Subscribe to Updates
Get the latest creative news from FooBar about art, design and business.
Author: kannadanewsnow09
ಬೆಂಗಳೂರು: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಕೇಸಲ್ಲಿ ಜೈಲು ಪಾಲಾಗಿರುವಂತ ಪವಿತ್ರಾಗೌಡಗೆ, ಮತ್ತೆ ನ್ಯಾಯಾಂಗ ಬಂಧನವನ್ನು ಸೆಪ್ಟೆಂಬರ್.9ರವರೆಗೆ ಕೋರ್ಟ್ ವಿಸ್ತರಿಸಿ ಆದೇಶಿಸಿದೆ. ಹೀಗಾಗಿ ಆರೋಪಿ ಪವಿತ್ರಾಗೌಡಗೆ ಜೈಲೇ ಗತಿ ಎನ್ನುವಂತೆ ಆಗಿದೆ. ಇಂದು ಪ್ರಕರಣ ಸಂಬಂಧ ಬೆಂಗಳೂರಿನ 57ನೇ ಸಿಸಿಹೆಚ್ ನ್ಯಾಯಾಲಯದಲ್ಲಿ ರೇಣುಕಾಸ್ವಾಮಿ ಕೊಲೆ ಆರೋಪಿ ಪವಿತ್ರಾಗೌಡ ಅವರ ನ್ಯಾಯಾಂಗ ಬಂಧನ ಕುರಿತಂತ ಅರ್ಜಿಯನ್ನು ವಿಚಾರಣೆ ನಡೆಸಿತು. ಜಾಮೀನು ಅರ್ಜಿಯ ವಿಚಾರಣೆಯ ನಡುವೆಯೂ ಕೋರ್ಟ್ ಸೆಪ್ಟೆಂಬರ್.9ರವರೆಗೆ ನ್ಯಾಯಾಂಗ ಬಂಧನ ವಿಸ್ತರಿಸಿ ಆದೇಶಿಸಿದೆ. ಅಂದಹಾಗೇ ನಿನ್ನೆ ಕೋರ್ಟ್ ನಲ್ಲಿ ಆರೋಪಿ ಸ್ಥಾನದಲ್ಲಿರುವಂತ ಮಹಿಳೆ ಹಾಗೂ ಆನಾರೋಗ್ಯದ ಕಾರಣದಿಂದಾಗಿ ಸಿಆರ್ ಪಿಸಿ ಸೆಕ್ಷನ್ ನಡಿ 437ನಂತೆ ಆರೋಪಿ ಪವಿತ್ರಾಗೌಡಗೆ ಜಾಮೀನು ನೀಡುವಂತೆ ಹಿರಿಯ ವಕೀಲ ಟಾಮಿ ಸೆಬಾಸ್ಟಿಯನ್ ವಾದಿಸಿದ್ದರು. ಈ ಕುರಿತಾದಂತ ವಿಚಾರಣೆ ಇಂದಿಗೆ ಮುಂದೂಡಲಾಗಿತ್ತು. ಆ ವಿಚಾರಣೆ ಬಾಕಿ ಬೆನ್ನಲ್ಲೇ, ಕೋರ್ಟ್ ಸೆಪ್ಟೆಂಬರ್.9ರವರೆಗೆ ನ್ಯಾಯಾಂಗ ಬಂಧನವನ್ನು ವಿಸ್ತರಿಸಿ ಆದೇಶಿಸಿದೆ. https://kannadanewsnow.com/kannada/bengaluru-power-outages-in-these-areas-of-the-city-on-august-29/ https://kannadanewsnow.com/kannada/breaking-court-extends-actor-darshans-judicial-custody-till-september-9/
ಬೆಂಗಳೂರು: 20/66/11ಕೆವಿ ಮತ್ತಿಕೆರೆ ಎಂ ಯು ಎಸ್ ಎಸ್ ದಿನಾಂಕ 29.08.2024 ರಂದು 10:00ಗಂಟೆಗಳಿಂದ 17:00ಗಂಟೆಗಳವರೆಗೆ ವಾರ್ಷಿಕ ನಿರ್ವಹಣೆ ಆದ್ದರಿಂದ ಈ ಉಪಕೇಂದ್ರದ ವ್ಯಾಪ್ತಿಯಲ್ಲಿ ಬರುವ ಕೆಳಗಿನ ಪ್ರದೇಶಗಳಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂಬುದಾಗಿ ಬೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ. ಎಲ್.ಜಿ. ಹಳ್ಳಿ, ಆರ್.ಎಮ್.ವಿ 2ನೇ ಹಂತ, ಸಂಜೀವಪ್ಪ ಕಾಲೋನಿ, ನ್ಯೂ ಬಿ.ಇ.ಎಲ್ ರಸ್ತೆ, ಎಂ.ಎಸ್. ಆರ್ ನಗರ, ಮೋಹನ್ ಕುಮಾರ ನಗರ, ಪಂಪಾ ನಗರ, ಬಿ.ಕೆ. ನಗರ,ಬಾಂಬೆ ಡೈಯಿಂಗ್ ರಸ್ತೆ, ಯಶವಂತಪುರ ಮೊದಲನೆ ಮುಖ್ಯ ರಸ್ತೆ, ಗೋಕುಲ, ಹೆಚ್.ಎಂ.ಟಿ. ಮುಖ್ಯ ರಸ್ತೆ, ಹೆಚ್.ಎಂ.ಟಿ. ಲೇ ಔಟ್, ಬೃಂದಾವನ ನಗರ, ಎಸ್.ಬಿ.ಎಮ್ ಕಾಲೋನಿ, ಎಂ.ಆರ್.ಜೆ ಕಾಲೋನಿ, ವಿ.ಆರ್.ಲೇ ಔಟ್, ಜೆ.ಪಿ ಪಾರ್ಕ್ ರಸ್ತೆಗಳಲ್ಲಿ ಆಗಸ್ಟ್.29ರ ನಾಳೆ ಕರೆಂಟ್ ಇರೋದಿಲ್ಲ ಎಂಬುದಾಗಿ ಬೆಸ್ಕಾಂ ತಿಳಿಸಿದೆ. https://kannadanewsnow.com/kannada/good-news-for-railway-passengers-special-train-service-between-mysuru-and-sengottai-launched/ https://kannadanewsnow.com/kannada/breaking-court-extends-actor-darshans-judicial-custody-till-september-9/ https://kannadanewsnow.com/kannada/the-process-of-transformation-has-begun-in-jammu-and-kashmir-under-the-bjp-central-government/
ಮೈಸೂರು: ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ಸರಿದೂಗಿಸಲು ನೈಋತ್ಯ ರೈಲ್ವೆಯ ಮೈಸೂರು ವಿಭಾಗವು ಮೈಸೂರು ಮತ್ತು ಸೆಂಗೊಟ್ಟೈ ನಡುವೆ ವಿಶೇಷ ರೈಲು ಸೇವೆಯನ್ನು ಪ್ರಾರಂಭಿಸಲು ನಿರ್ಧರಿಸಿದೆ. ಈ ಸೇವೆಯು ಎರಡು ಟ್ರಿಪ್ ಗಳಿಗೆ ಮಾತ್ರ ಲಭ್ಯವಿರುತ್ತದೆ. ಹೆಚ್ಚು ಆರಾಮದಾಯಕ ಪ್ರಯಾಣಕ್ಕಾಗಿ ಈ ಸೇವೆಯ ಲಾಭವನ್ನು ಪಡೆಯಲು ಪ್ರಯಾಣಿಕರನ್ನು ಪ್ರೋತ್ಸಾಹಿಸಲಾಗುತ್ತದೆ. ರೈಲು ವೇಳಾಪಟ್ಟಿ: 1.ರೈಲು ಸಂಖ್ಯೆ 06241 ಮೈಸೂರಿನಿಂದ ಸೆಂಗೊಟ್ಟೈ ಎಕ್ಸ್ಪ್ರೆಸ್: ಮೈಸೂರಿನಿಂದ ಸೆಪ್ಟೆಂಬರ್ 4, 2024 ರ ಬುಧವಾರ ಮತ್ತು ಸೆಪ್ಟೆಂಬರ್ 7, 2024 ರ ಶನಿವಾರ 21:20 ಗಂಟೆಗೆ ನಿರ್ಗಮಿಸುತ್ತದೆ ಮತ್ತು ಮರುದಿನ 16:50 ಗಂಟೆಗೆ ಸೆಂಗೊಟ್ಟೈಗೆ ಆಗಮಿಸುತ್ತದೆ ರೈಲು ಈ ಕೆಳಗಿನ ನಿಲ್ದಾಣಗಳಲ್ಲಿ ವಾಣಿಜ್ಯ ನಿಲುಗಡೆಗಳನ್ನು ಮಾಡುತ್ತದೆ ಮಂಡ್ಯ, ಮದ್ದೂರು, ರಾಮನಗರ, ಕೆಂಗೇರಿ, ಕೆಎಸ್ಆರ್ ಬೆಂಗಳೂರು, ಕೃಷ್ಣರಾಜಪುರಂ, ಬಂಗಾರಪೇಟೆ, ಕುಪ್ಪಂ, ಸೇಲಂ, ನಾಮಕ್ಕಲ್, ಕರೂರ್, ತಿರುಚಿರಾಪಳ್ಳಿ, ಪುದುಕೊಟ್ಟೈ, ಕಾರೈಕುಡಿ, ಶಿವಗಂಗಾ, ಮನಮದುರೈ, ಅರುಪ್ಪುಕ್ಕೊಟ್ಟೈ, ವಿರುದುನಗರ ಜಂಕ್ಷನ್, ಶಿವಕಾಶಿ, ಶ್ರೀವಿಲ್ಲಿಪುಟ್ಟೂರು, ರಾಜಪಾಲಯಂ, ಶಂಕರನ್ ಕೋವಿಲ್, ಪಂಬಾಕೋವಿಲ್ ಶಾಂಡಿ, ಕಡಯನಲ್ಲೂರ್, ತೆಂಕನಲ್ಲೂರ್. 2. ರೈಲು…
ಬೆಂಗಳೂರು: ಇಂದು ನಡೆದಂತ ಪ್ರೆಸ್ ಕ್ಲಪ್ ಆಫ್ ಬೆಂಗಳೂರು ಚುನಾವಣೆಯಲ್ಲಿ ಅಧ್ಯಕ್ಷರಾಗಿ ಆರ್.ಶ್ರೀಧರ್ ಪುನರಾಯ್ಕೆ ಆಗಿದ್ದಾರೆ. ಪ್ರಧಾನ ಕಾರ್ಯದರ್ಶಿಯಾಗಿ ಶಿವಕುಮಾರ್ ಬೆಳ್ಳಿತಟ್ಟೆ ಆಯ್ಕೆಯಾಗಿದ್ದಾರೆ. ಇಂದು ಪ್ರೆಸ್ ಕ್ಲಬ್ ಆಫ್ ಬೆಂಗಳೂರು ಪದಾಧಿಕಾರಿಗಳ ಆಯ್ಕೆಗಾಗಿ ಚುನಾವಣೆ ನಡೆಯಿತು. ಚುನಾವಣಾಧಿಕಾರಿಯಾಗಿದ್ದಂತ ಶೇಷಚಂದ್ರಿಕಾ ಅವರು ಗೆದ್ದಂತ ಅಭ್ಯರ್ಥಿಗಳ ಹೆಸರನ್ನು ಪ್ರಕಟಿಸಿದ್ದಾರೆ. ಪ್ರೆಸ್ ಕ್ಲಬ್ ಆಫ್ ಬೆಂಗಳೂರು ಚುನಾವಣೆಯಲ್ಲಿ ಅಧ್ಯಕ್ಷರಾಗಿ ಆರ್.ಶ್ರೀಧರ್ ಅವರು 404 ಮತಗಳ ಮೂಲಕ ಗೆಲುವು ಸಾಧಿಸಿದ್ದಾರೆ. ಉಪಾಧ್ಯಕ್ಷರಾಗಿ ಮೋಹನ್ ಕುಮಾರ್ ಬಿಎನ್ 417 ಮತಗಳನ್ನು ಪಡೆದು ಆಯ್ಕೆಯಾದ್ರೇ, ಪ್ರಧಾನ ಕಾರ್ಯದರ್ಶಿಯಾಗಿ ಶಿವಕುಮಾರ್ ಬೆಳ್ಳಿತಟ್ಟೆ 336 ಮತಗಳನ್ನು ಗಳಿಸಿ ಆಯ್ಕೆಯಾಗಿದ್ದಾರೆ ಅಂತ ತಿಳಿಸಿದರು. ಇನ್ನೂ ಕಮಿಟಿ ಸದಸ್ಯ ಸ್ಥಾನಕ್ಕೆ ಸ್ಪರ್ಧಿಸಿದ್ದಂತ ಶಿವಣ್ಣ 234, ಶರಣಬಸಪ್ಪ ಎ.ಹೆಚ್ 258, ಯಾಸಿರ್ ಮುಸ್ತಾಫ್ 259, ಮಮತಾಜ್ ಆಲಿಂ 272, ರೋಹಿಣಿ ಅಡಿಗ 306, ಮಂಜುನಾಥ್ ಸಿಆರ್ 281 ಮತಗಳನ್ನು ಪಡೆದು ಗೆಲುವು ಸಾಧಿಸಿದ್ದಾರೆ ಅಂತ ಘೋಷಣೆ ಮಾಡಿದರು. ಇಂದಿನ ಪ್ರೆಸ್ ಕ್ಲಬ್ ಆಫ್ ಬೆಂಗಳೂರು ಚುನಾವಣೆಯಲ್ಲಿ ಮಹಿಳಾ…
ಬೆಂಗಳೂರು: ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ 402 ಪೊಲೀಸ್ ಸಬ್ ಇನ್ಸ್ ಪೆಕ್ಟರ್ (ಸಿವಿಲ್) (ಪುರುಷ ಮತ್ತು ಮಹಿಳಾ) ಹಾಗೂ ಸೇವೆಯಲ್ಲಿರುವವರ (ಮಿಕ್ಕುಳಿದ) ಮತ್ತು ಕಲ್ಯಾಣ ಕರ್ನಾಟಕದ ಪ್ರದೇಶದ ಸ್ಥಳೀಯ ಹುದ್ದೆಗಳ ನೇಮಕಾತಿಗೆ ಅರ್ಜಿಯನ್ನು ಆಹ್ವಾನಿಸಲಾಗಿತ್ತು. ಈ ಹುದ್ದೆಗಳಿಗೆ ಪರೀಕ್ಷೆ ಬರೆಯಲು ಅರ್ಹತೆ ಪಡೆದಂತ ಅಭ್ಯರ್ಥಿಗಳ ಪಟ್ಟಿಯನ್ನು ಕೆಇಎ ಪ್ರಕಟಿಸಿದೆ. ಈ ಬಗ್ಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, 402 ಪಿಎಸ್ಐ ನೇಮಕಾತಿಗೆ ಅರ್ಜಿಯನ್ನು ಆಹ್ವಾನಿಸಲಾಗಿತ್ತು. ಈ ಹುದ್ದೆಗಳಿಗೆ ಮೇ.8ರಂದು ಲಿಖಿತ ಪರೀಕ್ಷೆಯನ್ನು ನಿಗದಿ ಪಡಿಸಿತ್ತು. ಆದ್ರೇ ಲೋಕಸಭಾ ಚುನಾವಣೆಯ ಕಾರಣ ಮುಂದೂಡಿಕೆ ಮಾಡಲಾಗಿತ್ತು. ಆ ಬಳಿಕೆ ಸೆಪ್ಟೆಂಬರ್.22, 2024ರಂದು ಲಿಖಿತ ಪರೀಕ್ಷೆಗೆ ಮರು ದಿನಾಂಕ ನಿಗದಿ ಪಡಿಸಿ ಪ್ರಕಟಿಸಲಾಗಿತ್ತು. ಇದೀಗ 402 ಹುದ್ದೆಗಳ ನೇಮಕಾತಿಗೆ ಪರೀಕ್ಷೆ ಬರೆಯಲು ಅರ್ಹತೆಯನ್ನು ಪಡೆದಂತ ಪಟ್ಟಿಯನ್ನು ಕೆಇಎ ಪ್ರಕಟಿಸಿದೆ. 402 ಪಿಎಸ್ಐ ನೇಮಕಾತಿ ಹುದ್ದೆಗಳಿಗೆ ಬರೋಬ್ಬರಿ 66,990 ಮಂದಿ ಪರೀಕ್ಷೆಯನ್ನು ಬರೆಯಲು ಅರ್ಹತೆಯನ್ನು ಪಡೆದಿದ್ದಾರೆ. https://kannadanewsnow.com/kannada/good-news-for-anganwadi-workers-helpers-in-the-state-cm-gives-in-principle-approval-for-hike-in-honorarium/ https://kannadanewsnow.com/kannada/state-govt-appoints-district-in-charge-secretaries-heres-the-list/ https://kannadanewsnow.com/kannada/assam-flood-situation-worsens-24-50-lakh-people-affected-in-30-districts/
ಬಳ್ಳಾರಿ: ರಾಜ್ಯದ ಅಂಗನವಾಡಿ ಕಾರ್ಯಕರ್ತೆಯರಿಗೆ, ಸಹಾಯಕಿಯರಿಗೆ ಸಿಹಿಸುದ್ದಿ ಎನ್ನುವಂತೆ ಸಿಎಂ ಸಿದ್ಧರಾಮಯ್ಯ ಅವರು ಗೌರವಧನ ಹೆಚ್ಚಳಕ್ಕೆ ತಾತ್ವಿಕ ಒಪ್ಪಿಗೆಯನ್ನು ನೀಡಿದ್ದಾರೆ ಎಂಬುದಾಗಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ತಿಳಿಸಿದ್ದಾರೆ. ಬಳ್ಳಾರಿ ನಗರದ ವಾಲ್ಮೀಕಿ ಸಮುದಾಯ ಭವನದಲ್ಲಿ ಶನಿವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಹಿರಿಯ ನಾಗರಿಕರ ಹಾಗೂ ವಿಕಲಚೇತನರ ಸಬಲೀಕರಣ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ ಏರ್ಪಡಿಸಲಾಗಿದ್ದ ವಿವಿಧ ಪರಿಕರಗಳ ವಿತರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಸಚಿವರು ಮಾತನಾಡಿದರು. ಗೌರವಧನ ಹೆಚ್ಚಳಕ್ಕೆ ಮುಖ್ಯಮಂತ್ರಿಗಳು ಅಸ್ತು: ರಾಜ್ಯದ ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರ ಗೌರವಧನ ಹೆಚ್ಚಳಕ್ಕೆ ಸಂಬಂಧಿಸಿದಂತೆ ಈಗಾಗಲೇ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಜೊತೆ ಚರ್ಚಿಸಲಾಗಿದ್ದು, ಮುಖ್ಯಮಂತ್ರಿಯವರು ತಾತ್ವಿಕ ಒಪ್ಪಿಗೆ ನೀಡಿದ್ದಾರೆ ಎಂದು ಹೇಳಿದರು. ಕಳಪೆ ಆಹಾರ ಪೂರೈಕೆಯಾದಲ್ಲಿ ಗಮನಕ್ಕೆ ತನ್ನಿ: ಅಂಗನವಾಡಿ ಕೇಂದ್ರಗಳಿಗೆ ಪೂರೈಕೆಯಾಗುವ ಆಹಾರ ಸಾಮಗ್ರಿಗಳ ಗುಣಮಟ್ಟ ಕಾಯ್ದುಕೊಳ್ಳಬೇಕು. ಆಹಾರ ಸಾಮಾಗ್ರಿಗಳು ಕಳಪೆ ಇದ್ದಲ್ಲಿ ಅಥವಾ ಯಾವುದೇ ಲೋಪದೋಷ ಕಂಡುಬಂದಲ್ಲಿ ಗಮನಕ್ಕೆ ತರಬೇಕು. ಇಲ್ಲವಾದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ…
ಬೆಂಗಳೂರು: RTO ಇಲಾಖೆಯಲ್ಲಿ ಅತ್ಯಂತ ಪಾರದರ್ಶಕ ಹಾಗೂ ನಿಸ್ಪಕ್ಷಪಾತವಾಗಿ ಯಾವುದೇ ರೀತಿಯ ಮಾನವ ಹಸ್ತಕ್ಷೇಪಕ್ಕೆ ಆಸ್ಪದವಿಲ್ಲದೆ ಸುಮಾರು 8 ವರುಷಗಳ ನಂತರ ಮೋಟಾರು ವಾಹನ ನಿರೀಕ್ಷಕರ ಹುದ್ದೆ ಭರ್ತಿ ಮಾಡಿಕೊಳ್ಳಲಾಗಿದೆ. ಈ ಮೂಲಕ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರ ಅವಧಿಯಲ್ಲಿ ಮತ್ತೊಂದು ಮಹತ್ವದ ಮೈಲಿಗಲ್ಲು ಸಾಧಿಸಲಾಗಿದೆ. ಹೌದು.. ಕರ್ನಾಟಕ ಲೋಕಸೇವಾ ಆಯೋಗವು ಅಧಿಸೂಚನೆ ದಿನಾಂಕ: 04-02-2016 ರಲ್ಲಿ ಸಾರಿಗೆ ಇಲಾಖೆಯ ಮೋಟಾರು ವಾಹನ ನಿರೀಕ್ಷಕರ 150 ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿತ್ತು. ಸದರಿ ಆಯ್ಕೆ ಪ್ರಕ್ರಿಯೆಯು ವಿವಿಧ ನ್ಯಾಯಾಲಯಗಳಲ್ಲಿ ಪ್ರಶ್ನಿಸಲಾಗಿದ್ದು, ದಿನಾಂಕ: 25-08-2021 ರಂದು ಉಚ್ಚ ನ್ಯಾಯಾಲಯವು ಅಂತಿಮ ತೀರ್ಪು ನೀಡಿದ್ದು ಅದರಂತೆ ಕರ್ನಾಟಕ ಲೋಕಸೇವಾ ಆಯೋಗವು ದಿನಾಂಕ: 22-07-2022 ಮತ್ತು ದಿನಾಂಕ: 26-10-2023 ರಲ್ಲಿ 141 (122 [ಉಳಿಕೆ ಮೂಲ ವೃಂದ] + 19 [ಕಲ್ಯಾಣ ಕರ್ನಾಟಕ ವೃಂದ]) ಅಭ್ಯರ್ಥಿಗಳ ಅಂತಿಮ / ಪರಿಷ್ಕೃತ ಆಯ್ಕೆ ಪಟ್ಟಿಯನ್ನು ಪ್ರಕಟಿಸಿತ್ತು. ಈ ಆಯ್ಕೆ ಪಟ್ಟಿಗಳನ್ನು ಎಲ್ಲಾ ಮೂಲ…
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದಿಂದ ಅಂತರ ನಿಗಮ ವರ್ಗಾವಣೆಗೆ ಸಂಬಂಧಿಸಿದಂತೆ ಸಲ್ಲಿಕೆಯಾಗಿದ್ದಂತ KSRTC ನೌಕರರ ಅರ್ಜಿಗಳನ್ನು ಪರಿಶೀಲಿಸಿದ ನಂತ್ರ, ಇಂದು ವರ್ಗಾವಣೆ ಪಟ್ಟಿಯನ್ನು ಪ್ರಕಟಿಸಲಾಗಿದೆ. ಈ ಪಟ್ಟಿಗೆ ಆಕ್ಷೇಪಣೆಯನ್ನು ಸಲ್ಲಿಸೋದಕ್ಕೆ ಜುಲೈ.10ರವರೆಗೆ ಅವಕಾಶ ನೀಡಲಾಗಿದೆ. ಈ ಕುರಿತಂತೆ KSRTC ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ದರ್ಜೆ-3 ಮೇಲ್ವಿಚಾರಕೇತರ ಮತ್ತು ದರ್ಜೆ-4 ನೌಕರರ 2023ನೇ ಸಾಲಿನ ಅಂತರ ನಿಗಮ ವರ್ಗಾವಣೆ ಪ್ರಕ್ರಿಯೆ ದಿನಾಂಕ: 05-07-2023 ರ ಬೆಳಿಗ್ಗೆ 11:00 ಗಂಟೆಯಿಂದ ಪ್ರಾರಂಭವಾಗಿದ್ದು, ದಿನಾಂಕ:31-12-2023 ರ ಸಂಜೆ 5:30 ರವರೆಗೆ ಆನ್-ಲೈನ್ ಮೂಲಕ www.ksrtc.org/transfer ರಲ್ಲಿ ಪರಸ್ಪರ ವರ್ಗಾವಣೆಗೆ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿರುತ್ತದೆ ಎಂದಿದೆ. ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ, ಬೆಂ.ಮ.ಸಾ.ಸಂಸ್ಥೆ, ಕ.ಕ.ರ.ಸಾ.ಸಂಸ್ಥೆ ಮತ್ತು ವಾ.ಕ.ರ.ಸಾ.ಸಂಸ್ಥೆಗಳ ದರ್ಜೆ-3 ಮೇಲ್ವಿಚಾರಕೇತರ ಮತ್ತು ದರ್ಜೆ-4 ರ ನೌಕರರಿಗೆ ಅಂತರ ನಿಗಮ ಪರಸ್ಪರ 958 ನೌಕರರು ಅರ್ಜಿ ಸಲ್ಲಿಸಿದ್ದು, ಈ ಪೈಕಿ 616 ನೌಕರರು ಅವರ ಕೋರಿಕೆ ಮೇರೆಗೆ ಅಂತರ ನಿಗಮ ಪರಸ್ಪರ ವರ್ಗಾವಣೆಗೊಂಡಿರುತ್ತಾರೆ.…
ಬಳ್ಳಾರಿ: ಗೃಹಲಕ್ಷ್ಮೀ ಯೋಜನೆ ಜೂನ್ ತಿಂಗಳ ಹಣವನ್ನು ಜಮಾ ಮಾಡಲಾಗಿದೆ. ಈಗ ಜುಲೈ ತಿಂಗಳ ಹಣ ಬಾಕಿ ಇದೆ. ಇದಲ್ಲದೇ ಕೆಲ ಯಜಮಾನಿ ಮಹಿಳೆಯರ ಖಾತೆಗೆ ಇನ್ನೂ ಬಾಕಿ ಹಣ ಜಮಾ ಆಗಬೇಕಿದೆ. ಅಂತಹವರಿಗೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಬಿಗ್ ಅಪ್ ಡೇಟ್ ನೀಡಿದ್ದಾರೆ. ಆ ಬಗ್ಗೆ ಮುಂದೆ ಓದಿ. ಬಳ್ಳಾರಿ ನಗರದ ವಾಲ್ಮೀಕಿ ಸಮುದಾಯ ಭವನದಲ್ಲಿ ಶನಿವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಹಿರಿಯ ನಾಗರಿಕರ ಹಾಗೂ ವಿಕಲಚೇತನರ ಸಬಲೀಕರಣ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ ಏರ್ಪಡಿಸಲಾಗಿದ್ದ ವಿವಿಧ ಪರಿಕರಗಳ ವಿತರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಸಚಿವರು ಮಾತನಾಡಿದರು. ಯಜಮಾನಿಯರ ಖಾತೆಗೆ ಹಣ ಜಮೆ ಬಳ್ಳಾರಿ ಜಿಲ್ಲೆಯಲ್ಲಿ ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲೊಂದಾದ ಗೃಹಲಕ್ಷ್ಮೀ ಯೋಜನೆಗೆ ಒಟ್ಟು ಶೇ.98 ರಷ್ಟು ಮಹಿಳೆಯರು ನೋಂದಾಯಿಸಿಕೊಂಡಿದ್ದು, ಇಲ್ಲಿಯವರೆಗೆ ಎಲ್ಲಾ ತಿಂಗಳ ಹಣ ಜಮಾ ಆಗುತ್ತಿದೆ. ಜೂನ್ ತಿಂಗಳ ಹಣವು ವಾರದಲ್ಲಿಯೇ ತಮ್ಮ ಖಾತೆಗಳಿಗೆ ಜಮಾ ಆಗಲಿದೆ. ಪ್ರಸ್ತಕ ತಿಂಗಳಿನ…
ಬಳ್ಳಾರಿ : ರಾಜ್ಯದಲ್ಲಿನ 7 ಸಾವಿರಕ್ಕೂ ಹೆಚ್ಚಿನ ಅಂಗನವಾಡಿ ಕೇಂದ್ರಗಳನ್ನು ಉನ್ನತೀಕರಿಸಲಾಗುವುದಲ್ಲದೆ, ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರಿಗೆ ನುರಿತರಿಂದ ಕೌಶಲ್ಯಾಭಿವೃದ್ಧಿ ತರಬೇತಿ ನೀಡಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಮತ್ತು ಹಿರಿಯ ನಾಗರಿಕರ ಹಾಗೂ ವಿಕಲಚೇತನರ ಸಬಲೀಕರಣ ಇಲಾಖೆ ಸಚಿವರಾದ ಲಕ್ಷ್ಮೀ ಆರ್. ಹೆಬ್ಬಾಳಕರ್ ಅವರು ಹೇಳಿದ್ದಾರೆ. ಬಳ್ಳಾರಿ ನಗರದ ವಾಲ್ಮೀಕಿ ಸಮುದಾಯ ಭವನದಲ್ಲಿ ಶನಿವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಹಿರಿಯ ನಾಗರಿಕರ ಹಾಗೂ ವಿಕಲಚೇತನರ ಸಬಲೀಕರಣ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ ಏರ್ಪಡಿಸಲಾಗಿದ್ದ ವಿವಿಧ ಪರಿಕರಗಳ ವಿತರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಸಚಿವರು ಮಾತನಾಡಿದರು. ಅಂಗನವಾಡಿ ಉನ್ನತಿಕರಣದಿಂದ ಮಕ್ಕಳ ಸರ್ವತೋಮುಖ ಬೆಳವಣಿಗೆ, ತೂಕ, ಆರೋಗ್ಯ ಮತ್ತು ಗುಣಮಟ್ಟದ ಶಿಕ್ಷಣಕ್ಕೆ ಪೂರಕವಾಗುತ್ತದೆ ಎಂದು ತಿಳಿಸಿದರು. ಗೌರವಧನ ಹೆಚ್ಚಳಕ್ಕೆ ಮುಖ್ಯಮಂತ್ರಿಗಳು ಅಸ್ತು ರಾಜ್ಯದ ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರ ಗೌರವಧನ ಹೆಚ್ಚಳಕ್ಕೆ ಸಂಬಂಧಿಸಿದಂತೆ ಈಗಾಗಲೇ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಜೊತೆ ಚರ್ಚಿಸಲಾಗಿದ್ದು, ಮುಖ್ಯಮಂತ್ರಿಯವರು ತಾತ್ವಿಕ ಒಪ್ಪಿಗೆ ನೀಡಿದ್ದಾರೆ ಎಂದು…














