Subscribe to Updates
Get the latest creative news from FooBar about art, design and business.
Author: kannadanewsnow09
ಕಲಬುರ್ಗಿ: ಕಲ್ಯಾಣ ಕರ್ನಾಟಕ ಭಾಗದ ಉದ್ಯೋಗಾಕಾಂಕ್ಷಿಗಳಿಗೆ ಭರ್ಜರಿ ಸಿಹಿಸುದ್ದಿಯನ್ನು ಸಚಿವ ಪ್ರಿಯಾಂಕ್ ಖರ್ಗೆ ನೀಡಿದ್ದಾರೆ. ಅದೇ ಬರೋಬ್ಬರಿ 30,000 ಹುದ್ದೆ ಭರ್ತಿ ಮಾಡುವುದಾಗಿ ಘೋಷಣೆ ಮಾಡಿದ್ದಾರೆ. ನಗರಾಭಿವೃದ್ದಿ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡುತ್ತಿದ್ದರು. ಕಲ್ಯಾಣ ಕರ್ನಾಟಕ ಭಾಗದ ಜನರ ಬಹು ನಿರೀಕ್ಷೆಯಂತೆ ಸಿಎಂ ಸಿದ್ದರಾಮಯ್ಯ ನವರ ನೇತೃತ್ವದಲ್ಲಿ ಕಲಬುರಗಿ ಯಲ್ಲಿ ಸೆಪ್ಟೆಂಬರ್ 17 ರಂದು ಸಚಿವ ಸಂಪುಟ ಸಭೆ ನಡೆಸಲಾಗುತ್ತಿದೆ. ಈ ಭಾಗದ ಇಲಾಖಾವಾರು ಸಮಗ್ರ ಅಭಿವೃದ್ದಿಯ ಕುರಿತು ಚರ್ಚಿಸಿ ನೀಲಿ ನಕ್ಷೆ ತಯಾರಿಸುವ ಬಗ್ಗೆಯೂ ಕೂಡಾ ನಿರ್ಧರಿಸಲಾಗುವುದು ಎಂದು ಅವರು ಹೇಳಿದರು. 30,000 ಹುದ್ದೆ ಭರ್ತಿ 2013-18 ರ ಅವಧಿಯಲ್ಲಿ ಕಕ ಭಾಗದ13,000 ಶಿಕ್ಷಕರು ಸೇರಿದಂತೆ 30,000 ಖಾಲಿ ಹುದ್ದೆಗಳನ್ನು ಭರ್ತಿ ಮಾಡಲಾಗಿದೆ. ಮುಂದಿನ ಒಂದು ವರ್ಷದ ಅವಧಿಯಲ್ಲಿ 6500 ಶಿಕ್ಷಕರು ಸೇರಿದಂತೆ 15000 ಖಾಲಿ ಹುದ್ದೆ ತುಂಬಲಾಗುವುದು ನಂತರ ಎರಡು ವರ್ಷದ ಅವಧಿಯಲ್ಲಿ 25,000 ಹುದ್ದೆ ತುಂಬಲಾಗುವುದು ಎಂದು ವೈದ್ಯಕೀಯ ಶಿಕ್ಷಣ ಸಚಿವ ಶರಣಪ್ರಕಾಶ್ ಪಾಟೀಲ್ ಹೇಳಿದರು.…
ಕಲಬುರಗಿ: ಕಲ್ಯಾಣ ಕರ್ನಾಟಕ ಉತ್ಸವ ಕಾರ್ಯಕ್ರಮದ ಉದ್ಘಾಟನೆಗೆ ಸಿಎಂ ಸಿದ್ದರಾಮಯ್ಯ ಆಗಮಿಸಲಿದ್ದು ಬೆಳಿಗ್ಗೆ ಸರ್ದಾರ ವಲಭಭಾಯಿ ಪಟೇಲ್ ಅವರ ಪ್ರತಿಮೆ ಮಾಲಾರ್ಪಣೆ ಮಾಡಿ ನಂತರ ಡಿಎಆರ್ ಮೈದಾನದಲ್ಲಿ ಧ್ವಜಾರೋಹಣ ನೆರವೇರಿಸಿ ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಮತ್ತು ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದರು. ನಗರಾಭಿವೃದ್ದಿ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡುತ್ತಿದ್ದರು. ಕಲ್ಯಾಣ ಕರ್ನಾಟಕ ಭಾಗದ ಜನರ ಬಹು ನಿರೀಕ್ಷೆಯಂತೆ ಸಿಎಂ ಸಿದ್ದರಾಮಯ್ಯ ನವರ ನೇತೃತ್ವದಲ್ಲಿ ಕಲಬುರಗಿ ಯಲ್ಲಿ ಸೆಪ್ಟೆಂಬರ್ 17 ರಂದು ಸಚಿವ ಸಂಪುಟ ಸಭೆ ನಡೆಸಲಾಗುತ್ತಿದೆ. ಈ ಭಾಗದ ಇಲಾಖಾವಾರು ಸಮಗ್ರ ಅಭಿವೃದ್ದಿಯ ಕುರಿತು ಚರ್ಚಿಸಿ ನೀಲಿ ನಕ್ಷೆ ತಯಾರಿಸುವ ಬಗ್ಗೆಯೂ ಕೂಡಾ ನಿರ್ಧರಿಸಲಾಗುವುದು ಎಂದು ಅವರು ಹೇಳಿದರು. ನಮ್ಮ ಭಾಗದ ಎಲ್ಲ ಶಾಸಕರ ಬೇಡಿಕೆಯ ಪಟ್ಟಿ ನೋಡಿದರೆ ರಾಜ್ಯದ ಬಜೆಟ್ ಗಾತ್ರದಷ್ಟಾಗುತ್ತದೆ. ಆದರೆ ಮ್ಯಾಕ್ರೋ ಯೋಜನೆಯಡಿಯಲ್ಲಿ ಕಾರ್ಯಕ್ರಮಗಳನ್ನು ತೆಗೆದುಕೊಳ್ಳಲಾಗುವುದು. ಕೊನೆ ಪಕ್ಷ ಈ ಸಲ ಯೋಜನೆಗಳ ಬಗ್ಗೆ ಚರ್ಚಿಸಿದರೆ ಮುಂದಿನ…
ಶಿವಮೊಗ್ಗ: ಸಾಗರ ನಗರದ 8ನೇ ವಾರ್ಡ್ ಶ್ರೀನಗರದಲ್ಲಿ 48ನೇ ವರ್ಷದ ಗಣೇಶ ವಿಸರ್ಜನೆ ಭಾನುವಾರ ಅದ್ದೂರಿಯಾಗಿ ನಡೆಯಿತು. ಈ ವೇಳೆಯಲ್ಲಿ ನಡೆದಂತ ಬೆಂಕಿಯಾಟಕ್ಕೆ ಮನಸೋತ ಸಾಗರದ ಜನತೆ ಮನಸೋತರು. ಗಮನ ಸೆಳೆದ ಬೆಂಕಿಯಾಟ ಪ್ರದರ್ಶನ ಹಲವು ವರ್ಷಗಳಿಂದ ಬೆಂಕಿಯಾಟ ಪ್ರದರ್ಶನವನ್ನು ಸಾಗರದ ಶ್ರೀನಗರ ಯುವಜನ ಸಂಘ ನಡೆಸಿಕೊಂಡು ಬರುತ್ತಿದ್ದಾರೆ. ಪ್ರದರ್ಶನವನ್ನು ಶ್ರೀನಗರದಲ್ಲಿ, ಸಾಗರ ನಗರ ಪೊಲೀಸ್ ಸ್ಟೇಷನ್ ವೃತ್ತ, ನಗರದ ಹೃದಯ ಭಾಗ ಸಾಗರ್ ಹೋಟೆಲ್ ಸರ್ಕಲ್ ನಲ್ಲಿ ಸಾರ್ವಜನಿಕರು ಕಣ್ತುಂಬಿ ಕೊಂಡರು. ಸಾಗರದ ಇತಿಹಾಸದಲ್ಲಿ ಬೆಂಕಿಯಟ್ಟ ಪ್ರಾರಂಭವಾಗಿದ್ದು ಹೂವಿನ ಗೋಪಾಲಣ್ಣ ಅವರ ಕಾಲದಲ್ಲಿ. ಇದು ಮೂಲತಃ ಮಂಗಳೂರಿನಲ್ಲಿ ಪ್ರಾರಂಭವಾಗಿರುವಂತದ್ದು. ಪ್ರಥಮವಾಗಿ ಸಾಗರದ ಹಿಂದೂ ಮಹಾಸಭಾ ಗಣಪತಿಯಲ್ಲಿ ಪ್ರದರ್ಶನಗೊಂಡಿತು. ನಂತರ ಶ್ರೀನಗರ ಯುವಜನ ಸಂಘಕ್ಕೆ ಹಸ್ತಾಂತರವಾಯಿತು. ಆಧುನಿಕ ಫಿಟ್ನೆಸ್ ಸೆಂಟರ್ ಗಳ ಭರಾಟೆಯ ನಡುವೆಯೂ, ಪ್ರಾಚೀನ, ಸಾಂಪ್ರದಾಯಿಕ ವ್ಯಾಯಾಮ ಶಾಲೆಗಳು ಇಂದಿಗೂ ತಮ್ಮ ಅಸ್ತಿತ್ವವನ್ನು ಉಳಿಸಿಕೊಂಡಿದೆ. ವ್ಯಾಯಾಮಗಳಿಗೆ, ದೇಹದಾಢ್ರ್ಯ ಪ್ರದರ್ಶನದ ಜೊತೆಗೆ ವ್ಯಾಯಾಮ ಶಾಲೆಗಳು ಆಕರ್ಷಕ ಹಾಗು ಸಾಹಸಮಯ ಪ್ರದರ್ಶನಕ್ಕೂ ಹೆಸರುವಾಸಿಯಾಗಿವೆ. ಯಾವುದೇ…
ನವದೆಹಲಿ: ಬಜಾಜ್ ಹೌಸಿಂಗ್ ಫೈನಾನ್ಸ್ ಸೆಪ್ಟೆಂಬರ್ 16 ರ ಸೋಮವಾರ ದಲಾಲ್ ಸ್ಟ್ರೀಟ್ನಲ್ಲಿ ಬ್ಲಾಕ್ಬಸ್ಟರ್ ಪ್ರವೇಶವನ್ನು ಮಾಡಿತು. ಅದರ ಷೇರುಗಳು ₹ 150 ಕ್ಕೆ ಪಟ್ಟಿ ಮಾಡಲ್ಪಟ್ಟವು. ಅದರ ವಿತರಣಾ ಬೆಲೆ ₹ 70 ಕ್ಕಿಂತ 114.29% ಪ್ರೀಮಿಯಂ ಅನ್ನು ಸೂಚಿಸುತ್ತದೆ. ಷೇರುಗಳು 107% ಪ್ರೀಮಿಯಂನಲ್ಲಿ ವಹಿವಾಟು ನಡೆಸುತ್ತಿದ್ದ ಬೂದು ಮಾರುಕಟ್ಟೆ ಅಂದಾಜುಗಳಿಗಿಂತ ಹೆಚ್ಚಿನದನ್ನು ಪಟ್ಟಿ ಮಾಡಲಾಗಿದೆ. ಬೂದು ಮಾರುಕಟ್ಟೆಯು ಅನಧಿಕೃತ ಪರಿಸರ ವ್ಯವಸ್ಥೆಯಾಗಿದ್ದು, ಅಲ್ಲಿ ಷೇರುಗಳು ಚಂದಾದಾರಿಕೆಗಾಗಿ ಕೊಡುಗೆ ತೆರೆಯುವ ಮೊದಲೇ ವಹಿವಾಟು ಪ್ರಾರಂಭಿಸುತ್ತವೆ ಮತ್ತು ಲಿಸ್ಟಿಂಗ್ ದಿನದವರೆಗೆ ವ್ಯಾಪಾರವನ್ನು ಮುಂದುವರಿಸುತ್ತವೆ. “ಐಪಿಒದ 67.43 ಪಟ್ಟು ಹೆಚ್ಚಿನ ಚಂದಾದಾರಿಕೆ ಮತ್ತು ಗಗನಕ್ಕೇರುವ ಬೂದು ಮಾರುಕಟ್ಟೆ ಪ್ರೀಮಿಯಂ ಅನ್ನು ಗಮನದಲ್ಲಿಟ್ಟುಕೊಂಡು ಈ ಬ್ಲಾಕ್ಬಸ್ಟರ್ ಪ್ರದರ್ಶನವನ್ನು ವ್ಯಾಪಕವಾಗಿ ನಿರೀಕ್ಷಿಸಲಾಗಿತ್ತು” ಎಂದು ಸ್ವಸ್ತಿಕಾ ಇನ್ವೆಸ್ಟ್ಮಾರ್ಟ್ನ ಶಿವಾನಿ ನ್ಯಾಟಿ ಹೇಳಿದರು. ಈ ಪಟ್ಟಿಯು ಪ್ರತಿಷ್ಠಿತ ಬಜಾಜ್ ಗ್ರೂಪ್ ಬೆಂಬಲದೊಂದಿಗೆ ಕಂಪನಿಯ ದೃಢವಾದ ಹಣಕಾಸಿನ ಬಗ್ಗೆ ಹೂಡಿಕೆದಾರರ ಅಚಲ ವಿಶ್ವಾಸವನ್ನು ಪ್ರತಿಬಿಂಬಿಸುತ್ತದೆ ಎಂದು ನ್ಯಾಟಿ ಹೇಳಿದರು. “ಬಜಾಜ್…
ಬೆಂಗಳೂರು: ನಗರದಲ್ಲಿ ಜನರು ಬೆಚ್ಚಿ ಬೀಳಿಸುವಂತೆ ರೌಡಿ ಶೀಟರ್ ಗಳು ಯುವಕನೊಬ್ಬನನ್ನು ನಡು ರಸ್ತೆಯಲ್ಲೇ ಬೆತ್ತಲೆಗೊಳಿಸಿ, ಹಲ್ಲೆ ನಡೆಸಿ, ಓಡಿಸಿದಂತ ಘಟನೆ ನಡೆದಿದೆ. ಬೆಂಗಳೂರಿನ ಕಾಮಾಕ್ಷಿ ಪಾಳ್ಯ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿನ ರಾಜಗೋಪಾಲನಗರದಲ್ಲಿ ನಡು ರಸ್ತೆಯಲ್ಲೇ ರೌಡಿ ಶೀಟರ್ ಗಳು ಯುವಕನೊಬ್ಬನನ್ನು ಬಟ್ಟೆ ಬಿಚ್ಚಿಸಿದ್ದಾರೆ. ಸಂಪೂರ್ಣ ಬೆತ್ತಲೆಗೊಳಿಸಿದಂತ ರೌಡಿ ಶೀಟರ್ ಗಳು ಆತನ ಮುಖ, ದೇಹದಲ್ಲಿ ರಕ್ತ ಬರುವಂತೆ ಹಲ್ಲೆ ನಡೆಸಿದ್ದಾರೆ. ಈ ಎಲ್ಲಾ ದೃಶ್ಯವನ್ನು ತಮ್ಮ ಮೊಬೈಲ್ ನಲ್ಲಿ ವೀಡಿಯೋ ಮಾಡಿಕೊಂಡಿರುವಂತ ಕೀಚಕರು, ಬಟ್ಟೆ ಬಿಟ್ಟಿ, ಬೆತ್ತಲೆಯಾಗಿ ನಡು ರಸ್ತೆಯಲ್ಲಿ ಓಡಿಸಿದ್ದಾರೆ. ರೌಡಿಗಳಿಂದ ಪ್ರಾಣ ಉಳಿಸಿಕೊಳ್ಳೋದಕ್ಕಾಗಿ ಯುವಕ ಬೆತ್ತಲೆಯಾಗಿ ಓಡಿರುವುದಾಗಿ ಹೇಳಲಾಗುತ್ತಿದೆ. ಇದೀಗ ರೌಡಿಗಳ ಅಟ್ಟಹಾಸದ ವೀಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು, ವೀಡಿಯೋ ಬೆನ್ನಲ್ಲೇ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಕೀಚಕ ಕೃತ್ಯ ಎಸಗಿದಂತ ರೌಡಿ ಶೀಟರ್ ಗಳ ಬಂಧನಕ್ಕೆ ಬಲೆ ಬೀಸಿದ್ದಾರೆ. https://kannadanewsnow.com/kannada/r-ashoka-demands-probe-into-pro-pakistan-slogans-raised-during-nagamangala-communal-violence/ https://kannadanewsnow.com/kannada/will-democracy-survive-the-human-chain-union-minister-hdk-question/
ಬೆಂಗಳೂರು: ನಾಗಮಂಗಲ ಕೋಮುಗಲಭೆಯ ವೇಳೆಯಲ್ಲಿ ಪಾಕ್ ಪರ ಕಿಡಿಗೇಡಿಗಳು ಘೋಷಣೆ ಕೂಗಿರುವುದಾಗಿ ವಿಪಕ್ಷ ನಾಯಕ ಆರ್.ಅಶೋಕ್ ಗಂಭೀರ ಆರೋಪ ಮಾಡಿದ್ದಾರೆ. ಅಲ್ಲದೇ ತನಿಖೆಗೆ ಗೃಹ ಸಚಿವರಲ್ಲಿ ಒತ್ತಾಯಿಸಿದ್ದಾರೆ. ಈ ಬಗ್ಗೆ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವಂತ ಅವರು, ನಾಗಮಂಗಲದಲ್ಲಿ ಬುಧವಾರ ರಾತ್ರಿ ಗಣೇಶ ವಿಸರ್ಜನೆ ವೇಳೆ ನಡೆದ ಕೋಮುಗಲಭೆಯಲ್ಲಿ ಮೂವರು ಕಿಡಿಗೇಡಿಗಳು ಪಾಕಿಸ್ತಾನ ಜಿಂದಾಬಾದ್ ಘೋಷಣೆಗಳು ಕೂಗಿದ್ದಾರೆ ಎಂದು ಪ್ರತ್ಯಕ್ಷದರ್ಶಿಗಳ ಹೇಳುತ್ತಿದ್ದು, ಈ ಕೋಮುದಳ್ಳುರಿಯಲ್ಲಿ ನಿಷೇಧಿತ ಸಂಘಟನೆಗಳ ಕೈವಾಡವಿರುವ ಅನುಮಾನ ಮತ್ತಷ್ಟು ಗಟ್ಟಿಯಾಗಿತ್ತಿದೆ ಎಂಬುದಾಗಿ ಹೇಳಿದ್ದಾರೆ. ಇದರ ಬೆನ್ನಲ್ಲೇ ಚಿಕ್ಕಮಗಳೂರಲ್ಲಿ ಬೈಕ್ ನಲ್ಲಿ ಪ್ಯಾಲೆಸ್ತೀನ್ ಧ್ವಜ ಹಿಡಿದಿರುವ ಪುಂಡಾಟ, ದಾವಣಗೆರೆಯ ಗಾಂಧಿನಗರ ಹಾಗೂ ಅಹ್ಮದ್ ನಗರಗಳಲ್ಲಿ ಹಿಂದೂ ಯುವಕರು ಬಾವುಟ ಕಟ್ಟಿದ್ದಕ್ಕೆ ಮತಾಂಧ ಪುಂಡರು ಅವರ ಮೇಲೆ ಹಲ್ಲೆ ಮಾಡಿರುವುದು, ಇವನ್ನೆಲ್ಲಾ ಗಮನಿಸುತ್ತಿದ್ದರೆ ಈ ಪ್ರಚೋದನಕಾರಿ ಘಟನೆಗಳು ಗಣೇಶೋತ್ಸವವನ್ನೇ ಟಾರ್ಗೆಟ್ ಮಾಡಿರುವಂತಿದೆ ಎಂದಿದ್ದಾರೆ. ಇಂತಹ ಘಟನೆಗಳು ಅಯೋಧ್ಯ ರಾಮ ಮಂದಿರದ ಉದ್ಘಾಟನೆ ಸಂದರ್ಭದಲ್ಲಿಯೂ ನಡೆದಿತ್ತು. ಹಿಂದೂಗಳ ಹಬ್ಬಗಳು, ಉತ್ಸವಗಳು, ಸಂಭ್ರಮಾಚರಣೆಗಳನ್ನೇ ಗುರಿಯಾಗಿಸಿ ರಾಜ್ಯಾದ್ಯಂತ…
ಬೆಂಗಳೂರು: ಮಾನವ ಸರಪಳಿ ನೆಪದಲ್ಲಿ ಪುಕ್ಕಟೆ ಪ್ರಚಾರ ಗಿಟ್ಟಿಸಿದ ರಾಜ್ಯ ಕಾಂಗ್ರೆಸ್ ಸರ್ಕಾರವನ್ನು ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಅವರು ತೀವ್ರ ತರಾಟೆಗೆ ತೆಗೆದುಕೊಂಡಿದ್ದಾರೆ. ಈ ಬಗ್ಗೆ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಅವರು; ಸರಕಾರಕ್ಕೆ ಪ್ರಜಾಪ್ರಭುತ್ವ ಉಳಿಸುವ ಕಾಳಜಿಯೇ ಇಲ್ಲ. ಇದ್ದರೆ ಮೊದಲು ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಸಲಿ ಎಂದು ತಾಕೀತು ಮಾಡಿದರು. ಅಧಿಕಾರಕ್ಕೇ ಬಂದಾಗಿಂದಲು ಪ್ರಜಾಪ್ರಭುತ್ವದ ಸರಪಳಿಯ ತಳಮಟ್ಟದ ಆಧಾರಸ್ತಂಭಗಳಾದ ಜಿಲ್ಲಾ & ತಾಲೂಕು ಪಂಚಾಯತಿ ಮತ್ತು ಬಿಬಿಎಂಪಿ ಚುನಾವಣೆ ನಡೆಸಿಲ್ಲ, ಯಾಕೆ? ಸ್ಥಳೀಯ ಸರಕಾರಗಳ ಕತ್ತು ಹಿಸುಕಿ ನೀವು ವಿಧಾನಸೌಧದಲ್ಲಿ ಮೆರೆದರೇನು ಭಾಗ್ಯ? ಸಿದ್ದರಾಮಯ್ಯನವರೇ.. ನೀವು ಅಧಿಕಾರಕ್ಕೆ ಬಂದು ವರ್ಷದ ಮೇಲೆ 4 ತಿಂಗಳಾಯಿತು (2023 ಮೇ 20). ಈವರೆಗೂ ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಸಲು ಸಾಧ್ಯವಾಗಿಲ್ಲ. ನಿಮ್ಮ ಪ್ರಜಾಪ್ರಭುತ್ವ, ಜನಪರತೆ, ಜಾಹೀರಾತುಗಳಲ್ಲಷ್ಟೆ ಝಗಮಗಿಸುತ್ತಿದೆ!! ನಿಮ್ಮದು ಪ್ರಚಾರ ಜಾಸ್ತಿ, ಆಚಾರ ನಾಸ್ತಿ ಎಂದು ಕಿಡಿಕಾರಿದರು. ವಿಚ್ಚಿಧ್ರ ಶಕ್ತಿಗಳನ್ನು ದಮನ ಮಾಡುವುದು ಎಂದರೆ ಡಾ.ಬಾಬಾಸಾಹೇಬ್ ಅಂಬೇಡ್ಕರ್ ಅವರ ತತ್ವಕ್ಕೆ…
ಬೆಂಗಳೂರು: ನಾಳೆ ನಗರದಲ್ಲಿ ಬೆಸ್ಕಾಂ ಇಲಾಖೆಯಿಂದ ತುರ್ತು ನಿರ್ವಹಣಾ ಕಾಮಗಾರಿಯನ್ನು ಕೈಗೊಳ್ಳಲಾಗುತ್ತಿದೆ. ಈ ಹಿನ್ನಲೆಯಲ್ಲಿ ಸೆ.17ರ ನಾಳೆ ಬೆಂಗಳೂರಿನ ಕೆಲ ಭಾಗಗಳಲ್ಲಿ ವಿದ್ಯುತ್ ವ್ಯತ್ಯಯ ( Power Cut ) ಉಂಟಾಗಲಿದೆ. ಈ ಕುರಿತಂತೆ ಬೆಸ್ಕಾಂನಿಂದ ( BESCOM ) ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಲಾಗಿದ್ದು, ದಿನಾಂಕ 17.09.2024 (ಮಂಗಳವಾರ) ಬೆಳಗ್ಗೆ 11:00 ಗಂಟೆಯಿAದ ಮದ್ಯಾಹ್ನ 04:00 ಗಂಟೆಯವರೆಗೆ “220/66/11 ಕೆ.ವಿ ಹೆಬ್ಬಾಳ ಸ್ವೀಕರಣಾ ಕೇಂದ್ರ” ದಲ್ಲಿ ತುರ್ತುನಿರ್ವಹಣಾ ಕೆಲಸಗಳನ್ನು ನಿರ್ವಹಿಸುವುದರಿಂದ ಈ ಕೆಳಗಿನ ಸ್ಥಳಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗುವುದು ಎಂದಿದೆ. ವಿದ್ಯುತ್ ವ್ಯತ್ಯಯವಾಗುವ ಸ್ಥಳಗಳು: “ಜಯಮಹಲ್ ವಿಸ್ತರಣೆ, ನಂದಿ ದರ್ಗ, ದೂರರ್ಶನ, ಜಯಮಹಲ್ ರಸ್ತೆ, ಮುನಿರೆಡ್ಡಿ ಪಾಳ್ಯ, ಜೆ.ಸಿ.ನಗರ, ಮಾರಪ್ಪ ಗರ್ಡನ್, ಚಿನಪ್ಪ ಗರ್ಡನ್, ಎನ್.ಡಿ.ರಸ್ತೆ, ಏರ್ ಟೆಲ್, ದೂರರ್ಶನ” ಪ್ರದೇಶದಲ್ಲಿ ಕರೆಂಟ್ ಇರೋದಿಲ್ಲ ಎಂದು ತಿಳಿಸಿದೆ. ಸಾರ್ವಜನಿಕರು ವಿದ್ಯುತ್ ವ್ಯತ್ಯಯಕ್ಕಾಗಿ ಸಹಕರಿಸುವಂತೆ ಮನವಿ ಮಾಡಿದೆ. ಅಲ್ಲದೇ ವಿದ್ಯುತ್ ದೂರಿಗಾಗಿ ಬೆ.ವಿ.ಕಂ ಸಹಾಯವಾಣಿ ಸಂಖ್ಯೆ ‘1912’ ಗೆ ಸಂಪರ್ಕಿಸವಂತೆ ಕೋರಿದೆ. https://kannadanewsnow.com/kannada/after-10-years-cm-siddaramaiah-to-chair-state-cabinet-meeting-in-kalaburagi-tomorrow/…
ಕಲಬುರ್ಗಿ: ನಾಳೆ ಕಲ್ಯಾಣ ನಾಡಿನ ಹೆಬ್ಬಾಗಿಲೆಂದೇ ಖ್ಯಾತಿ ಪಡೆದಂತ ಕಲಬುರ್ಗಿಯ ಮಹಾನಗರದ ವಿಕಾಸ ಸೌಧದಲ್ಲಿನ ಪ್ರಾದೇಶಿಕ ಆಯುಕ್ತರ ಕಚೇರಿ ಸಭಾಂಗಣದಲ್ಲಿ ಸಂಜೆ.4 ಗಂಟೆಗೆ ಸಿಎಂ ಸಿದ್ಧರಾಮಯ್ಯ ನೇತೃತ್ವದಲ್ಲಿ ಐತಿಹಾಸಿಕ ಸಚಿವ ಸಂಪುಟ ಸಭೆ ನಡೆಯಲಿದೆ. ಸಿದ್ಧರಾಮಯ್ಯರಿಂದ ನಡೆಸಲಾಗುತ್ತಿರುವಂತ 2ನೇ ಸಂಪುಟ ಸಭೆ ಇದಾಗಿದ್ದರೇ, 10 ವರ್ಷಗಳ ಬಳಿಕ ನಡೆಯುತ್ತಿರುವಂತ ರಾಜ್ಯ ಸಚಿವ ಸಂಪುಟ ಸಭೆ ದಾಗಿದೆ. ಹೌದು ನಾಳೆ ಮುಖ್ಯಮಂತ್ರಿ ಸಿದ್ಧರಾಮಯ್ಯ ನೇತೃತ್ವದಲ್ಲಿ ಕಲಬುರ್ಗಿಯಲ್ಲಿ ಮಹತ್ವದ ರಾಜ್ಯ ಸಚಿವ ಸಂಪುಟ ಸಭೆ ನಡೆಯಲಿದೆ. ಇದು ಸಿದ್ದರಾಮಯ್ಯ ಸರ್ಕಾರದ 2024ನೇ ಸಾಲಿನ 19ನೇ ಸಂಪುಟ ಸಭೆಯಾಗಿದೆ. ನವೆಂಬರ್.18, 2014ರಲ್ಲಿ ಸಿದ್ಧರಾಮಯ್ಯ ಮುಖ್ಯಮಂತ್ರಿಯಾಗಿದ್ದಂತ ಸಂದರ್ಭದಲ್ಲಿಯೇ ಕಲಬುರ್ಗಿಯಲ್ಲಿ ಮೊದಲ ಸಂಪುಟ ಸಭೆಯನ್ನು ನಡೆಸಿ, ಗಮನ ಸೆಳೆದಿದ್ದರು. ಈಗ ಒಂದು ದಶಕದ ಬಳಿಕ ಸಿದ್ದರಾಮಯ್ಯ ನೇತೃತ್ವದಲ್ಲಿ 2ನೇ ಸಂಪುಟ ಸಭೆಯು ನಾಳೆ ಕಲಬುರ್ಗಿಯಲ್ಲಿ ನಡೆಯಲಿದೆ. ಈ ಸಭೆಯಲ್ಲಿ ಕಲಬುರ್ಗಿ, ಬೀದರ್, ರಾಯಚೂರು, ಯಾದಗಿರಿ, ಬಳ್ಳಾರಿ, ಕೊಪ್ಪಳ ಹಾಗೂ ವಿಜಯನಗರ ವ್ಯಾಪ್ತಿಯ ಕಲ್ಯಾಣ ಕರ್ನಾಟಕ ಭಾಗದ ಜನರ ನಿರೀಕ್ಷೆಗಳಿಗೆ…
ಮಂಗಳೂರು: ಜಿಲ್ಲೆಯ ಬಂಟ್ವಾಳದ ಬಿ.ಸಿ ರಸ್ತೆಯಲ್ಲಿ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ಭಾರೀ ಹೈಡ್ರಾಮಾವೇ ನಡೆಯುತ್ತಿದೆ. ಬಿಸಿ ರೋಡ್ ಚಲೋದಲ್ಲಿ ಭಾರೀ ಸಂಖ್ಯೆಯ ಹಿಂದೂ ಕಾರ್ಯಕರ್ತರು ಭಾಗಿಯಾಗಿದ್ದು, ಸ್ಥಳದಲ್ಲಿ ಬಿಗುವಿನ ವಾತಾವರಣದಿಂದ ಕೂಡಿದೆ. ಮಂಗಳೂರಿನ ಬಂಟ್ವಾಳದ ಬಿ.ಸಿ ರಸ್ತೆಯಲ್ಲಿ ಇಂದು ಬಿಸಿ ರೋಡ್ ಚಲೋಗೆ ಹಿಂದೂ ಪರ ಸಂಘಟನೆಗಳ ಮುಖಂಡರು ಕರೆ ನೀಡಿದ್ದರು. ಈ ಚಲೋಗೆ ನೂರಾರು ಸಂಖ್ಯೆಯ ಆರ್ ಎಸ್ ಎಸ್ ಹಾಗೂ ವಿ ಹೆಚ್ ಪಿ ಕಾರ್ಯಕರ್ತರು ಭಾಗಿಯಾಗಿದ್ದಾರೆ. ಹಿಂದೂ ಕಾರ್ಯಕರ್ತರು, ಪೊಲೀಸರ ನಡುವೆ ತಳ್ಳಾಟ, ನೂಕಾಟ ಕೂಡ ಉಂಟಾಗಿದ್ದೂ, ಭಾರೀ ಹೈಡ್ರಾಮಾವೇ ನಡೆಯುತ್ತಿದೆ. ಮುಂಜಾಗ್ರತಾ ಕ್ರಮವಾಗಿ ಪೊಲೀಸರು ಬಿಸಿ ರಸ್ತೆಯಲ್ಲಿ ಹೈ ಅಲರ್ಟ್ ನೀಡಲಾಗಿದೆ. ಎಲ್ಲೆಲ್ಲೂ ಪೊಲೀಸರ ಭಿಗಿ ಭದ್ರತೆಯನ್ನು ಹೆಚ್ಚಿಸಲಾಗಿದೆ. ಇನ್ನೂ ಬಿಸಿ ರೋಡ್ ಮೂಲಕವೇ ಇಂದು ಈದ್ ಮಿಲಾದ್ ಮೆರವಣಿಗೆ ಸಾಗಲಿದೆ. ಹೀಗಾಗಿ ಮತ್ತಷ್ಟು ಬಿಗುವಿನ ವಾತಾವರಣಕ್ಕೆ ಕಾರಣವಾಗುವ ಮುನ್ನವೇ ಪೊಲೀಸರು ಹಲವು ಹಿಂದೂಪರ ಮುಖಂಡರು, ಕಾರ್ಯಕರ್ತರನ್ನು ವಶಕ್ಕೆ ಪಡೆದಿರುವುದಾಗಿ ತಿಳಿದು ಬಂದಿದೆ. ಇದರ ನಡುವೆ ಪರಿಸ್ಥಿತಿ…













