Author: ವಸಂತ ಬಿ ಈಶ್ವರಗೆರೆ

ವಸಂತ ಬಿ ಈಶ್ವರಗೆರೆ (Vasantha B Eshwaragere) ಅವರು ಕರ್ನಾಟಕದ ಪತ್ರಕರ್ತರು ಮತ್ತು ಕವಿ. ಉದಯ ನ್ಯೂಸ್, ಟಿವಿ5 ಕನ್ನಡ ಸೇರಿದಂತೆ ವಿವಿಧ ಸುದ್ದಿ ಮಾಧ್ಯಮಗಳಲ್ಲಿ ಸುಮಾರು 15 ವರ್ಷಗಳ ಅನುಭವವನ್ನು ಹೊಂದಿದ್ದಾರೆ. ಪ್ರಸ್ತುತ ಅವರು Kannada News Now ಡಿಜಿಡಿಲ್‌ ಮಾಧ್ಯಮದಲ್ಲಿ ಸಂಪಾದಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಇವರು ತಾಜಾ ಸುದ್ದಿ, ಸಾಹಿತ್ಯ, ಸಾಮಾಜಿಕ ವರದಿಗಾರಿಕೆ, ನ್ಯಾಯಾಂಗ ಸಂಬಂಧಿತ ವರದಿ ಮತ್ತು ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿದ ಸುದ್ದಿಗಳ ವರದಿಯಲ್ಲಿ ಸಕ್ರಿಯರಾಗಿದ್ದಾರೆ. ಗುಡವಿ ಪಕ್ಷಿಧಾಮದಂತಹ ಪ್ರವಾಸಿ ತಾಣಗಳ ಕುರಿತು ಲೇಖನಗಳನ್ನು ಬರೆದಿದ್ದಾರೆ.

ಬೆಂಗಳೂರು: ಒಂದೆಡೆ ಶೇ.49ರಷ್ಟು ಟಿಕೆಟ್ ದರ ಹೆಚ್ಚಳ ಮಾಡಿ ನಮ್ಮ ಮೆಟ್ರೋ ಪ್ರಯಾಣಿಕರಿಗೆ ಬಿಎಂ ಆರ್ ಸಿಎಲ್ ಬಿಗ್ ಶಾಕ್ ನೀಡಿದೆ. ಇಂದಿನಿಂದ ಪರಿಷ್ಕೃತ ದರ ಜಾರಿಗೊಂಡಿದೆ. ಈ ನಡುವೆ ಬೆಂಗಳೂರಿನಲ್ಲಿ ನಮ್ಮ ಮೆಟ್ರೋ ಹಳದಿ ಮಾರ್ಗದಲ್ಲಿ 2ನೇ ಸಿಗ್ನಲಿಂಗ್ ಪರೀಕ್ಷೆ ಪೂರ್ಣಗೊಂಡಿದೆ. ಈ ಕುರಿತಂತೆ ಬಿಎಂಆರ್ ಸಿಎಲ್ ಮಾಹಿತಿ ನೀಡಿದ್ದು, ಹಳದಿ ಮಾರ್ಗಕ್ಕೆ ಇದು ಎರಡನೇ ರೈಲು ಸೆಟ್ ನಡೆಯುತ್ತಿದೆ. ಬಹು ಇತರೆ ರೈಲು ಪರೀಕ್ಷೆಗಳಲ್ಲಿ ಕೊನೆಯ ಸಿಗ್ನಲಿಂಗ್ ಪರೀಕ್ಷೆ ನಡೆಸಬೇಕಾಗಿದೆ. TS#2ಕ್ಕೆ ಸಿಗ್ನಲಿಂಗ್ ಪರೀಕ್ಷೆಯನ್ನು ಪೂರ್ಣಗೊಳಿಸಿದ ನಂತರ, ಮಾರ್ಚ್ ಮೊದಲ ವಾರದಿಂದ ಇತರೆ ರೈಲು ಪರೀಕ್ಷೆಗಳು ಪ್ರಾರಂಭಿಸಲಾಗುವುದು ಎಂದಿದೆ. ಇನ್ನೂ ಮೂರನೇ ರೈಲು ಸೆಟ್ ಮಾರ್ಚ್ 2025 ರ ಅಂತ್ಯದಲ್ಲಿ ಬರುವ ನಿರೀಕ್ಷೆ ಇದೆ. ಆ ಬಳಿಕ ನಮ್ಮ ಮೆಟ್ರೋ ಹಳದಿ ಮಾರ್ಗದಲ್ಲಿ ವಾಣಿಜ್ಯ ರೈಲು ಸಂಚಾರ ಆರಂಭದ ಬಗ್ಗೆ ಅಧಿಕೃತ ಮಾಹಿತಿ ಹೊರಬೀಳುವ ಸಾಧ್ಯತೆ ಇದೆ. https://kannadanewsnow.com/kannada/bengaluru-power-outages-in-these-areas-on-february-10/ https://kannadanewsnow.com/kannada/breaking-three-persons-including-notorious-rowdysheeter-scientist-manjya-arrested-in-hubballi/

Read More

ಬೆಂಗಳೂರು: ದಿನಾಂಕ 10-02-2025ರ ಸೋಮವಾರದ ನಾಳೆ ಬೆಳಿಗ್ಗೆ 11 ಗಂಟೆಯಿಂದ ಮಧ್ಯಾಹ್ನ 2 ಗಂಟೆಯವರೆಗೆ ನಗರದ ಈ ಕೆಳಕಂಡ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಬೆಸ್ಕಾಂ ( BESCOM ) ಮನವಿ ಮಾಡಿದೆ. ಈ ಕುರಿತಂತೆ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ನಾಳೆ ಬೆಳಿಗ್ಗೆ 11 ರಿಂದ 2 ಗಂಟೆಯಲರೆಗೆ 66/11 ಕೆವಿ ವಾಟರಿ ರೋಡ್ ಸ್ಟೇಷನ್ ನಲ್ಲಿ ತುರ್ತು ನಿರ್ವಹಣಾ ಕಾರ್ಯವನ್ನು ಕೈಗೊಳ್ಳಲಾಗುತ್ತಿದೆ. ಈ ಕಾರಣದಿಂದ ಕೆಳಗಿನ ಪ್ರದೇಶಗಳಲ್ಲಿ ಪವರ್ ಕಟ್ ಆಗಲಿದೆ ಅಂತ ತಿಳಿಸಿದೆ. ನಾಳೆ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ (Power Cut)  ಹಳೆಬೈಯಪ್ಪನಹಳ್ಳಿ, ನಾಗೇನಪಾಳ್ಯ, ಸತ್ಯನಗರ, ಗಜೇಂದ್ರನಗರ, ಎಸ್.ಕುಮಾರ್‌ಲೇಔಟ್, ಆಂಧ್ರಬ್ಯಾಂಕ್ ರಸ್ತೆ, ಕುಕ್ಸ ರಸ್ತೆ, ಡೇವಿಸ್ ರಸ್ತೆ, ರಿಚರ್ಡ್ಸ ಪಾರ್ಕ ರಸ್ತೆ, ಆಯಿಲ್ ಮಿಲ್ ರಸ್ತೆ, ಸದಾಶಿವದೇವಸ್ಥಾನ ರಸ್ತೆ, ಕಮ್ಮನಹಳ್ಳಿಮುಖ್ಯರಸ್ತೆ, ಕೆ.ಹಚ್.ಬಿ ಕಾಲೋನಿ, ಜೈ ಭಾರತ ನಗರ, ಸಿ.ಕೆ.ಗಾರ್ಡನ್, ಡಿ’ಕೋಸ್ಟಾ ಲೇಔಟ್, ಹಚಿಸನ್ ರಸ್ತೆ, ಉತ್ತರ ರಸ್ತೆ, ವೀಲರ ರಸ್ತೆ, ಅಶೋಕ ರಸ್ತೆ,…

Read More

ನವದೆಹಲಿ: ಲಿವ್ ಇನ್ ಸಂಗಾತಿಯಿಂದಲೇ ಕೊಲೆಯಾದಂತ  ಶ್ರದ್ಧಾ ವಾಕರ್ ಅವರ ತಂದೆ ವಿಕಾಸ್ ವಾಕರ್ ಭಾನುವಾರ ಬೆಳಿಗ್ಗೆ ಮುಂಬೈನ ವಸಾಯಿ ಪ್ರದೇಶದಲ್ಲಿ ಹೃದಯಾಘಾತದಿಂದ ನಿಧನರಾಗಿದ್ದಾರೆ. 18 ಮೇ 2022… ದೆಹಲಿಯಲ್ಲಿ ಈ ದಿನಾಂಕದಂದು ಇಡೀ ದೇಶವನ್ನೇ ಬೆಚ್ಚಿಬೀಳಿಸುವ ಘಟನೆ ನಡೆಯಿತು. 27 ವರ್ಷದ ಶ್ರದ್ಧಾ ವಾಕರ್‌ಳನ್ನು ಆಕೆಯ ಗೆಳೆಯನೇ ಬರ್ಬರವಾಗಿ ಕೊಲೆ ಮಾಡಿದ್ದ. ಈ ಕೊಲೆ ಪ್ರಕರಣವು ಶ್ರದ್ಧಾ ವಾಕರ್ ಅವರ ಕುಟುಂಬವನ್ನು ತೀವ್ರವಾಗಿ ಆಘಾತಕ್ಕೆ ಒಳಗಾಗಿತ್ತು. ಕುಟುಂಬ ಮೂಲಗಳ ಪ್ರಕಾರ, ಶ್ರದ್ಧಾ ಅವರ ತಂದೆ ವಿಕಾಸ್ ತಮ್ಮ ಮಗಳ ಹತ್ಯೆಯ ನಂತರ ನಿರಂತರವಾಗಿ ಖಿನ್ನತೆಯಿಂದ ಬಳಲುತ್ತಿದ್ದರು. ಅವರು ಖಿನ್ನತೆಗೆ ಚಿಕಿತ್ಸೆ ಪಡೆಯುತ್ತಿದ್ದರು. ಅವನು ತನ್ನ ಮಗಳ ಚಿತಾಭಸ್ಮಕ್ಕಾಗಿಯೂ ಕಾಯುತ್ತಿದ್ದನು. ಶ್ರದ್ಧಾಳ ತಂದೆ ಆರೋಪಿಗಳಿಗೆ ಮರಣದಂಡನೆ ವಿಧಿಸಬೇಕೆಂದು ಒತ್ತಾಯಿಸಿದ್ದರು. ಇಂತಹ ಅವರು ಇಂದು ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. https://kannadanewsnow.com/kannada/mla-yatnal-should-become-bjp-state-president-photo-at-kumbh-mela/ https://kannadanewsnow.com/kannada/ex-cms-daughter-duped-of-rs-4-crore-complaint-lodged/

Read More

ಡೆಹ್ರಾಡೂನ್: ಉತ್ತರಾಖಂಡದ ಮಾಜಿ ಮುಖ್ಯಮಂತ್ರಿ ಮತ್ತು ನರೇಂದ್ರ ಮೋದಿ ಸಂಪುಟದಲ್ಲಿ ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವರಾಗಿದ್ದ ರಮೇಶ್ ಪೋಖ್ರಿಯಾಲ್ ನಿಶಾಂಕ್ ಅವರ ಪುತ್ರಿ ಆರುಷಿ ನಿಶಾಂಕ್ ಅವರಿಗೆ ಚಲನಚಿತ್ರ ನಿರ್ಮಾಪಕರು ಎಂದು ಹೇಳಿಕೊಂಡು ಬಾಲಿವುಡ್ ಚಲನಚಿತ್ರದಲ್ಲಿ ಅವಕಾಶ ನೀಡುವುದಾಗಿ ಹೇಳಿ ಇಬ್ಬರು ವ್ಯಕ್ತಿಗಳು 4 ಕೋಟಿ ರೂ.ಗಳನ್ನು ವಂಚಿಸಿದ್ದಾರೆ ಎಂದು ಆರೋಪಿಸಲಾಗಿದೆ. ಡೆಹ್ರಾಡೂನ್ನ ಕೊಟ್ವಾಲಿ ಪೊಲೀಸ್ ಠಾಣೆಯಲ್ಲಿ ಅರುಷಿ ದೂರು ನೀಡಿದ್ದಾರೆ.  ಮಾನಸಿ ವರುಣ್ ಬಾಗ್ಲಾ ಮತ್ತು ವರುಣ್ ಪ್ರಮೋದ್ ಕುಮಾರ್ ಬಾಗ್ಲಾ ತಮ್ಮನ್ನು ಮಿನಿ ಫಿಲ್ಮ್ಸ್ ಪ್ರೈವೇಟ್ ಲಿಮಿಟೆಡ್ನ ನಿರ್ದೇಶಕರು ಎಂದು ಪರಿಚಯಿಸಿಕೊಂಡರು ಮತ್ತು ಶನಾಯಾ ಕಪೂರ್ ಮತ್ತು ವಿಕ್ರಾಂತ್ ಮಾಸ್ಸಿ ಅಭಿನಯದ ‘ಆಂಖೋನ್ ಕಿ ಗುಸ್ತಾಖಿಯಾನ್’ ಎಂಬ ಹಿಂದಿ ಚಿತ್ರವನ್ನು ನಿರ್ಮಿಸುತ್ತಿರುವುದಾಗಿ ಹೇಳಿದರು ಎಂದು ಹಿಮಶ್ರೀ ಫಿಲ್ಮ್ಸ್ನ ಸಹ ಮಾಲೀಕ ಆರುಷಿ ಹೇಳಿದ್ದಾರೆ. ಅವರು ನನಗೆ ಮಹತ್ವದ ಪಾತ್ರವನ್ನು ನೀಡುವುದಾಗಿ ತಿಳಿಸಿದರು. ತಮ್ಮ ಸಂಸ್ಥೆಗೆ ಪರಿಚಯಸ್ಥರ ಮೂಲಕ 5 ಕೋಟಿ ರೂ.ಗಳನ್ನು ಹೂಡಿಕೆ ಮಾಡಿದರೆ ಖ್ಯಾತಿ ಮತ್ತು ಲಾಭದ…

Read More

ಉತ್ತರ ಪ್ರದೇಶ: ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಬಿಜೆಪಿ ರಾಜ್ಯಾಧ್ಯಕ್ಷರಾಗಲಿ ಅಂತ ಕುಂಭಮೇಳದಲ್ಲಿ ಪೋಟೋ ಹಿಡಿದು ಪುಣ್ಯಸ್ನಾನ ಮಾಡಿ ಪೂಜೆಯನ್ನು ಅಭಿಮಾನಿಗಳು ಮಾಡಿದಂತ ಘಟನೆ ನಡೆದಿದೆ. ವಿಜಯಪುರದ ಬಿಜೆಪಿ ನಗರ ಮಂಡಲದ ಉಪಾಧ್ಯಕ್ಷರು ಸೇರಿದಂತೆ ಇತರೆ ಬಿಜೆಪಿ ಕಾರ್ಯಕರ್ತರು ಪ್ರಯಾಗ್ ರಾಜ್ ನಲ್ಲಿ ನಡೆಯುತ್ತಿರುವಂತ ಮಹಾ ಕುಂಭಮೇಳಕ್ಕೆ ತೆರಳಿದ್ದಾರೆ. ಮಹಾಕುಂಭಮೇಳದ ಗಂಗಾನದಿಯಲ್ಲಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರ ಪೋಟೋ ಹಿಡಿದು ಪುಣ್ಯಸ್ನಾನ ಮಾಡಿದ್ದಾರೆ. ಅಲ್ಲದೇ ಶಾಸಕ ಯತ್ನಾಳ್ ಬಿಜೆಪಿ ರಾಜ್ಯಾಧ್ಯಕ್ಷರಾಗಲಿ ಅಂತ ಗಂಗಾನದಿಯಲ್ಲಿ ಘೋಷಣೆ ಕೂಗುತ್ತಲೇ ಪೂಜೆ ಸಲ್ಲಿಸಿದ್ದಾರೆ. https://kannadanewsnow.com/kannada/bengaluru-couple-killed-on-the-spot-as-concrete-mixer-lorry-collides-with-truck/ https://kannadanewsnow.com/kannada/union-minister-priyank-kharge-urges-society-to-join-hands-with-govt-to-eradicate-bonded-labour/

Read More

ಬೆಂಗಳೂರು: ನಗರದಲ್ಲಿ ಭೀಕರ ಅಪಘಾತವೊಂದು ಸಂಭವಿಸಿದೆ. ಕಾಂಕ್ರಿಟ್ ಮಿಕ್ಸರ್ ಲಾರಿಯೊಂದು ಬೈಕಿಗೆ ಡಿಕ್ಕಿಯಾದ ಪರಿಣಾಮ ಇಬ್ಬರು ದಂಪತಿಗಳು ಸ್ಥಳದಲ್ಲೇ ಸಾವನ್ನಪ್ಪಿರುವಂತ ಘಟನೆ ನಡೆದಿದೆ. ಬೆಂಗಳೂರಿನ ಕೆಂಗೇರಿ ಪೊಲೀಸ್ ಠಾಣೆ ವ್ಯಾಪ್ತಿಯ ಟ್ಯಾನರಿ ರಸ್ತೆಯಲ್ಲಿ ಭೀಕರ ಅಪಘಾತ ಸಂಭವಿಸಿದೆ. ಕಾಂಕ್ರಿಟ್ ಮಿಕ್ಸರ್ ಲಾರಿಯೊಂದು ಬೈಕ್ ಸವಾರರಿಗೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ದಂಪತಿಗಳು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಆಸೀಫ್ ಹಾಗೂ ಶಬಾನ್ ಎಂಬ ದಂಪತಿಗಳೇ ಸಾವನ್ನಪ್ಪಿರುವಂತವರಾಗಿದ್ದಾರೆ. ಕಾಂಕ್ರಿಟ್ ಮಿಕ್ಸರ್ ಲಾರಿ ಡಿಕ್ಕಿಯಾಗಿ ಈ ಅಪಘಾತ ಸಂಭವಿಸಿದೆ. ಸ್ಥಳಕ್ಕೆ ಕೆಂಗೇರಿ ಠಾಣೆಯ ಪೊಲೀಸರು ಭೇಟಿ ನೀಡಿ, ಪರಿಶೀಲಿಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ. https://kannadanewsnow.com/kannada/31-naxals-killed-in-chhattisgarhs-biggest-success-in-countering-red-terrorists/ https://kannadanewsnow.com/kannada/union-minister-priyank-kharge-urges-society-to-join-hands-with-govt-to-eradicate-bonded-labour/

Read More

ಬಿಜಾಪುರ: ಛತ್ತೀಸ್ ಗಢದ ಬಿಜಾಪುರ ಜಿಲ್ಲೆಯಲ್ಲಿ ಭಾನುವಾರ ಭದ್ರತಾ ಪಡೆಗಳು ನಡೆಸಿದ ಎನ್ ಕೌಂಟರ್ ನಲ್ಲಿ 31 ನಕ್ಸಲರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಮುಖಾಮುಖಿಯಲ್ಲಿ ಇಬ್ಬರು ಭದ್ರತಾ ಸಿಬ್ಬಂದಿ ಸಹ ಹುತಾತ್ಮರಾಗಿದ್ದಾರೆ. ಅನೇಕರು ಗಾಯಗೊಂಡಿದ್ದಾರೆ ಎಂದು ಅವರು ಹೇಳಿದರು. ವಿವಿಧ ಭದ್ರತಾ ಪಡೆಗಳ ಸಿಬ್ಬಂದಿಯ ಜಂಟಿ ತಂಡವು ನಕ್ಸಲೀಯ ವಿರೋಧಿ ಕಾರ್ಯಾಚರಣೆಯಲ್ಲಿ ತೊಡಗಿದ್ದಾಗ ಬೆಳಿಗ್ಗೆ ಇಂದ್ರಾವತಿ ರಾಷ್ಟ್ರೀಯ ಉದ್ಯಾನವನ ಪ್ರದೇಶದ ಅರಣ್ಯದಲ್ಲಿ ಗುಂಡಿನ ಚಕಮಕಿ ನಡೆದಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಪ್ರಾಥಮಿಕ ಮಾಹಿತಿಯ ಪ್ರಕಾರ, ಗುಂಡಿನ ಚಕಮಕಿಯಲ್ಲಿ 12 ನಕ್ಸಲರು ಸಾವನ್ನಪ್ಪಿದ್ದಾರೆ. ಅವರೆಲ್ಲರ ಶವಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಅವರು ಹೇಳಿದರು. ಗುಂಡಿನ ಚಕಮಕಿಯಲ್ಲಿ ರಾಜ್ಯ ಪೊಲೀಸ್ನ ಜಿಲ್ಲಾ ರಿಸರ್ವ್ ಗಾರ್ಡ್ಗೆ ಸೇರಿದ ಮತ್ತು ವಿಶೇಷ ಕಾರ್ಯಪಡೆಗೆ ಸೇರಿದ ಇಬ್ಬರು ಭದ್ರತಾ ಸಿಬ್ಬಂದಿ ಸಹ ಹುತಾತ್ಮರಾಗಿದ್ದಾರೆ. ಇತರ ಇಬ್ಬರು ಗಾಯಗೊಂಡಿದ್ದಾರೆ ಎಂದು ಅಧಿಕಾರಿ ತಿಳಿಸಿದ್ದಾರೆ. ಮೃತ ಭದ್ರತಾ ಸಿಬ್ಬಂದಿಯ ಶವಗಳನ್ನು ಹೊರತೆಗೆಯಲು ಮತ್ತು ಗಾಯಗೊಂಡ ಜವಾನರನ್ನು ಸ್ಥಳಾಂತರಿಸಲು ಪ್ರಯತ್ನಗಳು…

Read More

ಬೆಂಗಳೂರು: ಜೀತ ಪದ್ಧತಿ ಒಂದು ಅಮಾನುಷ ಕ್ರಿಯೆಯಾಗಿದ್ದು ಮನುಷ್ಯರು ನಾಚುವಂತಹ ಕೃತ್ಯವಾಗಿದೆ, ಜೀತ ಪದ್ಧತಿ ವಿರುದ್ಧ ಸರ್ಕಾರ ಬಿಗಿಯಾದ ಕ್ರಮಗಳನ್ನು ಕೈಗೊಂಡ ನಂತರ ಇಂತಹ ಪ್ರಕರಣಗಳು ಗಣನೀಯವಾಗಿ ಕಡಿಮೆಯಾಗಿದ್ದರೂ ಸಹ ಈಗಲೂ ಇಂತಹ ಪ್ರಕರಣಗಳು ಅಪರೂಪಕ್ಕೆ ನಡೆಯುತ್ತಿವೆ, ಸಂವಿಧಾನದ ಆಶಯಗಳಂತೆ ರಾಷ್ಟ್ರದ ಯಾವುದೇ ವ್ಯಕ್ತಿ ಸ್ವತಂತ್ರವಾಗಿ ಹಾಗೂ ಗೌರವಯುತವಾಗಿ ಬದುಕುವ ಹಕ್ಕನ್ನು ಪಡೆದಿರುತ್ತಾನೆ, ಜೀತ ಪದ್ಧತಿ ಆಚರಣೆ ಒಂದು ಶಿಕ್ಷಾರ್ಹ ಅಪರಾಧವಾಗಿದ್ದು, ಇಂತಹ ಅಮಾನವೀಯತೆಗೆ ಯಾವುದೇ ಅಸಹಾಯಕ ಸಿಲುಕದೇ ಇರುವಂತಹ ವಾತಾವರಣ ಸೃಷ್ಟಿಸಲು ಸರ್ಕಾರದ ಜೊತೆ ಸಮಾಜವೂ ಕೈಜೋಡಿಸಬೇಕಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ. ಕರ್ನಾಟಕ ರಾಜ್ಯದಲ್ಲಿ ಜೀತ ಪದ್ಧತಿ ನಿರ್ಮೂಲನಾ ದಿನವನ್ನು ಇಂದು ಆಚರಿಸುತ್ತಿರುವ ಹಿನ್ನಲೆಯಲ್ಲಿ ನೀಡಿರುವ ಸಂದೇಶದಲ್ಲಿ ಜಿಲ್ಲಾ, ತಾಲ್ಲೂಕು, ಗ್ರಾಮ ಪಂಚಾಯಿತಿ ಹಾಗೂ ಗ್ರಾಮ ಮಟ್ಟದಲ್ಲಿ ಸಾರ್ವಜನಿಕ ಅರಿವು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಮೂಲಕ ಜೀತ ಪದ್ದತಿಯನ್ನು ಸಂಪೂರ್ಣವಾಗಿ ತೊಡೆದು ಹಾಕಬೇಕೆಂದು ಕೋರಿದ್ದಾರೆ. ಜೀತ ಪದ್ಧತಿ ರದ್ಧತಿ ಕಾಯ್ದೆಯನ್ನು…

Read More

ಛತ್ತೀಸ್ ಗಢ: ಇಲ್ಲಿನ ಬಿಜಾಪುರ ಜಿಲ್ಲೆಯಲ್ಲಿ ಭದ್ರತಾ ಪಡೆಗಳು ಹಾಗೂ ಮಾವೋವಾದಿ ನಕ್ಸಲರ ನಡುವೆ ನಡೆದಂತ ಗುಂಡಿನ ದಾಳಿಯಲ್ಲಿ 31 ಮಾವೋವಾದಿ ಸಂಘಟನೆಯ ನಕ್ಸಲರು ಹತ್ಯೆ ಮಾಡಲಾಗಿದೆ. ಛತ್ತೀಸ್ ಗಢದ ಬಿಜಾಪುರ ಜಿಲ್ಲೆಯಲ್ಲಿ ಮಾವೋವಾದಿಗಳ ನಿಯಂತ್ರ ಸಂಬಂಧ ಗುಂಡಿನ ಚಕಮಕಿ ಮುಂದುವರೆದಿದೆ. ನಕ್ಸಲ ಜೊತೆಗಿನ ಗುಂಡಿನ ದಾಳಿಯಲ್ಲಿ ಇಬ್ಬರು ಯೋಧರು ಹುತಾತ್ಮರಾಗಿದ್ದಾರೆ. ಅಲ್ಲದೇ ಭದ್ರತಾ ಪಡೆಗಳ ಎನ್ ಕೌಂಟರ್ ಗೆ 31 ಮಾವೋವಾದಿ ಸಂಘಟನೆಯ ನಕ್ಸಲರು ಬಲಿಯಾಗಿದ್ದಾರೆ. https://kannadanewsnow.com/kannada/breaking-three-persons-including-notorious-rowdysheeter-scientist-manjya-arrested-in-hubballi/

Read More

ಬೆಂಗಳೂರು: ರಾಜ್ಯದಲ್ಲಿ ಬಿಜೆಪಿಯಲ್ಲಿನ ಗುದ್ದಾಟ ಮುಂದುವರೆದಿದೆ. ಬಿಜೆಪಿ ರಾಜ್ಯಾಧ್ಯಕ್ಷರ ವಿರುದ್ಧ ಶಾಸಕ ಬಸನಗೌಡ ಯತ್ನಾಳ್ ಬಹಿರಂಗವಾಗಿಯೇ ವಾಕ್ ಸಮರ ನಡೆಸುತ್ತಿದ್ದಾರೆ. ಇದರ ನಡುವೆ ಬಿಜೆಪಿ ಹೈಕಮಾಂಡ್ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಅವರಿಗೆ ಬುಲಾವ್ ನೀಡಿದೆ. ಈ ಹಿನ್ನಲೆಯಲ್ಲಿ ತಮ್ಮ ಪ್ರವಾಸ ರದ್ದುಗೊಳಿಸಿ ದೆಹಲಿಗೆ ತೆರಳುತ್ತಿದ್ದಾರೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲದ ರಾಜನಹಳ್ಳಿಯಲ್ಲಿ ನಡೆಯುತ್ತಿದ್ದಂತ ವಾಲ್ಮೀಕಿ ಕಾರ್ಯಕ್ರಮವೊಂದಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ತೆರಳುತ್ತಿದ್ದರು. ಈ ವೇಳೆಯಲ್ಲೇ ದೆಹಲಿಗೆ ಬರುವಂತೆ ಬುಲಾವ್ ನೀಡಿದ್ದರು. ಈ ಹಿನ್ನಲೆಯಲ್ಲಿ ನೆಲಮಂಗಲದಿಂದ ವಾಪಾಸ್ ಆಗಿದ್ದಾರೆ. ತಮ್ಮ ಕಾರ್ಯಕ್ರಮ ರದ್ದುಗೊಳಿಸಿರುವಂತ ಬಿವೈ ವಿಜಯೇಂದ್ರ ಅವರು, ಬೆಂಗಳೂರಿನಿಂದ ದೆಹಲಿಗೆ ತೆರಳಿದ್ದಾರೆ. ಬಿಜೆಪಿ ಹೈಕಮಾಂಡ್ ಭೇಟಿಯಾಗಲಿರುವಂತ ಅವರು, ರಾಜ್ಯ ರಾಜಕಾರಣದ ಕುರಿತಂತೆ ಚರ್ಚೆ ನಡೆಸುವ ಸಾಧ್ಯತೆ ಇದೆ. https://kannadanewsnow.com/kannada/breaking-three-persons-including-notorious-rowdysheeter-scientist-manjya-arrested-in-hubballi/

Read More