Author: kannadanewsnow09

ಹಾಸನ: ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವೀಡಿಯೋ ಪ್ರಕರಣ ದಿನಕ್ಕೊಂದು ತಿರುವು ಪಡೆಯುತ್ತಿದೆ. ಸಂಸದ ಡಿ.ಕೆ ಸುರೇಶ್ ಆರೋಪದ ಬೆನ್ನಲ್ಲೇ, ಈಗ ಅಶ್ಲೀಲ ವೀಡಿಯೋ ಕೇಸ್ ಗೆ ಬಿಗ್ ಟ್ವಿಸ್ಟ್ ಸಿಕ್ಕಿದೆ. ಅದೇ ಹಾಸನದ ಸಂಸದರ ಸರ್ಕಾರಿ ನಿವಾಸದಲ್ಲೇ ನೀಚ ಕೃತ್ಯ ನಡೆದಿದೆ ಎನ್ನಲಾಗುತ್ತಿದೆ. ಹಾಸನದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಕಚೇರಿ ಸಮೀಪದಲ್ಲೇ ಸಂಸದರ ಸರ್ಕಾರಿ ನಿವಾಸವಿದೆ. 2019ರಲ್ಲಿ ಹೆಚ್.ಡಿ ದೇವೇಗೌಡ ಪ್ರಧಾನಿಯಾಗಿದ್ದಂತ ಸಂದರ್ಭದಲ್ಲಿ ಅವರಿಗೆ ಅನುಕೂಲ ಕಲ್ಪಿಸೋ ಕಾರಣಕ್ಕಾಗಿ ಸರ್ಕಾರದಿಂದಲೇ ಸಂಸದರ ನಿವಾಸವನ್ನು ಕಟ್ಟಿಸಿಕೊಡಲಾಗಿತ್ತು. ಹಾಸನ ಸಂಸದರಾಗಿ ಪ್ರಜ್ವಲ್ ರೇವಣ್ಣ ಆಯ್ಕೆಯಾದ ನಂತ್ರ, ಅವರಿಗೆ ನಿವಾಸವನ್ನು ಹಸ್ತಾಂತರಿಸಲಾಗಿತ್ತು. ಪ್ರಜ್ವಲ್ ರೇವಣ್ಣ ಅವರು ಹಾಸನಕ್ಕೆ ಬಂದಾಗಲೆಲ್ಲೇ ಸಂಸದರ ನಿವಾಸದಲ್ಲೇ ಉಳಿದು ಕೊಳ್ಳುತ್ತಿದ್ದರಂತೆ. ಎರಡು ಅಂತಸ್ತು ಒಳಗೊಂಡಿರುವಂತ ಸಂಸದರ ನಿವಾಸದಲ್ಲಿ ಕೆಳ ಅಂತಸ್ತು ಹಾಗೂ ಮೊದಲ ಮಹಡಿಯನ್ನು ಒಳಗೊಂಡಿರುವಂತ ನಿವಾಸವಾಗಿದೆ. ಇದೇ ನಿವಾಸದಲ್ಲಿ ಅಂದು ದೇವೇಗೌಡ ಅವರಿಗೆ ಅನುಕೂಲವಾಗಲಿ ಅಂತ ಲಿಫ್ಟ್ ವ್ಯವಸ್ಥೆ ಕೂಡ ಮಾಡಲಾಗಿತ್ತು. ಹಾಸನಕ್ಕೆ ಬಂದಾಗಲೆಲ್ಲ ಸಂಸದ ಪ್ರಜ್ವಲ್ ರೇವಣ್ಣ…

Read More

ಬೆಂಗಳೂರು: ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವೀಡಿಯೋ ಪ್ರಕರಣ ಸಂಬಂಧ ವಿಶೇಷ ತನಿಖಾ ತಂಡದಿಂದ ಚುರುಕುಗೊಳಿಸಲಾಗಿದೆ. ಇದೇ ಸಂದರ್ಭದಲ್ಲಿ ನಮಗೆ ತೊಂದ್ರೆ ಕೊಡಬೇಡಿ. ತೊಂದ್ರೆ ಕೊಟ್ರೆ ನಾವು ಆತ್ಮಹತ್ಯೆ ಮಾಡಿಕೊಳ್ತೀವಿ ಎಂಬುದಾಗಿ ವೀಡಿಯೋದಲ್ಲಿರುವಂತ ಸಂತ್ರಸ್ತೆಯರು ಹೇಳಿಕೆ ನೀಡೋದಕ್ಕೆ ಹಿಂದೇಟು ಹಾಕುತ್ತಿರೋದಾಗಿ ತಿಳಿದು ಬಂದಿದೆ. ಅಶ್ಲೀಲ ವೀಡಿಯೋ ಪ್ರಕರಣ ಸಂಬಂಧ ಎಸ್ಐಟಿಯಿಂದ ತನಿಖೆ ನಡೆಸಲಾಗುತ್ತಿದೆ. ಎಸ್ಐಟಿಯ ತನಿಖಾ ತಂಡ ದೂರವಾಣಿಯ ಮೂಲಕ ದೂರುದಾರೆ ಸೇರಿದಂತೆ ವೀಡಿಯೋದಲ್ಲಿರುವಂತ ಮಹಿಳೆಯರನ್ನು ಸಂಪರ್ಕಿಸಿ ಹೇಳಿಕೆ ನೀಡೋದಕ್ಕೆ ಮನವೊಲಿಕೆ ಮಾಡೋ ಕಾರ್ಯದಲ್ಲಿ ನಿರತವಾಗಿದೆ. ಪ್ರಜ್ವಲ್ ರೇವಣ್ಣ ಅಶ್ಲೀಲ ವೀಡಿಯೋ ಪ್ರಕರಣ ಸಂಬಂಧ ಹೇಳಿಕೆ ನೀಡುವಂತೆ ಎಸ್ಐಟಿ ತನಿಖಾ ತಂಡ ಮಾಹಿತಿ ಕೋರಿದ್ರೇ, ನಮಗೆ ತೊಂದ್ರೆ ಕೊಟ್ಟರೇ ಆತ್ಮಹತ್ಯೆ ಮಾಡಿಕೊಳ್ಳುತ್ತೇವೆ ಎಂಬುದಾಗಿ ಹೇಳುತ್ತಿರೋದಾಗಿ ತಿಳಿದು ಬಂದಿದೆ. ದೂರುದಾರೆ ಬಿಟ್ಟು ಉಳಿದವರು ಪ್ರತಿಕ್ರಿಯೆ ನೀಡೋದಕ್ಕೆ ನಿರಾಕರಿಸಿದ್ದಾರೆ ಎನ್ನಲಾಗಿದೆ. ವೀಡಿಯೋದಲ್ಲಿರುವಂತ ಮಹಿಳೆಯರನ್ನು ಸಂಪರ್ಕಿಸಿ ಎಸ್ಐಟಿ ಹೇಳಿಕೆ ಪಡೆಯೋದಕ್ಕೆ ಪ್ರಯತ್ನಿಸಿದ್ರೂ ಕೂಡ, ಸಂತ್ರಸ್ತೆಯರು ಮಾತ್ರ ಏನು ಹೇಳಲ್ಲ. ಏನು ಕೇಳ್ಬೇಡಿ ಎಂಬುದಾಗಿ ಹಠ ಹಿಡಿದ್ದಾರೆ…

Read More

ಬೆಂಗಳೂರು: ಸುಖಾ ಸುಮ್ಮನೇ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಅವರಿವರ ಮೇಲೆ ಪ್ರಜ್ವಲ್ ರೇವಣ್ಣ ಅಶ್ಲೀಲ ವೀಡಿಯೋ ಕುರಿತಂತೆ ಆರೋಪ ಮಾಡುತ್ತಿದ್ದಾರೆ. ಆದ್ರೇ ಪ್ರಜ್ವಲ್ ಅಶ್ಲೀಲ ವೀಡಿಯೋ ಬಿಡುಗಡೆಗೆ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿಯೇ ಕಾರಣ ಎಂಬುದಾಗಿ ಮಾಜಿ ಪರಿಷತ್ ಸದಸ್ಯ ಹಾಗೂ ಕೆಪಿಸಿಸಿ ಮಾಧ್ಯಮ ವಿಭಾಗ ಮುಖ್ಯಸ್ಥ ರಮೇಶ್ ಬಾಬು ಗಂಭೀರ ಆರೋಪ ಮಾಡಿದ್ದಾರೆ. ಇಂದು ಕೆಪಿಸಿಸಿ ಕಚೇರಿಯಲ್ಲಿ ನಡೆದ ಮಾಧ್ಯಮ ಮತ್ತು ಸಂವಹನ ವಿಭಾಗದ ಅಧ್ಯಕ್ಷರಾದ ರಮೇಶ್‌ ಬಾಬು ಅವರ ಮಾಧ್ಯಮಗೋಷ್ಠಿ ನಡೆಸಿ ಮಾತನಾಡಿದರು. ಪೆನ್‌ ಡ್ರೈವ್‌ ವಿಚಾರ ಕುಮಾರಸ್ವಾಮಿ ಹಾಗೂ ಬಿಜೆಪಿಯ ಎಲ್ಲಾ ನಾಯಕರಿಗೆ ಮೊದಲೇ ತಿಳಿದಿತ್ತು. ಬಿಜೆಪಿ ನಾಯಕ, ವಕೀಲ ದೇವರಾಜೇಗೌಡ ಹಾಗೂ ಮಾಜಿ ಶಾಸಕ ಪ್ರೀತಂ ಗೌಡ ಕೂಡ ಕುಮಾರಸ್ವಾಮಿ ಅವರನ್ನು ಭೇಟಿಯಾಗಿದ್ದರು. ಕುಮಾರಸ್ವಾಮಿ ಅವರು ಅನವಶ್ಯಕವಾಗಿ ತಮ್ಮ ಕುಟುಂಬದ ಒಳ ಜಗಳವನ್ನು ಕಾಂಗ್ರೆಸ್‌ ಪಕ್ಷ, ಡಿ.ಕೆ.ಶಿವಕುಮಾರ್ , ಸಿಎಂ ಸಿದ್ದರಾಮಯ್ಯ ಅವರ ಮೇಲೆ ಹಾಕುತ್ತಿದ್ದಾರೆ. ಉದ್ದೇಶಪೂರ್ವಕವಾಗಿ ಇವರ ಹೆಸರು ತರುವುದು ಬೇಡ. ತನಿಖೆಯ ಹಾದಿ ತಪ್ಪಿಸುವುದು…

Read More

ಬೆಂಗಳೂರು: ತಾನು ಸಾವಿರಾರು ಮಹಿಳೆಯರ ಮೇಲೆ ಎಸಗಿರುವ ಕೃತ್ಯವನ್ನು ತಾನೇ ಚಿತ್ರೀಕರಣ ಮಾಡಿಕೊಂಡಿದ್ದಾನೆ. ಇದು ಲೈಂಗಿಕ ಹಗರಣವಲ್ಲ ದೇಶದ ದೊಡ್ಡ ಅತ್ಯಾಚಾರ ಪ್ರಕರಣ ಎಂಬುದಾಗಿ ಎಐಸಿಸಿ ಮಾಧ್ಯಮ, ಸಂವಹನ ವಿಭಾಗದ ಅಧ್ಯಕ್ಷೆ ಸುಪ್ರಿಯಾ ಶ್ರಿನಾಟೆ ಗಂಭೀರ ಆರೋಪ ಮಾಡಿದ್ದಾರೆ. ಇಂದು ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದಂತ ಅವರು,  ಈ ದೇಶದಲ್ಲಿ ಯಾವುದೇ ಮಹಿಳೆಯ ಮೇಲೆ ಶೋಷಣೆ ನಡೆದರೂ ಪ್ರಧಾನಿ ಮೋದಿ ಅವರು ಕಣ್ಣು ಮುಚ್ಚಿಕೊಂಡು ಕುಳಿತಿರುತ್ತಾರೆ. ಹಾಗೂ 500 ಮೀ ದೂರ ನಿಲ್ಲುತ್ತಾರೆ. ಮಹಿಳೆಯರು ಅತ್ತು ಕರೆದರೂ ಅವರಿಗೆ ಕೇಳಿಸುವುದಿಲ್ಲ. ದೇಶದ ಪ್ರಧಾನಿ ಮೋದಿ ಅವರು ಲೋಕಸಭಾ ಚುನಾವಣೆಯ 15 ದಿನ ಮೊದಲು ಪ್ರಜ್ವಲ್‌ ರೇವಣ್ಣ ಪರವಾಗಿ ಮತ ಕೇಳುತ್ತಾರೆ. ಒಂದೇ ವೇದಿಕೆಯನ್ನು ಹಂಚಿಕೊಂಡು ನಿಂತಿದ್ದಾರೆ. ಮೋದಿ ಅವರು ಇದೇ ಮೊದಲ ಬಾರಿಗೆ ಆರೋಪಿಯನ್ನು ಭೇಟಿ ಮಾಡುವುದಿಲ್ಲ. ಮೈತ್ರಿ ಮಾತುಕತೆ ವೇಳೆ ದೆಹಲಿಯಲ್ಲಿ ಭೇಟಿ ಮಾಡಿದ್ದಾರೆ ಎಂದರು. ರಾಕ್ಷಸೀ ಕೃತ್ಯ ಎಸಗಿರುವ ಪ್ರಜ್ವಲ್‌ ರೇವಣ್ಣ ಅವರು ಮೋದಿ ಪರಿವಾರದ ವ್ಯಕ್ತಿ. ಈತ ಎಸಗಿರುವ…

Read More

ನವದೆಹಲಿ: ಶಿಗೂ ಟೆಕ್ನಾಲಜಿ ಪ್ರೈವೇಟ್ ಲಿಮಿಟೆಡ್ ಮತ್ತು ಲಿಲಿಯನ್ ಟೆಕ್ನೋಕ್ಯಾಬ್ ಪ್ರೈವೇಟ್ ಲಿಮಿಟೆಡ್ ಒಳಗೊಂಡ ಅಪ್ಲಿಕೇಶನ್ ಆಧಾರಿತ ಮೋಸದ ಹೂಡಿಕೆ ಯೋಜನೆಗಳ ವಿರುದ್ಧ ಭಾರಿ ಸಮರವನ್ನೇ ಸಾರಿದೆ. ಇಂದು ಕೇಂದ್ರ ತನಿಖಾ ದಳ (Central Bureau of Investigation-CBI) ಒಂಬತ್ತು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ (ಯುಟಿ) 30 ಸ್ಥಳಗಳನ್ನು ಒಳಗೊಂಡ ರಾಷ್ಟ್ರವ್ಯಾಪಿ ಶೋಧ ಕಾರ್ಯಾಚರಣೆಯನ್ನು ಪ್ರಾರಂಭಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ದೆಹಲಿ (ಎನ್ಸಿಆರ್), ರಾಜಸ್ಥಾನ, ಉತ್ತರ ಪ್ರದೇಶ, ಬಿಹಾರ, ಮಧ್ಯಪ್ರದೇಶ, ಮಹಾರಾಷ್ಟ್ರ, ಒಡಿಶಾ, ಕರ್ನಾಟಕ, ಆಂಧ್ರಪ್ರದೇಶ ಮತ್ತು ತಮಿಳುನಾಡಿನಲ್ಲಿ ದಾಳಿ ನಡೆಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ದೆಹಲಿ (ಎನ್ಸಿಆರ್) ಮತ್ತು ರಾಜಸ್ಥಾನದಲ್ಲಿ ತಲಾ ಗರಿಷ್ಠ 6 ಸ್ಥಳಗಳಲ್ಲಿ ಶೋಧ ನಡೆಸಲಾಗಿದೆ ಎಂದು ಅವರು ಹೇಳಿದರು. ಮೊಬೈಲ್ ಫೋನ್ಗಳು, ಕಂಪ್ಯೂಟರ್ ಹಾರ್ಡ್ ಡ್ರೈವ್ಗಳು, ಸಿಮ್ ಕಾರ್ಡ್ಗಳು, ಎಟಿಎಂ / ಡೆಬಿಟ್ ಕಾರ್ಡ್ಗಳು, ಇಮೇಲ್ ಖಾತೆಗಳು ಮತ್ತು ವಿವಿಧ ದಾಖಲೆಗಳು ಸೇರಿದಂತೆ ಮಹತ್ವದ ಡಿಜಿಟಲ್ ಪುರಾವೆಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಸಿಬಿಐ ಹಿರಿಯ…

Read More

ಬೆಂಗಳೂರು: ರಾಮನಗರ ಶಾಸಕರಿಗೆ ಸಂಬಂಧಿಸಿದ ವಿಡಿಯೋ ಬಿಡುಗಡೆ ಬಗ್ಗೆ ಕೇಳಿದಾಗ, “ಮಾಡಲಿ ಸಂತೋಷ. ಸಂತ್ರಸ್ತೆ ದೂರು ನೀಡಿದರೆ ಅವರ ವಿರುದ್ಧವೂ ಕಾನೂನು ಕ್ರಮ ಕೈಗೊಳ್ಳಲು ಸೂಚಿಸುತ್ತೇವೆ” ಎಂದು ಸಂಸದ ಡಿ.ಕೆ ಸುರೇಶ್ ತಿಳಿಸಿದರು. ನಿಮ್ಮ ಆಪ್ತರು ಎಂದು ವಿಡಿಯೋ ವೈರಲ್ ಮಾಡಿದ್ದಾರಾ ಎಂದು ಕೇಳಿದಾಗ, “ಅಂತಹ ನೂರೆಂಟು ಇವೆ. ಬಾಂಬೆ ಬ್ಲೂ ಬಾಯ್ಸ್ ಗಳದ್ದು ಆಯ್ತು, ಯೋಗೇಶ್ವರ್ ಅವರು ಎಲ್ಲ ಮಠಗಳ ಪ್ರವಾಸ ಮಾಡಿದ್ದು ಆಯ್ತಾ? ಮಠದವರು ನಿಮ್ಮ ಬಳಿ ಖಾಸಗಿಯಾಗಿ ಆ ಬಗ್ಗೆ ಮಾತಾಡಿರಬೇಕಲ್ಲವೇ? ಅಮಿತ್ ಶಾ ಬಳಿ ಹೋಗಿ ಕೊಟ್ಟಿದ್ದಾಯ್ತು. ಸಿಎಂ ಸ್ಥಾನದಿಂದ ಯಡಿಯೂರಪ್ಪ ಅವರು ಬದಲಾವಣೆಯಾಗಲು ಕಾರಣವೇನು? ಅದನ್ನು ಯೋಗೇಶ್ವರ್ ಅವರೇ ಹೇಳಿದ್ದಾರೆ. ಹೀಗಾಗಿ ಒಬ್ಬೊಬ್ಬರದ್ದು ಒಂದೊಂದು ಇರುತ್ತದೆ” ಎಂದು ತಿಳಿಸಿದರು. ಸಂತ್ರಸ್ತೆಯರಿಗೆ ನ್ಯಾಯ ಒದಗಿಸಿಕೊಡುವುದು ಎಷ್ಟು ಮುಖ್ಯವೋ ವಿಡಿಯೋ ಬಿಡುಗಡೆ ಮಾಡಿದವರಿಗೆ ಶಿಕ್ಷೆಯಾಗುವುದು ಅಷ್ಟೇ ಮುಖ್ಯವಲ್ಲವೇ ಎಂದು ಕೇಳಿದಾಗ, “ಯಾರೆಲ್ಲಾ ಕಾನೂನು ಚೌಕಟ್ಟಿನಲ್ಲಿ ತಪ್ಪಿತಸ್ಥರಿದ್ದಾರೆ ಅವರ ವಿರುದ್ಧ ಕ್ರಮ ಜರುಗಿಸಬೇಕು. ಇದು ಒಬ್ಬರ ವಿಚಾರವಲ್ಲ, ನೂಲಿನಂತೆ ಸೀರೆ…

Read More

ಬೆಂಗಳೂರು: “ಪೆನ್ ಡ್ರೈವ್ ವಿಚಾರ ಎಲ್ಲರಿಗಿಂತ ಮುಂಚಿತವಾಗಿ ಗೊತ್ತಿದ್ದೇ ಕುಮಾರಸ್ವಾಮಿ ಹಾಗೂ ಬಿಜೆಪಿ ನಾಯಕರಿಗೆ. ಈ ಪ್ರಕರಣದಿಂದ ನುಣುಚಿಕೊಳ್ಳಲು ಕಾಂಗ್ರೆಸ್ ಹಾಗೂ ಶಿವಕುಮಾರ್ ಅವರ ಮೇಲೆ ಆರೋಪ ಮಾಡುತ್ತಿದ್ದಾರೆ” ಎಂದು ಬೆಂಗಳೂರು ಗ್ರಾಮಾಂತರ ಸಂಸದ ಡಿ.ಕೆ. ಸುರೇಶ್ ತಿಳಿಸಿದರು. ಇಂದು ಸದಾಶಿವನಗರ ನಿವಾಸದಲ್ಲಿ  ಪ್ರಜ್ವಲ್ ರೇವಣ್ಣ ಅವರ ಪೆನ್ ಡ್ರೈವ್ ಬಹಿರಂಗಗೊಳಿಸಿರುವುದು ಮಹಾನ್ ನಾಯಕ ಡಿ.ಕೆ. ಶಿವಕುಮಾರ್ ಎಂಬ ಕುಮಾರಸ್ವಾಮಿ ಅವರ ಆರೋಪದ ಬಗ್ಗೆ ಕೇಳಿದಾಗ ಅವರು ಉತ್ತರಿಸಿದ ಅವರು, “ಮಾಜಿ ಸಿಎಂ ಕುಮಾರಸ್ವಾಮಿ ಅವರಿಗೆ ಶಿವಕುಮಾರ್ ಅವರನ್ನು ಸ್ಮರಿಸದಿದ್ದರೆ ತಿಂದ ಅನ್ನ ಜೀರ್ಣವಾಗುವುದಿಲ್ಲ. ನಿದ್ದೆ ಬರುವುದಿಲ್ಲ. ನಾವು ಪೆನ್ ಡ್ರೈವ್ ಬಿಡುಗಡೆ ಮಾಡುವುದಾಗಿದ್ದರೆ ಚುನಾವಣೆಗೆ ವಾರ ಅಥವಾ ಹತ್ತು ದಿನ ಮುಂಚಿತವಾಗಿಯೇ ಬಿಡುಗಡೆ ಮಾಡಬಹುದಾಗಿತ್ತಲ್ಲವೇ? ಈ ವಿಚಾರದಲ್ಲಿ ಎಲ್ಲರಿಗಿಂತ ಮುಂಚಿತವಾಗಿ ಗೊತ್ತಿದ್ದು ಕುಮಾರಸ್ವಾಮಿ ಹಾಗೂ ಬಿಜೆಪಿ ನಾಯಕರಿಗೆ. ಅವರೀಗ ಕಾಂಗ್ರೆಸ್ ಮೇಲೆ ಆರೋಪ ಮಾಡಿ ನುಣುಚಿಕೊಳ್ಳುವ ಪ್ರಯತ್ನ ಮಾಡುತ್ತಿದ್ದಾರೆ ಎಂದರು. ಇಲ್ಲಿ ಕುಮಾರಸ್ವಾಮಿ ಅವರ ಆರೋಪ ಮುಖ್ಯವೋ, ಆ ಭಾಗದ ಐನೂರಕ್ಕಿಂತ ಹೆಚ್ಚು…

Read More

ಹಾವೇರಿ: ಕಾಂಗ್ರೆಸ್ ನವರು ಲಂಬಾಣಿ ಸಮುದಾಯದ ಮೀಸಲಾತಿಯನ್ನು ಕಡಿಮೆ ಮಾಡಿದ್ದಾರೆ. ನಾನು ನಿಮ್ಮ ಸಹೋದರನಾಗಿ ಸಮುದಾಯಕ್ಕೆ ಸಿಗಬೇಕಾದ ನ್ಯಾಯಯುತ ಮೀಸಲಾತಿ ಕೊಡಿಸಲು ಬದ್ದನಾಗಿದ್ದೇನೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಹಾವೇರಿ ಗದಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಅವರು ಇಂದು ಬಂಜಾರ ಸಮುದಾಯದ ಕೃಷ್ಣಾಪುರ ಮಠದ ಆವರಣದಲ್ಲಿ ಲಂಬಾಣಿ ಸಮುದಾಯದ ಸಮಾವೇಶ ಉದ್ಘಾಟಿಸಿ ಮಾತನಾಡಿದರು. ಪ್ರಜಾಪ್ರಭುತ್ವದಲ್ಲಿ ಅತ್ಯಂತ ಕಟ್ಟಕಡೆಯ ಸಮಾಜದ ಧ್ವನಿ ಕೇಳಬೇಕು. ಅದು ಕೇಳಲು ಸಮಾಜ ಸಂಘಟನೆ ಆಗಬೇಕು. ಈ ಸಮಾಜ ದೇವರ ವರದಾನ ಇರುವ ಸಮಾಜ, ಸಂತ ಸೇವಾಲಾಲ್ ಅವರ ಅಶೀರ್ವಾದ ಇರುವ ಸಮಾಜ, ಅತ್ಯಂತ ಕಷ್ಟದಲ್ಲಿರುವ ಜನರು ನೀವು. ನೀವು ಬಹಳ ಕಷ್ಟಪಟ್ಟು ನಿಮ್ಮ ಮಕ್ಕಳನ್ನು ವಿದ್ಯಾವಂತರನ್ನಾಗಿ ಮಾಡಿದ್ದೀರಿ, ಅವರಿಗೆ ಅವಕಾಶ ಕೊಟ್ಟರೆ ದೊಡ್ಡ ಸ್ಥಾನಗಳನ್ನು ಪಡೆಯುತ್ತಾರೆ. ಸರ್ಕಾರ ಕೈ ಹಿಡಿದರೆ ಈ ಸಮುದಾಯದ ಯುವಕರು ಉನ್ನತ ಸ್ಥಾನ ಪಡೆಯುತ್ತಾರೆ ಎಂದರು. ದೇಶದ ಎಲ್ಲ ಭಾಗಗಳಲ್ಲಿ ಇರುವ ಕೆಲವೇ ಕೆಲವು ಸಮುದಾಯಗಳಲ್ಲಿ ಬಂಜಾರ…

Read More

ನವದೆಹಲಿ: 2024 ರ ಟಿ 20 ವಿಶ್ವಕಪ್ ಗಾಗಿ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ತಂಡವನ್ನು ಪ್ರಕಟಿಸಿದ್ದು, ಅಲ್ಲಿ ರೋಹಿತ್ ಶರ್ಮಾ ತಂಡವನ್ನು ಮುನ್ನಡೆಸಲಿದ್ದಾರೆ. ಅನುಭವಿ ಬ್ಯಾಟ್ಸ್ ಮನ್ ವಿರಾಟ್ ಕೊಹ್ಲಿ ಯುಎಸ್ಎ ಮತ್ತು ವೆಸ್ಟ್ ಇಂಡೀಸ್ ನಲ್ಲಿ ನಡೆಯಲಿರುವ ಮಾರ್ಕ್ಯೂ ಈವೆಂಟ್ ನಲ್ಲಿ ನಿರೂಪಕರಾಗಿ ಕಾರ್ಯನಿರ್ವಹಿಸಲಿದ್ದಾರೆ. ಈಗ, ಇಬ್ಬರೂ ಬ್ಯಾಟ್ಸ್ಮನ್ಗಳಿಗೆ ಇದು ಕೊನೆಯ ಟಿ 20 ಪಂದ್ಯವಾಗಲಿದೆ ಎಂಬ ವರದಿಗಳಿವೆ. ಬಿಸಿಸಿಐ ಮೂಲಗಳ ಪ್ರಕಾರ, ಇದು ಟಿ 20 ಐ ಸ್ವರೂಪದಲ್ಲಿ ಕೊಹ್ಲಿ ಮತ್ತು ರೋಹಿತ್ ಅವರ ಕೊನೆಯ ನೇಮಕವಾಗಿದೆ. ಕೊಹ್ಲಿ ಮತ್ತು ರೋಹಿತ್ ಇಬ್ಬರೂ 151 ಮತ್ತು 117 ಟಿ 20 ಪಂದ್ಯಗಳನ್ನು ಆಡಿದ್ದಾರೆ, ಅಲ್ಲಿ ಅವರು ಕ್ರಮವಾಗಿ 3974 ಮತ್ತು 4037 ರನ್ ಗಳಿಸಿದ್ದಾರೆ. 2022 ರ ಟಿ 20 ವಿಶ್ವಕಪ್ನಲ್ಲಿ ಭಾರತ ಸೋತ ನಂತರ ಇಬ್ಬರೂ ಕೇವಲ ಒಂದು ಟಿ 20 ಐ ಸರಣಿಯನ್ನು ಆಡಿದ್ದಾರೆ.

Read More

ನವದೆಹಲಿ: ರಾಜ್ಯದಲ್ಲಿ ಭೀಕರ ಬರಗಾಲದಿಂದ ಜನರು ತತ್ತರಿಸಿ ಹೋಗಿದ್ದಾರೆ. ನೀರಿಗಾಗಿ ಆಹಾಕಾರವೆದ್ದಿದೆ. ಇದರ ನಡುವೆ ಕಾವೇರಿ ನದಿ ನೀರಿಗಾಗಿ ತಮಿಳುನಾಡು ಮತ್ತೆ ಕ್ಯಾತೆ ತೆಗೆದಿದೆ. ಕುಡಿಯೋದಕ್ಕೆ ನೀರು ಬಿಡುವಂತೆ ಕಾವೇರಿ ನದಿ ನೀರು ನಿರ್ವಹಣಾ ಪ್ರಾಧಿಕಾರದ ಮುಂದೆ ಕ್ಯಾತೆ ತೆಗೆದಿದೆ. ಇಂದು ದೆಹಲಿಯ ಕಾವೇರಿ ನೀರು ನಿರ್ವಹಣಾ ಸಮಿತಿಯ ಸಭೆ ನಡೆಯಿತು. ಈ ಸಭೆಯ ವೇಳೆಯಲ್ಲಿ ಕರ್ನಾಟಕದಲ್ಲಿ ಭೀಕರ ಬರಗಾಲವಿದ್ದರೂ, ತಮಿಳುನಾಡು ಮಾತ್ರ ಕುಡಿಯೋದಕ್ಕಾಗಿ ನೀರು ಬಿಡುಗಡೆ ಮಾಡುವಂತೆ ತಮ್ಮ ವಾದವನ್ನು ಮಂಡಿಸಿತು. ತಮಿಳುನಾಡಿನಿಂದ ಮತ್ತೆ ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಕ್ಯಾತೆ ತೆಗೆದಿದ್ದು, ತಮಿಳುನಾಡಿಗೆ 2.5 ಟಿಎಂಸಿ ನೀರು ಹರಿಸುವಂತೆ ಆಗ್ರಹಿಸಿತು. ಕುಡಿಯಲು 0.5 ಟಿಎಂಸಿ ನೀರು ಸಾಕು. ಕುಡಿಯೋ ನೀರಿನ ನೆಪದಲ್ಲಿ ನೀರು ಬಿಡುಗಡೆಗಾಗಿ ನಿರಾಕರಸಿಬಾರದು ಎಂಬುದಾಗಿ ವಾದಿಸಿತು. ಅಲ್ಲದೇ ತಮ್ಮ ತಿಂಗಳ ನೀರಿನ ಪಾಲಾಗಿರುವಂತ 2.5 ಟಿಎಂಸಿ ನೀರು ಬಿಡುಗಡೆ ಮಾಡುವಂತೆ ಒತ್ತಾಯಿಸಿತು. ಇಂದು ನಡೆದಂತ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ಸಭೆಯಲ್ಲಿ ತಮಿಳುನಾಡು ಒತ್ತಾಯಿಸಿತು.…

Read More