Subscribe to Updates
Get the latest creative news from FooBar about art, design and business.
Author: kannadanewsnow09
ಅಕ್ಷಯ ತೃತೀಯ ಎಂದಾಕ್ಷಣ ನಮಗೆ ಮೊದಲು ನೆನಪಿಗೆ ಬರುವುದು ಚಿನ್ನವನ್ನು ಖರೀದಿಸುವುದು. ಈ ಅಕ್ಷಯ ತೃತಿಯ ದಿನದಂದು ಕುಬೇರನ ತಾಯಿ ಮಹಾಲಕ್ಷ್ಮಿ ಆಶೀರ್ವಾದ ಪಡೆದಳು ಎಂಬ ಪ್ರತೀತಿಯೂ ಇದೆ. ಈ ದಿನ ತಾಯಿ ಮಹಾಲಕ್ಷ್ಮಿಯನ್ನು ಪೂಜಿಸುವಷ್ಟೇ ಮಹತ್ವವನ್ನು ಈ ದಿನ ಕುಬೇರನಿಗೆ ನೀಡಬೇಕು. ಈ ದಿನದಂದು ನೀವು ಈ ಒಂದು ಸರಳ ಪರಿಹಾರವನ್ನು ಮಾಡಿದರೆ, ಸಂಪತ್ತಿನ ಅಧಿಪತಿಯಾದ ಕುಬೇರನು ನಿಮಗೆ ಸಂಪತ್ತು ಮತ್ತು ಸಮೃದ್ಧಿಯನ್ನು ನೀಡುತ್ತಾನೆ, ಅದು ಉತ್ತಮ ಫಲಿತಾಂಶಗಳನ್ನು ನೀಡುತ್ತದೆ ಎಂದು ಆಧ್ಯಾತ್ಮಿಕತೆ ಹೇಳುತ್ತದೆ . ಅದು ಏನೆಂದು ಕಂಡುಹಿಡಿಯಿರಿ ಮತ್ತು ಅದನ್ನು ಖರೀದಿಸಿ. ಶ್ರೀ ಸಿಗಂಧೂರು ಚೌಡೇಶ್ವರಿ ದೇವಿಯನ್ನು ಆರಾಧನೆ ಮಾಡುವ ದೈವಜ್ಞ ವಿದ್ವಾನ್ ವಿದ್ಯಾಧರ್ ತಂತ್ರಿ ದೈವಜ್ಞ ಪ್ರಧಾನ ತಾಂತ್ರಿಕ್ ಹಾಗೂ ಮಾಂತ್ರಿಕರು 9686268564 ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆ ಪ್ರಯತ್ನ ಮಾಡಿದರು…
ನವದೆಹಲಿ: ದೆಹಲಿ ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ (ಇಡಿ) ದಾಖಲಿಸಿರುವ ಮನಿ ಲಾಂಡರಿಂಗ್ ಪ್ರಕರಣದಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೆ ಸುಪ್ರೀಂ ಕೋರ್ಟ್ ಜೂನ್ 1 ರವರೆಗೆ ಮಧ್ಯಂತರ ಜಾಮೀನು ನೀಡಿದೆ. ಹೀಗಾಗಿ ಅವರನ್ನು ಜಾಮೀನು ನೀಡಿದಂತ 1 ಗಂಟೆಯ ನಂತ್ರ ತಿಹಾರ್ ಜೈಲಿನಿಂದ ಅರವಿಂದ್ ಕೇಜ್ರಿವಾಲ್ ಅವರನ್ನು ಬಿಡುಗಡೆ ಮಾಡಲಾಗಿದೆ. ಮತ ಎಣಿಕೆಯವರೆಗೆ ಜಾಮೀನು ನೀಡುವಂತೆ ಕೇಜ್ರಿವಾಲ್ ಮನವಿ ಮಾಡಿದರು ಆದರೆ ಸುಪ್ರೀಂ ಕೋರ್ಟ್ ಅವರ ಮನವಿಯನ್ನು ತಿರಸ್ಕರಿಸಿತು ಮತ್ತು ಜೂನ್ 2 ರಂದು ಶರಣಾಗುವಂತೆ ನಿರ್ದೇಶನ ನೀಡಿತು. ಈಗ ರದ್ದುಪಡಿಸಲಾದ ದೆಹಲಿ ಅಬಕಾರಿ ನೀತಿ 2021-22 ರಲ್ಲಿನ ಅಕ್ರಮಗಳಿಗೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ತನಿಖೆಗೆ ಸಂಬಂಧಿಸಿದಂತೆ ಕೇಜ್ರಿವಾಲ್ ಅವರನ್ನು ಮಾರ್ಚ್ 21 ರಂದು ಇಡಿ ಬಂಧಿಸಿತ್ತು. ಮುಂಬರುವ ಲೋಕಸಭಾ ಚುನಾವಣೆಗೆ ಪ್ರಚಾರ ಮಾಡಲು ಅನುವು ಮಾಡಿಕೊಡಲು ಕೇಜ್ರಿವಾಲ್ ಅವರಿಗೆ ಮಧ್ಯಂತರ ಜಾಮೀನು ನೀಡುವ ಬಗ್ಗೆ ನ್ಯಾಯಪೀಠ ಮಂಗಳವಾರ ಸುಳಿವು ನೀಡಿತು. ಆದಾಗ್ಯೂ, ಮಧ್ಯಂತರ…
ರಾಯ್ಪುರ: ಭದ್ರತಾ ಸಿಬ್ಬಂದಿ ಮತ್ತು ಮಾವೋವಾದಿಗಳ ನಡುವಿನ ಮತ್ತೊಂದು ಭೀಕರ ಎನ್ಕೌಂಟರ್ನಲ್ಲಿ ಬಿಜಾಪುರ ಜಿಲ್ಲೆಯ ಅರಣ್ಯದಲ್ಲಿ ಏಳಕ್ಕೂ ಹೆಚ್ಚು ನಕ್ಸಲರು ಸಾವನ್ನಪ್ಪಿದ್ದಾರೆ ಮತ್ತು ಗುಂಡಿನ ಚಕಮಕಿ ಮುಂದುವರೆದಿದೆ. ಪ್ರಾಥಮಿಕ ಮಾಹಿತಿಯ ಪ್ರಕಾರ, ಭದ್ರತಾ ಸಿಬ್ಬಂದಿಯ ತಂಡವು ಶೋಧ ಕಾರ್ಯಾಚರಣೆಯಲ್ಲಿ ತೊಡಗಿತ್ತು ಮತ್ತು ಗಂಗಲೂರು ಪ್ರದೇಶದ ಪಿಡಿಯಾ ಗ್ರಾಮದ ಬಳಿ ಬೆಳಿಗ್ಗೆ ನಕ್ಸಲರೊಂದಿಗೆ ಎನ್ಕೌಂಟರ್ ಪ್ರಾರಂಭವಾಯಿತು. ಎನ್ಕೌಂಟರ್ ನಡೆದು ಹಲವಾರು ಗಂಟೆಗಳಾಗಿವೆ. ಭದ್ರತಾ ಪಡೆಗಳು ಸ್ಥಳದಿಂದ ಏಳಕ್ಕೂ ಹೆಚ್ಚು ನಕ್ಸಲರ ಶವಗಳನ್ನು ವಶಪಡಿಸಿಕೊಂಡಿವೆ. ಸಾವುನೋವುಗಳ ಸಂಖ್ಯೆ ಹೆಚ್ಚಾಗುವ ಸಾಧ್ಯತೆಯಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಕೋಬ್ರಾ, ವಿಶೇಷ ಕಾರ್ಯಪಡೆ, ಜಿಲ್ಲಾ ರಿಸರ್ವ್ ಗಾರ್ಡ್ ಸಿಬ್ಬಂದಿಯನ್ನು ಒಳಗೊಂಡ ಸಾವಿರಕ್ಕೂ ಹೆಚ್ಚು ಭದ್ರತಾ ಪಡೆಗಳ ಬೃಹತ್ ಅಂತರ ಜಿಲ್ಲಾ ತಂಡವು ನಕ್ಸಲ್ ವಿರೋಧಿ ಕಾರ್ಯಾಚರಣೆಗೆ ತೆರಳಿದೆ ಎಂದು ಅಧಿಕಾರಿ ಹೇಳಿದರು. ಅವರು ಬಿಜಾಪುರ, ದಾಂತೇವಾಡ ಮತ್ತು ಸುಕ್ಮಾ ಜಿಲ್ಲೆಗಳ ವಿವಿಧ ಶಿಬಿರಗಳಿಂದ ಪ್ರಾರಂಭಿಸಿದರು. ಪಿಡಿಯಾ ಕಾಡುಗಳ ವಿವಿಧ ಸ್ಥಳಗಳಲ್ಲಿ ಮಾವೋವಾದಿಗಳನ್ನು ಹೆಡೆ ಮುರಿ ಕಟ್ಟೋ…
ಹಾಸನ: ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ ಸಂಬಂಧ ಇಂದು ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಈ ಮೊದಲು ಇದೇ ಪ್ರಕರಣದಲ್ಲಿ ಪ್ರಮುಖ ಆರೋಪಿಯೊಬ್ಬನನ್ನು ಬಂಧಿಸಲಾಗಿತ್ತು. ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಆನೆಮಹಲ್ ನಲ್ಲಿ ಆರೋಪಿಗಳಾದಂತ ಮುಸ್ತಾಫಾ ಹಾಗೂ ಇಲ್ಯಾಸ್ ಎಂಬಾತನನ್ನು ಪ್ರಕರಣದ ವಿಚಾರಣೆ ನಡೆಸುತ್ತಿರುವಂತ ಎನ್ಐಎ ಅಧಿಕಾರಿಗಳು ವಿಚಾರಣೆ ನಡೆಸಿದರು. ಇಂದು ವಿಚಾರಣೆಯ ಬಳಿಕ ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ ಸಂಬಂಧ ಆರೋಪಿಗಳಾದಂತ ಮುಸ್ತಾಫಾ, ಇಲ್ಯಾಸ್ ನನ್ನು ಎಸ್ಐಟಿ ಅಧಿಕಾರಿಗಳು ಬಂಧಿಸಿದ್ದಾರೆ. ಆನೆಮಹಲ್ ನಲ್ಲಿ ಇಬ್ಬರು ಆರೋಪಿಗಳನ್ನು ಬಂಧಿಸಿರುವಂತ ಎಸ್ಐಟಿ ಅಧಿಕಾರಿಗಳು ಹೆಚ್ಚಿನ ವಿಚಾರಣೆಗಾಗಿ ಬೆಂಗಳೂರಿಗೆ ಕರೆತರುತ್ತಿರೋದಾಗಿ ತಿಳಿದು ಬಂದಿದೆ. ಅಂದಹಾಗೇ ಮುಸ್ತಾಫಾಗೆ ಶುಂಠಿ ಬೆಳೆಯೋದಕ್ಕೆ ಆಶ್ರಯ ನೀಡಿದ್ದಂತ ಸಿರಾಜ್ ಎಂಬಾತನನ್ನು ಎನ್ಐಎ ಅಧಿಕಾರಿಗಳು ವಿಚಾರಣೆ ನಡೆಸಿದ್ದಾರೆ. ಹೆಚ್ಚಿನ ಮಾಹಿತಿ ಪಡೆಯೋದಕ್ಕಾಗಿ ಸಕಲೇಶಪುರ ಠಾಣೆಗೂ ಆತನನ್ನು ಕರೆದೊಯ್ಯಲಾಗಿದೆ ಎನ್ನಲಾಗುತ್ತಿದೆ. https://kannadanewsnow.com/kannada/interim-bail-for-kejriwal-what-are-the-conditions-imposed-by-the-supreme-court/ https://kannadanewsnow.com/kannada/prajwal-pornographic-video-case-sit-issues-notice-to-karthik-devarajegowda/
‘ಅರವಿಂದ್ ಕೇಜ್ರಿವಾಲ್’ಗೆ ಮಧ್ಯಂತರ ಜಾಮೀನು: ಸುಪ್ರೀಂ ವಿಧಿಸಿದ ‘ಷರತ್ತು’ಗಳೇನು ಗೊತ್ತಾ? | Arvind Kejriwal bail
ನವದೆಹಲಿ: ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ನಡೆಯುತ್ತಿರುವ ಅಕ್ರಮ ಹಣ ವರ್ಗಾವಣೆ ತನಿಖೆಯಲ್ಲಿ ಆಮ್ ಆದ್ಮಿ ಪಕ್ಷದ ರಾಷ್ಟ್ರೀಯ ಸಂಚಾಲಕ ಅರವಿಂದ್ ಕೇಜ್ರಿವಾಲ್ ಅವರಿಗೆ ಸುಪ್ರೀಂ ಕೋರ್ಟ್ 2024 ರ ಜೂನ್ 1 ರವರೆಗೆ ಮಧ್ಯಂತರ ಜಾಮೀನು ನೀಡಿದೆ. ಹಾಗಾದ್ರೆ ಸುಪ್ರೀಂ ಕೋರ್ಟ್ ಜಾಮೀನು ನೀಡೋದಕ್ಕಾಗಿ ವಿಧಇಸಿದಂತ ಷರತ್ತುಗಳೇನು ಅಂತ ಮುಂದೆ ಓದಿ. ಜೂನ್ 5 ರಂದು ಮಧ್ಯಂತರ ಜಾಮೀನು ನೀಡುವಂತೆ ಹಿರಿಯ ವಕೀಲ ಅಭಿಷೇಕ್ ಸಿಂಘ್ವಿ ಮೂಲಕ ಕೇಜ್ರಿವಾಲ್ ಮಾಡಿದ ಮನವಿಯನ್ನು ಸುಪ್ರೀಂ ಕೋರ್ಟ್ ತಿರಸ್ಕರಿಸಿದೆ. ಇದಲ್ಲದೆ, ದೆಹಲಿ ಮುಖ್ಯಮಂತ್ರಿಗೆ ಜೂನ್ 2 ರಂದು ಶರಣಾಗುವಂತೆ ಸೂಚಿಸಲಾಗಿದೆ. ಲೋಕಸಭಾ ಚುನಾವಣೆ ಪ್ರಸ್ತುತ ನಡೆಯುತ್ತಿದ್ದು, ಏಳು ಹಂತಗಳಲ್ಲಿ ಪೂರ್ಣಗೊಳ್ಳಲಿದೆ. ಜೂನ್ 1 ಮತದಾನಕ್ಕೆ ಕೊನೆಯ ದಿನವಾಗಿದೆ. ದೇಶಾದ್ಯಂತ ಮತದಾನವು ಏಪ್ರಿಲ್ 19 ರಂದು ಪ್ರಾರಂಭವಾಯಿತು. ಒಟ್ಟು 543 ಸ್ಥಾನಗಳಲ್ಲಿ ಅರ್ಧಕ್ಕಿಂತ ಹೆಚ್ಚು ಸ್ಥಾನಗಳಿಗೆ ಮೇ 7 ರಂದು ಮೂರನೇ ಹಂತದ ಮತದಾನ ಪೂರ್ಣಗೊಂಡಿತು. ದೆಹಲಿಯಲ್ಲಿ ಮೇ 25ರಂದು ಮತದಾನ ನಡೆಯಲಿದೆ. ಕೇಜ್ರಿವಾಲ್…
ಬೆಂಗಳೂರು: ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರಿಗೆ ಸುಪ್ರೀಂ ಕೋರ್ಟ್ ಮಧ್ಯಂತರ ಜಾಮೀನು ನೀಡಿರುವುದು ಸತ್ಯಕ್ಕೆ ಸಂದ ಗೆಲುವಾಗಿದೆ. ಪ್ರಜಾಪ್ರಭುತ್ವದ ಗೆಲುವಾಗಿದೆ. ಪ್ರಧಾನಿ ನರೇಂದ್ರ ಮೋದಿಯ ಸೋಲಿನ ಮುನ್ಸೂಚನೆಯಾಗಿದೆ. ಜೈಲಿನ ಕಂಬಿಗಳು ಮುರಿದಿವೆ, ಸರ್ವಾಧಿಕಾರಿಗಳ ಸೊಕ್ಕು ಅಡಗಿದೆ. ಈ ಬಾರಿಯ ಚುನಾವಣೆಯಲ್ಲಿ ಕೇಜ್ರಿವಾಲ್ ಅಲೆಯನ್ನು ತಡೆಯಲು ಪ್ರಧಾನಿ ಮೋದಿಗೆ ಇನ್ಯಾವ ದಾರಿಯು ಉಳಿದಿಲ್ಲ. ಇಂಡಿಯಾ ಒಕ್ಕೂಟದ ಗೆಲುವನ್ನು ತಡೆಯುವ ಮೋದಿಯವರ ಹುನ್ನಾರ ನುಚ್ಚುನೂರಾಗಿದೆ. ದೆಹಲಿಯ ಜನರಲ್ಲಿ ಮಿಂಚಿನ ಸಂಚಾರವಾಗಿದೆ. ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರಲ್ಲಿ ನೂರ್ಮಡಿ ಶಕ್ತಿಯ ಸಂಚಲನವಾಗಿದೆ. ಮೇ 25ರಂದು ದೆಹಲಿಯಲ್ಲಿ ನಡೆಯಲಿರುವ ಚುನಾವಣೆಯಲ್ಲಿ, ಕೇಜ್ರಿವಾಲ್ ಅವರ ಉಪಸ್ಥಿತಿಯಿಂದ ಇಂಡಿಯಾ ಒಕ್ಕೂಟವು 7ಕ್ಕೆ 7 ಸ್ಥಾನವನ್ನು ಗೆಲ್ಲಲಿದೆ ಎಂದು ಮುಖ್ಯಮಂತ್ರಿ ಚಂದ್ರು ಹರ್ಷ ವ್ಯಕ್ತಪಡಿಸಿದರು. ಎಎಪಿ ವರಿಷ್ಠ ಅರವಿಂದ ಕೇಜ್ರಿವಾಲ್ ಅವರಿಗೆ ಸುಪ್ರೀಂ ಕೋರ್ಟ್ ಜಾಮೀನು ಕೊಟ್ಟ ಬೆನ್ನಲ್ಲೇ ನಗರದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಮುಖ್ಯಮಂತ್ರಿ ಚಂದ್ರು, ಭಾರತದ ನ್ಯಾಯಾಂಗ ವ್ಯವಸ್ಥೆಯಲ್ಲಿ ಅಪಾರ ನಂಬಿಕೆಯನ್ನು ಹೊಂದಿದ್ದೇವೆ. ನಮ್ಮ ನಿರೀಕ್ಷೆಯಂತೆ ಕೇಜ್ರಿವಾಲ್…
ಬೆಂಗಳೂರು: ನಗರದಲ್ಲಿ ಜೆಪಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಶ್ರೀ ವೀರಭದ್ರಸ್ವಾಮಿ ಪಲ್ಲಕ್ಕಿ ಉಸ್ತವ ನಾಳೆ ನಡೆಯಲಿದೆ. ಈ ಹಿನ್ನಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ನಾಳೆ ಬೆಳಿಗ್ಗೆ 6 ಗಂಟೆಯಿಂದ ಮೇ.12ರ ಮಧ್ಯಾಹ್ನದ ವರೆಗೆ ಮದ್ಯಮಾರಾಟ ನಿಷೇಧ ಮಾಡಿ ಆದೇಶಿಸಲಾಗಿದೆ. ಇಂದು ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ.ದಯಾನಂದ ಅವರು ಆದೇಶ ಹೊರಡಿಸಿದ್ದು, ದಿನಾಂಕ: 11-05-2024 ರಂದು ಬೆಂಗಳೂರು ನಗರ ಪೊಲೀಸ್ ಕಮೀಷನರೇಟ್ ವ್ಯಾಪ್ತಿಯ ಪೂರ್ವ ವಿಭಾಗದ ಜೆ.ಬಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿರುವ ಶ್ರೀ ವೀರಭದ್ರಸ್ವಾಮಿಯ ಪಲ್ಲಕ್ಕಿ ಉತ್ಸವ ನಡೆಯಲಿದ್ದು, ಈ ಉತ್ಸವದಲ್ಲಿ ಸುಮಾರು 30 ಪಲ್ಲಕ್ಕಿಗಳು ಭಾಗವಹಿಸಲಿದ್ದು, ಸದರಿ ಉತ್ಸವದಲ್ಲಿ ಸಾವಿರಾರು ಭಕ್ತಾಧಿಗಳು ಪಾಲ್ಗೊಳ್ಳಲಿದ್ದು, ಈ ಸಮಯದಲ್ಲಿ ಕಿಡಿಗೇಡಿಗಳು ಮದ್ಯದ ಅಮಲಿನಲ್ಲಿ ದುಷ್ಕೃತ್ಯಗಳನ್ನು ನಡೆಸಿ ಶಾಂತಿ ಮತ್ತು ಸುವ್ಯವಸ್ಥೆಯನ್ನು ಹಾಳುಮಾಡುವ ಸಂದರ್ಭವನ್ನು ದುರುಪಯೋಗಪಡಿಸಿಕೊಂಡು ಕಿಡಿಗೇಡಿಗಳು ಕೋಮುಗಲಬೆಗಳಿಗೆ ಪ್ರಚೋದಿಸಿ ದುಷ್ಕೃತ್ಯಗಳನ್ನು ಎಸಗುವ, ಕಾನೂನುಬಾಹಿರ ಕೃತ್ಯಗಳನ್ನೆಸಗಿ ಸಾರ್ವಜನಿಕ ಸುವ್ಯವಸ್ಥೆಗೆ ಭಂಗವನ್ನುಂಟುಮಾಡುವ ಸಂಭವವಿರುವುದಾಗಿ ಹೇಳಿದ್ದಾರೆ. ಈ ಹಿನ್ನೆಲೆಯಲ್ಲಿ ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡುವ ದೃಷ್ಟಿಯಿಂದ…
ಮಂಡ್ಯ : ಮದ್ದೂರು ಪಟ್ಟಣದ ಶಿವಪುರದ ಪೂರ್ಣಪ್ರಜ್ಞ ಶಾಲೆಯ ವಿದ್ಯಾರ್ಥಿಗಳು ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಉನ್ನತ ಶ್ರೇಣಿಯಲ್ಲಿ ತೇರ್ಗಡೆಯಾಗುವುದರ ಜತೆಗೆ ಜಿಲ್ಲೆಗೆ ತೃತೀಯ ಹಾಗೂ ಮದ್ದೂರು ತಾಲೂಕಿಗೆ ಪ್ರಥಮ ಸ್ಥಾನ ಪಡೆದುಕೊಂಡಿದ್ದಾರೆ. ಶಾಲೆಯ ವಿದ್ಯಾರ್ಥಿನಿ ಎಸ್.ಖುಷಿ 625 ಕ್ಕೆ 619 ಅಂಕಗಳು ಶೇ. 99.04 ಹಾಗೂ ಗಗನ್ಎಸ್. ಗೌಡ 619 ಅಂಕಗಳನ್ನು ಪಡೆದು ಶೇ. 99.04 ಅತ್ಯುನ್ನತ ಶ್ರೇಣಿಯಲ್ಲಿ ತೇರ್ಗಡೆಯಾಗುವ ಮೂಲಕ ಮದ್ದೂರು ತಾಲೂಕಿಗೆ ಪ್ರಥಮ ಸ್ಥಾನವನ್ನು ಶಾಲೆಗೆ ತಂದುಕೊಟ್ಟಿದ್ದಾರೆ. ಜತೆಗೆ ಇಂಪನ ಎಂ.ಕುಮಾರ್ 603, ಎ.ತನ್ವಿಕ 601 ಹಾಗೂ ಡಿ.ಎಸ್.ಧ್ರುವಗೌಡ 600 ಅಂಕಗಳನ್ನು ಪಡೆದು ತೇರ್ಗಡೆಯಾಗುವ ಮೂಲಕ ತಾಲೂಕಿಗೆ ಮತ್ತು ಶಾಲೆಗೆ ಕೀರ್ತಿ ತಂದಿದ್ದಾರೆ. ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಒಟ್ಟು 158 ವಿದ್ಯಾರ್ಥಿಗಳು ಹಾಜರಾಗಿದ್ದು, ಇದರಲ್ಲಿ 154 ವಿದ್ಯಾರ್ಥಿಗಳು ಉತೀರ್ಣರಾಗಿ ಶೇ.98 ರಷ್ಟು ಫಲಿತಾಂಶ ಬಂದಿದೆ. ಅತ್ಯುನ್ನತ ಶ್ರೇಣಿಯಲ್ಲಿ 46 , ಪ್ರಥಮ ದರ್ಜೆಯಲ್ಲಿ 70 ವಿದ್ಯಾರ್ಥಿಗಳು ಹಾಗೂ ದ್ವಿತೀಯ ಶ್ರೇಣಿಯಲ್ಲಿ 38 ವಿದ್ಯಾರ್ಥಿಗಳು ಉತೀರ್ಣರಾಗಿದ್ದಾರೆ. ಉತ್ತಮ ಅಂಕ ಪಡೆದು ಶಾಲೆಗೆ ಕೀರ್ತಿ…
ಮೈಸೂರು: ಪ್ರಜ್ವಲ್ ರೇವಣ್ಣ ಪ್ರಕರಣವನ್ನು ಸಿಬಿಐಗೆ ವಹಿಸುವ ಅಗತ್ಯವಿಲ್ಲ. ನನಗೆ ನಮ್ಮ ಪೊಲೀಸರ ಬಗ್ಗೆ ವಿಶ್ವಾಸವಿದೆ. ಅವರು ಕಾನೂನು ರೀತ್ಯ ತನಿಖೆ ನಡೆಸಲಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಶ್ವಾಸ ವ್ಯಕ್ತಪಡಿಸಿದರು. ಇಂದು ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕುಮಾರಸ್ವಾಮಿ ಅವರು ಪ್ರಜ್ವಲ್ ರೇವಣ್ಣ ಪ್ರಕರಣವನ್ನು ಸಿಬಿಐ ಗೆ ವಹಿಸುವಂತೆ ರಾಜ್ಯಪಾಲರಿಗೆ ಮನವಿ ಮಾಡಿರುವ ಕುರಿತಾಗಿ ಮಾಧ್ಯಮದವರ ಪ್ರಶ್ನೆಗಳಿಗೆ ಪ್ರತಿಕ್ರಿಯಿಸಿದ ಮುಖ್ಯಮಂತ್ರಿಗಳು, ನನಗೆ ನಮ್ಮ ಪೊಲೀಸರ ಬಗ್ಗೆ ವಿಶ್ವಾಸ ನಂಬಿಕೆ ಇದೆ. ಅವರು ಕಾನೂನು ರೀತ್ಯಾ ತನಿಖೆ ನಡೆಸಲಿದ್ದಾರೆ ಎಂದು ತಿಳಿಸಿದರು. ಬಿಜೆಪಿಯವರು ಯಾವತ್ತೂ ಸಿಬಿಐಗೆ ಒಂದು ಪ್ರಕರಣವಾದರೂ ಕೊಟ್ಟಿದ್ದಾರಾ? ಹಿಂದೆ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಡಿ.ಕೆ. ರವಿ ಪ್ರಕರಣ, ಲಾಟರಿ ಪ್ರಕರಣ, ಸಚಿವರಾದ ಕೆ.ಜೆ. ಜಾರ್ಜ್ ಅವರ ಮೇಲಿನ ಆರೋಪ, ಪರೇಶ್ ಮೇಸ್ತ ಪ್ರಕರಣಗಳನ್ನು ಸಿಬಿಐಗೆ ವಹಿಸಲಾಯಿತು. ಈ ಪ್ರಕರಣಗಳಲ್ಲಿ ಯಾರಿಗಾದರೂ ಶಿಕ್ಷೆಯಾಗಿದೆಯೇ ಎಂದು ಪ್ರಶ್ನಿಸಿದರು. ಹಿಂದೆ ಬಿಜೆಪಿಯವರೇ ಸಿಬಿಐ ಯನ್ನು ಕರಪ್ಷನ್ ಬ್ಯೂರೋ ಆಫ್ ಇನ್ವೆಸ್ಟಿಗೇಷನ್ ಎಂದು ಬಣ್ಣಿಸಿದ್ದಾರೆ. ದೇವೇಗೌಡರು…
ಬೆಂಗಳೂರು: ನಗರದಲ್ಲಿ ಮತ್ತೆ ಮಳೆ ಆರ್ಭಡಿಸಿದೆ. ಬೆಂಗಳೂರಲ್ಲಿ ವರುಣ ಆರ್ಭಟಿಸುತ್ತಿದ್ದು, ನಗರದ ಹಲವಡೆ ಭಾರೀ ಮಳೆಯಿಂದಾಗಿ ವಾಹನ ಸಂಚಾರ ಅಸ್ತವ್ಯಸ್ಥಗೊಂಡಿದೆ. ಅಲ್ಲದೇ ಟ್ರಾಫಿಕ್ ಜಾಮ್ ಕೂಡ ಉಂಟಾಗಿ, ವಾಹನ ಸವಾರರು ಪರದಾಡುವಂತೆ ಆಗಿದೆ. ಬೆಂಗಳೂರಿನ ಹಲವೆಡೆ ಮತ್ತೆ ಮಳೆ ಆರಂಭಗೊಂಡಿದೆ. ನಿನ್ನೆ ಸೇರಿದಂತೆ ಕೆಲ ದಿನಗಳ ಹಿಂದಿನಿಂದ ಸುರಿಯುತ್ತಿರುವಂತ ಮಳೆಯಿಂದಾಗಿ ಅವಾಂತರವೇ ಉಂಟಾಗಿತ್ತು. ಮುಂದೆ ಹೀಗೆ ಅವಾಂತರವಾದಾಗ ಸೂಕ್ತ ರೀತಿಯಲ್ಲಿ ಕಾರ್ಯಪ್ರವೃತ್ತಿಯಾಗಲು ವಲಯವಾರು ಕಂಟ್ರೋಲ್ ರೂಮನ್ನೂ ಬಿಬಿಎಂಪಿಯಿಂದ ತೆರೆಯಲಾಗಿದೆ. ಇದರ ನಡುವೆ ಇಂದು ಕೂಡ ಮಳೆ ಮುಂದುವರೆದಿದೆ. ಚಿಕ್ಕಬಿದರಕಲ್ಲು ಸೇರಿದಂತೆ ವಿವಿಧೆಡೆ ಮಳೆಯಾಗುತ್ತಿದೆ. ಮಳೆಯ ಆರ್ಭಟದಿಂದಾಗಿ ರಾಷ್ಟ್ರೀಯ ಹೆದ್ದಾರಿ-4ರಲ್ಲಿ ವಾಹನಗಳ ಸಂಚಾರ ಮಂದಗತಿಯಲ್ಲಿ ಸಾಗುವಂತೆ ಆಗಿದೆ. 8ನೇ ಮೈಲಿಯ ನವಯುಗ ಟೋಲ್ ನಿಂದ ಮಾದಾವರದವರೆಗೆ ಟ್ರಾಫಿಕ್ ಜಾಮ್ ಕೂಡ ಉಂಟಾಗಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲದಲ್ಲೂ ಭಾರೀ ಮಳೆಯಾಗುತ್ತಿದ್ದು, ಜನರು ವರುಣನ ಆರ್ಭಟದಿಂದ ತತ್ತರಿಸಿ ಹೋಗುವಂತೆ ಆಗಿದೆ. https://kannadanewsnow.com/kannada/rape-case-against-mp-prajwal-sit-conducts-panchnama-at-hd-revannas-residence/ https://kannadanewsnow.com/kannada/man-killed-for-campaigning-for-congress-in-kalaburagi-over-political-rivalry/