Subscribe to Updates
Get the latest creative news from FooBar about art, design and business.
Author: kannadanewsnow09
ನವದೆಹಲಿ: ಸಾಕಷ್ಟು ಬಂಡವಾಳದ ಕೊರತೆ ಮತ್ತು ಕಳಪೆ ಗಳಿಕೆಯ ನಿರೀಕ್ಷೆಗಳಿಂದಾಗಿ ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ (Reserve Bank of India -RBI) ಗಾಜಿಪುರದ ಪೂರ್ವಾಂಚಲ್ ಸಹಕಾರಿ ಬ್ಯಾಂಕಿನ ( Purvanchal Cooperative Bank ) ಪರವಾನಗಿಯನ್ನು ರದ್ದುಗೊಳಿಸಿದೆ. ಬ್ಯಾಂಕಿನ ಆರ್ಥಿಕ ಸ್ಥಿರತೆ ಮತ್ತು ಅದರ ಠೇವಣಿದಾರರಿಗೆ ಸೇವೆ ಸಲ್ಲಿಸುವ ಸಾಮರ್ಥ್ಯದ ಬಗ್ಗೆ ಕಳವಳಗಳನ್ನು ಉಲ್ಲೇಖಿಸಿ ಆರ್ಬಿಐ ಅಧಿಕೃತ ಹೇಳಿಕೆಯಲ್ಲಿ ಈ ನಿರ್ಧಾರವನ್ನು ಪ್ರಕಟಿಸಿದೆ. ಆರ್ಬಿಐ ನಿರ್ಧಾರಕ್ಕೆ ಪ್ರತಿಕ್ರಿಯೆಯಾಗಿ, ಸಹಕಾರ ಆಯುಕ್ತರು ಮತ್ತು ಉತ್ತರ ಪ್ರದೇಶದ ಸಹಕಾರಿ ಸಂಘಗಳ ರಿಜಿಸ್ಟ್ರಾರ್ಗೆ ಬ್ಯಾಂಕ್ ಮುಚ್ಚುವ ಪ್ರಕ್ರಿಯೆಯನ್ನು ಪ್ರಾರಂಭಿಸಲು ಮತ್ತು ಪ್ರಕ್ರಿಯೆಗಳನ್ನು ನಿರ್ವಹಿಸಲು ಲಿಕ್ವಿಡೇಟರ್ ಅನ್ನು ನೇಮಿಸಲು ನಿರ್ದೇಶಿಸಲಾಗಿದೆ. ಠೇವಣಿದಾರರು ಠೇವಣಿ ವಿಮೆ ಮತ್ತು ಕ್ರೆಡಿಟ್ ಗ್ಯಾರಂಟಿ ಕಾರ್ಪೊರೇಷನ್ (ಡಿಐಸಿಜಿಸಿ) ಯಿಂದ 5 ಲಕ್ಷ ರೂ.ಗಳವರೆಗೆ ಕ್ಲೈಮ್ ಮಾಡಲು ಅರ್ಹರಾಗಿರುತ್ತಾರೆ. ಪೂರ್ವಾಂಚಲ ಸಹಕಾರಿ ಬ್ಯಾಂಕ್ ಒದಗಿಸಿದ ಮಾಹಿತಿಯ ಪ್ರಕಾರ, ಸರಿಸುಮಾರು 99.51 ಪ್ರತಿಶತದಷ್ಟು ಠೇವಣಿದಾರರು ತಮ್ಮ ಠೇವಣಿಗಳ ಪೂರ್ಣ ಮೊತ್ತವನ್ನು ಡಿಐಸಿಜಿಸಿ ಮೂಲಕ ಪಡೆಯುತ್ತಾರೆ.…
ಕಲಬುರಗಿ : ಕಲಬುರಗಿಯಲ್ಲಿ ಸುಮಾರು 192 ಕೋಟಿ ರೂ. ಕೆ.ಕೆ.ಆರ್.ಡಿ.ಬಿ. ಅನುದಾನದಡಿ ನಿರ್ಮಿಸಲಾಗುತ್ತಿರುವ ಜಯದೇವ ಹೃದ್ರೋಗ ಮತ್ತು ಸಂಶೋಧನಾ ಆಸ್ಪತ್ರೆ ಬಹುತೇಕ ಕಾಮಗಾರಿ ಮುಗಿದಿದ್ದು, ಕೊನೆ ಹಂತದ ಕಾಮಗಾರಿ ಭರದಿಂದ ಸಾಗಿದೆ. 371ಜೆ ಜಾರಿ ದಶಮಾನೋತ್ಸವದ ಕೊಡುಗೆಯಾಗಿ ಈ ಆಸ್ಪತ್ರೆ ಆಗಸ್ಟ್ ಮಾಸಾಂತ್ಯಕ್ಕೆ ಕಲ್ಯಾಣ ಕರ್ನಾಟಕ ಭಾಗದ ಜನರಿಗೆ ನಮ್ಮ ಸರ್ಕಾರ ಸಮರ್ಪಿಸಲಿದೆ ಎಂದು ರಾಜ್ಯದ ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಹಾಗೂ ಜೀವನೋಪಾಯ ಖಾತೆ ಸಚಿವ ಡಾ.ಶರಣಪ್ರಕಾಶ ಪಾಟೀಲ ಹೇಳಿದರು. ಸೋಮವಾರ ಇಲ್ಲಿ ನಿರ್ಮಾಣದ ಹಂತದಲ್ಲಿರುವ ಜಯದೇವ ಹೃದ್ರೋಗ ಆಸ್ಪತ್ರೆಗೆ ಭೇಟಿ ನೀಡಿ ಕಾಮಗಾರಿ ಪರಿಶೀಲಿಸಿದ ಅವರು, ಬರುವ ಆಗಸ್ಟ್ ಅಂತ್ಯ ಅಥವಾ ಸೆಪ್ಟೆಂಬರ್ ಮೊದಲ ವಾರದಲ್ಲಿ 371 ಹಾಸಿಗೆ ಸಾಮರ್ಥ್ಯದ ಈ ಆಸ್ಪತ್ರೆ ಲೋಕಾರ್ಪಣೆಗೊಳಿಸಿ ಜಿಮ್ಸ್ ನಲ್ಲಿನ ಆಸ್ಪತ್ರೆಯನ್ನು ನೂತನ ಕಟ್ಟಡಕ್ಕೆ ಸ್ಥಳಾಂತರಿಸಲಾಗುವುದು ಎಂದರು. ಪ್ರಸ್ತುತ ಜಯದೇವ ಆಸ್ಪತ್ರೆಗೆ ಸಿಬ್ಬಂದಿಗಳಿದ್ದು, ನೂತನ ಕಟ್ಟಡ ನಿರ್ಮಾಣ ನಂತರ ಹಾಸಿಗೆ ಸಾಮರ್ಥ್ಯ ಹೆಚ್ಚಳ ಹಿನ್ನೆಲೆಯಲ್ಲಿ ಅವಶ್ಯಕತೆ ಅನುಗುಣವಾಗಿ ಸಿಬ್ಬಂದಿ ಭರ್ತಿ ಮಾಡಿಕೊಳ್ಳಲಾಗುವುದು…
ನವದೆಹಲಿ: ಪಶ್ಚಿಮ ಬಂಗಾಳದ ರಂಗಪಾಣಿ ನಿಲ್ದಾಣದ ಬಳಿ ಸೋಮವಾರ ಗೂಡ್ಸ್ ರೈಲು ಸೀಲ್ಡಾಗೆ ಹೋಗುವ ಕಾಂಚನ್ಜುಂಗಾ ಎಕ್ಸ್ಪ್ರೆಸ್ಗೆ ಡಿಕ್ಕಿ ಹೊಡೆದ ಪರಿಣಾಮ ಕನಿಷ್ಠ 19 ರೈಲುಗಳನ್ನು ರದ್ದುಪಡಿಸಲಾಗಿದೆ. ಈ ದುರ್ಘಟನೆಯಲ್ಲಿ 8 ಜನರು ಸಾವನ್ನಪ್ಪಿದ್ದಾರೆ ಮತ್ತು ಸುಮಾರು 50 ಜನರು ಗಾಯಗೊಂಡಿದ್ದಾರೆ. ಹೀಗಿದೆ ರದ್ದಾದ ರೈಲುಗಳ ಪಟ್ಟಿ ರೈಲು ಸಂಖ್ಯೆ 19602 ನ್ಯೂ ಜಲ್ಪೈಗುರಿ (ಎನ್ಜೆಪಿ) ನಿಂದ ಉದಯಪುರ ಸಿಟಿ (ಯುಡಿಜೆಡ್) ಎಕ್ಸ್ಪ್ರೆಸ್ ರೈಲು 20503 ದಿಬ್ರುಘರ್ (ಡಿಬಿಆರ್ಜಿ) ನಿಂದ ನವದೆಹಲಿ (ಎನ್ಡಿಎಲ್ಎಸ್) ರಾಜಧಾನಿ ಎಕ್ಸ್ಪ್ರೆಸ್ ರೈಲು ಸಂಖ್ಯೆ 12423 ದಿಬ್ರುಘರ್ (ಡಿಬಿಆರ್ಜಿ) ನಿಂದ ನವದೆಹಲಿ (ಎನ್ಡಿಎಲ್ಎಸ್) ರಾಜಧಾನಿ ಎಕ್ಸ್ಪ್ರೆಸ್ ರೈಲು ಸಂಖ್ಯೆ 01666 ಅಗರ್ತಲಾ (ಎಜಿಟಿಎಲ್) ನಿಂದ ರಂಗಿಯಾ (ಆರ್ಕೆಎಂವಿ) ವಿಶೇಷ ರೈಲು ಸಂಖ್ಯೆ 12346 ಗುವಾಹಟಿ (ಜಿಎಚ್ವೈ) ನಿಂದ ಹೌರಾ (ಎಚ್ಡಬ್ಲ್ಯೂಹೆಚ್) ಸರೈಘಾಟ್ ಎಕ್ಸ್ಪ್ರೆಸ್ ರೈಲು ಸಂಖ್ಯೆ 12505 ಕಾಮಾಕ್ಯ (ಕೆವೈಕ್ಯೂ) ಆನಂದ್ ವಿಹಾರ್ ಟರ್ಮಿನಲ್ (ಎಎನ್ವಿಟಿ) ಈಶಾನ್ಯ ಎಕ್ಸ್ಪ್ರೆಸ್ ರೈಲು ಸಂಖ್ಯೆ 01666 ಅಗರ್ತಲಾ (ಎಜಿಟಿಎಲ್) ನಿಂದ…
ಬೆಂಗಳೂರು: ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಪಿಜಿ ಸಿಇಟಿಗೆ ಅರ್ಜಿ ಸಲ್ಲಿಕೆ ದಿನಾಂಕವನ್ನು ವಿಸ್ತರಣೆ ಮಾಡಿ ಆದೇಶಿಸಿದೆ. ಮತ್ತೆ ಮೂರು ದಿನ ಅರ್ಜಿ ಸಲ್ಲಿಕೆಗೆ ಅವಧಿ ವಿಸ್ತರಿಸಿ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ ನೀಡಲಾಗಿದೆ. ಈ ಕುರಿತಂತೆ ಕೆಇಎ ಕಾರ್ಯನಿರ್ವಾಹಕ ನಿರ್ದೇಶಕ ಹೆಚ್.ಪ್ರಸನ್ನ ಅವರು ಮಾಹಿತಿ ನೀಡಿದ್ದು ಎಂ.ಬಿಎ, ಎಂಸಿಎ, ಎಂ.ಟೆಕ್ ಸೇರಿದಂತೆ ಪಿಜಿ ಕೋರ್ಸ್ ದಾಖಲಾತಿಗೆ ಸಂಬಂಧಿಸಿದಂತೆ ಸಿಇಟಿಗೆ ಅರ್ಜಿ ಸಲ್ಲಿಕೆಗಾಗಿ ದಿನಾಂಕ ವಿಸ್ತರಣೆ ಮಾಡಿರುವುದಾಗಿ ತಿಳಿಸಿದ್ದಾರೆ. ಪಿಜಿ ಸಿಇಟಿಗಾಗಿ ಜೂನ್.17ರ ಇಂದಿಗೆ ಕೊನೆಯ ದಿನಾಂಕ ನಿಗದಿ ಪಡಿಸಲಾಗಿತ್ತು. ಈಗ ಈ ದಿನಾಂಕವನ್ನು ಜೂನ್.21ರವರೆಗೆ ವಿಸ್ತರಿಸಲಾಗಿದೆ. ಅರ್ಹ ವಿದ್ಯಾರ್ಥಿಗಳು ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದಾಗಿದೆ ಎಂದಿದ್ದಾರೆ. ಇನ್ನೂ ಡಿಸಿಇಟಿ-2024ಕ್ಕೆ ಅರ್ಜಿ ಸಲ್ಲಿಸಿ, ಶುಲ್ಕ ಪಾವತಿಸಿರುವಂತ ಅರ್ಹ ಅಭ್ಯರ್ಥಿಗಳಿಗೆ ಪ್ರವೇಶ ಪತ್ರ ಡೌನ್ ಲೋಡ್ ಮಾಡಿಕೊಳ್ಳಲು ಅವಕಾಶ ನೀಡಲಾಗಿದೆ. ಕೆಇಎ ವೆಬ್ ಸೈಟ್ ಗೆ ಭೇಟಿ ನೀಡಿ, ಪ್ರವೇಶ ಪತ್ರ ಡೌನ್ ಲೋಡ್ ಮಾಡಿಕೊಳ್ಳುವಂತೆ ಸೂಚಿಸಿದೆ. https://kannadanewsnow.com/kannada/jaya-c-kotian-announces-rs-25000-aid-for-students-from-mogaveera-community/ https://kannadanewsnow.com/kannada/breaking-security-forces-operate-in-jharkhand-four-naxals-killed-two-arrested/
ಶಿವಮೊಗ್ಗ: ಮೊಗವೀರ ಸಮುದಾಯದ ಎಂಜಿನಿಯರಿಂಗ್, ವೈದ್ಯಕೀಯ ವಿದ್ಯಾರ್ಥಿಗಳಿಗೆ ಇನ್ಮುಂದೆ ಪ್ರತಿ ವರ್ಷ 25,000 ಸಹಾಯ ಧನ ನೀಡಲಾಗುವುದು ಅಂತ ದಕ್ಷಿಣ ಕನ್ನಡ ಜಿಲ್ಲೆಯ ಮೋಗವೀರ ಮಹಾಜನ ಸಂಘದ ಅಧ್ಯಕ್ಷ ಜಯ ಸಿ ಕೋಟ್ಯಾನ್ ಹೇಳಿದ್ದಾರೆ. ಇಂದು ಶಿವಮೊಗ್ಗ ಜಿಲ್ಲೆಯ ಸಾಗರ ತಾಲ್ಲೂಕು ಮೊಗವೀರ ಮಹಾಜನ ಸಂಘದ ವಾರ್ಷಿಕ ಮಹಾ ಸಭೆಯಲ್ಲಿ ಭಾಗಿಯಾಗಿ ಮಾತನಾಡಿದಂತ ಅವರು, ಮೊಗವೀರ ಸಮುದಾಯದ ವಿದ್ಯಾರ್ಥಿಗಳ ಸಾಧನೆ ಕಂಡು ಸಂತಸವಾಗಿದೆ. ಇದೇ ಸಂದರ್ಭದಲ್ಲಿ ಇನ್ಮುಂದೆ ಮೊಗವೀರ ಸಮುದಾಯದ ಎಂಜಿನಿಯರಿಂಗ್, ಮೆಡಿಕಲ್ ವ್ಯಾಸಂಗಕ್ಕೆ ಸೇರುವಂತ ಓರ್ವ ಉತ್ತಮ ಅಂಕ ಪಡೆದಂತ ವಿದ್ಯಾರ್ಥಿಗಳಿಗೆ ಪ್ರತಿ ವರ್ಷ ರೂ.25,000 ಸಹಾಯ ದಿನ ನೀಡಲಾಗುವುದು ಎಂಬುದಾಗಿ ಘೋಷಿಸಿದರು. ಮೊಗವೀರ ಸಮಾಜದ ವಿದ್ಯಾರ್ಥಿಗಳು ಮತ್ತಷ್ಟು ಸಾಧನೆ ಮಾಡಬೇಕು. ಸಮುದಾಯದಕ್ಕೆ ಕೀರ್ತಿ ತರುವಂತ ಕೆಲಸ ಮಾಡಬೇಕು. ಈ ಕೆಲಸ ಮುಂದೆ ಆಗಲಿ. ಸಾಗರ ತಾಲೂಕು ಮೊಗವೀರ ಮಹಾಸಭ ಮತ್ತಷ್ಟು ಜನಪರ ಕೆಲಸ ಮಾಡುವಂತೆ ಆಗಲಿ ಎಂದರು. ಈ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದಂತ ಹಿರಿಯ ಕಾಂಗ್ರೆಸ್ ಮುಖಂಡ, ಮಾಜಿ…
ಬೆಂಗಳೂರು : ಪೆಟ್ರೋಲ್-ಡೀಸೆಲ್ ಮೇಲಿನ ತೆರಿಗೆ ಹೆಚ್ಚಳದ ಬಳಿಕವೂ ಬಿಜೆಪಿ ಆಡಳಿತದ ರಾಜ್ಯಗಳಿಗಿಂತ, ದಕ್ಷಿಣ ಭಾರತದ ರಾಜ್ಯಗಳಿಗಿಂತ ನಮ್ಮ ರಾಜ್ಯದಲ್ಲಿ ಇಂಧನ ಬೆಲೆ ಕಡಿಮೆ ಇದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಂಕಿ ಅಂಶಗಳ ಸಮೇತ ವಿವರಿಸಿದರು. ಗೃಹ ಕಚೇರಿ ಕೃಷ್ಣದಲ್ಲಿ ಕರೆದಿದ್ದ ಪತ್ರಿಕಾಗೋಷ್ಠಿಯಲ್ಲಿ ತೆರಿಗೆ ಹೆಚ್ಚಳದ ಅನಿವಾರ್ಯತೆಯನ್ನು ಕೇಂದ್ರದ ಮೋದಿ ಸರ್ಕಾರ ಹೇಗೆ ಸೃಷ್ಟಿಸಿತು, ರಾಜ್ಯದ ಪಾಲಿನ ಹಣವನ್ನು ಕೊಡದೇ ಇರುವುದರಿಂದ ಸೃಷ್ಟಿ ಆಗಿರುವ ಪರಿಸ್ಥಿತಿಯನ್ನು ವಿವರಿಸಿದರು. 2015 ರ ಬಳಿಕ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ ಅರ್ಧಕ್ಕರ್ಧ ಕಡಿಮೆ ಆದಾಗಲೂ ಅವರ ಲಾಭವನ್ನು ದೇಶದ ಜನರಿಗೆ ನೀಡದೆ ಮೋದಿ ಸರ್ಕಾರ ಇಂಧನ ಬೆಲೆಯನ್ನು ನಿರಂತರವಾಗಿ ಏರಿಸುತ್ತಾ ಹೋಗಿದ್ದರ ಅಂಕಿ ಅಂಶಗಳನ್ನು ಮುಖ್ಯಮಂತ್ರಿಗಳು ಪತ್ರಿಕಾಗೋಷ್ಠಿಯಲ್ಲಿ ವಿವರಿಸಿದರು. ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಮೌಲ್ಯವರ್ಧಿತ ತೆರಿಗೆ ಹೆಚ್ಚಳದಿಂದ ಸಂಗ್ರಹವಾಗುವ ಅಂದಾಜು ಮೂರು ಸಾವಿರ ಕೋಟಿ ರೂಪಾಯಿಗಳು ರಾಜ್ಯದ ಜಾನೆಗೆ ಸಂದಾಯವಾಗುತ್ತದೆ, ಆ ಹಣ ಜನರ ಕಲ್ಯಾಣ ಕಾರ್ಯಕ್ರಮಗಳಿಗೆ ವಿನಿಯೋಗವಾಗುತ್ತದೆ ಅದು…
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ನುಂಗಣ್ಣನಂತೆ ಎಲ್ಲವನ್ನೂ ನುಂಗುತ್ತಿದ್ದಾರೆ. ಅದರ ಜೊತೆಗೆ ತೈಲ ದರ ಏರಿಕೆ ಮಾಡಿ ಜನರನ್ನು ಲೂಟಿ ಮಾಡುತ್ತಿದ್ದಾರೆ. ಜನರು ದಂಗೆ ಎದ್ದು ಸರ್ಕಾರವನ್ನು ಕಿತ್ತುಹಾಕಬೇಕಿದೆ ಎಂದು ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್.ಅಶೋಕ ಹೇಳಿದರು. ಕಾಂಗ್ರೆಸ್ ಸರ್ಕಾರದ ವಿರುದ್ಧ ಸ್ವಾತಂತ್ರ್ಯ ಉದ್ಯಾನದಲ್ಲಿ ನಡೆದ ಪ್ರತಿಭಟನೆಯಲ್ಲಿ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಎರಡು ನಾಲಿಗೆ ಇದೆ. ಬಿಜೆಪಿ ಸರ್ಕಾರ ಪೆಟ್ರೋಲ್ ದರ ಏರಿಸಿದ್ದಕ್ಕೆ ಮಾನ ಮರ್ಯಾದೆ ಇದೆಯೇ ಎಂದು ಪ್ರಶ್ನೆ ಮಾಡಿದ್ದರು. ಈಗ ಮೂರು ರೂಪಾಯಿ ಹೆಚ್ಚು ಮಾಡಿದ ಕಾಂಗ್ರೆಸ್ ನಾಯಕರಿಗೆ ಮಾನ ಮರ್ಯಾದೆ ಇಲ್ಲ. ಈಗ ಸಿದ್ದರಾಮಯ್ಯ ಎಂದರೆ ನುಂಗಣ್ಣ ಎಂದು ವ್ಯಂಗ್ಯವಾಡಿದರು. ತೈಲ ಬೆಲೆ ಏರಿಯಾದರೆ ಸಿಮೆಂಟ್, ತರಕಾರಿ ಎಲ್ಲ ಬೆಲೆಯೂ ಏರಲಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದರು. ಈಗ ಯಾವ ಬೆಲೆಗಳು ಹೆಚ್ಚಲಿದೆ ಎಂದು ತಿಳಿಸಲಿ. ಗ್ಯಾರಂಟಿ ಯೋಜನೆಗಳೆಂದು ಹೇಳಿ ಎಲ್ಲರಿಗೂ ಒಂದು ಲಕ್ಷ, ಎರಡು ಸಾವಿರ ಕೋಡುತ್ತೇವೆ ಎಂದರು. ರಾಹುಲ್ ಗಾಂಧಿ ಇನ್ನೂ ಮುಂದೆ ಹೋಗಿ ಟಕಾಟಕ್…
Good News: ರಾಜ್ಯ ಸರ್ಕಾರದಿಂದ 1,419 ಸರ್ಕಾರಿ ಶಾಲೆಗಳಲ್ಲಿ ‘ಆಂಗ್ಲ ಮಾಧ್ಯಮ ತರಗತಿ’ ಪ್ರಾರಂಭಕ್ಕೆ ಗ್ರೀನ್ ಸಿಗ್ನಲ್
ಬೆಂಗಳೂರು: ರಾಜ್ಯದ ಮಕ್ಕಳ ಪೋಷಕರಿಗೆ ಗುಡ್ ನ್ಯೂಸ್ ಎನ್ನುವಂತೆ 1,419 ಸರ್ಕಾರಿ ಶಾಲೆಗಳಲ್ಲಿ ಆಂಗ್ಲ ಮಾಧ್ಯಮ ತರಗತಿಯನ್ನು ಪ್ರಾರಂಭಿಸಲು ಗ್ರೀನ್ ಸಿಗ್ನಲ್ ನೀಡಲಾಗಿದೆ. ರಾಜ್ಯ ಸರ್ಕಾರ 2024-25ನೇ ಸಾಲಿನಿಂದ ರಾಜ್ಯಾದ್ಯಂತ 75ಕ್ಕೂ ಹೆಚ್ಚು ಮಕ್ಕಳ ದಾಖಲಾತಿ ಇರುವ 1,419 ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಹಾಲಿ ಇರುವ ಕನ್ನಡ ಮಾಧ್ಯಮದ ಜೊತೆಗೆ 1ನೇ ತರಗತಿಯಿಂದ ಆಂಗ್ಲ ಮಾಧ್ಯಮದಲ್ಲಿ (ದ್ವಿ ಭಾಷಾ ಮಾಧ್ಯಮ) ತರಗತಿಗಳನ್ನು ಪ್ರಾರಂಭಿಸಲು ಒಪ್ಪಿಗೆ ನೀಡಿ ಆದೇಶಿಸಿದೆ. ಆಯ್ಕೆಯಾಗಿರುವ ಶಾಲೆಗಳ ಪೈಕಿ ಕಲಬುರಗಿ ಪ್ರಾದೇಶಿಕ ವಿಭಾಗದ 872, ಬೆಂಗಳೂರು ವಿಭಾಗದ 297, ಮೈಸೂರು ವಿಭಾಗದ 140 ಮತ್ತು ಧಾರವಾಡ ವಿಭಾಗದ 110 ಶಾಲೆಗಳು ಸೇರಿವೆ. https://twitter.com/KarnatakaVarthe/status/1802649197105074676 https://kannadanewsnow.com/kannada/bjp-has-crossed-the-100-mark-in-petrol-minister-zameer-ahmed/ https://kannadanewsnow.com/kannada/breaking-security-forces-operate-in-jharkhand-four-naxals-killed-two-arrested/
ಬೆಂಗಳೂರು : ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ಹೆಚ್ಚು ಮಾಡಲಾಗಿದೆ ಎಂದು ಬಿಜೆಪಿ ನಾಯಕರು ಬೊಬ್ಬೆ ಹಾಕುತ್ತಿದ್ದಾರೆ. ಆದರೆ ರಾಜ್ಯದಲ್ಲಿ ಪೆಟ್ರೋಲ್ ಬೆಲೆ ಶತಕ ದಾಟಿಸಿದ್ದೇ ಬಿಜೆಪಿ ಸರ್ಕಾರ ಎಂದು ಸಚಿವ ಜಮೀರ್ ಅಹಮದ್ ಖಾನ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸುದ್ದಿಗಾರರ ಜತೆ ಮಾತನಾಡಿದ ಅವರು, ಕೇಂದ್ರ ಸರ್ಕಾರ ಪೆಟ್ರೋಲ್ ಪ್ರತಿ ಲೀಟರ್ ಗೆ 32.98 ರೂ., ಡೀಸೆಲ್ ಪ್ರತಿ ಲೀಟರ್ ಗೆ 31.83 ರೂ. ಅಬಕಾರಿ ಸುಂಕ ಸಂಗ್ರಹ ಮಾಡುತ್ತಿದೆ. ಇದರ ಬಗ್ಗೆ ಬಿಜೆಪಿ ನಾಯಕರು ಯಾಕೆ ಧ್ವನಿ ಎತ್ತುತ್ತಿಲ್ಲ ಎಂದು ಪ್ರೆಶ್ನೆ ಮಾಡಿದ್ದಾರೆ. ಯುಪಿಎ ಸರ್ಕಾರದ ಅವಧಿಯಲ್ಲಿ ಅಬಕಾರಿ ಸುಂಕ ಪೆಟ್ರೋಲ್ ಗೆ 9.48 ರೂ., ಡೀಸೆಲ್ ಗೆ 3.56 ರೂ. ವಿಧಿಸಲಾಗಿತ್ತು. ಹಾಗಾಗಿಯೇ ಆಗ ಪೆಟ್ರೋಲ್ 68.31 ರೂ., ಡಿಸೇಲ್ 48.63 ರೂ. ಗೆ ದೊರೆಯುತ್ತಿತ್ತು. ಆದರೆ ಬಿಜೆಪಿ ಸರ್ಕಾರ ಬಂದ ಮೇಲೆ ಪೆಟ್ರೋಲ್ 106 ರೂ ರೂ. ವರೆಗೆ ಹೋಗಿತ್ತು. ಯುಪಿ ಎ ಸರ್ಕಾರದ ಅವಧಿಯಲಿ ಕಚ್ಚಾ…
ಶಿವಮೊಗ್ಗ: ಮಾಜಿ ಎಂಎಲ್ ಸಿ, ಬಿಜೆಪಿ ಮುಖಂಡ ಭಾನು ಪ್ರಕಾಶ್ ಅವರು ಹೃದಯಾಘಾತದಿಂದ ನಿಧನರಾಗಿದ್ದಾರೆ. ಇಂದು ಶಿವಮೊಗ್ಗದಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆ ನಡೆಸಲಾಯಿತು. ಈ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದ ವೇಳೆಯಲ್ಲಿ ಹೃದಯಾಘಾತ ಉಂಟಾಗಿತ್ತು. ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆಸ್ಪತ್ರೆಗೆ ದಾಖಲಿಸೋ ಮುನ್ನ ಮಾಜಿ ಎಂಎಲ್ಸಿ ಭಾನುಪ್ರಕಾಶ್ ನಿಧನರಾದರು. ಅವರ ನಿಧನಕ್ಕೆ ಸುದ್ದಿ ಸಹ್ಯಾದ್ರಿ ಸಂಪಾದಕ ರಾಘವೇಂದ್ರ ತಾಳಗುಪ್ಪ ಸಂತಾಪ ಸೂಚಿಸಿದ್ದಾರೆ. ಮತ್ತೊಂದೆ ಈ ಬಗ್ಗೆ ಮಾತನಾಡಿದಂತ ಚಾರ್ವಕ ಸಂಪಾದಕ ರಾಘವೇಂದ್ರ ಅವರು ಇವರು ಶಿವಮೊಗ್ಗ ಜಿಲ್ಲೆಯಲ್ಲಿ ಧರ್ಮ ಧರ್ಮದ ನಡುವೆ ಕೋಮು ದ್ವೇಷವನ್ನು ಬಿತ್ಯಿದವರು. ಹಲವು ಕೋಮು ಗಲಭೆಗೆ ಕಾರಣಾದವರು. ಇದರಿಂದ ಅಮಾಯಕ್ಲರನ್ನು ಜೈಲಿಗೆ ಹೋಗುವಂತೆ ಮಾಡಿದವರು ಅಂತ ಹೇಳಿದ್ದಾರೆ. ಶಿವಮೊಗ್ಗ ಜಿಲ್ಲೆ ಸಮೀಪದ ಮತ್ತೂರು ಗ್ರಾಮದಲ್ಲಿ ಸಂಸದ ಗ್ರಾಮ ಮಾಡಿಕೊಂಡವರು. ಕರ್ನಾಟಕದಲ್ಲಿ ಹುಟ್ಟಿ, ಕನ್ನಡವನ್ನೇ ಒಪ್ದವರು ಆಗಿದ್ದರು. ದುಡಿಯುವ ಜನರಿಗೆ ಅರ್ಥವಾಗದ ಸಂಸ್ಕೃತವನ್ನು ತಮ್ಮ ಗ್ರಾಮಕ್ಕೆ ಇಟ್ಟುಕೊಂಡವರು ಅಂತ ತಿಳಿಸಿದ್ದಾರೆ. ಇವರು ಇಂದು ನಿಧನರಾಗಿದ್ದಾರೆ.…











