Subscribe to Updates
Get the latest creative news from FooBar about art, design and business.
Author: kannadanewsnow09
ಬೆಂಗಳೂರು: ನಗರದ ಬಾಬು ಸಾಬ್ ಪಾಳ್ಯದಲ್ಲಿನ ಕಟ್ಟಡ ಕುಸಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೋರ್ವ ಕಾರ್ಮಿಕನ ಶವ ಪತ್ತೆಯಾಗಿದೆ. ಈ ಮೂಲಕ ಕಟ್ಟಡ ಕುಸಿತ ದುರಂತದಲ್ಲಿ ಸಾವಿನ ಸಂಖ್ಯೆ 7ಕ್ಕೆ ಏರಿಕೆಯಾಗಿದೆ. ಬೆಂಗಳೂರಿನ ಬಾಬು ಸಾಬ್ ಪಾಳ್ಯದಲ್ಲಿ ನಿನ್ನೆ 6 ಹಂತಸ್ತಿನ ಕಟ್ಟಡವೊಂದು ಕುಸಿತಗೊಂಡಿತ್ತು. ಈ ಕಟ್ಟಡ ಅವಶೇಷಗಳ ಅಡಿಯಲ್ಲಿ 16ಕ್ಕೂ ಹೆಚ್ಚು ಕಾರ್ಮಿಕರು ಸಿಲುಕಿರುವಂತ ಶಂಕೆ ವ್ಯಕ್ತವಾಗಿತ್ತು. ಆರಂಭದಲ್ಲಿ ಮೂವರು ಸಾವನ್ನಪ್ಪಿದ್ದಾಗಿ ವರದಿಯಾಗಿತ್ತು. ಆ ಬಳಿಕ ರಕ್ಷಣಾ ಕಾರ್ಯಾಚರಣೆಯ ನಂತ್ರ 6ಕ್ಕೆ ಸಾವಿನ ಸಂಖ್ಯೆ ಏರಿಕೆಯಾಗಿತ್ತು. ಈಗ ಮತ್ತೋರ್ವ ಕಾರ್ಮಿಕನ ಶವ ಪತ್ತೆಯಾಗಿದ್ದು, ಮೃತರ ಸಂಖ್ಯೆ 7ಕ್ಕೆ ಏರಿಕೆಯಾಗಿದೆ. ಬಿಹಾರ್ ಮೂಲದ ಟೈಲ್ಸ್ ಕಾರ್ಮಿಕ ಎಂದು ಹೇಳಲಾಗುತ್ತಿದ್ದು, ತಿರುಪಾಲಿ, ಅರ್ಮಾನ್ ಸೇರಿದಂತೆ ಇದುವರೆಗೂ ಆರು ಕಾರ್ಮಿಕರು ಸಾವನ್ನಪ್ಪಿದ್ದಾರೆ. ಇದುವರೆಗೂ 13 ಜನ ಕಾರ್ಮಿಕರನ್ನು ರಕ್ಷಿಸಲಾಗಿದೆ. ಘಟನೆಗೆ ಸಂಬಂಧಿಸಿದಂತೆ ಮಾಲೀಕ ಭುವನ್ ರೆಡ್ಡಿ, ಮುನಿರಾಜ ರೆಡ್ಡಿ ಗುತ್ತಿಗೆದಾರ ಮುನಿಯಪ್ಪ ಇಬ್ಬರನ್ನು ಕೂಡ ಹೆಣ್ಣೂರು ಪೊಲೀಸ್ ಠಾಣೆಯ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಕಟ್ಟಡದ ಮಾಲೀಕ…
ಬೆಂಗಳೂರು: ಇಂದು ಬಿಜೆಪಿಗೆ ಗುಡ್ ಬೈ ಹೇಳಿ, ಕಾಂಗ್ರೆಸ್ ಪಕ್ಷಕ್ಕೆ ಸಿ.ಪಿ ಯೋಗೇಶ್ವರ್ ಅವರ ಸೇರ್ಪಡೆಯಾದರು. ಈ ಬಳಿಕ ಸುದ್ದಿಗೋಷ್ಠಿಯಲ್ಲಿ ಏನು ಮಾತಾಡಿದ್ರು ಅಂತ ಮುಂದೆ ಓದಿ. ನನ್ನ ರಾಜಕೀಯ ಜೀವನವನ್ನು ನಾವು ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ಕಾಂಗ್ರೆಸ್ ಪಕ್ಷದಲ್ಲಿ ಆರಂಭಿಸಿದ್ದೆ. ಕಾಂಗ್ರೆಸ್ ಪಕ್ಷ ಬಿಟ್ಟಿದ್ದೆ. ಈಗ ಮತ್ತೆ ಬಂದಿದ್ದೇನೆ. ನನ್ನ ಮುಂದಿನ ರಾಜಕೀಯ ಭಾಗ ಕಾಂಗ್ರೆಸ್ ನಲ್ಲಿ ಮುಂದುವರಿಯಲಿದೆ. ಕಳೆದ ಮೂರ್ನಾಲ್ಕು ತಿಂಗಳಲ್ಲಿ ನಡೆದಿರುವ ರಾಜಕೀಯ ಬೆಳವಣಿಗೆಯಲ್ಲಿ ಬೇಸರವಾಗಿದೆ. ಕೆಲವೊಮ್ಮೆ ನಮಗಾಗಿ ನಾವು ಕಟ್ಟಿದ ಮನೆಯಲ್ಲಿ ನಾವು ವಾಸ ಮಾಡಲು ಆಗುವುದಿಲ್ಲ. ಅದೇ ಸಂದರ್ಭ ನನಗೆ ಬಂದಿದೆ. ನಾನಿದ್ದ ಬಿಜೆಪಿ ಜತೆಗೆ ಜೆಡಿಎಸ್ ಪಕ್ಷ ಸೇರಿಕೊಂಡ ನಂತರ ಎನ್ಡಿಎ ಮೈತ್ರಿಕೂಟದಲ್ಲಿ ಇದ್ದ ವಾತಾವರಣ ನನ್ನ ರಾಜಕೀಯ ಬೆಳವಣಿಗೆಗೆ ಪೂರಕವಾಗಿರಲಿಲ್ಲ ಎಂದು ಮನಗಂಡು ಸ್ವಯಂಪ್ರೇರಿತವಾಗಿ ಬೇಷರತ್ತಾಗಿ ಕಾಂಗ್ರೆಸ್ ಪಕ್ಷ ಸೇರುತ್ತಿದ್ದೇನೆ. ಮಾಧ್ಯಮಗಳಲ್ಲಿ ರಾತ್ರಿ 12 ಗಂಟೆಗೆ ಭೇಟಿ ಮಾಡಿದ್ದಾರೆ ಎಂದು ವರದಿಯಾಗಿರುವುದನ್ನು ನೋಡಿದೆ. ನನಗೆ ಅಂತಹ ಅವಶ್ಯಕತೆ ಇಲ್ಲ. ನಾನು…
ಕಲಬುರ್ಗಿ: ನಗರದಲ್ಲಿ ವಿವಿಧ ಠಾಣೆಗಳಲ್ಲಿ ದಾಖಲಾಗಿದ್ದಂತ ಮೊಬೈಲ್ ಕಳವು ಪ್ರಕರಣವನ್ನು ಭೇದಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಬರೋಬ್ಬರಿ 200 ಮೊಬೈಲ್ ಗಳನ್ನು ಪತ್ತೆ ಹಚ್ಚಿದ್ದಾರೆ. ಇಂದು ಸುದ್ದಿಗಾರರೊಂದಿಗೆ ಮಾಹಿತಿ ಹಂಚಿಕೊಂಡಂತ ಕಲಬುರ್ಗಿ ನಗರ ಪೊಲೀಸ್ ಆಯುಕ್ತ ಡಾ.ಎಸ್ ಡಿ ಶರಣಪ್ಪ ಅವರು ಜಿಲ್ಲೆಯ ವಿವಿಧ ಠಾಣೆಗಳಲ್ಲಿ ಸಿಇಐಆರ್ ಪೋರ್ಟಲ್ ಮೂಲಕ 9 ತಿಂಗಳಲ್ಲಿ 672 ಮೊಬೈಲ್ ಕಳವು ಪ್ರಕರಣಗಳು ದಾಖಲಾಗಿದ್ದವು. ಈ ಸಂಬಂಧ ಪೊಲೀಸರು ಕಾರ್ಯಾಚರಣೆ ನಡೆಸಿ 200 ಮೊಬೈಲ್ ಗಳನ್ನು ಪತ್ತೆ ಹಚ್ಚಿದ್ದಾರೆ ಎಂದರು. ಪತ್ತೆಯಾದಂತ 200 ಮೊಬೈಲ್ ಗಳನ್ನು ಸಂಬಂಧಿಸಿದಂತ ಮಾಲೀಕರಿಗೆ ತಲುಪಿಸಲಾಗುತ್ತದೆ. ಇವುಗಳಲ್ಲಿ ಕಳ್ಳತನವಾಗಿದ್ದ ಹಾಗೂ ಕಳೆದು ಹೋಗಿದ್ದಂತ ಮೊಬೈಲ್ ಕೂಡ ಇದ್ದಾವೆ ಎಂದು ತಿಳಿಸಿದರು. ಮೊಬೈಲ್ ಕಳೆದುಕೊಂಡವರು, ಕಳುವಾದವರು ತಪ್ಪದೇ ಸಿಇಐಆರ್ ಪೋರ್ಟಲ್ ಮೂಲಕ ನೋಂದಾಯಿಸಿಕೊಳ್ಳಿ. ಆಗ ಆ ಮೊಬೈಲ್ ಮಾರಾಟವಾಗಿ, ಬಳಕೆಯಾದಾಗ ಪೊಲೀಸರಿಗೆ ಮಾಹಿತಿ ಸಿಗಲಿದೆ. ಆನಂತ್ರ ಅಂತಹ ಮೊಬೈಲ್ ಗಳನ್ನು ಜಪ್ತಿ ಮಾಡಿ, ಮಾಲೀಕರಿಗೆ ಹಿಂದಿರುಗಿಸುವಂತ ಕೆಲಸ ಮಾಡಲಾಗುತ್ತದೆ ಎಂಬುದಾಗಿ ಮನವಿ ಮಾಡಿದರು. https://kannadanewsnow.com/kannada/karunadus-good-fortune-to-have-a-brave-woman-like-chennamma-minister-shivaraj-thangadagi/…
ಬೆಂಗಳೂರು: ಹೆಣ್ಣೆಂದರೆ ಶಕ್ತಿದೇವತೆ. ಹೆಣ್ಣೊಬ್ಬಳು ಮನಸ್ಸು ಮಾಡಿದರೆ ಏನನ್ನಾದರೂ ಸಾಧಿಸಬಹುದು ಎಂಬ ಪರಮಸತ್ಯವನ್ನು ಜಗತ್ತಿಗೆ ಸಾರಿದ ನಮ್ಮ ಕನ್ನಡ ಮಣ್ಣಿನ ಹೆಣ್ಣುಮಗಳು ಚೆನ್ನಮ್ಮನವರು ಎಂದು ಕನ್ನಡ ಮತ್ತು ಸಂಸ್ಕೃತಿ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಶಿವರಾಜ್ ತಂಗಡಿಗಿಯವರು ಅಭಿಪ್ರಾಯಪಟ್ಟರು. ಕಿತ್ತೂರು ರಾಣಿಚೆನ್ನಮ್ಮ ಜಯಂತಿ ಅಂಗವಾಗಿ ಕನ್ನಡ ಭವನದ ಆವರಣದಲ್ಲಿ ಬೇಲಿ ಮಠದ ಶಿವರುದ್ರ ಮಹಾಸ್ವಾಮೀಜಿ ಅವರ ದಿವ್ಯ ಸಾನಿಧ್ಯದಲ್ಲಿ ಆಯೋಜಿಸಿದ್ದ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಚೆನ್ನಮ್ಮ ಅಸೀಮ ಶೌರ್ಯ, ಧೈರ್ಯ, ತ್ಯಾಗ, ರಾಜನೀತಿ, ಮಾತೃವಾತ್ಸಲ್ಯ ಮುಂತಾದ ಸದ್ಗುಣಗಳ ಖನಿ. ಎಂದೆಂದಿಗೂ ಕನ್ನಡದ ಹೆಣ್ಣುಮಕ್ಕಳ ಪ್ರತಿನಿಧಿ ಆಗಿದ್ದರು. ಇಂದು ಕಿತ್ತೂರು ರಾಣಿ ಚೆನ್ನಮ್ಮ ಜಯಂತಿ ಆಚರಣೆ ಮಾಡಲಾಗುತ್ತಿದ್ದರೂ, ವಾಸ್ತವವಾಗಿ ಇದು ಕಿತ್ತೂರು ಸಂಸ್ಥಾನ ಬ್ರಿಟೀಷರ ವಿರುದ್ಧ ವಿಜಯೋತ್ಸವ ಸಾಧಿಸಿದ ದಿನವಾಗಿದೆ. ಬ್ರಿಟೀಷ್ ಕಲೆಕ್ಟರ್ ಥ್ಯಾಕರೆ ವಿರುದ್ಧ ಕಿತ್ತೂರು ರಾಣಿ ಚೆನ್ನಮ್ಮ ಜಯ ಸಾಧಿಸಿದ ದಿನ ಅಕ್ಟೋಬರ್ 23. ಇದೇ ದಿನ ಥ್ಯಾಕರೆಯ ಮರಣವೂ ಆಯಿತು. ಕಿತ್ತೂರು ರಾಣಿ ಚೆನ್ನಮ್ಮ ಬ್ರಿಟೀಷರ…
ಹಾವೇರಿ: ಶಿಗ್ಗಾವಿ ಕ್ಷೇತ್ರದಲ್ಲಿ ಬಿಜೆಪಿಗೆ ಯಾವುದೇ ರೀತಿಯ ಬಂಡಾಯ ಇಲ್ಲ. ಚುನಾವಣೆ ಸಂದರ್ಭದಲ್ಲಿ ಈ ರೀತಿಯ ಬೆಳವಣಿಗೆಗಳು ನಡೆಯುತ್ತವೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಶಿಗ್ಗಾವಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಶಿಗ್ಗಾವಿ ಕ್ಷೇತ್ರದಲ್ಲಿ ಬಿಜೆಪಿಗೆ ಬಂಡಾಯ ಎದುರಾಗಿದೆ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಬಿಜೆಪಿಗೆ ಯಾವುದೇ ರೀತಿಯ ಬಂಡಾಯ ಇಲ್ಲ. ಚುನಾವಣೆಯ ಸಂದರ್ಭದಲ್ಲಿ ಈ ರೀತಿಯ ಬೆಳವಣಿಗೆಗಳು ನಡೆಯುತ್ತವೆ. ಕಾಂಗ್ರೆಸ್ ಅಭ್ಯರ್ಥಿ ಯಾರೇ ನಿಂತರೂ ಕೂಡ ನಾವು ಚುನಾವಣೆಯನ್ನು ಅತ್ಯಂತ ಸ್ಪರ್ಧಾತ್ಮಕವಾಗಿ ಮಾಡುತ್ತೇವೆ. ಮತ್ತು ಸೌಹಾರ್ದಯುತವಾಗಿ ಚುನಾವಣೆ ಮಾಡುತ್ತೇವೆ ಎಂದು ಹೇಳಿದರು. ಬಿಜೆಪಿ ಅಭ್ಯರ್ಥಿ ಭರತ್ ಬೊಮ್ಮಾಯಿ ನಾಮಪತ್ರ ಸಲ್ಲಿಕೆಯ ದಿನ ಬಿಜೆಪಿ ರಾಜ್ಯ ನಾಯಕರಾದ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸೇರಿದಂತೆ ಹಿರಿಯ ನಾಯಕರು ಆಗಮಿಸಲಿದ್ದಾರೆ ಎಂದು ಹೇಳಿದರು. ಮಾಜಿ ಸಚಿವ ಸಿ.ಪಿ.ಯೋಗೇಶ್ವರ್ ಕಾಂಗ್ರೆಸ್ ಸೇರಿರುವ ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಸಿ.ಪಿ ಯೋಗೇಶ್ವರ್ ಅವರನ್ನು ಪಕ್ಷದಲ್ಲಿ ಉಳಿಸಿಕೊಳ್ಳಲು ಬಹಳ ಪ್ರಯತ್ನ ಮಾಡಿದ್ದೇವೆ. ಅವರು…
BIGG NEWS: ರಾಜ್ಯದಲ್ಲಿ ಮತ್ತೊಂದು ಹಗರಣ ಬಯಲಿಗೆ: ಬಿಬಿಎಂಪಿ ಅಧಿಕಾರಿಗಳಿಂದ 2,067 ಕೋಟಿ ಅನುದಾನ ಗುಳುಂ, EDಗೆ ದೂರು
ಬೆಂಗಳೂರು: ರಾಜ್ಯದಲ್ಲಿ ಮತ್ತೊಂದು ಹಗರಣ ಬಯಲಿಗೆ ಬಂದಿದೆ. “ಬಿಬಿಎಂಪಿ ತ್ಯಾಜ್ಯ ವಿಲೇವಾರಿ ಸಮಸ್ಯೆಗಳ ಪರಿಹಾರಕ್ಕೆಂದು ಕೇಂದ್ರ ಸರ್ಕಾರ ಬಿಡುಗಡೆ ಮಾಡಿರುವ 14 ಮತ್ತು 15ನೇ ಹಣಕಾಸು ಆಯೋಗದ ₹ 2,067 ಕೋಟಿ ಅನುದಾನವನ್ನು ಹೇಳ ಹೆಸರಿಲ್ಲದಂತೆ ತಿಂದು ಬಿಬಿಎಂಪಿಯ ಅಧಿಕಾರಿಗಳ ತೇರಿದ್ದಾರೆ. ಈ ಮೂಲಕ ಬಿಬಿಎಂಪಿಯಲ್ಲಿ ಬೃಹತ್ ಹಗರಣ ನಡೆದಿದೆ ಎಂಬುದಾಗಿ ಭ್ರಷ್ಟಾಚಾರ ವಿರೋಧಿ ವೇದಿಕೆಯ ಅಧ್ಯಕ್ಷರು, ಬಿಬಿಎಂಪಿಯ ಮಾಜಿ ಆಡಳಿತ ಪಕ್ಷದ ನಾಯಕರಾದಂತ ಎನ್ ಆರ್ ರಮೇಶ್ ಇಡಿ ಅಧಿಕಾರಿಗಳಿಗೆ ದೂರು ನೀಡಿದ್ದಾರೆ. ಇಂದು ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿರುವಂತ ಅವರು, ಕೇಂದ್ರ ಸರ್ಕಾರವು ಕರ್ನಾಟಕ ರಾಜ್ಯಕ್ಕೆ 2017-18 ರಿಂದ 2023-24 ರವರೆಗಿನ ಅವಧಿಯಲ್ಲಿ 14 ಮತ್ತು 15ನೇ ಹಣಕಾಸು ಆಯೋಗದ ಒಟ್ಟು ₹ 2,09,690,29,00,000/- (ಎರಡು ಲಕ್ಷ ಒಂಬತ್ತು ಸಾವಿರ ಆರು ನೂರಾ ತೊಂಬತ್ತು ಕೋಟಿ ಇಪ್ಪತ್ತೊಂಬತ್ತು ಲಕ್ಷ) ಗಳನ್ನು ಬಿಡುಗಡೆ ಮಾಡಿರುತ್ತದೆ. ಅದೇ ರೀತಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ತ್ಯಾಜ್ಯ ವಿಲೇವಾರಿ ಕಾರ್ಯದ ಸಮಸ್ಯೆಗಳ ಪರಿಹಾರ ಕಾರ್ಯಗಳಿಗೆಂದು 2013-14…
ಬೆಂಗಳೂರು: ರಾಜಾಜಿನಗರದ ಶ್ರೀರಾಮಮಂದಿರದಲ್ಲಿ ಶ್ರೀರಾಮ ಸೇವಾ ಮಂಡಳಿಯಿಂದ ಕರ್ನಾಟಕದ ಅತಿ ಎತ್ತರದ 63 ಅಡಿ ಉದ್ದದ ಶ್ರೀರಾಮಾಂಜನೇಯ ಪ್ರತಿಮೆ ಉದ್ಘಾಟನೆಗೊಂಡಿದೆ. ಉಡುಪಿ ಪೇಜಾವರ ಮಠದ ಶ್ರೀ ಶ್ರೀ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿಗಳು, ಅದಿ ಚುಂಚನಗಿರಿ ಮಹಾಸಂಸ್ಥಾನದ ಶ್ರೀ ಶ್ರೀ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ ಅವರು, ಶ್ರೀ ಸೌಮ್ಯನಾಥ ಸ್ವಾಮೀಜಿರವರು ಲೋಕರ್ಪಣೆ ಮಾಡಿದರು. ಶ್ರೀ ಶ್ರೀ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ ರವರು ಮಾತನಾಡಿ ಮನುಷ್ಯನ ಜೀವನ ಮೌಲ್ಯಯುತವಾಗಿ ಬದುಕಲು ಮತ್ತು ಲೋಕದಲ್ಲಿ ಜನರು ಆದರ್ಶವಾಗಿ ಜೀವನ ಸಾಗಿಸಲು ಶ್ರೀರಾಮ ಆದರ್ಶ ಆಳವಡಿಸಿಕೊಳ್ಳಿ ಎಂದರು. ಹಿಂದೂ ಸಮಾಜ ಸಂರಕ್ಷಣೆ ಸಂಘಟನೆ ಒಗ್ಗಾಟಿಗೆ ಧರ್ಮ ಕಾರ್ಯಗಳು ನಡೆಯುತ್ತಿರಬೇಕು. ಎಲ್ಲರಿಗೂ ಶ್ರೀರಾಮನಾ ಮೂರ್ತಿ ಸ್ಪೂರ್ತಿಯಾಗಿದೆ. ಪಿತೃವಾಕ್ಯ ಪರಿಪಾಲಕ, ಆದರ್ಶ ಪತಿ ಶ್ರೀರಾಮ, ಮಾರ್ಯಾದ ಪುರಷೋತ್ತಮ ಎಂದು ಕರೆಯುತ್ತಾರೆ ಅಂದರೆ ಜೀವನದಲ್ಲಿ ಯುವಕರು ತಂದೆ, ತಾಯಿಗೆ ಉತ್ತಮ ಮಗನಾಗಿ ಮತ್ತು ಸತಿಗೆ ಉತ್ತಮ ಪತಿಯಾಗಿ ಹಾಗೂ ಸಮಾಜದಲ್ಲಿ ಉತ್ತಮಪ್ರಜೆಯಾಗಿ ಜೀವನ ಸಾಗಿಸಲು ಪ್ರಭು ಶ್ರೀರಾಮ ಎಲ್ಲರಿಗೂ ಪ್ರೇರಣೆಯಾಗಿದ್ದಾರೆ ಎಂದು…
ಮುಂಬೈ: 2001ರಲ್ಲಿ ಮುಂಬೈನಲ್ಲಿ ಹೋಟೆಲ್ ಉದ್ಯಮಿಯೊಬ್ಬರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಭೂಗತ ಪಾತಕಿ ಛೋಟಾ ರಾಜನ್ ಗೆ ಬಾಂಬೆ ಹೈಕೋರ್ಟ್ ಬುಧವಾರ ಜಾಮೀನು ನೀಡಿದೆ. ನ್ಯಾಯಾಲಯವು ಅವರ ಜೀವಾವಧಿ ಶಿಕ್ಷೆಯನ್ನು ಅಮಾನತುಗೊಳಿಸಿದೆ. ನ್ಯಾಯಮೂರ್ತಿಗಳಾದ ರೇವತಿ ಮೋಹಿತೆ ಡೇರೆ ಮತ್ತು ಪೃಥ್ವಿರಾಜ್ ಚವಾಣ್ ಅವರ ವಿಭಾಗೀಯ ಪೀಠವು ಜಾಮೀನಿಗಾಗಿ ಒಂದು ಲಕ್ಷ ರೂ.ಗಳ ಬಾಂಡ್ ಸಲ್ಲಿಸುವಂತೆ ದರೋಡೆಕೋರನಿಗೆ ನಿರ್ದೇಶನ ನೀಡಿದೆ ಎಂದು ಸುದ್ದಿ ಸಂಸ್ಥೆ ಪಿಟಿಐ ವರದಿ ಮಾಡಿದೆ. ಜಾಮೀನಿನ ಹೊರತಾಗಿಯೂ, ರಾಜನ್ 2011 ರ ಪತ್ರಕರ್ತ ಜ್ಯೋತಿರ್ಮಯ್ ಡೇ ಅವರ ಹತ್ಯೆ ಮತ್ತು ಇತರ ಕ್ರಿಮಿನಲ್ ಪ್ರಕರಣಗಳಲ್ಲಿ ಜೀವಾವಧಿ ಶಿಕ್ಷೆಯನ್ನು ಅನುಭವಿಸುತ್ತಿರುವುದರಿಂದ ಜೈಲಿನಲ್ಲಿಯೇ ಉಳಿಯಲಿದ್ದಾರೆ. ಮುಂಬೈನ ಗಾಮ್ದೇವಿಯಲ್ಲಿರುವ ಗೋಲ್ಡನ್ ಕ್ರೌನ್ ಹೋಟೆಲ್ ಮಾಲೀಕ ಜಯ ಶೆಟ್ಟಿ ಕೊಲೆ ಪ್ರಕರಣದಲ್ಲಿ ಈ ವರ್ಷದ ಮೇ 30ರಂದು ವಿಶೇಷ ನ್ಯಾಯಾಲಯ ರಾಜನ್ ಗೆ ಜೀವಾವಧಿ ಶಿಕ್ಷೆ ವಿಧಿಸಿತ್ತು. 2001ರ ಮೇ 4ರಂದು ರಾತ್ರಿ ರಾಜನ್ ಅವರ ಇಬ್ಬರು ಶೂಟರ್ ಗಳು ಹೋಟೆಲ್ ಆವರಣಕ್ಕೆ ನುಗ್ಗಿ…
ಬೆಂಗಳೂರು: ಭಾರೀ ಮಳೆಗೆ ಮುನಿರಾಜ ರೆಡ್ಡಿ ಕಟ್ಟಡ ಕುಸಿದಿದ್ದು, ಹಲವರು ಗಾಯಗೊಂಡಿದ್ದಾರೆ. ಕಟ್ಟಡವು ಏಳು ಅಂತಸ್ತಿನ ಎತ್ತರವಾಗಿದ್ದು, ಪ್ರಸ್ತುತ ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ. ಈ ಘಟನೆ ಸಂಬಂಧ ಕಟ್ಟಡದ ಮಾಲೀಕ ಭುವನ್ ರೆಡ್ಡಿ ವಿರುದ್ಧ ಎಫ್ಐಆರ್ ದಾಖಲಾಗಿದೆ. ಅಲ್ಲದೇ ಅವರ ಪುತ್ರನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬೆಂಗಳೂರಿನಲ್ಲಿ ಕಟ್ಟಡ ಕುಸಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಸಾವಿನ ಸಂಖ್ಯೆ 6ಕ್ಕೆ ಏರಿಕೆಯಾಗಿದೆ. ಮೃತ ಕಾರ್ಮಿಕನನ್ನು ಸೋಲು ಪಾಸ್ವಾನ್ ಎಂದು ಗುರುತಿಸಲಾಗಿದೆ.ಈ ಮೂಲಕ ಇದುವರೆಗೂ 6 ಕಾರ್ಮಿಕರು ಸಾವನ್ನಪ್ಪಿರುವ ಘಟನೆ ವರದಿಯಾಗಿದೆ. ಬಿಹಾರ್ ಮೂಲದ ಟೈಲ್ಸ್ ಕಾರ್ಮಿಕ ಎಂದು ಹೇಳಲಾಗುತ್ತಿದ್ದು, ತಿರುಪಾಲಿ, ಅರ್ಮಾನ್ ಸೇರಿದಂತೆ ಇದುವರೆಗೂ ಆರು ಕಾರ್ಮಿಕರು ಸಾವನ್ನಪ್ಪಿದ್ದಾರೆ. ಇದುವರೆಗೂ 13 ಜನ ಕಾರ್ಮಿಕರನ್ನು ರಕ್ಷಿಸಲಾಗಿದೆ. ಘಟನೆಗೆ ಸಂಬಂಧಿಸಿದಂತೆ ಮಾಲೀಕ ಭುವನ್ ರೆಡ್ಡಿ, ಮುನಿರಾಜ ರೆಡ್ಡಿ ಗುತ್ತಿಗೆದಾರ ಮುನಿಯಪ್ಪ ಇಬ್ಬರನ್ನು ಕೂಡ ಹೆಣ್ಣೂರು ಪೊಲೀಸ್ ಠಾಣೆಯ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಕಟ್ಟಡದ ಮಾಲೀಕ ಭುವನ್ ರೆಡ್ಡಿ ನಾಲ್ಕು ಕಟ್ಟಡ ನಿರ್ಮಾಣ ಮಾಡಲಾಗುತ್ತೆ ಎಂದು…
ಬೆಂಗಳೂರು : ಬಹು ದಿನಗಳಿಂದ ನೆನೆಗುದಿಗೆ ಬಿದ್ದಿದ್ದ ರಾಯಚೂರು ವಿಮಾನ ನಿಲ್ದಾಣಕ್ಕೆ ಕೊನೆಗೂ ಕೇಂದ್ರ ಸರಕಾರದ ಗ್ರೀನ್ ಸಿಗ್ನಲ್ ದೊರೆತಿದೆ. ಕೇಂದ್ರ ಸರಕಾರದ ವಿಮಾನಯಾನ ಸಚಿವರೊಂದಿಗೆ ಹಲವಾರು ಬಾರಿ ನಡೆಸಿದ ಚರ್ಚೆಗೆ ಸಕಾರಾತ್ಮಕ ಪ್ರತಿಕ್ರಿಯೆ ದೊರೆತಿದೆ ಎಂದು ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರಾದ ಎನ್ ಎಸ್ ಬೋಸರಾಜು ತಿಳಿಸಿದ್ದಾರೆ. ಕೇಂದ್ರ ಸರಕಾರದಿಂದ ವಿಮಾನ ನಿಲ್ದಾಣಕ್ಕೆ ಗ್ರೀನ್ ಸಿಗ್ನಲ್ ದೊರೆತಿರುವ ಬಗ್ಗೆ ಪತ್ರಿಕಾ ಹೇಳಿಕೆ ನೀಡಿದ ಅವರು, ನಮ್ಮ ಕಾಂಗ್ರೆಸ್ ಸರಕಾರ ರಾಯಚೂರಿನಲ್ಲಿ ನೂತನ ಗ್ರೀನ್ ಫೀಲ್ಡ್ ಏರ್ಪೋರ್ಟ್ ಮಾಡಲು ಬಹಳ ಪ್ರಯತ್ನ ಮಾಡಿತ್ತು. ಅಲ್ಲದೇ, ಆಯವ್ಯಯದಲ್ಲೂ ಈ ಬಗ್ಗೆ ಪ್ರಸ್ತಾಪಿಸಲಾಗಿತ್ತು. ಈ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು ವಿಶೇಷ ಕಾಳಜಿ ವಹಿಸಿ ಕೇಂದ್ರ ಸರಕಾರದೊಂದಿಗೆ ಸಮನ್ವಯ ಮಾಡಿದ್ದರು. ರಾಯಚೂರು ನಗರದಲ್ಲಿ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಅಗತ್ಯವಿರುವ ಎಲ್ಲಾ ಸಹಕಾರ ವನ್ನು ಸರಕಾರ ನೀಡುವುದಾಗಿಯೂ ಭರವಸೆ ನೀಡಿದ್ದರು. ಇದರ ಬೆನ್ನಲ್ಲೇ, ಕರ್ನಾಟಕ ರಾಜ್ಯ ಕೈಗಾರಿಕಾ ಮತ್ತು ಮೂಲಸೌಕರ್ಯ ಅಭಿವೃದ್ದಿ ನಿಗಮದ ವತಿಯಿಂದ…













