Author: ವಸಂತ ಬಿ ಈಶ್ವರಗೆರೆ

ವಸಂತ ಬಿ ಈಶ್ವರಗೆರೆ (Vasantha B Eshwaragere) ಅವರು ಕರ್ನಾಟಕದ ಪತ್ರಕರ್ತರು ಮತ್ತು ಕವಿ. ಉದಯ ನ್ಯೂಸ್, ಟಿವಿ5 ಕನ್ನಡ ಸೇರಿದಂತೆ ವಿವಿಧ ಸುದ್ದಿ ಮಾಧ್ಯಮಗಳಲ್ಲಿ ಸುಮಾರು 15 ವರ್ಷಗಳ ಅನುಭವವನ್ನು ಹೊಂದಿದ್ದಾರೆ. ಪ್ರಸ್ತುತ ಅವರು Kannada News Now ಡಿಜಿಡಿಲ್‌ ಮಾಧ್ಯಮದಲ್ಲಿ ಸಂಪಾದಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಇವರು ತಾಜಾ ಸುದ್ದಿ, ಸಾಹಿತ್ಯ, ಸಾಮಾಜಿಕ ವರದಿಗಾರಿಕೆ, ನ್ಯಾಯಾಂಗ ಸಂಬಂಧಿತ ವರದಿ ಮತ್ತು ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿದ ಸುದ್ದಿಗಳ ವರದಿಯಲ್ಲಿ ಸಕ್ರಿಯರಾಗಿದ್ದಾರೆ. ಗುಡವಿ ಪಕ್ಷಿಧಾಮದಂತಹ ಪ್ರವಾಸಿ ತಾಣಗಳ ಕುರಿತು ಲೇಖನಗಳನ್ನು ಬರೆದಿದ್ದಾರೆ.

ವಿಜಯಪುರ: ಜಿಲ್ಲೆಯ ಭೀಮಾತೀರದಲ್ಲಿ ನಡೆದ್ದಂತ ಬಾಗಪ್ಪ ಹರಿಜನ ಹತ್ಯೆ ಪ್ರಕರಣ ಸಂಬಂಧ ನಾಲ್ವರು ಆರೋಪಿಗಳ್ನು ಬಂಧಿಸಲಾಗಿತ್ತು. ಹೆಚ್ಚಿನ ವಿಚಾರಣೆಗಾಗಿ ಕೋರ್ಟ್ ಐವರು ಆರೋಪಿಗಳನ್ನು ಐದು ದಿನಗಳ ಕಾಲ ಪೊಲೀಸರ ವಶಕ್ಕೆ ನೀಡಿ ಆದೇಶಿಸಿದೆ. ಕಳೆದ 2 ದಿನಗಳ ಹಿಂದೆ ವಿಜಯಪುರ ನಗರದ ಮದೀನಾ ನಗರದಲ್ಲಿ ಭೀಮಾತೀರದ ಹಂತಕ ಬಾಗಪ್ಪ ಹರಿಜನ್ ನನ್ನು ಭೀಕರವಾಗಿ ಕೊಲೆಗಯ್ಯಲಾಗಿತ್ತು. ಈ ಹತ್ಯೆ ಸಂಬಂಧ ಪೊಲೀಸರು ಆರೋಪಿ ಪಿಂಟ್ಯಾ ಸೇರಿದಂತೆ ನಾಲ್ವರು ಆರೋಪಿಗಳನ್ನು ಬಂಧಿಸಿದ್ದರು. ವಿಜಯಪುರದ ಗಾಂಧಿಚೌಕ್ ನ ಪೊಲೀಸರು ಪಿಂಟ್ಯಾ ಸೇರಿದಂತೆ ನಾಲ್ವರು ಅರೋಪಿಗಳನ್ನು ಬಂಧಿಸಿದ್ದರು. ಬಂಧಿತ ಆರೋಪಿಗಳನ್ನ ಪ್ರಕಾಶ್​ ಅಲಿಯಾಸ್​ ಪಿಂಟ್ಯಾ ಅಗರಖೇಡ್ (25), ರಾಹುಲ್ ತಳಕೇರಿ (20), ಗದಿಗೆಪ್ಪ ಅಲಿಯಾಸ್ ಮನಿಕಂಠ ದನಕೊಪ್ಪ (27), ಎ4 ಸುದೀಪ್ ಕಾಂಬಳೆ (23) ಎಂದು ಎಂದು ಎಸ್​ಪಿ ಲಕ್ಷ್ಮಣ ನಿಂಬರಗಿ ತಿಳಿಸಿದ್ದರು. ಬಂಧಿತ ಆರೋಪಿಗಳನ್ನು ವಿಜಯಪುರದ 2ನೇ ಹೆಚ್ಚುವರಿ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದರು. ಅಲ್ಲದೇ ವಿಚಾರಣೆಗಾಗಿ ತಮ್ಮ ವಶಕ್ಕೆ ನೀಡುವಂತೆ ಕೋರಿದ್ದರು. ಈ ಮನವಿ ಪುರಸ್ಕರಿಸಿದಂತ ಕೋರ್ಟ್,…

Read More

ಚಿಕ್ಕಮಗಳೂರು: ಜಿಲ್ಲೆಯ ಗೌರಿಗದ್ಧೆ ಗ್ರಾಮದಲ್ಲಿರುವಂತ ಗೋಶಾಲೆಯಲ್ಲಿ ಭೀಕರ ಬೆಂಕಿ ಅವಘಡ ಉಂಟಾಗಿದೆ. ಆಕಸ್ಮಿಕ ಬೆಂಕಿ ಅವಘಡದಿಂದಾಗಿ ಗೋವುಗಳಿಗೆ ಸಂಗ್ರಹಿಸಿದ್ದಂತ ಮೇವು ಧಗಧಗಿಸಿ ಹೊತ್ತಿ ಉರಿಯುತ್ತಿದೆ.  ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲ್ಲೂಕಿನ ಗೌರಿಗದ್ಧೆ ಗ್ರಾಮದಲ್ಲಿನ ಗೋಶಾಲೆಯಲ್ಲಿ ಭೀಕರ ಅಗ್ನಿ ಅವಘಡ ಉಂಟಾಗಿದೆ. ಗೋವಿಗೆ ಹಾಕಲು ಸಂಗ್ರಹಿಸಿದ್ದಂತ ಮೇವಿಗೆ ಬೆಂಕಿ ತಗುಲಿ ಹೊತ್ತಿ ಉರಿಯುತ್ತಿದೆ. ಗೋ ಶಾಲೆಗೂ ಬೆಂಕಿ ತಗುಲಿದ್ದು, ಗೋವುಗಳನ್ನು ರಕ್ಷಿಸಲಾಗಿದೆ. ಇನ್ನೂ ಸ್ಥಳಕ್ಕೆ ಆಗಮಿಸಿರುವಂತ ಅಗ್ನಿಶಾಮಕ ಸಿಬ್ಬಂದಿಗಳು ಬೆಂಕಿ ನಂದಿಸಲು ಹರಸಾಹಸ ಪಡುತ್ತಿದ್ದಾರೆ. ಬೆಂಕಿಯ ಕೆನ್ನಾಲಿಗೆಯಿಂದ ಸುಮಾರು 12 ಲಕ್ಷ ಮೌಲ್ಯದ ಮೇವು ಸುಟ್ಟು ಭಸ್ಮವಾಗಿದೆ. ಈ ಸಂಬಂಧ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ. https://kannadanewsnow.com/kannada/indias-first-vertical-lifting-bridge-ready-for-inauguration-know-whats-special/ https://kannadanewsnow.com/kannada/breaking-big-shock-for-coffee-lovers-price-hike-by-rs-5-soon-coffee-prices-hike/

Read More

ಚಿಕ್ಕಮಗಳೂರು: ರಾಜ್ಯದಲ್ಲಿ ಮತ್ತೆ ಮಂಗನ ಕಾಯಿಲೆ ಆರ್ಭಟಿಸುತ್ತಿದೆ. ಜೊತೆ ಜೊತೆಗೆ ಜನರಲ್ಲಿ ಆತಂಕಕ್ಕೂ ಕಾರಣವಾಗಿದೆ. ಕಾಫಿನಾಡು ಚಿಕ್ಕಮಗಳೂರಲ್ಲಿ ಇಂದು ಒಂದೇ ದಿನ ನಾಲ್ವರಿಗೆ ಮಂಗನ ಕಾಯಿಲೆ ದೃಢಪಟ್ಟಿದೆ. ಈ ಕುರಿತಂತೆ ಜಿಲ್ಲಾ ಆರೋಗ್ಯ ಇಲಾಖೆಯಿಂದ ಮಾಹಿತಿ ನೀಡಿದ್ದು, ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ಹಾಗೂ ಎನ್ ಆರ್ ಪುರ ವ್ಯಾಪ್ತಿಯಲ್ಲಿ ಇಂದು ನಾಲ್ವರಿಗೆ ಮಂಗನಕಾಯಿಲೆ ದೃಢಪಟ್ಟಿರುವುದಾಗಿ ತಿಳಿಸಿದೆ. ಮಂಗನಕಾಯಿಲೆಯಿಂದ ಬಳಲುತ್ತಿರುವಂತ ಜನರಿಗೆ ಕೊಪ್ಪದ ಸರ್ಕಾರಿ ಆಸ್ಪತ್ರೆಯಲ್ಲಿ ವಿಶೇಷ ವಾರ್ಡ್ ತೆರೆದು, ಚಿಕಿತ್ಸೆ ನೀಡಲಾಗುತ್ತಿದೆ. ಈವರೆಗೆ ಮಂಗನಕಾಯಿಲೆಗೆ ಒಳಗಾದವರ ಸಂಖ್ಯೆ 18ಕ್ಕೆ ಏರಿಕೆಯಾಗಿದೆ. ಇನ್ನೂ ಮಂಗನ ಕಾಯಿಲೆ ಹೆಚ್ಚಾಗಿರುವ ಕಾರಣ, ಜನರಿಗೆ ಕಾಡಿಗೆ ಹೋಗದಂತೆ ಆರೋಗ್ಯ ಇಲಾಖೆ ಸೂಚಿಸಿದೆ. ಜೊತೆಗೆ ಮಂಗನ ಕಾಯಿಲೆ ತಡೆಯ ಸಂಬಂಧ ಜನರ ರಕ್ತದ ಮಾದರಿಯನ್ನು ಸಂಗ್ರಹಿಸಿ, ಪರೀಕ್ಷೆಗೆ ಕಳುಹಿಸಲಾಗಿದೆ. https://kannadanewsnow.com/kannada/good-news-for-students-who-were-waiting-for-caste-income-certificate-domicile-certificate/ https://kannadanewsnow.com/kannada/indias-first-vertical-lifting-bridge-ready-for-inauguration-know-whats-special/

Read More

ಕಾರವಾರ: 10 ಸಾವಿರ ಲಂಚ ಸ್ವೀಕರಿಸುತ್ತಿದ್ದಂತ ಸಂದರ್ಭದಲ್ಲೇ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದು, ನಗರ ಯೋಜನಾ ಸದಸ್ಯನನ್ನು ರೆಡ್ ಹ್ಯಾಂಡ್ ಆಗಿಯೇ ಬಲೆಗೆ ಕೆಡೆವಿದ್ದಾರೆ. ಕಾರವಾರದ ನಗರಾಭಿವೃದ್ಧಿ ಪ್ರಾಧಿಕಾರದ ಸದಸ್ಯ ಶಿವಾನಂದ ತಾಮ್ರಣ್ಣನವರ ಪ್ರಶಾಂತ ನಾಯಕ ಎಂಬುವರಿಗೆ ಭೂ ಪರಿವರ್ತನೆಗಾಗಿ ಲಂಚಕ್ಕೆ ಬೇಡಿಕೆ ಇಟ್ಟಿದ್ದನು. ಈ ಸಂಬಂಧ ಪ್ರಶಾಂತ ನಾಯಕ ಅವರು ಲೋಕಾಯುಕ್ತಕ್ಕೆ ದೂರು ನೀಡಿದ್ದರು. ಇಂದು ಕಾರವಾರ ನಗರಾಭಿವೃದ್ಧಿ ಪ್ರಾಧಿಕಾರದ ಸದಸ್ಯ ಶಿವಾನಂದ ತಾಮ್ರಣ್ಣನವರ ಪ್ರಶಾಂತ ನಾಯಕರಿಂದ 10,000 ಲಂಚ ಸ್ವೀಕರಿಸುತ್ತಿದ್ದಾಗಲೇ ಲೋಕಾಯುಕ್ತ ಎಸ್ಪಿ ಕುಮಾರ ಚಂದ್ ನೇತೃತ್ವದಲ್ಲಿ ದಾಳಿ ನಡೆಸಿದ್ದಾರೆ. ಆ ಮೂಲಕ ರೆಡ್ ಹ್ಯಾಂಡ್ ಆಗಿಯೇ ಹಿಡಿದಿದ್ದಾರೆ. https://kannadanewsnow.com/kannada/udayagiri-police-station-stone-pelting-case-cm-siddaramaiah-says-action-will-be-taken-against-culprits/ https://kannadanewsnow.com/kannada/indias-first-vertical-lifting-bridge-ready-for-inauguration-know-whats-special/

Read More

ಬೆಂಗಳೂರು: ಮೈಸೂರಿನ ಉದಯಗಿರಿ ಪೊಲೀಸ್ ಠಾಣೆಯ ಮೇಲೆ ಕಲ್ಲು ತೂರಾಟ ಪ್ರಕರಣದಲ್ಲಿ ಭಾಗಿಯಾಗಿರುವಂತ ತಪ್ಪಿತಸ್ಥರ ವಿರುದ್ಧ ಮುಲಾಜಿಲ್ಲದೇ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ ಅಂತ ಮುಖ್ಯಮಂತ್ರಿ ಸಿದ್ಧರಾಮಯ್ಯ ತಿಳಿಸಿದ್ದಾರೆ. ಮೈಸೂರು ಉದಯಗಿರಿ ಘಟನೆಗೆ ಸಂಬಂಧಪಟ್ಟಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಾವೇರಿ ನಿವಾಸದಲ್ಲಿ ಸಭೆ ನಡೆಸಿದರು. ಮೈಸೂರು ಜಿಲ್ಲಾಧಿಕಾರಿ, ಜಿಲ್ಲಾ ರಕ್ಷಣಾಧಿಕಾರಿ, ಮೈಸೂರು ಪೊಲೀಸ್ ಆಯುಕ್ತರು ಮತ್ತು ರಾಜ್ಯ ಪೊಲೀಸ್ ಮಹಾ ನಿರ್ದೇಶಕರು ಸಭೆಯಲ್ಲಿ ಭಾಗವಹಿಸಿದ್ದರು. ಸಭೆಯಲ್ಲಿ ಮುಖ್ಯಮಂತ್ರಿಗಳು ನೀಡಿದ ಸೂಚನೆಗಳು… *ತಪ್ಪುತಸ್ಥರು ಯಾರೇ ಇದ್ದರೂ ಮುಲಾಜಿಲ್ಲದೆ ಕಾನೂನು ಕ್ರಮ ಜರುಗಿಸಬೇಕು. *ಕಾನೂನು ಕೈಗೆ ಎತ್ತಿಕೊಂಡ ಪ್ರತಿಯೊಬ್ಬರನ್ನೂ ಪತ್ತೆಹಚ್ಚಿ ಕಾನೂನು ಕ್ರಮಕ್ಕೆ ಒಳಪಡಿಸಬೇಕು. *ಅಮಾಯಕರಿಗೆ ತೊಂದರೆ ಕೊಡಬಾರದು. *ಮುಂದೆ ಇಂಥಾ ಘಟನೆಗಳು ಮರುಕಳಿಸದಂತೆ ಕಟ್ಟೆಚ್ಚರ ವಹಿಸಬೇಕು. *ಕಾನೂನು ಸುವ್ಯವಸ್ಥೆಗೆ ಭಂಗ ತರುವ ಪ್ರಯತ್ನ ಮಾಡಿದ ಎಲ್ಲರನ್ನೂ ಕಾನೂನು ಕ್ರಮಕ್ಕೆ ಒಳಪಡಿಸಬೇಕು. *ಪೊಲೀಸ್ ಠಾಣೆ ಮೇಲೆ ಕಲ್ಲು ತೂರಿದವರು, ಇದಕ್ಕೆ ಪ್ರಚೋದನೆ ನೀಡಿದ ಎಲ್ಲರನ್ನೂ ಪತ್ತೆಹಚ್ಚಿ ಕಾನೂನು ಕ್ರಮಕ್ಕೆ ಒಳಪಡಿಸಿ ಎಂಬುದಾಗಿ ಖಡಕ್ ಸೂಚನೆಯನ್ನು ಸಿಎಂ…

Read More

ನವದೆಹಲಿ: ಮುಂದಿನ ಮುಖ್ಯ ಚುನಾವಣಾ ಆಯುಕ್ತರ ಹೆಸರನ್ನು ಅಂತಿಮಗೊಳಿಸಲು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಆಯ್ಕೆ ಸಮಿತಿ ಮುಂದಿನ ವಾರದ ಆರಂಭದಲ್ಲಿ ಸಭೆ ಸೇರಲಿದೆ ಎಂದು ಮೂಲಗಳು ಶುಕ್ರವಾರ ತಿಳಿಸಿವೆ. ಈ ಸಮಿತಿಯಲ್ಲಿ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಮತ್ತು ಪ್ರಧಾನಿಯಿಂದ ನಾಮನಿರ್ದೇಶನಗೊಂಡ ಕೇಂದ್ರ ಕ್ಯಾಬಿನೆಟ್ ಸಚಿವರು ಇದ್ದಾರೆ. ಹಾಲಿ ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ರಾಜೀವ್ ಕುಮಾರ್ ಅವರು ಫೆಬ್ರವರಿ 18 ರಂದು ನಿವೃತ್ತರಾಗುವ ಮೊದಲು ಸಮಿತಿಯು ಭಾನುವಾರ ಅಥವಾ ಸೋಮವಾರ ಸಭೆ ಸೇರುವ ಸಾಧ್ಯತೆ ಇದೆ. ಶೋಧನಾ ಸಮಿತಿಯು ಶಾರ್ಟ್ ಲಿಸ್ಟ್ ಮಾಡಿದ ಅಭ್ಯರ್ಥಿಗಳ ಪೈಕಿ ಒಬ್ಬರ ಹೆಸರನ್ನು ಇದು ಶಿಫಾರಸು ಮಾಡುತ್ತದೆ. ನಂತರ ರಾಷ್ಟ್ರಪತಿಗಳು ಶಿಫಾರಸಿನ ಆಧಾರದ ಮೇಲೆ ಮುಂದಿನ ಸಿಇಸಿಯನ್ನು ನೇಮಕ ಮಾಡುತ್ತಾರೆ. ರಾಜೀವ್ ಕುಮಾರ್ ನಂತರ ಜ್ಞಾನೇಶ್ ಕುಮಾರ್ ಅತ್ಯಂತ ಹಿರಿಯ ಚುನಾವಣಾ ಆಯುಕ್ತರಾಗಿದ್ದಾರೆ. ಅವರ ಅಧಿಕಾರಾವಧಿ ಜನವರಿ 26, 2029 ರವರೆಗೆ ಇರುತ್ತದೆ. ಸುಖ್ಬೀರ್ ಸಿಂಗ್ ಸಂಧು ಅವರು ಮತ್ತೊಬ್ಬ…

Read More

ಬೆಂಗಳೂರು: ನಾಲ್ಕು ದಿನಗಳ ಕಾಲ ಇಲ್ಲಿ ನಡೆದ ಜಾಗತಿಕ ಹೂಡಿಕೆದಾರರ ಸಮಾವೇಶದ ಮೂಲಕ ಸದ್ಯಕ್ಕೆ ರಾಜ್ಯಕ್ಕೆ 10,27,378 ಕೋಟಿ ರೂಪಾಯಿ ಬಂಡವಾಳ ಹೂಡಿಕೆ ಮತ್ತು 6 ಲಕ್ಷ ಉದ್ಯೋಗ ಸೃಷ್ಟಿ ಖಾತ್ರಿಯಾಗಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವ ಎಂ ಬಿ ಪಾಟೀಲ ಶುಕ್ರವಾರ ಹೇಳಿದ್ದಾರೆ. ಸಮಾವೇಶಕ್ಕೆ ತೆರೆ ಬಿದ್ದ ಬಳಿಕ ಅವರು ಅರಮನೆ ಆವರಣದಲ್ಲಿ ಪತ್ರಿಕಾಗೋಷ್ಠಿಯಲ್ಲಿ ವಲಯವಾರು ಅಂಕಿಅಂಶಗಳ ಸಮೇತ ಮಾಹಿತಿ ನೀಡಿದರು. ಜತೆಯಲ್ಲಿ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಉಪಸ್ಥಿತರಿದ್ದರು. ಹೂಡಿಕೆದಾರರ ಸಮಾವೇಶದ ಸಾಧನೆಗಳ ಬಗ್ಗೆ ಮಾತನಾಡಿದ ಸಚಿವರು, `ಇನ್ನೂ ಕೆಲವು ಪ್ರತಿಷ್ಠಿತ ಕಂಪನಿಗಳು ಭಾರೀ ಹೂಡಿಕೆಗೆ ಆಸಕ್ತಿ ತೋರಿದ್ದು, ಒಡಂಬಡಿಕೆ ಪ್ರಕ್ರಿಯೆ ಪ್ರಗತಿಯಲ್ಲಿದೆ. ಇವು ಆಖೈರಾದರೆ ಸಮಾವೇಶದ ಮೂಲಕ ಬರಲಿರುವ ಬಂಡವಾಳದ ಮೊತ್ತ ಇನ್ನೂ ಗಮನಾರ್ಹವಾಗಿ ಏರಲಿದೆ. ಈಗ ಖಾತ್ರಿಯಾಗಿರುವ ಹೂಡಿಕೆಯಲ್ಲಿ ಶೇಕಡ 75ರಷ್ಟು ಬೆಂಗಳೂರಿನ ಆಚೆ ಇರುವ ಪ್ರದೇಶಗಳಿಗೆ ಹೋಗಲಿದ್ದು, ಶೇಕಡ 45ರಷ್ಟು ಬಂಡವಾಳವು ಉತ್ತರ ಕರ್ನಾಟಕದ ಪ್ರದೇಶಗಳಿಗೆ ಹರಿಯಲಿದೆ’ ಎಂದರು. ಸೃಷ್ಟಿಯಾಗಲಿರುವ 6…

Read More

ವಿಜಯನಗರ: ತುಂಬಿದ ಕೊಡ ತುಳುಕೀತಲೇ ಪರಾಕ್ ಎಂಬುದಾಗಿ ಶ್ರೀ ಮೈಲಾರ ಲಿಂಗೇಶ್ವರದಲ್ಲಿ ವರ್ಷದ ಭವಿಷ್ಯವೆಂದೇ ಹೇಳಲಾಗುವಂತ ಕಾರ್ಣಿಕ ನುಡಿಯನ್ನು ನುಡಿಯಲಾಗಿದೆ. ವಿಜಯನಗರದ ಹೂವಿನಹಡಗಲಿಯಲ್ಲಿನ ಶ್ರೀ ಮೈಲಾರ ಲಿಂಗೇಶ್ವರದ ಜಾತ್ರೆಯ ಪ್ರಯುಕ್ತ ಪ್ರತಿ ವರ್ಷದಂತೆ ಈ ಬಾರಿಯೂ ಕಾರ್ಣಿಕ ನುಡಿಯನ್ನು ರಾಮಣ್ಣ ಗೊರವಯ್ಯ ನುಡಿದಿದ್ದಾರೆ. ತುಂಬಿದ ಕೊಡ ತುಳುಕೀತಲೇ ಪರಾಕ್ ಎಂಬುದು ಈ ವರ್ಷದ ಕಾರ್ಣಿಕ ನುಡಿಯಾಗಿದೆ. ರಾಮಣ್ಣ ಗೊರವಯ್ಯ ನುಡಿದಂತ ತುಂಬಿದ ಕೊಡ ತುಳುಕೀತಲೇ ಪರಾಕ್ ಕಾರ್ಣಿಕ ನುಡಿಯನ್ನು ವೆಂಕಪ್ಪಯ್ಯ ಒಡೆಯರು ವಿಶ್ಲೇಷಣೆ ಮಾಡಿದ್ದು, ಈ ವರ್ಷ ರಾಜ್ಯ, ದೇಶದಲ್ಲಿ ಉತ್ತಮ ಮಳೆ ಬೆಳೆಯಾಗಲಿದೆ. ರೈತರಿಗೆ ಕೈತುಂಬ ಬೆಳೆ ಬರುವುದಾಗಿ ಅರ್ಥ ಎಂಬುದಾಗಿ ತಿಳಿಸಿದ್ದಾರೆ. https://kannadanewsnow.com/kannada/indias-first-vertical-lifting-bridge-ready-for-inauguration-know-whats-special/ https://kannadanewsnow.com/kannada/breaking-big-shock-for-coffee-lovers-price-hike-by-rs-5-soon-coffee-prices-hike/

Read More

ವಿಜಯನಗರ: ಜಿಲ್ಲೆಯ ಪ್ರಸಿದ್ಧ ಧಾರ್ಮಿಕ ಕ್ಷೇತ್ರಗಳಲ್ಲಿ ಒಂದಾಗಿರುವಂತ ಶ್ರೀ ಮೈಲಾರ ಲಿಂಗೇಶ್ವರನ ಸನ್ನಿಧಿಯಲ್ಲಿ ವರ್ಷದ ಭವಿಷ್ಯ ವಾಣಿಯಾದಂತ ಕಾರ್ಣಿಕ ನುಡಿಯನ್ನು ನುಡಿಯಲಾಗಿದೆ. ಗೊರವಯ್ಯ ತುಂಬಿದ ಕೊಡ ತುಳುಕೀತಲೇ ಪರಾಕ್ ಎಂಬುದಾಗಿ ಕಾರ್ಣಿಕ ನುಡಿ ನುಡಿದಿದ್ದಾರೆ. ವಿಜಯನಗರ ಜಿಲ್ಲೆಯ ಹೂವಿನಹಡಗಲಿಯ ಶ್ರೀ ಕ್ಷೇತ್ರ ಮೈಲಾರ ಲಿಂಗೇಶ್ವರ ಜಾತ್ರೆಯನ್ನು ಇಂದು ನಡೆಸಲಾಯಿತು. ಈ ಬಾರಿ ರಾಮಣ್ಣ ಗೊರವಯ್ಯ ವರ್ಷದ ಭವಿಷ್ಯವಾಣಿ ನುಡಿದಿದ್ದಾರೆ. ತುಂಬೀದ ಕೊಡ ತುಳುಕೀತಲೇ ಪರಾಕ್ ಅಂತ ಕಾರ್ಣಿಕ ನುಡಿದಿದ್ದಾರೆ. ಇದನ್ನು ವೆಂಕಪ್ಪಯ್ಯ ಒಡೆಯರ್ ವಿಶ್ಲೇಷಿಸಿದ್ದು, ರಾಜ್ಯ, ದೇಶದಲ್ಲಿ ಉತ್ತಮ ಮಳೆ ಬೆಳೆಯಾಗಲಿದೆ ಎಂಬುದಾಗಿ ಅರ್ಥವಾಗಿದೆ ಎಂದಿದ್ದಾರೆ. ಒಟ್ಟಾರೆ ಈ ಭಾರಿ ರಾಜ್ಯ, ದೇಶದಲ್ಲಿ ತುಂಬಿದ ಕೊಡ ತುಳುಕೀತಲೇ ಪರಾಕ್ ಎನ್ನುವಂತೆ ಉತ್ತಮ ಮಳೆ ಬೆಳೆಯಾಗಲಿದೆ ಎಂಬುದಾಗಿ ಶ್ರೀ ಮೈಲಾರ ಲಿಂಗೇಶ್ವರ ಕಾರ್ಣಿಕ ನುಡಿಯನ್ನು ನುಡಿಯಲಾಗಿದೆ. https://kannadanewsnow.com/kannada/invest-karnataka-2025-conclave-to-invest-rs-10-27-lakh-crore-in-karnataka-dk-shivakumar/ https://kannadanewsnow.com/kannada/indias-first-vertical-lifting-bridge-ready-for-inauguration-know-whats-special/

Read More

ಇನ್ನು ಜೀವನದಲ್ಲಿ ಕಷ್ಟಗಳು ಇದ್ದರೆ,ಶ್ರೀ ಆಂಜನೇಯ ಸ್ವಾಮಿಗೆ ಈ ರೀತಿಯಾಗಿ  ಹರಕೆ ಮಾಡಿಕೊಂಡರೆ ,ಜೀವನದಲ್ಲಿ ಇರುವಂತಹ ಇಂತಹ ಕಷ್ಟಗಳುಇದು ಯಾವ ರೀತಿಯ ಕಷ್ಟವೇ ಆದರೂ ಸರಿ ಆಂಜನೇಯಸ್ವಾಮಿ ಕೃಪೆಯಿಂದ ಎಲ್ಲಾ ಕಷ್ಟಗಳು  ಜೀವನದಲ್ಲಿ ಪರಿಹಾರವಾಗುತ್ತದೆ. ಪಂಡಿತ್  ವಿದ್ಯಾಧರ್ ನಕ್ಷತ್ರಿ ಪ್ರಧಾನ ಅರ್ಚಕರು ಹಾಗೂ ಮಾಂತ್ರಿಕರು 9686268564 ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತುಪ್ರಶ್ನೆಗಳಿಗೆ ಉತ್ತರಿಸೃಬಹುದು ಏಷ್ಟೇ ಪೂಜೆ ಪ್ರಯತ್ನಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇ ಘೋರ ನಿಗೂಢ ಗುಪ್ತಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ ಧನವಶ ಜನವಶ, ಶತ್ರುನಾಶ, ಸ್ತ್ರೀ– ಪುರುಷ ವಶೀಕರಣ, ದಿಗ್ಭಂಧನ, ಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ ಶ್ರೀ ಕ್ಷೇತ್ರ ಕಟೀಲು ರಕ್ತೇಶ್ವರೀ ದೇವಿಯ ವಿಶೇಷ ಪೂಜಾದೈವಿಕ ವಿಧಿವಿಧಾನದಿಂದ ಪರಿಹಾರ ತಿಳಿಸುತ್ತಾರೆ ಶ್ರೀ ವಿದ್ಯಾಧರ್ ನಕ್ಷತ್ರಿ ಪ್ರಧಾನ್ ತಾಂತ್ರಿಕ್ 9686268564 ಎಲ್ಲಾ ಸಂಕಷ್ಟಗಳು ದೂರವಾಗುವುದು ಖಚಿತ. ಸಾಕ್ಷಾತ್ ಶ್ರೀರಾಮ…

Read More