Subscribe to Updates
Get the latest creative news from FooBar about art, design and business.
Author: kannadanewsnow09
ಬೆಂಗಳೂರು: ರಾಜ್ಯದಲ್ಲಿ ಲೋಕಸಭಾ ಚುನಾವಣೆಯ ಎರಡು ಹಂತದ ಮತದಾನ ಮುಕ್ತಾಯಗೊಂಡಿದೆ. ಇನ್ನೂ ಜೂನ್.4ರಂದು ಫಲಿತಾಂಶ ಪ್ರಕಟಗೊಳ್ಳುವುದೊಂದೇ ಬಾಕಿ ಇದೆ. ಈಗ ಲೋಕಸಭಾ ಚುನಾವಣಾ ನೀತಿ ಸಂಹಿತೆ ಮುಗಿಯುತ್ತಿದ್ದಂತೆ, ಸಿಎಂ ಸಿದ್ಧರಾಮಯ್ಯ 7ನೇ ವೇತನ ಆಯೋಗ ಜಾರಿಗೆ ಒಲವು ತೋರಿದ್ದಾರೆ ಎನ್ನಲಾಗಿದೆ. ಹೀಗಾಗಿ ರಾಜ್ಯ ಸರ್ಕಾರಿ ನೌಕರರಿಗೆ ಸದ್ಯದಲ್ಲೇ ಸಿಹಿಸುದ್ದಿ ಹೊರಬೀಳಲಿದೆ. ಹೌದು ಲೋಕಸಭಾ ಚುನಾವಣೆ ಫಲಿತಾಂಶ ಪ್ರಕಟಗೊಂಡು, ಕರ್ನಾಟಕದಲ್ಲಿ ಮಾದರಿ ನೀತಿ ಸಂಹಿತೆ ಸಡಿಲಿಕೆಯಾಗುತ್ತಿದ್ದಂತೆ, ರಾಜ್ಯ ಸರ್ಕಾರಿ ನೌಕರರ ಬಹುದಿನಗಳ ಬೇಡಿಕೆ ಈಡೇರಿಕೆಗೆ ಸಿಎಂ ಸಿದ್ಧರಾಮಯ್ಯ ಒಲವು ತೋರಿದ್ದಾರೆ ಎಂಬುದಾಗಿ ಹೇಳಲಾಗುತ್ತಿದೆ. ರಾಜ್ಯ ಸರ್ಕಾರಿ ನೌಕರರಿಗೆ ವೇತನ ಪರಿಷ್ಕರಣೆ ಸಂಬಂಧದ 7ನೇ ವೇತನ ಆಯೋಗದ ಶಿಫಾರಸ್ಸುಗಳನ್ನು ಅನುಷ್ಠಾನಗೊಳಿಸಲು ಸರ್ಕಾರ ಮುಂದಾಗಿದೆ. ಸರ್ಕಾರದ ನಿವೃತ್ತ ಮುಖ್ಯ ಕಾರ್ಯದರ್ಶಿ ಸುಧಾಕರ್ ರಾವ್ ನೇತೃತ್ವದ ಸಮಿತಿ ನೀಡಿರುವಂತ 7ನೇ ವೇತನ ಆಯೋಗದ ಶಿಫಾರಸ್ಸುಗಳನ್ನು ಲೋಕಸಭಾ ಚುನಾವಣೆ ನೀತಿ ಸಂಹಿತೆ ಮುಕ್ತಾಯಗೊಂಡ ನಂತ್ರ ಜಾರಿಗೊಳಿಸೋದಕ್ಕೆ ಸಿಎಂ ಸಿದ್ಧರಾಮಯ್ಯ ಕ್ರಮವಹಿಸಲಿದ್ದಾರೆ ಎನ್ನಲಾಗುತ್ತಿದೆ. ಅಂದಹಾಗೇ ರಾಜ್ಯ ಸರ್ಕಾರಿ ನೌಕರರು 7ನೇ…
ಮಂಡ್ಯ: ಇಂದು ಪ್ರಕಟವಾದಂತ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಪಾಸ್ ಆಗಿದ್ದರೂ, ತಾನು ಫೇಲ್ ಆಗಿದ್ದೇನೆ ಎಂಬುದಾಗಿ ಭಾವಿಸಿದಂತ ವಿದ್ಯಾರ್ಥಿನಿಯೊಬ್ಬಳು, ಆತ್ಮಹತ್ಯೆ ಮಾಡಿಕೊಂಡಿರುವಂತ ಘಟನೆ ಮಂಡ್ಯದ ಹುಲಿಗೆಪುರ ಗ್ರಾಮದಲ್ಲಿ ನಡೆದಿದೆ. ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಹುಲಿಗೆಪುರ ಗ್ರಾಮದ ಹೆಚ್.ಎಂ ಅಮೃತ(15) ಇಂದು ಪ್ರಕಟವಾದಂತ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ 625ಕ್ಕೆ 353 ಅಂಕವನ್ನು ಪಡೆದಿದ್ದರು. ಶೇ.57ರಷ್ಟು ಫಲಿತಾಂಶ ಆಕೆಗೆ ಬಂದಿತ್ತು. ಆದ್ರೇ ಪಾಸ್ ಆಗಿದ್ದರೂ, ಫೇಲ್ ಆಗಿದ್ದೇನೆ ಎಂಬುದಾಗಿ ಮನನೊಂದು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಅಂದಹಾಗೆ ನಗರಕೆರೆ ಗ್ರಾಮದ ಪೂರ್ಣಿಮಾ ಪ್ರೌಢಶಾಲೆಯಲ್ಲಿ ಓದುತ್ತಿದ್ದಂತ ಅಮೃತ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಕಡಿಮೆ ಅಂಕ ಬಂದಿದ್ದಕ್ಕೆ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂಬುದಾಗಿಯೂ ಹೇಳಲಾಗುತ್ತಿದೆ. ಮನೆಯಲ್ಲಿ ಯಾರು ಇಲ್ಲದ ವೇಳೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ ಎನ್ನಲಾಗುತ್ತಿದೆ. ಈ ಬಗ್ಗೆ ಮದ್ದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ವಿದ್ಯಾರ್ಥಿಗಳು ದುಡುಕಿನ ನಿರ್ಧಾರ ಮಾಡ್ಬೇಡಿ. ಇದು ನಮ್ಮ ಕಳಕಳಿ…
ಬೆಂಗಳೂರು: ಇಂದು ಮಹಿಳೆ ಕಿಡ್ನ್ಯಾಪ್ ಪ್ರಕರಣದಲ್ಲಿ ಮಾಜಿ ಸಚಿವ ಹೆಚ್.ಡಿ ರೇವಣ್ಣ ಸಲ್ಲಿಸಿದ್ದಂತ ಜಾಮೀನು ಅರ್ಜಿಯ ವಿಚಾರಣೆಯನ್ನು ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯ ನಡೆಸಿತು. ವಾದ-ಪ್ರತಿವಾದ ಆಲಿಸಿದಂತ ನ್ಯಾಯಪೀಠವು, ಸೋಮವಾರದ ಬೆಳಿಗ್ಗೆ 11.30ಕ್ಕೆ ಮುಂದೂಡಿಕೆ ಮಾಡಿದೆ. ಹೀಗಾಗಿ ನ್ಯಾಯಾಂಗ ಬಂಧನದಲ್ಲಿರುವಂತ ಅವರಿಗೆ 3 ದಿನ ಜೈಲೇ ಗತಿಯಾದಂತೆ ಆಗಿದೆ. ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ಇಂದು ಮಾಜಿ ಸಚಿವ ಹೆಚ್.ಡಿ ರೇವಣ್ಣ ಸಲ್ಲಿಸಿದ್ದಂತ ಜಾಮೀನು ಅರ್ಜಿಯ ವಿಚಾರಣೆ ಕೈಗೆತ್ತಿಕೊಳ್ಳಲಾಗಿದೆ. ಮಹಿಳೆ ಕಿಡ್ನ್ಯಾಪ್ ಪ್ರಕರಣದ ವಿಚಾರಣೆ ಆರಂಭವಾಗುತ್ತಿದ್ದಂತೆ, ಹೆಚ್.ಡಿ ರೇವಣ್ಣಗೆ ಸದ್ಯಕ್ಕೆ ಜಾಮೀನು ನೀಡದಂತೆ ಎಸ್ಐಟಿ ಪರ ಎಸ್ ಪಿಪಿ ಅವರು ಆಕ್ಷೇಪಣೆ ಸಲ್ಲಿಸಿದ್ದಾರೆ. ಕೋರ್ಟ್ ಮುಂದೆ ಎಸ್ಐಟಿಯ ಎಸ್ ಪಿಪಿ ಜಾಯ್ನಾ ಕೋಥಾರಿ ಅವರು ವಾದ ಮಂಡಿಸಿ, ಜಾಮೀನು ಅರ್ಜಿಗೆ ನಾವು ಆಕ್ಷೇಪಣೆ ಸಲ್ಲಿಸುತ್ತಿರುವುದರ ಹಿಂದೆ ವಿಳಂಪದ ಉದ್ದೇಶವಿಲ್ಲ. ನಮ್ಮ ವಾದ ಮಂಡನೆಗೆ ಕಾಲಾವಕಾಶ ನೀಡಬೇಕು ಎಂಬುದಾಗಿ ಕೋರಿದರು. ಈ ವೇಳೆ ನ್ಯಾಯಪೀಠವು ಜಾಮೀನು ಅರ್ಜಿ ವಿಚಾರಣೆಗೆ ಕಾಲಾವಕಾಶ ನೀಡುವುದಿಲ್ಲ. ಬೇರೆ ಪ್ರಕರಣಗಳಲ್ಲಿ…
ಬೆಂಗಳೂರು: ನಗರದ ಬಿಬಿಎಂಪಿ ವ್ಯಾಪ್ತಿಯ ಶಾಲೆಗಳಲ್ಲಿ ಎಸ್.ಎಸ್.ಎಲ್.ಸಿ. ವಾರ್ಷಿಕ ಪರೀಕ್ಷೆಯಲ್ಲಿ ಶೇ. 68.73% ಫಲಿತಾಂಶ ಬಂದಿದೆ. ಈ ಕುರಿತಂತೆ ಪತ್ರಿಕಾ ಪ್ರಕಟಣೆಯಲ್ಲಿ ಬಿಬಿಎಂಪಿ ಮಾಹಿತಿ ನೀಡಿದ್ದು, 2023-24ನೇ ಶೈಕ್ಷಣಿಕ ಸಾಲಿನಲ್ಲಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಶಿಕ್ಷಣ ಇಲಾಖೆಯಲ್ಲಿ 33 ಪ್ರೌಢಶಾಲೆಗಳಲ್ಲಿನ ವಿದ್ಯಾರ್ಥಿಗಳು ಎಸ್.ಎಸ್.ಎಲ್.ಸಿ. ವಾರ್ಷಿಕ ಪರೀಕ್ಷೆಯನ್ನು ತೆಗೆದುಕೊಂಡಿದ್ದು, ಒಟ್ಟು 2501 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿ 1719 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು, ಶೇಕಡ 68.73% ರಷ್ಟು ಫಲಿತಾಂಶ ಬಂದಿರುತ್ತದೆ ಎಂದಿದೆ. ಬಿಬಿಎಂಪಿ ಮತ್ತಿಕೆರೆ ಬಾಲಕಿಯರ ಪ್ರೌಢಶಾಲೆಯು ಶೇ. 92.78 ಫಲಿತಾಂಶವನ್ನು ನೀಡಿ ಅಗ್ರಸ್ಥಾನ ಪಡೆದು ಪಾಲಿಕೆಗೆ ಕೀರ್ತಿ ತಂದಿದ್ದಾರೆ. ಬಿಬಿಎಂಪಿ ಭೈರವೇಶ್ವರ ನಗರ ಪ್ರೌಢಶಾಲೆಯು ಶೇ. 91.98 ಫಲಿತಾಂಶವನ್ನು ನೀಡಿ ಎರಡನೇ ಸ್ಥಾನವನ್ನು ಪಡೆದಿದೆ. ಬಿ.ಬಿ.ಎಂ.ಪಿ. ಹೇರೋಹಳ್ಳಿ ಪ್ರೌಢಶಾಲೆಯು ಶೇ. 90.56 ಫಲಿತಾಂಶವನ್ನು ನೀಡಿ ಮೂರನೇ ಸ್ಥಾನವನ್ನು ಪಡೆದಿದೆ ಎಂದಿದೆ. 2023-24ನೇ ಸಾಲಿನಲ್ಲಿ ಒಟ್ಟು 66 ವಿದ್ಯಾರ್ಥಿಗಳು ಶೇ. 85 ಕ್ಕಿಂತ ಹೆಚ್ಚು ಅಂಕ ಪಡೆದು ಅತ್ಯುನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿರುತ್ತಾರೆ. ಶ್ರೀರಾಂಪುರ ಬಾಲಕಿಯರ ಪ್ರೌಢಶಾಲೆಯ ಕು||…
ನವದೆಹಲಿ: ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಅಶ್ಲೀಲ ವೀಡಿಯೋ ಪ್ರಕರಣ ಸಂಬಂಧ ಸಂತ್ರಸ್ತ ಮಹಿಳೆಗೆ ಅವರ ವಿರುದ್ಧ ದೂರು ನೀಡಲು ಒತ್ತಡ ಹಾಕಲಾಗಿದೆ ಎಂಬುದಾಗಿ ರಾಷ್ಟ್ರೀಯ ಮಹಿಳಾ ಆಯೋಗವು ಸ್ಪೋಟಕ ಹೇಳಿಕೆ ನೀಡಿದೆ. ಇಂದು ಪತ್ರಿಕಾ ಪ್ರಕಟಣೆಯಲ್ಲಿ ತನ್ನ ಹೇಳಿಕೆ ಬಿಡುಗಡೆ ಮಾಡಿರುವಂತ ರಾಷ್ಟ್ರೀಯ ಮಹಿಳಾ ಆಯೋಗವು, ಪ್ರಜ್ವಲ್ ರೇವಣ್ಣ ವಿರುದ್ಧ ಸುಳ್ಳು ದೂರು ನೀಡಲು ಮಹಿಳೆಯ ಮೇಲೆ ಒತ್ತಡ ಹೇರಲಾಗಿದೆ. ಒತ್ತಡ ಹಾಕಿ ಸಂತ್ರಸ್ತ ಮಹಿಳೆಯಿಂದ ದೂರು ಕೊಡಿಸಲಾಗಿದೆ ಎಂಬುದಾಗಿ ಸ್ಪೋಟಕ ಹೇಳಿಕೆ ನೀಡಿದೆ. ರಾಷ್ಟ್ರೀಯ ಮಹಿಳಾ ಆಯೋಗಕ್ಕೆ ಸಂತ್ರಸ್ತೆ ದೂರು ನೀಡಿರುವುದಾಗಿ ಮಾಹಿತಿ ನೀಡಿದ್ದೂ, ಪ್ರಕರಣ ಸಂಬಂಧ ತನಿಖೆ ನಡೆಸೋದಕ್ಕೆ ವಿಶೇಷ ತಂಡ ರಚನೆ ಮಾಡಲಾಗಿದೆ ಎಂಬುದಾಗಿ ಪ್ರಜ್ವಲ್ ರೇವಣ್ಣ ವಿರುದ್ಧದ ಅಶ್ಲೀಲ ವೀಡಿಯೋ ಪ್ರಕರಣ ಸಂಬಂಧ ರಾಷ್ಟ್ರೀಯ ಮಹಿಳಾ ಆಯೋಗ ಈ ಹೇಳಿಕೆ ಬಿಡುಗಡೆ ಮಾಡಿದೆ. https://kannadanewsnow.com/kannada/student-commits-suicide-by-hanging-himself-after-failing-sslc-exam-in-mandya/ https://kannadanewsnow.com/kannada/no-one-stopped-kumaraswamy-from-fighting-in-pen-drive-case-dk-shivakumar/
ಮಂಡ್ಯ: ಇಂದು ಎಸ್ ಎಸ್ ಎಲ್ ಸಿ ಪರೀಕ್ಷೆಯ ಫಲಿತಾಂಶ ಪ್ರಕಟಗೊಂಡಿದೆ. ಕೆಲ ವಿದ್ಯಾರ್ಥಿಗಳು ಹೆಚ್ಚು ಅಂಕ ಗಳಿಸಿದ್ರೆ, ಮತ್ತೆ ಕೆಲವರು ಕಡಿಮೆ ಅಂಕ ಗಳಿಸಿದ್ದಾರೆ. ಇನ್ನೂ ಕೆಲವರು ಕಡಿಮೆ ಅಂಕ ಬಂದಿದೆ ಅಂತ ಬೇಜಾರಲ್ಲಿ ಇದ್ದೀರಿ. ಆದ್ರೇ ಯಾವುದೇ ಕಾರಣಕ್ಕೂ ದುಡುಕಿನ ನಿರ್ಧಾರ ಮಾಡಬೇಡಿ. ಮುಂದೆ ನಿಮ್ಗೆ ಎರಡು ಪರೀಕ್ಷೆಗಳು ಸಿಕ್ತಾವೆ. ಬರೆದು ಉತ್ತಮ ಅಂಕಗಳಿಸಿ. ಹೌದು ವಿದ್ಯಾರ್ಥಿಗಳೇ. ದುಡುಕಿನ ನಿರ್ಧಾರ ಮಾಡಬೇಡಿ. ಹೀಗೆ ದುಡಿಕಿನ ನಿರ್ಧಾರ ಮಾಡಿದಂತ ವಿದ್ಯಾರ್ಥಿಯೊಬ್ಬ, ಮಂಡ್ಯದಲ್ಲಿ ಅನುತ್ತೀರ್ಣ ಆಗಿದ್ದಕ್ಕೆ, ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ. ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಕೊಪ್ಪ ಹೋಬಳಿಯ ತಗ್ಗಹಳ್ಳಿಯಲ್ಲಿ ಇಂತದ್ದೊಂದು ಘಟನೆ ನಡೆದಿದೆ. ಇಂದಿನ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಅನುತ್ತೀರ್ಣನಾದೆ ಎನ್ನುವ ಕಾರಣಕ್ಕಾಗಿ ಲಿಖಿತ್(15) ಎಂಬಾತ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ. ಶಾಲೆಯ ಬಳಿಗೆ ಎಸ್ ಎಸ್ ಎಲ್ ಸಿ ಪರೀಕ್ಷೆ ಫಲಿತಾಂಶ ನೋಡೋದಕ್ಕೆ ಹೋಗಿದ್ದನು. ಎರಡು ವಿಷಯಗಳಲ್ಲಿ ಅನುತ್ತೀರ್ಣನಾಗಿದ್ದಂತ ವಿಷಯವನ್ನು ಶಿಕ್ಷಕರು ತಿಳಿಸಿದ್ದಾರೆ. ಇದರಿಂದ ಮನನೊಂದು…
ಮಂಡ್ಯ: ಜಿಲ್ಲೆಯಲ್ಲಿ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಪಾಸಾಗಿದ್ದರೂ ಸಹ ಕಡಿಮೆ ಅಂಕ ಬಂದಿದೆ ಎಂದು ಮನನೊಂದು ವಿಧ್ಯಾರ್ಥಿನಿಯೊಬ್ಬಳು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಜರುಗಿದೆ. ಮದ್ದೂರು ತಾಲೂಕಿನ ಹುಲಿಗೆರೆಪುರ ಗ್ರಾಮದ ದಂಪತಿ ಮಂಚೇಗೌಡ ಭಾನುಮತಿ ಪುತ್ರಿ, ಅಮೃತ 15 ಗುರುವಾರ ಮಧ್ಯಾಹ್ನ ತನ್ನ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ನಗರಕೆರೆ ಗ್ರಾಮದ ಪೂರ್ಣಿಮಾ ಫ್ರೌಡಶಾಲೆಯ ವಿಧ್ಯಾರ್ಥಿನಿ ಅಮೃತ ಎಸ್ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಪಾಸಾಗಿದ್ದರೂ ಸಹ ಕಡಿಮೆ ಅಂಕ ಬಂದಿದೆ ಎಂದು ಮನನೊಂದು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಜರುಗಿದೆ. ವಿದ್ಯಾರ್ಥಿಗಳು ದುಡುಕಿನ ನಿರ್ಧಾರ ಮಾಡ್ಬೇಡಿ. ಇದು ನಮ್ಮ ಕಳಕಳಿ ವಿದ್ಯಾರ್ಥಿಗಳೇ ಕಡಿಮೆ ಅಂಕ ಬರಲೀ, ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಫೇಲ್ ಆಗಿರಿ. ಯಾವುದೇ ಕಾರಣಕ್ಕೂ ಇಂತಹ ದುಡುಕಿನ ನಿರ್ಧಾರ ಮಾಡಬೇಡಿ. ಇನ್ನೂ ಎಸ್ ಎಸ್ ಎಲ್ ಸಿ ಪರೀಕ್ಷೆ-2, 3 ಇದ್ದಾವೆ. ಕುಳಿತು ಚೆನ್ನಾಗಿ ಓದಿ ಬರೆಯಿರಿ. ಹೆಚ್ಚು ಅಂಕ ಬರ್ತಾವೆ, ಫೇಲ್ ಆಗಿದ್ರೂ ನೀವು ಪಾಸ್ ಆಗೋದು ಗ್ಯಾರಂಟಿ. ವರದಿ: ಗಿರೀಶ್…
ಸೆನೆಗಲ್: 85 ಪ್ರಯಾಣಿಕರನ್ನು ಹೊತ್ತ ಬೋಯಿಂಗ್ 737 ವಿಮಾನವು ಸೆನೆಗಲ್ ರಾಜಧಾನಿ ಡಕಾರ್ ವಿಮಾನ ನಿಲ್ದಾಣದಲ್ಲಿ ರನ್ವೇಯಿಂದ ಜಾರಿದ ಪರಿಣಾಮ 10 ಜನರು ಗಾಯಗೊಂಡಿದ್ದಾರೆ ಎಂದು ದೇಶದ ಸಾರಿಗೆ ಸಚಿವರು ಗುರುವಾರ ಹೇಳಿಕೆಯಲ್ಲಿ ತಿಳಿಸಿದ್ದಾರೆ. ಟ್ರಾನ್ಸ್ ಏರ್ ನಿರ್ವಹಿಸುವ ಏರ್ ಸೆನೆಗಲ್ ವಿಮಾನವು ಬುಧವಾರ ತಡರಾತ್ರಿ 79 ಪ್ರಯಾಣಿಕರು, ಇಬ್ಬರು ಪೈಲಟ್ ಗಳು ಮತ್ತು ನಾಲ್ಕು ಕ್ಯಾಬಿನ್ ಸಿಬ್ಬಂದಿಯನ್ನು ಹೊತ್ತು ಬಮಾಕೊಗೆ ತೆರಳುತ್ತಿತ್ತು ಎಂದು ಸಾರಿಗೆ ಸಚಿವ ಎಲ್ ಮಲಿಕ್ ಎನ್ಡಿಯಾಯೆ ತಿಳಿಸಿದ್ದಾರೆ. ಗಾಯಗೊಂಡವರಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು, ಉಳಿದವರನ್ನು ವಿಶ್ರಾಂತಿಗಾಗಿ ಹೋಟೆಲ್ ಗೆ ಕರೆದೊಯ್ಯಲಾಗಿದೆ. ಇತರ ಯಾವುದೇ ವಿವರಗಳು ತಕ್ಷಣ ಲಭ್ಯವಿಲ್ಲ. ಇದೊಂದು ಬ್ರೇಕಿಂಗ್ ಸ್ಟೋರಿ. ಹೆಚ್ಚಿನ ವಿವರಗಳನ್ನು ಸೇರಿಸಲಾಗುವುದು. https://kannadanewsnow.com/kannada/sslc-exams-10-drop-in-results-this-year-as-compared-to-last-year/ https://kannadanewsnow.com/kannada/no-one-stopped-kumaraswamy-from-fighting-in-pen-drive-case-dk-shivakumar/
ಹಾಸನ: ಅಶ್ಲೀಲ ವೀಡಿಯೋ ಪ್ರಕರಣದಲ್ಲಿ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಈ ದೇಶದಿಂದಲೇ ಗಡಿಪಾರು ಮಾಡುವಂತೆ ಶಾಸಕಿ ನಯನಾ ಮೋಟಮ್ಮ ಆಗ್ರಹಿಸಿದ್ದಾರೆ. ಇಂದು ಹಾಸನ ಜಿಲ್ಲೆಯ ಬೇಲೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಸಂಸದ ಪ್ರಜ್ವಲ್ ರೇವಣ್ಣ ಪ್ರಕರಣ ದೇಶವೇ ತಲೆತಗ್ಗಿಸುವಂತ ಕೇಸ್ ಆಗಿದೆ. ಈ ಪ್ರಕರಣದಲ್ಲಿ ಸಂತ್ರಸ್ತೆಯರಾದಂತ ಮಹಿಳೆಯರಿಗೆ ಸಾಂತ್ವಾನ, ಆತ್ಮಸ್ಥೈರ್ಯ ತುಂಬುವಂತ ಕೆಲಸ ಮಾಡಬೇಕಿದೆ ಎಂದರು. ಪ್ರಜ್ವಲ್ ರೇವಣ್ಣ ಅಶ್ಲೀಲ ವೀಡಿಯೋ ಪ್ರಕರಣದಲ್ಲಿ ಯಾರೇ ಬಲಾಢ್ಯರಾದರೂ ಸಹ ಅವರಿಗೆ ತಕ್ಕ ಶಾಸ್ತಿಯಾಗಲೇ ಬೇಕು. ಸುಸಂಸ್ಕೃತ ರಾಜಕಾರಣಿಯವರ ಕುಟುಂಬದಿಂದ ಬಂದಿರುವಂತ ಇಂತಹ ಪ್ರಜ್ವಲ್ ರೇವಣ್ಣ ಸಂಸದರಾಗಿರೋದಕ್ಕೆ ಯೋಗ್ಯತೆನೇ ಇಲ್ಲ ಎಂಬುದಾಗಿ ವಾಗ್ಧಾಳಿ ನಡೆಸಿದರು. ಸಂಸದ ಪ್ರಜ್ವಲ್ ರೇವಣ್ಣ ಮಾಡಿರೋದು ಇಡೀ ಸಮಾಜವೇ ತಲೆ ತಗ್ಗಿಸುವಂತ ಕೆಲಸವಾಗಿದೆ. ಇಂತಹವರಿಗೆ ಕಠಿಣ ಶಿಕ್ಷೆಯಾಗಬೇಕು. ಅಲ್ಲದೇ ಈ ದೇಶದಿಂದಲೇ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಗಡಿಪಾರು ಮಾಡಬೇಕು ಎಂಬುದಾಗಿ ಆಗ್ರಹಿಸಿದರು. https://kannadanewsnow.com/kannada/sslc-exams-10-drop-in-results-this-year-as-compared-to-last-year/ https://kannadanewsnow.com/kannada/no-one-stopped-kumaraswamy-from-fighting-in-pen-drive-case-dk-shivakumar/
ಬೆಂಗಳೂರು: ರಾಜ್ಯದಲ್ಲಿ ಈ ವರ್ಷ ಎಸ್ಎಸ್ಎಲ್ಸಿ ಪರೀಕ್ಷೆ -1ರ ಫಲಿತಾಂಶವು ಶೇಕಡಾ 10.49 ರಷ್ಟು ಕುಸಿದಿದೆ. ಇದರ ನಡುವೆ ಶೇ.73.40ರಷ್ಟು ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ. ಇಂದು ಕರ್ನಾಟಕ ಶಾಲಾ ಪರೀಕ್ಷಾ ಮತ್ತು ಮೌಲ್ಯಮಾಪನ ಮಂಡಳಿಯು ಫಲಿತಾಂಶವನ್ನು ಪ್ರಕಟಿಸಿದ್ದು, ಒಟ್ಟಾರೆ ತೇರ್ಗಡೆ ಪ್ರಮಾಣ 73.40 ರಷ್ಟಿದೆ. 2022-23ನೇ ಸಾಲಿನಲ್ಲಿ ಶೇ.83.89ರಷ್ಟು ಫಲಿತಾಂಶ ಬಂದಿತ್ತು. ವಿದ್ಯಾರ್ಥಿಗಳು ಎಸ್ ಎಸ್ ಎಲ್ ಸಿ ಫಲಿತಾಂಶವನ್ನು https://kseab.karnataka.gov.in ಲಿಂಕ್ ನಲ್ಲಿ ನೋಡಬಹುದಾಗಿದೆ. ಮಂಡಳಿಯು ನೋಂದಾಯಿತ ಮೊಬೈಲ್ ಸಂಖ್ಯೆಗಳಲ್ಲಿ ವಿದ್ಯಾರ್ಥಿಗಳಿಗೆ ಫಲಿತಾಂಶಗಳನ್ನು ಕಳುಹಿಸುತ್ತದೆ. ಇದನ್ನು ಇಂದು ಶಾಲೆಗಳಲ್ಲಿ ಪ್ರದರ್ಶಿಸಲಾಗುವುದು. ಪರೀಕ್ಷೆಗೆ ಹಾಜರಾದ ಒಟ್ಟು 8,59,967 ವಿದ್ಯಾರ್ಥಿಗಳಲ್ಲಿ 6,31,204 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಮುಧೋಳದ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಅಂಕಿತಾ ಬಸಪ್ಪ ಕೊಣ್ಣೂರ 625ಕ್ಕೆ 625 ಅಂಕಗಳನ್ನು ಗಳಿಸಿ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿದ್ದಾರೆ. ಏಳು ವಿದ್ಯಾರ್ಥಿಗಳು ದ್ವಿತೀಯ ಸ್ಥಾನ ಹಂಚಿಕೊಂಡಿದ್ದಾರೆ. ಉಡುಪಿ ಜಿಲ್ಲೆ ಶೇ.94ರಷ್ಟು ಫಲಿತಾಂಶದೊಂದಿಗೆ ರಾಜ್ಯಕ್ಕೆ ಮೊದಲ ಸ್ಥಾನದಲ್ಲಿದ್ದರೆ, ದಕ್ಷಿಣ ಕನ್ನಡ, ಶಿವಮೊಗ್ಗ, ಕೊಡಗು ಮತ್ತು ಉತ್ತರ ಕನ್ನಡ ಜಿಲ್ಲೆಗಳು…