Subscribe to Updates
Get the latest creative news from FooBar about art, design and business.
Author: ವಸಂತ ಬಿ ಈಶ್ವರಗೆರೆ
ವಸಂತ ಬಿ ಈಶ್ವರಗೆರೆ (Vasantha B Eshwaragere) ಅವರು ಕರ್ನಾಟಕದ ಪತ್ರಕರ್ತರು ಮತ್ತು ಕವಿ. ಉದಯ ನ್ಯೂಸ್, ಟಿವಿ5 ಕನ್ನಡ ಸೇರಿದಂತೆ ವಿವಿಧ ಸುದ್ದಿ ಮಾಧ್ಯಮಗಳಲ್ಲಿ ಸುಮಾರು 15 ವರ್ಷಗಳ ಅನುಭವವನ್ನು ಹೊಂದಿದ್ದಾರೆ. ಪ್ರಸ್ತುತ ಅವರು Kannada News Now ಡಿಜಿಡಿಲ್ ಮಾಧ್ಯಮದಲ್ಲಿ ಸಂಪಾದಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಇವರು ತಾಜಾ ಸುದ್ದಿ, ಸಾಹಿತ್ಯ, ಸಾಮಾಜಿಕ ವರದಿಗಾರಿಕೆ, ನ್ಯಾಯಾಂಗ ಸಂಬಂಧಿತ ವರದಿ ಮತ್ತು ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿದ ಸುದ್ದಿಗಳ ವರದಿಯಲ್ಲಿ ಸಕ್ರಿಯರಾಗಿದ್ದಾರೆ. ಗುಡವಿ ಪಕ್ಷಿಧಾಮದಂತಹ ಪ್ರವಾಸಿ ತಾಣಗಳ ಕುರಿತು ಲೇಖನಗಳನ್ನು ಬರೆದಿದ್ದಾರೆ.
ಬೆಂಗಳೂರು: ಮಧ್ಯಮ ಹಾಗೂ ಕೆಳ ಮಧ್ಯಮ ವರ್ಗದವರು ಸಣ್ಣ ಫೈನಾನ್ಸ್ ಸಂಸ್ಥೆಗಳಲ್ಲಿ ಸಾಲ ಪಡೆದು ಮರುಪಾವತಿಸುವಲ್ಲಿ ವಿಳಂಬಮಾಡುವ ಸಾಲಗಾರರ ಮೇಲೆ ಮೈಕ್ರೋಫೈನಾನ್ಸ್ ಸಂಸ್ಥೆಗಳು, ಸಾಲ ನೀಡಿಕೆ ಏಜೆನ್ಸಿಗಳು ಹಾಗೂ ಲೇವಾದೇವಿಗಾರರು ನೀಡುವ ಕಿರುಕುಳ ಹಾಗೂ ಬಲವಂತದ ವಸೂಲಾತಿ ಕ್ರಮಗಳನ್ನು ನಿಯಂತ್ರಿಸಲು ಸರ್ಕಾರವು ಕರ್ನಾಟಕ ಕಿರು (ಮೈಕ್ರೋ) ಸಾಲ ಮತ್ತು ಸಣ್ಣ ಸಾಲ (ಬಲವಂತದ ಕ್ರಮಗಳ ಪ್ರತಿಬಂಧಕ) ಅಧ್ಯಾದೇಶ 2025ನ್ನು ಫೆಬ್ರವರಿ 12 ರಿಂದ ಜಾರಿಗೊಳಿಸಿದ್ದು, ಆದೇಶದ ಮುಖ್ಯಾಂಶಗಳು ಹೀಗಿವೆ. ಮೈಕ್ರೋಫೈನಾನ್ಸ್ ಸಂಸ್ಥೆಗಳು ಸಾಲಗಾರರಿಂದ ಯಾವುದೇ ಭದ್ರತೆ ಪಡೆಯಬಾರದು. ಗ್ರಾಹಕರಿಗೆ ವಿಧಿಸುವ ಬಡ್ಡಿದರಗಳ ಬಗ್ಗೆ ಪಾರದರ್ಶಕವಾಗಿ ಲಿಖಿತ ರೂಪದಲ್ಲಿ ತಿಳಿಸಬೇಕು. ಈ ಆದೇಶವು ಭಾರತೀಯ ರಿಸರ್ವ್ ಬ್ಯಾಂಕ್, ಕೇಂದ್ರ ಮತ್ತು ರಾಜ್ಯ ಸರ್ಕಾರಗಳಲ್ಲಿ ನೊಂದಣಿಯಾಗದ ಮೈಕ್ರೋಫೈನಾನ್ಸ್ ಸಂಸ್ಥೆಗಳಿಗೆ ಮಾತ್ರ ಅನ್ವಯಿಸುತ್ತದೆ. ನೋಂದಾಯಿತ ಸಂಸ್ಥೆಗಳಿಂದ ಅಂದಾಜು 60 ಸಾವಿರ ಕೋಟಿ ರೂ ಸಾಲವನ್ನು ಸುಮಾರು 1.09 ಕೋಟಿ ಸಾಲಗಾರರು ಪಡೆದಿದ್ದಾರೆ. ನೋಂದಣಿಯಾಗದ ಸಂಸ್ಥೆಗಳಿಂದ ಸಾಲ ಪಡೆದವರ ಮಾಹಿತಿ ನಿಖರವಾಗಿ ಲಭ್ಯವಿಲ್ಲವಾದರೂ, ಅಂದಾಜು 40 ಸಾವಿರ ಕೋಟಿ…
ಬೆಂಗಳೂರು : ಸಂಸದ ತೇಜಸ್ವಿ ಸೂರ್ಯ ರವರು ಗುರುವಾರ ನಡೆದ ಏರೋ ಶೋನಲ್ಲಿ ಭಾರತದ ಸಂಪೂರ್ಣ ಸ್ವದೇಶಿ ನಿರ್ಮಿತ ತರಬೇತಿ ವಿಮಾನವಾದ HTT-40 ನಲ್ಲಿ ಹಾರಾಟವನ್ನು ನಡೆಸಿದರು. ಹಾರಾಟದ ನಂತರ ಮಾತನಾಡಿದ ಸಂಸದರು “HTT-40 ತಯಾರಿಕೆಯ ಹಿಂದಿನ ದಿಗ್ಭ್ರಮೆಗೊಳಿಸುವಂತಹ ಪ್ರಯಾಣದ ಹಿನ್ನೆಲೆಯನ್ನು ತಿಳಿಸಿದರು. ಹಗರಣಗಳಿಂದ ಕೂಡಿದ್ದ ಯುಪಿಎ ಆಡಳಿತದ ನಂತರ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ನೇತೃತ್ವದಲ್ಲಿ ಭಾರತವು ತನ್ನದೇ ಆದ ಸ್ಥಳೀಯ ಮೂಲ ತರಬೇತಿ ವಿಮಾನವನ್ನು ಅಭಿವೃದ್ಧಿಪಡಿಸುವ ಮೂಲಕ ಸ್ವಾವಲಂಬನೆಯ ಪ್ರತೀಕವಾಗಿದೆ ಎಂದು ಹೇಳಿದರು. ಭಾರತೀಯ ವಾಯುಪಡೆ (IAF) ಗಾಡಿ ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ (HAL) ಅಭಿವೃದ್ಧಿಪಡಿಸಿದ HTT-40, ನಾಲ್ಕು-ಬ್ಲೇಡ್ ಟರ್ಬೊ-ಪ್ರಾಪ್ ಎಂಜಿನ್ನಿಂದ ನಡೆಸಲ್ಪಡುವ ಸಂಪೂರ್ಣ ಏರೋಬ್ಯಾಟಿಕ್ ವಿಮಾನವಾಗಿದೆ. ಪ್ರಧಾನಮಂತ್ರಿಯವರ ‘ಆತ್ಮನಿರ್ಭರ್ ಭಾರತ್’ ದೃಷ್ಟಿಗೆ ಹೊಂದಿಕೆಯಾಗುವ ಮೂಲಕ ರಕ್ಷಣೆ ಮತ್ತು ವಾಯುಯಾನದಲ್ಲಿ ಭಾರತದ ಸ್ವಾವಲಂಬನೆಯ ಅನ್ವೇಷಣೆಯಲ್ಲಿ HTT-40 ಮಹತ್ವದ ಮೈಲಿಗಲ್ಲು ಗುರುತಿಸುತ್ತದೆ. ಇದೇ ವೇಳೆ ಸಂಸದ ತೇಜಸ್ವಿ ಸೂರ್ಯ, “HTT-40ಯು ಹಗರಣದಿಂದ ಸ್ವಾವಲಂಬನೆಯತ್ತ, ವಿದೇಶಿ ಅವಲಂಬನೆಯಿಂದ ಆತ್ಮನಿರ್ಭರ್ತದವರೆಗೆ ಭಾರತದ ಪ್ರಯಾಣವನ್ನು ಪ್ರತಿನಿಧಿಸುತ್ತದೆ”…
ನವದೆಹಲಿ: ಗುಪ್ತಚರ ಬೆದರಿಕೆ ಮೌಲ್ಯಮಾಪನಗಳ ಆಧಾರದ ಮೇಲೆ ಟಿಬೆಟಿಯನ್ ಆಧ್ಯಾತ್ಮಿಕ ನಾಯಕ ದಲೈ ಲಾಮಾ ಅವರಿಗೆ ಗೃಹ ಸಚಿವಾಲಯ (ಎಂಎಚ್ಎ) ಗುರುವಾರ ಝಡ್-ವರ್ಗದ ಭದ್ರತೆಯನ್ನು ಒದಗಿಸಿದೆ ಎಂದು ಮೂಲಗಳುತಿಳಿಸಿವೆ. ಇಂಟೆಲಿಜೆನ್ಸ್ ಬ್ಯೂರೋ ನೀಡಿದ ಬೆದರಿಕೆ ಮೌಲ್ಯಮಾಪನ ವರದಿಯ ಆಧಾರದ ಮೇಲೆ ದಲೈ ಲಾಮಾ ಅವರ ಭದ್ರತೆಯನ್ನು ನವೀಕರಿಸಲಾಗಿದೆ. ಈ ವರ್ಧಿತ ಭದ್ರತಾ ವ್ಯವಸ್ಥೆಯಡಿ, 89 ವರ್ಷದ ಆಧ್ಯಾತ್ಮಿಕ ನಾಯಕ ಹಿಮಾಚಲ ಪ್ರದೇಶದ ಧರ್ಮಶಾಲಾದಲ್ಲಿರುವ ತಮ್ಮ ನಿವಾಸದಲ್ಲಿ ನಿಯೋಜಿಸಲಾದ ಸಶಸ್ತ್ರ ಸ್ಥಿರ ಗಾರ್ಡ್ಗಳು, ದಿನದ 24 ಗಂಟೆಯೂ ರಕ್ಷಣೆ ನೀಡುವ ವೈಯಕ್ತಿಕ ಭದ್ರತಾ ಅಧಿಕಾರಿಗಳು ಮತ್ತು ಪಾಳಿಗಳಲ್ಲಿ ಸಶಸ್ತ್ರ ಬೆಂಗಾವಲು ರಚಿಸುವ ಕಮಾಂಡೋಗಳು ಸೇರಿದಂತೆ ಒಟ್ಟು 33 ಭದ್ರತಾ ಸಿಬ್ಬಂದಿಯನ್ನು ಪಡೆಯಲಿದ್ದಾರೆ. ಹೆಚ್ಚುವರಿಯಾಗಿ, ತರಬೇತಿ ಪಡೆದ ಚಾಲಕರು ಮತ್ತು ಕಣ್ಗಾವಲು ಸಿಬ್ಬಂದಿ ಅವರ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಲು ಎಲ್ಲಾ ಸಮಯದಲ್ಲೂ ಕರ್ತವ್ಯದಲ್ಲಿರುತ್ತಾರೆ. ಟಿಬೆಟ್ನಲ್ಲಿ ಚೀನಾದ ಆಡಳಿತದಿಂದ ಪಲಾಯನ ಮಾಡಿದ ನಂತರ ಪೂಜ್ಯ ಟಿಬೆಟಿಯನ್ ಆಧ್ಯಾತ್ಮಿಕ ನಾಯಕ 1959 ರಿಂದ ಭಾರತದಲ್ಲಿ ವಾಸಿಸುತ್ತಿದ್ದಾರೆ. ಅವರ ಜಾಗತಿಕ…
ಬೆಂಗಳೂರು: ಕುಂಭಮೇಳದ ಸಮಯದಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆ ನಿವಾರಿಸಲು ಮೈಸೂರು ಮತ್ತು ತುಂಡ್ಲಾ ನಿಲ್ದಾಣಗಳ ನಡುವೆ ಒಂದು ಟ್ರಿಪ್ ವಿಶೇಷ ಎಕ್ಸ್ ಪ್ರೆಸ್ ರೈಲುಗಳನ್ನು ಓಡಿಸಲು ರೈಲ್ವೆ ಮಂಡಳಿ ಅನುಮೋದನೆ ನೀಡಿದೆ. ರೈಲು ಸಂಖ್ಯೆ 06219 ಮೈಸೂರು-ತುಂಡ್ಲಾ ವಿಶೇಷ ಎಕ್ಸ್ಪ್ರೆಸ್ ರೈಲು ಫೆ.20 ರಂದು (ಗುರುವಾರ) ಮೈಸೂರಿನಿಂದ ರಾತ್ರಿ 9:40 ಗಂಟೆಗೆ ಹೊರಟು, ಫೆಬ್ರವರಿ 23, 2025 ರಂದು (ಭಾನುವಾರ) ಬೆಳಿಗ್ಗೆ 9:30 ಗಂಟೆಗೆ ತುಂಡ್ಲಾ ನಿಲ್ದಾಣ ತಲುಪಲಿದೆ. ಪುನಃ ಇದೇ ರೈಲು (06220) ಫೆ. 24 ರಂದು (ಸೋಮವಾರ) ತುಂಡ್ಲಾ ನಿಲ್ದಾಣದಿಂದ ಬೆಳಿಗ್ಗೆ 11:30 ಗಂಟೆಗೆ ಹೊರಟು, ಬುಧವಾರ (ಫೆ.26, 2025) ರಾತ್ರಿ 10 ಗಂಟೆಗೆ ಮೈಸೂರು ನಿಲ್ದಾಣಕ್ಕೆ ಆಗಮಿಸಲಿದೆ. ಈ ರೈಲು ಎರಡೂ ಮಾರ್ಗಗಳಲ್ಲಿ ಮಂಡ್ಯ, ರಾಮನಗರಂ, ಕೆಂಗೇರಿ, ಕೆಎಸ್ಆರ್ ಬೆಂಗಳೂರು, ಯಶವಂತಪುರ, ತುಮಕೂರು, ಅರಸೀಕೆರೆ, ಕಡೂರು, ಚಿಕ್ಕಜಾಜೂರು, ದಾವಣಗೆರೆ, ಹರಿಹರ, ರಾಣಿಬೆನ್ನೂರು, ಹಾವೇರಿ, ಎಸ್ಎಸ್ಎಸ್ ಹುಬ್ಬಳ್ಳಿ, ಧಾರವಾಡ, ಅಳ್ನಾವರ, ಲೋಂಡಾ, ಖಾನಾಪುರ, ಬೆಳಗಾವಿ, ಗೋಕಾಕ್ ರೋಡ್, ಘಟಪ್ರಭಾ,ರಾಯಬಾಗ, ಕುಡಚಿ,…
ನವದೆಹಲಿ: ಅನಾರೋಗ್ಯದ ನಡುವೆಯೂ ರಾಜ್ಯಸಭೆಯಲ್ಲಿ ಗುರುವಾರ ಬಜೆಟ್ ಮೇಲಿನ ಚರ್ಚೆಯಲ್ಲಿ ಪಾಲ್ಗೊಂಡಿದ್ದ ಮಾಜಿ ಪ್ರಧಾನಿಗಳಾದ ಹೆಚ್.ಡಿ.ದೇವೇಗೌಡರು; ಇಡೀ ರಾಷ್ಟ್ರದ ಎಲ್ಲಾ ವರ್ಗಗಳ ಜನರಿಗೆ ಶಕ್ತಿ ತುಂಬುವ ಆಯವ್ಯಯ ಮಂಡಿಸಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು. ಆ ಸಂದರ್ಭದಲ್ಲಿ ಸದನದಲ್ಲಿಯೇ ಹಾಜರಿದ್ದ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ ಮಾಜಿ ಪ್ರಧಾನಿಗಳು; ಎಲ್ಲರಿಗೂ ಅನುಕೂಲ ಆಗುವಂತಹ, ದೇಶದ ಅಭಿವೃದ್ಧಿಗೆ ದೂರದೃಷ್ಟಿಯ ಕೊಡುಗೆ ನೀಡುವಂತಹ ಬಜೆಟ್ ಮಂಡಿಸಿದ್ದೀರಿ ಎಂದರು. ಜನರ ಹಿತಾಸಕ್ತಿಯನ್ನು ಕಾಪಾಡಲು ವಿತ್ತ ಸಚಿವರು ತಮ್ಮ ಕೈಲಾದ ಎಲ್ಲವನ್ನೂ ಮಾಡಿದ್ದಾರೆ. ನಾನು ಅವರನ್ನು ಅಭಿನಂದಿಸುತ್ತೇನೆ ಎಂದು ಅವರು ಹೇಳಿದರು. ನಗರಗಳಿಗೆ ವಲಸೆ ಬಗ್ಗೆ ಕಳವಳ: ಇತ್ತೀಚಿನ ದಿನಗಳಲ್ಲಿ ಗ್ರಾಮೀಣ ಭಾಗದಿಂದ ಯುವಜನರು ನಗರಗಳಿಗೆ ವಲಸೆ ಬರುವವರ ಪ್ರಮಾಣ ಹೆಚ್ಚುತ್ತಲೇ ಇದೆ ಎಂದು ದೇವೇಗೌಡರು ಕಳವಳ ವ್ಯಕ್ತಪಡಿಸಿದರು. ಬೆಂಗಳೂರಿನ ಜನಸಂಖ್ಯೆ ಈಗ 1.4 ಕೋಟಿಗೆ ಮುಟ್ಟಿದೆ. ಎಲ್ಲಾ ಯುವಕರು ತಮ್ಮ ವಿದ್ಯಾಭ್ಯಾಸ ಮುಗಿದ ತಕ್ಷಣ ಹಳ್ಳಿಗಳನ್ನು ತೊರೆದು ನಗರಗಳಿಗೆ ಬಂದು ಸೇರುತ್ತಿದ್ದಾರೆ.…
ಶಿವಮೊಗ್ಗ : ವರದಾನದಿಯ ಅಭಿವೃದ್ಧಿಗಾಗಿ ಕೈಗೆತ್ತಿ ಕೊಂಡಿರುವ ಈ ಯೋಜನೆಗಳಿಂದಾಗಿ ತಾಲೂಕಿನ 39 ಗ್ರಾಮಗಳ ನಿವಾಸಿಗಳಿಗೆ ಶುದ್ಧ ಕುಡಿಯುವ ನೀರು ಪೂರೈಸಲು, ಕೆರೆ-ಕಟ್ಟೆ-ಕಾಲುವೆಗಳ ಭರ್ತಿ ಮಾಡಲು ಸಹಕಾರಿಯಾಗಲಿದೆ. ಅಲ್ಲದೆ ಅಂತರ್ಜಲ ಮಟ್ಟ ಹೆಚ್ಚಳವಾಗಲಿದೆ. 3013 ಎಕರೆ ಭೂ ಪ್ರದೇಶದಲ್ಲಿ ಕೃಷಿ ಚಟುವಟಿಕೆಗಳಿಗೆ ಅನುಕೂಲವಾಗಲಿದೆ. 53 ಕಿ.ಮೀ. ಯೋಜನಾ ವ್ಯಾಪ್ತಿಯ ಉದ್ದವಿದ್ದು, ಅಂದಾಜು 218.62 ಎಂ.ಸಿ.ಎಫ್ .ಟಿ. ಸಾಮರ್ಥ್ಯದ ನೀರಿನ ಶೇಖರಣೆ ಆಗಲಿದೆ ಎಂದರು. ಅವರು ಇಂದು ಸಣ್ಣ ನೀರಾವರಿ ಮತ್ತು ಅಂತರ್ಜಲ ಅಭಿವೃದ್ಧಿ ಇಲಾಖೆ ವತಿಯಿಂದ ಸೊರಬ ತಾಲೂಕಿನ ಕಡಸೂರು ಗ್ರಾಮದಲ್ಲಿ ಏರ್ಪಡಿಸಲಾಗಿದ್ದ ಕಾಗೋಡು, ತಡಗಳಲೆ, ಶುಂಠಿಕೊಪ್ಪ, ಕಡಸೂರು, ಚಿಕ್ಕಮಾಕೊಪ್ಪ ಮತ್ತು ದುಗ್ಲಿ ಗ್ರಾಮಗಲ್ಲಿ ಬ್ಯಾರೇಜ್ ನಿರ್ಮಾಣ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಿ ಮಾತನಾಡುತ್ತಿದ್ದರು. ಸೊರಬ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಗೊಳಪಡುವ ವಿವಿಧ ಗ್ರಾಮಗಳಲ್ಲಿ ಹರಿಯುವ ವರದಾ ನದಿಗೆ ಅಡ್ಡಲಾಗಿ 53 ಕೋಟಿ ರೂ. ಗಳ ವೆಚ್ಚದಲ್ಲಿ ಸರಣಿ ಬ್ಯಾರೇಜ್ಗಳ ನಿರ್ಮಾಣ ಕಾಮಗಾರಿಗೆ ಕಡಸೂರಿನಲ್ಲಿ ಹಾಗೂ ಲಕ್ಕವಳ್ಳಿಯ ಜೈನ ಮಠದ ಸಮೀಪದಲ್ಲಿ ಸುಮಾರು 495…
ಬೆಂಗಳೂರು: ಕೆ ಎಸ್ ಆರ್ ಟಿ ಸಿ ಬಸ್ಸಿನಲ್ಲಿ ಟಿಕೇಟ್ ಇಲ್ಲದೆ ಪ್ರಯಾಣಿಸಿದವರಿಗೆ ತಪಾಸಣಾಧಿಕಾರಿಗಳು ಬಿಗ್ ಶಾಕ್ ನೀಡಿದ್ದಾರೆ. ಬರೋಬ್ಬರಿ 3836 ಪ್ರಯಾಣಿಕರಿಗೆ 6.86 ಲಕ್ಷ ದಂಡವನ್ನು ವಿಧಿಸಿ, ವಸೂಲಿ ಮಾಡಿದ್ದಾರೆ. ಈ ಬಗ್ಗೆ ಪತ್ರಿಕಾ ಪ್ರಕಟಣೆಯಲ್ಲಿ ಕೆ ಎಸ್ ಆರ್ ಟಿಸಿ ಮಾಹಿತಿ ನೀಡಿದ್ದು, ಜನವರಿ-2025ರ ಮಾಹೆಯಲ್ಲಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು ತನ್ನ ತನಿಖಾ ತಂಡಗಳಿಂದ ತಪಾಸಣಾ ಕಾರ್ಯವನ್ನು ಚುರುಕುಗೊಳಿಸಿ ನಿಗಮದ ವ್ಯಾಪ್ತಿಯಲ್ಲಿ ಸಂಚರಿಸುವ 41446 ವಾಹನಗಳನ್ನು ತನಿಖೆಗೊಳಪಡಿಸಿ 3621 ಪ್ರಕರಣಗಳನ್ನು ಪತ್ತೆಹಚ್ಚಿ, 3836 ಟಿಕೇಟ್ ರಹಿತ ಪ್ರಯಾಣಿಕರಿಂದ 6,86,766/-ರೂಗಳನ್ನು ದಂಡದರೂಪದಲ್ಲಿ ವಸೂಲಿ ಮಾಡಿರುತ್ತಾರೆ ಎಂದಿದೆ. ನಿಗಮದ ಆದಾಯದಲ್ಲಿ ಸೋರಿಕೆ ಆಗುತ್ತಿದ್ದ 94,284/-ರೂಗಳನ್ನು ತನಿಖಾಧಿಕಾರಿಗಳು ಪತ್ತೆಹಚ್ಚಿದ್ದಾರೆ, ಹಾಗೂ ತಪ್ಪಿತಸ್ಥರ ವಿರುದ್ದ ಇಲಾಖಾ ರೀತ್ಯಾ ಸೂಕ್ತ ಶಿಸ್ತಿನ ಕ್ರಮವನ್ನುಜರುಗಿಸಲಾಗಿದೆ ಎಂಬುದಾಗಿ ತಿಳಿಸಿದೆ. ಆದ್ದರಿಂದ ಸಾರ್ವಜನಿಕ ಪ್ರಯಾಣಿಕರು, ಬಸ್ಸಿನಲ್ಲಿ ಪ್ರಯಾಣಿಸುವಾಗ ಸರಿಯಾದ ಟಿಕೇಟ್/ ಪಾಸ್ ಪಡೆದು ಪ್ರಯಾಣ ಮಾಡುವಂತೆ, ನಿಗಮವು ಈ ಮೂಲಕ ಪ್ರಯಾಣಿಕರಲ್ಲಿ ಕೋರಿದೆ. https://kannadanewsnow.com/kannada/felling-of-trees-at-kanthanahalli-in-soraba-probe-report-ready-action-to-be-taken-against-culprits/ https://kannadanewsnow.com/kannada/new-income-tax-bill-introduced-in-lok-sabha/ https://kannadanewsnow.com/kannada/bmrcl-succumbs-to-pressure-from-commuters-decides-to-reduce-namma-metro-fares/
ಬೆಂಗಳೂರು: ಶಿವಮೊಗ್ಗ ಜಿಲ್ಲೆಯ ಸೊರಬ ತಾಲ್ಲೂಕಿನ ಕಂತನಹಳ್ಳಿ ಗ್ರಾಮದಲ್ಲಿ ಮರಗಳ ಮಾರಣಹೋಮವೇ ನಡೆದಿದೆ ಎಂಬುದಾಗಿ ಮಾಧ್ಯಮಗಳಲ್ಲಿ ವರದಿಯಾಗಿತ್ತು. ಈ ವರದಿಯ ನಂತ್ರ ಅರಣ್ಯ ಸಚಿವ ಈಶ್ವರ್ ಖಂಡ್ರೆ ಅವರು ಸೂಕ್ತ ತನಿಖೆ ನಡೆಸಿ, ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಆದೇಶಿಸಿದ್ದರು. ಈ ಆದೇಶದಂತೆ ತನಿಖಾ ವರದಿಯನ್ನು ಡಿಎಫ್ಓ ಸಿದ್ಧಪಡಿಸಿದ್ದು, ಸಲ್ಲಿಕೆ ಮಾತ್ರವೇ ಬಾಕಿ ಇದೆ. ವರದಿ ಸಲ್ಲಿಕೆಯಾದ ನಂತ್ರ ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕ್ರಮವಾಗೋದು ಗ್ಯಾರಂಟಿ ಎನ್ನಲಾಗುತ್ತಿದೆ. ದಿನಾಂಕ 24-01-2025ರಂದು ಅರಣ್ಯ ಸಚಿವ ಈಶ್ವರ್ ಖಂಡ್ರೆ ಅವರು, ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿಗಳಿಗೆ ಪತ್ರ ಬರೆದಿದ್ದರು. ಅದರಲ್ಲಿ ಶಿವಮೊಗ್ಗ ಜಿಲ್ಲೆ ಸೊರಬ ತಾಲೂಕು ಕಂತನಹಳ್ಳಿ ಗ್ರಾಮದ ಸರ್ವೆ ನಂಂಬರ್ 8ರ ನಿತ್ಯ ಹರಿದ್ವರ್ಣದ ಸಮೃದ್ಧ ಕಾಡಿನಲ್ಲಿ ಅಪಾರ ಪ್ರಮಾಣದ ಬೆಲೆಬಾಳುವ ಪಾರಂಪರಿಕ ವೃಕ್ಷಗಳನ್ನು ಕಡಿದು ನಾಶಪಡಿಸಲಾಗಿದೆ ಎಂಬ ಸಚಿತ್ರ ದೂರು ಕಚೇರಿಗೆ ಬಂದಿದ್ದು, ಸರ್ಕಾರ ಇದನ್ನು ಗಂಭೀರವಾಗಿ ಪರಿಗಣಿಸಿದೆ ಎಂದಿದ್ದರು. ಕಂತನಹಳ್ಳಿ ಸನಂ 8ರಲ್ಲಿ…
ಬೆಂಗಳೂರು: ಅವಿವಾಹಿತರಿಗಾಗಿ ಇರುವ “ಟಿಂಡರ್” ಡೇಟಿಂಗ್ ಆಪ್, ಬಳಕೆದಾರರ ಸುರಕ್ಷತೆಯ ದೃಷ್ಟಿಯಿಂದ ಟಿಂಡರ್ ಡೇಟಿಂಗ್ ಸುರಕ್ಷತಾ ಮಾರ್ಗಸೂಚಿ ಬಿಡುಗಡೆ ಮಾಡಿದ್ದು, ಕನ್ನಡ ಭಾಷೆಯಲ್ಲೂ ಲಭ್ಯವಿದೆ. ಟಿಂಡರ್ ತನ್ನ ಸಿಎಸ್ಆರ್ ಅಡಿಯಲ್ಲಿ ಡೇಟಿಂಗ್ ಸುರಕ್ಷತಾ ಮಾರ್ಗಸೂಚಿಯನ್ನು ಬಿಡುಗಡೆ ಮಾಡಿದೆ. ಈ ಮಾರ್ಗಸೂಚಿಯು, ಕನ್ನಡ, ಹಿಂದಿ, ಮರಾಠಿ, ಬೆಂಗಾಲಿ ಭಾಷೆಯಲ್ಲೂ ಲಭ್ಯವಿದ್ದು, ನಿಮ್ಮ ಪ್ರಾದೇಶಿಕಭಾಷೆಯಲ್ಲೇ ಸುರಕ್ಷತೆಯ ಮಾರ್ಗಸೂಚಿಯನ್ನು ತಿಳಿದುಕೊಳ್ಳಬಹುದು. ಈ ಕುರಿತು ಮಾತನಾಡಿದ ಟಿಂಡರ್ನ ಮಾತೃ ಸಂಸ್ಥೆಯಾದ ಮ್ಯಾಚ್ ಗ್ರೂಪ್ನ ಸುರಕ್ಷತೆ ವಿಭಾಗದ ಉಪಾಧ್ಯಕ್ಷ ಯೋವೆಲ್ ರಾತ್, ಇಂದಿನ ಇಂಟರ್ನೆಂಟ್ ಯುಗದಲ್ಲಿ ಪ್ರತಿಯೊಂದು ಆಪ್ ದುರುಪಯೋಗ ಆಗುವ ಸಾಧ್ಯತೆಯೇ ಹೆಚ್ಚು. ಹೀಗಾಗಿ ಸಿಎಸ್ಆರ್ ಇಂಡಿಯಾ ಸಹಯೋಗದೊಂದಿಗೆ ಮಹಿಳೆಯರ ಮೇಲಿನ ಹಿಂಸೆ ತಡೆಯುವ ನಿಟ್ಟಿನಲ್ಲಿ ಸಮೀಕ್ಷೆ ನಡೆಸಲಾಯಿತು. ಈ ಮಾರ್ಗಸೂಚಿಗೆ ಸುರಕ್ಷತೆ ಪ್ರಯತ್ನಗಳನ್ನು ರೂಪಿಸುವಲ್ಲಿ ಈ ಸಹಭಾಗಿತ್ವವು ಪ್ರಮುಖ ಪಾತ್ರವನ್ನು ವಹಿಸಿದೆ. ಅಲ್ಲದೆ, ಭಾರತದಲ್ಲಿ ಆನ್ಲೈನ್ ಡೇಟಿಂಗ್ ಸುರಕ್ಷತೆಯ ಬಗ್ಗೆ ಶಿಕ್ಷಣ ಮತ್ತು ಜಾಗೃತಿಯನ್ನು ಮೂಡಿಸುವ ನಿಟ್ಟಿನಲ್ಲಿಯೂ ಹೆಜ್ಜೆ ಇಡಲಾಗಿದೆ. ಇತ್ತೀಚಿನ ಟಿಂಡರ್ ಸಮೀಕ್ಷೆಯಲ್ಲಿ, ಡೇಟಿಂಗ್…
ಬೆಂಗಳೂರು : “ಮೆಟ್ರೋ ದರ ಇಳಿಸಬೇಕು ಎಂದು ನಮ್ಮ ಸರ್ಕಾರ ಅಭಿಪ್ರಾಯವನ್ನು ಬಿಎಂಆರ್ ಸಿಎಲ್ ಗೆ ತಿಳಿಸಿದ್ದು, ಅಂತಿಮ ತೀರ್ಮಾನ ಕೇಂದ್ರ ಸಮಿತಿಯದ್ದು” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ವಿಧಾನಸೌಧ ಆವರಣದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಗುರುವಾರ ಪ್ರತಿಕ್ರಿಯಿಸಿದರು. ಬಿಎಂಆರ್ ಸಿಎಲ್ ಮೆಟ್ರೋ ಟಿಕೆಟ್ ದರ ಕಡಿಮೆ ಮಾಡಲು ಮುಂದಾಗಿರುವ ಬಗ್ಗೆ ಕೇಳಿದಾಗ, “ನಮಗೂ ಅದಕ್ಕೂ ಸಂಬಂಧವಿಲ್ಲ. ಈ ವಿಚಾರ ರಾಜ್ಯ ಸರ್ಕಾರದ ಸುಪರ್ದಿಗೆ ಬರಲ್ಲ, ಇದಕ್ಕಾಗಿಯೇ ಕೇಂದ್ರ ಸಮಿತಿ ರಚಿಸಲಾಗಿದೆ. ಜನರ ಮನವಿ ಆಲಿಸಿ ಮುಖ್ಯಮಂತ್ರಿಗಳು ಮೆಟ್ರೋ ದರ ಇಳಿಸುವ ಬಗ್ಗೆ ಅಭಿಪ್ರಾಯ ತಿಳಿಸಿದ್ದಾರೆ. ಜನಸಾಮಾನ್ಯರು ಹಾಗೂ ಮೆಟ್ರೋ ಹಿತಾಸಕ್ತಿ ಕಾಯಲು ಯಾವ ನಿರ್ಧಾರ ಮಾಡುತ್ತಾರೋ ಮಾಡಲಿ. ಈ ದರ ನಿಗದಿಗೆ ನ್ಯಾಯಾಧೀಶರ ನೇತೃತ್ವದ ಪ್ರತ್ಯೇಕ ಕೇಂದ್ರ ಸಮಿತಿ ಮಾಡಲಾಗಿದೆ. ಆ ಸಮಿತಿಗೆ ನಾವು ನಮ್ಮ ಅಭಿಪ್ರಾಯ ತಿಳಿಸುತ್ತೇವೆ, ಅಂತಿಮ ನಿರ್ಧಾರ ಅವರದು” ಎಂದು ತಿಳಿಸಿದರು. “ಮೆಟ್ರೋ ವ್ಯವಸ್ಥಾಪಕ ನಿರ್ದೇಶಕರು ಹಾಗೂ ಅಧಿಕಾರಿಗಳ ಜತೆ ಬೆಳಗ್ಗೆ ಚರ್ಚೆ ಮಾಡಿದ್ದು,…










