Subscribe to Updates
Get the latest creative news from FooBar about art, design and business.
Author: kannadanewsnow09
ಬೆಂಗಳೂರು: ಕಾಂಗ್ರೆಸ್ ಪಕ್ಷದ ವಿಧಾನಪರಿಷತ್ ಸದಸ್ಯ ಬಿ.ಕೆ. ಹರಿಪ್ರಸಾದ್ ಅವರು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಸ್ಥಾನಕ್ಕೆ ಅರ್ಧನಾರೇಶ್ವರರನ್ನು ಮಾಡಿ ಎಂದು ತಮ್ಮ ನಾಲಿಗೆಯನ್ನು ಹರಿಬಿಟ್ಟಿದ್ದಾರೆ. ಇದು ಇಡೀ ದೇಶದ ನಾರಿಯರಿಗೆ ಮಾಡಿರುವಂತಹ ಅಪಮಾನ ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ಆಕ್ಷೇಪಿಸಿದ್ದಾರೆ. ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಹರಿಪ್ರಸಾದ್ ಅವರು ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಆಗಿದ್ದವರು. ಸಿಡಬ್ಲ್ಯುಸಿ ಸದಸ್ಯರೂ ಆಗಿದ್ದರು. ಇವರ ಸಣ್ಣತನದಿಂದಲೇ ಅವರಿಗೆ ಈಗ ಹಿನ್ನಡೆ (ಡಿಮೋಷನ್) ನೀಡಿ ಕಳುಹಿಸಿದ್ದಾರೆ ಎಂದು ಟೀಕಿಸಿದರು. ರಾಷ್ಟ್ರಮಟ್ಟದಲ್ಲಿ ಹರಿಪ್ರಸಾದ್ ಅವರು ಪ್ರಧಾನಮಂತ್ರಿಗಳ ಆಯ್ಕೆ, ಸಂಸದರ ಆಯ್ಕೆ ರಾಜ್ಯಸಭಾ ಸದಸ್ಯರ ಆಯ್ಕೆ ಇಂತಹ ಚಟುವಟಿಕೆಗಳಲ್ಲಿ ಭಾಗವಹಿಸುತ್ತಿದ್ದ ಒಬ್ಬ ವ್ಯಕ್ತಿಯನ್ನು ಕಾಂಗ್ರೆಸ್ ಪಕ್ಷ ಇಂದು ಅವರನ್ನು ಕಾಂಗ್ರೆಸ್ಸಿನ ಶೆಡ್ಡಿನಲ್ಲಿ ಇಟ್ಟಿದ್ದು, ಕೇವಲ ಒಬ್ಬ ವಿಧಾನ ಪರಿಷತ್ ಸದಸ್ಯರಾಗಿ ಕೂರಿಸಿದ್ದಾರೆ. ಅವರನ್ನು ಮಂತ್ರಿ ಮಾಡುವ ಸ್ಥಿತಿಯಲ್ಲಿ ಕಾಂಗ್ರೆಸ್ ಇಲ್ಲ. ಅವರ ಸ್ಥಿತಿ ಹೇಗೆ…
ಬೆಂಗಳೂರು: ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಅಸ್ತಿತ್ವಕ್ಕೆ ಬಂದ ಮೇಲೆ ಅರಾಜಕತೆಯು ಪರಾಕಾಷ್ಠೆ ತಲುಪಿದೆ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಪಿ. ರಾಜೀವ್ ಅವರು ಟೀಕಿಸಿದ್ದಾರೆ. ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಸಚಿವ ಪ್ರಿಯಾಂಕ ಖರ್ಗೆ ಅವರು ಜಗತ್ತಿನ ಬಗ್ಗೆ ಮಾತನಾಡುತ್ತಾರೆ. ಆದರೆ ತಮ್ಮ ಇಲಾಖೆಯಲ್ಲಿ ಏನು ಭ್ರಷ್ಟಾಚಾರ ನಡೆದಿದೆ ಎಂದು ಅವರಿಗೆ ತಿಳಿದಿದೆಯೇ ಎಂದು ಪ್ರಶ್ನಿಸಿದರು. ನನ್ನ ಪ್ರಕಾರ ಗ್ರಾಮೀಣಾಭಿವೃದ್ಧಿ ಇಲಾಖೆಯಲ್ಲಿ ಒಂದು ಸಾವಿರ ಕೋಟಿಗಿಂತ ಹೆಚ್ಚು ಭ್ರಷ್ಟಾಚಾರ ರಾಜಾರೋಷವಾಗಿ ನಡೆಯುತ್ತಿದೆ ಎಂದು ದೂರಿದರು. ಪ್ರಿಯಾಂಕ ಖರ್ಗೆ ಅವರು ತಮ್ಮ ತಟ್ಟೆಯಲ್ಲಿ ಬಿದ್ದಿರುವ ಹೊಲಸನ್ನು ತೆಗೆದು ಸ್ವಚ್ಛ ಮಾಡಿಕೊಳ್ಳುವ ಬದಲು ಕೇಂದ್ರದಲ್ಲಿ ನಾವು ಅಧಿಕಾರಕ್ಕೆ ಬಂದರೆ ಆ ಸಂಘಟನೆಯನ್ನು ರದ್ದುಪಡಿಸುತ್ತೇವೆ ಎನ್ನುವುದರಲ್ಲಿ ಇದ್ದಾರೆ ಎಂದು ಆಕ್ಷೇಪಿಸಿದರು. ಕುಡಚಿ ಮತಕ್ಷೇತ್ರದ ಒಂದು ಗ್ರಾಮ ಪಂಚಾಯಿತಿಯಲ್ಲಿ 17 ಕೋಟಿ ಅವ್ಯವಹಾರ ಆಗಿದೆ. ಹಾಗಿದ್ದರೆ ಸುಮಾರು 6 ಸಾವಿರ ಗ್ರಾಮ ಪಂಚಾಯಿತಿಗಳು ಇರುವಂತಹ ರಾಜ್ಯವಿದು. ಪ್ರಿಯಾಂಕ ಖರ್ಗೆ…
ಚಿಕ್ಕಬಳ್ಳಾಪುರ: ರಾಜ್ಯದಲ್ಲಿ ಶಾಕಿಂಗ್ ಘಟನೆ ಎನ್ನುವಂತೆ ಮದುವೆಯಾಗಲು ನಿರಾಕರಿಸಿದಂತ ಯುವತಿಗೆ ಮಾನವೇ ಟಾಯ್ಲೆಟ್ ಕ್ಲೀನರ್ ಆ್ಯಸಿಡ್ ಎರಚಿದಂತ ಘಟನೆ ಚಿಕ್ಕಬಳ್ಳಾಪುರದಲ್ಲಿ ನಡೆದಿದೆ. ಚಿಕ್ಕಬಳ್ಳಾಪುರ ತಾಲ್ಲೂಕಿನ ಮಂಡನಬಲೆ ಗ್ರಾಮದಲ್ಲಿ ಮದುವೆಯಾಗೋದಕ್ಕೆ ಯುವತಿ ವೈಶಾಲಿ(19) ನಿರಾಕರಿಸಿದ್ದಳು. ಈ ಹಿನ್ನಲೆಯಲ್ಲಿ ಸೋದರ ಮಾವ ಆನಂದ್ ಕುಮಾರ್ ಎಂಬಾತ ಟಾಯ್ಲೆಟ್ ಕ್ಲೀನ್ ಮಾಡುವಂತ ಆ್ಯಸಿಡ್ ಎರಚಿದ್ದಾರೆ. ಯುವತಿ ವೈಶಾಲಿ ಮೇಲೆ ಆ್ಯಸಿಡ್ ಎರಚಿದಂತ ಸೋದರ ಮಾವ, ಆ ಬಳಿಕ ತಾನು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಆನಂದ್ ಕುಮಾರ್ ಯತ್ನಿಸಿದ್ದಾನೆ. ಯುವತಿಯ ಶಿಡ್ಲಘಟ್ಟ ತಾಲ್ಲೂಕಿನ ಬಶೆಟ್ಟಿಹಳ್ಳಿ ನಿವಾಸಿ ಆನಂದ್ ಕುಮಾರ್ ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಸೋದರ ಮಾವನ ಆ್ಯಸಿಡ್ ದಾಳಿಗೆ ಒಳಗಾದಂತ ಯುವತಿ ವೈಶಾಲಿ ಪ್ರಾಣಾಪಾಯದಿಂದ ಪಾರಾಗಿದ್ದಾಳೆ. ಇತ್ತ ಆತ್ಮಹತ್ಯೆಗೆ ಯತ್ನಿಸಿದಂತ ಆನಂದ್ ಸುಟ್ಟ ಗಾಯಗಳಿಂದ ಬಳಲುತ್ತಿದ್ದಾನೆ. ಇಬ್ಬರನ್ನೂ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. https://kannadanewsnow.com/kannada/the-congress-government-led-by-siddaramaiah-is-completely-inactive-by-vijayendra/
ಶಿವಮೊಗ್ಗ: ಸಿದ್ದರಾಮಯ್ಯನವರ ಸರಕಾರ ಕೊಟ್ಟ ಅನ್ನಭಾಗ್ಯ ಯೋಜನೆಗೆ ಕಾಂಗ್ರೆಸ್ ಸರಕಾರವೇ ಕನ್ನ ಹಾಕುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಅವರು ಆರೋಪಿಸಿದ್ದಾರೆ. ಇಂದು ಇಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, 10 ಕೆಜಿ ಅಕ್ಕಿ ಕೊಡುವುದಾಗಿ ಹೇಳಿದ್ದರು. ಅದನ್ನು 5 ಕೆಜಿಗೆ ಇಳಿಸಿದರು. ಈಗ ಅದನ್ನೂ ನಿಲ್ಲಿಸುತ್ತಿದ್ದಾರೆ ಎಂದು ಆಕ್ಷೇಪ ವ್ಯಕ್ತಪಡಿಸಿದರು. ಕರ್ನಾಟಕ ರಾಜ್ಯವು ಇವತ್ತು ಆರ್ಥಿಕ ದಿವಾಳಿಯತ್ತ ಸಾಗುತ್ತಿದೆ ಎಂದು ಅವರು ವಿಶ್ಲೇಷಿಸಿದರು. ರಾಜ್ಯ ಸರಕಾರ, ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಹಣ ಕ್ರೋಡೀಕರಿಸಲು ಸಾಧ್ಯವಾಗುತ್ತಿಲ್ಲ. ಸರಕಾರಿ ನೌಕರರಿಗೆ ಸಂಬಳ ಕೊಡಲು ಕೂಡ ಸರಕಾರ ಪರದಾಡುತ್ತಿದೆ. ಅಭಿವೃದ್ಧಿಗೆ ಹಣ ಸಿಗದೆ ಆಡಳಿತ ಪಕ್ಷದ ಶಾಸಕರೇ ಬೀದಿಗಿಳಿಯುವ ಹಾಗೂ ಹೋರಾಟ ಮಾಡುವ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ವಿವರಿಸಿದರು. ಒಂದು ಕಡೆ ರಾಜ್ಯ ಸರಕಾರ, ಮುಖ್ಯಮಂತ್ರಿಗಳು, ಅವರ ಸಚಿವ ಸಂಪುಟವು ಕೊಟ್ಟಂಥ ಭರವಸೆ ಈಡೇರಿಸಿದ್ದಾಗಿ ಅವರಿಗೆ ಅವರೇ ಶಹಬ್ಬಾಸ್ಗಿರಿ ಕೊಡುತ್ತಿದ್ದಾರೆ. ಆದರೆ, ವಾಸ್ತವಿಕ ಸತ್ಯ ಏನೆಂದರೆ ಇವತ್ತು ಮಹಾನಗರ ಪಾಲಿಕೆ ವಿಚಾರದಲ್ಲಿ…
ಬೆಂಗಳೂರು: ರಾಜ್ಯ ಸರ್ಕಾರದಿಂದ ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ ಎನ್ನುವಂತೆ 14 ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶಿಸಿದೆ. ಇಂದು ರಾಜ್ಯ ಸರ್ಕಾರ ವರ್ಗಾವಣೆ ಅಧಿಸೂಚನೆ ಹೊರಡಿಸಿದ್ದು, ಬೆಂಗಳೂರಿನ ಕರ್ನಾಟಕ ರೇಷ್ಮೆ ಉದ್ಯಮಗಳ ನಿಗಮದ ವ್ಯವಸ್ಥಾಪಕ ನಿರ್ದೇಶಕಿ ಜೆಹೆರಾ ನಸೀಮ್, ಐಎಎಸ್ (ಕೆಎನ್: 2013) ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ವರ್ಗಾಯಿಸಲಾಗಿದೆ ಮತ್ತು ಮುಂದಿನ ಆದೇಶದವರೆಗೆ ಕಲಬುರಗಿ ವಿಭಾಗದ ಪ್ರಾದೇಶಿಕ ಆಯುಕ್ತರಾಗಿ, ಕಲಬುರಗಿ ಉಪ ಆಯುಕ್ತರಾಗಿ ಶ್ರೀ ಕೃಷ್ಣ ಬಾಜಪೇಯಿ, ಐಎಎಸ್ ಅವರನ್ನು ವರ್ಗಾವಣೆ ಮಾಡಲಾಗಿದೆ. ವಿಜಯಪುರ ಜಿಲ್ಲೆಯ ವಿಜಯಪುರ ಜಿಲ್ಲೆಯ ಉಪ ಆಯುಕ್ತರಾದ ಭೂಬಾಲನ್ ಟಿ, ಐಎಎಸ್ (ಕೆಎನ್: 2015) ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ವರ್ಗಾಯಿಸಲಾಗಿದೆ ಮತ್ತು ಮುಂದಿನ ಆದೇಶದವರೆಗೆ ಬೆಂಗಳೂರಿನ ಇ-ಆಡಳಿತ ಕೇಂದ್ರದ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯಾಗಿ, ಇ-ಆಡಳಿತ ಇಲಾಖೆ ಉಪಾಧ್ಯಕ್ಷರಾಗಿ ಡಾ. ದಿಲೀಶ್ ಶಶಿ, ಐಎಎಸ್ ಅವರನ್ನು ವರ್ಗಾವಣೆ ಮಾಡಲಾಗಿದೆ. ಯಾದಗಿರಿ ಜಿಲ್ಲೆಯ ಯಾದಗಿರಿ ಜಿಲ್ಲೆಯ ಡಿಸಿ ಡಾ. ಸುಶೀಲಾ ಬಿ, ಐಎಎಸ್ (ಕೆಎನ್: 2015)…
ಬೆಂಗಳೂರು: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಕಾರ್ಯವ್ಯಾಪ್ತಿಯ ವಿವಿಧ ಸರ್ಕಾರಿ ಆಸ್ಪತ್ರೆಗಳಲ್ಲಿ ರಾಷ್ಟ್ರೀಯ ಗುಣಮಟ್ಟ ಮಾನದಂಡಗಳನ್ನು ಅನುಷ್ಠಾನಗೊಳಿಸಲು ಹೊಣೆಗಾರಿಕೆ ನಿಗದಿಪಡಿಸಿದೆ. ಈ ಗುಣಮಟ್ಟದ ಮಾನದಂಡ ಸಾಧಿಸದಿದ್ದರೇ ಕ್ರಮ ಕೈಗೊಳ್ಳುವ ಎಚ್ಚರಿಕೆ ನೀಡಿದೆ. ಈ ಕುರಿತು ಆರೋಗ್ಯ ಇಲಾಖೆಯಿಂದ ಆದೇಶ ಹೊರಡಿಸಿದ್ದು, 2021-2030ರ ದಶಕವನ್ನು ಅಂತರರಾಷ್ಟ್ರೀಯ ಮಟ್ಟದಲ್ಲಿ ಗುಣಮಟ್ಟದ ಸೇವೆಗಳ ದಶಕವೆಂದು ಘೋಷಿಸಲಾಗಿದೆ. ಆರೋಗ್ಯ ಸೇವೆಯಲ್ಲಿ ಚಿಕಿತ್ಸೆಯ ಗುಣಮಟ್ಟ ಅಥವಾ ವಿಳಂಬದಿಂದಾಗಿ ಹಾಗೂ ಔಷಧಿ ಸೇವನೆಯ ಕುರಿತು ಸಮಾಲೋಚನೆಯ ಕೊರತೆಯೂ ಇದ್ದು, ಈ ಕಾರಣದಿಂದಾಗಿ ಅಂತರರಾಷ್ಟ್ರೀಯ ಮಟ್ಟದಲ್ಲಿ, 50%ಕ್ಕಿಂತಲೂ ಹೆಚ್ಚಿನ ಅನಾರೋಗ್ಯದ ಗುಣಮಟ್ಟವಿದೆಯೆಂದು ವರದಿಯಾಗಿದೆ. ರೋಗ ಪೀಡಿತರ ಆರೋಗ್ಯ ಸುಧಾರಣೆಗಾಗಿ ಆರೋಗ್ಯಕರ ಜೀವನಶೈಲಿಯನ್ನು ಉತ್ತೇಜಿಸುವುದು ಇಲಾಖೆಯ ಮೂಲತತ್ವವಾಗಿದೆ. ಸಾರ್ವಜನಿಕರು ಬಳಸುವ ಎಲ್ಲಾ ಆರೋಗ್ಯ ಸಂಸ್ಥೆಗಳಲ್ಲಿ ಗುಣಮಟ್ಟದ ಆರೋಗ್ಯ ಸೇವೆಗಳನ್ನು ಒದಗಿಸುವ ಮೂಲಕ ಇಲಾಖೆಯು ರೋಗಗಳನ್ನು ತಡೆಗಟ್ಟಿ, ಗುಣಪಡಿಸಲು ಸಾಧ್ಯವಾಗುತ್ತದೆ. ಸಾರ್ವಜನಿಕ ಆರೋಗ್ಯ ಸಂಸ್ಥೆಗಳಲ್ಲಿ ಆರೋಗ್ಯ ಸೇವೆಗಳ ಗುಣಮಟ್ಟವನ್ನು ಖಚಿತಪಡಿಸಿಕೊಳ್ಳಲು ಮತ್ತು ಸಾರ್ವಜನಿಕರ ಆರೋಗ್ಯ ಸುಧಾರಣೆಯು ಭಾರತ ಸರ್ಕಾರ ಅಭಿವೃದ್ಧಿಪಡಿಸಿದ NQAS ಮಾನದಂಡವಾಗಿದ್ದು,…
ಬೆಂಗಳೂರು : ಮಲೆ ಮಹದೇಶ್ವರ ಬೆಟ್ಟದ ವನ್ಯಜೀವಿಧಾಮದಲ್ಲಿ ಹುಲಿಗಳ ಸಂತತಿ ಹೆಚ್ಚಳವಾಗುತ್ತಿದ್ದು, ಈ ಕಾನನ ಪ್ರದೇಶವನ್ನು ಹುಲಿ ಸಂರಕ್ಷಿತ ಪ್ರದೇಶವಾಗಿ ಘೋಷಿಸಲು ಸ್ಥಳೀಯರ ಅಭಿಪ್ರಾಯ ಸಂಗ್ರಹಿಸುವಂತೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಸೂಚನೆ ನೀಡಿದ್ದಾರೆ. ವಿಕಾಸಸೌಧದ ತಮ್ಮ ಕಚೇರಿಯಲ್ಲಿಂದು ಅರಣ್ಯ ಪಡೆ ಮುಖ್ಯಸ್ಥರು, ಮುಖ್ಯ ವನ್ಯಜೀವಿ ಪರಿಪಾಲಕರು ಸೇರಿದಂತೆ ಇಲಾಖೆಯ ಉನ್ನತಾಧಿಕಾರಿಗಳೊಂದಿಗೆ ಸಭೆ ನಡೆಸಿದ ಅವರು, ಎಂ.ಎಂ.ಹಿಲ್ಸ್ ಹುಲಿ ಸಂರಕ್ಷಿತ ಪ್ರದೇಶ ಘೋಷಣೆ ಮಾಡಲು ಕ್ರಮ ವಹಿಸುವಂತೆ ಹಾಗೂ ಎಲ್ಲ ಬಾಧ್ಯಸ್ಥರ ಸಭೆ ಕರೆದು ಚರ್ಚಿಸಿ, ಪ್ರಸ್ತಾವನೆ ಸಲ್ಲಿಸುವಂತೆ ತಿಳಿಸಿದರು. ರಾಜ್ಯದಲ್ಲಿ ವನ್ಯಜೀವಿಗಳ ಅಸಹಜ ಸಾವನ್ನು ನಿಯಂತ್ರಿಸಲು ಮತ್ತು ವನ್ಯಮೃಗಗಳ ದಾಳಿಯಿಂದ ಅಮೂಲ್ಯ ಜೀವಹಾನಿ ಆಗುವುದನ್ನು ತಡೆಯಲು ಎಲ್ಲ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುವಂತೆ, ಆಯಾ ವಲಯದಲ್ಲಿ ಅಧಿಕಾರಿ, ಸಿಬ್ಬಂದಿಗೆ ಹೊಣೆಗಾರಿಕೆ ನಿಗದಿಪಡಿಸುವಂತೆ ನಿರ್ದೇಶನ ನೀಡಿದರು. ಕೇಂದ್ರೀಕೃತ ಕಮಾಂಡ್ ಸೆಂಟರ್: ರಾಜ್ಯದಲ್ಲಿ ಸುಮಾರು 40 ಸಾವಿರ ಚದರ ಕಿಲೋ ಮೀಟರ್ ಅರಣ್ಯ ಪ್ರದೇಶವಿದ್ದು, ಇದನ್ನು ಭೌತಿಕವಾಗಿ…
ಬೆಂಗಳೂರು: ರಾಜ್ಯ ಸರ್ಕಾರ ಪಡಿತರ ಸಾಗಿಸಿದ್ದಕ್ಕಾಗಿ ಪಾವತಿ ಮಾಡಬೇಕಿದ್ದ ಹಣವನ್ನು ಬಿಡುಗಡೆ ಮಾಡಿ ಆದೇಶ ಹೊರಡಿಸಲಾಗಿದೆ. ಈ ಮೂಲಕ ಪಡಿತರ ಸಾಗಿಸಿದ್ದ ಲಾರಿ ಮುಷ್ಕರದ ಬೆನ್ನಲ್ಲೇ ಈ ಆದೇಶ ಮಾಡಿದೆ. ಈ ಕುರಿತು ರಾಜ್ಯ ಸರ್ಕಾರ ಆದೇಶ ಹೊರಡಿಸಿದ್ದು, ಫೆಬ್ರವರಿ, ಮಾರ್ಚ್, ಏಪ್ರಿಲ್ ಹಾಗೂ ಮೇ-2025ರ ಮಾಹೆಗಳಿಗೆ ಹೆಚ್ಚುವರಿ 5 ಕೆ.ಜಿ ಅಕ್ಕಿ ಖರೀದಿಗಾಗಿ ಮತ್ತು ಇತರ ಪ್ರಾಸಂಗಿಕ ಶುಲ್ಕಗಳಾದ ಸಗಟು ಮತ್ತು ಚಿಲ್ಲರೆ ಲಾಭಾಂಶ, ಸಾಗಾಣಿಕೆ ಶುಲ್ಕಗಳಿಗೆ ಉಂಟಾಗುವ ವೆಚ್ಚವನ್ನು ಭರಿಸಲು ರೂ.2082.99 ಕೋಟಿಗಳಅ ನುದಾನವನ್ನು ಬಿಡುಗಡೆ ಮಾಡಲಾಗಿರುತ್ತದೆ ಎಂದಿದೆ. ಮೇಲ್ಕಂಡಂತೆ ಬಿಡುಗಡೆಗೊಳಿಸಿದ ಅನುದಾನದಲ್ಲಿ ರೂ.21.79 ಕೋಟಿಗಳು ಕರ್ನಾಟಕ ಆಹಾರ ನಾಗರೀಕ ಸರಬರಾಜು ನಿಗಮ ನಿಗಮಿತ, ಬೆಂಗಳೂರು ಇವರಲ್ಲಿ ಉಳಿಕೆಯಾಗಿರುತ್ತದೆ. ಹಾಗಾಗಿ ಫೆಬ್ರವರಿ-2025 ರಿಂದ ಮೇ- 20250 ಮಾಹವರೆಗೂ ಸಗಟು/ಚಿಲ್ಲರೆ ಲಾಭಾಂಶ ಸಾಗಾಣಿಕೆ ವೆಚ್ಚಕ್ಕಾಗಿ ಬಿಡುಗಡೆಗೊಳಿಸಲು ಕೊರತೆಯಾಗುತ್ತದೆ ಎಂದು ತಿಳಿಸಿರುತ್ತಾರೆ. ಮುಂದುವರೆದು, ಫೆಬ್ರವರಿ-2025 ರಿಂದ ಮೇ-2025ರ ಮಾಹೆವರೆಗೂ ಸಗಟು/ಚಿಲ್ಲರೆ ಲಾಭಾಂಶ, ಸಾಗಾಣಿಕೆ ವೆಚ್ಚಕ್ಕಾಗಿ ಅನುದಾನವು ಕೊರತೆಯಾಗಿದ್ದು, ಈ ಕೆಳಕಂಡ ಪಟ್ಟಿಯಲ್ಲಿ…
ಧಾರವಾಡ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಮುಂದಿನ ನೇಮಕಾತಿ ಸಂದರ್ಭದಲ್ಲಿ ಸಮುದಾಯ ವಿಜ್ಞಾನ ಪದವೀಧರರಿಗೆ ಕನಿಷ್ಠ ಶೇಕಡಾ 20 ರಿಂದ 25 ರಷ್ಟು ಮೀಸಲಾತಿ ನೀಡಲು ಕ್ರಮ ಕೈಗೊಳ್ಳುವುದಾಗಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಭರವಸೆ ನೀಡಿದರು. ಗ್ರಾಮೀಣ ಗೃಹ ವಿಜ್ಞಾನ ಮಹಾವಿದ್ಯಾಲಯ / ಸಮುದಾಯ ವಿಜ್ಞಾನ ಮಹಾವಿದ್ಯಾಲಯ ಪದವೀಧರರ ಸಂಘವನ್ನು ಉದ್ಘಾಟಿಸಿ ಮಾತನಾಡಿದ ಸಚಿವರು, ನನ್ನ ಇಲಾಖೆಗೆ ಅಗತ್ಯವಾದ ಕೌಶಲಗಳನ್ನು ಇಲ್ಲಿ ಕಲಿಸಲಾಗುತ್ತದೆ. ಇಲ್ಲಿ ಪದವಿ ಪಡೆದವರು ನಮ್ಮ ಇಲಾಖೆಗೆ ಹೆಚ್ಚು ಸೂಕ್ತವಾಗುತ್ತಾರೆ. ಈಗಾಗಲೇ ಸಾಕಷ್ಟು ಜನ ಕೆಲಸ ಮಾಡುತ್ತಿದ್ದಾರೆ. ಮುಂದಿನ ನೇಮಕಾತಿ ಸಂದರ್ಭದಲ್ಲಿ ಹೆಚ್ಚು ಆದ್ಯತೆ ನೀಡುವ ಸಂಬಂಧ ಮುಖ್ಯಮಂತ್ರಿಗಳ ಜೊತೆ ಚರ್ಚೆ ನಡೆಸುವೆ, ಜೊತೆಗೆ ಗ್ರಾಮೀಣಾಭಿವೃದ್ಧಿ ಹಾಗೂ ಕೌಶಾಲ್ಯಭಿವೃದ್ದಿ ಸಚಿವರ ಜೊತೆಗೂ ಚರ್ಚೆ ನಡೆಸಿ ಕೂಸಿನ ಮನೆ ಸೇರಿದಂತೆ ವಿವಿಧ ಯೋಜನೆಗಳಲ್ಲಿ ಸಮುದಾಯ ವಿಜ್ಞಾನ ಪದವೀಧರರಿಗೆ ಹೆಚ್ಚು ಅವಕಾಶ ಸಿಗುವಂತೆ ನೋಡಿಕೊಳ್ಳುತ್ತೇನೆ ಎಂದು ಹೇಳಿದರು. ಈ ಹಿಂದೆ ಮಹಿಳೆಯರು…
ಬೆಂಗಳೂರು: ಡಿಜಿಟಲ್ ತಂತ್ರಜ್ಞಾನವನ್ನು ಪರಿಣಾಮಕಾರಿಯಾಗಿ ಬಳಸಿಕೊಳ್ಳುವ ದೃಷ್ಟಿಯಿಂದ, ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ (ಬಿಎಂಆರ್ಸಿಎಲ್) ತನ್ನ ಸೇವೆಗಳಲ್ಲಿ ಮಹತ್ವಪೂರ್ಣ ಮುಂದಾಳುವು ಮಾಡಿದ್ದು, ಓಪನ್ ನೆಟ್ವರ್ಕ್ ಫಾರ್ ಡಿಜಿಟಲ್ ಕಾಮರ್ಸ್ (ಓಎನ್ಡಿಸಿ) ಮೂಲಕ ಕ್ಯೂಆರ್ ಟಿಕೆಟ್ ಸೇವೆ ನೀಡಲು ಚಾಲನೆ ನೀಡಿದೆ. ಈ ಹೊಸ ಸೌಲಭ್ಯದಿಂದ, ಪ್ರಯಾಣಿಕರು ಈಗಿನಿಂದ ಈಜ್ ಮೈ ಟ್ರಿಪ್ (EaseMyTrip), ಹೈವೇ ಡಿಲೈಟ್ (Highway Delite), ಮೈಲ್ಸ್ ಅಂಡ್ ಕಿಲೋಮೀಟರ್ಸ್ (Miles & Kilometres via Telegram), ನಮ್ಮ ಯಾತ್ರಿ (Namma Yatri), ವನ್ ಟಿಕೆಟ್ (OneTicket), ರಾಪಿಡೋ (Rapido), ರೆಡ್ಬಸ್ (Redbus), ಟಮ್ಮಾಕ್ (Tummoc) ಮತ್ತು ಯಾತ್ರಿ – ಸಿಟಿ ಟ್ರಾವೆಲ್ ಗೈಡ್ (Yatri – City Travel Guide) ಎನ್ನುವ ಒಂಬತ್ತು ಜನಪ್ರಿಯ ಅಪ್ಲಿಕೇಶನ್ಗಳ ಮೂಲಕ ಬಿಎಂಆರ್ಸಿಎಲ್ ಕ್ಯೂಆರ್ ಟಿಕೆಟ್ಗಳನ್ನು ಖರೀದಿಸಬಹುದಾಗಿದೆ. ಈ ಹೊಸ ಆಯ್ಕೆಗಳು ಈಗಾಗಲೇ ಲಭ್ಯವಿರುವ ಟಿಕೆಟ್ ಬುಕ್ಕಿಂಗ್ ಆಯ್ದ ಮಾರ್ಗಗಳಾದ ನಮ್ಮ ಮೆಟ್ರೋ ಮೊಬೈಲ್ ಆಪ್, ಬಿಎಂಆರ್ಸಿಎಲ್ ವಾಟ್ಸಾಪ್ ಚಾಟ್ಬಾಟ್…