Author: kannadanewsnow09

ಬೆಂಗಳೂರು: ರಾಜ್ಯದಲ್ಲಿ ಈಗಾಗಲೇ ಕೆಲ ವಿಶ್ವ ವಿದ್ಯಾಲಯಗಳಿಗೆ ಕೃಷ್ಣದೇವರಾಯ, ರಾಣಿ ಚನ್ನಮ್ಮ ಸೇರಿದಂತೆ ವಿವಿಧ ಗಣ್ಯರ ಹೆಸರಿಡಲಾಗಿದೆ. ಬಾಕಿ ಇರುವಂತ ವಿವಿಗಳಿಗೆ ಬಸವಣ್ಣ, ನಾಲ್ವಡಿ ಕೃಷ್ಣರಾಜ ಒಡೆಯರ್, ದೇವರಾಜ ಅರಸು ಹೆಸರಿಡಲು ಅಗತ್ಯ ಕ್ರಮವಹಿಸುವಂತೆ ಸಿಎಂ ಸಿದ್ಧರಾಮಯ್ಯ ಆದೇಶಿಸಿದ್ದಾರೆ. ಈ ಸಂಬಂಧ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಯವರಿಗೆ ಪತ್ರ ಬರೆದಿರುವಂತ ಸಿಎಂ ಸಿದ್ಧರಾಮಯ್ಯ ಅವರು,ರಾಜ್ಯದ ವಿವಿಧ ವಿಶ್ವವಿದ್ಯಾಲಯಗಳಿಗೆ ಆದಿಕವಿ ಮಹರ್ಷಿ ವಾಲ್ಮೀಕಿ, ಅಕ್ಕಮಹಾದೇವಿ, ರಾಣಿ ಚನ್ನಮ್ಮ ಕೃಷ್ಣದೇವರಾಯ, ಕುವೆಂಪು, ವಿಶ್ವೇಶ್ವರಯ್ಯ, ಗಂಗೂಬಾಯಿ ಹಾನಗಲ್, ರಾಜೀವ್ ಗಾಂಧಿ ಹಾಗೂ ಮನಮೋಹನ್ ಸಿಂಗ್ ಅವರುಗಳ ಹೆಸರುಗಳನ್ನು ಈಗಾಗಲೇ ನಾಮಕರಣ ಮಾಡಲಾಗಿದೆ ಎಂದಿದ್ದಾರೆ. ಸಾಮಾಜಿಕ ನ್ಯಾಯದ ಹರಿಕಾರರೆಂದು ಹೆಸರಾಗಿರುವ ವಿಶ್ವಗುರು-ಸಾಂಸ್ಕೃತಿಕ ನಾಯಕ ಬಸವಣ್ಣನವರು, ಶೂದ್ರ ಸಿದ್ಧಾಂತದ ಹರಿಕಾರರಾದ ಕನಕದಾಸರು, ಹಿಂದುಳಿದ ಸಮುದಾಯಗಳಿಗೆ ಚೈತನ್ಯ ನೀಡಿದ ರಾಜ್ಯದ ಅಭಿವೃದ್ಧಿಗೆ ಚಲನಶೀಲತೆ ತಂದ ನಾಲ್ವಡಿ ಕೃಷ್ಣರಾಜ ಒಡೆಯರ್ ಮತ್ತು ದೇವರಾಜ ಅರಸು ಅವರ ಹೆಸರುಗಳನ್ನು ರಾಜ್ಯದ ವಿವಿಧ ವಿಶ್ವವಿದ್ಯಾಲಯಗಳಿಗೆ ನಾಮಕರಣ ಮಾಡುವ ಅಗತ್ಯವಿದೆ ಎಂಬುದಾಗಿ ಅಭಿಪ್ರಾಯ ಪಟ್ಟಿದ್ದಾರೆ. ಈ…

Read More

ಬೆಂಗಳೂರು: ಬೆಂಗಳೂರು ನಗರ ವಿಶ್ವ ವಿದ್ಯಾನಿಲಯಕ್ಕೆ ಸಿಂಡಿಕೇಟ್ ಪ್ರಾಧಿಕಾರದ ಸದಸ್ಯರನ್ನಾಗಿ ಡಾ.ಮಹಂತೇಶ್ ಪಾಟೀಲ್(ಡಾ.ಮಹಂತಗೌಡ) ಅವರನ್ನು ನೇಮಿಸಿ ಕುಲಸಚಿವರು ಆದೇಶಿಸಿದ್ದಾರೆ. ಈ ಕುರಿತಂತೆ ಬೆಂಗಳೂರು ನಗರ ವಿಶ್ವ ವಿದ್ಯಾನಿಲಯದ ಕುಲಸಚಿವರು ಅಧಿಸೂಚನೆ ಹೊರಡಿಸಿದ್ದು, ಬೆಂಗಳೂರಿನ ಬಾಪು ಕಾಲೇಜ್ ಆಫ್ ಎಜುಕೇಷನ್ ಪ್ರಾಂಶುಪಾಲರಾದಂತ ಡಾ.ಮಹಂತೇಶ್ ಪಾಟೀಲ್ ಅವರನ್ನು ಸದಸ್ಯರನ್ನಾಗಿ ನಾಮನಿರ್ದೇಶನ ಮಾಡಲಾಗಿದೆ ಎಂದಿದ್ದಾರೆ. ಅಂದಹಾಗೇ ಡಾ.ಮಹಂತೇಶ್ ಪಾಟೀಲ್ ಅವರು ಮದರ್ ಥೆರೇಸಾ ಶಿಕ್ಷಣ ಮಹಾವಿದ್ಯಾಲಯದಲ್ಲಿ ಉಪ್ಯಾಸಕರಾಗಿ, ಆ ಬಳಿಕ ಪ್ರಾಂಶುಪಾಲರಾಗಿ ತಮ್ಮ ವೃತ್ತಿ ಜೀವನ ಆರಂಭಿಸಿದರು. ಆ ಬಳಿ ಜಿಎಂ ಶಿಕ್ಷಣ ಮಹಾ ವಿದ್ಯಾಲಯದಲ್ಲಿ ಪ್ರಾಂಶುಪಾಲರಾಗಿಯೂ ಸೇವೆ ಸಲ್ಲಿಸಿದರು. ಇದೀಗ ಬೆಂಗಳೂರಿನ ಯಶವಂತಪುರದಲ್ಲಿರುವಂತ ಬಾಪು ಶಿಕ್ಷಣ ಮಹಾವಿದ್ಯಾಲಯದಲ್ಲಿ ಪ್ರಾಂಶುಪಾಲರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ವರದಿ; ವಸಂತ ಬಿ ಈಶ್ವರಗೆರೆ.., ಸಂಪಾದಕರು https://kannadanewsnow.com/kannada/these-documents-are-mandatory-to-be-submitted-along-with-the-nomination-paper-for-the-gram-panchayat-elections/ https://kannadanewsnow.com/kannada/cm-siddaramaiah-orders-naming-of-some-universities-in-the-state-after-basavanna-nalvadi-krishnaraja-wodeyar-and-urs/

Read More

ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರದಲ್ಲಿ ನವೆಂಬರ್ ವೇಳೆಗೆ ಕ್ರಾಂತಿಯಾಗುವ ಬಗ್ಗೆ ಚರ್ಚೆ ನಡೆಯುತ್ತಿದೆ. ಈ ಚರ್ಚೆಯ ಬೆನ್ನಲ್ಲೇ ಡಿಸಿಎಂ ಡಿ.ಕೆ ಶಿವಕುಮಾರ್ ಅವರು ತ್ಯಾಗದ ಮಾತನಾಡಿದ್ದು ಗಮನ ಸೆಳೆದಿದೆ. ಮಾಜಿ ಪ್ರಧಾನಿ ಇಂದಿರಾ ಸ್ಮರಣೆ ವೇಳೆ ಸೋನಿಯಾ ಗಾಂಧಿ ಬಗ್ಗೆ ಪ್ರಸ್ತಾಪಿಸಿರುವಂತ ಡಿಸಿಎಂ ಡಿ.ಕೆ ಶಿವಕುಮಾರ್ ಅವರು, ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ ಅವರ ತ್ಯಾಗವನ್ನು ಉಲ್ಲೇಖಿಸಿದರು. ಅಲ್ಲದೇ ಪ್ರಧಾನಿಯಾಗಬೇಕಾಗಿದ್ದವರು ಪಕ್ಷಕ್ಕಾಗಿ ಅಧಿಕಾರ ತ್ಯಾಗ ಮಾಡಿದ್ರು ಎಂಬುದಾಗಿ ಹೇಳುವ ಮೂಲಕ ತ್ಯಾಗದ ಮಾತನಾಡಿದ್ದಾರೆ. https://kannadanewsnow.com/kannada/plastic-bottled-water-cannot-be-used-in-government-meetings-and-functions-across-the-state-cm-siddaramaiah-orders/ https://kannadanewsnow.com/kannada/these-documents-are-mandatory-to-be-submitted-along-with-the-nomination-paper-for-the-gram-panchayat-elections/

Read More

ಬೆಂಗಳೂರು: ರಾಜ್ಯಾಧ್ಯಂತ ಎಲ್ಲಾ ಸರ್ಕಾರಿ ಸಭೆ, ಸಮಾರಂಭ, ಕಾರ್ಯಕ್ರಮಗಳಲ್ಲಿ ಪ್ಲಾಸ್ಟಿಕ್ ನೀರಿನ ಬಾಟಲ್ ಬಳಸದಂತೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಖಡಕ್ ಆದೇಶ ಹೊರಡಿಸಿದ್ದಾರೆ. ಈ ಕುರಿತಂತೆ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಯವರಿಗೆ ಟಿಪ್ಪಣಿ ಆದೇಶ ಹೊರಡಿಸಿರುವಂತ ಅವರು, ರಾಜ್ಯಾದ್ಯಂತ ಎಲ್ಲಾ ಸರ್ಕಾರಿ ಕಛೇರಿಗಳಲ್ಲಿ ಹಾಗೂ ಸರ್ಕಾರಿ ಸಭೆ ಸಮಾರಂಭಗಳಲ್ಲಿ ಕುಡಿಯುವ ನೀರಿನ ಪ್ಲಾಸ್ಟಿಕ್‌ ಬಾಟಲ್‌ಗಳ ಬದಲಾಗಿ ಪರಿಸರ ಸ್ನೇಹಿ ವಸ್ತುಗಳಿಂದ ತಯಾರಿಸಿದ ಪರಿಕರಗಳನ್ನು ಬಳಕೆ ಮಾಡುವಂತೆ ಸೂಚನೆಗಳನ್ನು ನೀಡಲಾಗಿತ್ತು. ಈ ಕ್ರಮವನ್ನು ಕಟ್ಟುನಿಟ್ಟಾಗಿ ಪಾಲಿಸಲು ಅಗತ್ಯ ಕ್ರಮ ಕೈಗೊಳ್ಳುವುದು ಎಂದು ಸೂಚಿಸಿದ್ದಾರೆ. ಮಾನ್ಯ ಮುಖ್ಯಮಂತ್ರಿಗಳು ಮತ್ತು ಇಲಾಖಾ ಸಚಿವರುಗಳ ಸಭೆಗಳಲ್ಲಿ ಸಚಿವಾಲಯವೂ ಸೇರಿದಂತೆ ರಾಜ್ಯಾದ್ಯಂತ ಎಲ್ಲಾ ಸರ್ಕಾರಿ ಕಚೇರಿಗಳ ಸಭೆ/ಕಾರ್ಯಕ್ರಮಗಳಲ್ಲಿ ಸರ್ಕಾರಿ ಸ್ವಾಮ್ಯದ ಕೆ.ಎಂ.ಎಫ್. ನ ‘ನಂದಿನಿ’ ತಿನಿಸುಗಳನ್ನು ಕಡ್ಡಾಯವಾಗಿ ಬಳಸುವಂತೆ ಎಲ್ಲಾ ಇಲಾಖಾ ಮುಖ್ಯಸ್ಥರುಗಳಿಗೆ ಅಗತ್ಯ ಸೂಚನೆಗಳನ್ನು ನೀಡಲು ಮುಖ್ಯಮಂತ್ರಿ ಸಿದ್ಧರಾಮಯ್ಯ ತಿಳಿಸಿದ್ದಾರೆ. ವರದಿ; ವಸಂತ ಬಿ ಈಶ್ವರಗೆರೆ.., ಸಂಪಾದಕರು https://kannadanewsnow.com/kannada/shocking-act-in-bengaluru-transgenders-shave-head-of-transgender-woman-and-attack-her/ https://kannadanewsnow.com/kannada/these-documents-are-mandatory-to-be-submitted-along-with-the-nomination-paper-for-the-gram-panchayat-elections/

Read More

ಬೆಂಗಳೂರು: ನಗರದಲ್ಲಿ ಬೆಚ್ಚಿ ಬೀಳಿಸೋ ಘಟನೆ ಎನ್ನುವಂತೆ ತೃತೀಯ ಲಿಂಗಿಯೊಬ್ಬರನ್ನು ತಲೆ ಬೋಳಿಸಿರುವಂತ ತೃತೀಯ ಲಿಂಗಿಯರ ತಂಡವೇ, ಮನಸೋ ಇಚ್ಛೆ ಥಳಿಸಿ ಹಲ್ಲೆ ಮಾಡಿರುವುದಾಗಿ ತಿಳಿದು ಬಂದಿದೆ. ಬೆಂಗಳೂರಿನ ಬೊಮ್ಮನಹಳ್ಳಿಯ ವಿರಾಟ ನಗರದಲ್ಲಿ ಈ ಘಟನೆ ನಡೆದಿದೆ. ತೃತೀಯ ಲಿಂಗಿಯಾಗಿದ್ದಂತ ಸುಕನ್ಯಾರನ್ನು ಆಟೋದಲ್ಲಿ ಅಪಹರಿಸಿ ಹಲ್ಲೆ ಮಾಡಲಾಗಿದೆ. ಬೇರೊಂದು ತಂಡದ ಜೊತೆಗೆ ಹೋಗಿದ್ದಕ್ಕೆ ತೃತೀಯ ಲಿಂಗಿಗಳಾದಂತ ಪ್ರೀತಿ, ಚಿನ್ನಿ ಮತ್ತು ತಂಡವರು ಈ ಕೃತ್ಯವೆಸಗಿದ್ದಾರೆ. ಕೆ ಆರ್ ಪುರಂನಿಂದ ಅಪಹರಣ ಮಾಡಿದಂತ ತೃತೀಯ ಲಿಂಗಿಯರ ಮತ್ತೊಂದು ಗುಂಪು, ಬೊಮ್ಮನಹಳ್ಳಿಯವರೆಗೆ ಕರೆದು ತಂದು ಕೈಮುಗಿದು ಬೇಡಿಕೊಂಡರೂ ದೊಣ್ಣೆ, ಸೌಟ್, ಕೈಗೆ ಸಿಕ್ಕಂತ ವಸ್ತುಗಳು, ಕಾಲಿನಿಂದ ಒದ್ದು ಹಲ್ಲೆ ಮಾಡಿರುವುದಾಗಿ ತಿಳಿದು ಬಂದಿದೆ. https://kannadanewsnow.com/kannada/city-accelerator-program-launched-to-accelerate-pm-surya-ghar-yojana/ https://kannadanewsnow.com/kannada/these-documents-are-mandatory-to-be-submitted-along-with-the-nomination-paper-for-the-gram-panchayat-elections/

Read More

ಬೆಂಗಳೂರು : ರಾಜ್ಯದಲ್ಲಿ ಪ್ರಧಾನ‌ ಮಂತ್ರಿ ಸೂರ್ಯ ಘರ್ ಮುಫ್ತ್ ಬಿಜ್ಲಿ ಯೋಜನೆಯ ತ್ವರಿತ ಅನುಷ್ಠಾನಕ್ಕಾಗಿ ‘ಸಿಟಿ ಆಕ್ಸಿಲರೇಟರ್‌’ ಕಾರ್ಯಕ್ರಮಕ್ಕೆ ಇಂಧನ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿಗಳಾದ ಗೌರವ್ ಗುಪ್ತ ಶುಕ್ರವಾರ ಚಾಲನೆ ನೀಡಿದರು. ಪ್ರಧಾನ ಮಂತ್ರಿ ಸೂರ್ಯ ಘರ್ ಮಫ್ತ್ ಬಿಜ್ಲಿ ಯೋಜನೆಯಡಿ ಮೇಲ್ಛಾವಣಿ ಸೌರ (ಆರ್‌ಟಿಎಸ್‌) ಘಟಕಗಳ ಅಳವಡಿಕೆಯನ್ನು ಉತ್ತೇಜಿಸುವ ನಿಟ್ಟಿನಲ್ಲಿ ನವ ಮತ್ತು ನವೀಕರಿಸಬಹುದಾದ ಇಂಧನ ಸಚಿವಾಲಯ(ಎಂಎನ್‌ಆರ್‌ಇ), ಶಕ್ತಿ ಸಸ್ಟೇನಬಲ್‌ ಎನರ್ಜಿ ಫೌಂಡೇಶನ್‌, ನಾಲೆಡ್ಜ್ ಪಾರ್ಟನರ್‌ ಕೆಪಿಎಂಜಿ ಮತ್ತು ಬೆಸ್ಕಾಂ ಸಹಯೋಗದೊಂದಿಗೆ ಇಂದು ಸಿಟಿ ಆಕ್ಸಿಲರೇಟರ್‌ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ಪಿಎಂ ಸೂರ್ಯ ಘರ್ ಮುಫ್ತ್ ಬಿಜ್ಲಿ ಯೋಜನೆಯ ‘ಸಿಟಿ ಆಕ್ಸಿಲರೇಟರ್‌’ ಉಪಕ್ರಮದಡಿ ಮೊದಲ ಹಂತದಲ್ಲಿ ಬೆಂಗಳೂರು, ಮೈಸೂರು ಹಾಗೂ ಹುಬ್ಬಳ್ಳಿ-ಧಾರವಾಡ ನಗರಗಳಲ್ಲಿ ಸೌರ ಮೇಲ್ಛಾವಣಿ ಘಟಕಗಳ ಸ್ಥಾಪನೆಗೆ ಉತ್ತೇಜನೆ ನೀಡಲಾಗುತ್ತದೆ. ಸಿಟಿ ಆಕ್ಸಿಲರೇಟರ್‌ ಕಾರ್ಯಕ್ರಮದಡಿ ವಿದ್ಯುತ್‌ ವಿತರಣಾ ಕಂಪನಿಗಳು ಮತ್ತು ನಗರ ಸ್ಥಳೀಯ ಸಂಸ್ಥೆಗಳಿಗೆ ತಾಂತ್ರಿಕ ನೆರವು ಒದಗಿಸಲಾಗುತ್ತದೆ. ಈ ಉಪಕ್ರಮವನ್ನು ದೇಶಾದ್ಯಂತ 100 ನಗರಗಳಲ್ಲಿ…

Read More

ಬೆಂಗಳೂರು: ರಾಜ್ಯದಲ್ಲಿ ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದಿಂದ ನಡೆಸಲಾದಂತ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ-2025 ಮುಕ್ತಾಯಗೊಂಡಿದೆ. ಇಂದಿನವರೆಗೆ ಎಷ್ಟು ಸಮೀಕ್ಷೆ ನಡೆಸಲಾಗಿದೆ ಎನ್ನುವ ಅಂಕಿ ಅಂಶ ಮುಂದಿದೆ ಓದಿ. ಈ ಬಗ್ಗೆ ರಾಜ್ಯ ಹಿಂದುಳಿದ ವರ್ಗಗಳ ಆಯೋಗದಿಂದ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ಸರ್ಕಾರದ ಆದೇಶ ಸಂಖ್ಯೆ: ಹಿಂವಕ 289 ಬಿಸಿಎ 2025, ದಿನಾಂಕ:13.08.2025 ರ ಅನ್ವಯ ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದಿಂದ ಕರ್ನಾಟಕ ರಾಜ್ಯದಲ್ಲಿರುವ ಎಲ್ಲಾ ಜನರ (ಹಿಂದುಳಿದ ವರ್ಗಗಳು, ಇತರೆ ಜಾತಿಗಳು ಅನುಸೂಚಿತ ಜಾತಿ ಮತ್ತು ಪಂಗಡಗಳು ಸೇರಿದಂತೆ) ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯನ್ನು ದಿನಾಂಕ:22-09-2025 ರಿಂದ ಪ್ರಾರಂಭಿಸಲಾಗಿದ್ದು, ದಿನಾಂಕ 31.10.2025 ಮುಕ್ತಾಯಗೊಂಡಿರುತ್ತದೆ ಎಂದಿದೆ. ಹೀಗಿದೆ ಸಮೀಕ್ಷೆಯ ಸಂಕ್ಷಿಪ್ತ ವಿವರ Projected Population of Karnataka-2025 – 6,85,38,000 Surveyed Population till 31.10.2025 – 6,13,83,908 Refused Households – 4,22,258 Vacant/Locked Houses – 34,49,681 ವಿವಿಧ ಕಾರಣಗಳಿಂದಾಗಿ ಸಮೀಕ್ಷೆಯಲ್ಲಿ ಭಾಗವಹಿಸಲು ಸಾಧ್ಯವಾಗದೇ ಅವಕಾಶ ನೀಡುವ ಹಿನ್ನೆಲೆಯಲ್ಲಿ Online ಮೂಲಕ…

Read More

ಬೆಂಗಳೂರು: ರಾಜ್ಯದಲ್ಲಿ ನಿರಂತರವಾಗಿ ಬೀಳುತ್ತಿರುವ ಮಳೆಯಿಂದ ಹಾನಿಯಾಗಿರುವ ರೈತರ ಬೆಳೆಗೆ ಬೆಂಬಲ ಬೆಲೆ ನೀಡಿ ಸೂಕ್ತ ಪರಿಹಾರ ನೀಡದಿದ್ದರೆ, ರಾಜ್ಯ ಸರ್ಕಾರ ದೊಡ್ಡ ಪ್ರಮಾಣದ ರೈತರ ಚಳವಳಿ ಎದುರಿಸಬೇಕಾಗುತ್ತದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಎಚ್ಚರಿಸಿದ್ದಾರೆ‌. ಈ ಕುರಿತು ಎಕ್ಸ್ ಮಾಡಿರುವ ಅವರು, ನಿರಂತರವಾಗಿ ಬೀಳುತ್ತಿರುವ ಮಳೆಯಿಂದ ರಾಜ್ಯಾದ್ಯಂತ ರೈತರು ಬೆಳೆದ ಬೆಳೆ ನಷ್ಟವಾಗಿದೆ. ಬೆಳೆ ನಷ್ಟ ಅಗಿ ಎರಡು ತಿಂಗಳು ಕಳೆದರೂ ಕೂಡ ರಾಜ್ಯ ಸರ್ಕಾರ ಪರಿಹಾರ ಕೊಡಲು ಮುಂದೆ ಬಂದಿಲ್ಲ. ಸರ್ವೆ ಕಾರ್ಯ ಸಮರ್ಪಕವಾಗಿ ಆಗಿಲ್ಲ. ಹೀಗಾಗಿ ರೈತರ ಬಾಳು ಕಂಗೆಟ್ಟಿದೆ ಪರಿಹಾರಕ್ಕಾಗಿ ರೈತರು ಚಾತಕ ಪಕ್ಷಿಯಂತೆ ಸರ್ಕಾರದ ಕಡೆ ನೋಡುತ್ತಿದ್ದಾರೆ. ಕಳೆದ ವರ್ಷವೂ ಯಾವುದೇ ಪರಿಹಾರ ನೀಡಿಲ್ಲ ಕೆಂದ್ರದ ಪರಿಹಾರ ಕೊಟ್ಟು ಕೈ ತೊಳೆದುಕೊಂಡರು. ಈ ವರ್ಷ ಮೊತ್ತ ಘೋಷಣೆ ಮಾಡಿ ಹಣ ಬಿಡುಗಡೆ ಮಾಡಿಲ್ಲ. ರಾಜ್ಯ ಸರ್ಕಾರ ರೈತರ ಬಗ್ಗೆ ಅಸಡ್ಡೆ ತೋರಿಸುತ್ತಿದೆ. ಎಲ್ಲ ರೈತರಿಗೂ ಸೂಕ್ತ ಪರಿಹಾರ ನೀಡಲು ಆಗ್ರಹಿಸಿದ್ದಾರೆ.…

Read More

ಬೆಂಗಳೂರು: ಕೇಂದ್ರ ಸಚಿವರು ಹಾಗೂ ಜೆಡಿಎಸ್ ರಾಜ್ಯಾಧ್ಯಕ್ಷರೂ ಆಗಿರುವ ಹೆಚ್.ಡಿ. ಕುಮಾರಸ್ವಾಮಿ ಅವರು ಮಂಡ್ಯ ಜಿಲ್ಲೆಯ ಪಕ್ಷದ ಮುಖಂಡರ ಸಭೆ ನಡೆಸಿ ಮುಂಬರುವ ದಿನಗಳಲ್ಲಿ ಜಿಲ್ಲೆಯಲ್ಲಿ ಪಕ್ಷ ಸಂಘಟನೆ ದಿಸೆಯಲ್ಲಿ ಮಹತ್ವದ ಸಮಾಲೋಚನೆ ನಡೆಸಿದರು. ಬಿಡದಿಯ ತಮ್ಮ ತೋಟದಲ್ಲಿ ಶುಕ್ರವಾರದಂದು ರಾಜ್ಯಾಧ್ಯಕ್ಷರು ಕರೆದಿದ್ದ ಈ ಸಭೆಯಲ್ಲಿ ಯುವ ಜನತಾದಳ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ, ಮಾಜಿ ಮಂತ್ರಿಗಳಾದ ಡಿ.ಸಿ. ತಮ್ಮಣ್ಣ, ಸಿ.ಎಸ್. ಪುಟ್ಟರಾಜು, ಮಾಜಿ ಶಾಸಕರಾದ ರವೀಂದ್ರ ಶ್ರೀಕಂಠಯ್ಯ, ಸುರೇಶ್ ಗೌಡ, ಡಾ.ಕೆ. ಅನ್ನದಾನಿ, ಶಾಸಕ ಮಂಜುನಾಥ್, ಜಿಲ್ಲಾಧ್ಯಕ್ಷ ರಮೇಶ್, ಮುಖಂಡ ರಾಮಚಂದ್ರ ಪಾಲ್ಗೊಂಡಿದ್ದರು. ಜಿಲ್ಲೆಯ ರಾಜಕೀಯ ಸ್ಥಿತಿಗತಿಗಳ ಬಗ್ಗೆ ಮುಖಂಡರ ಜತೆ ಕೂಲಂಕಷವಾಗಿ ಚರ್ಚೆ ನಡೆಸಿದ ಸಚಿವರು, ಪಕ್ಷ ಸಂಘಟನೆಯಲ್ಲಿ ಎಲ್ಲರೂ ಗಂಭೀರವಾಗಿ ತೊಡಗಿಸಿಕೊಳ್ಳಬೇಕು ಎಂದು ಕಟ್ಟುನಿಟ್ಟಿನ ಸೂಚನೆಗಳನ್ನು ನೀಡಿದರು. ಅಲ್ಲದೆ, ಡಿಸಿಸಿ ಬ್ಯಾಂಕ್ ಚುನಾವಣೆಯ ಬಗ್ಗೆ ಪ್ರಸ್ತಾಪಿಸಿದ ಸಚಿವರು, ಪಕ್ಷದ ಸಂಘಟನೆ ಬಗ್ಗೆ ಅಲಕ್ಷ್ಯ ಬೇಡ. ಕಳೆದ ಲೋಕಸಭೆ ಚುನಾವಣೆಯಲ್ಲಿ ದೊಡ್ಡ ಮಟ್ಟದ ಬಹುಮತದಲ್ಲಿ ಜಿಲ್ಲೆಯ ಜನತೆ ನಮ್ಮನ್ನು ಆಶೀರ್ವಾದ…

Read More

ನವದೆಹಲಿ: ಚಿನಿವಾರ ಪೇಟೆಯಲ್ಲಿ ಇಂದು ಮತ್ತೆ ಚಿನ್ನದ ದರ ಏರಿಕೆ ಕಂಡು, ಆಭರಣ ಪ್ರಿಯರಿಗೆ ಬಿಗ್ ಶಾಕ್ ನೀಡಲಾಗಿದೆ. ಚಿನ್ನದ ದರವು 10 ಗ್ರಾಂಗೆ ರೂ.2,200 ಏರಿಕೆಯಾಗಿ ಬರೋಬ್ಬರಿ 1,25,600ಕ್ಕೆ ಏರಿಕೆಯಾಗಿದೆ. ಅಖಿಲ ಭಾರತ ಸರಾಫ್ ಅಸೋಸಿಯೇಷನ್ ಮಾಹಿತಿ ನೀಡಿದ್ದು, ಶೇ.99.9ರಷ್ಟು ಪರಿಶುದ್ಧ 10 ಗ್ರಾಂ ಚಿನ್ನದ ದರವು 2,200 ಏರಿಕೆಯಾಗುವ ಮೂಲಕ 1,25,600ಕ್ಕೆ ಏರಿಕೆಯಾಗಿದೆ. ಇದು ನಿನ್ನೆಯ ಗುರುವಾರದಂದು 10 ಗ್ರಾಂಗೆ ರೂ.1,23,400 ಇತ್ತು ಎಂಬುದಾಗಿ ತಿಳಿಸಿದೆ. ಆಭರಣ ಚಿನ್ನದ ದರ ಅಂದರೆ ಶೇ.99.5ರಷ್ಟು ಪರಿಶುದ್ಧತೆ ಹೊಂದಿರೋದು ರೂ.2,200 ಏರಿಕೆಯಾಗುವ ಮೂಲಕ 10 ಗ್ರಾಂಗೆ ರೂ.1,25,000ಕ್ಕೆ ಮಾರಾಟವಾಗಿದೆ. ಗುರುವಾರದಂದು ಆಭರಣ ಚಿನ್ನವು 10 ಗ್ರಾಂಗೆ ರೂ.1,22,800 ಇತ್ತು ಎಂದಿದೆ. ಇನ್ನೂ ಬೆಳ್ಳಿಯ ಬೆಲೆ ಕೊಂಚ ಇಳಿಕೆಯಾಗಿದೆ. ಇಂದು ಕೆಜಿ ಬೆಳ್ಳಿಗೆ 2000 ರೂಪಾಯಿ ಇಳಿಕೆಯಾಗಿದೆ. ಹೀಗಾಗಿ ಒಂದು ಕೆಜಿ ಬೆಳ್ಳಿಗೆ 1,53,000 ರೂ ತಲುಪಿದೆ. ಇಂದು ಗುರುವಾರದ ನಿನ್ನೆಯಂದು 1,55,000 ಇತ್ತು. https://kannadanewsnow.com/kannada/breaking-renukashwami-murder-case-actor-darshan-gang-scheduled-for-charge-framing-on-nov-3/ https://kannadanewsnow.com/kannada/these-are-the-necessary-documents-to-be-submitted-along-with-the-nomination-paper-for-the-gram-panchayat-elections/

Read More