Author: ವಸಂತ ಬಿ ಈಶ್ವರಗೆರೆ

ವಸಂತ ಬಿ ಈಶ್ವರಗೆರೆ (Vasantha B Eshwaragere) ಅವರು ಕರ್ನಾಟಕದ ಪತ್ರಕರ್ತರು ಮತ್ತು ಕವಿ. ಉದಯ ನ್ಯೂಸ್, ಟಿವಿ5 ಕನ್ನಡ ಸೇರಿದಂತೆ ವಿವಿಧ ಸುದ್ದಿ ಮಾಧ್ಯಮಗಳಲ್ಲಿ ಸುಮಾರು 15 ವರ್ಷಗಳ ಅನುಭವವನ್ನು ಹೊಂದಿದ್ದಾರೆ. ಪ್ರಸ್ತುತ ಅವರು Kannada News Now ಡಿಜಿಡಿಲ್‌ ಮಾಧ್ಯಮದಲ್ಲಿ ಸಂಪಾದಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಇವರು ತಾಜಾ ಸುದ್ದಿ, ಸಾಹಿತ್ಯ, ಸಾಮಾಜಿಕ ವರದಿಗಾರಿಕೆ, ನ್ಯಾಯಾಂಗ ಸಂಬಂಧಿತ ವರದಿ ಮತ್ತು ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿದ ಸುದ್ದಿಗಳ ವರದಿಯಲ್ಲಿ ಸಕ್ರಿಯರಾಗಿದ್ದಾರೆ. ಗುಡವಿ ಪಕ್ಷಿಧಾಮದಂತಹ ಪ್ರವಾಸಿ ತಾಣಗಳ ಕುರಿತು ಲೇಖನಗಳನ್ನು ಬರೆದಿದ್ದಾರೆ.

ಬೆಂಗಳೂರು: ರಾಜ್ಯದಲ್ಲಿ ಶಕ್ತಿ ಯೋಜನೆಗೆ ಭರ್ಜರಿ ರೆಸ್ಪಾನ್ ಸಿಕ್ಕಿದೆ. ಈವರೆಗೆ 400 ಕೋಟಿ ಮಹಿಳೆಯರು ಉಚಿತವಾಗಿ ಪ್ರಯಾಣವನ್ನು ಸಾರಿಗೆ ಬಸ್ಸುಗಳಲ್ಲಿ ಬೆಳೆಸಿದ್ದಾರೆ. ಶಕ್ತಿ ಯೋಜನೆ ಜಾರಿಗೊಂಡ ಬಳಿಕ 1,54,955 ಟ್ರಿಪ್ ಗಳ ಪ್ರಮಾಣವು 1,76,787ಕ್ಕೆ ಹೆಚ್ಚಳವಾಗಿದೆ. ಶಕ್ತಿ ಯೋಜನೆ ನಾಡಿನ ಮಹಿಳೆಯರಿಗೆ ಮಾತ್ರವಲ್ಲ ಸಾರಿಗೆ ಸಂಸ್ಥೆಗಳಿಗೂ ವರದಾನವಾಗಿದೆ. ರಾಜ್ಯ ರಸ್ತೆ ಸಾರಿಗೆ ಬಸ್‌ಗಳಲ್ಲಿ ಪ್ರಯಾಣಿಸುವವರ ಸಂಖ್ಯೆ ದುಪ್ಪಟ್ಟಾಗಿದ್ದು, ಈ ಹಿನ್ನೆಲೆ ಹೊಸದಾಗಿ ಬಸ್‌ಗಳನ್ನು ಖರೀದಿಸುವ ಜೊತೆಗೆ ಟ್ರಿಪ್‌ಗಳ ಪ್ರಮಾಣವು ಹೆಚ್ಚಳ ಮಾಡಲಾಗಿದೆ. ಶಕ್ತಿ ಯೋಜನೆ ಜಾರಿಗೆ ಮುನ್ನ ಪ್ರತಿದಿನ ಕಾರ್ಯಾಚರಣೆಗೊಳಿಸುತ್ತಿದ್ದ 1,54,955 ಟ್ರಿಪ್‌ಗಳ ಪ್ರಮಾಣವು 1,76,787 ಕ್ಕೆ ಜಾಸ್ತಿಯಾಗಿದೆ. ಪ್ರತಿದಿನ 21,832 ಹೆಚ್ಚುವರಿ ಟ್ರಿಪ್‌ಗಳ ಕಾರ್ಯಾಚರಣೆಯಾಗುತ್ತಿದೆ. ಈ ಮೂಲಕ ನಾಡಿನ ಮಹಿಳೆಯರಿಗೂ ಅನುಕೂಲವಾಗಿರುವ, ಸಾರಿಗೆ ಸಂಸ್ಥೆಗಳಿಗೂ ಲಾಭ ತಂದುಕೊಡುತ್ತಿರುವ ಶಕ್ತಿ ಯೋಜನೆ ರಾಜ್ಯದಲ್ಲಿ ಸಂಪರ್ಕ ಕ್ರಾಂತಿ ಸೃಷ್ಟಿಸಿದೆ ಅಂತ ಸಿಎಂ ಸಿದ್ಧರಾಮಯ್ಯ ಹೇಳಿದ್ದಾರೆ. https://twitter.com/KarnatakaVarthe/status/1894714829841334728 https://kannadanewsnow.com/kannada/bengaluru-man-attempts-suicide-by-consuming-phenyl-at-police-station/ https://kannadanewsnow.com/kannada/big-news-cm-siddaramaiah-to-launch-3-day-hampi-utsav-from-feb-28/

Read More

ಬೆಂಗಳೂರು: ನಗರದಲ್ಲಿ ಪೊಲೀಸ್ ಠಾಣೆಯಲ್ಲೇ ಆರೋಪಿಯೊಬ್ಬ ಪಿನಾಯಿಲ್ ಕುಡಿದು ಆತ್ಮಹತ್ಯೆಗೆ ಯತ್ನಿಸಿರುವಂತ ಅಚ್ಚರಿಯ ಘಟನೆ ನಡೆದಿದೆ. ಬೆಂಗಳೂರಿನ ಪರಪ್ಪನ ಅಗ್ರಹಾರ ಪೊಲೀಸ್ ಠಾಣೆಯಲ್ಲಿ ಆರೋಪಿಯೊಬ್ಬ ಫಿನಾಯಿಲ್ ಕುಡಿದು ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಆತ್ಮಹತ್ಯೆಗೆ ಯತ್ನಿಸಿದಂತ ಆರೋಪಿಯನ್ನು ರವಿ ಆಲಿಯಾಸ್ ರಾಬಿನ್ ಎಂಬುದಾಗಿ ತಿಳಿದು ಬಂದಿದೆ. ರವಿ ಆಲಿಯಾಸ್ ರಾಬಿನ್ ನನ್ನು ಸರಗಳ್ಳತನ ಪ್ರಕರಣದಲ್ಲಿ ಬೆಂಗಳೂರಿನ ಪರಪ್ಪನ ಅಗ್ರಹಾರ ಠಾಣೆಯ ಪೊಲೀಸರು ಬಂಧಿಸಿದ್ದರು. ಪೊಲೀಸ್ ವಶದಲ್ಲಿದ್ದಂತ ಆತ ನಿನ್ನೆ ರಾತ್ರಿ ಪೊಲೀಸರು ಹೊಡೆಯುತ್ತಾರೆ ಎಂಬ ಭಯಕ್ಕೆ ಠಾಣೆಯ ಬಾತ್ ರೂಮಿನಲ್ಲೇ ಫಿನಾಯಿಲ್ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಇನ್ನೂ ಆತ್ಮಹತ್ಯೆಗೆ ಯತ್ನಿಸಿದಂತ ಆರೋಪಿ ರವಿ ಆಲಿಯಾಸ್ ರಾಬಿನ್ ನನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಈಗ ಪ್ರಾಣಾಪಾಯದಿಂದ ಪಾರಾಗಿರೋದಾಗಿ ತಿಳಿದು ಬಂದಿದೆ. https://kannadanewsnow.com/kannada/good-news-for-job-seekers-state-govt-approves-recruitment-of-9000-posts-in-transport-corporations/ https://kannadanewsnow.com/kannada/big-news-cm-siddaramaiah-to-launch-3-day-hampi-utsav-from-feb-28/

Read More

ಬೆಂಗಳೂರು: ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್ ಎನ್ನುವಂತೆ ರಾಜ್ಯ ಸರ್ಕಾರವು ಸಾರಿಗೆ ಸಂಸ್ಥೆಗಳಲ್ಲಿನ 9,000 ಹುದ್ದೆಗಳ ನೇಮಕಾತಿಗೆ ಅನುಮತಿ ನೀಡಿದೆ. ಈ ಕುರಿತಂತೆ ಸಿಎಂ ಸಿದ್ಧರಾಮಯ್ಯ ಮಾಹಿತಿ ನೀಡಿದ್ದು, ಶಕ್ತಿ ಯೋಜನೆ ಜಾರಿಯ ನಂತರದಿಂದ ಸರ್ಕಾರಿ ಬಸ್‌ಗಳು ಪ್ರಯಾಣಿಕರಿಂದ ತುಂಬಿಹೋಗಿವೆ. ಮಹಿಳೆಯರು ಉದ್ಯೋಗ, ಶಿಕ್ಷಣ ಹಾಗೂ ಪ್ರವಾಸ ಮುಂತಾದ ಕಾರಣಗಳಿಗಾಗಿ ಉಚಿತ ಪ್ರಯಾಣದ ಸೌಲಭ್ಯ ಪಡೆದು ಸಂಚಾರ ನಡೆಸುತ್ತಿದ್ದು, ನಿಜಾರ್ಥದಲ್ಲಿ ಶಕ್ತಿ ನಾಡಿನ ಸಾರಿಗೆ ವ್ಯವಸ್ಥೆಗೆ ಶಕ್ತಿ ತುಂಬಿದೆ ಎಂದಿದ್ದಾರೆ. ಪ್ರಯಾಣಿಕರ ಸಂಖ್ಯೆಯೂ ಹೆಚ್ಚಾಗಿರುವ ಹಿನ್ನೆಲೆ ಹೆಚ್ಚುವರಿ ಬಸ್‌ಗಳನ್ನು ಖರೀದಿಸಲಾಗಿದೆ. ಈ ಮೂಲಕ ಉದ್ಯೋಗ ಸೃಷ್ಟಿಯು ಹೆಚ್ಚಾಗಿದೆ. ಈಗಾಗಲೇ ಸಾರಿಗೆ ಸಂಸ್ಥೆಗಳಲ್ಲಿನ 9,000 ಹುದ್ದೆಗಳ ನೇಮಕಾತಿಗೆ ಅನುಮತಿ ನೀಡುವುದರ ಜೊತೆಗೆ 2,000 ಚಾಲಕ ಕಂ ನಿರ್ವಾಹಕರು ಹಾಗೂ 300 ತಾಂತ್ರಿಕ ಸಿಬ್ಬಂದಿಗಳ ನೇಮಕಾತಿಗೆ ಆದೇಶಿಸಲಾಗಿದೆ ಎಂದು ತಿಳಿಸಿದ್ದಾರೆ. https://twitter.com/KarnatakaVarthe/status/1894718627519344691 https://kannadanewsnow.com/kannada/it-will-be-mandatory-for-schools-colleges-and-government-offices-in-the-state-to-do-so-on-february-28-state-govt/ https://kannadanewsnow.com/kannada/big-news-cm-siddaramaiah-to-launch-3-day-hampi-utsav-from-feb-28/

Read More

ಬೆಂಗಳೂರು: ಫೆಬ್ರವರಿ 28ರಂದು ರಾಜ್ಯದ ಎಲ್ಲಾ ಶಾಲಾ-ಕಾಲೇಜು, ಸರ್ಕಾರಿ ಕಚೇರಿಗಳಲ್ಲಿ ರಾಷ್ಟ್ರೀಯ ವಿಜ್ಞಾನ ದಿನದ ಪ್ರಯುಕ್ತ ಪ್ರತಿಜ್ಞಾ ವಿಧಿ ಸ್ವೀಕಾರ ಕಡ್ಡಾಯಗೊಳಿಸಿ ಸರ್ಕಾರ ಆದೇಶಿಸಿದೆ. ಶಾಂತಿ ಹಾಗೂ ಸಹೋದರತ್ವವನ್ನು ಸಮಾಜದಲ್ಲಿ ಸಾರುವ ಹಿನ್ನೆಲೆಯಲ್ಲಿ ವೈಜ್ಞಾನಿಕ ಮನೋಭಾವನೆಯನ್ನು ನಾಗರಿಕರಲ್ಲಿ ಬೆಳೆಸುವುದು ಪ್ರಸ್ತುತ ಕಾಲಘಟ್ಟದಲ್ಲಿ ಅವಶ್ಯವಾಗಿದ್ದು, ವೈಜ್ಞಾನಿಕ ಮತ್ತು ವೈಚಾರಿಕ ಮನೋಭಾವನೆಯನ್ನು ಬೆಳೆಸಿಕೊಳ್ಳುವುದು ನಮ್ಮ ಭಾರತ ಸಂವಿಧಾನದ ಮೂಲಭೂತ ಕರ್ತವ್ಯಗಳಲ್ಲಿ ಒಂದಾಗಿದೆ ಎಂದಿದೆ. ಈ ನಿಟ್ಟಿನಲ್ಲಿ ಫೆಬ್ರವರಿ 28 ರಂದು ರಾಷ್ಟ್ರೀಯ ವಿಜ್ಞಾನ ದಿನಾಚರಣೆಯ ಸಂದರ್ಭದಲ್ಲಿ ರಾಜ್ಯದ ಎಲ್ಲಾ ಶಾಲಾ-ಕಾಲೇಜುಗಳು ಹಾಗೂ ಸರ್ಕಾರಿ ಕಚೇರಿಗಳಲ್ಲಿ ಏಕಕಾಲದಲ್ಲಿ ವೈಜ್ಞಾನಿಕ ಮನೋಭಾವನೆ ಹಾಗೂ ಮಾನವೀಯ ಮೌಲ್ಯಗಳನ್ನು ಮೈಗೂಡಿಸಿಕೊಳ್ಳುವಂತೆ ಪ್ರತಿಜ್ಞಾವಿಧಿ ಸ್ವೀಕರಿಸಿ, ಮೂಲಭೂತ ಕರ್ತವ್ಯಗಳನ್ನು ಪಾಲಿಸುವ ಮೂಲಕ ರಾಷ್ಟ್ರೀಯ ವಿಜ್ಞಾನ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಲು ನಿರ್ಧರಿಸಲಾಗಿದೆ. ಆದ್ದರಿಂದ ಎಲ್ಲಾ ಶಾಲಾ-ಕಾಲೇಜು ಹಾಗೂ ಸರ್ಕಾರಿ ಕಚೇರಿಗಳಲ್ಲಿ ಈ ಪ್ರತಿಜ್ಞಾ ವಿಧಿ ಸ್ವೀಕರಿಸಲು ಕ್ರಮವಹಿಸುವಂತೆ ಈ ಮೂಲಕ ಕೋರಲಾಗಿದೆ. ಪ್ರತಿಜ್ಞಾ ವಿಧಿಯನ್ನು ದಿನಾಂಕ: 28.02.2025, ಶುಕ್ರವಾರದಂದು ಪೂರ್ವಾಹ್ನ 10.30 ಕ್ಕೆ ರಾಜಾದ್ಯಂತ…

Read More

ಬೆಂಗಳೂರು: “ನಾನು ಹುಟ್ಟುತ್ತಲೇ ಕಾಂಗ್ರೆಸಿಗ. ನನ್ನ ವೈಯಕ್ತಿಕ ನಂಬಿಕೆ, ನಾನು ಪಾಲಿಸುತ್ತೇನೆ. ಇದಕ್ಕೆ ನಾನು ಬಿಜೆಪಿಗೆ ಹತ್ತಿರವಾಗುತ್ತಿದ್ದೇನೆ ಎಂದು ಅಪಪ್ರಚಾರ ಮಾಡಲಾಗುತ್ತಿದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ಸದಾಶಿವನಗರ ನಿವಾಸದಲ್ಲಿ ಮಾಧ್ಯಮಗೋಷ್ಠಿ ಉದ್ದೇಶಿಸಿ ಶಿವಕುಮಾರ್ ಅವರು ಬುಧವಾರ ಮಾತನಾಡಿದರು. ಕೆ.ಸಿ ವೇಣುಗೋಪಾಲ್ ಅವರನ್ನು ಭೇಟಿ ಮಾಡಿ ಕೆಪಿಸಿಸಿ ಅಧ್ಯಕ್ಷರಾಗಿ ನೀವೇ ಮುಂದುವರಿಯಬೇಕು ಎಂದು ಮನವಿ ಮಾಡಿರುವ ಬಗ್ಗೆ ಮಾಧ್ಯಮಗಳಲ್ಲಿ ವರದಿಯಾಗಿದೆ ಎಂದು ಕೇಳಿದಾಗ, “ಇದು ಸುಳ್ಳು. ಇದೆಲ್ಲವೂ ಸೃಷ್ಟಿ ಮಾಡಲಾಗಿರುವ ಸುದ್ದಿ. ಇನ್ನು ಅನೇಕ ವಿಚಾರಗಳಲ್ಲಿ ಸುದ್ದಿಗಳನ್ನು ಸೃಷ್ಟಿ ಮಾಡಲಾಗುತ್ತಿದೆ. ಸದ್ಗುರು ಅವರು ನನ್ನ ಮನೆಗೆ ಬಂದು ಇಶಾ ಫೌಂಡೇಶನ್ ಕಾರ್ಯಕ್ರಮಕ್ಕೆ ನನಗೆ ಆಹ್ವಾನ ನೀಡಿದರು. ಅವರು ನಮ್ಮ ಮೈಸೂರಿನವರು. ಅವರ ಜ್ಞಾನವನ್ನು ನಾನು ಮೆಚ್ಚುತ್ತೇನೆ. ಕಳೆದ ವರ್ಷ ನನ್ನ ಮಗಳು ಆ ಕಾರ್ಯಕ್ರಮಕ್ಕೆ ಹೋಗಿದ್ದಳು. ಈ ಬಾರಿ ಅವರು ನಮ್ಮ ಮನೆಗೆ ಬಂದು ನನ್ನ ಹಾಗೂ ನನ್ನ ಕುಟುಂಬಕ್ಕೆ ಆಹ್ವಾನ ನೀಡಿದ್ದಾರೆ. ಈಗ ಆ ಕಾರ್ಯಕ್ರಮದಲ್ಲಿ ಭಾಗವಹಿಸಲು ಹೋಗುತ್ತಿದ್ದೇನೆ. ಇಷ್ಟಕ್ಕೆ…

Read More

ಬೆಂಗಳೂರು: ರಾಜ್ಯದ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರಿಗೆ ಡಿಸಿಎಂ ಡಿ.ಕೆ ಶಿವಕುಮಾರ್ ಗುಡ್ ನ್ಯೂಸ್ ನೀಡಿದ್ದಾರೆ. ಅದೇ ನಿಗಮ ಮಂಡಳಿ ನೇಮಕದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಿಗೆ ಆದ್ಯತೆ ನೀಡುವುದಾಗಿ ತಿಳಿಸಿದ್ದಾರೆ. ನಿಗಮ ಮಂಡಳಿ ನೇಮಕದಲ್ಲಿ ಪಟ್ಟಿ ಬಿಡುಗಡೆಯಾಗಿಲ್ಲ ಎಂದು ಕೇಳಿದಾಗ, “ನಾನು ಪಟ್ಟಿ ತರಿಸಿಕೊಂಡಿದ್ದು, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಿಗೆ ಆದ್ಯತೆ ನೀಡಬೇಕು ಎಂಬ ಉದ್ದೇಶ ನನ್ನದು. ಬ್ಲಾಕ್ ಅಧ್ಯಕ್ಷರು ಹಾಗೂ ಜಿಲ್ಲಾಧ್ಯಕ್ಷರುಗಳಿಗೆ ಸ್ಥಾನಮಾನ ನೀಡಬೇಕು ಎಂದು ಎಲ್ಲಾ ಶಾಸಕರಿಗೆ ಹೇಳಿದ್ದೇನೆ ಎಂದು ತಿಳಿಸಿದ್ದಾರೆ. ಮುಖ್ಯಮಂತ್ರಿಗಳು ಬಜೆಟ್ ತಯಾರಿಯಲ್ಲಿ ನಿರತರಾಗಿದ್ದು, ನನ್ನ ಹಾಗೂ ಸಣ್ಣ ನೀರಾವರಿ ಇಲಾಖೆ ಜತೆ ಸಭೆ ಮಾತ್ರ ಬಾಕಿ ಇದೆ. ನಮ್ಮ ಅಧಿಕಾರಿಗಳು ದೆಹಲಿಯಲ್ಲಿದ್ದ ಕಾರಣ ಸಭೆ ಮಾಡಲು ಆಗಿರಲಿಲ್ಲ ಎಂದು ತಿಳಿಸಿದರು. https://kannadanewsnow.com/kannada/big-news-cm-siddaramaiah-to-launch-3-day-hampi-utsav-from-feb-28/ https://kannadanewsnow.com/kannada/breaking-another-fire-breaks-out-in-mysuru-12-boilers-gutted-in-fire/

Read More

ಬೆಂಗಳೂರು: 2013ರಲ್ಲಿ ನಾನು ಪ್ರಚಾರ ಸಮಿತಿ ಅಧ್ಯಕ್ಷನಾಗಿದ್ದೆ ಕಳೆದ ಚುನಾವಣೆಯಲ್ಲಿ ಪಕ್ಷದ ಅದ್ಯಕ್ಷನಾಗಿದ್ದೆ. ಈಗ ಡಿಸಿಎಂ ಆಗಿದ್ದೇನೆ. ನನಗಿರುವ ಸಾಮರ್ಥ್ಯ, ಅನುಭವ ಬಳಸಿಕೊಳ್ಳಬೇಕು. ಸಿದ್ದರಾಮಯ್ಯ ಅವರು ಕೂಡ ಪಕ್ಷವನ್ನು ಮುನ್ನಡೆಸಲಿದ್ದಾರೆ. ಅವರು ಎರಡು ಅವಧಿಗೆ ವಿರೋಧ ಪಕ್ಷದ ನಾಯಕರಾಗಿ, ಎರಡು ಅವಧಿಗೆ ಸಿಎಂ ಆಗಿದ್ದಾರೆ. ಸಾಮೂಹಿಕ ನಾಯಕತ್ವದಲ್ಲಿ ನಾವು ಮುಂದೆ ಸಾಗುತ್ತೇವೆ ಎಂದು ಡಿಸಿಎಂ ಡಿ.ಕೆ ಶಿವಕುಮಾರ್ ತಿಳಿಸಿದ್ದಾರೆ. ನಿಮ್ಮ ನಾಯಕತ್ವದಲ್ಲಿ ಮುಂದಿನ ಚುನಾವಣೆ ಎಂಬ ಹೇಳಿಕೆ ನಂತರ ಚರ್ಚೆ ಹೆಚ್ಚಾಗಿದೆ ಎಂದು ಕೇಳಿದಾಗ, “ಪಕ್ಷ ನನ್ನನ್ನು 90ರ ದಶಕದಿಂದಲೇ ಮಂತ್ರಿ ಮಾಡಿ ಬೆಳೆಸಿದೆ. ಐದು ವರ್ಷ ನನ್ನನ್ನು ಪಕ್ಷ ಅಧ್ಯಕ್ಷನನ್ನಾಗಿ ಮಾಡಿ, ಈಗ ಡಿಸಿಎಂ ಹುದ್ದೆ ನೀಡಿದೆ. ಇಷ್ಟಾದ ಮೇಲೆ ನಾನು ನನ್ನ ಮುಖ ತೋರಿಸಿ ಕಾಂಗ್ರೆಸ್ ಪಕ್ಷಕ್ಕೆ ಕೆಲಸ ಮಾಡದಿದ್ದರೆ ನನ್ನ ನಾಯಕತ್ವ ನೀಡದಿದ್ದರೆ ಹೇಗೆ? ನಾನು ಮನೆಯಲ್ಲಿ ಕೂರಲು ಕಾಂಗ್ರೆಸ್ ಪಕ್ಷ ನನಗೆ ಇಷ್ಟು ಶಕ್ತಿ ನಿಡಿದೆಯೇ? ನಾನು ಯಾವುದೇ ಹುದ್ದೆಯಲ್ಲಿದ್ದರೂ ನಾನು ಪಕ್ಷ ಮುನ್ನಡೆಸಬೇಕು. ಕೇರಳ,…

Read More

ಬೆಂಗಳೂರು: ನೀವು ಮಹಾಕುಂಭಮೇಳದಲ್ಲಿ ಭಾಗವಹಿಸಿದ್ದು, ಈಗ ಇಶಾ ಫೌಂಡೇಶನ್ ಕಾರ್ಯಕ್ರಮಗಳಲ್ಲಿ ಭಾಗವಹಿಸುತ್ತಿರುವುದರಿಂದ ಇಂತಹ ಚರ್ಚೆಯಾಗುತ್ತಿದೆ ಎಂದು ಕೇಳಿದಾಗ, “ನಾನು ಜನ್ಮತಃ ಹಿಂದು. ಹಿಂದೂವಾಗಿಯೇ ಸಾಯುತ್ತೇನೆ. ನಾನು ಎಲ್ಲಾ ಧರ್ಮಗಳನ್ನು ಪ್ರೀತಿಸುತ್ತೇನೆ, ಗೌರವಿಸುತ್ತೇನೆ. ನಾನು ಜೈಲಲ್ಲಿ ಇದ್ದಾಗ ಸಿಖ್ ಧರ್ಮದ ಬಗ್ಗೆ ಕಲಿತೆ. ಜೈನರ ಮಠದ ಕಾರ್ಯಕ್ರಮಕ್ಕೆ ಹೋಗಿದ್ದೆ. ಎಲ್ಲಾ ಧರ್ಮದವರು ನನಗೆ ಆಶೀರ್ವಾದ ಮಾಡುತ್ತಾರೆ. ನಾನು ದರ್ಗಾ, ಚರ್ಚ್ ಗೆ ಹೋಗುತ್ತೇನೆ. ಎಲ್ಲಾ ಸಮುದಾಯಗಳು ನನ್ನನ್ನು ಪ್ರೀತಿಸುತ್ತವೆ ಎಂದು ಡಿಸಿಎಂ ಡಿ.ಕೆ ಶಿವಕುಮಾರ್ ತಿಳಿಸಿದರು. ಮಹಾಕುಂಭ ಮೇಳದಲ್ಲಿ ನಿಮ್ಮ ಅನುಭವ ಹೇಗಿತ್ತು ಎಂದು ಕೇಳಿದಾಗ, “ನನ್ನ ಅನುಭವ ಅತ್ಯುತ್ತಮವಾಗಿತ್ತು. ಮಹಾಕುಂಭಮೇಳದ ಆಯೋಜನೆಯನ್ನು ನಾನು ಸ್ವಾಗತಿಸುತ್ತೇನೆ. ಇದು ಸಾಮಾನ್ಯದ ಕೆಲಸವಲ್ಲ. ಇಷ್ಟು ದೊಡ್ಡ ಪ್ರಮಾಣದಲ್ಲಿ ಜನರನ್ನು ನಿಭಾಯಿಸುವುದು ಸುಲಭವಲ್ಲ. ಒಂದೆರಡು ಸಣ್ಣಪುಟ್ಟ ತೊಂದರೆಗಳು ಆಗಿರಬಹುದು. ತಪ್ಪು ಹುಡುಕಲು ಹೋಗುವುದಿಲ್ಲ. ಧರ್ಮದಲ್ಲಿ ಭಕ್ತ ಹಾಗೂ ಭಗವಂತನ ನಡುವೆ ಸಂಬಂಧವಿರುತ್ತದೆ. ಕೆಲವರು ದೇವರ ಜತೆ ನೇರವಾಗಿ ವ್ಯವಹಾರ ನಡೆಸಿದರೆ ಮತ್ತೆ ಕೆಲವರು ಅರ್ಚಕರ ಮೂಲಕ ವ್ಯವಹಾರ ಮಾಡುತ್ತಾರೆ”…

Read More

ಬೆಂಗಳೂರು: ರಾಜ್ಯ ಸರ್ಕಾರದಿಂದ ಶಕ್ತಿ ಯೋಜನೆಯ ಫಲಾನುಭವಿ ಮಹಿಳೆಯರಿಗೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಗುಡ್ ನ್ಯೂಸ್ ನೀಡಿದ್ದಾರೆ. ಅದೇ ಹೊಸದಾಗಿ 5,800 ಬಸ್ ಸೇರ್ಪಡೆಗೆ ಅನುಮೋದನೆ ನೀಡಲಾಗಿದೆ ಅಂತ ತಿಳಿಸಿದ್ದಾರೆ. ಈ ಬಗ್ಗೆ ಎಕ್ಸ್ ನಲ್ಲಿ ಪೋಸ್ಟ್ ಮಾಡಿ ಮಾಹಿತಿ ಹಂಚಿಕೊಂಡಿರುವಂತ ಅವರು, ಶಕ್ತಿ ಯೋಜನೆಯಿಂದ ರಾಜ್ಯ ರಸ್ತೆ ಸಾರಿಗೆ ನಿಗಮದ ಬಸ್‌ಗಳಲ್ಲಿ ಪ್ರಯಾಣಿಸುವವರ ಸಂಖ್ಯೆ ಹೆಚ್ಚಾಗಿದೆ. ಹೀಗಾಗಿ ಪ್ರಯಾಣಿಕರಿಗೆ ಉತ್ತಮ ಸೇವೆ ಒದಗಿಸಲು ಬಸ್‌ಗಳ ಸಂಖ್ಯೆಯನ್ನು ಹೆಚ್ಚಿಸಲು ಕ್ರಮ ಕೈಗೊಂಡಿದ್ದೇವೆ ಎಂದಿದ್ದಾರೆ. ಹೊಸದಾಗಿ 5,800 ಬಸ್‌ಗಳ ಸೇರ್ಪಡೆಗೆ ಅನುಮೋದನೆ ನೀಡಲಾಗಿದ್ದು, ಈವರೆಗೆ 4,891 ಹೊಸ ಬಸ್‌ಗಳನ್ನು ಖರೀದಿಸಲಾಗಿದೆ. ಈ ಮೂಲಕ ನಿಮ್ಮ ಪ್ರಯಾಣವನ್ನು ಇನ್ನಷ್ಟು ಸುಖಕರ ಮತ್ತು ಆರಾಮದಾಯಕವಾಗಿಸಲು ನಮ್ಮ ಸರ್ಕಾರ ಬದ್ಧವಾಗಿದೆ ಎಂಬುದಾಗಿ ಸಿಎಂ ಸಿದ್ಧರಾಮಯ್ಯ ತಿಳಿಸಿದ್ದಾರೆ. https://twitter.com/KarnatakaVarthe/status/1894710165041271029 https://kannadanewsnow.com/kannada/it-is-difficult-to-impose-life-ban-on-convicted-mlas-centre-to-sc/ https://kannadanewsnow.com/kannada/breaking-another-fire-breaks-out-in-mysuru-12-boilers-gutted-in-fire/

Read More

ನವದೆಹಲಿ: ಶಿಕ್ಷೆಗೊಳಗಾದ ಶಾಸಕರು ಚುನಾವಣೆಯಲ್ಲಿ ಸ್ಪರ್ಧಿಸದಂತೆ ಆಜೀವ ನಿಷೇಧ ಹೇರುವಂತೆ ಕೋರಿ ಸಲ್ಲಿಸಲಾಗಿದ್ದ ಅರ್ಜಿಯನ್ನು ಕೇಂದ್ರ ಸರ್ಕಾರ ವಿರೋಧಿಸಿದ್ದು, ಜೈಲು ಶಿಕ್ಷೆ ಅನುಭವಿಸಿದ ನಂತರ ಪ್ರಸ್ತುತ ಆರು ವರ್ಷಗಳ ಅವಧಿಯನ್ನು ಮೀರಿ ವಿಸ್ತರಿಸುವ ಇಂತಹ ಅನರ್ಹತೆಯು ಅನಗತ್ಯವಾಗಿ ಕಠಿಣವಾಗಿರುತ್ತದೆ ಎಂದು ಸುಪ್ರೀಂ ಕೋರ್ಟ್ ಮುಂದೆ ವಾದಿಸಿದೆ. 1951ರ ಜನ ಪ್ರಾತಿನಿಧ್ಯ ಕಾಯ್ದೆಯ ವಿವಾದಾತ್ಮಕ ನಿಬಂಧನೆಗಳು ಅನುಪಾತ ಮತ್ತು ತರ್ಕಬದ್ಧತೆಯ ತತ್ವಗಳನ್ನು ಆಧರಿಸಿವೆ ಎಂದು ಕೇಂದ್ರವು ಸುಪ್ರೀಂ ಕೋರ್ಟ್ಗೆ ಸಲ್ಲಿಸಿದ ಅಫಿಡವಿಟ್ನಲ್ಲಿ ತಿಳಿಸಿದೆ. ಸಂಸತ್ತು ಏಕೈಕ ಕಾನೂನು ರೂಪಿಸುವ ಸಂಸ್ಥೆಯಾಗಿ, ಶಿಕ್ಷೆಗೊಳಗಾದ ಶಾಸಕರಿಗೆ ಅನರ್ಹತೆ ಅಥವಾ ದಂಡದ ಅವಧಿಯನ್ನು ನಿರ್ಧರಿಸುವ ವಿವೇಚನೆಯನ್ನು ಹೊಂದಿದೆ ಎಂದು ಅದು ಹೇಳಿದೆ. “ಆಜೀವ ನಿಷೇಧವು ಸೂಕ್ತವಾಗಿದೆಯೇ ಅಥವಾ ಇಲ್ಲವೇ ಎಂಬ ಪ್ರಶ್ನೆಯು ಸಂಸತ್ತಿನ ವ್ಯಾಪ್ತಿಯಲ್ಲಿದೆ” ಎಂದು ಅಫಿಡವಿಟ್ ಹೇಳಿದೆ. “ಸೂಕ್ತ ಸಮಯದವರೆಗೆ ದಂಡದ ಕಾರ್ಯಾಚರಣೆ, ಪ್ರತಿರೋಧವನ್ನು ಖಚಿತಪಡಿಸಲಾಯಿತು ಮತ್ತು ಅನಗತ್ಯ ಕಠಿಣತೆಯನ್ನು ತಪ್ಪಿಸಲಾಗಿದೆ ಎಂದಿದೆ. ದಂಡದ ಪರಿಣಾಮವನ್ನು ಕಾಲದಿಂದ ಮಿತಿಗೊಳಿಸುವುದರಲ್ಲಿ ಅಂತರ್ಗತವಾಗಿ ಅಸಂವಿಧಾನಿಕವಾದುದು ಏನೂ ಇಲ್ಲ. ದಂಡಗಳನ್ನು…

Read More