Author: ವಸಂತ್‌ ಬಿ ಈಶ್ವರಗೆರೆ

ವಸಂತ ಬಿ ಈಶ್ವರಗೆರೆ (Vasantha B Eshwaragere) ಅವರು ಕರ್ನಾಟಕದ ಪತ್ರಕರ್ತರು ಮತ್ತು ಕವಿ. ಅವರು ಪ್ರಮುಖವಾಗಿ Kannada News Now ಡಿಜಿಡಿಲ್‌ ಮಾಧ್ಯಮದಲ್ಲಿ ಪ್ರಧಾನ ಸಂಪಾದಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಇವರು ಸಾಹಿತ್ಯ, ಸಾಮಾಜಿಕ ವರದಿಗಾರಿಕೆ ಮತ್ತು ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿದ ಸುದ್ದಿಗಳ ವರದಿಯಲ್ಲಿ ಸಕ್ರಿಯರಾಗಿದ್ದಾರೆ. ಗುಡವಿ ಪಕ್ಷಿಧಾಮದಂತಹ ಪ್ರವಾಸಿ ತಾಣಗಳ ಕುರಿತು ಲೇಖನಗಳನ್ನು ಬರೆದಿದ್ದಾರೆ.2024-25ನೇ ಸಾಲಿನ ರಾಜ್ಯ ಮಟ್ಟದ ಉತ್ತಮ ಶಿಕ್ಷಕರ ಪ್ರಶಸ್ತಿ ಪಟ್ಟಿಯನ್ನು ಪ್ರಕಟಿಸುವುದರಲ್ಲಿ ಪ್ರಮುಖ ವರದಿಗಾರರಾಗಿ ಕಾರ್ಯನಿರ್ವಹಿಸಿದ್ದಾರೆ. ತಾಜಾ ಸುದ್ದಿಗಳು, ಶಿಕ್ಷಕರ ಪ್ರಶಸ್ತಿಗಳ ಪಟ್ಟಿ, ಮತ್ತು ನ್ಯಾಯಾಂಗ ಸಂಬಂಧಿತ ವರದಿಗಳನ್ನು ನೀಡುತ್ತಾರೆ. ಗುಡವಿ ಪಕ್ಷಿಧಾಮದಂತಹ ಪ್ರವಾಸಿ ತಾಣಗಳ ಕುರಿತು ಲೇಖನಗಳನ್ನು ಬರೆದಿದ್ದಾರೆ.

ಸ್ಮಾರ್ಟ್ಫೋನ್ ಬಳಕೆದಾರರಿಗೆ ದೊಡ್ಡ ಸಮಸ್ಯೆಯೆಂದರೆ ಬ್ಯಾಟರಿ ಬೇಗನೆ ಖಾಲಿಯಾಗುವುದು. ಆದಾಗ್ಯೂ, ದುರ್ಬಲ ಬ್ಯಾಟರಿ ಯಾವಾಗಲೂ ಅಪರಾಧಿಯಲ್ಲ. ಫಿಟ್ನೆಸ್ ಟ್ರ್ಯಾಕಿಂಗ್, ಸಾಮಾಜಿಕ ಮಾಧ್ಯಮ ಅಥವಾ ಡೇಟಿಂಗ್ಗಾಗಿ ಹೆಚ್ಚಾಗಿ ಬಳಸಲಾಗುವ ಅಸಂಖ್ಯಾತ ಅಪ್ಲಿಕೇಶನ್ಗಳು ಗಮನಾರ್ಹ ಶಕ್ತಿಯನ್ನು ಬಳಸುತ್ತವೆ. ಸ್ವೀಡಿಷ್ ಆನ್ಲೈನ್ ಪತ್ರಿಕೆ ನೈಹೆಡರ್ 24 ಸಂಗ್ರಹಿಸಿದ ಪಟ್ಟಿಯ ಪ್ರಕಾರ, ಫಿಟ್ಬಿಟ್ ಮತ್ತು ಉಬರ್ ಅಂತಹ ಬ್ಯಾಟರಿ ಒಣಗಿಸುವ ಅಪ್ಲಿಕೇಶನ್ಗಳಲ್ಲಿ ಸೇರಿವೆ. ವರದಿಯ ಪ್ರಕಾರ, ಫಿಟ್ಬಿಟ್ ಅತ್ಯಂತ ಶಕ್ತಿ-ಕೇಂದ್ರಿತವಾಗಿದೆ, ನಂತರ ಉಬರ್ ಮತ್ತು ಅಂತಹುದೇ ಅಪ್ಲಿಕೇಶನ್ಗಳು. ಆಶ್ಚರ್ಯಕರವಾಗಿ, ಈ ಅಪ್ಲಿಕೇಶನ್ಗಳು ಸಕ್ರಿಯವಾಗಿ ಬಳಕೆಯಲ್ಲಿಲ್ಲದಿದ್ದರೂ ಸಹ ನಿಮ್ಮ ಬ್ಯಾಟರಿಯನ್ನು ಖಾಲಿ ಮಾಡಬಹುದು. ಟಾಪ್ 10 ಬ್ಯಾಟರಿ ಬಳಕೆ  ಅಪ್ಲಿಗಳು: ಫಿಟ್ಬಿಟ್ ಉಬರ್ Skype ಫೇಸ್ ಬುಕ್ Airbnb Instagram Tinder ಬಂಬಲ್ SnapChat WhatsApp ಬ್ಯಾಟರಿಯನ್ನು ಹೇಗೆ ನಿರ್ವಹಿಸುವುದು? ನಿಮ್ಮ ಬ್ಯಾಟರಿಯನ್ನು ಉಳಿಸಲು, ನೀವು ಈ ಅಪ್ಲಿಕೇಶನ್ ಗಳನ್ನು ಹಸ್ತಚಾಲಿತವಾಗಿ ಮುಚ್ಚಬಹುದು ಅಥವಾ ಅವುಗಳ ವಿದ್ಯುತ್ ಬಳಕೆಯನ್ನು ಉತ್ತಮಗೊಳಿಸಬಹುದು. ಆಂಡ್ರಾಯ್ಡ್ ಸಾಧನಗಳಲ್ಲಿ ಇದು ವಿಶೇಷವಾಗಿ ಸುಲಭ: ನಿಮ್ಮ…

Read More

ಬೆಂಗಳೂರು: ಇಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರ ಅಧ್ಯಕ್ಷತೆಯಲ್ಲಿ ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳ ಫಲಿತಾಂಶ ಸುಧಾರಣೆ ಕುರಿತು ಸಂವಾದ ಕಾರ್ಯಕ್ರಮ ನಡೆಯಿತು. ಈ ಸಭೆಯ ಪ್ರಮುಖ ಹೈಲೈಟ್ಸ್ ಮುಂದಿದೆ ಓದಿ. ಇಂದು ಬೆಂಗಳೂರಿನ “ರಾಜ್ಯ ಶಿಕ್ಷಣ ಸಂಶೋಧನೆ ಮತ್ತು ತರಬೇತಿ ಇಲಾಖೆ” (D.S.E.R.T) ಕಚೇರಿಯಲ್ಲಿ “ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ, ಮಾರ್ಗದರ್ಶನ ಮತ್ತು ಫಲಿತಾಂಶ ಸುಧಾರಣೆ ಕುರಿತು ಸಂವಾದ ಕಾರ್ಯಕ್ರಮ ನಡೆಸಲಾಯಿತು. ♦️ವಿವಿಧ ಜಿಲ್ಲೆಗಳ ಜಿಲ್ಲಾ ಪಂಚಾಯತ್ ಸಿಇಒ ಹಾಗೂ ಜಿಲ್ಲಾ ಉಪನಿರ್ದೇಶಕರೊಂದಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಶೈಕ್ಷಣಿಕ ಕಾರ್ಯಕ್ರಮಗಳ ಪ್ರಗತಿ ಕುರಿತು ಮಾಹಿತಿ ಪಡೆದು ಸಮಗ್ರವಾಗಿ ಚರ್ಚಿಸಲಾಯಿತು. ♦️ಮಕ್ಕಳು ಶೈಕ್ಷಣಿಕವಾಗಿ ಹಿಂದುಳಿಯದಂತೆ ಅವರಿಗೆ ಪ್ರೋತ್ಸಾಹ ಹಾಗೂ ಮಾರ್ಗದರ್ಶನ ನೀಡುವುದು ನಮ್ಮ ಆದ್ಯ ಕರ್ತವ್ಯವಾಗಿದ್ದು, ಮಕ್ಕಳಿಗೆ ಆತ್ಮವಿಶ್ವಾಸ ತುಂಬುವ ಅನೇಕ ವಿನೂತನ ಪ್ರಯತ್ನಗಳನ್ನು ನಮ್ಮ ಶಿಕ್ಷಣ ಇಲಾಖೆ ಹಾಗೂ ಸರ್ಕಾರ ಮಾಡುತ್ತಿದೆ. ♦️SSLC ಮತ್ತು PUC ಫಲಿತಾಂಶ ವೃದ್ಧಿಗೆ ವಿದ್ಯಾರ್ಥಿಗಳಿಗೆ ಸಹಕಾರಿಯಾಗಲೆಂದು 20 ಅಂಶಗಳ ಕಾರ್ಯಕ್ರಮ ಅನುಷ್ಠಾನ ಮಾಡಲಾಗಿದೆ. ಇದರಿಂದಾಗಿ ವಿದ್ಯಾರ್ಥಿಗಳಲ್ಲಿ ಪರೀಕ್ಷಾ…

Read More

ಬೆಂಗಳೂರು : ಜನಸಾಮಾನ್ಯರಿಗೆ ಹಾಗೂ ಗ್ರಾಮೀಣ ಭಾಗದವರಿಗೆ ಉತ್ತಮ ಆರೋಗ್ಯ ಸೇವೆ ಒದಗಿಸುವ ನಿಟ್ಟಿನಲ್ಲಿ ಕಾರ್ಪೊರೆಟ್ ಸಾಮಾಜಿಕ ಹೊಣೆಗಾರಿಕೆ (ಸಿಎಸ್‌ಆರ್) ಅನುದಾನವನ್ನು ಪರಿಣಾಮಕಾರಿಯಾಗಿ ಹಾಗೂ ಸದ್ಬಳಕೆಯಾಗುವ ರೀತಿಯಲ್ಲಿ ಬಳಸಿಕೊಳ್ಳಲು ಹಲವಾರು ಯೋಜನೆಗಳನ್ನು ಅನುಷ್ಠಾನಕ್ಕೆ ತರಲಾಗುವುದು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಖಾತೆ ಸಚಿವರಾದ ದಿನೇಶ್ ಗುಂಡೂರಾವ್‌ ತಿಳಿಸಿದ್ದಾರೆ. ಬೆಂಗಳೂರಿನ ಆರೋಗ್ಯ ಸೌಧದಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು ನವೀಕರಿಸುವ ಮೂಲಕ ಆರೋಗ್ಯ ಸೇವೆಗಳನ್ನು ಬಲಪಡಿಸುವ ಯೋಜನೆಗೆ ಚಾಲನೆ ನೀಡಿದ ನಂತರ ಸಚಿವರು ಮಾತನಾಡಿದರು. ನಾಲ್ಕು ಕೋಟಿ ರೂಪಾಯಿ ವೆಚ್ಚದಲ್ಲಿ ರಾಯಚೂರು ಜಿಲ್ಲೆಯಲ್ಲಿ ಒಟ್ಟು 13 ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು (ಪಿಎಚ್‌ಸಿ) ಉನ್ನತೀಕರಿಸಲಾಗಿದೆ. ಈ ಪೈಕಿ 10ಪಿಎಚ್‌ ಪೂರ್ಣಗೊಂಡಿವೆ. ಇವುಗಳನ್ನು ನಾವು ಲೋಕಾರ್ಪಣೆ ಮಾಡಿದ್ದೇವೆ. ಉಳಿದ ಮೂರು ಬಹುತೇಕ ಪೂರ್ಣಗೊಳ್ಳುವ ಹಂತದಲ್ಲಿವೆ ಎಂದರು. ಆರೋಗ್ಯ ಮತ್ತು ಶಿಕ್ಷಣ ಜನರಿಗೆ ಅತ್ಯಂತ ಅಗತ್ಯವಿರುವ ಕ್ಷೇತ್ರಗಳಾಗಿವೆ. ಈ ನಿಟ್ಟಿನಲ್ಲಿ ಜನರಿಗೆ ಉತ್ತಮ ಆರೋಗ್ಯ ಸೇವಾ ಸೌಲಭ್ಯಗಳನ್ನು ಒದಗಿಸಲು ನಮ್ಮ ಇಲಾಖೆ ಸಿಎಸ್‌ಆರ್‌ ಯೋಜನೆಯಡಿ ಹಲವಾರು ಕಾರ್ಯಕ್ರಮ…

Read More

ಬೆಂಗಳೂರು: ಮೈಕ್ರೋ ಫೈನಾನ್ಸ್‌ ಸಂಸ್ಥೆಗಳ ಕಿರುಕುಳ ವಿಚಾರವಾಗಿ ಸುಗ್ರೀವಾಜ್ಞೆ ಮೂಲಕ ನಿಯಂತ್ರಣಕ್ಕೆ ರಾಜ್ಯ ಸರ್ಕಾರ ನಿರ್ಧರಿಸಿತ್ತು. ಅದರಂತೆ ಅದರ ಕರಡು ಪ್ರತಿಯನ್ನು ಸಿಎಂ ಸಿದ್ಧರಾಮಯ್ಯಗೆ ಸಲ್ಲಿಕೆ ಮಾಡಲಾಗಿದೆ. ಹೌದು ಮೈಕ್ರೋ ಫೈನಾನ್ಸ್ ಕಿರುಕುಳ ತಡೆಯ ಸಂಬಂಧ ಸುಗ್ರೀವಾಜ್ಞೆ ರಚನೆಗಾಗಿ ಅಧಿಕಾರಿಗಳ ವಿಶೇಷ ತಂಡವನ್ನು ರಾಜ್ಯ ಸರ್ಕಾರ ರಚಿಸಿತ್ತು. ಇದೀಗ ಅಧ್ಯಯನ ಮಾಡಿರುವಂತ ತಂಡವು ಸಿಎಂ ಸಿದ್ಧರಾಮಯ್ಯ ಅವರಿಗೆ 10 ಪುಟಗಳ ಕರಡನ್ನ ಸಲ್ಲಿಸಿದೆ. ಅಧಿಕಾರಿಗಳ‌ ವರದಿ ಪರಿಶೀಲಿಸಿದ ನಂತರ ರವಾನೆ ಮಾಡಲಾಗಿದೆ. ಆ ಬಳಿಕ ರಾಜ್ಯಪಾಲರಿಗೆ ಸುಗ್ರೀವಾಜ್ಞೆಯನ್ನು ಸಿಎಂ ಸಿದ್ಧರಾಮಯ್ಯ ರವಾನಿಸಲಿದ್ದಾರೆ. ವರದಿಯಂತೆ ಕಿರುಕುಳ ಕೊಟ್ಟರೆ ಮೈಕ್ರೋ ಫೈನಾನ್ಸ್ ಪರವಾನಗಿ ರದ್ದತಿ. ಮೈಕ್ರೋ ಫೈನಾನ್ಸ್ ಕಂಪನಿಗಳಿಂದ ಸಾಲಗಾರರಿಗೆ ಕಿರುಕುಳ ನೀಡಿದರೆ ಗರಿಷ್ಠ 3 ವರ್ಷಗಳ ಜೈಲು ಶಿಕ್ಷೆ. 5 ಲಕ್ಷ ರೂ ವರೆಗೆ ದಂಡ. ಲೈಸೆನ್ಸ್ ರದ್ದುಗೊಳಿಸುವುದು. ಸಾಲ ನೀಡುವಾಗ ಅಡಮಾನ ಪಡೆಯಬಾರದು. ಕಿರುಕುಳ ನೀಡಿದರೆ ಜಾಮೀನುರಹಿತ ಪ್ರಕರಣ ಎಂದು ಪರಿಗಣಿಸಲು ಕರಡು ಮಸೂದೆಯಲ್ಲಿ ಅವಕಾಶವಿದೆ. ಮೈಕ್ರೋ ಫೈನಾನ್ಸ್ ಕಿರುಕುಳ ತಡೆಯ ಕರಡು ಸುಗ್ರೀವಾಜ್ಞೆಯಲ್ಲಿ ಏನೇನಿದೆ? * ಸಾಲ ವಸೂಲಿ ವೇಳೆ ಸಾಲಗಾರರಿಗೆ…

Read More

ಬೆಂಗಳೂರು: ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಮೈಕ್ರೋ ಫೈನಾನ್ಸ್ ಕಿರುಕುಳ ತಡೆಗೆ ಸುಗ್ರೀವಾಜ್ಞೆನೆ ಮೂಲಕ ಮಸೂದೆ ತರಲು ಒಪ್ಪಿಗೆ ಸೂಚಿಸಲಾಗಿತ್ತು. ಈ ಸುಗ್ರೀವಾಜ್ಞೆಯಲ್ಲಿ ಕೆಲ ಬದಲಾವಣೆ ಮಾಡಿದ ನಂತ್ರ ರಾಜ್ಯ ಸರ್ಕಾರ ಡ್ರಾಫ್ಟ್ ರಾಜ್ಯಪಾಲರಿಗೆ ಸಲ್ಲಿಸಲಾಗಿದೆ. ಇನ್ನೇನಿದ್ದರೂ ಅಂಕಿತ ಮಾತ್ರ ಬಾಕಿ ಉಳಿದಂತೆ ಆಗಿದೆ. ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಕಂಪನಿಗಳು ಜನರಿಗೆ ಕಿರುಕುಳ ನೀಡುವುದನ್ನು ತಪ್ಪಿಸಲು ಸುಗ್ರೀವಾಜ್ಞೆಯನ್ನು ಜಾರಿಗೆ ತರುವಂತ ನಿರ್ಧಾರವನ್ನು ಸರ್ಕಾರ ಮಾಡಿತ್ತು. ಅದರಂತೆ ಸಂಪುಟ ಸಭಎಯಲ್ಲೂ ಒಪ್ಪಿಗೆಯನ್ನು ಸೂಚಿಸಲಾಗಿತ್ತು. ಆ ಬಳಿಕ ಮುಖ್ಯಮಂತ್ರಿ ಸಿದ್ಧರಾಮಯ್ಯ ನೇತೃತ್ವದಲ್ಲಿ ಮಹತ್ವದ ಸಭೆ ನಡೆದು, ಶಿಕ್ಷೆಯ ಪ್ರಮಾಣದಲ್ಲಿ ಕೆಲ ಬದಲಾವಣೆ ಮಾಡಲಾಗಿತ್ತು. ಮೈಕ್ರೋ ಫೈನಾನ್ಸ್ ಕಂಪನಿಗಳ ಕಿರುಕುಳ ಪ್ರಕರಣದಲ್ಲಿ ಶಿಕ್ಷೆಯ ಪ್ರಮಾಣವನ್ನು 3 ವರ್ಷದಿಂದ 10 ವರ್ಷ ಜೈಲು ಶಿಕ್ಷೆಗೆ ಬದಲಾವಣೆ ಮಾಡಿದಂತ ಡ್ರಾಫ್ಟ್ ಅನ್ನು ರಾಜ್ಯಪಾಲರಿಗೆ ಸರ್ಕಾರ ಕಳುಹಿಸಿಕೊಟ್ಟಿದೆ. ಇನ್ನೂ ರಾಜ್ಯಪಾಲರು ಸುಗ್ರೀವಾಜ್ಞೆಗೆ ಅಂಕಿತ ನೀಡಿದ್ದೇ ಆದಲ್ಲಿ ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಕರ್ನಾಟಕದಲ್ಲಿ ಬ್ರೇಕ್ ಬೀಳಲಿದೆ. https://kannadanewsnow.com/kannada/another-trouble-for-cm-siddaramaiah-complaint-lodged-with-lokayukta-over-benami-properties/ https://kannadanewsnow.com/kannada/big-news-minister-ishwar-khandre-asks-hd-kumaraswamy-whether-hmt-should-be-allowed-to-sell-forest-land-for-real-estate/

Read More

ಮೈಸೂರು: ಮುಡಾ ಕೇಸ್ ನಲ್ಲಿ ಸಿಎಂ ಸಿದ್ಧರಾಮಯ್ಯ ಅವರಿಗೆ ಸಂಕಷ್ಟ ಎದುರಾಗಲಿದೆ ಎಂಬುದಾಗಿ ಹಲವರ ಮಾತು. ಈ ನಡುವೆ ಈಗ ಮುಖ್ಯಮಂತ್ರಿ ಸಿದ್ಧರಾಮಯ್ಯಗೆ ಮತ್ತೊಂದು ಸಂಕಷಅಟ ಎದುರಾಗಿದೆ. ಅದೇ ಬೇನಾಮಿ ಆಸ್ತಿ ಸಂಪಾದಿಸಿದ್ದಾರೆ. ಈ ಬಗ್ಗೆ ತನಿಖೆ ನಡೆಸುವಂತೆ ಲೋಕಾಯುಕ್ತಕ್ಕೆ ದೂರು ಸಲ್ಲಿಸಲಾಗಿದೆ. ಇಂದು ಮೈಸೂರಿನ ಲೋಕಾಯುಕ್ತ ಕಚೇರಿಗೆ ತೆರಳಿಂದ ಸ್ನೇಹಮಯಿ ಕೃಷ್ಣ ಅವರು, ಮುಖ್ಯಮಂತ್ರಿ ಸಿದ್ಧರಾಮಯಯ್ ಹಾಗೂ ಅವರ ಕುಟುಂಬಸ್ಥರು ಬೇನಾಮಿ ಆಸ್ತಿ ಸಂಪಾದಿಸಿದ್ದಾರೆ. ಸಿದ್ಧರಾಮಯ್ಯ ಕುಟುಂಬ ಬೇನಾಮಿ ಆಸ್ತಿ ಖರೀದಿಸಿದೆ ಎಂಬುದಾಗಿ ಆರೋಪಿಸಿ ದೂರು ನೀಡಿದ್ದಾರೆ. ಮೈಸೂರು ತಾಲ್ಲೂಕಿನ ಆಲನಹಳ್ಳಿಯಲ್ಲಿ ಸರ್ವೆ ನಂ.113/4ರಲ್ಲಿ 1 ಎಕರೆ ಭೂಮಿಯನ್ನು ಖರೀದಿಸಿದ್ದಾರೆ. ಇದು ಬೇನಾಮಿ ಆಸ್ತಿಯಾಗಿದೆ. ಈ ಕುರಿತಂತೆ ತನಿಖೆ ನಡೆಸಿ, ಸೂಕ್ತ ಕ್ರಮ ಕೈಗೊಳ್ಳುವಂತೆಯೂ ಮನವಿ ಮಾಡಲಾಗಿದೆ. https://kannadanewsnow.com/kannada/no-10-grace-marks-for-sslc-students-this-year-madhu-bangarappa/ https://kannadanewsnow.com/kannada/big-news-minister-ishwar-khandre-asks-hd-kumaraswamy-whether-hmt-should-be-allowed-to-sell-forest-land-for-real-estate/

Read More

ಬೆಂಗಳೂರು: ಇದೇ ತಿಂಗಳ 12ರಿಂದ 14ರವರೆಗೆ ಇಲ್ಲಿ ನಡೆಯಲಿರುವ ಜಾಗತಿಕ ಹೂಡಿಕೆದಾರರ ಸಮಾವೇಶಕ್ಕೆ ಸಕಲ ಸಿದ್ಧತೆಗಳೂ ಮುಗಿದಿದ್ದು, 10 ಲಕ್ಷ ಕೋಟಿ ರೂ. ಬಂಡವಾಳ ಹೂಡಿಕೆಯನ್ನು ರಾಜ್ಯಕ್ಕೆ ಆಕರ್ಷಿಸುವ ಗುರಿ ಇಟ್ಟುಕೊಳ್ಳಲಾಗಿದೆ. ಫೆ.11ರ ಸಂಜೆಯೇ ಸಮಾವೇಶವನ್ನು ಉದ್ಘಾಟಿಸಲಾಗುವುದು ಎಂದು ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಸೋಮವಾರ ತಿಳಿಸಿದ್ದಾರೆ. ಸಮಾವೇಶದ ಸಿದ್ಧತೆ ಮತ್ತು ನಾನಾ ಇಲಾಖೆಗಳ ನಡುವಿನ ಸಮನ್ವಯಕ್ಕೆ ಸಂಬಂಧಿಸಿದಂತೆ ತಮ್ಮ ಅಧ್ಯಕ್ಷತೆಯಲ್ಲಿ ವಿಧಾನಸೌಧದಲ್ಲಿ ನಡೆದ ಉನ್ನತ ಮಟ್ಟದ ಸಮಿತಿಯ ಸಭೆಯಲ್ಲಿ ಅವರು ಮಾತನಾಡಿದರು. ಸಭೆಯಲ್ಲಿ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ ಉಪಸ್ಥಿತರಿದ್ದರು. ಕೈಗಾರಿಕಾ ಇಲಾಖೆಯ ಪ್ರಧಾನ ಕಾರ್ಯದರ್ಶಿ ಸೆಲ್ವಕುಮಾರ್ ಪ್ರಾತ್ಯಕ್ಷಿಕೆಯನ್ನು ಪ್ರದರ್ಶಿಸಿದರು. ಈಗಾಗಲೇ 2,000ಕ್ಕೂ ಹೆಚ್ಚು ಹೂಡಿಕೆದಾರರು ಜಾಗತಿಕ ಹೂಡಿಕೆದಾರರ ಸಮಾವೇಶದಲ್ಲಿ ಪಾಲ್ಗೊಳ್ಳಲು ಆಸಕ್ತಿ ತೋರಿ, ನೋಂದಾಯಿಸಿಕೊಂಡಿದ್ದಾರೆ. ಸಮಾವೇಶದಲ್ಲಿ 18 ದೇಶಗಳು ಪಾಲ್ಗೊಳ್ಳುತ್ತಿದ್ದು, ಈ ಪೈಕಿ 9 ದೇಶಗಳು ಪ್ರತ್ಯೇಕ ಪೆವಿಲಿಯನ್ ಹೊಂದಿರಲಿವೆ. ಈ ಸಂದರ್ಭದಲ್ಲಿ 60ಕ್ಕೂ ಹೆಚ್ಚು ಉದ್ಯಮ ಪರಿಣತರು ಗೋಷ್ಠಿಗಳಲ್ಲಿ ಮಾತನಾಡಲಿದ್ದಾರೆ. ಜೊತೆಗೆ…

Read More

ಬೆಂಗಳೂರು: ಕಳೆದ ವರ್ಷದಂತೆ ಈ ವರ್ಷ ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ಶೇ.10ರಷ್ಟು ಗ್ರೇಸ್ ಮಾರ್ಕ್ಸ್ ನೀಡುವುದಿಲ್ಲ. ಈ ವರ್ಷ ಗ್ರೇಸ್ ಮಾರ್ಕ್ಸ್ ರದ್ದು ಮಾಡಲಾಗಿದೆ. ಗ್ರೇಸ್ ಮಾರ್ಕ್ಸ್ ಕೊಡೋದಿಲ್ಲ ಎಂಬುದಾಗಿ ಶಿಕ್ಷಣ ಸಚಿವ ಮಧು ಬಂಗಾರಪ್ಪ ಘೋಷಿಸಿದ್ದಾರೆ. ಇಂದು ಎಸ್ ಎಸ್ ಎಲ್ ಸಿ ಪರೀಕ್ಷೆ ಪೂರ್ವ ತಯಾರಿ ಕುರಿತಂತೆ ಸುದ್ದಿಗೋಷ್ಠಿ ನಡೆಸಿ ಮಾತನಾಡಿದಂತ ಅವರು, ಮೂರು ಬಾರಿ ಪಾರ್ಷಿಕ ಪರೀಕ್ಷೆಯ ಬಗ್ಗೆ ವಿದ್ಯಾರ್ಥಿಗಳಿಗೆ ಅರ್ಥವಾಗಿದೆ. ಒಂದು ವೇಳೆ ಫೇಲ್ ಆದರೂ ಮತ್ತೆ ಶಾಲೆಗೆ ಸೇರುವ ವ್ಯವಸ್ಥೆಯೂ ಕೂಡ ಈಗ ಮಕ್ಕಳಿಗೆ ಅರ್ಥವಾಗಿದೆ. ಇವತ್ತು ವಿದ್ಯಾರ್ಥಿಗಳಿಗೆ ಇರುವಂತ ಸಮಸ್ಯೆಗಳ ಬಗ್ಗೆ ಚರ್ಚಿಸಲು ಸಭೆ ನಡೆಸಲಾಯಿತು ಎಂದರು. ಎಸ್ ಎಸ್ ಎಲ್ ಸಿ ಪರೀಕ್ಷೆ ಸಂಬಂಧ ಎಲ್ಲಾ ಜಿಲ್ಲೆಯ ಡಿಸಿ, ಸಿಇಓಗಳ ಜೊತೆಗೆ ಚರ್ಚೆ ಮಾಡಲಾಗಿದೆ. ಈ ಬಾರಿ ಫಲಿತಾಂಶ ಜಾಸ್ತಿ ಆಗುವ ನಿರೀಕ್ಷೆಯಿದೆ. ಶಿಕ್ಷಕರಿಗೆ ಮಕ್ಕಳಿಗೆ ಪರೀಕ್ಷಾ ಒತ್ತಡ ಹಾಕದಂತೆ ಸೂಚಿಸಿದ್ದೇನೆ ಎಂದರು. ಸಿಎಂ ಸಿದ್ಧರಾಮಯ್ಯ ಅವರು ಈ…

Read More

ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯಲ್ಲಿ 2024-25ನೇ ಸಾಲಿನ ಕಲ್ಯಾಣ ಕಾರ್ಯಕ್ರಮಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸುವ ಅವಧಿಯನ್ನು 25ನೇ ಫೆ. 2025 ರವೆರೆಗೆ ವಿಸ್ತರಣೆ ಮಾಡಲಾಗಿದೆ ಎಂದು ಕಲ್ಯಾಣ ವಿಭಾಗದ ವಿಶೇಷ ಆಯುಕ್ತರಾದ ಸುರಳ್ಕರ್ ವಿಕಾಸ್ ಕಿಶೋರ್ ರವರು ತಿಳಿಸಿದ್ದಾರೆ. 2024-25ನೇ ಸಾಲಿನ ಕಲ್ಯಾಣ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು 4ನೇ ಫೆಬ್ರವರಿ 2025 ರೊಳಗಾಗಿ ಸಲ್ಲಿಸಲು ತಿಳಿಸಲಾಗಿತ್ತು. ಅರ್ಹ ಫಲಾನುಭವಿಗಳಿಗೆ ಇನ್ನೂ ಹೆಚ್ಚಿನ ಮಟ್ಟದಲ್ಲಿ ಅನುಕೂಲವಾಗುವ ದೃಷ್ಟಿಯಿಂದ ಆ ಅವಧಿಯನ್ನು 25ನೇ ಫೆಬ್ರವರಿ 2025 ರವರೆಗೆ ವಿಸ್ತರಿಸಲಾಗಿದೆ. ನಗರದ ಎಲ್ಲಾ ವರ್ಗಗಳ ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡಗಳು, ಪೌರಕಾರ್ಮಿಕರು, ಆರ್ಥಿಕವಾಗಿ ಹಿಂದುಳಿದ ಮತ್ತು ಅಲ್ಪಸಂಖ್ಯಾತ ವರ್ಗ, ವಿಶೇಷ ಚೇತನರ ವರ್ಗ, ತೃತೀಯ ಲಿಂಗಿಗಳು ಮತ್ತು ಮಹಿಳಾ ವರ್ಗದ ಅರ್ಹ ಅಭ್ಯರ್ಥಿಗಳಿಂದ ಭೌತಿಕ ಹಾಗೂ ಅಂತರ್ಜಾಲ ತಂತ್ರಾಂಶದ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಬಹುದಾದ ಕಲ್ಯಾಣ ಕಾರ್ಯಕ್ರಮಗಳ ವಿವರ: 1. ಒಂಟಿ ಮನೆ ನಿರ್ಮಾಣ / ಅಮೃತ ಮಹೋತ್ಸವ ಯೋಜನೆ. 2.…

Read More

ಕಾರವಾರ: ಇನ್ಮುಂದೆ ಗೋಹತ್ಯೆ ಏನಾದರೂ ನಡೆದರೇ ಸರ್ಕಲ್ ನಲ್ಲಿ ಗುಂಡು ಹಾಕ್ತೀವಿ ಎಂಬುದಾಗಿ ಮೀನುಗಾರಿಕಾ ಸಚಿವ ಮಂಕಾಳು ವೈದ್ಯ ಅವರು ಗುಡುಗಿದ್ದಾರೆ. ಇಂದು ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರದ ಸಾಲಕೋಡು ಅರಣ್ಯದಲ್ಲಿ ಗರ್ಭ ಧರಿಸಿದ ಗೋವನ್ನು ಹತ್ಯೆ ಮಾಡಿದ ಪ್ರಕರಣ ಸಂಬಂಧ ಮಾತನಾಡಿದಂತ ಅವರು, ಗೋಹತ್ಯೆ ಹಿಂದಿನಿಂದಲೂ ನಡೆಯುತ್ತಿದೆ. ಬಿಜೆಪಿ ಅವಧಿಯಲ್ಲೂ ನಡೆದಿದೆ ಎಂದರು. ಕುಮಟಾ ಶಾಸಕ ದಿನಕರ ಶೆಟ್ಟಿ ಅವರು ಮಾತನಾಡುವಾಗ ನಾಲಿಗೆ ಮೇಲೆ ಹಿಡಿತವಿಟ್ಟುಕೊಂಡು ಮಾತನಾಡಬೇಕು. ದಿನಕರ ಶೆಟ್ಟಿ ಏನು ಈಗ ದಿನಕರ ಖಾನ್ ಆಗಿದ್ದಾರಾ ಎಂಬುದಾಗಿ ಪ್ರಶ್ನಿಸಿದರು. ದಿನಕರ ಶೆಟ್ಟಿ ಅವರೇ ನೀವು ನಮ್ಮ ಸಿಎಂ, ಸಚಿವರ ಬಗ್ಗೆ ಬಾಯಿಗೆ ಬಂದಂತೆ ಮಾತನಾಡಬೇಡಿ. ನಾವು ಗೋವುಗಳ ಹಂತಕರನ್ನು ಯಾವುದೇ ಕಾರಣಕ್ಕೂ ರಕ್ಷಇಸೋದಲಿಲ್. ಆರೋಪಿಗಳನ್ನು ಕೂಡಲೇ ಬಂಧಿಸಿ ಶಿಕ್ಷೆ ನೀಡುವಂತೆ ಹೇಳಿದ್ದೇವೆ. ಇನ್ಮುಂದೆ ಯಾವುದೇ ಕಾರಣಕ್ಕೂ ಗೋವು ಕಳ್ಳತನ, ಹತ್ಯೆ ಆಗಬಾರದು. ಗೋಹತ್ಯೆ ಏನಾದರೂ ನಡೆದರೇ ಸರ್ಕಲ್ ನಲ್ಲಿ ನಿಲ್ಲಿ ಗುಂಡು ಹಾಕ್ತೀವಿ ಎಂಬುದಾಗಿ ಎಚ್ಚರಿಸಿದರು. https://kannadanewsnow.com/kannada/ordinance-to-curb-harassment-of-microfinance-companies-dk-shivakumar/ https://kannadanewsnow.com/kannada/big-news-minister-ishwar-khandre-asks-hd-kumaraswamy-whether-hmt-should-be-allowed-to-sell-forest-land-for-real-estate/

Read More