎಂಬುದಾಗಿದೆ ಎಂದರು. ನಮ್ಮ ರಾಜ್ಯದ ಯಾವುದೇ ದೇವಾಲಯಗಳಲ್ಲಿ ಅಂತಹ ಘಟನೆ ನಡೆದಿಲ್ಲ. ಆದರೂ ಮುಂಜಾಗ್ರತಾ ಕ್ರಮವಾಗಿ ರಾಜ್ಯದ…

Read More

ಬೆಂಗಳೂರು : “ರಸ್ತೆ ಗುಂಡಿ ಮುಚ್ಚುವ ಕಾಮಗಾರಿಯ ಗುಣಮಟ್ಟ ವೀಕ್ಷಣೆ ಮಾಡಲು ರಾತ್ರಿ ಸಂಚಾರ ನಡೆಸುತ್ತೇನೆ. ಎರಡು ಮೂರು ದಿನಗಳಲ್ಲಿ ದಿನಾಂಕ ತಿಳಿಸುತ್ತೇನೆ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದರು. ಸದಾಶಿವನಗರದ ನಿವಾಸದ ಬಳಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು “ಎಷ್ಟು ರಸ್ತೆಗುಂಡಿಗಳಿವೆ ಎಂಬುದರ ಬಗ್ಗೆ ನನ್ನ ಬಳಿ ಲೆಕ್ಕವಿದೆ. ಅಭಿಯಾನದ ರೀತಿ ಕೆಲಸ ಮಾಡಿದ್ದೇವೆ. ಇದು ಸಾಧನೆಯಲ್ಲ ಜವಾಬ್ದಾರಿ. ನನ್ನ 40 ವರ್ಷಗಳ ರಾಜಕೀಯ ಇತಿಹಾಸದಲ್ಲಿ ಆದೇಶ ಕೊಟ್ಟ ಮೇಲೆ ಅಧಿಕಾರಿಗಳು ಇಷ್ಟು ತ್ವರಿತವಾಗಿ ಕೆಲಸ ಮಾಡಿದ್ದನ್ನು ನಾನು ನೋಡಿರಲಿಲ್ಲ” ಎಂದು ಹೇಳಿದರು. “ರಸ್ತೆಗುಂಡಿಗಳನ್ನು ಮುಚ್ಚಿಸುವ ವಿಚಾರದಲ್ಲಿ ಬಿಬಿಎಂಪಿ ಅಧಿಕಾರಿಗಳು ಹಗಲು- ರಾತ್ರಿ ಕೆಲಸ ಮಾಡುತ್ತಿದ್ದಾರೆ. ಎಲ್ಲವನ್ನೂ ಗಮನದಲ್ಲಿಟ್ಟುಕೊಂಡು ಕೆಲಸ ಮಾಡಬೇಕು. ಮಧ್ಯೆ ಮಳೆ ಬಂದಿದೆ. ನೀವು (ಮಾಧ್ಯಮ)ಗಳು ಅಷ್ಟೋ, ಇಷ್ಟೊ ಕೆಲಸ ಮಾಡಿದ್ದಾರೆ ಎಂದು ವರದಿ ಮಾಡಿದ್ದೀರಿ. ನಾವು ಬದ್ಧತೆಯಿಂದ ನಾಗರೀಕರಿಗೆ ಅನುಕೂಲ ಮಾಡುವ ಕೆಲಸ ಮಾಡಿದ್ದೇವೆ” ಎಂದು ಹೇಳಿದರು. ಬೇರೆ ರಾಜ್ಯಗಳಿಗೆ ಅವಮಾನ ಮಾಡಲು ಇಷ್ಟವಿಲ್ಲ “ನಾನು ಬೇರೆ ರಾಜ್ಯಗಳಿಗೆಲ್ಲಾ…

Read More