Author: kannadanewsnow09

ದಕ್ಷಿಣ ಕನ್ನಡ: ಜಿಲ್ಲೆಯಲ್ಲಿ ರಾಜ್ಯದಲ್ಲೇ ಬೆಚ್ಚಿ ಬೀಳಿಸೋ ಘಟನೆ ಎಂಬಂತೆ ಚಿಕಿತ್ಸೆಗೆ ಎಂದು ಕರೆದುಕೊಂಡು ಬಂದ ಮಹಿಳೆಯ ಮೇಲೆ ಕೀಚಕನೊಬ್ಬ ಅತ್ಯಾಚಾರ ಎಸಗಿರೋದಾಗಿ ತಿಳಿದು ಬಂದಿದೆ. ಅಲ್ಲದೇ ಪ್ರಕರಣದಲ್ಲಿ ಪೊಲೀಸರು ಆರೋಪಿಯನ್ನು ಎಡೆಮುರಿ ಕಟ್ಟಿ ಬಂಧಿಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಕದ್ರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಇಂತಹ ಘಟನೆ ನಡೆದಿದೆ. ಚಿಕಿತ್ಸೆಗೆಂದು ಮಹಿಳೆಯನ್ನು ಕರೆದುಕೊಂಡು ಬಂದಿದ್ದಂತ ಆರೋಪಿ ಆಕೆಯ ಮೇಲೆ ಅತ್ಯಾಚಾರ ಎಸಗಿದ್ದಾನೆ. ಕೃತ್ಯವೆಸಗಿ ಮಹಿಳೆಯ ಬೆತ್ತಲೆ ಪೋಟೋಗಳನ್ನು ತೆಗೆದುಕೊಂಡು ಬ್ಲಾಕ್ ಮೇಲ್ ಮಾಡಿದ್ದಾನೆ. ಇಲ್ಲಿಗೆ ಸುಮ್ಮನಾಗದಂತ ಕೀಚಕ, ಈ ಪೋಟೋಗಳನ್ನು ಇಟ್ಟುಕೊಂಡು ಬ್ಲಾಕ್ ಮೇಲ್ ಮಾಡಿ, ಬಳಿಕವೂ ಮಹಿಳೆಯ ಮೇಲೆ ನಿರಂತರವಾಗಿ ಅತ್ಯಾಚಾರವೆಸಗಿದ್ದಾನೆ. ಇದರಿಂದ ಬೇಸತ್ತಂತ ಮಹಿಳೆಯು, ಕದ್ರಿ ಠಾಣೆಗೆ ದೂರು ನೀಡಿದ್ದಳು. ಈ ದೂರಿನ ಬೆನ್ನಲ್ಲೇ ಅಲರ್ಟ್ ಆದಂತ ಕದ್ರಿ ಠಾಣೆಯ ಪೊಲೀಸರು, ಕೇರಳ ಮೂಲದ ಆರೋಪಿ ಸಜಿತ್ ನನ್ನು ಬಂಧಿಸಿ ಜೈಲಿಗಟ್ಟಿದ್ದಾರೆ. ಬಂಧಿತ ಆರೋಪಿ ಸಜಿತ್ ಖಾಸಗಿ ಆಸ್ಪತ್ರೆ ಹಾಗೂ ಹೋಟೆಲ್ ನಲ್ಲಿ ಮಹಿಳೆಯ ಮೇಲೆ ನಿರಂತರವಾಗಿ…

Read More

ಬೆಂಗಳೂರು: ರಾಜ್ಯ ಸರ್ಕಾರದಿಂದ ವಾಲ್ಮೀಕಿ ಅಭಿವೃದ್ಧಿ ನಿಗಮದ ಪ್ರಭಾರಿ ಎಂಡಿಯಾಗಿ ಡಾ.ಕೆಆರ್ ರಾಜ್ ಕುಮಾರ್ ನೇಮಕ ಮಾಡಿ ಆದೇಶಿಸಿದೆ. ಈ ಮೊದಲು ಇದ್ದಂತ ಎಂಡಿ ಜೆ.ಜಿ ಪದ್ಮನಾಭ ಅವರನ್ನು ಅಮಾನತುಗೊಳಿಸಿತ್ತು. ಈ ಬೆನ್ನಲ್ಲೇ ಆ ಖಾಲಿ ಸ್ಥಾನಕ್ಕೆ ಪ್ರಭಾರಿ ಎಂಡಿಯಾಗಿ ಡಾ.ಕೆ ಆರ್ ರಾಜ್ ಕುಮಾರ್ ನೇಮಕ ಮಾಡಿ ಆದೇಶಿಸಿದೆ. ಈ ಕುರಿತಂತೆ ಇಂದು ಪರಿಶಿಷ್ಯ ಪಂಗಡಗಳ ಕಲ್ಯಾಣ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಭವ್ಯ ಎಂ.ಜೆ ಅವರು ಅಧಿಸೂಚನೆ ಹೊರಡಿಸಿದ್ದಾರೆ. ಅದರಲ್ಲಿ  ಡಾ|| ಕೆ.ಆರ್ ರಾಜ್‌ಕುಮಾರ್‌, ಜಂಟಿ ನಿರ್ದೇಶಕರು, ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆ, ಬೆಂಗಳೂರು ಇವರನ್ನು ಆಡಳಿತಾತ್ಮಕ ಹಿತದೃಷ್ಟಿಯಿಂದ ತಕ್ಷಣದಿಂದ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮ, ಬೆಂಗಳೂರು ಇಲ್ಲಿ ಖಾಲಿ ಇರುವ ವ್ಯವಸ್ಥಾಪಕ ನಿರ್ದೇಶಕರ ಹುದ್ದೆಗೆ ಹೆಚ್ಚುವರಿ ಪ್ರಭಾರದಲ್ಲಿರಿಸಿ ಆದೇಶಿಸಿದ್ದಾರೆ. ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧೀಕ್ಷಕ ಆತ್ಮಹತ್ಯೆ ಕೇಸ್: ರಾಜ್ಯ ಸರ್ಕಾರದಿಂದ ‘MD, ಅಕೌಂಟ್ ಆಫೀಸರ್’ ಅಮಾನತು…

Read More

ಬೀದರ್: ಕಾಲೇಜಿನಲ್ಲಿ ಜೈ ಶ್ರೀರಾಮ್ ಎಂಬಂತ ಹಾಡು ಹಾಕಿದ್ದಕ್ಕೆ ಹಿಂದೂ ಮುಸ್ಲೀಂ ವಿದ್ಯಾರ್ಥಿಗಳ ನಡುವೆ ಕಿರಿಕ್ ಆಗಿದೆ. ಈ ಗಲಾಟೆ ತಾರಕ್ಕೇರಿ, ಪರಸ್ಪರ ಹೊಡೆದಾಡಿಕೊಂಡ ಘಟನೆ ಬೀದರ್ ನ ಜಿಎನ್ ಡಿ ಕಾಲೇಜಿನಲ್ಲಿ ನಡೆದಿದೆ. ಬೀದರ್ ನಗರದ ಜಿಎನ್ ಡಿ ಕಾಲೇಜಿನಲ್ಲಿ ಜೈ ಶ್ರೀರಾಮ್ ಹಾಡು ಹಾಕಿದ್ದಕ್ಕೆ ಮುಸ್ಲೀಂ ವಿದ್ಯಾರ್ಥಿಗಳು ತಕರಾರು ತೆಗೆದಿದ್ದಾರೆ. ಈ ವೇಳೆ ಮಾತಿಗೆ ಮಾತು ಬೆಳೆದು ಪರಸ್ಪರ ವಿದ್ಯಾರ್ಥಿಗಳು ಕೈ ಕೈ ಮಿಲಾಯಿಸಿಕೊಂಡಿದ್ದಾರೆ. ಜಿಎನ್ ಡಿ ಕಾಲೇಜಿನ ಕ್ಯಾಂಪಸ್ ಒಳಗಡೆ ಇರುವಂತ ಕಾಲೇಜು ಸಭಾಂಗಣದಲ್ಲಿ ನಡೆದಂತ ಗಲಾಟೆಯ ವೀಡಿಯೋ ಈಗ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಈ ವೀಡಿಯೋ ವೈರಲ್ ಆಗುತ್ತಿದ್ದಂತೆ ಬೀದರ್ ನ ಜಿಎನ್ ಡಿ ಕಾಲೇಜಿನ ಘಟನಾ ಸ್ಥಳಕ್ಕೆ ಸಚಿವ ಈಶ್ವರ್ ಖಂಡ್ರೆ ಭೇಟಿ ನೀಡಿ, ಪರಿಶೀಲನೆ ನಡೆಸಿದರು. ಅಲ್ಲದೇ ಶಾಂತ ರೀತಿಯಿಂದ ವರ್ತಿಸುವಂತೆ ಮನವಿ ಮಾಡಿದರು. ಈ ಬಗ್ಗೆ ಮತ್ತಷ್ಟು ಮಾಹಿತಿ ನಿರೀಕ್ಷಿಸಲಾಗಿದೆ. https://kannadanewsnow.com/kannada/link-pan-with-aadhaar-card-by-may-31-income-tax-department-to-taxpayers/

Read More

ಬೆಂಗಳೂರು: ವಾಲ್ಮೀಕ ಅಭಿವೃದ್ಧಿ ನಿಗಮದ ಅಧೀಕ್ಷಕ ಚಂದ್ರಶೇಖರ್ ಆತ್ಮಹತ್ಯೆ ಪ್ರಕರಣದ ನಂತ್ರ, ರಾಜ್ಯ ಸರ್ಕಾರದ ಹಾಲಿ ವ್ಯವಸ್ಥಾಪಕ ನಿರ್ದೇಶಕ ಹಾಗೂ ಅಕೌಂಟ್ ಆಫೀಸರ್ ಅಮಾನತುಗೊಳಿಸಿ ಆದೇಶಿಸಿದೆ. ಈ ಸಂಬಂಧ ಪರಿಶಿಷ್ಟ ಪಂಗಡಗಡ ಕಲ್ಯಾಣ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ನಡವಳಿ ಹೊರಡಿಸಿದ್ದಾರೆ.  ಅದರಲ್ಲಿ ಜೆ.ಜಿ ಪದ್ಮನಾಭ, ವ್ಯವಸ್ಥಾಪಕ ನಿರ್ದೇಶಕರು, ಕರ್ನಾಟಕ ಮಹರ್ಷಿ ವಾಲ್ಮೀಕ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮ, ಬೆಂಗಳೂರು ಇವರ ವಿರುದ್ಧದ ಆರೋಪಗಳ ಹಿನ್ನಲೆಯಲ್ಲಿ ಇಲಾಖಾ ವಿಚಾರಣೆಯನ್ನು ಕಾಯ್ದಿರಿಸಿ, ಕರ್ನಾಟಕ ನಾಗರೀಕ ಸೇವಾ (ವರ್ಗೀಕರಣ, ನಿಯಂತ್ರಣ ಮತ್ತು ಮೇಲ್ಮನವಿ) ನಿಯಮಗಳು 1957ರ ನಿಯಮ 10(1)(ಡಿ) ರನ್ವಯ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ, ತಕ್ಷಣದಿಂದ ಜಾರಿಗೆ ಬರುವಂತೆ ಅಮಾನತುಗೊಳಿಸಿ ಆದೇಶಿಸಿದ್ದಾರೆ. ಇನ್ನೂ ಅಕೌಂಟ್ ಆಫೀಸರ್ ಆಗಿದ್ದಂತ ಪರಶುರಾಮ್ ಜಿ ದುರ್ಗಣ್ಣನವರ್ ಎಂಬುವರನ್ನು ಇಲಾಖಾ ವಿಚಾರಣೆಯನ್ನು ಕಾಯ್ದಿರಿಸಿ ಈ ತಕ್ಷಣದಿಂದ ಜಾರಿಗೆ ಬರುವಂತೆ ಅಮಾನತುಗೊಳಿಸಿದ್ದಾರೆ. ಅಮಾನತ್ತಿನ ಅವಧಿಯಲ್ಲಿ ಕರ್ನಾಟಕ ನಾಗರೀಕ ಸೇವಾ ನಿಯಮಗಳ ನಿಯಮ-98ರನ್ವಯ ಜೀವನಾಧಾರ ಭತ್ಯೆಯನ್ನು ಪಡೆಯಲು ಅರ್ಹರಿರುತ್ತಾರೆ. ಈ ಅಧಿಕಾರಿಯು ಅಮಾನತ್ತಿನ…

Read More

ಶಿವಮೊಗ್ಗ: ರಾಜ್ಯ ಸರ್ಕಾರಿ ನೌಕರರ ಬಹು ದಿನಗಳ ಬೇಡಿಕೆಯನ್ನು ಈಗಾಗಲೇ ಈಡೇರಿಸೋದಾಗಿ ಚುನಾವಣಾ ಪೂರ್ವ ಪ್ರಣಾಳಿಕೆಯಲ್ಲೇ ಕಾಂಗ್ರೆಸ್ ಪಕ್ಷದಿಂದ ಘೋಷಣೆ ಮಾಡಲಾಗಿದೆ. NPS ರದ್ದುಗೊಳಿಸಿ OPS ಜಾರಿಗೊಳಿಸೋದು ಖಚಿತ. ಇದು ನಮ್ಮ ಕಾಂಗ್ರೆಸ್ ಸರ್ಕಾರದ 6ನೇ ಗ್ಯಾರಂಟಿಯಾಗಿದೆ ಅಂತ ನೈರುತ್ಯ ಶಿಕ್ಷಕರ ಕ್ಷೇತ್ರದ ಅಭ್ಯರ್ಥಿ ಡಾ.ಕೆ.ಕೆ ಮಂಜುನಾಥ್ ಕುಮಾರ್ ಹೇಳಿದ್ದಾರೆ. ಇಂದು ಶಿವಮೊಗ್ಗ ಜಿಲ್ಲೆಯ ಸಾಗರದ ಕಾಂಗ್ರೆಸ್ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದಂತ ಅವರು, ನುಡಿದಂತೆ ನಡೆದ ಸರ್ಕಾರ ನಮ್ಮದಾಗಿದೆ. ನಮ್ಮ ಸರ್ಕಾರದ ಅವಧಿಯಲ್ಲಿ ಘೋಷಿಸಿದಂತೆ ಪಂಚ ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸಲಾಗಿದೆ ಎಂದರು. ರಾಜ್ಯ ಸರ್ಕಾರಿ ನೌಕರರ ಬಹು ದಿನಗಳ ಬೇಡಿಕೆಯಾದ NPS ರದ್ದುಗೊಳಿಸಿ, OPS ಜಾರಿಗೆ ಸಿಎಂ ಸಿದ್ಧರಾಮಯ್ಯ ಅವರು ಕ್ರಮ ವಹಿಸಲಿದ್ದಾರೆ. NPS ರದ್ದುಗೊಳಿಸಿ OPS ಜಾರಿಗೊಳಿಸೋದು ಖಚಿತವಾಗಿದೆ. ಇದು ನಮ್ಮ  6ನೇ ಗ್ಯಾರಂಟಿಯಾಗಿದೆ. ನೈರುತ್ಯ ಶಿಕ್ಷಕರ ಕ್ಷೇತ್ರದ ಮತದಾರರು ತಮಗೆ ಮತನೀಡಿ ಗೆಲ್ಲಿಸುವಂತೆ ಮನವಿ ಮಾಡಿದರು. ಕಾಂಗ್ರೆಸ್ ಸರ್ಕಾರಕ್ಕೆ ಶಿಕ್ಷಕರ ಕಳಕಳಿಯಿದೆ. ಅನುದಾನಿತ ಶಾಲಾ ಶಿಕ್ಷಕರಿಗೆ ಪಿಂಚಣಿ ವ್ಯವಸ್ಥೆಯನ್ನು…

Read More

ನವದೆಹಲಿ: ಭಾರತೀಯ ಹವಾಮಾನ ಇಲಾಖೆಯ (ಐಎಂಡಿ) ಮಾಹಿತಿಯ ಪ್ರಕಾರ, ದೆಹಲಿಯಲ್ಲಿ 52.3 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿದೆ. “ತೀವ್ರ ಶಾಖ-ತರಂಗ ಪರಿಸ್ಥಿತಿಗಳನ್ನು” ವರದಿ ಮಾಡಿದ (ಐಎಂಡಿ) ಬುಧವಾರ ಮಧ್ಯಾಹ್ನ ದೆಹಲಿ ಉಪನಗರ ಮುಂಗೇಶ್ಪುರದಲ್ಲಿ ತಾಪಮಾನವನ್ನು ದಾಖಲಿಸಿದೆ. 2016ರ ಮೇ 19ರಂದು ರಾಜಸ್ಥಾನದ ಫಲೋಡಿ ನಗರದಲ್ಲಿ 51 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿತ್ತು. “ತೀವ್ರ ಶಾಖ-ತರಂಗ ಪರಿಸ್ಥಿತಿಗಳನ್ನು” ವರದಿ ಮಾಡಿದ ಐಎಂಡಿ, ದೆಹಲಿ ಉಪನಗರ ಮುಂಗೇಶ್ಪುರದಲ್ಲಿ ತಾಪಮಾನವನ್ನು ದಾಖಲಿಸಿದೆ, ರಾಷ್ಟ್ರ ರಾಜಧಾನಿಯಲ್ಲಿ ಮೊದಲ ಬಾರಿಗೆ ಹೆಗ್ಗುರುತನ್ನು 50 ಡಿಗ್ರಿ ಸೆಲ್ಸಿಯಸ್ ದಾಟಿದೆ. ಮೇ 17 ರಿಂದ ದೆಹಲಿಯಲ್ಲಿ ತೀವ್ರ ಶಾಖದ ಅಲೆಗಳು ಚಾಲ್ತಿಯಲ್ಲಿವೆ. ಆದಾಗ್ಯೂ, ದೆಹಲಿಯ ಪ್ರತ್ಯೇಕ ಸ್ಥಳಗಳಲ್ಲಿ ಲಘು ಮಳೆ ಅಥವಾ ತುಂತುರು ಮಳೆಯಾಗಲಿದೆ ಎಂದು ಹವಾಮಾನ ಸಂಸ್ಥೆ ಮುನ್ಸೂಚನೆ ನೀಡಿದೆ. ರಾಷ್ಟ್ರ ರಾಜಧಾನಿಯಲ್ಲಿ ಭಾಗಶಃ ಮೋಡ ಕವಿದ ಆಕಾಶ ಮತ್ತು ಹಗಲಿನಲ್ಲಿ 35-45 ಕಿ.ಮೀ ವೇಗದಲ್ಲಿ ಬಲವಾದ ಮೇಲ್ಮೈ ಗಾಳಿಯೊಂದಿಗೆ ಧೂಳು ಬಿರುಗಾಳಿ / ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಮೇ 30 ರಿಂದ…

Read More

ಬೆಂಗಳೂರು: ರಾಜ್ಯ ಸರ್ಕಾರದಿಂದ ಗೃಹಲಕ್ಷ್ಮೀ ಯೋಜನೆ ಹಣ ಬಾರದೇ ಇದ್ದವರಿಗೆ ಮತ್ತೊಂದು ಅಪ್ ಡೇಟ್ ನೀಡಲಾಗಿದೆ. ಅದೇ ಯಜಮಾನಿಯರಿಗೆ ಹಣ ಬಾರದೇ ಇದ್ರೆ, ಈ ಸಮಸ್ಯೆ ನಿವಾರಿಸಿಕೊಳ್ಳುವಂತೆ ಸೂಚಿಸಿದೆ. ಈ ಬಗ್ಗೆ ರಾಜ್ಯ ಸರ್ಕಾರದಿಂದ ಮಾಹಿತಿ ಬಿಡುಗಡೆ ಮಾಡಲಾಗಿದ್ದು, ಗೃಹ ಲಕ್ಷ್ಮೀ ಯೋಜನೆಗೆ ನೋಂದಾಯಿಸಿಕೊಂಡು, ಕೆಲ ಯಜಮಾನಿ ಮಹಿಳೆಯರಿಗೆ ಹಣ ಬಾರದೇ ಇರುವ ಬಗ್ಗೆ ದೂರುಗಳು ಬರುತ್ತಿವೆ. ಈ ಸಮಸ್ಯೆ ನಿವಾರಣೆಗಾಗಿ ಯಜಮಾನಿಯರು ಕೆಲ ತಾಂತ್ರಿಕ ಸಮಸ್ಯೆ ನಿವಾರಿಸಿಕೊಳ್ಳುವಂತೆ ತಿಳಿಸಿದೆ. ಸರ್ಕಾರದ ಗೃಹ ಲಕ್ಷ್ಮೀ ಯೋಜನೆ ರೂ.2000 ಹಣ ಬಾರದಂತ ಯಜಮಾನಿ ಮಹಿಳೆಯರು, ತಪ್ಪದೇ ಕೆವೈಸಿ ಮಾಡಿಸುವಂತೆ ತಿಳಿಸಿದೆ. ಅಲ್ಲದೇ ಬ್ಯಾಂಗ್ ಖಾತೆಗೆ ಆಧಾರ್ ಸಂಖ್ಯೆ ಲಿಂಕ್ ಮಾಡಬೇಕು. ರೇಷನ್ ಕಾರ್ಡ್ ನಲ್ಲಿರೋ ಪ್ರತಿಯೊಬ್ಬ ಸದಸ್ಯರ ಕೆವೈಸಿ ಅಪ್ ಡೇಟ್ ಆಗಿರಬೇಕು ಅಂತ ಹೇಳಿದೆ. ಇನ್ನೂ ರೇಷನ್ ಕಾರ್ಡ್ ಸದಸ್ಯರು ಬ್ಯಾಂಕ್ ಗಳಿಗೆ ತೆರಳಿ ತಮ್ಮ ಆಧಾರ್ ಸಂಖ್ಯೆ ನೀಡಿ, ಕೈವೈಸಿ ಅಪ್ ಡೇಟ್ ಮಾಡಿಸಬೇಕು. ಗೃಹ ಲಕ್ಷ್ಮೀ ಯೋಜನೆಯ ಫಲಾನುಭವಿಗಳು…

Read More

ಬೆಂಗಳೂರು: ಗ್ರಾಮೀಣ ಜನವಸತಿ ಪ್ರದೇಶಗಳಲ್ಲಿ ಸರಬರಾಜಾಗುತ್ತಿರುವ ಕುಡಿಯುವ ನೀರು ಕಲುಷಿತಗೊಳ್ಳುವ ಪ್ರಕರಣಗಳು ಪುನಾರಾವರ್ತನೆಯಾಗುತ್ತಿದ್ದು ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳದೇ ಇರುವ ಅಧಿಕಾರಿಗಳನ್ನು ಹೊಣೆಗಾರರನ್ನಾಗಿಸಿ ಅವರ ವಿರುದ್ಧ ಶಿಸ್ತು ಕ್ರಮ ಜರುಗಿಸಲಾಗುವುದು ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಹಾಗೂ ಮಾಹಿತಿ ತಂತ್ರಜ್ಞಾನ ಸಚಿವ ಪ್ರಿಯಾಂಕ್‌ ಖರ್ಗೆ ಎಚ್ಚರಿಕೆ ನೀಡಿದ್ದಾರೆ. ಜನರ ಆರೋಗ್ಯದ ಮೇಲೆ ದುಷ್ಪರಿಣಾಮ ರಾಜ್ಯದ ಎಲ್ಲಾ ಜಿಲ್ಲಾ ಪಂಚಾಯಿತಿಗಳ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಮತ್ತು ಗ್ರಾಮೀಣ ಕುಡಿಯುವ ನೀರು ಸರಬರಾಜು ಮತ್ತು ನೈರ್ಮಲ್ಯ ಇಲಾಖೆಯ ಎಲ್ಲಾ ಕಾರ್ಯಪಾಲಕ ಅಭಿಯಂತರರಿಗೆ ಸಚಿವರು ಪತ್ರ ಬರೆದು ಗ್ರಾಮೀಣ ಜನವಸತಿ ಪ್ರದೇಶಗಳಿಗೆ ಶುದ್ಧ ಕುಡಿಯುವ ನೀರು ಸರಬರಾಜು ಮಾಡುವುದು ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಮತ್ತು ಆಯಾ ಗ್ರಾಮ ಪಂಚಾಯತಿ ಆದ್ಯ ಜವಾಬ್ದಾರಿಯಾಗಿದ್ದು, ಇತ್ತೀಚಿನ ದಿನಗಳಲ್ಲಿ ರಾಜ್ಯದ ಕೆಲವು ಜಿಲ್ಲೆಗಳ ಗ್ರಾಮೀಣ ಜನವಸತಿ ಪ್ರದೇಶಗಳಲ್ಲಿ ಕಲುಷಿತ ನೀರು ಸೇವನೆಯಿಂದ ಜನರ ಆರೋಗ್ಯದ ಮೇಲೆ ದುಷ್ಪರಿಣಾಮ ಉಂಟಾಗುತ್ತಿರುವುದಲ್ಲದೇ ಪ್ರಾಣಹಾನಿಗಳು ಕೂಡಾ ಸಂಭವಿಸಿರುತ್ತವೆ. ಇಂತಹ ಪ್ರಕರಣಗಳನ್ನು…

Read More

ನವದೆಹಲಿ: ಬಿಹಾರದ ಶೇಖ್ಪುರ ಜಿಲ್ಲೆಯ ಅರಿಯಾರಿ ಬ್ಲಾಕ್ನಲ್ಲಿರುವ ಮಂಕೌಲ್ ಮಿಡಲ್ ಸ್ಕೂಲ್ನಲ್ಲಿ ಇಂದು (ಮೇ 29) ಬೆಳಿಗ್ಗೆ ತೀವ್ರ ಶಾಖದ ಪರಿಸ್ಥಿತಿಗಳಿಂದಾಗಿ ಕನಿಷ್ಠ 50 ವಿದ್ಯಾರ್ಥಿಗಳು ಮೂರ್ಛೆ ತಪ್ಪಿದ್ದಾರೆ. ಆರಂಭದಲ್ಲಿ, ಆರು ವಿದ್ಯಾರ್ಥಿಗಳು ಪ್ರಜ್ಞೆ ಕಳೆದುಕೊಂಡರು, ಆದರೆ ನಂತರ, ಇನ್ನೂ ಅನೇಕ ವಿದ್ಯಾರ್ಥಿಗಳು ಕುಸಿಯಲು ಪ್ರಾರಂಭಿಸಿದರು. ವಿದ್ಯಾರ್ಥಿಗಳು ಪ್ರಾರ್ಥನೆಗಾಗಿ ಸಭೆಗೆ ಹಾಜರಾಗಿ ನಂತರ ತರಗತಿಗೆ ತೆರಳಿದ ನಂತರ ಈ ಘಟನೆ ಪ್ರಾರಂಭವಾಯಿತು. ಇಡೀ ವಿಷಯವು ಶಾಲೆ ಮತ್ತು ಗ್ರಾಮದಲ್ಲಿ ಗೊಂದಲವನ್ನು ಸೃಷ್ಟಿಸಿತು. ಪ್ರಜ್ಞಾಹೀನ ವಿದ್ಯಾರ್ಥಿಗಳಿಗೆ ನೀರು ಮತ್ತು ಎಲೆಕ್ಟ್ರೋಲೈಟ್ಗಳನ್ನು ಒದಗಿಸಲಾಯಿತು ಮತ್ತು ಆಂಬ್ಯುಲೆನ್ಸ್ ಬರದ ಕಾರಣ ಅವರನ್ನು ತಕ್ಷಣ ಬೈಕ್ಗಳು, ಟೆಂಪೊಗಳು ಮತ್ತು ಇ-ರಿಕ್ಷಾಗಳಲ್ಲಿ ಜಿಲ್ಲೆಯ ಸದರ್ ಆಸ್ಪತ್ರೆಗೆ ಕರೆದೊಯ್ಯಲಾಯಿತು. https://twitter.com/ANI/status/1795708511672004634 ಶಾಲಾ ಮುಖ್ಯೋಪಾಧ್ಯಾಯ ಸುರೇಶ್ ಪ್ರಸಾದ್ ಅವರು ಘಟನೆಯ ಬಗ್ಗೆ ಸಾರ್ವಜನಿಕ ಆರೋಗ್ಯ ಇಲಾಖೆಗೆ ಮಾಹಿತಿ ನೀಡಿದರು ಮತ್ತು ಆಂಬ್ಯುಲೆನ್ಸ್ ಅನ್ನು ವಿನಂತಿಸಿದರು. ಆದಾಗ್ಯೂ, ಆಂಬ್ಯುಲೆನ್ಸ್ ತಡವಾಗಿ ಬಂದಿದ್ದರಿಂದ ಗ್ರಾಮಸ್ಥರು ಆಕ್ರೋಶಗೊಂಡರು, ನಂತರ ಅವರು ರಸ್ತೆಯನ್ನು ನಿರ್ಬಂಧಿಸಿ ಆಡಳಿತದ ವಿರುದ್ಧ…

Read More

ಬೆಂಗಳೂರು: ಸಂಸದ ಪ್ರಜ್ವಲ್ ರೇವಣ್ಣ ಅವರು ತಮ್ಮ ವಿರುದ್ಧದ ಮೂರು ಪ್ರಕರಣಗಳಲ್ಲಿ ನಿರೀಕ್ಷಣಾ ಜಾಮೀನು ಕೋರಿ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯ ವಿಚಾರಣೆಯನ್ನು ಮೇ.31ಕ್ಕೆ ಕೋರ್ಟ್ ಮುಂದೂಡಿದೆ. ಅಶ್ಲೀಲ ವೀಡಿಯೋ ಕೇಸ್ ನಂತ್ರ ಸಂಸದ ಪ್ರಜ್ವಲ್ ರೇವಣ್ಣ ವಿದೇಶಕ್ಕೆ ಹಾರಿ ತಲೆ ಮರೆಸಿಕೊಂಡಿದ್ದಾರೆ. ಅವರ ಬಂಧನಕ್ಕೆ ಎಸ್ಐಟಿ ವಾರೆಂಟ್ ಕೂಡ ಪಡೆದಿದೆ. ಇದರ ನಡುವೆ ವಿದೇಶದಿಂದಲೇ ತಮ್ಮ ವಕೀಲರ ಮೂಲಕ ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ನಿರೀಕ್ಷಣಾ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು. ಇಂದು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ವಿಚಾರಣೆ ಕೈಗೆತ್ತಿಕೊಂಡ ನಂತ್ರ, ಜಾಮೀನು ಅರ್ಜಿಯ ವಿಚಾರಣೆಯನ್ನು ಮೇ.31ಕ್ಕೆ ಮುಂದೂಡಿದೆ. ಮೇ.3ಕ್ಕೆ ಬೆಂಗಳೂರಿಗೆ ಪ್ರಜ್ವಲ್ ಬರುತ್ತಿದ್ದಾರೆ. ಅಂದೇ ವಿಚಾರಣೆ ನಡೆಸೋದಕ್ಕೆ ಅವಕಾಶ ನೀಡುವಂತೆ ಪ್ರಜ್ವಲ್ ಪರ ವಕೀಲರು ಮನವಿ ಮಾಡಿದ್ದರು. ಈ ಹಿನ್ನಲೆಯಲ್ಲಿ ಎಸ್ಐಟಿಗೆ ನೋಟಿಸ್ ಜಾರಿಗೊಳಿಸಿ, ವಿಚಾರಣೆಯನ್ನು ಮೇ.31ಕ್ಕೆ ಮುಂದೂಡಿಕೆ ಮಾಡಿದೆ. https://kannadanewsnow.com/kannada/woman-abduction-case-court-reserves-order-on-bhavani-revannas-bail-plea-on-may-31/ https://kannadanewsnow.com/kannada/link-pan-with-aadhaar-card-by-may-31-income-tax-department-to-taxpayers/

Read More