Subscribe to Updates
Get the latest creative news from FooBar about art, design and business.
Author: ವಸಂತ ಬಿ ಈಶ್ವರಗೆರೆ
ವಸಂತ ಬಿ ಈಶ್ವರಗೆರೆ (Vasantha B Eshwaragere) ಅವರು ಕರ್ನಾಟಕದ ಪತ್ರಕರ್ತರು ಮತ್ತು ಕವಿ. ಉದಯ ನ್ಯೂಸ್, ಟಿವಿ5 ಕನ್ನಡ ಸೇರಿದಂತೆ ವಿವಿಧ ಸುದ್ದಿ ಮಾಧ್ಯಮಗಳಲ್ಲಿ ಸುಮಾರು 15 ವರ್ಷಗಳ ಅನುಭವವನ್ನು ಹೊಂದಿದ್ದಾರೆ. ಪ್ರಸ್ತುತ ಅವರು Kannada News Now ಡಿಜಿಡಿಲ್ ಮಾಧ್ಯಮದಲ್ಲಿ ಸಂಪಾದಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಇವರು ತಾಜಾ ಸುದ್ದಿ, ಸಾಹಿತ್ಯ, ಸಾಮಾಜಿಕ ವರದಿಗಾರಿಕೆ, ನ್ಯಾಯಾಂಗ ಸಂಬಂಧಿತ ವರದಿ ಮತ್ತು ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿದ ಸುದ್ದಿಗಳ ವರದಿಯಲ್ಲಿ ಸಕ್ರಿಯರಾಗಿದ್ದಾರೆ. ಗುಡವಿ ಪಕ್ಷಿಧಾಮದಂತಹ ಪ್ರವಾಸಿ ತಾಣಗಳ ಕುರಿತು ಲೇಖನಗಳನ್ನು ಬರೆದಿದ್ದಾರೆ.
ಬೆಂಗಳೂರು : ನಾಳೆಯಿಂದ ಫೆಬ್ರವರಿ 14 ರವರೆಗೆ ಬೆಂಗಳೂರಿನ ಯಲಹಂಕದ ಬಳಿ ಏರ್ ಶೋ ಹಮ್ಮಿಕೊಳ್ಳಲಾಗಿದೆ.ಈ ಹಿನ್ನೆಲೆಯಲ್ಲಿ ಈಗಾಗಲೇ ಸಕಲ ಸಿದ್ಧತೆ ಮಾಡಿಕೊಂಡಿದ್ದು, ಏರ್ ಶೋ ರಿಹರ್ಸಲ್ ಕೂಡ ನಡೆಯುತ್ತಿದೆ. ಇದೀಗ ರಿಹರ್ಸಲ್ ವೇಳೆ ಪೊಲೀಸರಿಗೆ ನೀಡಿದ ಊಟದಲ್ಲಿ ಜಿರಳೆ ಪತ್ತೆಯಾಗಿದೆ ಎಂದು ವರದಿಯಾಗಿದೆ. ಹೌದು ಬೆಂಗಳೂರಿನ ಯಲಹಂಕ ಸಮೀಪ ಇಂದು ಏರ್ ಶೋ ರಿಹರ್ಸಲ್ ನಡೆಯುತ್ತಿತ್ತು. ಈ ಸಂದರ್ಭದಲ್ಲಿ ಪೊಲೀಸ್ ಸಿಬ್ಬಂದಿಗಳಿಗೆ ನೀಡಿದ ಊಟದಲ್ಲಿ ಜಿರಳೆ ಪತ್ತೆಯಾಗಿದೆ. ಏರ್ ಶೋ ಗೆ ಬಂದಂತಹ ಪೊಲೀಸ್ ಸಿಬ್ಬಂದಿಗಳಿಗೆ ಇನ್ಸ್ಪೆಕ್ಟರ್ ಊಟದ ವ್ಯವಸ್ಥೆ ಮಾಡಿಸಿದ್ದರು. ಯಲಹಂಕ ಠಾಣೆ ಇನ್ಸ್ಪೆಕ್ಟರ್ ಕೃಷ್ಣಮೂರ್ತಿ ಊಟದ ವ್ಯವಸ್ಥೆ ಮಾಡಿಸಿದ್ದರು. ಯಲಹಂಕ ಪೊಲೀಸ್ ಠಾಣೆಯಿಂದ ಸಿಬ್ಬಂದಿಗಳಿಗೆ ಊಟ ನೀಡಲಾಗಿತ್ತು. ಜಿರಳೆ ಕಂಡುಬಂದ ಹಿನ್ನೆಲೆಯಲ್ಲಿ ಹಲವು ಪೊಲೀಸ್ ಸಿಬ್ಬಂದಿಗಳು ಊಟ ಬಿಟ್ಟಿದ್ದಾರೆ. ಒಂದು 200 ಊಟಕ್ಕೆ ನೀಡುವುದಾಗಿ ಆದೇಶ ಹೊರಡಿಸಲಾಗಿದೆ. ಪೊಲೀಸ್ ಮಹಾ ನಿರ್ದೇಶಕರ ಕಚೇರಿಯಿಂದ ಫೆಬ್ರವರಿ 4ರಂದು ಆದೇಶ ಪ್ರಕಟವಾಗಿದೆ ಆದೇಶವಾಗಿದ್ದು, ಕೆಲವೇ ದಿನಗಳಲ್ಲಿ ಗುಣಮಟ್ಟ ಮತ್ತು ಶುಚಿತ್ವ…
ಶಿವಮೊಗ್ಗ: ಉತ್ತರ ಪ್ರದೇಶದ ಆಗ್ರಾದಲ್ಲಿ ಶುಕ್ರವಾರ ತರಬೇತಿ ವೇಳೆ ವಿಮಾನದಿಂದ ಕೆಳಗೆ ಹಾರಿದಾಗ ಪ್ಯಾರಾಚೂಟ್ ತೆರೆದುಕೊಳ್ಳದೇ ವಾಯುಪಡೆಯ ವಾರೆಂಟ್ ಆಫಿಸರ್, ಶಿವಮೊಗ್ಗ ಜಿಲ್ಲೆ ಹೊಸನಗರ ತಾಲ್ಲೂಕಿನ ಸಂಕೂರು ಗ್ರಾಮದ ಕೃಷಿಕ ಸುರೇಶ್ ಹಾಗೂ ನಾಗರತ್ನ ದಂಪತಿ ಪುತ್ರ, 36 ವರ್ಷದ ಜಿ.ಎಸ್.ಮಂಜುನಾಥ್ ಮೃತಪಟ್ಟಿರುವುದು ಅತ್ಯಂತ ನೋವಿನ ಸಂಗತಿ ಎಂಬುದಾಗಿ ಜಿಲ್ಲಾ ಉಸ್ತುವಾರಿ ಸಚಿವ ಮಧು ಎಸ್ ಬಂಗಾರಪ್ಪ ಸಂತಾಪ ಸೂಚಿಸಿದ್ದಾರೆ. ಈ ಬಗ್ಗೆ ಹೇಳಿಕೆ ಬಿಡುಗಡೆ ಮಾಡಿರುವಂತ ಅವರು, ವಾಯು ಸೇನೆಯಲ್ಲಿ ಸ್ಮರಣೀಯ ಸೇವೆ ಸಲ್ಲಿಸುತ್ತಾ ಸಂಕೂರು ಹಾಗೂ ಸುತ್ತಲಿನ ಗ್ರಾಮಗಳ ಯುವ ಸಮೂಹಕ್ಕೆ ಸ್ಫೂರ್ತಿ ಆಗಿದ್ದ ಮಂಜುನಾಥ್ ಅವರ ಅಕಾಲಿಕ ಮರಣ ದುಖಃ ತಂದಿದೆ. ವಾಯುಸೇನೆಯ ಈ ಹೆಮ್ಮೆಯ ಅಧಿಕಾರಿ ಸದಾ ನಮ್ಮೆಲ್ಲರ ಸ್ಮರಣೆಯಲ್ಲಿರುತ್ತಾರೆ ಎಂದಿದ್ದಾರೆ. ಮಂಜುನಾಥ್ ಅವರ ಅಗಲಿಕೆಯ ನೋವು ಭರಿಸುವ ಶಕ್ತಿ ಭಗವಂತ ಅವರ ಕುಟುಂಬದವರಿಗೆ, ಸಂಬಂಧಿಗಳಿಗೆ, ಸಂಕೂರು ಗ್ರಾಮಸ್ಥರಿಗೆ ನೀಡಲಿ ಎಂಬುದಾಗಿ ತಿಳಿಸಿದ್ದಾರೆ. https://kannadanewsnow.com/kannada/2nd-signalling-test-completed-on-namma-metro-yellow-line-in-bengaluru/ https://kannadanewsnow.com/kannada/confusion-in-state-bjp-will-come-to-a-happy-end-basavaraj-bommai/
ದಾವಣಗೆರೆ : ಚುನಾವಣೆಯಲ್ಲಿ ಸೋತಾಗ ಇವಿಎಂ ಬಗ್ಗೆ ಮಾತನಾಡುವುದು ಫ್ಯಾಷನ್ ಆಗಿದೆ. ವಿರೋಧ ಪಕ್ಷಗಳು ನಿರಂತರವಾಗಿ ಈ ಆರೋಪವನ್ನು ಮಾಡುತ್ತಿವೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ದಾವಣಗೆರೆ ಜಿಲ್ಲೆಯ ಹರಿಹರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ದೆಹಲಿ ವಿಧಾನಾಭೆ ಚುನಾವಣೆ ಸ್ಪಷ್ಟ ಸಂದೇಶ ನೀಡಿದೆ. ಯಾರು ದೇಶದ ಬಗ್ಗೆ ಚಿಂತನೆ ಮಾಡುತ್ತಾರೆ. ದೇಶದ ಅಭಿವೃದ್ಧಿ ಮಾಡುತ್ತಾರೆ. ಯಾರು ದೇಶ ಕಟ್ಟುತ್ತಾರೆ ಅವರಿಗೆ ಜನ ಬೆಂಬಲ ಇದೆ ಎನ್ನುವುದು ಬಹಳ ಸ್ಪಷ್ಟವಾಗಿದೆ. ದೇಶದ ವಿಭಜನೆ ಬಗ್ಗೆ ದೇಶದ ಹಿತವನ್ನು ಮರೆತು ವಿದೇಶದಲ್ಲಿ ಮಾತನಾಡುವವರಿಗೆ ಜನರು ಪಾಠ ಕಲಿಸಿದ್ದಾರೆ ಎಂದರು. ಇವಿಎಂ ಬಗ್ಗೆ ಮಾತನಾಡುವುದು ಫ್ಯಾಷನ್ ಆಗಿದೆ. ತಮ್ಮ ಸೋಲನ್ನು ಒಪ್ಪಿಕೊಳ್ಳದೇ ಕುಂಟು ನೆಪ ಹೇಳುವುದು ನಾಯಕನ ಲಕ್ಷಣ ಅಲ್ಲ. ವಿರೋಧ ಪಕ್ಷಗಳು ನಿರಂತರವಾಗಿ ಈ ಆರೋಪವನ್ನು ಮಾಡುತ್ತಿವೆ ಎಂದು ಹೇಳಿದರು. ಹೈಕಮಾಂಡ್ ಗಟ್ಟಿಯಾಗಿದೆ ರಾಜ್ಯ ಬಿಜೆಪಿಯಲ್ಲಿ ಯಾವುದೇ ಗೊಂದಲ ಇಲ್ಲ. ನಮ್ಮದು ಪ್ರಜಾಪ್ರಭುತ್ವ ಇರುವ ಪಕ್ಷ. ನಮ್ಮ ಹೈಕಮಾಂಡ್…
ಬೆಂಗಳೂರು: ಒಂದೆಡೆ ಶೇ.49ರಷ್ಟು ಟಿಕೆಟ್ ದರ ಹೆಚ್ಚಳ ಮಾಡಿ ನಮ್ಮ ಮೆಟ್ರೋ ಪ್ರಯಾಣಿಕರಿಗೆ ಬಿಎಂ ಆರ್ ಸಿಎಲ್ ಬಿಗ್ ಶಾಕ್ ನೀಡಿದೆ. ಇಂದಿನಿಂದ ಪರಿಷ್ಕೃತ ದರ ಜಾರಿಗೊಂಡಿದೆ. ಈ ನಡುವೆ ಬೆಂಗಳೂರಿನಲ್ಲಿ ನಮ್ಮ ಮೆಟ್ರೋ ಹಳದಿ ಮಾರ್ಗದಲ್ಲಿ 2ನೇ ಸಿಗ್ನಲಿಂಗ್ ಪರೀಕ್ಷೆ ಪೂರ್ಣಗೊಂಡಿದೆ. ಈ ಕುರಿತಂತೆ ಬಿಎಂಆರ್ ಸಿಎಲ್ ಮಾಹಿತಿ ನೀಡಿದ್ದು, ಹಳದಿ ಮಾರ್ಗಕ್ಕೆ ಇದು ಎರಡನೇ ರೈಲು ಸೆಟ್ ನಡೆಯುತ್ತಿದೆ. ಬಹು ಇತರೆ ರೈಲು ಪರೀಕ್ಷೆಗಳಲ್ಲಿ ಕೊನೆಯ ಸಿಗ್ನಲಿಂಗ್ ಪರೀಕ್ಷೆ ನಡೆಸಬೇಕಾಗಿದೆ. TS#2ಕ್ಕೆ ಸಿಗ್ನಲಿಂಗ್ ಪರೀಕ್ಷೆಯನ್ನು ಪೂರ್ಣಗೊಳಿಸಿದ ನಂತರ, ಮಾರ್ಚ್ ಮೊದಲ ವಾರದಿಂದ ಇತರೆ ರೈಲು ಪರೀಕ್ಷೆಗಳು ಪ್ರಾರಂಭಿಸಲಾಗುವುದು ಎಂದಿದೆ. ಇನ್ನೂ ಮೂರನೇ ರೈಲು ಸೆಟ್ ಮಾರ್ಚ್ 2025 ರ ಅಂತ್ಯದಲ್ಲಿ ಬರುವ ನಿರೀಕ್ಷೆ ಇದೆ. ಆ ಬಳಿಕ ನಮ್ಮ ಮೆಟ್ರೋ ಹಳದಿ ಮಾರ್ಗದಲ್ಲಿ ವಾಣಿಜ್ಯ ರೈಲು ಸಂಚಾರ ಆರಂಭದ ಬಗ್ಗೆ ಅಧಿಕೃತ ಮಾಹಿತಿ ಹೊರಬೀಳುವ ಸಾಧ್ಯತೆ ಇದೆ. https://kannadanewsnow.com/kannada/bengaluru-power-outages-in-these-areas-on-february-10/ https://kannadanewsnow.com/kannada/breaking-three-persons-including-notorious-rowdysheeter-scientist-manjya-arrested-in-hubballi/
ಬೆಂಗಳೂರು: ದಿನಾಂಕ 10-02-2025ರ ಸೋಮವಾರದ ನಾಳೆ ಬೆಳಿಗ್ಗೆ 11 ಗಂಟೆಯಿಂದ ಮಧ್ಯಾಹ್ನ 2 ಗಂಟೆಯವರೆಗೆ ನಗರದ ಈ ಕೆಳಕಂಡ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಬೆಸ್ಕಾಂ ( BESCOM ) ಮನವಿ ಮಾಡಿದೆ. ಈ ಕುರಿತಂತೆ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ನಾಳೆ ಬೆಳಿಗ್ಗೆ 11 ರಿಂದ 2 ಗಂಟೆಯಲರೆಗೆ 66/11 ಕೆವಿ ವಾಟರಿ ರೋಡ್ ಸ್ಟೇಷನ್ ನಲ್ಲಿ ತುರ್ತು ನಿರ್ವಹಣಾ ಕಾರ್ಯವನ್ನು ಕೈಗೊಳ್ಳಲಾಗುತ್ತಿದೆ. ಈ ಕಾರಣದಿಂದ ಕೆಳಗಿನ ಪ್ರದೇಶಗಳಲ್ಲಿ ಪವರ್ ಕಟ್ ಆಗಲಿದೆ ಅಂತ ತಿಳಿಸಿದೆ. ನಾಳೆ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ (Power Cut) ಹಳೆಬೈಯಪ್ಪನಹಳ್ಳಿ, ನಾಗೇನಪಾಳ್ಯ, ಸತ್ಯನಗರ, ಗಜೇಂದ್ರನಗರ, ಎಸ್.ಕುಮಾರ್ಲೇಔಟ್, ಆಂಧ್ರಬ್ಯಾಂಕ್ ರಸ್ತೆ, ಕುಕ್ಸ ರಸ್ತೆ, ಡೇವಿಸ್ ರಸ್ತೆ, ರಿಚರ್ಡ್ಸ ಪಾರ್ಕ ರಸ್ತೆ, ಆಯಿಲ್ ಮಿಲ್ ರಸ್ತೆ, ಸದಾಶಿವದೇವಸ್ಥಾನ ರಸ್ತೆ, ಕಮ್ಮನಹಳ್ಳಿಮುಖ್ಯರಸ್ತೆ, ಕೆ.ಹಚ್.ಬಿ ಕಾಲೋನಿ, ಜೈ ಭಾರತ ನಗರ, ಸಿ.ಕೆ.ಗಾರ್ಡನ್, ಡಿ’ಕೋಸ್ಟಾ ಲೇಔಟ್, ಹಚಿಸನ್ ರಸ್ತೆ, ಉತ್ತರ ರಸ್ತೆ, ವೀಲರ ರಸ್ತೆ, ಅಶೋಕ ರಸ್ತೆ,…
ನವದೆಹಲಿ: ಲಿವ್ ಇನ್ ಸಂಗಾತಿಯಿಂದಲೇ ಕೊಲೆಯಾದಂತ ಶ್ರದ್ಧಾ ವಾಕರ್ ಅವರ ತಂದೆ ವಿಕಾಸ್ ವಾಕರ್ ಭಾನುವಾರ ಬೆಳಿಗ್ಗೆ ಮುಂಬೈನ ವಸಾಯಿ ಪ್ರದೇಶದಲ್ಲಿ ಹೃದಯಾಘಾತದಿಂದ ನಿಧನರಾಗಿದ್ದಾರೆ. 18 ಮೇ 2022… ದೆಹಲಿಯಲ್ಲಿ ಈ ದಿನಾಂಕದಂದು ಇಡೀ ದೇಶವನ್ನೇ ಬೆಚ್ಚಿಬೀಳಿಸುವ ಘಟನೆ ನಡೆಯಿತು. 27 ವರ್ಷದ ಶ್ರದ್ಧಾ ವಾಕರ್ಳನ್ನು ಆಕೆಯ ಗೆಳೆಯನೇ ಬರ್ಬರವಾಗಿ ಕೊಲೆ ಮಾಡಿದ್ದ. ಈ ಕೊಲೆ ಪ್ರಕರಣವು ಶ್ರದ್ಧಾ ವಾಕರ್ ಅವರ ಕುಟುಂಬವನ್ನು ತೀವ್ರವಾಗಿ ಆಘಾತಕ್ಕೆ ಒಳಗಾಗಿತ್ತು. ಕುಟುಂಬ ಮೂಲಗಳ ಪ್ರಕಾರ, ಶ್ರದ್ಧಾ ಅವರ ತಂದೆ ವಿಕಾಸ್ ತಮ್ಮ ಮಗಳ ಹತ್ಯೆಯ ನಂತರ ನಿರಂತರವಾಗಿ ಖಿನ್ನತೆಯಿಂದ ಬಳಲುತ್ತಿದ್ದರು. ಅವರು ಖಿನ್ನತೆಗೆ ಚಿಕಿತ್ಸೆ ಪಡೆಯುತ್ತಿದ್ದರು. ಅವನು ತನ್ನ ಮಗಳ ಚಿತಾಭಸ್ಮಕ್ಕಾಗಿಯೂ ಕಾಯುತ್ತಿದ್ದನು. ಶ್ರದ್ಧಾಳ ತಂದೆ ಆರೋಪಿಗಳಿಗೆ ಮರಣದಂಡನೆ ವಿಧಿಸಬೇಕೆಂದು ಒತ್ತಾಯಿಸಿದ್ದರು. ಇಂತಹ ಅವರು ಇಂದು ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. https://kannadanewsnow.com/kannada/mla-yatnal-should-become-bjp-state-president-photo-at-kumbh-mela/ https://kannadanewsnow.com/kannada/ex-cms-daughter-duped-of-rs-4-crore-complaint-lodged/
ಡೆಹ್ರಾಡೂನ್: ಉತ್ತರಾಖಂಡದ ಮಾಜಿ ಮುಖ್ಯಮಂತ್ರಿ ಮತ್ತು ನರೇಂದ್ರ ಮೋದಿ ಸಂಪುಟದಲ್ಲಿ ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವರಾಗಿದ್ದ ರಮೇಶ್ ಪೋಖ್ರಿಯಾಲ್ ನಿಶಾಂಕ್ ಅವರ ಪುತ್ರಿ ಆರುಷಿ ನಿಶಾಂಕ್ ಅವರಿಗೆ ಚಲನಚಿತ್ರ ನಿರ್ಮಾಪಕರು ಎಂದು ಹೇಳಿಕೊಂಡು ಬಾಲಿವುಡ್ ಚಲನಚಿತ್ರದಲ್ಲಿ ಅವಕಾಶ ನೀಡುವುದಾಗಿ ಹೇಳಿ ಇಬ್ಬರು ವ್ಯಕ್ತಿಗಳು 4 ಕೋಟಿ ರೂ.ಗಳನ್ನು ವಂಚಿಸಿದ್ದಾರೆ ಎಂದು ಆರೋಪಿಸಲಾಗಿದೆ. ಡೆಹ್ರಾಡೂನ್ನ ಕೊಟ್ವಾಲಿ ಪೊಲೀಸ್ ಠಾಣೆಯಲ್ಲಿ ಅರುಷಿ ದೂರು ನೀಡಿದ್ದಾರೆ. ಮಾನಸಿ ವರುಣ್ ಬಾಗ್ಲಾ ಮತ್ತು ವರುಣ್ ಪ್ರಮೋದ್ ಕುಮಾರ್ ಬಾಗ್ಲಾ ತಮ್ಮನ್ನು ಮಿನಿ ಫಿಲ್ಮ್ಸ್ ಪ್ರೈವೇಟ್ ಲಿಮಿಟೆಡ್ನ ನಿರ್ದೇಶಕರು ಎಂದು ಪರಿಚಯಿಸಿಕೊಂಡರು ಮತ್ತು ಶನಾಯಾ ಕಪೂರ್ ಮತ್ತು ವಿಕ್ರಾಂತ್ ಮಾಸ್ಸಿ ಅಭಿನಯದ ‘ಆಂಖೋನ್ ಕಿ ಗುಸ್ತಾಖಿಯಾನ್’ ಎಂಬ ಹಿಂದಿ ಚಿತ್ರವನ್ನು ನಿರ್ಮಿಸುತ್ತಿರುವುದಾಗಿ ಹೇಳಿದರು ಎಂದು ಹಿಮಶ್ರೀ ಫಿಲ್ಮ್ಸ್ನ ಸಹ ಮಾಲೀಕ ಆರುಷಿ ಹೇಳಿದ್ದಾರೆ. ಅವರು ನನಗೆ ಮಹತ್ವದ ಪಾತ್ರವನ್ನು ನೀಡುವುದಾಗಿ ತಿಳಿಸಿದರು. ತಮ್ಮ ಸಂಸ್ಥೆಗೆ ಪರಿಚಯಸ್ಥರ ಮೂಲಕ 5 ಕೋಟಿ ರೂ.ಗಳನ್ನು ಹೂಡಿಕೆ ಮಾಡಿದರೆ ಖ್ಯಾತಿ ಮತ್ತು ಲಾಭದ…
ಉತ್ತರ ಪ್ರದೇಶ: ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಬಿಜೆಪಿ ರಾಜ್ಯಾಧ್ಯಕ್ಷರಾಗಲಿ ಅಂತ ಕುಂಭಮೇಳದಲ್ಲಿ ಪೋಟೋ ಹಿಡಿದು ಪುಣ್ಯಸ್ನಾನ ಮಾಡಿ ಪೂಜೆಯನ್ನು ಅಭಿಮಾನಿಗಳು ಮಾಡಿದಂತ ಘಟನೆ ನಡೆದಿದೆ. ವಿಜಯಪುರದ ಬಿಜೆಪಿ ನಗರ ಮಂಡಲದ ಉಪಾಧ್ಯಕ್ಷರು ಸೇರಿದಂತೆ ಇತರೆ ಬಿಜೆಪಿ ಕಾರ್ಯಕರ್ತರು ಪ್ರಯಾಗ್ ರಾಜ್ ನಲ್ಲಿ ನಡೆಯುತ್ತಿರುವಂತ ಮಹಾ ಕುಂಭಮೇಳಕ್ಕೆ ತೆರಳಿದ್ದಾರೆ. ಮಹಾಕುಂಭಮೇಳದ ಗಂಗಾನದಿಯಲ್ಲಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರ ಪೋಟೋ ಹಿಡಿದು ಪುಣ್ಯಸ್ನಾನ ಮಾಡಿದ್ದಾರೆ. ಅಲ್ಲದೇ ಶಾಸಕ ಯತ್ನಾಳ್ ಬಿಜೆಪಿ ರಾಜ್ಯಾಧ್ಯಕ್ಷರಾಗಲಿ ಅಂತ ಗಂಗಾನದಿಯಲ್ಲಿ ಘೋಷಣೆ ಕೂಗುತ್ತಲೇ ಪೂಜೆ ಸಲ್ಲಿಸಿದ್ದಾರೆ. https://kannadanewsnow.com/kannada/bengaluru-couple-killed-on-the-spot-as-concrete-mixer-lorry-collides-with-truck/ https://kannadanewsnow.com/kannada/union-minister-priyank-kharge-urges-society-to-join-hands-with-govt-to-eradicate-bonded-labour/
ಬೆಂಗಳೂರು: ನಗರದಲ್ಲಿ ಭೀಕರ ಅಪಘಾತವೊಂದು ಸಂಭವಿಸಿದೆ. ಕಾಂಕ್ರಿಟ್ ಮಿಕ್ಸರ್ ಲಾರಿಯೊಂದು ಬೈಕಿಗೆ ಡಿಕ್ಕಿಯಾದ ಪರಿಣಾಮ ಇಬ್ಬರು ದಂಪತಿಗಳು ಸ್ಥಳದಲ್ಲೇ ಸಾವನ್ನಪ್ಪಿರುವಂತ ಘಟನೆ ನಡೆದಿದೆ. ಬೆಂಗಳೂರಿನ ಕೆಂಗೇರಿ ಪೊಲೀಸ್ ಠಾಣೆ ವ್ಯಾಪ್ತಿಯ ಟ್ಯಾನರಿ ರಸ್ತೆಯಲ್ಲಿ ಭೀಕರ ಅಪಘಾತ ಸಂಭವಿಸಿದೆ. ಕಾಂಕ್ರಿಟ್ ಮಿಕ್ಸರ್ ಲಾರಿಯೊಂದು ಬೈಕ್ ಸವಾರರಿಗೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ದಂಪತಿಗಳು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಆಸೀಫ್ ಹಾಗೂ ಶಬಾನ್ ಎಂಬ ದಂಪತಿಗಳೇ ಸಾವನ್ನಪ್ಪಿರುವಂತವರಾಗಿದ್ದಾರೆ. ಕಾಂಕ್ರಿಟ್ ಮಿಕ್ಸರ್ ಲಾರಿ ಡಿಕ್ಕಿಯಾಗಿ ಈ ಅಪಘಾತ ಸಂಭವಿಸಿದೆ. ಸ್ಥಳಕ್ಕೆ ಕೆಂಗೇರಿ ಠಾಣೆಯ ಪೊಲೀಸರು ಭೇಟಿ ನೀಡಿ, ಪರಿಶೀಲಿಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ. https://kannadanewsnow.com/kannada/31-naxals-killed-in-chhattisgarhs-biggest-success-in-countering-red-terrorists/ https://kannadanewsnow.com/kannada/union-minister-priyank-kharge-urges-society-to-join-hands-with-govt-to-eradicate-bonded-labour/
ಬಿಜಾಪುರ: ಛತ್ತೀಸ್ ಗಢದ ಬಿಜಾಪುರ ಜಿಲ್ಲೆಯಲ್ಲಿ ಭಾನುವಾರ ಭದ್ರತಾ ಪಡೆಗಳು ನಡೆಸಿದ ಎನ್ ಕೌಂಟರ್ ನಲ್ಲಿ 31 ನಕ್ಸಲರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಮುಖಾಮುಖಿಯಲ್ಲಿ ಇಬ್ಬರು ಭದ್ರತಾ ಸಿಬ್ಬಂದಿ ಸಹ ಹುತಾತ್ಮರಾಗಿದ್ದಾರೆ. ಅನೇಕರು ಗಾಯಗೊಂಡಿದ್ದಾರೆ ಎಂದು ಅವರು ಹೇಳಿದರು. ವಿವಿಧ ಭದ್ರತಾ ಪಡೆಗಳ ಸಿಬ್ಬಂದಿಯ ಜಂಟಿ ತಂಡವು ನಕ್ಸಲೀಯ ವಿರೋಧಿ ಕಾರ್ಯಾಚರಣೆಯಲ್ಲಿ ತೊಡಗಿದ್ದಾಗ ಬೆಳಿಗ್ಗೆ ಇಂದ್ರಾವತಿ ರಾಷ್ಟ್ರೀಯ ಉದ್ಯಾನವನ ಪ್ರದೇಶದ ಅರಣ್ಯದಲ್ಲಿ ಗುಂಡಿನ ಚಕಮಕಿ ನಡೆದಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಪ್ರಾಥಮಿಕ ಮಾಹಿತಿಯ ಪ್ರಕಾರ, ಗುಂಡಿನ ಚಕಮಕಿಯಲ್ಲಿ 12 ನಕ್ಸಲರು ಸಾವನ್ನಪ್ಪಿದ್ದಾರೆ. ಅವರೆಲ್ಲರ ಶವಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಅವರು ಹೇಳಿದರು. ಗುಂಡಿನ ಚಕಮಕಿಯಲ್ಲಿ ರಾಜ್ಯ ಪೊಲೀಸ್ನ ಜಿಲ್ಲಾ ರಿಸರ್ವ್ ಗಾರ್ಡ್ಗೆ ಸೇರಿದ ಮತ್ತು ವಿಶೇಷ ಕಾರ್ಯಪಡೆಗೆ ಸೇರಿದ ಇಬ್ಬರು ಭದ್ರತಾ ಸಿಬ್ಬಂದಿ ಸಹ ಹುತಾತ್ಮರಾಗಿದ್ದಾರೆ. ಇತರ ಇಬ್ಬರು ಗಾಯಗೊಂಡಿದ್ದಾರೆ ಎಂದು ಅಧಿಕಾರಿ ತಿಳಿಸಿದ್ದಾರೆ. ಮೃತ ಭದ್ರತಾ ಸಿಬ್ಬಂದಿಯ ಶವಗಳನ್ನು ಹೊರತೆಗೆಯಲು ಮತ್ತು ಗಾಯಗೊಂಡ ಜವಾನರನ್ನು ಸ್ಥಳಾಂತರಿಸಲು ಪ್ರಯತ್ನಗಳು…














