Author: kannadanewsnow09

ಬೆಂಗಳೂರು: ಖರ್ಗೆಯವರಿಗೆ ಖೆಡ್ಡಾ ತೋಡಿದ್ದ ಕಾಂಗ್ರೆಸ್ ಹೈಕಮಾಂಡ್ (ಎಐಸಿಸಿ) ಈಗ ಸಿದ್ದರಾಮಯ್ಯನವರಿಗೆ ಖೆಡ್ಡಾ ತೋಡುತ್ತಿದೆ ಎಂಬುದಾಗಿ ಜನರು ಮಾತನಾಡುತ್ತಿದ್ದಾರೆ ಎಂದು ರಾಜ್ಯ ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ತಿಳಿಸಿದ್ದಾರೆ. ಬಿಜೆಪಿ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಪ್ರಶ್ನೆಗೆ ಉತ್ತರಿಸಿದರು. ಸಿದ್ದರಾಮಯ್ಯರನ್ನು ಮುಖ್ಯಮಂತ್ರಿ ಹುದ್ದೆಯಿಂದ ಪದಚ್ಯುತಗೊಳಿಸಲು ಕಾಂಗ್ರೆಸ್ ಹೈಕಮಾಂಡ್ ತಂತ್ರ- ಮಂತ್ರಗಳನ್ನು ಮಾಡುತ್ತಿದೆ ಎಂದು ಜನರೂ ಮಾತನಾಡುತ್ತಿದ್ದಾರೆ. ಇದು ಕಾಂಗ್ರೆಸ್ ಪಕ್ಷಕ್ಕೆ ಹೊಸದೇನೂ ಅಲ್ಲ ಎಂದು ನುಡಿದರು. ಮೊದಲು ಖೆಡ್ಡಾ ತೋಡಿ ದೆಹಲಿಗೆ ಕರೆದುಕೊಂಡು ಖರ್ಗೆಯವರನ್ನು ಈಗಾಗಲೇ ಮುಗಿಸಿದ್ದಾರೆ. ಅವರನ್ನು ನಾಮಕಾವಾಸ್ತೆ ಅಧ್ಯಕ್ಷರನ್ನಾಗಿ ಮಾಡಿ ಕೂರಿಸಿದ್ದಾರೆ ಎಂದು ವ್ಯಂಗ್ಯವಾಡಿದರು. ಅವರೇ ಹೈಕಮಾಂಡ್ ಆಗಿದ್ದರೂ ಮಾತೆತ್ತಿದರೆ ಇನ್ನೊಂದು ಹೈಕಮಾಂಡ್ ಬಗ್ಗೆ ಮಾತನಾಡುತ್ತಾರೆ. ಈಗ ಸಿದ್ದರಾಮಯ್ಯನವರಿಗೆ ಖೆಡ್ಡಾ ತೋಡಿದ್ದಾರೆ ಎಂದು ವಿವರಿಸಿದರು. ಎಐಸಿಸಿ ಖೆಡ್ಡಾ ತೋಡಿದ್ದು, ಸಿದ್ದರಾಮಯ್ಯನವರಿಗೆ ಅರ್ಥ ಆದಂತಿದೆ ಎಂದರು. ರಾಜ್ಯದ ಕಾಂಗ್ರೆಸ್ ಸರಕಾರವು ದಲಿತ ವಿರೋಧಿಯಾಗಿದ್ದು, ದಲಿತರನ್ನು ಸರ್ವನಾಶ ಮಾಡುತ್ತಿದೆ ಎಂದು ನಾವು ಹೇಳಿದ್ದೆವು.…

Read More

ಹೈದರಾಬಾದ್: ಡೆಕ್ಕನ್ ಕ್ರಾನಿಕಲ್ ಪ್ರಕಾರ, ಜಾರಿ ನಿರ್ದೇಶನಾಲಯ (ED) ಏಪ್ರಿಲ್‌ನಲ್ಲಿ ನಡೆಸಿದ್ದ ತನಿಖೆಯ ನಂತರ ರಂಗಾರೆಡ್ಡಿ ಜಿಲ್ಲಾ ಗ್ರಾಹಕ ವೇದಿಕೆ ನಟ ಮಹೇಶ್ ಬಾಬು ಅವರಿಗೆ ನೋಟಿಸ್ ಜಾರಿ ಮಾಡಿದೆ. ಹೈದರಾಬಾದ್ ಮೂಲದ ವೈದ್ಯೆಯೊಬ್ಬರು ದೂರು ದಾಖಲಿಸಿದ್ದು, ಹೈದರಾಬಾದ್ ಮೂಲದ ಎರಡು ರಿಯಲ್ ಎಸ್ಟೇಟ್ ಸಂಸ್ಥೆಗಳಾದ ಸಾಯಿ ಸೂರ್ಯ ಡೆವಲಪರ್ಸ್ ಮತ್ತು ಸುರಾನಾ ಗ್ರೂಪ್ ಅನಧಿಕೃತ ರಿಯಲ್ ಎಸ್ಟೇಟ್ ಯೋಜನೆಗಳ ಜಾಹೀರಾತು ನೀಡಿದ್ದಕ್ಕಾಗಿ ತನ್ನನ್ನು ಮತ್ತು ಇತರರನ್ನು ವಂಚಿಸಿದ್ದಾರೆ ಎಂದು ಹೇಳಿಕೊಂಡಿದ್ದಾರೆ. ಸಾಯಿ ಸೂರ್ಯ ಡೆವಲಪರ್ಸ್ ಅಡಿಯಲ್ಲಿ ‘ಗ್ರೀನ್ ಮೆಡೋಸ್’ ಎಂಬ ಯೋಜನೆಗೆ ಬಾಬು ಬ್ರಾಂಡ್ ರಾಯಭಾರಿ ಪಾತ್ರವನ್ನು ನಿರ್ವಹಿಸಿದ್ದಾರೆ. ಅವರು 5.9 ಕೋಟಿ ರೂ.ಗಳನ್ನು ಪಾವತಿಯಾಗಿ ಪಡೆದಿದ್ದಾರೆ ಎಂದು ವರದಿಯಾಗಿದೆ – ಚೆಕ್ ಮೂಲಕ 3.4 ಕೋಟಿ ರೂ.ಗಳು ಮತ್ತು 2.5 ಕೋಟಿ ರೂ.ಗಳು. ಖರೀದಿದಾರರನ್ನು ದಾರಿತಪ್ಪಿಸಿದ್ದಕ್ಕಾಗಿ ನಟನನ್ನು ಮೂರನೇ ಪ್ರತಿವಾದಿಯನ್ನಾಗಿ ಹೆಸರಿಸಲಾಗಿದೆ ಎಂದು ವರದಿಯಾಗಿದೆ. ವರದಿಗಳ ಪ್ರಕಾರ, ದೂರುದಾರರು ಜಾಹೀರಾತುಗಳಿಂದ ದಾರಿತಪ್ಪಿಸಿದರು ಮತ್ತು ಕಾನೂನುಬದ್ಧ ವಿನ್ಯಾಸ ಅಸ್ತಿತ್ವದಲ್ಲಿದೆ ಎಂಬ…

Read More

ಬೆಂಗಳೂರು: ಕರ್ನಾಟಕ ಸಾಹಿತ್ಯ ಅಕಾಡೆಮಿಯು ಪತ್ರಕರ್ತರಿಗೆ ಕನ್ನಡ ಸಾಹಿತ್ಯ ಎಂಬ ಹೆಸರಿನಲ್ಲಿ 3 ದಿನಗಳ ಅಧ್ಯಯನ ಶಿಬಿರವನ್ನು, ಆಗಸ್ಟ್ 3ನೇ ವಾರ ಅಥವಾ ಕೊನೆಯ ವಾರದಲ್ಲಿ ನಡೆಸಲು ಉದ್ದೇಶಿಸಿದ್ದು, ಆಸಕ್ತ ಪತ್ರಕರ್ತರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಸಕ್ತಿಯಿರುವ 20 ರಿಂದ 40 ವರ್ಷ ವಯಸ್ಸುಳ್ಳ ಈಗಾಗಲೇ ಪತ್ರಿಕೆಯಲ್ಲಿ ಕೆಲಸ ಮಾಡುತ್ತಿರುವವರು, ಪತ್ರಿಕೋದ್ಯಮ ಪದವಿ ಪಡೆದವರು ಹಾಗೂ ಆಸಕ್ತಿಯುಳ್ಳವರು ರಾಜ್ಯದ ಎಲ್ಲಾ ಭಾಗದ ಅಭ್ಯರ್ಥಿಗಳು ಅರ್ಜಿಸಲ್ಲಿಸಬಹುದು. ಅರ್ಜಿಸಲ್ಲಿಸಲು ಕೊನೆಯ ಜುಲೈ 25.  ಆಸಕ್ತ ಅಭ್ಯರ್ಥಿಗಳು ಅಕಾಡೆಮಿಯ ವೆಬ್‌ಸೈಟ್  https://sahithyaacademy.karnataka.gov.in   ಯಿಂದ ಅರ್ಜಿ ನಮೂನೆ ಹಾಗೂ ಮಾಹಿತಿಯನ್ನು ಪಡೆದುಕೊಳ್ಳಬಹುದಾಗಿದೆ ಎಂದು ಅಕಾಡೆಮಿಯ ರಿಜಿಸ್ಟಾçರ್ ಕರಿಯಪ್ಪ ಎನ್. ರವರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ. https://kannadanewsnow.com/kannada/kabul-may-become-worlds-first-capital-to-run-out-of-water-by-2030-reports/ https://kannadanewsnow.com/kannada/the-train-services-of-the-south-western-railway-hubli-division-have-been-canceled-and-a-new-schedule-has-been-issued/

Read More

ಹುಬ್ಬಳ್ಳಿ: ಸೋಮಲಾಪುರಂ ಮತ್ತು ರಾಯದುರ್ಗ ನಿಲ್ದಾಣಗಳ ನಡುವಿನ ಬದ್ನಹಳ್ಳುವಿನಲ್ಲಿ ಹೊಸ ಕ್ರಾಸಿಂಗ್ ನಿಲ್ದಾಣದ ನಿರ್ಮಾಣಕ್ಕಾಗಿ ಎಂಜಿನಿಯರಿಂಗ್ ಕಾಮಗಾರಿ ಕೈಗೊಳ್ಳುವ ಹಿನ್ನಲೆಯಲ್ಲಿ, ಈ ಕೆಳಗಿನ ರೈಲು ಸೇವೆಗಳನ್ನು ರದ್ದುಗೊಳಿಸಲಾಗಿದೆ, ಭಾಗಶಃ ರದ್ದುಗೊಳಿಸಲಾಗಿದೆ, ನಿಯಂತ್ರಿಸಲಾಗಿದೆ ಮತ್ತು ಮರು ವೇಳಾಪಟ್ಟಿ ಹೊಂದಿಸಲಾಗಿದೆ: ಅವುಗಳ ಮಾಹಿತಿ ಈ ಕೆಳಗಿನಂತಿದೆ. I. ರೈಲುಗಳ ರದ್ದತಿ: 1. ಜುಲೈ 11, 2025 ರಂದು ಗುಂತಕಲ್ – ಚಿಕ್ಕಜಾಜೂರು ದೈನಂದಿನ ಪ್ಯಾಸೆಂಜರ್ (ಸಂಖ್ಯೆ 57415) ಮತ್ತು ಚಿಕ್ಕಜಾಜೂರು – ಗುಂತಕಲ್ ದೈನಂದಿನ ಪ್ಯಾಸೆಂಜರ್ (57416) ರೈಲುಗಳು ರದ್ದುಗೊಳ್ಳಲಿವೆ. II. ರೈಲುಗಳ ಭಾಗಶಃ ರದ್ದತಿ: 1. ಜುಲೈ 10 ರಂದು ತಿರುಪತಿಯಿಂದ ಹೊರಡುವ ರೈಲು ಸಂಖ್ಯೆ 57405 ಗುಂತಕಲ್ – ಕದಿರಿದದೇವರಪಲ್ಲಿ ದೈನಂದಿನ ಪ್ಯಾಸೆಂಜರ್ ರೈಲು ಗುಂತಕಲ್ ಮತ್ತು ಕದಿರಿದದೇವರಪಲ್ಲಿ ನಡುವೆ ಭಾಗಶಃ ರದ್ದುಗೊಳ್ಳಲಿದ್ದು, ಗುಂತಕಲ್ನಲ್ಲಿ ತನ್ನ ಪ್ರಯಾಣವನ್ನು ಕೊನೆಗೊಳಿಸುತ್ತದೆ. 2. ಜುಲೈ 11 ರಂದು ರೈಲು ಸಂಖ್ಯೆ 57406 ಕದಿರಿದೆವರಪಲ್ಲಿ – ತಿರುಪತಿ ದೈನಂದಿನ ಪ್ಯಾಸೆಂಜರ್ ರೈಲು ತನ್ನ ಪ್ರಯಾಣವನ್ನು ಕದಿರಿದೇವರಪಲ್ಲಿ ನಿಲ್ದಾಣದ…

Read More

ಅಫ್ಘಾನಿಸ್ತಾನ: ಆರು ದಶಲಕ್ಷಕ್ಕೂ ಹೆಚ್ಚು ಜನರಿಗೆ ನೆಲೆಯಾಗಿರುವ ಕಾಬೂಲ್, ಹೆಚ್ಚುತ್ತಿರುವ ನೀರಿನ ಬಿಕ್ಕಟ್ಟನ್ನು ಎದುರಿಸುತ್ತಿದೆ. ಲಾಭರಹಿತ ಮರ್ಸಿ ಕಾರ್ಪ್ಸ್‌ನ ಹೊಸ ವರದಿಯು, ಮುಂದಿನ ಐದು ವರ್ಷಗಳಲ್ಲಿ ಸಂಪೂರ್ಣವಾಗಿ ನೀರಿನಿಂದ ಹೊರಗುಳಿಯುವ ಮೊದಲ ಆಧುನಿಕ ನಗರ ಅಫ್ಘಾನ್ ರಾಜಧಾನಿಯಾಗಬಹುದು ಎಂದು ಎಚ್ಚರಿಸಿದೆ. ಕಾಬೂಲ್‌ನ ನೀರಿನ ಕೊರತೆಗೆ ಕಾರಣವೇನು? ವರದಿಗಳ ಪ್ರಕಾರ, ಅತಿಯಾದ ಬಳಕೆ ಮತ್ತು ಹವಾಮಾನ ಬದಲಾವಣೆಯ ಪರಿಣಾಮಗಳಿಂದಾಗಿ ನಗರದ ಅಂತರ್ಜಲ ಮಟ್ಟಗಳು ವೇಗವಾಗಿ ಕುಸಿಯುತ್ತಿವೆ. ಏಪ್ರಿಲ್‌ನಲ್ಲಿ ಪ್ರಕಟವಾದ ಮರ್ಸಿ ಕಾರ್ಪ್ಸ್ ವರದಿಯ ಪ್ರಕಾರ, ಕಳೆದ 10 ವರ್ಷಗಳಲ್ಲಿ ಕಾಬೂಲ್‌ನ ಜಲಚರಗಳು 25 ರಿಂದ 30 ಮೀಟರ್‌ಗಳಷ್ಟು ಕುಸಿದಿವೆ. ಹೊರತೆಗೆಯಲಾಗುತ್ತಿರುವ ನೀರಿನ ಪ್ರಮಾಣವು ಪ್ರತಿ ವರ್ಷ ನೈಸರ್ಗಿಕವಾಗಿ ಮರುಪೂರಣಗೊಳ್ಳುವ ನೀರಿನ ಪ್ರಮಾಣಕ್ಕಿಂತ 44 ಮಿಲಿಯನ್ ಘನ ಮೀಟರ್ ಹೆಚ್ಚಾಗಿದೆ. ಈ ಅತಿಯಾದ ಹೊರತೆಗೆಯುವಿಕೆ 2030 ರ ವೇಳೆಗೆ ಕಾಬೂಲ್ ಒಣಗುವ ಅಪಾಯವನ್ನುಂಟುಮಾಡುತ್ತದೆ, ಇದು ಸುಮಾರು ಮೂರು ಮಿಲಿಯನ್ ನಿವಾಸಿಗಳನ್ನು ಸ್ಥಳಾಂತರಿಸಬಹುದು. ನಗರದ ಕುಡಿಯುವ ನೀರಿನ ಪ್ರಮುಖ ಮೂಲವಾದ ಕಾಬೂಲ್‌ನ ಸುಮಾರು ಅರ್ಧದಷ್ಟು ಬೋರ್‌ವೆಲ್‌ಗಳು…

Read More

ಬೆಂಗಳೂರು: 2022-23ನೇ ಸಾಲಿನಲ್ಲಿ ವೈದ್ಯ ವಿದ್ಯಾರ್ಥಿ ಆರ್.ಕೆ.ಆದಿತ್ಯ ಎಂಬುವರಿಂದ ಪ್ರವೇಶ ಸಂದರ್ಭದಲ್ಲಿ ನಿಗಿದಿಗಿಂತ ಹೆಚ್ಚುವರಿಯಾಗಿ 8 ಲಕ್ಷ ರೂಪಾಯಿ ವಸೂಲಿ ಮಾಡಿದ್ದನ್ನು ಹಿಂದುರುಗಿಸುವಂತೆ ಶುಲ್ಕ ನಿಯಂತ್ರಣ ಸಮಿತಿ ಅಧ್ಯಕ್ಷ ನ್ಯಾಯಮೂರ್ತಿ ಬಿ.ಶ್ರೀನಿವಾಸಗೌಡ ಅವರು ಮಂಗಳೂರಿನ ಜಿ.ಆರ್.ಮೆಡಿಕಲ್ ಕಾಲೇಜಿಗೆ ಸೂಚನೆ ನೀಡಿದ್ದಾರೆ. ದೂರುದಾರ ಮತ್ತು ಕಾಲೇಜಿನ ಆಡಳಿತ ಮಂಡಳಿಯ ಸದಸ್ಯರನ್ನು ವಿಚಾರಣೆ ನಡೆಸಿ ಪ್ರಕರಣವನ್ನು ಇತ್ಯರ್ಥಪಡಿಸಿದ್ದು, ಹೆಚ್ಚುವರಿಯಾಗಿ ವಸೂಲಿ ಮಾಡಿದ್ದ 8 ಲಕ್ಷ ರೂಪಾಯಿ ಶುಲ್ಕ ಹಿಂದುರುಗಿಸಲು ಕಾಲೇಜು ಆಡಳಿತ ಮಂಡಲಿ ಒಪ್ಪಿದೆ ಎಂದು ಶ್ರೀನಿವಾಸ ಗೌಡ ಅವರು ಹೇಳಿಕೆಯಲ್ಲಿ ತಿಳಿಸಿದ್ದಾರೆ. https://kannadanewsnow.com/kannada/indias-astronaut-shubhamshu-shukla-called-the-isro-chairman-to-express-his-gratitude/ https://kannadanewsnow.com/kannada/not-just-child-marriage-now-even-engagement-is-a-crime-2-years-of-jail-or-a-fixed-fine-of-1-lakh/

Read More

ಬೆಂಗಳೂರು: ಆಕ್ಸಿಯಮ್ -4 ಕಾರ್ಯಾಚರಣೆಯ ಭಾಗವಾಗಿ ಅಂತರರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣ ( International Space Station -ISS) ನಲ್ಲಿರುವ ಭಾರತೀಯ ಗಗನ್ಯಾತ್ರಿ ಶುಭಾಂಶು ಶುಕ್ಲಾ, ಐಎಸ್‌ಎಸ್‌ಗೆ ತಮ್ಮ ಸುರಕ್ಷಿತ ಪ್ರಯಾಣವನ್ನು ಖಚಿತಪಡಿಸಿಕೊಳ್ಳುವಲ್ಲಿ ಇಸ್ರೋ ತಂಡದ ಪ್ರಯತ್ನಗಳನ್ನು ಶ್ಲಾಘಿಸಿದ್ದಾರೆ. ಅಲ್ಲದೇ ಇಸ್ರೋ ಅಧ್ಯಕ್ಷರಿಗೆ ಪೋನ್ ಕರೆ ಮಾಡಿ ಧನ್ಯವಾದ ತಿಳಿಸಿದ್ದಾರೆ. ಜುಲೈ 6 ರಂದು ಶುಕ್ಲಾ ಅವರು ಇಸ್ರೋ ಅಧ್ಯಕ್ಷ ವಿ ನಾರಾಯಣನ್ ಅವರಿಗೆ ಕರೆ ಮಾಡಿದ್ದರು ಎಂದು ಬಾಹ್ಯಾಕಾಶ ಸಂಸ್ಥೆ ತಿಳಿಸಿದೆ. ಕರೆಯ ಸಮಯದಲ್ಲಿ, ನಾರಾಯಣನ್ ಅವರು ಶುಕ್ಲಾ ಅವರ ಯೋಗಕ್ಷೇಮದ ಬಗ್ಗೆ ತಮ್ಮ ತೀವ್ರ ಆಸಕ್ತಿಯನ್ನು ವ್ಯಕ್ತಪಡಿಸಿದರು ಮತ್ತು ಐಎಸ್‌ಎಸ್‌ನಲ್ಲಿ ನಡೆಸಲಾಗುತ್ತಿರುವ ವಿವಿಧ ವೈಜ್ಞಾನಿಕ ಪ್ರಯೋಗಗಳು ಮತ್ತು ಚಟುವಟಿಕೆಗಳ ಬಗ್ಗೆ ವಿಚಾರಿಸಿದರು. ಬಾಹ್ಯಾಕಾಶ ಇಲಾಖೆಯ ಕಾರ್ಯದರ್ಶಿಯೂ ಆಗಿರುವ ನಾರಾಯಣನ್, ಶುಕ್ಲಾ ಅವರು ಭೂಮಿಗೆ ಹಿಂದಿರುಗಿದ ನಂತರ ಎಲ್ಲಾ ಪ್ರಯೋಗಗಳು ಮತ್ತು ಚಟುವಟಿಕೆಗಳನ್ನು ಸೂಕ್ಷ್ಮವಾಗಿ ದಾಖಲಿಸುವ ಮಹತ್ವವನ್ನು ಒತ್ತಿ ಹೇಳಿದರು, ಏಕೆಂದರೆ ಇದು ಭಾರತದ ಮಾನವ ಬಾಹ್ಯಾಕಾಶ ಹಾರಾಟ ಕಾರ್ಯಕ್ರಮವಾದ ಗಗನ್ಯಾನ್‌ನ…

Read More

ಬೆಂಗಳೂರು: ಮೃತಪಟ್ಟ ರೈತರ ಹೆಸರಿನಲ್ಲಿರುವ ಜಮೀನು ಇ-ಪೌತಿ ಮಾಡಿಸಿಕೊಳ್ಳದೇ ಹಾಗೆಯೇ ಬಿಟ್ಟರೇ ಆ ಕುಟುಂಬ ಸರಕಾರದ ಸೌಲಭ್ಯಗಳಿಂದ ವಂಚಿತವಾಗಲಿದ್ದೀರಿ ಎಂಬುದಾಗಿ ರಾಜ್ಯ ಸರ್ಕಾರ ಎಚ್ಚರಿಸಿದೆ. ಪಿಎಂ ಕಿಸಾನ್ ಸಮ್ಮಾನ, ಫಸಲ್ ವಿಮಾ ಯೋಜನೆ ಸೇರಿ ಹಲವು ಸರಕಾರಿ ಸೌಲಭ್ಯಗಳು ಕಳೆದುಕೊಳ್ಳಬೇಕಾಗುತ್ತದೆ. ಹೀಗಾಗಿ ಸಂಬಂಧಪಟ್ಟ ಕುಟುಂಬದ ವಾರಸುದಾರರು ಇ-ಪೌತಿ ಆಂದೋಲನದಲ್ಲಿ ಭಾಗವಹಿಸಿ ತಮ್ಮ ಜಮೀನನ್ನು ವರ್ಗಾಯಿಸಿಕೊಳ್ಳಲು ಅವಕಾಶವಿದೆ. ಹೀಗಾಗಿ ರೈತರು ಯಾವುದೇ ಕಾರಣಕ್ಕೂ ಇದನ್ನು ತಪ್ಪಿಸಿಕೊಳ್ಳಬೇಡಿ ಎಂಬುದಾಗಿ ಸರ್ಕಾರ ಮನವಿ ಮಾಡಿದೆ. ರಾಜ್ಯದಲ್ಲಿ ಮೃತಪಟ್ಟ ಜಮೀನು ಮಾಲೀಕರ ಹೆಸರಿನಲ್ಲಿರುವ ಪಹಣಿಗಳನ್ನು ವಾರಸುದಾರರ ಹೆಸರಿಗೆ ನೋಂದಣಿ ಮಾಡಿಕೊಡಲು ಈ ಹಿಂದಿನಿಂದಲೂ ಅಭಿಯಾನಗಳು ನಡೆದಿವೆ. ಹೋಬಳಿ, ಗ್ರಾಮ ಮಟ್ಟದಲ್ಲಿ ಅಭಿಯಾನ ನಡೆದಿವೆ. ಆದರೂ ಇನ್ನು ಕೆಲವು ಪ್ರಕರಣ ಬಾಕಿ ಇದ್ದು, ಕಂದಾಯ ಇಲಾಖೆ ಸಚಿವರ ನಿರ್ದೇಶನದ ಮೇರೆಗೆ ಮನೆ ಬಾಗಿಲಿಗೆ ಕಂದಾಯ ಸೇವೆಗಳ ‘ಇ-ಪೌತಿ’ ಆಂದೋಲನ ಆರಂಭಿಸಲಾಗಿದೆ. ಈ ಯೋಜನೆಯಡಿ ಕಂದಾಯ ನಿರೀಕ್ಷಕರು ಮತ್ತು ಗ್ರಾಮ ಅಭಿವೃದ್ಧಿ ಅಧಿಕಾರಿಗಳು ರೈತರ ಮನೆ ಬಾಗಿಲಿಗೆ ತೆರಳಿ, ವಾರಸುದಾರರಿಗೆ…

Read More

ಬೆಂಗಳೂರು: ರೈತರು ತಮ್ಮ ಜಮೀನುಗಳನ್ನು ಪೌತಿ ಮಾಡಿಸಿಕೊಳ್ಳಲು ಇನ್ಮುಂದೆ ಕಂದಾಯ ಇಲಾಖೆ ಕಚೇರಿವರೆಗೂ ಅಲೆಯಬೇಕಿಲ್ಲ. ಸರಕಾರವೇ ಇ-ಪೌತಿ ಆಂದೋಲನದ ಮೂಲಕ ನಿಮ್ಮ ಮನೆ ಬಾಗಿಲಿಗೆ ಬರಲಿದೆ. ರಾಜ್ಯದಲ್ಲಿ ಮೃತಪಟ್ಟ ಜಮೀನು ಮಾಲೀಕರ ಹೆಸರಿನಲ್ಲಿರುವ ಪಹಣಿಗಳನ್ನು ವಾರಸುದಾರರ ಹೆಸರಿಗೆ ನೋಂದಣಿ ಮಾಡಿಕೊಡಲು ಈ ಹಿಂದಿನಿಂದಲೂ ಅಭಿಯಾನಗಳು ನಡೆದಿವೆ. ಹೋಬಳಿ, ಗ್ರಾಮ ಮಟ್ಟದಲ್ಲಿ ಅಭಿಯಾನ ನಡೆದಿವೆ. ಆದರೂ ಇನ್ನು ಕೆಲವು ಪ್ರಕರಣ ಬಾಕಿ ಇದ್ದು, ಕಂದಾಯ ಇಲಾಖೆ ಸಚಿವರ ನಿರ್ದೇಶನದ ಮೇರೆಗೆ ಮನೆ ಬಾಗಿಲಿಗೆ ಕಂದಾಯ ಸೇವೆಗಳ ‘ಇ-ಪೌತಿ’ ಆಂದೋಲನ ಆರಂಭಿಸಲಾಗಿದೆ. ಈ ಯೋಜನೆಯಡಿ ಕಂದಾಯ ನಿರೀಕ್ಷಕರು ಮತ್ತು ಗ್ರಾಮ ಅಭಿವೃದ್ಧಿ ಅಧಿಕಾರಿಗಳು ರೈತರ ಮನೆ ಬಾಗಿಲಿಗೆ ತೆರಳಿ, ವಾರಸುದಾರರಿಗೆ ಮೊಬೈಲ್ ಮೂಲಕ ಪೌತಿ ಖಾತೆಯನ್ನು ನೋಂದಾಯಿಸಲಿದ್ದಾರೆ. ಈ ಪ್ರಕ್ರಿಯೆಯಲ್ಲಿ ಆಧಾರ್ ಸೀಡಿಂಗ್‌ನ ಮೂಲಕ ಭೂಮಿ ಹಿಡುವಳಿಯ ನಿಖರ ಮಾಹಿತಿಯನ್ನು ಸಂಗ್ರಹಿಸಲಾಗುತ್ತದೆ. ಜಿಲ್ಲೆಯಲ್ಲಿ ಮೃತಪಟ್ಟ 75,000 ಜಮೀನುಗಳ ಮಾಲೀಕರ ಪಹಣಿಗಳನ್ನು ವಾರಸುದಾರರ ಹೆಸರಿಗೆ ನೋಂದಣಿ ಮಾಡಿಕೊಡಲು ಇ-ಪೌತಿ ಆಂದೋಲನವನ್ನು ಆರಂಭಿಸಿದೆ. ಆಧಾರ್ ಜೋಡಣೆಯಿಂದ ಕೃಷಿ ಭೂಮಿಯ…

Read More

ಬೆಂಗಳೂರು: ನಗರದಲ್ಲಿ ಸಿನಿಮಾ ಸ್ಟೈಲ್ ನಲ್ಲಿ ರಾಬರಿ ಮಾಡೋದಕ್ಕೆ ಯತ್ನಿಸಿದ್ದಾರೆ. ಸೂಪರ್ ಮಾರ್ಕೆಟ್ ಗೆ ನುಗ್ಗಿ ದರೋಡೆಗೆ ಮುಂದಾದಂತ ದುಷ್ಕರ್ಮಿಗಳ ಯತ್ನ ವಿಫಲವಾಗಿದೆ. ಬೆಂಗಳೂರಿನ ರಿಚ್ಮಂಡ್ ಟೌನ್ ನ ಸೂಪರ್ ಮಾರ್ಕೆಟ್ ಗೆ ನುಗ್ಗಿ ದರೋಡೆ ಮಾಡೋದಕ್ಕೆ ಸಿನಿಮಾ ಸ್ಟೈಲ್ ನಲ್ಲಿ ನುಗ್ಗಿದ್ದಾರೆ. ದಿನಿಸಿ ಖರೀದಿ ನೆಪದಲ್ಲಿ ತೆರಳಿದ್ದಂತ ಇಬ್ಬರು ಖದೀಮರು ಈ ಕೃತ್ಯ ಎಸಗೋದಕ್ಕೆ ಮುಂದಾಗಿದ್ದಾರೆ. ಸೂಪರ್ ಮಾರ್ಕೆಟ್ ಸಿಬ್ಬಂದಿಗೆ ಚಾಕು ತೋರಿಸಿ ದರೋಡೆ ಯತ್ನ ನಡೆಸಿದ್ದಾರೆ. ಆದರೇ ಸಿಬ್ಬಂದಿ ಚಾಕು ತೋರಿಸಿದರೂ ಹೆದರದೇ ಮುಂದೆ ಸಾಗಿ ದರೋಡೆ ಕೋರರಲ್ಲಿ ಒಬ್ಬನನ್ನು ಹಿಡಿದುಕೊಂಡಿದ್ದಾರೆ. ಈ ವೇಳೆಯಲ್ಲಿ ಸೂಪರ್ ಮಾರ್ಕೆಟ್ ನಲ್ಲಿ ಕದ್ದಿದ್ದಂತ ವಸ್ತುಗಳನ್ನು ಬಿಟ್ಟು ಸ್ಥಳದಿಂದ ಬೈಕ್ ನಲ್ಲಿ ಪರಾರಿಯಾಗಿದ್ದಾರೆ. ಈ ಎಲ್ಲಾ ಕೃತ್ಯವು ಸೂಪರ್ ಮಾರ್ಕೆಟ್ ನಲ್ಲಿದ್ದಂತ ಸಿಸಿಟಿವಿ ಕ್ಯಾಮರಾದಲ್ಲಿ ದಾಖಲಾಗಿದೆ. https://kannadanewsnow.com/kannada/important-information-for-the-public-these-documents-are-mandatory-for-aadhaar-registration-and-renewal/ https://kannadanewsnow.com/kannada/breaking-icc-ceo/

Read More