Author: kannadanewsnow09

ಮಡಿಕೇರಿ :-ಸರ್ಕಾರದ ಮಹತ್ತರ ಯೋಜನೆಯಾದ ನೇಕಾರ್ ಸಮ್ಮಾನ್ ಯೋಜನೆಯಡಿ ಕೈಮಗ್ಗ ಹಾಗೂ ವಿದ್ಯುತ್ ಮಗ್ಗ ನೇಕಾರರಿಗೆ ವಾರ್ಷಿಕವಾಗಿ ಒಂದು ಬಾರಿಗೆ ರೂ. 5 ಸಾವಿರ ಗಳ ಸಹಾಯಧನವನ್ನು ಸರ್ಕಾರದಿಂದ ಡಿ.ಬಿ.ಟಿ ಮೂಲಕ (ನೇರ ನಗದು ವರ್ಗಾವಣೆ) ನೀಡಲಾಗುತ್ತಿದೆ. 2024-25 ನೇ ಸಾಲಿಗೆ ಸಹಾಯಧನವನ್ನು ಪಡೆಯಲು ಜಿಲ್ಲೆಯ ಕೈಮಗ್ಗ ಹಾಗೂ ವಿದ್ಯುತ್ ಮಗ್ಗ ನೇಕಾರರು ಹಾಗೂ ನೇಕಾರಿಕೆ ಪೂರಕ ವೃತ್ತಿಯನ್ನು ಅವಲಂಬಿಸಿರುವ ಎಲ್ಲಾ ನೇಕಾರರು ಈ ಯೋಜನೆಯಡಿ ರೂ. 5 ಸಾವಿರ ಗಳ ವಾರ್ಷಿಕ ಒಂದು ಬಾರಿಯ ಸಹಾಯಧನ ಪಡೆಯಲು ಅರ್ಹರಿದ್ದು, ಅರ್ಜಿ ನಮೂನೆಗಳನ್ನು ತಮ್ಮ ನೇಕಾರ ಸಹಕಾರ ಸಂಘಗಳಿಂದ/ ಕಚೇರಿಯಿಂದ ಪಡೆದು ಸಂಘದ ಮೂಲಕ ಸಲ್ಲಿಸಬೇಕಿದೆ. ವೈಯಕ್ತಿಕ ನೇಕಾರರಾಗಿದ್ದಲ್ಲಿ ನೇಕಾರ್ ಸಮ್ಮಾನ್ ಅರ್ಜಿ ನಮೂನೆಗಳನ್ನು ಈ ಕಚೇರಿಯಿಂದ ಪಡೆದು ಸಲ್ಲಿಸಬಹುದಾಗಿದೆ. ಕೈಮಗ್ಗ ನೇಕಾರರಿಂದ ಸಲ್ಲಿಸಬೇಕಾದ ದಾಖಲಾತಿಗಳು: ಆಧಾರ್ ಕಾರ್ಡ್, ರೇಷನ್ ಕಾರ್ಡ್, ನೇಕಾರ್ ಸಮ್ಮಾನ್ ಐಡಿ/ ಪೆಹಚಾನ್ ಕಾರ್ಡ್, ಆಧಾರ್ ಜೋಡಣೆಯಾದ ಬ್ಯಾಂಕ್ ಖಾತೆ ಪಾಸ್‍ಬುಕ್ ಪ್ರತಿ, ಕೈಮಗ್ಗ ನೇಕಾರಿಕೆ ವೃತ್ತಿಯಲ್ಲಿ…

Read More

ಮಡಿಕೇರಿ: ಪ್ರಸಕ್ತ (2024-25) ಶೈಕ್ಷಣಿಕ ವರ್ಷದಲ್ಲಿ ಉಡುಪಿ ಜಿಲ್ಲೆಯ ಬ್ರಹ್ಮಾವರದ ಕೃಷಿ ಡಿಪ್ಲೋಮಾ ಕೋರ್ಸ್‍ಗೆ ಪ್ರವೇಶಾತಿ ಅರ್ಜಿ ಆಹ್ವಾನಿಸಲಾಗಿದ್ದು, ಡಿಪ್ಲೋಮಾ ಕೃಷಿ ದಾಖಲಾತಿಗೆ ಈ ಹಿಂದೆ ಭರ್ತಿ ಮಾಡಿದ ಅರ್ಜಿಗಳನ್ನು ಸಲ್ಲಿಸಲು ಅಂತಿಮ ದಿನಾಂಕವನ್ನು 14.09.2024 ಎಂದು ಅಧಿಸೂಚನೆ ಹೊರಡಿಸಲಾಗಿತ್ತು. ಅರ್ಜಿ ಸಲ್ಲಿಸಲು ಅಂತಿಮ ದಿನಾಂಕವನ್ನು ಸೆಪ್ಟೆಂಬರ್, 30 ರವರೆಗೆ ವಿಸ್ತರಿಸಲಾಗಿದೆ. ಅರ್ಜಿಯನ್ನು www.uahs.edu.in ವೈಬ್‍ಸೈಟ್ ಇಲ್ಲಿ ಎಲ್ಲಾ ಅಧಿಸೂಚನೆಗಳು ಶೀರ್ಷಿಕೆ ಅಡಿಯಲ್ಲಿ ಡೌನ್‍ಲೋಡ್ ಮಾಡಿ ಭರ್ತಿ ಮಾಡಿದ ಅರ್ಜಿಗಳನ್ನು ಸೆಪ್ಟೆಂಬರ್ 30 ರೊಳಗೆ ಸಲ್ಲಿಸಬಹುದಾಗಿದೆ. ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ತೇರ್ಗಡೆಯಾದ, ಕನಿಷ್ಠ ಶೇ.45 (ಕನಿಷ್ಠ ಶೇ. 40 ಪ.ಜಾ. ಮತ್ತು ಪ.ಪಂ./ ಪ್ರವರ್ಗ-1) ಅಂಕಗಳೊಂದಿಗೆ ಉತ್ತೀರ್ಣರಾದ, 19 ವರ್ಷ ವಯಸ್ಸು ಮೀರದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ರೈತರ ಹಾಗೂ ಕೃಷಿ ಕಾರ್ಮಿಕರ ಮಕ್ಕಳಿಗೆ ಶೇ. 50 ರಷ್ಟು ಮೀಸಲಾತಿ ಇರುತ್ತದೆ. ಈ ಎರಡು ವರ್ಷದ ಡಿಪ್ಲೋಮಾ ಕೋರ್ಸ್‍ನಲ್ಲಿ ಕೃಷಿ, ತೋಟಗಾರಿಕೆ, ಪಶುಸಂಗೋಪನೆ, ಮೀನುಗಾರಿಕೆ, ಹೈನುವಿಜ್ಞಾನ, ರೇಷ್ಮೆ ಕೃಷಿ, ಜೇನು ಕೃಷಿ ಹೀಗೆ…

Read More

ಉತ್ತರ ಕನ್ನಡ: ಜಿಲ್ಲೆಯ ಶಿರೂರು ಬಳಿಯ ಹೆದ್ದಾರಿ 66ರಲ್ಲಿ ಬೆಟ್ಟ ಕುಸಿತ ಉಂಟಾಗಿ, ಕೇರಳ ಮೂಲದ ಅರ್ಜುನ್ ಎಂಬುವರ ಲಾರಿ ನಾಪತ್ತೆಯಾಗಿತ್ತು. ಇಂದು ಲಾರಿಯು ಗಂಗಾವಳಿ ನದಿಯಲ್ಲಿ ಪತ್ತೆಯಾಗಿದೆ. ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಶಿರೂರು ಬಳಿಯ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಗುಡ್ಡ ಕುಸಿತಗೊಂಡು 10 ಮಂದಿ ನಾಪತ್ತೆಯಾಗಿ ಸಾವನ್ನಪ್ಪಿದ್ದರು. ಈ ದುರಂತದಲ್ಲಿ ಕೇರಳ ಮೂಲಕ ಅರ್ಜುನ್ ಎಂಬುವರಿಗೆ ಸೇರಿದಂತ ಲಾರಿ ಕೂಡ ನಾಪತ್ತೆಯಾಗಿತ್ತು. ಇಂದು ಮುಳುಗು ತಜ್ಞ ಈಶ್ವರ್ ಮಲ್ಪೆ ತಂಡದಿಂದ ಗಂಗಾವಳಿ ನದಿಯಲ್ಲಿ ಮುಳುಗಿದ್ದಂತ ಕೇರಳ ಮೂಲದ ಅರ್ಜುನ್ ಎಂಬುವರಿಗೆ ಸೇರಿದಂತೆ ಲಾರಿಯನ್ನು ಪತ್ತೆ ಹಚ್ಚಲಾಗಿದೆ. ಇದೀಗ ಲಾರಿಗೆ ಹಗ್ಗವನ್ನು ಕಟ್ಟಿ, ಮೇಲೆ ಎಳೆಯುವಂತ ಕಾರ್ಯಾಚರಣೆ ನಡೆಯುತ್ತಿದೆ. https://kannadanewsnow.com/kannada/bjp-accuses-congress-of-being-behind-nagamangala-riots/ https://kannadanewsnow.com/kannada/nipah-scare-rises-in-bengaluru-one-person-diagnosed-with-symptoms-41-under-home-quarantine/

Read More

ಬೆಂಗಳೂರು: ಮಂಡ್ಯ ಜಿಲ್ಲೆಯ ನಾಗಮಂಗಲದಲ್ಲಿ ಗಣೇಶ ಮೂರ್ತಿ ವಿಸರ್ಜನೆಯ ವೇಳೆಯಲ್ಲಿ ನಡೆದಂತ ಗಲಭೆಯ ಹಿಂದೆ ಕಾಂಗ್ರೆಸ್ ಕೈವಾಡವಿದೆ ಎಂಬುದಾಗಿ ಬಿಜೆಪಿ ಗಂಭೀರ ಆರೋಪ ಮಾಡಿದೆ. ಇಂದು ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವಂತ ಕರ್ನಾಟಕ ಬಿಜೆಪಿಯು, ಕಾಂಗ್ರೆಸ್ ಸರ್ಕಾರದ ತುಷ್ಠೀಕರಣದ ನೀತಿಯಿಂದಾಗಿಯೇ ನಾಗಮಂಗಲದಲ್ಲಿ ಗಲಭೆಯಾಗಿದೆ ಎಂದು ಬಿಜೆಪಿಯ ಸತ್ಯಶೋಧನಾ ಸಮಿತಿ ವರದಿ ನೀಡಿದೆ ಎಂದಿದೆ. ಈ ಗಲಭೆ ಪೂರ್ವನಿಯೋಜಿತವಾಗಿದ್ದು, ಹಿಂದೂ ಸಮುದಾಯದ ಅಂಗಡಿಗಳಿಗೆ ಮಾತ್ರ ಬೆಂಕಿ ‌ಹಚ್ಚಲಾಗಿದೆ. ಕಳೆದ ವರ್ಷವೂ ಇದೇ ರೀತಿ ಗಲಭೆ ನಡೆದಿದ್ದರೂ ಸರ್ಕಾರ ನಿರ್ಲಕ್ಷ್ಯ ವಹಿಸಿ, ಗಣೇಶ ಮೂರ್ತಿಯ ವಿಸರ್ಜನೆಗೆ ವಿಘ್ನ ತರಲು ಮುಂದೆ ನಿಂತು ಸಹಕಾರ ನೀಡಿದೆ ಎಂಬುದಾಗಿ ಆರೋಪಿಸಿದೆ. ಹಿಂದೂ ಸಮುದಾಯ ಅಭದ್ರವಾಗಿದ್ದಷ್ಟೂ ತನಗೆ ಲಾಭ ಎಂದು ಅರಿತುಕೊಂಡಿರುವ ಕಾಂಗ್ರೆಸ್ ಸರ್ಕಾರ ಪದೇ ಪದೇ ಹಿಂದೂ ಸಮುದಾಯವನ್ನು ಅವಮಾನಿಸುತ್ತಿದೆ ಎಂಬುದಾಗಿ ಕಿಡಿಕಾರಿದೆ. https://twitter.com/BJP4Karnataka/status/1837379965106409835 https://kannadanewsnow.com/kannada/decision-to-conduct-prasadam-testing-in-all-temples-in-the-state-minister-ramalinga-reddy/ https://kannadanewsnow.com/kannada/nipah-scare-rises-in-bengaluru-one-person-diagnosed-with-symptoms-41-under-home-quarantine/

Read More

ಬೆಂಗಳೂರು: ತಿರುಪತಿ ಲಡ್ಡು ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬು ಪತ್ತೆ ಬೆನ್ನಲ್ಲೇ, ರಾಜ್ಯ ಸರ್ಕಾರ ಎಚ್ಚೆತ್ತುಕೊಂಡಿದೆ. ರಾಜ್ಯದ ಮುಜರಾಯಿ ಇಲಾಖೆಯ ದೇವಾಲಯಗಳ ಪ್ರಸಾದ ವಿವಾದಕ್ಕೆ ಕಾರಣವಾಗುವ ಮುನ್ನವೇ ಎಲ್ಲಾ ದೇವಾಲಗಳ ಪ್ರಸಾದವನ್ನು ಪರೀಕ್ಷೆ ಮಾಡುವಂತ ನಿರ್ಧಾರವನ್ನು ಕೈಗೊಂಡಿದೆ. ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿ ಮಾಹಿತಿ ಹಂಚಿಕೊಂಡಂತ ಸಾರಿಗೆ ಹಾಗೂ ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಅವರು, ರಾಜ್ಯದ ಎಲ್ಲಾ ದೇವಾಲಯಗಳ ಪ್ರಸಾದವನ್ನು ಟೆಸ್ಟ್ ಮಾಡಿಸುತ್ತೇನೆ. ನಮ್ಮ ರಾಜ್ಯದಲ್ಲಿ ಶೇ.99%ನಷ್ಟು ದೇವಾಲಯಗಳು ನಂದಿನಿ ತುಪ್ಪವನ್ನೇ ಬಳಸಿಕೊಳ್ಳುತ್ತಾ ಇದ್ದಾರೆ ಎಂದರು. ತಿರುಪತಿ ಲಡ್ಡು ವಿವಾದದಂತೆ ನಮ್ಮಲ್ಲೂ ಆಗುವುದಕ್ಕಿಂತ ಮುಂಚೆಯೇ ಜನರಿಗೆ ಸಂಶಯ ಬೇಡ ಅಂತ ನಂದಿನಿ ತುಪ್ಪ ಬಳಕೆ ಮಾಡಬೇಕು ಎಂಬುದಾಗಿ ಆದೇಶ ಮಾಡಲಾಗಿದೆ. ಕೇಂದ್ರ ಸಚಿವರೊಬ್ಬರು ರಾಜ್ಯದ ದೇವಾಲಯಗಳ ಪ್ರಸಾದ ಪರೀಕ್ಷೆ ಮಾಡಬೇಕು ಎಂದಿದ್ದಾರೆ. ನನ್ನ ಅಭಿಪ್ರಾಯ ಅಂದ್ರೆ ದೇಶದ ಎಲ್ಲಾ ದೇವಸ್ಥಾನಗಳ ಪ್ರಸಾದ ಟೆಸ್ಟ್ ಮಾಡಲಿ ಎಂಬುದಾಗಿದೆ ಎಂದರು. ನಮ್ಮ ರಾಜ್ಯದ ಯಾವುದೇ ದೇವಾಲಯಗಳಲ್ಲಿ ಅಂತಹ ಘಟನೆ ನಡೆದಿಲ್ಲ. ಆದರೂ ಮುಂಜಾಗ್ರತಾ ಕ್ರಮವಾಗಿ ರಾಜ್ಯದ…

Read More

ಬೆಂಗಳೂರು : “ರಸ್ತೆ ಗುಂಡಿ ಮುಚ್ಚುವ ಕಾಮಗಾರಿಯ ಗುಣಮಟ್ಟ ವೀಕ್ಷಣೆ ಮಾಡಲು ರಾತ್ರಿ ಸಂಚಾರ ನಡೆಸುತ್ತೇನೆ. ಎರಡು ಮೂರು ದಿನಗಳಲ್ಲಿ ದಿನಾಂಕ ತಿಳಿಸುತ್ತೇನೆ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದರು. ಸದಾಶಿವನಗರದ ನಿವಾಸದ ಬಳಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು “ಎಷ್ಟು ರಸ್ತೆಗುಂಡಿಗಳಿವೆ ಎಂಬುದರ ಬಗ್ಗೆ ನನ್ನ ಬಳಿ ಲೆಕ್ಕವಿದೆ. ಅಭಿಯಾನದ ರೀತಿ ಕೆಲಸ ಮಾಡಿದ್ದೇವೆ. ಇದು ಸಾಧನೆಯಲ್ಲ ಜವಾಬ್ದಾರಿ. ನನ್ನ 40 ವರ್ಷಗಳ ರಾಜಕೀಯ ಇತಿಹಾಸದಲ್ಲಿ ಆದೇಶ ಕೊಟ್ಟ ಮೇಲೆ ಅಧಿಕಾರಿಗಳು ಇಷ್ಟು ತ್ವರಿತವಾಗಿ ಕೆಲಸ ಮಾಡಿದ್ದನ್ನು ನಾನು ನೋಡಿರಲಿಲ್ಲ” ಎಂದು ಹೇಳಿದರು. “ರಸ್ತೆಗುಂಡಿಗಳನ್ನು ಮುಚ್ಚಿಸುವ ವಿಚಾರದಲ್ಲಿ ಬಿಬಿಎಂಪಿ ಅಧಿಕಾರಿಗಳು ಹಗಲು- ರಾತ್ರಿ ಕೆಲಸ ಮಾಡುತ್ತಿದ್ದಾರೆ. ಎಲ್ಲವನ್ನೂ ಗಮನದಲ್ಲಿಟ್ಟುಕೊಂಡು ಕೆಲಸ ಮಾಡಬೇಕು. ಮಧ್ಯೆ ಮಳೆ ಬಂದಿದೆ. ನೀವು (ಮಾಧ್ಯಮ)ಗಳು ಅಷ್ಟೋ, ಇಷ್ಟೊ ಕೆಲಸ ಮಾಡಿದ್ದಾರೆ ಎಂದು ವರದಿ ಮಾಡಿದ್ದೀರಿ. ನಾವು ಬದ್ಧತೆಯಿಂದ ನಾಗರೀಕರಿಗೆ ಅನುಕೂಲ ಮಾಡುವ ಕೆಲಸ ಮಾಡಿದ್ದೇವೆ” ಎಂದು ಹೇಳಿದರು. ಬೇರೆ ರಾಜ್ಯಗಳಿಗೆ ಅವಮಾನ ಮಾಡಲು ಇಷ್ಟವಿಲ್ಲ “ನಾನು ಬೇರೆ ರಾಜ್ಯಗಳಿಗೆಲ್ಲಾ…

Read More

ಬೆಂಗಳೂರು: ಕೆ ಎಸ್ ಆರ್ ಟಿ ಸಿ ಬಸ್ಸಿನಲ್ಲಿ ಟಿಕೆಟ್ ಇಲ್ಲದೇ ಪ್ರಯಾಣಿಸಿದಂತ ಪ್ರಯಾಣಿಕರಿಗೆ ನಿಗಮವು ಬಿಗ್ ಶಾಕ್ ನೀಡಿದೆ. 3,851 ಮಂದಿಯಿಂದ ಬರೋಬ್ಬರಿ 6.21 ಲಕ್ಷ ದಂಡವನ್ನು ವಸೂಲಿ ಮಾಡಿದೆ. ಈ ಕುರಿತು ಕೆ ಎಸ್ ಆರ್ ಟಿ ಸಿ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ಆಗಸ್ಟ್ -2024 ರ ಮಾಹೆಯಲ್ಲಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು ತನ್ನ ತನಿಖಾ ತಂಡಗಳಿಂದ ತಪಾಸಣಾ ಕಾರ್ಯವನ್ನು ಚುರುಕುಗೊಳಿಸಿ ನಿಗಮದ ವ್ಯಾಪ್ತಿಯಲ್ಲಿ ಸಂಚರಿಸುವ 43781 ವಾಹನಗಳನ್ನು ತನಿಖೆಗೊಳಪಡಿಸಿ 3692 ಪ್ರಕರಣಗಳನ್ನು ಪತ್ತೆಹಚ್ಚಿ, 3851 ಟಿಕೇಟ್ ರಹಿತ ಪ್ರಯಾಣಿಕರಿಂದ 6,21,383/- ರೂ ಗಳನ್ನು ದಂಡದ ರೂಪದಲ್ಲಿ ವಸೂಲಿ ಮಾಡಲಾಗಿದೆ ಎಂದಿದೆ. ನಿಗಮದ ಆದಾಯದಲ್ಲಿ ಸೋರಿಕೆ ಆಗುತ್ತಿದ್ದ 80,059/-ರೂ ಗಳನ್ನು ತನಿಖಾಧಿಕಾರಿಗಳು ಪತ್ತೆಹಚ್ಚಿದ್ದಾರೆ, ಹಾಗೂ ತಪ್ಪಿತಸ್ಥರ ವಿರುದ್ದ ಇಲಾಖಾ ರೀತ್ಯಾ ಸೂಕ್ತ ಶಿಸ್ತಿನ ಕ್ರಮವನ್ನು ಜರುಗಿಸಲಾಗಿದೆ ಎಂದು ತಿಳಿಸಿದೆ. ಆದ್ದರಿಂದ ಸಾರ್ವಜನಿಕ ಪ್ರಯಾಣಿಕರು, ಬಸ್ಸಿನಲ್ಲಿ ಪ್ರಯಾಣಿಸುವಾಗ ಸರಿಯಾದ ಟಿಕೇಟ್/ ಪಾಸ್ ಪಡೆದು ಪ್ರಯಾಣ ಮಾಡುವಂತೆ,…

Read More

ಮೈಸೂರು : ಸುಳ್ಳು ಸುದ್ದಿಗಳಿಗೆ ಬ್ರೇಕ್ ಹಾಕದಿದ್ದರೆ ಸಮಾಜದ ಪ್ರತಿಯೊಬ್ಬರ ನೆಮ್ಮದಿ ಹಾಳಾಗುತ್ತದೆ. ಯಾರೊಬ್ಬರೂ ನೆಮ್ಮದಿಯಾಗಿ ಬದುಕಲು ಸಾಧ್ಯವಾಗುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಎಚ್ಚರಿಸಿದರು.‌ ಮೈಸೂರು ಮಾನಸ ಗಂಗೋತ್ರಿಯ ರಾಣಿ ಬಹದ್ದೂರ್ ಸಭಾಂಗಣದಲ್ಲಿ ಜಿಲ್ಲಾ ಪತ್ರಕರ್ತರ ಸಂಘ ಆಯೋಜಿಸಿದ್ದ ಪತ್ರಿಕಾ ದಿನಾಚರಣೆಯನ್ನು ಉದ್ಘಾಟಿಸಿ, ಪ್ರಶಸ್ತಿ ವಿತರಿಸಿ ಮಾತನಾಡಿದರು. ವಾಕ್ ಸ್ವಾತಂತ್ರ್ಯ ನಮಗೆ ನಮ್ಮ‌ ಸಂವಿಧಾನ ನೀಡಿರುವ ಅತ್ಯುನ್ನತ ಮೌಲ್ಯ. ಸಂವಿಧಾನದ ಮೂರು ಅಂಗಗಳಿಗೆ ಅಪಾಯ ಬಂದರೆ ಸಮಾಜಕ್ಕೆ ಅಪಾಯ ಬಂದಂತೆ. ವಾಕ್ ಸ್ವಾತಂತ್ರ್ಯ ಆಚರಿಸುವ ಪತ್ರಿಕಾ ರಂಗಕ್ಕೆ ಯಾವ ನಿರ್ಬಂಧಗಳೂ ಇರಬಾರದು ಎನ್ನುವುದನ್ನು ಪಂಡಿತ್ ನೆಹರೂ ಅವರೂ ಬಹಳ ಒತ್ತಿ ಹೇಳಿದ್ದರು ಎಂದು ವಿವರಿಸಿದರು. ಸುಳ್ಳು ಸುದ್ದಿಗಳ ಅನಾಹುತಗಳಿಗೆ ಉದಾಹರಣೆ ನೀಡಿದ ಮುಖ್ಯಮಂತ್ರಿಗಳಯ, “ನಾನು ಸದನದಲ್ಲಿ ಮಾತನಾಡುವಾಗ ಹಿಂದಿನ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಆಡಿದ ಮಾತನ್ನು ನಾನು ಉದಾಹರಿಸಿದ್ದೆ. ” ಸಾಲ ಮನ್ನಾ ಮಾಡೋದಕ್ಕೆ ನಮ್ಮ ಬಳಿ ಪ್ರಿಂಟಿಂಗ್ ಮೆಷಿನ್ ಇದೆಯಾ” ಎಂದು ಯಡಿಯೂರಪ್ಪ ಅವರು ಸದನದಲ್ಲೇ ಹೇಳಿದ್ದರು. ಈ…

Read More

ಬೆಂಗಳೂರು: ಯುವ ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷವೂ ಸದಸ್ಯತ್ವ ಅಭಿಯಾನ ನಡೆಸುತ್ತಿದ್ದು, ಯುವ ಕಾಂಗ್ರೆಸ್ ಸದಸ್ಯತ್ವ ನೋಂದಣಿ ಸಂದರ್ಭದಲ್ಲಿ ಆಮಿಷ ಒಡ್ಡಲಾಗುತ್ತಿದೆ. ಬೆಳ್ಳಿ ಗಣೇಶನನ್ನು ನೀಡಿ ಸದಸ್ಯತ್ವ ಮಾಡಿಸಲಾಗುತ್ತಿದೆ ಎಂದು ಬಿಜೆಪಿ ಬೆಂಗಳೂರು ಉತ್ತರ ಜಿಲ್ಲಾಧ್ಯಕ್ಷ ಎಸ್. ಹರೀಶ್ ಅವರು ಟೀಕಿಸಿದರು. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ”ದಲ್ಲಿ ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ನೂರಾರು ವರ್ಷಗಳ ಇತಿಹಾಸ ಹೊಂದಿದ ಕಾಂಗ್ರೆಸ್ ಪಕ್ಷವು ಸಂಪೂರ್ಣ ದಿವಾಳಿಯಾಗಿದೆ. ಮುಂದಿನ ಪ್ರಜೆಗಳಿಗೆ ಆಮಿಷವೊಡ್ಡಿ ಅವರನ್ನು ಹಾಳು ಮಾಡಿ ಸದಸ್ಯತ್ವ ನೀಡುತ್ತಿದ್ದಾರೆ ಎಂದು ದೂರಿದರು. ಈಚೆಗೆ ಡಿ.ಕೆ.ಶಿವಕುಮಾರ್ ಅವರು ಅಮೆರಿಕದಲ್ಲಿ ಕಮಲಾ ಹ್ಯಾರಿಸ್ ಅವರ ಜೊತೆ ಇದ್ದುದನ್ನು ನೋಡಿದ್ದೇನೆ. ಡಿ.ಕೆ.ಶಿವಕುಮಾರ್ ಅವರು ಆಮಿಷವೊಡ್ಡಿ ಸದಸ್ಯತ್ವ ಮಾಡಿದ್ದನ್ನು ತಿಳಿಸಿ ಮತಗಳಿಕೆ ಕುರಿತು ತಮ್ಮ ಸಲಹೆ ನೀಡಲು ಅಮೆರಿಕಕ್ಕೆ ಹೋಗಿರಬಹುದೆಂಬ ಅನುಮಾನ ಮೂಡುತ್ತಿದೆ ಎಂದು ತಿಳಿಸಿದರು. ಗಣಪತಿ ವಿಗ್ರಹ ವಿಸರ್ಜನೆ ಸಂದರ್ಭದಲ್ಲಿ ಇವರ ‘ಬ್ರದರ್ಸ್’ ಬಿಟ್ಟು ಚಪ್ಪಲಿಯಲ್ಲಿ ಹೊಡೆಸುತ್ತಿದ್ದಾರೆ. ಕಲ್ಲು ಎಸೆಯುತ್ತಿದ್ದು, ಪೆಟ್ರೋಲ್ ಬಾಂಬ್ ಹಾಕುತ್ತಿದ್ದಾರೆ. ಇನ್ನೊಂದೆಡೆ…

Read More

ಬೆಂಗಳೂರು: ಈಗಾಗಲೇ ಪೋಕ್ಸೋ ಕೇಸಲ್ಲಿ ಸಂಕಷ್ಟ ಎದುರಿಸುತ್ತಿರುವಂತ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪಗೆ ಮತ್ತೊಂದು ಶಾಕ್ ನೀಡಲಾಗಿದೆ. ಅದೇ ಅಕ್ರಮ ಡಿನೋಟಿಫಿಕೇಷನ್ ಕೇಸಲ್ಲಿ ಲೋಕಾಯುಕ್ತದಿಂದ ಸಮನ್ಸ್ ಜಾರಿಗೊಳಿಸಲಾಗಿದೆ. ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಹಾಗೂ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ವಿರುದ್ಧ ಸಚಿವ ಕೃಷ್ಣಭೈರೇಗೌಡ ಸೇರಿದಂತೆ ವಿವಿಧ ಸಚಿವರು ಅಕ್ರಮ ಡಿನೋಟಿಫಿಕೇಷನ್ ಆರೋಪ ಮಾಡಿದ್ದರು. ಅಲ್ಲದೇ ಅದಕ್ಕೆ ಸಂಬಂಧಿಸಿದಂತೆ ದಾಖಲೆಗಳನ್ನು ಬಿಡುಗಡೆ ಮಾಡಿದ್ದರು. ಈ ಬೆನ್ನಲ್ಲೇ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರ ವಿರುದ್ಧದ ಡಿನೋಟಿಫಿಕೇಷನ್ ಹಗರಣ ಸಂಬಂಧ ವಿಚಾರಣೆಗೆ ಹಾಜರಾಗುವಂತೆ ಲೋಕಾಯುಕ್ತದಿಂದ ಸಮನ್ಸ್ ಜಾರಿಗೊಳಿಸಲಾಗಿದೆ. ಅಂದಹಾಗೇ ಅಕ್ರಮ ಡಿನೋಟಿಫಿಕೇಷ್ ಆರೋಪದಲ್ಲಿ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಎ.1 ಆರೋಪಿಯಾಗಿ ಮಾಡಲಾಗಿದೆ. ಬೆಂಗಳೂರಿನ ಗಂಗಾನಗರದಲ್ಲಿ 1 ಎಕರೆಗೂ ಹೆಚ್ಚು ಭೂಮಿಯನ್ನು ಸತ್ತವರ ಹೆಸರಿನಲ್ಲಿ ಹೆಚ್.ಡಿ ಕುಮಾರಸ್ವಾಮಿ ಹಾಗೂ ಬಿಎಸ್ ಯಡಿಯೂರಪ್ಪ ಅವರು ಅಕ್ರಮವಾಗಿ ಡಿನೋಟಿಫಿಕೇಷನ್ ಮಾಡಿದಂತ ಆರೋಪ ಎದುರಿಸುತ್ತಿದ್ದಾರೆ. https://kannadanewsnow.com/kannada/bbmp-installs-microchip-for-stray-dogs-in-bengaluru/ https://kannadanewsnow.com/kannada/nipah-scare-rises-in-bengaluru-one-person-diagnosed-with-symptoms-41-under-home-quarantine/

Read More