Subscribe to Updates
Get the latest creative news from FooBar about art, design and business.
Author: kannadanewsnow09
ಬೆಂಗಳೂರು: ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ( M Chinnaswamy Stadium in Bengaluru ) ಭಾನುವಾರದ ನಾಳೆ ನಡೆಯಲಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು (Royal Challengers Bangalore -RCB) ಮತ್ತು ಡೆಲ್ಲಿ ಕ್ಯಾಪಿಟಲ್ಸ್ (Delhi Capitals -DC) ನಡುವಿನ ಪಂದ್ಯಕ್ಕೆ ಮುಂಚಿತವಾಗಿ ಬೆಂಗಳೂರು ಸಂಚಾರ ಪೊಲೀಸ್ ಇಲಾಖೆ ಹೊಸ ಸಂಚಾರ ಸಲಹೆಯನ್ನು ನೀಡಿದೆ. ಮಧ್ಯಾಹ್ನ 3 ರಿಂದ ರಾತ್ರಿ 11 ರವರೆಗೆ ನಿಗದಿಯಾಗಿರುವ ಇಂಡಿಯನ್ ಪ್ರೀಮಿಯರ್ ಲೀಗ್ (Indian Premier League -IPL) ಕ್ರಿಕೆಟ್ ಪಂದ್ಯದ ಸಮಯದಲ್ಲಿ ಸುಗಮ ಸಂಚಾರ ಹರಿವನ್ನು ಸುಗಮಗೊಳಿಸಲು ಮತ್ತು ದಟ್ಟಣೆಯನ್ನು ತಡೆಗಟ್ಟಲು ಪರ್ಯಾಯ ಪಾರ್ಕಿಂಗ್ ಸ್ಥಳಗಳನ್ನು ಸಲಹೆ ಮಾಡಲಾಗಿದೆ. ಈ ಕ್ರೀಡಾಂಗಣವು ಕರ್ನಾಟಕ ರಾಜಧಾನಿಯ ಕಬ್ಬನ್ ಪಾರ್ಕ್ ಬಳಿ ಎಂಜಿ ರಸ್ತೆಯಲ್ಲಿದೆ. ಬೆಂಗಳೂರು ನಗರದ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಕ್ರಿಕೆಟ್ ಪಂದ್ಯ ನಡೆಯುವ ಹಿನ್ನೆಲೆಯಲ್ಲಿ ಸುಗಮ ಸಂಚಾರಕ್ಕೆ ವ್ಯವಸ್ಥೆ ಮಾಡಲಾಗಿದೆ. ಈ ಸ್ಥಳಗಳಲ್ಲಿ ಪಾರ್ಕಿಂಗ್ ನಿರ್ಬಂಧಗಳು ಈ ಕೆಳಗಿನ ಸ್ಥಳಗಳು ಮತ್ತು ಬೀದಿಗಳಲ್ಲಿ ಯಾವುದೇ ಪಾರ್ಕಿಂಗ್…
ಗದಗ: ನಗರದಲ್ಲಿನ ಮನೆಯೊಂದಕ್ಕೆ ಹಾಡಹಗಲೇ ನುಗ್ಗಿರುವಂತ ಐವರು ದುಷ್ಕರ್ಮಿಗಳು ಮನೆಯಲ್ಲಿರುವಂತ ಟಿವಿ, ಫ್ರಿಜ್ಡ್ ಧ್ವಂಸಗೊಳಿಸಿದ್ರೇ, ಮನೆ ಮುಂದೆ ನಿಂತಿದ್ದಂತ ಜೀಪಿಗೆ ಬೆಂಕಿ ಹಚ್ಚಿ ಅಟ್ಟಹಾಸ ಮರೆದಿದ್ದಾರೆ. ಗದಗ ನಗರದ ಪಂಚಾಕ್ಷರಿ ನಗರದಲ್ಲಿ ಹಾಡು ಹಗಲೇ ಮನೆಗೆ ನುಗ್ಗಿರುವಂತ ಐವರು ದುಷ್ಕರ್ಮಿಗಳು ಮನೆಯಲ್ಲಿದ್ದಂತ ಟಿವಿ, ಫ್ರಿಡ್ಜ್ ಧ್ವಂಸಗೊಳಿಸಿದ್ದಾರೆ. ಇದನ್ನು ಪ್ರಶ್ನಿಸಿದಂತ ಮನೆಯಲ್ಲಿನ ಮಹಿಳೆಯೊಬ್ಬರ ಸೀರೆಯನ್ನು ಹಿಡಿದು ಎಳೆದಾಡಿರೋದಾಗಿ ಅಸಭ್ಯವಾಗಿಯೂ ವರ್ತಿಸಿರೋದಾಗಿ ತಿಳಿದು ಬಂದಿದೆ. ಇನ್ನೂ ಮನೆಯ ಮುಂದೆ ನಿಂತಿದ್ದಂತ ಜೀಪಿಗೂ ಬೆಂಕಿ ಹಚ್ಚಿದ್ದಾರೆ. ಇದರಿಂದಾಗಿ ಜೀವು ಧಗಧಗಿಸಿ ಹೊತ್ತಿ ಉರಿದಿದೆ. ಪ್ರಕಾಶ್ ನಿಡಗುಂದಿ ಎಂಬುವರಿಗೆ ಸೇರಿದ ಮನೆಯಲ್ಲೇ ಹೀಗೆ ಐವರು ದುಷ್ಕರ್ಮಿಗಳು ಅಟ್ಟಹಾಸವನ್ನು ಮರೆದಿರೋದಾಗಿದೆ. ಈ ಘಟನೆಯ ಹಿಂದೆ ಹುಯಿಲಗೋಳ ಗ್ರಾಮ ಪಂಚಾಯ್ತಿ ಸದಸ್ಯರಾದಂತ ಮಿಲಿಂದರ್ ಕಾಳೆ, ನಾಗರಾಜ್ ಕಾಳೆ ವಿರುದ್ಧ ಮನೆಯವರು ಆರೋಪ ಮಾಡಿದ್ದಾರೆ. ಇವರ ಕುಮ್ಮಕ್ಕಿನಿಂದಲೇ ಐವರು ದುಷ್ಕರ್ಮಿಗಳು ನಮ್ಮ ಮನೆಗೆ ನುಗ್ಗಿ ಅಟ್ಟಹಾಸ ಮರೆದಿದ್ದಾರೆ. ನಮ್ಮ ಜೀವನಕ್ಕೆ ಏನಾದ್ರೂ ಆದ್ರೇ ಇವರೇ ಹೊಣೆಗಾರರು ಎಂಬುದಾಗಿ ಹೇಳಿದ್ದಾರೆ. ಸದಸ್ಯ ಗದಗ…
ಕೆಎನ್ಎನ್ ಸ್ಪೋರ್ಟ್ಸ್: ಇಂಗ್ಲೆಂಡ್ ವೇಗಿ ಜೇಮ್ಸ್ ಆಂಡರ್ಸನ್ 20 ವರ್ಷಗಳ ಸುದೀರ್ಘ ವೃತ್ತಿಜೀವನದ ನಂತರ ಟೆಸ್ಟ್ ಕ್ರಿಕೆಟ್ಗೆ ನಿವೃತ್ತಿ ಘೋಷಿಸಿದ್ದಾರೆ. ಆಂಡರ್ಸನ್, ಸಾಮಾಜಿಕ ಮಾಧ್ಯಮ ಪೋಸ್ಟ್ನಲ್ಲಿ, ಇಂಗ್ಲಿಷ್ ಬೇಸಿಗೆಯ ಆರಂಭದಲ್ಲಿ ಲಾರ್ಡ್ಸ್ನಲ್ಲಿ ತಮ್ಮ ಕೊನೆಯ ಟೆಸ್ಟ್ ಆಡುವುದಾಗಿ ಘೋಷಿಸಿದರು. ಆಂಡರ್ಸನ್ ಅವರ ಕೊನೆಯ ಟೆಸ್ಟ್ ಜುಲೈ 10-14 ರಿಂದ ವೆಸ್ಟ್ ಇಂಡೀಸ್ ವಿರುದ್ಧ ನಡೆಯಲಿದೆ. ಈ ಸುದ್ದಿಯನ್ನು ಹಂಚಿಕೊಂಡ ಆಂಡರ್ಸನ್ ತಮ್ಮ ಇನ್ಸ್ಟಾಗ್ರಾಮ್ ಹ್ಯಾಂಡಲ್ನಲ್ಲಿ ಹೀಗೆ ಬರೆದಿದ್ದಾರೆ: “ಎಲ್ಲರಿಗೂ ನಮಸ್ಕಾರ. ಲಾರ್ಡ್ಸ್ನಲ್ಲಿ ಬೇಸಿಗೆಯ ಮೊದಲ ಟೆಸ್ಟ್ ನನ್ನ ಕೊನೆಯ ಟೆಸ್ಟ್ ಎಂದು ಹೇಳಲು ಒಂದು ಟಿಪ್ಪಣಿ. ನನ್ನ ದೇಶವನ್ನು ಪ್ರತಿನಿಧಿಸುವುದು ನಂಬಲಾಗದ 20 ವರ್ಷಗಳು, ನಾನು ಬಾಲ್ಯದಿಂದಲೂ ಪ್ರೀತಿಸುವ ಆಟವನ್ನು ಆಡುತ್ತಿದ್ದೇನೆ. ನಾನು ಇಂಗ್ಲೆಂಡ್ ಗೆ ಹೊರನಡೆಯುವುದನ್ನು ತುಂಬಾ ಮಿಸ್ ಮಾಡಿಕೊಳ್ಳಲಿದ್ದೇನೆ. ಆದರೆ ನನ್ನಿಂದ ದೂರ ಸರಿಯಲು ಮತ್ತು ಇತರರು ತಮ್ಮ ಕನಸುಗಳನ್ನು ನನಸಾಗಿಸಲು ಸರಿಯಾದ ಸಮಯ ಎಂದು ನನಗೆ ತಿಳಿದಿದೆ, ಏಕೆಂದರೆ ಅದಕ್ಕಿಂತ ಹೆಚ್ಚಿನ ಭಾವನೆ ಇನ್ನೊಂದಿಲ್ಲ ಎಂದಿದ್ದಾರೆ. “ಡೇನಿಯೆಲಾ,…
ಮೈಸೂರು : ಬೇರೆ ಪಕ್ಷಗಳಲ್ಲಿದ್ದರೂ ನನ್ನ ಹಾಗೂ ಶ್ರೀನಿವಾಸ್ ಪ್ರಸಾದ್ ರ ನಡುವೆ ಉತ್ತಮ ಸ್ನೇಹ ಬಾಂಧವ್ಯ ಹಾಗೂ ಒಡನಾಡವಿದ್ದು, ಪರಸ್ಪರ ರಾಜಕೀಯ ವೈರುಧ್ಯಗಳಿದ್ದರೂ ತಮ್ಮ ಸ್ನೇಹಕ್ಕೆ ಎಂದೂ ಧಕ್ಕೆ ಬಂದಿರಲಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶ್ರೀನಿವಾಸ್ ಪ್ರಸಾದ್ ರವರೊಂದಿಗಿನ ತಮ್ಮ ಒಡನಾಟದ ನೆನಪುಗಳನ್ನು ಹಂಚಿಕೊಂಡರು. ಅವರು ಇಂದು ಮೈರೂರಿನಲ್ಲಿ ನಡೆದ ರಾಜಕೀತಯ ಮುತ್ಸದ್ದಿ ಶ್ರೀನಿವಾಸ್ ಪ್ರಸಾದ್ ಅವರಿಗೆ ಶ್ರದ್ಧಾಂಜಲಿ ಮತ್ತು ನುಡಿನಮನ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು. ಮೊದಲು ಜನತಾ ದಳ ಪಕ್ಷದಿಂದ ಶ್ರೀನಿವಾಸ್ ಪ್ರಸಾದ್ ರವರು ಲೋಕಸಭೆ ಹಾಗೂ ನಂತರ ವಿಧಾನಸಭಾ ಚುನಾವಣೆಯಲ್ಲಿ ಪಾಲ್ಗೊಂಡು ಗೆಲುವು ಸಾಧಿಸಿದರು. ಇದಾದ ಬಳಿಕ ಕಾಂಗ್ರೆಸ್ ಪಕ್ಷವನ್ನು ಸೇರಿದ ಶ್ರೀನಿವಾಸ್ ಪ್ರಸಾದ್ ಹಾಗೂ ನಾನು ಬೇರೆ ಪಕ್ಷಗಳಲ್ಲಿದ್ದರೂ , ನಮ್ಮಲ್ಲಿ ಪರಸ್ಪರ ಸ್ನೇಹ ಹಾಗೂ ಗೌರವಗಳಿದ್ದವು. ಅವರು ವಿವಿಧ ಪಕ್ಷಗಳಲ್ಲಿ ಹಲವು ನಾಯಕರೊಂದಿಗೆ ಸ್ನೇಹ ಹಾಗೂ ಒಡನಾಟವನ್ನು ಹೊಂದಿದ್ದರು. ಮನುಷ್ಯತ್ವದಿಂದ ಕೂಡಿದ ಸಜ್ಜನರು. ಅವರು ಯಾವುದೇ ಪಕ್ಷದಲ್ಲಿದ್ದರೂ, ಡಾ. ಅಂಬೇಡ್ಕರ್ ರವರ ವಿಚಾರಧಾರೆಗಳ…
ಕಲಬುರಗಿ: ರಾಜ್ಯದಲ್ಲಿ ಬೆಚ್ಚಿ ಬೀಳಿಸೋ ಘಟನೆ ಎನ್ನುವಂತೆ ಮೂವರನ್ನು ಹಣಕ್ಕಾಗಿ ಕಿಡ್ನ್ಯಾಪ್ ಮಾಡಿ, ಸೆಕೆಂಡ್ ಹ್ಯಾಂಡ್ ಕಾರು ವ್ಯಾಪಾರಿ ಮತ್ತು ಆತನ ಸ್ನೇಹಿತನ ಮರ್ಮಾಂಗಕ್ಕೆ ವಿದ್ಯುತ್ ಶಾಕ್ ಕೊಟ್ಟು ಟಾರ್ಚರ್ ನೀಡಿ, ಹಣ ಲಪಟಾಯಿಸಿರುವಂತ ಘಟನೆ ಕಲಬುರ್ಗಿಯಲ್ಲಿ ನಡೆದಿದೆ. ಕಲಬುರ್ಗಿ ಜಿಲ್ಲೆಯ ಸೇಡಂ ತಾಲೂಕಿನ ದೇವನೂರು ಗ್ರಾಮದ ನಿವಾಸಿಯಾಗಿದ್ದಂತ ಸೆಕೆಂಡ್ ಹ್ಯಾಂಡ್ ಕಾರು ವ್ಯಾಪಾರಿ ಅರ್ಜುನ್ ಮಡಿವಾಳ ಹಾಗೂ ಆತನ ಸ್ನೇಹಿತನನ್ನು ಕಿಡ್ನ್ಯಾಪ್ ಮಾಡಿದಂತ ಘಟನೆ ನಡೆದಿತ್ತು. ಅರ್ಜುನ್ ಬೆಂಗಳೂರಿನಿಂದ ಸೆಕೆಂಡ್ ಹ್ಯಾಂಡ್ ಕಾರು ತಂದು, ಅವುಗಳನ್ನು ಕಲಬುರ್ಗಿಯಲ್ಲಿ ಮಾರಾಟ ಮಾಡುತ್ತಿದ್ದರು. ಮೇ.5ರಂದು ಪರಿಚಯಸ್ಥನಾಗಿದ್ದಂತ ರಮೇಶ್ ಎಂಬಾತನಿಗೆ ಸೆಕೆಂಡ್ ಹ್ಯಾಂಡ್ ಕಾರು ತೋರಿಸೋದಕ್ಕೆ ಅರ್ಜುನ್ ಸ್ನೇಹಿತರಾದಂತ ಎಂ.ಡಿ ಸಮೀರುದ್ದೀನ್, ಅಬ್ದುಲ್ ರಹೇಮಾನ್ ಜೊತೆಗೆ ತೆರಳಿದ್ದನು. ಪರಿಚಿತನಾಗಿದ್ದಂತ ರಮೇಶ್ ಕಾರಿನ ಟೆಸ್ಟ್ ಡ್ರೈವ್ ಮಾಡಿ, ಕಾರು ಕೊಳ್ಳೋದಕ್ಕೆ ಹಣವನ್ನು ಕಲಬುರ್ಗಿ ನಗರದ ಹಾಗರಗಾ ಕ್ರಾಸ್ ಬಳಿಯಲ್ಲಿ ಒಬ್ಬರು ಇದ್ದಾರೆ. ಬನ್ನಿ ಅಲ್ಲಿ ಕೊಡಿಸುತ್ತೇನೆ ಅಂತ ಅರ್ಜುನ್ ಸೇರಿದಂತೆ ಮೂವರನ್ನು ಕರೆದೊಯ್ದಿದ್ದಾನೆ. ರಮೇಶ್ ಕರೆದೊಯ್ದ…
ಉಜಿರೆ: ಹೆಣ್ಣು ಮಕ್ಕಳನ್ನು ಪೋಷಕರು ಬೆಳೆಸುವಾಗ ಸಾಮಾನ್ಯವಾಗಿ ಮದುವೆಯ ಬಗ್ಗೆ ಯೋಚನೆ ಮಾಡುತ್ತಾರೆ ವಿದ್ಯಾಭ್ಯಾಸ ನೀಡುತ್ತಾರೆ ಆದರೆ ಉದ್ಯೋಗದ ಬಗ್ಗೆ ಯೋಚಿಸುವುದು ಕಡಿಮೆ. ಇಂದಿನ ಹೆಣ್ಣು ಮಕ್ಕಳಿಗೆ ವಿದ್ಯೆಯ ಜೊತೆಗೆ ಉದ್ಯೋಗ ಬೇಕು ಮಹಿಳೆಯರಿಗೆ ಆರ್ಥಿಕ ಸ್ವಾತಂತ್ರ್ಯ ಬಹು ಮುಖ್ಯವಾಗುತ್ತದೆ. ನಮ್ಮ ಕೈಯಲ್ಲಿ ನಮ್ಮ ದುಡ್ಡು ಇರಬೇಕು ನಮ್ಮ ಮತ್ತು ಮಕ್ಕಳ ಬೇಕು -ಬೇಡಗಳಿಗೆ, ಸ್ಪಂದಿಸಲು ಅನುಕೂಲವಾಗತ್ತದೆ ಎಂಬುದಾಗಿ ಶೃದ್ಧಾ ಅಮಿತ್ ಹೇಳಿದ್ದಾರೆ. ಅವರು ಉಜಿರೆ ರುಡ್ಸೆಟ್ ಸಂಸ್ಥೆಯಲ್ಲಿ 06 ದಿನ ಗಳ ಕಾಲ ನಡೆದ ಮದುಮಗಳ ಶೃಂಗಾರ -ಉದ್ಯಮಶೀಲತಾ ಅಭಿವೃದ್ಧಿ ತರಬೇತಿಯ ಸಮಾರೋಪ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಶಿಭಿರಾರ್ಥಿಗಳಿಗೆ ಪ್ರಮಾಣ ಪತ್ರ ವಿತರಿಸಿ ಮಾತನಾಡಿ, ಶುಭ ಹಾರೈಸಿದರು. ಈ ವೇಳೆ ಮಾತನಾಡಿದಂತ ಅವರು, ಮುಖ್ಯವಾಗಿ ನಮ್ಮ ಮನೋಬಲ ಏನು, ನಮ್ಮ ಒಳಗೆ ಏನು ಆಸೆ ಇದೆ. ನಮ್ಮಲ್ಲಿ ಏನು ಪ್ರತಿಭೆ ಇದೆ. ನಮ್ಮ ವ್ಯಕ್ತಿತ್ವ ಏನು ಎಂಬುದನ್ನು ತಿಳಿದಿರಬೇಕು. ಪದವಿ ಓದಿದ ನಂತರ ಕೂಡ ಮುಂದೆ ಏನು ಮಾಡಬೇಕು…
ಬೆಂಗಳೂರು: ಒಟ್ಟಾರೆ ಜನಾಭಿಪ್ರಾಯ, ಜನರ ಸ್ಪಂದನ, 3 ಸುತ್ತಿನಲ್ಲಿ ಮನೆ ಮನೆ ಪ್ರಚಾರದ ಕಾರ್ಯದ ಆಧಾರದಲ್ಲಿ ರಾಜ್ಯದ ಎಲ್ಲ 28 ಲೋಕಸಭಾ ಕ್ಷೇತ್ರಗಳನ್ನೂ ಗೆಲ್ಲುವ ಉತ್ಸಾಹದಲ್ಲಿ ನಾವಿದ್ದೇವೆ ಎಂದು ರಾಜ್ಯ ಪ್ರಧಾನ ಕಾರ್ಯದರ್ಶಿ ಮತ್ತು ಚುನಾವಣಾ ನಿರ್ವಹಣಾ ಸಮಿತಿ ರಾಜ್ಯ ಸಂಚಾಲಕ ವಿ.ಸುನೀಲ್ ಕುಮಾರ್ ಅವರು ತಿಳಿಸಿದರು. ನಗರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕಡಿಮೆ ಅವಧಿಯಲ್ಲಿ ಹೆಚ್ಚು ಜನರನ್ನು ತಲುಪುವಂಥ ಪ್ರಯತ್ನ ಯಶಸ್ವಿಯಾಗಿ ನಡೆದಿದೆ ಎಂದು ತಿಳಿಸಿದರು. 3 ರೀತಿಯ ಸಾರ್ವಜನಿಕ ಸಂಪರ್ಕವನ್ನು ಯಶಸ್ವಿಯಾಗಿ ಮಾಡಿದ್ದೇವೆ. ದೊಡ್ಡ ದೊಡ್ಡ ಸಾರ್ವಜನಿಕ ಸಭೆ, ರೋಡ್ ಷೋ, ಮನೆಯಂಗಳದ ಸಭೆಗಳ ಮೂಲಕ ಸಾರ್ವಜನಿಕರನ್ನು ತಲುಪಿ ನಮ್ಮ ವಿಷಯವನ್ನು ತಿಳಿಸಲಾಗಿದೆ ಎಂದರು. ಪ್ರಧಾನಮಂತ್ರಿ ನರೇಂದ್ರ ಮೋದಿಜೀ, ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ, ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೇರಿದಂತೆ 14 ಜನ ರಾಷ್ಟ್ರೀಯ ಪ್ರಮುಖರು ಕರ್ನಾಟಕದಲ್ಲಿ 79 ಸಾರ್ವಜನಿಕ ಸಭೆಗಳಲ್ಲಿ ಭಾಗವಹಿಸಿದ್ದಾರೆ. 39 ಕಡೆಗಳಲ್ಲಿ ರೋಡ್…
ಶಿವಮೊಗ್ಗ: ರಾಜ್ಯದಲ್ಲಿ ಎಸ್ ಎಸ್ ಎಲ್ ಸಿ, ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶದ ಬಳಿಕ, ಮುಂದಿನ ತರಗತಿಗೆ ಶಾಲಾ ದಾಖಲಾತಿ ಆರಂಭಗೊಂಡಿದೆ. ಕೆಲ ಶಾಲೆಗಳಂತೂ ಸರ್ಕಾರ ನಿಗದಿ ಪಡಿಸಿದ್ದಕ್ಕಿಂತ ಹೆಚ್ಚಿನ ಶುಲ್ಕವನ್ನು ವಸೂಲಿ ಮಾಡುತ್ತಿರೋ ಆರೋಪ ಕೇಳಿ ಬಂದಿದೆ. ಇಂತವರಿಗೆ ನಿಗದಿಗಿಂತ ಹೆಚ್ಚಿನ ಫೀಸ್ ತಗೊಂಡ್ರೆ ಶಾಲಾ ಮಾನ್ಯತೆಯನ್ನೇ ರದ್ದುಗೊಳಿಸೋದಾಗಿ ಶಿಕ್ಷಣ ಸಚಿವ ಮಧು ಬಂಗಾರಪ್ಪ ಖಡಕ್ ಎಚ್ಚರಿಕೆ ನೀಡಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಡಿದಂತ ಅವರು, ಖಾಸಗಿ ಶಾಲೆಗಳಿಗೆ ನಾನು ಒಂದು ಸಲಹೆ ಕೊಡುತ್ತೇನೆ. ಕಾನೂನಿನ ಪ್ರಕಾರವೇ ಶಾಲೆಯಲ್ಲಿ ಶುಲ್ಕ ತೆಗೆದುಕೊಳ್ಳಬೇಕು. ಈ ಮೂಲಕ ಮಕ್ಕಳಿಗೆ ಅನುಕೂಲ ಮಾಡಿಕೊಡಬೇಕು ಎಂದರು. ಮಕ್ಕಳಿಗೆ ಅನುಕೂಲವಾಗುವ ರೀತಿಯಲ್ಲಿ ಖಾಸಗಿ ಶಾಲೆಗಳು ಸಹಾಯ ಮಾಡಬೇಕು. ಅದರ ಹೊರತಾಗಿ ಅಕ್ರಮವಾಗಿ ಫೀಸ್ ತೆಗೆದುಕೊಂಡ್ರೆ, ಹೆಚ್ಚಿನ ಶುಲ್ಕವನ್ನು ಮಕ್ಕಳ ಪೋಷಕರಿಂದ ವಸೂಲಿ ಮಾಡಿದ್ದೇ ಆದಲ್ಲಿ, ಅಂತವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ. ಶಾಲಾ ಮಾನ್ಯತೆಯನ್ನು ರದ್ದುಗೊಳಿಸೋದಾಗಿ ಎಚ್ಚರಿಕೆ ನೀಡಿದರು. https://kannadanewsnow.com/kannada/villagers-complain-to-sagar-tehsildar-over-conley-pdo-sitting-with-his-eyes-closed-despite-illegal-transportation-of-soil/ https://kannadanewsnow.com/kannada/becoming-a-mother-is-a-natural-phenomenon-court-orders-payment-of-maternity-dues-to-employee/
ಶಿವಮೊಗ್ಗ: ಜಿಲ್ಲೆಯ ಸಾಗರ ತಾಲೂಕಿನ ಕಾನ್ಲೆ ಗ್ರಾಮ ಪಂಚಾಯ್ತಿ ಪಿಡಿಓ ವಿರುದ್ಧ ತಹಶೀಲ್ದಾರರಿಗೆ ಗ್ರಾಮಸ್ಥರು ದೂರು ನೀಡಿದ್ದಾರೆ. ಇದಕ್ಕೆ ಕಾರಣ ಗ್ರಾಮದಲ್ಲಿ ಅಕ್ರಮವಾಗಿ ಮಣ್ಣು ಸಾಗಾಟ ಮಾಡಿದ್ರೂ ಪಿಡಿಓ ಮಾತ್ರ ನನಗೂ ಇದಕ್ಕೂ ಸಂಬಂಧವೇ ಇಲ್ಲ ಎನ್ನುವಂತೆ ಕಣ್ ಮುಚ್ಚಿ ಕುಳಿತಿರೋದೇ ಆಗಿದೆ. ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ತಹಶೀಲ್ದಾರ್ ಸೈಯದ್ ಕಲೀಂ ಉಲ್ಲಾ ಅವರಿಗೆ ಕಾನ್ಲೆ ಪಂಚಾಯ್ತಿ ಅಧಿಕಾರಿಗಳ ವಿರುದ್ಧ ಅದೇ ಊರಿನ ಗ್ರಾಮದ ಹಿರಿಯ ನಾಗರಿಕರಾದ ಬಡ ರೈತ ಕುಟುಂಬ ದೂರು ನೀಡಿದೆ. ಕಣ್ ಮುಚ್ಚಿ ಕುಳಿತ ಕಾನ್ಲೆ ಗ್ರಾಮ ಪಂಚಾಯ್ತಿ ಪಿಡಿಓ ಸಾಗರ ತಾಲೂಕು ತಾಳಗುಪ್ಪ ಹೋಬಳಿ ಕಾನ್ಲೆ ಗ್ರಾಮ ಪಂಚಾಯ್ತಿಯ ಸರ್ಕಾರಿ ಬೀಳು ಸರ್ವೇ ನಂಬರ್ 104ರಲ್ಲಿ ಸರಿಸುಮಾರು 18 ರಿಂದ 20 ಎಕರೆ ಸರ್ಕಾರಿ ಜಾಗದಲ್ಲಿ ಸಾವಿರಾರು ಲೋಡ್ ಅಕ್ರಮ ಮಣ್ಣು ಲೂಟಿ ಮಾಡಿ ಸಾಗಾಟ ಮಾಡಿಸಿದ್ದಾರೆ. ಅಲ್ಲದೇ ಸರ್ಕಾರದ ಬೊಕ್ಕಸಕ್ಕೆ ಲಕ್ಷಾಂತರ ರೂಪಾಯಿ ನಷ್ಟ ಉಂಟು ಮಾಡಿದ್ದಾರೆ ಎಂಬುದಾಗಿ ಗಂಭೀರವಾಗಿ ಆರೋಪಿಸಲಾಗಿದೆ. ಇದಲ್ಲದೇ…
ಚಿಕ್ಕೋಡಿ: ಇಂದು ಮಹಾರಾಷ್ಟ್ರ ಬಳಿಯಲ್ಲಿ ಕ್ರೂಸರ್ ವಾಹನವೊಂದು ಪಲ್ಟಿಯಾದ ಪರಿಣಾಮ, ಅದರಲ್ಲಿದ್ದಂತ ಚಿಕ್ಕೋಡಿಯ ಬಳ್ಳಿಗೇರಿಯ ಮೂವರು ಮಹಿಳೆಯರು ಸಾವನ್ನಪ್ಪಿದ್ದಾರೆ. ಅಲ್ಲದೇ ಇನ್ನೂ ಹಲವರು ಗಾಯಗೊಂಡಿರುವಂತ ಘಟನೆ ನಡೆದಿದೆ. ಮಹಾರಾಷ್ಟ್ರದ ಜತ್ತ ಬಳಿಯಲ್ಲಿ ಕ್ರೂಸರ್ ವಾಹನವೊಂದು ಪಲ್ಟಿಯಾದ ಪರಿಣಾಮ, ಅಥಣಿ ತಾಲೂಕಿನ ಬಳ್ಳಿಗೇರಿಯ ಮೂವರು ಮಹಿಳೆಯರು ದುರ್ಮರಣ ಹೊಂದಿದ್ದಾರೆ. ಚಿಕ್ಕೋಡಿಯಿಂದ ಮಹಾರಾಷ್ಟ್ರಕ್ಕೆ ಕೆಲಸಕ್ಕಾಗಿ ಕ್ರೂಸರ್ ನಲ್ಲಿ ತೆರಳುತ್ತಿದ್ದಾಗ, ಕ್ರೂಸರ್ ವಾಹನದ ಎಡಬದಿಯ ಟೈಯರ್ ಸ್ಪೋಟಗೊಂಡು ಪಲ್ಟಿಯಾಗಿದೆ. ಈ ಅಪಘಾತದಲ್ಲಿ ಮಹಾದೇವಿ ಚೌಗಲಾ, ಗೀತಾ ದೊಡ್ಡಮನಿ, ಕಸ್ತೂರಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಇನ್ನೂ ಇದೇ ವಾಹನದಲ್ಲಿ ಸಂಚರಿಸುತ್ತಿದ್ದಂತ ಇತರರಿಗೆ ಗಾಯವಾಗಿದ್ದು, ಅವರನ್ನು ಚಿಕಿತ್ಸೆಗಾಗಿ ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ. ಈಗ ಬಳ್ಳಿಗೇರಿಯಲ್ಲಿ ಮೂವರು ಮಹಿಳೆಯರು ಅಪಘಾತದಲ್ಲಿ ದುರ್ಮರಣದಿಂದಾಗಿ ನೀರವ ಮೌನ ಆವರಿಸಿದೆ. ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. https://kannadanewsnow.com/kannada/important-information-for-students-about-registration-for-sslc-exam-ii/ https://kannadanewsnow.com/kannada/becoming-a-mother-is-a-natural-phenomenon-court-orders-payment-of-maternity-dues-to-employee/