Author: ವಸಂತ ಬಿ ಈಶ್ವರಗೆರೆ

ವಸಂತ ಬಿ ಈಶ್ವರಗೆರೆ (Vasantha B Eshwaragere) ಅವರು ಕರ್ನಾಟಕದ ಪತ್ರಕರ್ತರು ಮತ್ತು ಕವಿ. ಉದಯ ನ್ಯೂಸ್, ಟಿವಿ5 ಕನ್ನಡ ಸೇರಿದಂತೆ ವಿವಿಧ ಸುದ್ದಿ ಮಾಧ್ಯಮಗಳಲ್ಲಿ ಸುಮಾರು 15 ವರ್ಷಗಳ ಅನುಭವವನ್ನು ಹೊಂದಿದ್ದಾರೆ. ಪ್ರಸ್ತುತ ಅವರು Kannada News Now ಡಿಜಿಡಿಲ್‌ ಮಾಧ್ಯಮದಲ್ಲಿ ಸಂಪಾದಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಇವರು ತಾಜಾ ಸುದ್ದಿ, ಸಾಹಿತ್ಯ, ಸಾಮಾಜಿಕ ವರದಿಗಾರಿಕೆ, ನ್ಯಾಯಾಂಗ ಸಂಬಂಧಿತ ವರದಿ ಮತ್ತು ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿದ ಸುದ್ದಿಗಳ ವರದಿಯಲ್ಲಿ ಸಕ್ರಿಯರಾಗಿದ್ದಾರೆ. ಗುಡವಿ ಪಕ್ಷಿಧಾಮದಂತಹ ಪ್ರವಾಸಿ ತಾಣಗಳ ಕುರಿತು ಲೇಖನಗಳನ್ನು ಬರೆದಿದ್ದಾರೆ.

ಬೆಂಗಳೂರು: ಕೆಲವು ಸುದ್ದಿ ಮಾಧ್ಯಮಗಳಲ್ಲಿ ಪ್ರಯಾಗ್‌ ರಾಜ್‌ ಸುತ್ತಲಿನ ಪ್ರದೇಶದ ರೈಲ್ವೆ ಸ್ಟೇಷನ್‌ ಗಳಲ್ಲಿ ಜನದಟ್ಟಣೆ ಜಾಸ್ತಿಯಾಗಿರುವ ಕಾರಣ ಈ ನಿಲ್ದಾಣಗಳನ್ನು ಬಂದ್‌ ಮಾಡಿದ್ದಾರೆ ಎಂಬಂತಹ ಸುದ್ದಿಗಳು ಬಂದಿರುತ್ತದೆ. ಆದರೆ ಈ ಸುದ್ದಿ ನಿಜವಲ್ಲ. ಪ್ರಯಾಗ್ ರಾಜ್ ನಲ್ಲಿನ ಯಾವುದೇ ರೈಲ್ವೆ ನಿಲ್ದಾಣಗಳನ್ನು ಬಂದ್ ಮಾಡಿಲ್ಲ ಅಂತ ರೈಲ್ವೆ ಇಲಾಖೆ ಸ್ಪಷ್ಟ ಪಡಿಸಿದೆ. ಈ ಕುರಿತಂತೆ ಬೆಂಗಳೂರಿನ ನೈರುತ್ಯ ರೈಲ್ವೆ ವಿಭಾಗದಿಂದ ಪತ್ರಿಕಾ ಹೇಳಿಕೆಯನ್ನು ಬಿಡುಗಡೆ ಮಾಡಿದ್ದು, ಪ್ರಯಾಗ್‌ ರಾಜ್‌ ಪ್ರದೇಶದ ಪ್ರಯಾಗರಾಜ್‌ ಜಂಕ್ಷನ್‌, ಪ್ರಯಾಗ್‌ ರಾಜ್‌ ಛಿವಕಿ, ನೈನಿ, ಸುಬೇದಾರ್‌ ಗಂಜ್‌, ಪ್ರಯಾಗ್‌, ಫಪಮಾವು, ಪ್ರಯಾಗ್‌ ರಾಜ್‌ ರಾಮ್‌ಬಾಗ್‌ ಮತ್ತು ಝೂಂಸಿ ರೈಲು ನಿಲ್ದಾಣಗಳು ಎಲ್ಲ ರೀತಿಯಂದಲೂ ಕಾರ್ಯ ನಿರ್ವಹಿಸುತ್ತಿವೆ ಎಂಬುದಾಗಿ ತಿಳಿಸಿದೆ. ನಿನ್ನೆ ಅಂದರೆ ದಿನಾಂಕ 9 ಫೆಬ್ರವರಿ 2025ರಂದು ಪ್ರಯಾಗ್‌ ರಾಜ್‌ ಪ್ರದೇಶದಿಂದ 330 ರೈಲುಗಳು ಸಂಚರಿಸಿದ್ದು 12.5 ಲಕ್ಷಕ್ಕೂ ಹೆಚ್ಚು ಯಾತ್ರಾರ್ಥಿಗಳು ಪ್ರಯಾಣಿಸಿದ್ದಾರೆ. ಅದೇ ರೀತಿ ಇಂದು ದಿನಾಂಕ 10.02.2025ರಂದು ಮಧ್ಯಾಹ್ನ 3 ಗಂಟೆಯವರೆಗೆ ಈ…

Read More

ಬೆಂಗಳೂರು: ನಮ್ಮ ಮೆಟ್ರೋ ಪ್ರಯಾಣ ದರವನ್ನು ಇಂದಿನಿಂದ ಜಾರಿಗೆ ಬರುವಂತೆ ಬಿಎಂ ಆರ್ ಸಿ ಎಲ್ ಹೆಚ್ಚಳ ಮಾಡಲಾಗಿತ್ತು. ಶೇ.47ರಷ್ಟು ಮೆಟ್ರೋ ಪ್ರಯಾಣ ದರ ಹೆಚ್ಚಳ ಮಾಡಿದ್ದರ ವಿರುದ್ಧ ಬಿಜೆಪಿ ಸಿಡಿದೆದ್ದಿದೆ. ಬೆಂಗಳೂರಿನ ವಿವಿಧ ಮೆಟ್ರೋ ನಿಲ್ದಾಣಗಳ ಎದುರು ಪ್ರತಿಭಟನೆ ನಡೆಸುತ್ತಿದೆ. ಬೆಂಗಳೂರಿನ ಮಹಾಲಕ್ಷ್ಮೀ ಲೇಔಟ್ ಮೆಟ್ರೋ ನಿಲ್ದಾಣದ ಬಳಿಯಲ್ಲಿ ಶಾಸಕ ಗೋಪಾಲಯ್ಯ ನೇತೃತ್ವದಲ್ಲಿ ಮೆಟ್ರೋ ದರ ಹೆಚ್ಚಳ ಖಂಡಿಸಿ ಪ್ರತಿಭಟನೆ ನಡೆಸಲಾಗುತ್ತಿದೆ. ಜಯನಗರದ ಮೆಟ್ರೋ ಶಾಸಕ ಸಿಕೆ ರಾಮಮೂರ್ತಿ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಗುತ್ತಿದೆ. ಬೆಂಗಳೂರಿನ ಸಿ.ವಿ. ರಾಮನ್ ನಗರ ವಿಧಾನಸಭಾ ಕ್ಷೇತ್ರದ ಕಾರ್ಯಕರ್ತರು ಮೆಟ್ರೋ ದರ ಏರಿಕೆಯನ್ನು ಖಂಡಿಸಿ ಎಂಜಿ ರೋಡ್ ಮೆಟ್ರೋ ನಿಲ್ದಾಣ ಬಳಿ ಪ್ರತಿಭಟನೆ ನಡೆಸಿದರು. ಕೂಡಲೇ ನಮ್ಮ ಮೆಟ್ರೋ ದರ ಹೆಚ್ಚಳವನ್ನು ಇಳಿಸುವಂತೆ ಆಗ್ರಹಿಸಿದರು. https://kannadanewsnow.com/kannada/fatal-bus-accident-in-us-more-than-30-killed-several-injured/ https://kannadanewsnow.com/kannada/haveri-people-shocked-by-the-man-who-survived-when-he-was-brought-home-as-dead-in-hospital/ https://kannadanewsnow.com/kannada/aadhaar-is-enough-to-provide-instant-loans-up-to-rs-50000-apply-online-now/

Read More

ಅಮೇರಿಕಾ: ಇಲ್ಲಿನ ಗ್ವಾಟೆಮಾಲಾ ನಗರದ ಹೊರವಲಯದಲ್ಲಿ ಸೋಮವಾರ ಬೆಳಿಗ್ಗೆ ಸಂಭವಿಸಿದ ಬಸ್ ಅಪಘಾತದಲ್ಲಿ 30 ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ. ಅಲ್ಲದೇ ಹಲವರು ಗಾಯಗೊಂಡಿರೋದಾಗಿ ತಿಳಿದು ಬಂದಿದೆ. ಅಮೇರಿಕಾದ ಗ್ವಾಟೆಮಾಲಾ ನಗರದಲ್ಲಿ ಭೀಕರ ಬಸ್ ಅಪಘಾತ ಸಂಭವಿಸಿದೆ. ಈ ಅಪಘಾತದಲ್ಲಿ ಕನಿಷ್ಠ 30ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದು, ಹಲವರು  ಗಾಯಗೊಂಡಿದ್ದಾರೆ ಎಂದು ನಗರದ ಅಗ್ನಿಶಾಮಕ ಇಲಾಖೆಯ ವಕ್ತಾರರು ತಿಳಿಸಿದ್ದಾರೆ ಎಂದು ರಾಯಿಟರ್ಸ್ ವರದಿ ಮಾಡಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ. https://kannadanewsnow.com/kannada/former-minister-b-sriramulu-wife-bhagyalakshmi-take-holy-dip-at-mahakumbh-mela-in-prayagraj/ https://kannadanewsnow.com/kannada/aadhaar-is-enough-to-provide-instant-loans-up-to-rs-50000-apply-online-now/

Read More

ಉತ್ತರ ಪ್ರದೇಶ: ಪ್ರಯಾಗ್ ರಾಜ್ ನಲ್ಲಿ ನಡೆಯುತ್ತಿರುವಂತ ಮಹಾ ಕುಂಭಮೇಳದಲ್ಲಿ ಪ್ರಧಾನಿ ನರೇಂದ್ರ ಮೋದಿ, ರಾಷ್ಟ್ರಪತಿ ದ್ರೌಪದಿ ಮುರ್ಮು ಸೇರಿದಂತೆ ಅನೇಕ ನಾಯಕರು ಪುಣ್ಯ ಸ್ನಾನ ಮಾಡಿದ್ದಾರೆ. ಇಂದು ಪ್ರಯಾಗ್ ರಾಜ್ ಮಹಾ ಕುಂಭಮೇಳದಲ್ಲಿ ಮಾಜಿ ಸಚಿವ ಬಿ ಶ್ರೀರಾಮುಲು ಹಾಗೂ ಅವರ ಪತ್ನಿ ಭಾಗ್ಯಲಕ್ಷ್ಮೀ ಪುಣ್ಯಸ್ನಾನ ಮಾಡಿದರು. ಹೌದು. ಕಳೆದ ಎರಡು ವಾರಗಳಿಂದ ಸುದ್ದಿಯಲ್ಲಿರುವಂತ ಮಾಜಿ ಸಚಿವ ಬಿ.ಶ್ರೀರಾಮುಲು ಅವರು ಇಂದು ತಮ್ಮ ಪತ್ನಿ ಭಾಗ್ಯಲಕ್ಷ್ಮೀ ಜೊತೆಗೂಡಿ ಉತ್ತರ ಪ್ರದೇಶದ ಪ್ರಯಾಗ್ ರಾಜ್ ನಲ್ಲಿನ ತ್ರಿವೇಣಿ ಸಂಗಮ ಕ್ಷೇತ್ರದಲ್ಲಿ ಪುಣ್ಯ ಸ್ನಾನ ಮಾಡಿದರು. ಕೆಲ ದಿನಗಳ ಹಿಂದಷ್ಟೇ ಡಿಸಿಎಂ ಡಿಕೆ ಶಿವಕುಮಾರ್ ಹಾಗೂ ಅವರ ಪತ್ನಿ ಪ್ರಯಾಗ್ ರಾಜ್ ಗೆ ತೆರಳಿ ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನ ಮಾಡಿದ್ದರು. ಈಗ ಬಿಜೆಪಿಯ ಬಿ.ಶ್ರೀರಾಮುಲು ಹಾಗೂ ಅವರ ಪತ್ನಿ ಪುಣ್ಯ ಸ್ನಾನ ಮಾಡಿದ್ದಾರೆ. https://kannadanewsnow.com/kannada/haveri-people-shocked-by-the-man-who-survived-when-he-was-brought-home-as-dead-in-hospital/ https://kannadanewsnow.com/kannada/aadhaar-is-enough-to-provide-instant-loans-up-to-rs-50000-apply-online-now/

Read More

ಬೆಂಗಳೂರು: ವಾಣಿಜ್ಯ ತೆರಿಗೆ ಇಲಾಖೆಯ ಪರೀಕ್ಷಕರ ಅಂತಿಮ ಪಟ್ಟಿ ಇನ್ನೆರಡು ದಿನಗಳಲ್ಲಿ ಪ್ರಕಟವಾಗುವುದಾಗಿ ನನಗೆ ಅಧ್ಯಕ್ಷರು ಮತ್ತು ಕಾರ್ಯದರ್ಶಿಗಳು ಭರವಸೆ ನೀಡಿದ್ದಾರೆ ಎಂಬುದಾಗಿ ಮಾಜಿ ಸಚಿವ ಎಸ್ ಸುರೇಶ್ ಕುಮಾರ್ ಮಾಹಿತಿ ಹಂಚಿಕೊಂಡಿದ್ದಾರೆ. ಇಂದು ತಮ್ಮ ಫೇಸ್ ಬುಕ್ ನಲ್ಲಿ ಈ ಬಗ್ಗೆ ಬರೆದುಕೊಂಡಿರುವಂತ ಅವರು, ಜನವರಿ 24ರಂದು ನಾನು ರಾಜ್ಯದ ಮುಖ್ಯಮಂತ್ರಿಗಳಿಗೆ, ರಾಜ್ಯದ ಮುಖ್ಯ ಕಾರ್ಯದರ್ಶಿಗಳಿಗೆ, ಕರ್ನಾಟಕ ಲೋಕಸೇವಾ ಆಯೋಗದ ಅಧ್ಯಕ್ಷರಿಗೆ, ಕರ್ನಾಟಕ ಲೋಕಸೇವಾ ಆಯೋಗದ ಕಾರ್ಯದರ್ಶಿಗಳಿಗೆ. ಪತ್ರ ಒಂದನ್ನು ಬರೆದು #ವಾಣಿಜ್ಯ_ತೆರಿಗೆ_ಇಲಾಖೆಯ_ಪರಿವೀಕ್ಷಕರ (230 ಹುದ್ದೆಗಳು)  ಪರೀಕ್ಷೆ ನಡೆದು ಸುಮಾರು ವರ್ಷಗಳಾದರೂ  ಇನ್ನೂ ಅಂತಿಮ ಪಟ್ಟಿ ಬಿಡುಗಡೆಯಾಗದಿರುವ ಬಗ್ಗೆ ಪ್ರಸ್ತಾಪಿಸಿ ಬೇಗ ಬಿಡುಗಡೆ ಮಾಡುವಂತೆ ಮನವಿ ಮಾಡಿದ್ದೆ ಎಂದಿದ್ದಾರೆ. ಇಲ್ಲದಿದ್ದಲ್ಲಿ ಫೆಬ್ರವರಿ ಮೊದಲನೇ ವಾರದಲ್ಲಿ ಲೋಕ ಸೇವಾ ಆಯೋಗದ ಬಾಗಿಲನ್ನು ತಟ್ಟಿ ನ್ಯಾಯ ಕೇಳುವುದಾಗಿ ತಿಳಿಸಿದ್ದೆ. ಅದೇ ರೀತಿ ಇಂದು ನಾನು ಲೋಕಸೇವಾ ಆಯೋಗದ ಕಟ್ಟಡದ ಬಾಗಿಲು ತಟ್ಟಿ  ಅಧ್ಯಕ್ಷರನ್ನು ಮತ್ತು ಕಾರ್ಯದರ್ಶಿಗಳನ್ನು ಭೇಟಿ ಮಾಡಿದೆ. ವಾಣಿಜ್ಯ ತೆರಿಗೆ ಇಲಾಖೆಯ ಪರೀಕ್ಷಕರ ಅಂತಿಮ…

Read More

ಬೆಂಗಳೂರು: ಕರ್ನಾಟಕ ಬಿಜೆಪಿಯಲ್ಲಿನ ಆಂತರೀಕ ಬೇಗುದಿ ದಿನೇ ದಿನೇ ಹೆಚ್ಚಾಗುತ್ತಿದೆ. ಇಂತಹ ಬಿಜೆಪಿ ಆಂತರೀಕ ಬೇಗುದಿಗೆ ಮಾಜಿ ಕೇಂದ್ರ ಸಚಿವ ಡಿವಿ ಸದಾನಂದಗೌಡ ಬೇಸರ ವ್ಯಕ್ತ ಪಡಿಸಿದ್ದಾರೆ. ಈ ಬಗ್ಗೆ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವಂತ ಅವರು, ದೆಹಲಿಯಲ್ಲಿ ಭಾರತೀಯ ಜನತಾ ಪಾರ್ಟಿ ಭರ್ಜರಿ ಗೆಲುವು ಸಾಧಿಸಿರುವುದು ಪಕ್ಷದ ಸಕಲ ಮಟ್ಟದ ಶ್ರಮ, ಸಂಘಟನೆ ಮತ್ತು ಜನಪರ ರಾಜಕೀಯದ ಫಲವಾಗಿದೆ. ಪ್ರಧಾನಮಂತ್ರಿ ನರೇಂದ್ರ ಮೋದಿಯ ಅವರ ದೃಢನಿಶ್ಚಯ, ಅಭಿವೃದ್ಧಿ ಪರ ಆಜಂಡಾ, ಮತ್ತು ಕೇಂದ್ರ ಸರ್ಕಾರದ ಸಮರ್ಥ ಕಾರ್ಯಪದ್ಧತಿ ಜನತೆಯ ವಿಶ್ವಾಸವನ್ನು ಮತ್ತೆ ಗಳಿಸಿತು. ಪಕ್ಷದ ಬೂತ್ ಮಟ್ಟದ ಬಲವಾದ ತಂತ್ರ ಸುಸಂಘಟಿತ ಪ್ರಚಾರ ಯಂತ್ರ ಮತ್ತು ಜನಸಾಮಾನ್ಯರ ಸಮಸ್ಯೆಗಳನ್ನು ನಿರ್ಧಾರಾತ್ಮಕವಾಗಿ ಪರಿಹರಿಸುವ ನೇತೃತ್ವದ ಫಲವಾಗಿ ದೆಹಲಿಯಲ್ಲಿ ಈ ಜಯ ಸಾಧ್ಯವಾಯಿತು. ಈ ಗೆಲುವು ಜನತೆಯ ಆಶೀರ್ವಾದ ಹಾಗೂ ನಾವೇ ಅನುಸರಿಸಬೇಕಾದ ಮಾರ್ಗದರ್ಶನವನ್ನು ಒದಗಿಸುತ್ತಿದೆ ಎಂದಿದ್ದಾರೆ. ಕರ್ನಾಟಕ BJP ಎದುರಿಸುತ್ತಿರುವ ಸವಾಲುಗಳು ಇದಕ್ಕೆ ವಿರುದ್ಧವಾಗಿ, ಕರ್ನಾಟಕದಲ್ಲಿ ಬಿಜೆಪಿ ಇನ್ನೂ ಆಂತರಿಕ ಕಲಹ…

Read More

ಬೆಂಗಳೂರು: ರಾಜ್ಯ ಸರ್ಕಾರದಿಂದ ಸರ್ಕಾರಿ ನೌಕರರಿಗೆ ಗಳಿಕೆ ರಜೆ ಕುರಿತಂತೆ ಮಹತ್ವದ ಆದೇಶವನ್ನು ಹೊರಡಿಸಿದೆ. ಆದೇನು ಅಂತ ಮುಂದೆ ಓದಿ. ಈ ಕುರಿತಂತೆ ಆರ್ಥಿ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಸೇರ್ಪಡೆ ಆದೇಶವನ್ನು ಹೊರಡಿಸಿದ್ದಾರೆ. ಅದರಲ್ಲಿ ದಿನಾಂಕ 21.12.2023 ರ ಸರ್ಕಾರಿ ಆದೇಶ ಸಂಖ್ಯೆ ಆಇ 10(ಇ) ಸೇನಿಸೇ 2023 ಮತ್ತು ದಿನಾಂಕ 17.1.2025 ರ ಸರ್ಕಾರಿ ಆದೇಶ ಸಂಖ್ಯೆ ಆಇ 03 ಸೇನಿಸೇ 2024 ರ ಆದೇಶ ಭಾಗದ ಕೊನೆಯಲ್ಲಿ ಈ ಕೆಳಗಿನವುಗಳನ್ನು ಸೇರಿಸಿ ಓದಿಕೊಳ್ಳತಕ್ಕದ್ದು ಎಂಬುದಾಗಿ ಹೇಳಿದ್ದಾರೆ. ಗಳಿಕೆ ರಜೆ ನಗದೀಕರಣಕ್ಕೆ ಮಂಜೂರಾತಿ ನೀಡುವ ಆದೇಶವನ್ನು ಯಾವುದಾದರೂ ಕಾರಣದಿಂದ ನಿಗಧಿತ ಬ್ಲಾಕ್‌ ಅವಧಿಯಲ್ಲಿ ಹೊರಡಿಸಲು ಸಾಧ್ಯವಾಗದಿದ್ದರೆ ಸಂಬಂಧಿತ ಪ್ರಾಧಿಕಾರವು ಅಂತಹ ಆದೇಶವನ್ನು ಬ್ಲಾಕ್‌ ಅವಧಿ ಮುಕ್ತಾಯಗೊಂಡ ನಂತರವೂ ಹೊರಡಿಸಬಹುದು. ಆದರೆ, ಗಳಿಕೆ ರಜೆ ನಗದೀಕರಣದ ಆರ್ಥಿಕ ಪ್ರಯೋಜನವನ್ನು ಸಂಬಂಧಿತ ಆರ್ಥಿಕ ವರ್ಷವು ಅಂತ್ಯಗೊಳ್ಳುವ ಮುನ್ನ ಪಡೆಯತಕ್ಕದ್ದು ಎಂಬುದಾಗಿ ತಿಳಿಸಿದ್ದಾರೆ. https://kannadanewsnow.com/kannada/bjp-central-disciplinary-committee-issues-show-cause-notice-to-mla-yatnal/ https://kannadanewsnow.com/kannada/haveri-people-shocked-by-the-man-who-survived-when-he-was-brought-home-as-dead-in-hospital/

Read More

ಬೆಂಗಳೂರು: ಬಿಜೆಪಿ ಪಕ್ಷದ ವಿರುದ್ಧ, ನಾಯಕರ ವಿರುದ್ಧ ಬಹಿರಂಗವಾಗಿ ವಾಕ್ ಸಮರ ನಡೆಸುತ್ತಿದ್ದಂತ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಗೆ ಶೋಕಾಸ್ ನೋಟಿಸ್ ನೀಡಿ ಶಾಕ್ ನೀಡಲಾಗಿದೆ. ಕೇಂದ್ರೀಯ ಶಿಸ್ತು ಸಮಿತಿಯಿಂದ ಮತ್ತೊಂದು ಶೋಕಾಸ್ ನೋಟಿಸ್ ನೀಡಲಾಗಿದ್ದು, 72 ಗಂಟೆಯಲ್ಲಿ ಉತ್ತರಿಸುವಂತೆ ಡೆಡ್ ಲೈನ್ ನೀಡಲಾಗಿದೆ. ಈ ಸಂಬಂಧ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಗೆ ಕೇಂದ್ರೀಯ ಶಿಸ್ತು ಸಮಿತಿಯಿಂದ ನೀಡಿರುವಂತ ಶೋಕಾಸ್ ನೋಟಿಸ್ ನಲ್ಲಿ, ಭಾರತೀಯ ಜನತಾ ಪಕ್ಷದ ಸಂವಿಧಾನ ಮತ್ತು ಅದರ ಅಡಿಯಲ್ಲಿನ ನಿಯಮಗಳಲ್ಲಿ ಪ್ರತಿಪಾದಿಸಿರುವ ಶಿಸ್ತು ಸಂಹಿತೆಗೆ ಸ್ಪಷ್ಟ ವಿರುದ್ಧವಾಗಿ ನಿಮ್ಮ ನಿರಂತರ ವಾಗ್ದಾಳಿ ಮತ್ತು ಪಕ್ಷದ ಶಿಸ್ತಿನ ಉಲ್ಲಂಘನೆಯನ್ನು ಪಕ್ಷ ಗಮನಿಸಿದೆ ಎಂದಿದೆ. ಈ ಹಿಂದಿನ ಶೋಕಾಸ್ ನೋಟಿಸ್ ಗಳಿಗೆ ಪ್ರತಿಕ್ರಿಯೆಯಾಗಿ ಉತ್ತಮ ನಡವಳಿಕೆ ಮತ್ತು ನಡವಳಿಕೆಯ ನಿಮ್ಮ ಭರವಸೆಗಳ ಹೊರತಾಗಿಯೂ, ನೀವು ನಿಮ್ಮ ಸ್ವಂತ ಭರವಸೆಗಳನ್ನು ಉಲ್ಲಂಘಿಸುವುದನ್ನು ಮತ್ತು ಉಲ್ಲಂಘಿಸುವುದನ್ನು ಮುಂದುವರಿಸುತ್ತೀರಿ ಎಂಬುದಾಗಿ ಗರಂ ಆಗಿದೆ. ಪಕ್ಷವು ನಿಮ್ಮ ವಿರುದ್ಧ ಏಕೆ ಶಿಸ್ತು ಕ್ರಮ…

Read More

ಬೆಂಗಳೂರು: ಮುಗಳೊಳ್ಳಿ-ಜಡ್ರಾಮಕುಂಟಿ-ಆಲಮಟ್ಟಿ ನಿಲ್ದಾಣಗಳ ನಡುವೆ ಜೋಡಿ ರೈಲು ಮಾರ್ಗದ ಕಾಮಗಾರಿ ಕೈಗೊಂಡಿರುವುದರಿಂದ ಈ ಮಾರ್ಗದಲ್ಲಿ ಸಂಚರಿಸುವ ಕೆಲ ರೈಲುಗಳ ಸಂಚಾರದಲ್ಲಿ ಬದಲಾವಣೆ ಮಾಡಲಾಗುತ್ತಿದೆ. ಅವುಗಳ ಮಾಹಿತಿ ಈ ಕೆಳಗಿನಂತಿವೆ: ರೈಲು ಸಂಚಾರ ರದ್ದು: ಫೆ 17 ರಿಂದ 25 ರವರೆಗೆ ಎಸ್ಎಸ್ಎಸ್ ಹುಬ್ಬಳ್ಳಿ-ಸೋಲಾಪುರ ಡೈಲಿ ಪ್ಯಾಸೆಂಜರ್ (56906), ಫೆ 18 ರಿಂದ 26 ರವರೆಗೆ ಸೋಲಾಪುರ-ಧಾರವಾಡ ಡೈಲಿ ಪ್ಯಾಸೆಂಜರ್ ಸ್ಪೆಷಲ್, ಫೆ 25 ರಂದು ಸೋಲಾಪುರ-ಹೊಸಪೇಟೆ ಡೈಲಿ ಎಕ್ಸ್ ಪ್ರೆಸ್ (11415) ಮತ್ತು ಫೆ 26 ರಂದು ಹೊಸಪೇಟೆ-ಸೋಲಾಪುರ ಡೈಲಿ ಎಕ್ಸ್ ಪ್ರೆಸ್ (11416) ರೈಲುಗಳ ಪ್ರಯಾಣವನ್ನೂ ತಾತ್ಕಾಲಿಕವಾಗಿ ರದ್ದು ರದ್ದುಗೊಳಿಸಲಾಗಿದೆ. ರೈಲುಗಳ ಸಂಚಾರ ಭಾಗಶಃ ರದ್ದು: ಫೆ 16 ರಿಂದ 24 ರವರೆಗೆ ಯಶವಂತಪುರದಿಂದ ಹೊರಡುವ ರೈಲು ಸಂಖ್ಯೆ 06545 ಯಶವಂತಪುರ-ವಿಜಯಪುರ ಡೈಲಿ ಎಕ್ಸ್‌ಪ್ರೆಸ್ ವಿಶೇಷ ರೈಲು ಗದಗ-ವಿಜಯಪುರ ನಿಲ್ದಾಣಗಳ ನಡುವೆ ಭಾಗಶಃ ರದ್ದುಗೊಳ್ಳುತ್ತದೆ. ಈ ರೈಲು ವಿಜಯಪುರ ನಿಲ್ದಾಣದ ಬದಲಾಗಿ ಗದಗದಲ್ಲಿ ಕೊನೆಗೊಳ್ಳಲಿದೆ. ಫೆ 17 ರಿಂದ 25 ರವರೆಗೆ…

Read More

ಬೆಂಗಳೂರು: ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಕಿರುಕುಳ ತಪ್ಪಿಸಲು ಸುಗ್ರೀವಾಜ್ಞೆ ಜಾರಿಗೊಳಿಸುವಂತ ನಿರ್ಧಾರವನ್ನು ಸರ್ಕಾರ ಕೈಗೊಂಡಿತ್ತು. ಅದರಂತೆ ಮೈಕ್ರೋ ಫೈನಾನ್ಸ್ ಸುಗ್ರೀವಾಜ್ಞೆಗೆ ಸಂಪುಟ ಒಪ್ಪಿಗೆ ಸೂಚಿಸಿ ರಾಜ್ಯಪಾಲರ ಅಂಕಿತಕ್ಕೆ ಕಳುಹಿಸಲಾಗಿತ್ತು. ರಾಜ್ಯಪಾಲರು ಮಸೂದೆಯನ್ನು ವಾಪಾಸ್ ಕಳುಹಿಸಿದ್ದರು. ಈ ಮಸೂದೆಯ ಅಂಶಗಳಿಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಸ್ಪಷ್ಟನೆಯ ಜೊತೆಗೆ ರಾಜ್ಯಪಾಲರಿಗೆ ಅಂಕಿತಕ್ಕೆ ಮೈಕ್ರೋ ಫೈನಾನ್ಸ್ ಕಿರುಕುಳ ತಡೆ ಕಾಯ್ದೆಯನ್ನು ಮರು ರವಾನೆ ಮಾಡಲಾಗುತ್ತಿದೆ. ರಾಜ್ಯ ಸರ್ಕಾರದಿಂದ ರಾಜ್ಯಪಾಲರು ವಾಪಾಸ್ಸು ಕಳುಹಿಸಿದ್ದಂತ ಮೈಕ್ರೋ ಫೈನಾನ್ಸ್ ಕಿರುಕುಳ ತಡೆಯ ಸುಗ್ರೀವಾಜ್ಞೆಗೆ ಎಲ್ಲಾ ಆಕ್ಷೇಪಣೆಗಳಿಗೆ ಕಾನೂನು ಇಲಾಖೆಯಿಂದ ಸೂಕ್ತ ಸ್ಪಷ್ಟೀಕರಣ ಸಿದ್ಧಪಡಿಸಲಾಗಿದೆ. ಈ ಸ್ಪಷ್ಟೀಕರಣದೊಂದಿಗೆ ಕರ್ನಾಟಕ ಮೈಕ್ರೋ ಫೈನಾನ್ಸ್ ಸುಗ್ರೀವಾಜ್ಞೆ ಕರಡನ್ನು ಸಿಎಂ ಕಚೇರಿಯಿಂದ ರಾಜ್ಯಪಾಲರಿಗೆ ಮರು ರವಾನೆ ಮಾಡಲಾಗಿತ್ತು. ಈಗಾಗಲೇ ಸಿಎಂ ಕಚೇರಿಗೆ ಕಾನೂನು ಇಲಾಖೆಯು ಮೈಕ್ರೋ ಫೈನಾನ್ಸ್ ತಡೆ ಸುಗ್ರೀವಾಜ್ಞೆಗೆ ಸ್ಪಷ್ಟೀಕರಣ ಸಿದ್ಧಪಡಿಸಿ ಸಿದ್ಧರಾಮಯ್ಯ ಅವರ ಅವಗಾಹನೆಗೆ ಕಳುಹಿಸಲಾಗಿತ್ತು. ಈ ಕರಡನ್ನು ಸಿಎಂ ಕಚೇರಿಯಿಂದ ಅಂತಿಮಗೊಳಿಸಿ, ಇಂದು ರಾಜ್ಯಪಾಲರಿಗೆ ಕಳುಹಿಸಲಾಗಿದೆ. ಈ ಸುಗ್ರೀವಾಜ್ಞೆಗೆ ರಾಜ್ಯಪಾಲರು ಅಂಕಿತ…

Read More