Author: kannadanewsnow09

ಬೆಂಗಳೂರು: ಮುಡಾ ಹಗರಣದಲ್ಲಿ ಮೊದಲ ವಿಕೆಟ್ ಪತನವಾಗಿದೆ. ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಹಿಂದಿನ ಆಯುಕ್ತ ಹಾಗೂ ಹಾಲಿ ಹಾವೇರಿ ವಿವಿಯ ಕುಲಸಚಿವರಾಗಿದ್ದಂತ ಜಿ.ಟಿ ದಿನೇಶ್ ಕುಮಾರ್ ಅವರನ್ನು ರಾಜ್ಯ ಸರ್ಕಾರ ಅಮಾನತುಗೊಳಿಸಿ ಆದೇಶಿಸಿದೆ. ಈ ಕುರಿತಂತೆ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ನಡವಳಿಯನ್ನು ಹೊರಡಿಸಿದ್ದಾರೆ. ಅದರಲ್ಲಿ ಜಿ.ಟಿ ದಿನೇಶ್ ಕುಮಾರ್, ಕೆಎಎಸ್ ಅಧಿಕಾರಿ, ಹಿಂದಿನ ಆಯುಕ್ತರು, ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ, ಮೈಸೂರು. ಪ್ರಸ್ತುತ ಸ್ಥಳ ನಿರೀಕ್ಷೆಯಲ್ಲಿ ಇರುವ ವಿರುದ್ಧ ಇಲಾಖಾ ವಿಚಾರಣೆಯನ್ನು ಬಾಕಿ ಇರಿಸಿ, ತಕ್ಷಣದಿಂದ ಜಾರಿಗೆ ಬರುವಂತೆ ಸರ್ಕಾರಿ ಸೇವೆಯಿಂದ ಅಮಾನತ್ತಿನಲ್ಲಿರಿಸಿ ಆದೇಶಿಸಿರುವುದಾಗಿ ತಿಳಿಸಿದ್ದಾರೆ. ಅಂದಹಾಗೇ, ಮುಡಾ ಹಗರಣದಲ್ಲಿ ದಿನೇಶ್ ಕುಮಾರ್ ಮೇಲೆ ಗಂಭೀರ ಆರೋಪಗಳು ಕೇಳಿಬಂದ ಹಿನ್ನಲೆಯಲ್ಲಿ, ಅವರನ್ನು ಹಾವೇರಿ ವಿವಿಯ ಕುಲಸಚಿವ ಹುದ್ದೆಯಿಂದ ಅಮಾನತುಗೊಳಿಸಿ ಆದೇಶಿಸಿದೆ. ಅಮಾನತು ಆದೇಶದಲ್ಲಿ ಏನಿದೆ.? ನಗರಾಭಿವೃದ್ಧಿ ಇಲಾಖೆಯ ಕಡತದಲ್ಲಿ ಜಿ.ಟಿ.ದಿನೇಶ್ ಕುಮಾರ್, ಕೆ.ಎ.ಎಸ್. (ಸೂ.ಟೈಂ.ಸ್ಕೆ), ಹಿಂದಿನ ಆಯುಕ್ತರು, ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ, ಮೈಸೂರು ಇವರು ಕಾರ್ಯನಿರ್ವಹಿಸುತ್ತಿದ್ದ…

Read More

ಬೆಂಗಳೂರು: 402 ಪಿಎಸ್ಐ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಲಿಖಿತ ಪರೀಕ್ಷೆಗೆ ಡೇಟ್ ಫಿಕ್ಸ್ ಮಾಡಲಾಗಿದೆ. ದಿನಾಂಕ 22-09-2024ರಂದು 402 ಪಿಎಸ್ಐ ನೇಮಕಾತಿಗಾಗಿ ಲಿಖಿತ ಪರೀಕ್ಷೆ ನಡೆಸುವುದಾಗಿ ಕೆಇಎ ತಿಳಿಸಿದೆ. ಈ ಕುರಿತಂತೆ ಎಕ್ಸ್ ನಲ್ಲಿ ಪೋಸ್ಟ್ ಮಾಡಿ ಮಾಹಿತಿ ಹಂಚಿಕೊಂಡಿರುವಂತ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಹೆಚ್.ಪ್ರಸನ್ನ ಅವರು, 402 PSI ಹುದ್ದೆಗಳಿಗೆ ಸೆ.22ರಂದು ಲಿಖಿತ ಪರೀಕ್ಷೆ ನಡೆಯಲಿದ್ದು ಇದಕ್ಕೆ KEA ಸಕಲ ಸಿದ್ಧತೆ ನಡೆಸಿದೆ. 66,000 ಮಂದಿ ಅರ್ಜಿ ಸಲ್ಲಿಸಿದ್ದು, ಪರೀಕ್ಷೆಗೆ ಒಂದು ವಾರ ಮೊದಲು ಪ್ರವೇಶ ಪತ್ರ ಬಿಡುಗಡೆ ಮಾಡಲಾಗುವುದು ಎಂದು ತಿಳಿಸಿದ್ದಾರೆ. https://twitter.com/KEA_karnataka/status/1830605665028690239 ಇನ್ನೂ ಗ್ರಾಮ ಆಡಳಿತಾಧಿಕಾರಿ ಹುದ್ದೆಗೆ ಕನ್ನಡ ಕಡ್ಡಾಯ ಪರೀಕ್ಷೆ ಸೆ.29ರಂದು ನಡೆಯಲಿದೆ. ಈ ಪರೀಕ್ಷೆಯಲ್ಲಿ ಉತ್ತೀರ್ಣರಾದವರು ಮಾತ್ರ ಅಕ್ಟೋಬರ್ 27ಕ್ಕೆ ನಡೆಯುವ ಪ್ರಮುಖ ಪರೀಕ್ಷೆಗೆ ಅರ್ಹತೆ ಪಡೆಯಲಿದ್ದಾರೆ. 1000 VAO ಹುದ್ದೆಗಳಿಗೆ 5.7 ಲಕ್ಷ ಮಂದಿ ಅರ್ಜಿ ಸಲ್ಲಿಸಿದ್ದು ಈ ಪರೀಕ್ಷೆಗೂ ತಯಾರಿ‌ ನಡೆಸಲಾಗಿದೆ‌ ಎಂದು ಹೇಳಿದ್ದಾರೆ. https://twitter.com/KEA_karnataka/status/1830605666798723434 https://kannadanewsnow.com/kannada/haveri-university-registrar-dinesh-kumar-suspended-by-state-government/ https://kannadanewsnow.com/kannada/mandya-srirangapatna-dasara-will-be-held-in-a-grand-manner-this-year-dc-dr-kumara/ https://kannadanewsnow.com/kannada/what-is-kissing-disease-how-does-it-spread-what-are-the-symptoms-how-is-the-treatment-heres-the-information/

Read More

ಕೋಲ್ಕತ್ತಾ: ಬೃಹತ್ ಬೆಳವಣಿಗೆಯಲ್ಲಿ, ಆರ್ಜಿ ಕಾರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ಮಾಜಿ ಪ್ರಾಂಶುಪಾಲರನ್ನು ಭ್ರಷ್ಟಾಚಾರ ಪ್ರಕರಣದಲ್ಲಿ ಸಿಬಿಐ ಸೋಮವಾರ (ಸೆಪ್ಟೆಂಬರ್ 2) ಬಂಧಿಸಿದೆ. ಕಲ್ಕತ್ತಾ ಹೈಕೋರ್ಟ್ ಆದೇಶದ ಮೇರೆಗೆ ಕೇಂದ್ರ ತನಿಖಾ ದಳ (ಸಿಬಿಐ) ಎರಡು ಸಮಾನಾಂತರ ತನಿಖೆಗಳನ್ನು ನಡೆಸುತ್ತಿದೆ. ಮೊದಲನೆಯದು ಅತ್ಯಾಚಾರ ಮತ್ತು ಕೊಲೆ ಪ್ರಕರಣ ಮತ್ತು ಎರಡನೆಯದು ಆಗಸ್ಟ್ 9 ರಂದು ತರಬೇತಿ ವೈದ್ಯರ ಕ್ರೂರ ಅತ್ಯಾಚಾರ ಮತ್ತು ಕೊಲೆ ನಡೆದ ಆರ್ಜಿ ಕಾರ್ ಆಸ್ಪತ್ರೆಯಲ್ಲಿನ ಹಣಕಾಸಿನ ಅಕ್ರಮಗಳ ಬಗ್ಗೆ. ಸಿಬಿಐ ಪ್ರಸ್ತುತ ಪ್ರಕರಣದ ತನಿಖೆ ನಡೆಸುತ್ತಿದ್ದು, ಅಪರಾಧಕ್ಕೆ ಸಂಬಂಧಿಸಿದಂತೆ ಕೋಲ್ಕತಾ ಪೊಲೀಸ್ ನಾಗರಿಕ ಸ್ವಯಂಸೇವಕನನ್ನು ಬಂಧಿಸಲಾಗಿದೆ. ಸಂದೀಪ್ ಘೋಷ್ ಗಂಭೀರ ಆರೋಪಗಳನ್ನು ಎದುರಿಸುತ್ತಿದ್ದಾರೆ. ವಾರಸುದಾರರಿಲ್ಲದ ದೇಹಗಳ ಅಕ್ರಮ ಮಾರಾಟ, ಬಯೋಮೆಡಿಕಲ್ ತ್ಯಾಜ್ಯದ ಕಳ್ಳಸಾಗಣೆ ಮತ್ತು ಪರೀಕ್ಷೆಗಳಲ್ಲಿ ಉತ್ತೀರ್ಣರಾಗಲು ಲಂಚಕ್ಕಾಗಿ ವಿದ್ಯಾರ್ಥಿಗಳ ಮೇಲೆ ಒತ್ತಡ ಹೇರುವುದು ಇವುಗಳಲ್ಲಿ ಸೇರಿವೆ. ಆಸ್ಪತ್ರೆಯಲ್ಲಿ 31 ವರ್ಷದ ವೈದ್ಯೆಯ ಅತ್ಯಾಚಾರ ಮತ್ತು ಕೊಲೆಯ ನಂತರ ಅವರನ್ನು ತೆಗೆದುಹಾಕುವುದು ಮತ್ತು ನಂತರ ಮರುಸ್ಥಾಪಿಸುವುದು…

Read More

ಬೆಂಗಳೂರು: ಮುಡಾ ಅಕ್ರಮದಲ್ಲಿ ಭಾಗಿಯಾಗಿದ್ದ ಹಿನ್ನಲೆಯಲ್ಲಿ ಹಾವೇರಿ ವಿವಿಯ ಕುಲಸಚಿವ ದಿನೇಶ್ ಕುಮಾರ್ ಅವರನ್ನು ರಾಜ್ಯ ಸರ್ಕಾರ ಅಮಾನತುಗೊಳಿಸಿ ಆದೇಶಿಸಿದೆ. ಈ ಕುರಿತಂತೆ ರಾಜ್ಯ ಸರ್ಕಾರದ ಅಧೀನ ಕಾರ್ಯದರ್ಶಿ ಉಮಾದೇವಿ ಅವರು ರಾಜ್ಯಪಾಲರ ಆದೇಶದ ಅನುಸಾರವಾಗಿ ಆದೇಶವನ್ನು ಹೊರಡಿಸಿದ್ದಾರೆ. ಹಾವೇರಿ ವಿಶ್ವವಿದ್ಯಾಲಯದ ಕುಲಸಚಿವ ದಿನೇಶ್ ಕುಮಾರ್ ಅವರನ್ನು ಅಮಾನತುಗೊಳಿಸಿ ಆದೇಶಿಸಿದ್ದಾರೆ. ಅಂದಹಾಗೇ ದಿನೇಶ್ ಕುಮಾರ್ ಮುಡಾ ಅಕ್ರಮ ಪ್ರಕರಮದ ಆರೋಪಿಯಾಗಿದ್ದರು. ಹೀಗಾಗಿ ಮುಡಾ ಆಯುಕ್ತ ಸ್ಥಾನದಿಂದ ವರ್ಗಾವಣೆಯನ್ನು ಮಾಡಿ, ಹಾವೇರಿ ವಿವಿಯ ಕುಲಸಚಿವರನ್ನಾಗಿ ನೇಮಿಸಲಾಗಿತ್ತು. ಇದೀಗ ಹಾವೇರಿ ವಿವಿ ಕುಲಸಚಿವರಾಗಿದ್ದಂತ ದಿನೇಶ್ ಕುಮಾರ್ ಅವರನ್ನು ಮುಡಾ ಹಗರಣದ ಅಕ್ರಮಗಳ ಹಿನ್ನಲೆಯಲ್ಲಿ ಅಮಾನತುಗೊಳಿಸಿ ರಾಜ್ಯ ಸರ್ಕಾರ ಆದೇಶಿಸಿದೆ. https://kannadanewsnow.com/kannada/mandya-srirangapatna-dasara-will-be-held-in-a-grand-manner-this-year-dc-dr-kumara/ https://kannadanewsnow.com/kannada/what-is-kissing-disease-how-does-it-spread-what-are-the-symptoms-how-is-the-treatment-heres-the-information/

Read More

ಬೆಂಗಳೂರು: ರಾಜ್ಯ ಸರ್ಕಾರದಿಂದ ಹೊಳೆನರಸೀಪುರ ಉಪ ನೋಂದಣಾಧಿಕಾರಿ ಭಾಸ್ಕರ್ ಚೌರ ಅವರನ್ನು ಸರ್ಕಾರಿ ಸೇವೆಯಿಂದ ವಜಾಗೊಳಿಸಿ ಆದೇಶಿಸಿದೆ. ಈ ಕುರಿತಂತೆ ನೋಂದಣಿ ಮಹಾಪರಿವೀಕ್ಷಕರು ಮತ್ತು ಮುದ್ರಾಂಕಗಳ ಆಯುಕ್ತರು ಆದೇಶ ಹೊರಡಿಸಿದ್ದಾರೆ. ಅದರಲ್ಲಿ ಭಾಸ್ಕರ್ ಚೌರ, ಹಿಂದಿನ ಉಪ ನೋಂದಣಾಧಿಕಾರಿ, ಜಾಲ ಹಾಲಿ ಉಪನೋಂದಣಾಧಿಕಾರಿ, ಉಪ ನೋಂದಣಿ ಕಚೇರಿ, ಹೊಳೆನರಸೀಪುರ ಇವರು ಈ ಹಿಂದೆ ಜಾಲ ಉಪ ನೋಂದಣಿ ಕಚೇರಿಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾಗ ಇವರ ಮೇಲೆ ಹಿಂದಿನ ಭ್ರಷ್ಟಾಚಾರ ನಿಗ್ರಹದಳ ಟ್ರ್ಯಾಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ಅವರನ್ನು ಸರ್ಕಾರಿ ಸೇವೆಯಿಂದ ವಜಾಗೊಳಿಸುತ್ತಿರುವುದಾಗಿ ತಿಳಿಸಿದ್ದಾರೆ. ಅಂದಹಾಗೇ ಹೊಳೆನರಸೀಪುರ ಉಪ ನೋಂದಣಾಧಿಕಾರಿ ಭಾಸ್ಕರ್ ಚೌರ ಅವರು, ಜಾಲ ಉಪ ನೋಂದಣಾಧಿಕಾರಿಯಾಗಿದ್ದಂತ ಸಂದರ್ಭದಲ್ಲಿ ವ್ಯಕ್ತಿಯೊಬ್ಬರಿಂದ ದಾಸ್ತಾವೇಜಿನ ನೋಂದಣಿಗಾಗಿ 25,000 ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಈ ಬಗ್ಗೆ ಎಸಿಬಿಗೆ ಅಂದು ದೂರು ನೀಡಿದ್ದರು. 25000 ಲಂಚದ ಹಣದಲ್ಲಿ 15000 ನೀಡುವಾಗ ಎಸಿಬಿ ಅಧಿಕಾರಿಗಳಿಗೆ ರೆಡ್ ಹ್ಯಾಂಡ್ ಸಿಕ್ಕಿಬಿದ್ದಿದ್ದರು. ಅವರ ವಿರುದ್ಧ ಭ್ರಷ್ಟಾಚಾರ ನಿಗ್ರಹ ಕಾಯ್ದೆಯಡಿ ಕೇಸ್ ದಾಖಲಾಗಿತ್ತು. ಈ ಕಾರಣಕ್ಕಾಗಿ…

Read More

ಬೆಂಗಳೂರು: ರಾಜ್ಯ ಸರ್ಕಾರದಿಂದ ರಾಜ್ಯಾಧ್ಯಂತ ಎಲ್ಲಾ ವಿವಿಧ ಮಾದರಿಯ ಟ್ಯಾಕ್ಸಿಗಳ ಪ್ರಯಾಣ ದರಗಳನ್ನು ಒಂದೇ ಮಾದರಿಯಲ್ಲಿ ನಿಗದಿಗೊಳಿಸಿ ಆದೇಶ ಹೊರಡಿಸಿದೆ. ಈ ಕುರಿತಂತೆ ಸಾರಿಗೆ ಮತ್ತು ರಸ್ತೆ ಸುರಕ್ಷತೆಯ ಆಯುಕ್ತರು ರಾಜ್ಯದ ಎಲ್ಲಾ ಉಪ ಸಾರಿಗೆ ಆಯುಕ್ತರು, ಹಿರಿಯ ಪ್ರಾದೇಶಿಕ, ಪ್ರಾದೇಶಿಕ, ಸಹಾಯಕ ಪ್ರಾದೇಶಿಕ, ಸಾರಿಗೆ ಅಧಿಕಾರಿಗಳು ಮತ್ತು ಕಾರ್ಯದರ್ಶಿಗಳು, ಹೆಚ್ಚುವರಿ ಕಾರ್ಯದರ್ಶಿಗಳು, ಪ್ರಾದೇಶಿಕ ಸಾರಿಗೆ ಪ್ರಾಧಿಕಾರಿಗಳಿಗೆ ಪತ್ರ ಬರೆದು ಸೂಚಿಸಿದ್ದಾರೆ. ಸಾರಿಗೆ ಇಲಾಖೆಯ ಆಯುಕ್ತರು ಹೊರಡಿಸಿರುವಂತ ಆದೇಶದಲ್ಲಿ ಕರ್ನಾಟಕ ರಾಜ್ಯದಲ್ಲಿ ವಿಶೇಷವಾಗಿ ಬೆಂಗಳೂರು ನಗರ ಮಿತಿಯೊಳಗೆ ಆಚರಣೆ ಮಾಡುವ ಎಲ್ಲಾ ಟ್ಯಾಕ್ಸಿ ಸೇವೆಗಳಿಗೆ “ಒಂದು ನಗರ ಒಂದು ದರ” ನೀತಿಯನ್ನು ಅನುಷ್ಠಾಗೊಳಿಸುವಂತೆ ಪತ್ರದಲ್ಲಿ President, Federation of Karnataka State Private Transport Associations, Bangalore ಇವರು ಕೋರಿರುತ್ತಾರೆ ಎಂದಿದ್ದಾರೆ. ಪರಿಶೀಲಿಸಲಾಗಿ, ಈಗಾಗಲೇ ಸರ್ಕಾರವು ಅಧಿಸೂಚನೆಯಲ್ಲಿ ಕರ್ನಾಟಕ ರಾಜ್ಯಾದ್ಯಂತ (ಬೆಂಗಳೂರು ನಗರ ವ್ಯಾಪ್ತಿಯಲ್ಲಿ ಸಹ ಒಳಗೊಂಡಂತೆ) ಮತ್ತು ಅಗ್ರಿಗೇಟರ್ ನಿಯಮಗಳಡಿ ಆಚರಣೆ ಮಾಡುವ ಎಲ್ಲಾ ವಿವಿಧ ಮಾದರಿಯ ಟ್ಯಾಕ್ಸಿಗಳ ಪ್ರಯಾಣ…

Read More

ಮಂಡ್ಯ : ಈ ಬಾರಿ ಶ್ರೀರಂಗಪಟ್ಟಣ ದಸರಾ ಕಾರ್ಯಕ್ರಮವನ್ನು ಕಳೆದ ವರ್ಷಕ್ಕಿಂತ ಈ ಬಾರಿ ಬಹಳ ಅದ್ದೂರಿಯಾಗಿ, ಸಾಂಪ್ರದಾಯಿಕವಾಗಿ, ಸಂಭ್ರಮ ಹಾಗೂ ವಿಜೃಂಭಣೆಯಿಂದ ಆಚರಿಸೋಣ ಎಂದು ಜಿಲ್ಲಾಧಿಕಾರಿ ಡಾ. ಕುಮಾರ ತಿಳಿಸಿದರು. ಜಿಲ್ಲಾ ಪಂಚಾಯಿತಿ ಕಾವೇರಿ ಸಭಾಂಗಣದಲ್ಲಿ ಸೋಮವಾರ ನಡೆದ ಶ್ರೀರಂಗಪಟ್ಟಣ ದಸರಾ – 2023 ರ ಆಚರಣೆಯ ಸಂಬಂಧ ಅಧಿಕಾರಿಗಳ ಸಭೆ ನಡೆಸಿ ಮಾತನಾಡಿದರು. 2024 ನೇ ಸಾಲಿನ ಶ್ರೀರಂಗಪಟ್ಟಣದ ದಸರಾ ಆಚರಣೆ ಕಾರ್ಯಕ್ರಮವನ್ನು ಪ್ರತಿ ವರ್ಷವೂ ಬಹಳ ಅರ್ಥಪೂರ್ಣವಾಗಿ ಆಚರಣೆ ಮಾಡಲಾಗುತ್ತಿದೆ. ಅಕ್ಟೋಬರ್ 4 ರಿಂದ 6 ರವರೆಗೆ 3 ದಿನಗಳ ಕಾಲ ಅಥವಾ ಅಕ್ಟೋಬರ್ 4 ರಿಂದ 8 ರವರೆಗೆ 5 ದಿನಗಳ ಕಾಲ ಕಾರ್ಯಕ್ರಮವನ್ನು ನಡೆಸಬೇಕೇಂದಿದ್ದು, ಇದರಲ್ಲಿ ಎಷ್ಟು ದಿನ ಆಚರಣೆ ಮಾಡಬೇಕು ಎಂದು ಶೀಘ್ರವೇ ನಿರ್ಧರಿಸಲಾಗುವುದು ಎಂದರು. ಈಗಾಗಲೇ ಶ್ರೀರಂಗಪಟ್ಟಣ ದಸರಾ ಆಚರಣೆ 2024 ಕ್ಕೆ ಸಂಬಂಧಿಸಿದಂತೆ ಸ್ವಾಗತ ಸಮಿತಿ, ವೇದಿಕೆ ಸಮಿತಿ, ಆರೋಗ್ಯ ಮತ್ತು ವೈದ್ಯಕೀಯ ಸೇವಾ ಸಮಿತಿ, ಆಹಾರ ಸಮಿತಿ, ಮೆರವಣಿಗೆ…

Read More

ಮಂಡ್ಯ : ಸದಾ ವಿದ್ಯಾರ್ಥಿಗಳ ಪಠ್ಯ ಮತ್ತು ಪಠ್ಯೇತರ ಚಟುವಟಿಕೆಗಳ ಬಗ್ಗೆ ಯೋಚಿಸುವ ಶಿಕ್ಷಕರಿಗೆ ಶಿಕ್ಷಕರ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳು ಹೆಚ್ಚಿನ ಚೈತನ್ಯ ನೀಡುತ್ತದೆ ಎಂದು ಮದ್ದೂರು ಕ್ಷೇತ್ರ ಶಿಕ್ಷಣಾಧಿಕಾರಿ ಸಿ.ಎಚ್.ಕಾಳೀರಯ್ಯ ಹೇಳಿದರು. ಮದ್ದೂರು ಪಟ್ಟಣದ ತಾಲೂಕು ಕ್ರೀಡಾಂಗಣದಲ್ಲಿ ಶಿಕ್ಷಕರ ದಿನಾಚರಣೆ ಅಂಗವಾಗಿ ಸೋಮವಾರ ಶಿಕ್ಷಣ ಇಲಾಖೆಯ ವಿವಿಧ ಸಂಘಗಳಿಂದ ಆಯೋಜಿಸಿದ್ದ ಶಾಲಾ ಶಿಕ್ಷಕರ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಸ್ಪರ್ಧೆ ಉದ್ಘಾಟಿಸಿ ಮಾತನಾಡಿದರು. ಶಿಕ್ಷಕರು ಶಾಲೆಯಲ್ಲಿ ಮಕ್ಕಳ ಪ್ರತಿಭೆಗಳನ್ನು ಗುರುತಿಸಿ ಪ್ರೋತ್ಸಾಹಿಸುವುದಲ್ಲಿ ಹೆಚ್ಚಿನ ಗಮನವಿರಿಸುವುದರಿಂದ ಬಹುತೇಕ ಸಂದರ್ಭಗಳಲ್ಲಿ ತಮ್ಮ ಆಸಕ್ತಿಯ ಕ್ರೀಡೆ, ಹವ್ಯಾಸಗಳನ್ನು ಮರೆತು ಬಿಟ್ಟಿರುತ್ತಾರೆ. ಹೀಗಾಗಿ ಇಂತಹ ಕ್ರೀಡಾಕೂಟಗಳು ವೃತ್ತಿ ಜೀವನದಲ್ಲಿ ಚಿರಸ್ಮರಣಿಯವಾಗಿ ಉಳಿಯುತ್ತವೆ. ಹೀಗಾಗಿ ಕ್ರೀಡಾಕೂಟದಲ್ಲಿ ಶಿಕ್ಷಕರು ಉತ್ಸಾಹದಿಂದ ಪಾಲ್ಗೊಂಡಿರುವುದು ಒಳ್ಳೆಯ ಬೆಳವಣಿಗೆ ಎಂದರು. ಕ್ರೀಡೆ ಪರಸ್ಪರರಲ್ಲಿ ಸ್ಪರ್ಧಾತ್ಮಕ ಮನೋಭಾವನೆ ಮೂಡಿಸುವುದಲ್ಲದೆ, ಒತ್ತಡ ನಿಯಂತ್ರಣಕ್ಕೆ ಅವಕಾಶ ಮಾಡಿಕೊಡುತ್ತದೆ. ಇಂದು ಶಿಕ್ಷಕರು ಮಾಡದ ಕೆಲಸವಿಲ್ಲ. ಜನಗಣತಿ, ಚುನಾವಣೆ ಸೇರಿದಂತೆ 42ಕ್ಕೂ ಹೆಚ್ಚು ಕಾರ್ಯಕ್ರಮಗಳನ್ನು ಶಿಕ್ಷಕರು ನಿರ್ವಹಿಸಬೇಕಾಗಿದ್ದು, ಒತ್ತಡ ಹೆಚ್ಚಿರುತ್ತದೆ.…

Read More

ಬೆಂಗಳೂರು: ಎನಿವೇರ್‌ ರಿಜಿಸ್ಟ್ರೇಷನ್‌ ಸೇವೆ ಈಗ ಕರ್ನಾಟಕದ ಎಲ್ಲಾ ಜಿಲ್ಲೆಗಳಲ್ಲಿ ಲಭ್ಯವಿದೆ. ನಿಮ್ಮ ಜಿಲ್ಲೆಯ ಸಮೀಪವಿರುವ ಯಾವುದೇ ಸಬ್‌ರಿಜಿಸ್ಟ್ರಾರ್‌ ಕಚೇರಿಯಲ್ಲಿ ನಿಮ್ಮ ದಾಖಲೆಯನ್ನು ನೋಂದಾಯಿಸಿ. ಹಾಗಾದ್ರೇ ಎನಿವೇರ್ ರಿಜಿಸ್ಟ್ರೇಷನ್ ಸೇವೆಯ ಪ್ರಯೋಜನ ಏನು ಎನ್ನುವ ಬಗ್ಗೆ ಮುಂದೆ ಓದಿ. ಸೆಪ್ಟಂಬರ್.2ರ ಇಂದಿನಿಂದ “ಎನಿವೇರ್‌ ನೋಂದಣಿ” ವ್ಯವಸ್ಥೆಯನ್ನು ರಾಜ್ಯಾದ್ಯಂತ ವಿಸ್ತರಿಸಲಾಗಿದೆ ಎಂದು ಸಚಿವ ಕೃಷ್ಣ ಬೈರೇಗೌಡ ಅವರು ತಿಳಿಸಿದರು. ಪತ್ರಿಕಾಗೋಷ್ಠಿಯಲ್ಲಿ ಈ ಬಗ್ಗೆಯೂ ಮಾಹಿತಿ ನೀಡಿದ ಅವರು, “ರಾಜ್ಯದಲಿ 252 ಉಪ ನೋಂದಣಾಧಿಕಾರಿ (ಸಬ್‌ ರಿಜಿಸ್ಟ್ರಾರ್) ಕಚೇರಿ ಇದೆ. ಆದರೆ, ಈ ಪೈಕಿ 50 ಕಚೇರಿಗಳಲ್ಲಿ ಮಾತ್ರ ಸಿಬ್ಬಂದಿಗಳಿಗೆ ಹೆಚ್ಚು ಕೆಲಸದ ಒತ್ತಡ ಇದೆ. ಹೀಗಾಗಿ ಆ ಕಚೇರಿಗಳಿಗೆ ಬರುವ ಜನರಿಗೆ ಅನಾನುಕೂಲವಾಗುತ್ತಿದೆ. ಸಮಯಕ್ಕೆ ಸರಿಯಾಗಿ ಕೆಲಸ ಆಗಲ್ಲ, ಕಾಯಬೇಕು, ಮಧ್ಯವರ್ತಿಗಳ ಕಾಟ ಇದೆ ಎಂಬ ದೂರುಗಳಿವೆ. ಇದೇ ಕಾರಣಕ್ಕೆ “ಎನಿವೇರ್‌ ನೋಂದಣಿ” ವ್ಯವಸ್ಥೆಗೆ ಚಾಲನೆ ನೀಡಲಾಗಿದೆ ಎಂದರು. ಆಸ್ತಿ ನೋಂದಣಿಗೆ ಮುಂದಾಗುವ ವ್ಯಕ್ತಿ ತನ್ನ ಜಿಲ್ಲೆ ವ್ಯಾಪ್ತಿಯ, ತನಗೆ ಅನುಕೂಲವಾಗುವ ಹಾಗೂ…

Read More

ಬೆಂಗಳೂರು : “ಐದು ಗ್ಯಾರಂಟಿ ಯೋಜನೆಗಳ ಜೊತೆಯಲ್ಲಿ ಆರೋಗ್ಯ ಮತ್ತು ಶಿಕ್ಷಣದ ಗ್ಯಾರಂಟಿಯನ್ನು ಕಾಂಗ್ರೆಸ್ ಸರ್ಕಾರ ನೀಡುತ್ತಿದೆ. ಗ್ಯಾರಂಟಿಗಳನ್ನು ನೀಡಿದ್ದು ಚುನಾವಣೆಗಲ್ಲ. ಜನರ ಬದುಕಿನಲ್ಲಿ ಬದಲಾವಣೆ ತರಲು” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದರು. ಶಿವಾಜಿನಗರದ ಚರಕ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, “ಕರ್ನಾಟಕವನ್ನು ಹಸಿವು, ಬಡತನ ಮತ್ತು ಅಸಮಾನತೆ ಮುಕ್ತ ರಾಜ್ಯ ಮಾಡಬೇಕೆಂಬುದು ಸಿದ್ದರಾಮಯ್ಯ ಅವರ ನೇತೃತ್ವದ ಕಾಂಗ್ರೆಸ್ ಸರ್ಕಾರದ ಗುರಿ” ಎಂದರು. “ಸಿದ್ದರಾಮಯ್ಯ ಅವರು ಆರೋಗ್ಯ ಇಲಾಖೆಗೆ ಸಾಕಷ್ಟು ಅನುದಾನ ನೀಡುತ್ತಿದ್ದಾರೆ. ಆರೋಗ್ಯ ಸಚಿವರಾದ ದಿನೇಶ್ ಗುಂಡೂರಾವ್ ಹಾಗೂ ವೈದ್ಯಕೀಯ ಶಿಕ್ಷಣ ಸಚಿವರಾದ ಶರಣ ಪ್ರಕಾಶ ಪಾಟೀಲರು ಒಟ್ಟಾಗಿ ಕೆಲಸ ಮಾಡುತ್ತಿದ್ದಾರೆ. ನಮ್ಮ ಸರ್ಕಾರ ಭಾವನೆಗೆ ಕೆಲಸ ಮಾಡುತ್ತಿಲ್ಲ. ಬದುಕಿಗಾಗಿ ಮಾಡುತ್ತಿದೆ. ರಾಜ್ಯದ ಪ್ರತಿ ಕುಟುಂಬಕ್ಕೆ ತಿಂಗಳಿಗೆ 5 ಸಾವಿರ ಹಣ ಉಳಿಸುತ್ತಿದ್ದೇವೆ” ಎಂದರು. ಹೆಲ್ತ್ ಟೂರಿಸಂಗೆ ಕರ್ನಾಟಕ ಹೆಸರಾಗುತ್ತಿದೆ “ನಮ್ಮ ರಾಜ್ಯದಲ್ಲಿ 70 ಕ್ಕೂ ಹೆಚ್ಚು ವೈದ್ಯಕೀಯ ಕಾಲೇಜುಗಳಿವೆ. ಸುಮಾರು 1 ಸಾವಿರಕ್ಕೂ…

Read More