Subscribe to Updates
Get the latest creative news from FooBar about art, design and business.
Author: kannadanewsnow09
ಬೆಂಗಳೂರು: ಮಹಿಳೆ ಕಿಡ್ನ್ಯಾಪ್ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿದ್ದಂತ ಮಾಜಿ ಸಚಿವ ಹೆಚ್.ಡಿ ರೇವಣ್ಣಗೆ, ಕೋರ್ಟ್ ಇಂದು 7 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿತ್ತು. ಅವರನ್ನು ಪರಪ್ಪನ ಅಗ್ರಹಾರ ಸೆಂಟ್ರಲ್ ಜೈಲಿಗೆ ಪೊಲೀಸರು ಶಿಫ್ಟ್ ಮಾಡಿದ್ದರು. ಈಗ ಕೇಂದ್ರ ಕಾರಾಗೃಹದಲ್ಲಿರುವಂತ ಮಾಜಿ ಸಚಿವ ಹೆಚ್.ಡಿ ರೇವಣ್ಣ ಖೈದಿ ನಂ.4567 ಆಗಿದ್ದಾರೆ. ಸಂಸದ ಪ್ರಜ್ವಲ್ ರೇವಣ್ಣ ಅವರ ಅಶ್ಲೀಲ ವೀಡಿಯೋದಲ್ಲಿ ಸಂತ್ರಸ್ತೆಯಾಗಿದ್ದಂತ ಮಹಿಳೆಯೊಬ್ಬರನ್ನು ಮಾಜಿ ಸಚಿವ ಹೆಚ್.ಡಿ ರೇವಣ್ಣ ಕಿಡ್ನ್ಯಾಪ್ ಮಾಡಿಸಿದ್ದಾರೆ ಎಂಬುದಾಗಿ ಹೊಳೆನರಸೀಪುರ ಪೊಲೀಸ್ ಠಾಣೆಯಲ್ಲಿ ಅವರ ಮಗ ದೂರು ನೀಡಿದ್ದರು. ಈ ದೂರಿನ ಹಿನ್ನಲೆಯಲ್ಲಿ ಹೆಚ್.ಡಿ ರೇವಣ್ಣ ವಿರುದ್ಧ ಅಪಹರಣ ಪ್ರಕರಣ ದಾಖಲಾಗಿತ್ತು. ಈ ಕೇಸ್ ನಲ್ಲಿ ಜಾಮೀನು ಅರ್ಜಿ ಸಲ್ಲಿಸಿದ್ರೂ, ಕೋರ್ಟ್ ವಜಾಗೊಳಿಸಿತ್ತು. ಹೀಗಾಗಿ ಎಸ್ಐಟಿ ಅಧಿಕಾರಿಗಳು ಅವರನ್ನು ಬಂಧಿಸಿದ್ದರು. ಎಸ್ಐಟಿ ಅಧಿಕಾರಿಗಳು ಬಂಧನದ ಬಳಿಕ ಬೆಂಗಳೂರಿನ 17ನೇ ಎಸಿಎಂಎಂ ನ್ಯಾಯಾಲಯದ ನ್ಯಾಯಾಧೀಶರ ಮುಂದೆ ಹಾಜರುಪಡಿಸಿ, ಇಂದಿನವರೆಗೆ ಹೆಚ್ಚಿನ ವಿಚಾರಣೆಗಾಗಿ ತಮ್ಮ ವಶಕ್ಕೆ ಪಡೆದಿದ್ದರು. ಇಂದು ಎಸ್ಐಟಿ ವಶಕ್ಕೆ…
ಬೆಂಗಳೂರು: ಲೋಕಸಭಾ ಚುನಾವಣೆಗೆ 2ನೇ ಹಂತದ ಮತದಾನ ಮುಗಿಯುತ್ತಿದ್ದಂತೆ, ರಾಜಕೀಯ ನಾಯಕರು ರಿಲ್ಯಾಕ್ಸ್ ಮೂಡಿಗೆ ತೆರಳಿದ್ದಾರೆ. ಸಿಎಂ ಸಿದ್ಧರಾಮಯ್ಯ ಊಟಿಯಲ್ಲಿ ವಿಶ್ರಾಂತಿ ಪಡೆಯುತ್ತಿದ್ದಾರೆ. ಇಂತಹ ಅವರಿಗೆ ವಿಪಕ್ಷ ನಾಯಕ ಆರ್ ಅಶೋಕ್ ನಿಮ್ಮ ಸರ್ಕಾರದ ಎಡವಟ್ಟುಗಳು ಯಾವುವು ಅಂತ ನೋಡಿ ಎಂಬುದಾಗಿ ಮುಂದಿಟ್ಟಿದ್ದಾರೆ. ಇಂದು ಎಕ್ಸ್ ನಲ್ಲಿ ಸುದೀರ್ಘ ಪೋಸ್ಟ್ ಮಾಡಿರುವಂತ ಅವರು, ಊಟಿಯಲ್ಲಿ ಪಾರ್ಟಿ ಮಾಡುತ್ತಿರುವ ಸೋಗಲಾಡಿ ಸಿಎಂ ಸಿದ್ಧರಾಮಯ್ಯನವರೇ, ತಾವು ಊಟಿಯಲ್ಲಿ ಪಾರ್ಟಿ ಮಾಡುತ್ತಿರುವಾಗ ಇಲ್ಲಿ ಕನ್ನಡಿಗರು ನಿಮ್ಮ ಸರ್ಕಾರದ ಎಡವಟ್ಟುಗಳಿಂದ, ದುರಾಡಳಿತದಿಂದ, ಬೇಜವಾಬ್ದಾರಿಯಿಂದ ಅನುಭವಿಸುತ್ತಿರುವ ಸಂಕಷ್ಟಗಳ ಬಗ್ಗೆಯೂ ಒಮ್ಮೆ ನೆನಪಿಸಿಕೊಳ್ಳಿ ಎಂದಿದ್ದಾರೆ. ಸಿದ್ದರಾಮಯ್ಯನವರ ಸರ್ಕಾರದ ಎಡವಟ್ಟುಗಳು… 1. ಕೇಂದ್ರ ಸರ್ಕಾರ ರೈತರಿಗೆ ಬರ ಪರಿಹಾರ ನೀಡಲು 3,454 ಕೋಟಿ ರೂಪಾಯಿ ಬಿಡುಗಡೆ ಮಾಡಿ 2 ವಾರ ಕಳೆದರೂ ಒಂದು ನಯಾ ಪೈಸೆ ಬರ ಪರಿಹಾರ ಇನ್ನೂ ರೈತರ ಕೈಸೇರಿಲ್ಲ. 2. ಹೈನುಗಾರರಿಗೆ 7 ತಿಂಗಳಿಂದ ಬಾಕಿ ಇರುವ 700 ಕೋಟಿ ರೂಪಾಯಿ ಇನ್ನೂ ಪಾವತಿ ಆಗಿಲ್ಲ. 3. ತೆಂಗು…
ಬೆಂಗಳೂರು: ನಗರದಲ್ಲಿ ಪೂರ್ವ ಮುಂಗಾರು ಮಳೆ ಆರಂಭವಾಗುತ್ತಿದ್ದಂತೇ, ಅವಾಂತರ ಆರಂಭಗೊಂಡಿದೆ. ನಮ್ಮ ಮೆಟ್ರೋದ ಮಾರ್ಗವೊಂದರಲ್ಲಿ ಮಣ್ಣು ಕುಸಿತದಿಂದ ಹಾನಿಯಾದ ಪರಿಣಾಮ, ಬೋರ್ ಬ್ಯಾಂಕ್ ರಸ್ತೆಯ ಒಂದು ಭಾಗವನ್ನು ಮುಚ್ಚಲಾಗಿದೆ. ಹೀಗಾಗಿ ವಾಹನ ಸವಾರರು ಪರ್ಯಾಯ ಮಾರ್ಗದಲ್ಲಿ ಸಂಚರಿಸುವಂತೆ ಸೂಚಿಸಿದೆ. ಈ ಬಗ್ಗೆ ಪತ್ರಿಕಾ ಪ್ರಕಟಣೆಯಲ್ಲಿ ಬಿಎಂಆರ್ ಸಿಎಲ್ ಮಾಹಿತಿ ಹಂಚಿಕೊಂಡಿದ್ದು, ಇಂದು ಭಾರೀ ಮಳೆಯಿಂದಾಗಿ ಪಾಟರಿ ಟೌನ್ ಮೆಟ್ರೋ ನಿಲ್ದಾಣಕ್ಕಾಗಿ ಮಣ್ಣು ಅಗೆಯಲು ಮಾಡಿದ ತಾತ್ಕಾಲಿಕ ತಡೆ ಪೈಲ್ ವ್ಯವಸ್ಥೆಯು ಸಂಜೆ 5.45 ರ ಸುಮಾರಿಗೆ ವಿಫಲವಾಗಿದೆ. ಇದರ ಪರಿಣಾಮವಾಗಿ ಬೋರ್ ಬ್ಯಾಂಕ್ ರಸ್ತೆಯ ಒಂದು ಭಾಗವು ಹಾನಿಯಾಗಿರುವ ಕಾರಣ ಬೋರ್ ಬ್ಯಾಂಕ್ ರಸ್ತೆಯನ್ನು ಮುಚ್ಚಲಾಗಿದೆ ಎಂದು ತಿಳಿಸಿದೆ. ಇನ್ನೂ ಮರುಸ್ಥಾಪನೆ ಮಾಡುವವರೆಗೆ ರಸ್ತೆ ಮುಚ್ಚಿರುತ್ತದೆ. ವಾಹನ ಚಲನೆಗೆ ಪರ್ಯಾಯ ಮಾರ್ಗ ಮಾಡಲಾಗಿದೆ. ಯಾವುದೇ ವ್ಯಕ್ತಿಗಳು ಗಾಯಗೊಂಡಿಲ್ಲ ಎಂಬುದಾಗಿ ಸ್ಪಷ್ಟ ಪಡಿಸಿದೆ. https://kannadanewsnow.com/kannada/sslc-results-to-be-declared-tomorrow-at-10-30-am-heres-how-to-check-the-result-sslc-exam-results-2024/ https://kannadanewsnow.com/kannada/these-accounts-will-be-closed-after-this-period-punjab-national-bank-to-customers/
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗದಮದಿಂದ ಖಾಲಿ ಇರುವಂತ ಚಾಲಕ ಕಂ ನಿರ್ವಾಹಕರ ಹುದ್ದೆಗಳ ನೇಮಕಾತಿಗೆ ಅರ್ಜಿಯನ್ನು ಆಹ್ವಾನಿಸಲಾಗಿತ್ತು. ಈ ಹುದ್ದೆಗಳಿಗೆ ದೇಹದಾರ್ಡ್ಯತೆ ಪರಿಶೀಲನೆ ಬಳಿಕ, ಈಗ ಮೇ.15ರಿಂದ ಮೂಲ ದಾಖಲಾತಿಗಳ ಪರಿಶೀನಾ ಪ್ರಕ್ರಿಯೆಯನ್ನು ಆರಂಭಿಸಲಾಗುತ್ತಿದೆ. ಇಂದು ಪತ್ರಿಕಾ ಪ್ರಕಟಣೆಯಲ್ಲಿ KSRTC ಮಾಹಿತಿ ನೀಡಿದ್ದು, ಕರಾರಸಾ ನಿಗಮದಲ್ಲಿ ಜಾಹೀರಾತು ಸಂ.1/2020 ದಿನಾಂಕ: ರನ್ವಯ ಚಾಲಕ-ಕಂ-ನಿರ್ವಾಹಕ ಹುದ್ದೆಗಳ ನೇರ ನೇಮಕಾತಿಗಾಗಿ ಹೊರಡಿಸಲಾಗಿದ್ದ ಅಧಿಸೂಚನೆಯನ್ವಯ ಅರ್ಜಿ ಸಲ್ಲಿಸಿದ್ದ ಅಭ್ಯರ್ಥಿಗಳಿಗೆ ದಿನಾಂಕ: 06-03-2024 ರಿಂದ ಮೂಲ ದಾಖಲಾತಿ / ದೇಹದಾರ್ಡ್ಯತೆ ಪರಿಶೀಲನೆಯನ್ನು ಪ್ರಾರಂಭಿಸಲಾಗಿದ್ದು, ಪುಸ್ತುತ ಸದರಿ ಪರಿಶೀಲನಾ ಕಾರ್ಯವನ್ನು ದಿನಾಂಕ: 15-05-2024 ರಿಂದ ಕರಾರಸಾ ನಿಗಮದ ಕೇಂದ್ರ ಕಛೇರಿ, ಶಾಂತಿನಗರ, ಬೆಂಗಳೂರು ಇಲ್ಲಿ ಮುಂದುವರೆಸಲಾಗುತ್ತಿದೆ ಎಂದಿದೆ. ಈ ಸಂಬಂಧ ಅಭ್ಯರ್ಥಿಗಳು ದಿನಾಂಕ: 08-05-2024 ರಿಂದ ನಿಗಮದ ಅಧಿಕೃತ ವೆಬ್-ಸೈಟ್ ಆದ ksrtcjobs.karnataka.gov.in ರಲ್ಲಿ ಕರಪತ್ರವನ್ನು ಡೌನ್-ಲೋಡ್ ಮಾಡಿಕೊಂಡು ಕರಪತ್ರದಲ್ಲಿ ತಿಳಿಸಿರುವ ಎಲ್ಲಾ ಮೂಲ ದಾಖಲಾತಿಗಳೊಂದಿಗೆ ನಿಗದಿತ ದಿನಾಂಕ ಹಾಗೂ ಸಮಯಕ್ಕೆ ಹಾಜರಾಗಲು ಈ ಮೂಲಕ…
ಬೆಂಗಳೂರು: ಕೆಇಎಯಿಂದ ಕರ್ನಾಟಕ ವಿದ್ಯುತ್ ನಿಗಮದಿಂದ 622 ಹುದ್ದೆಗಳ ನೇಮಕಾತಿಯ ತಾತ್ಕಾಲಿಕ ಅಂಕಪಟ್ಟಿ ಹಾಗೂ ಕರ್ನಾಟಕ ಹಣಕಾಸು ಸಂಸ್ಥೆಯಲ್ಲಿ ಖಾಲಿ ಇದ್ದಂತ 44 ಹುದ್ದೆಗಳ ಅಂತಿಮ ಅಂಕಪಟ್ಟಿಯನ್ನು ಪ್ರಕಟಿಸಲಾಗಿದೆ. ಇಂದು ಪತ್ರಿಕಾ ಪ್ರಕಟಣೆಯಲ್ಲಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಮಾಹಿತಿ ಬಿಡುಗಡೆ ಮಾಡಿದ್ದು, ಕರ್ನಾಟಕ ವಿದ್ಯುತ್ ನಿಗಮ ನಿಯಮಿತದಲ್ಲಿ ಖಾಲಿ ಇರುವ ಎಇ, ಜೆಇ (ವಿವಿಧ ವಿಭಾಗಗಳಲ್ಲಿನ), ಕೆಮಿಸ್ಟ್ ಮತ್ತು ಕೆಮಿಕಲ್ ಸೂಪರ್ವೈಸರ್ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಪ್ರಾಧಿಕಾರದಿಂದ ಸ್ಪರ್ಧಾತ್ಮಕ ಪರೀಕ್ಷೆಯನ್ನು ಎರಡು ಅವಧಿಗಳಲ್ಲಿ ದಿನಾಂಕ 18-02-2024 ರಂದು ನಡೆಸಲಾಗಿದೆ ಎಂದಿದೆ. ಸದರಿ ಪರೀಕ್ಷೆಯ ಅಂತಿಮ ಉತ್ತರಗಳನ್ನು 17-04-2024 ರಂದು ಪ್ರಕಟಿಸಲಾಗಿದೆ. ಪ್ರಸ್ತುತ ಹುದ್ದೆವಾರು ತಾತ್ಕಾಲಿಕ ಅಂಕಪಟ್ಟಿಯನ್ನು ಪ್ರಾಧಿಕಾದ http://kea.kar.nic.in ವೆಬ್ಸೈಟಿನಲ್ಲಿ ದಿನಾಂಕ 08-05-2024 ರಂದು ಪ್ರಕಟಿಸಲಾಗಿದೆ. ಕಳೆದ ಬಾರಿ ನಡೆಸಿದ ಪರೀಕ್ಷೆಯಲ್ಲಿ ಕೆಪಿಸಿಎಲ್ ಸಂಸ್ಥೆಯು ಸೂಚಿಸಿರುವಂತೆ, ಪ್ರತಿ ತಪ್ಪು ಉತ್ತರಕ್ಕೆ 1/3 ರಷ್ಟು ನಕಾರಾತ್ಮಕ ಅಂಕವನ್ನು ಕಡಿತಗೊಳಿಸಲಾಗಿದೆ ಎಂದಿದೆ. ಪ್ರಚುರಪಡಿಸಿರುವ ಅಂಕಪಟ್ಟಿಗೆ ಆಕ್ಷೇಪಣೆಗಳಿದ್ದಲ್ಲಿ ದಿನಾಂಕ 15-05-2024 ರೊಳಗೆ ಇ-ಮೇಲ್ ವಿಳಾಸ kea2023exam@gmail.com…
ಬೆಂಗಳೂರು: ಸಾರ್ವಜನಿಕ ವಿಶ್ವವಿದ್ಯಾಲಯಗಳು ಮತ್ತು ಸಂಯೋಜಿತ ಕಾಲೇಜುಗಳಲ್ಲಿ ನಾಲ್ಕು ವರ್ಷಗಳ ಪದವಿ ಕಾರ್ಯಕ್ರಮವನ್ನು ಶಿಫಾರಸು ಮಾಡಿದ ಎನ್ಇಪಿ (National Education Policy-NEP) 2020 ಅನ್ನು ಕರ್ನಾಟಕ ಸರ್ಕಾರ ಬುಧವಾರ ರದ್ದುಗೊಳಿಸಿದೆ. 2024-25ರ ಶೈಕ್ಷಣಿಕ ವರ್ಷಕ್ಕೆ ಮೂರು ವರ್ಷಗಳ ಪದವಿ ಕಾರ್ಯಕ್ರಮವನ್ನು (ನಾಲ್ಕನೇ ವರ್ಷದ ಆಯ್ಕೆಯಿಲ್ಲದೆ) ಮತ್ತೆ ಪರಿಚಯಿಸಿದೆ. ಎನ್ಇಪಿ ಪ್ರಕಾರ ನಾಲ್ಕು ವರ್ಷಗಳ ಪದವಿ ಕಾರ್ಯಕ್ರಮವನ್ನು ಮುಂದುವರಿಸುವಲ್ಲಿ ಸ್ಪಷ್ಟತೆಯ ಕೊರತೆಯ ಬಗ್ಗೆ ವಿದ್ಯಾರ್ಥಿಗಳು ಮತ್ತು ಕಾಲೇಜುಗಳು ಕಳವಳ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ ಹೊಸ ಬದಲಾವಣೆ ಮಾಡಲಾಗಿದೆ. ಪ್ರೊಫೆಸರ್ ಸುಖದೇವ್ ಥೋರಟ್ ನೇತೃತ್ವದ ರಾಜ್ಯ ಶಿಕ್ಷಣ ನೀತಿ ಆಯೋಗ ಮಾಡಿದ ಶಿಫಾರಸುಗಳನ್ನು ಪರಿಗಣಿಸಿ ಬುಧವಾರ ರಾಜ್ಯ ಸರ್ಕಾರ ಆದೇಶ ಹೊರಡಿಸಲಾಗಿದೆ. ಆಯೋಗವು ಸರ್ಕಾರಕ್ಕೆ ಸಲ್ಲಿಸಿದ ತನ್ನ ಮೊದಲ ಮಧ್ಯಂತರ ವರದಿಯಲ್ಲಿ ಪದವಿ ಕಾರ್ಯಕ್ರಮದ ಅವಧಿ (ಮೂರು ವರ್ಷಗಳು ಅಥವಾ ನಾಲ್ಕು ವರ್ಷಗಳು), ಪಠ್ಯಕ್ರಮ ರಚನೆ ಮತ್ತು ಬಹುಶಿಸ್ತೀಯ ಪಠ್ಯಕ್ರಮ (2024-25 ಎವೈನಲ್ಲಿ ಪ್ರವೇಶ ಪಡೆಯುವ ವಿದ್ಯಾರ್ಥಿಗಳಿಗೆ) ಮತ್ತು ಪ್ರಮಾಣಪತ್ರದೊಂದಿಗೆ ಬಹು ಪ್ರವೇಶ ಮತ್ತು ನಿರ್ಗಮನ…
ಪಾದಚಾರಿ ಮಾರ್ಗದಲ್ಲಿ ವಾಸಿಸುವ ವ್ಯಕ್ತಿಯಿಂದ ಹಿಡಿದು ಬಂಗಲೆಯಲ್ಲಿ ವಾಸಿಸುವ ಶ್ರೀಮಂತ ಉದ್ಯಮಿಯವರೆಗೆ ಎಲ್ಲರಿಗೂ ಸಾಲದ ಸಮಸ್ಯೆ ಇದೆ. ಆ ಸಾಲದ ಸಮಸ್ಯೆಯು ಪ್ರಮಾಣದಲ್ಲಿ ಬದಲಾಗುತ್ತದೆ ಆದರೆ ಪ್ರತಿಯೊಬ್ಬರಿಗೂ ಒಂದಲ್ಲ ಒಂದು ರೂಪದಲ್ಲಿ ಉಳಿಯುತ್ತದೆ. ಕೆಲವು ಜನರು ಪಾವತಿಸದ ಸಾಲಕ್ಕೆ ಬಡ್ಡಿಯನ್ನು ಪಾವತಿಸುವ ಮೂಲಕ ಬಳಲುತ್ತಿದ್ದಾರೆ. ಈ ಸಂಧರ್ಭದಲ್ಲಿ ಎಂತಹ ಸಾಲದ ಹೊರೆಯಿದ್ದರೂ ಆ ಋಣ ತೀರಿಸಲು ನಾವು ಮಾಡಬಹುದಾದ ಉಪಾಯವೇ ಇಳನೇರ್ ದೀಪಂ. ಈ ಆಧ್ಯಾತ್ಮಿಕ ಪೋಸ್ಟ್ನಲ್ಲಿ, ಎಳನೀರನ್ನು ಬಳಸಿ ದೀಪವನ್ನು ಹೇಗೆ ಬೆಳಗಿಸಬೇಕು ಎಂದು ನಾವು ನೋಡಲಿದ್ದೇವೆ . ಶ್ರೀ ಸಿಗಂದೂರು ಚೌಡೇಶ್ವರಿ ಜ್ಯೋತಿಷ್ಯ ಪೀಠ ನಂ 1ಕೇರಳ ಕೊಳ್ಳೇಗಾಲದ ಮಹಾ ಮಾಂತ್ರಿಕ ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ತಂತ್ರಿ ನಂ:- 9686268564 ನಂ 1ವಶೀಕರಣ ಸ್ಪೆಷಲಿಸ್ಟ್ ಒಂದು ಕರೆಯಲ್ಲಿ ಪರಿಹಾರ ತಿಳಿಸುತ್ತಾರೆ ತಾವು ಎಷ್ಟೋ ಜ್ಯೋತಿಷ್ಯರಲ್ಲಿ ಕೇಳಿಯು ಪರಿಹಾರ ಸಿಗದೇ ಮನನೊಂದಿದ್ದರೆ ಪರಿಹಾರ ನಿಮ್ಮ ಸಮಸ್ಯೆಗಳಾದ ಅತ್ತೆ-ಸೊಸೆ ಕಿರಿಕಿರಿ, ಪ್ರೀತಿಯಲ್ಲಿ ನಂಬಿ ಮೋಸ, ಇಷ್ಟ ಪಟ್ಟವರು ನಿಮ್ಮಂತೆ ಆಗಲು, ಗಂಡ ಹೆಂಡತಿ ಕಿರಿಕಿರಿ,…
ಬೆಂಗಳೂರು: ರಾಜ್ಯದಲ್ಲಿ ಬಿಸಿಲ ತಾಪಮಾನ ದಿನೇ ದಿನೇ ಹೆಚ್ಚಾಗುತ್ತಿದೆ. ಬೆಳಗಾವಿ, ಕಲಬುರ್ಗಿಯಲ್ಲದೇ ಇತರೆ ಜಿಲ್ಲೆಗಳಲ್ಲಿಯೂ ಅಷ್ಟೇ ಪ್ರಮಾಣದಲ್ಲಿ ತಾಪಮಾನ ದಾಖಲಾಗುತ್ತಿದೆ. ಈ ಹಿನ್ನಲೆಯಲ್ಲಿ ರಾಜ್ಯದ ಸರ್ಕಾರಿ ಕಚೇರಿ ಕೆಲಸದ ವೇಳೆಯನ್ನು ಬದಲಾವಣೆ ಮಾಡುವಂತೆ ಸಿಎಂ ಸಿದ್ಧರಾಮಯ್ಯ ಅವರಿಗೆ ಪತ್ರದಲ್ಲಿ ಮನವಿ ಮಾಡಲಾಗಿದೆ. ಇಂದು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್.ಷಡಕ್ಷರಿ ಅವರು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರಿಗೆ ಪತ್ರ ಬರೆದಿದ್ದಾರೆ. ಅದರಲ್ಲಿ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಈ ವರ್ಷ ಬಿಸಿಲಿನ ತಾಪಮಾನ ತೀವ್ರತರವಾಗಿರುತ್ತದೆ. ರಾಜ್ಯದ ಬೆಳಗಾವಿ ಹಾಗೂ ಕಲಬುರಗಿ ವಿಭಾಗದ ಜಿಲ್ಲೆಗಳಿಗೆ ಸರ್ಕಾರವು ಈ ಹಿಂದೆ ಸರ್ಕಾರಿ ಕಛೇರಿ ಕೆಲಸದ ವೇಳೆಯನ್ನು ಬೆಳಿಗ್ಗೆ 08-00 ರಿಂದ ಮಧ್ಯಾಹ್ನ 01-30ರವರೆಗೆ ನಿಗಧಿಪಡಿಸಿತ್ತು ಎಂದಿದ್ದಾರೆ. ಪ್ರಸ್ತುತ ರಾಜ್ಯದಲ್ಲಿ ಮೇಲ್ಕಂಡ ವಿಭಾಗದ ಜಿಲ್ಲೆಗಳೂ ಸೇರಿದಂತೆ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲೂ ಬಿಸಿಲಿನ ತಾಪಮಾನ ಬೆಳಿಗ್ಗೆ 09.00 ಗಂಟೆಗೆ ತೀವ್ರತರವಾಗಿ 40-44 ಗಿಂತಲೂ ಹೆಚ್ಚಿನ ತಾಪಮಾನ ದಾಖಲಾಗುತ್ತಿದೆ. ಸರ್ಕಾರಿ ನೌಕರರು ಕಛೇರಿಗೆ ತೆರಳಲು ಮತ್ತು ಸಾರ್ವಜನಿಕರೂ ಸಹ ಸರ್ಕಾರಿ…
ಶಿವಮೊಗ್ಗ: ಇಂದು ನಗರದಲ್ಲಿ ಲೋಕಸಭಾ ಚುನಾವಣೆ ಬೆನ್ನಲ್ಲೇ ಹಳೇ ಶಿವಮೊಗ್ಗದಲ್ಲಿ ಮಾರಕಾಸ್ತ್ರಗಳು ಸದ್ದು ಮಾಡಿವೆ. ಹೆಳೆಯ ಶಿವಮೊಗ್ಗದ ಲಷ್ಕರ್ ಮೊಹಲ್ಲಾದಲ್ಲಿ ಇಬ್ಬರನ್ನು ನಡು ರಸ್ತೆಯಲ್ಲೇ ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಶಿವಮೊಗ್ಗದ ಲಷ್ಕರ್ ಮೊಹಲ್ಲಾದ ಬಳಿಯಲ್ಲಿ ಇರುವಂತ ಮೀನು ಮಾರುಕಟ್ಟೆಯ ಬಳಿ, ಇಬ್ಬರನ್ನು ಗುಂಪೊಂದು ಹಾಡು ಹಗಲೇ ಚಪ್ಪಡಿ ಕಲ್ಲು, ಸೈಕಲ್ ಎತ್ತಿ ಹಾಕಿ ಭೀಕರವಾಗಿ ಕೊಲೆ ಮಾಡಲಾಗಿದೆ. ಹತ್ಯೆಯಾದವರನ್ನು ಶೋಯಬ್ ಆಲಿಯಾಸ್ ಸೆಬು ಎಂದು ಗುರುತಿಸಲಾಗಿದೆ. ಇನ್ನಬ್ಬರ ಗುರುತು ಪತ್ತೆಯಾಗಿಲ್ಲ. ವಿಷಯ ತಿಳಿದು ಸ್ಥಳಕ್ಕೆ ಶಿವಮೊಗ್ಗ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅನಿಲ್ ಕುಮಾರ್ ಭೂಮರೆಡ್ಡಿ ಭೇಟಿ ನೀಡಿ, ಪರಿಶೀಲಿಸಿದರು. ಈ ಸಂಬಂಧ ಶಿವಮೊಗ್ಗದ ಕೋಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. https://kannadanewsnow.com/kannada/sslc-results-to-be-declared-tomorrow-at-10-30-am-heres-how-to-check-the-result-sslc-exam-results-2024/ https://kannadanewsnow.com/kannada/prajwal-video-case-minister-krishna-byre-gowda-challenges-hd-kumaraswamy/
ಬೆಂಗಳೂರು: ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವೀಡಿಯೋ ಪ್ರಕರಣ ದಿನಕ್ಕೊಂದು ತಿರುವು ಪಡೆಯುತ್ತಿದೆ. ಇಂದು ಕಾಂಗ್ರೆಸ್ ನ ಸಚಿವದ್ವಯರು ಸುದ್ದಿಗೋಷ್ಠಿ ನಡೆಸಿ, ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ವಿರುದ್ಧ ಹರಿಹಾಯ್ದಿದ್ದಾರೆ. ಅದರಲ್ಲೂ ಸಚಿವ ಕೃಷ್ಣಭೈರೇಗೌಡ ಅವರು, ಹೆಚ್.ಡಿ ಕುಮಾರಸ್ವಾಮಿಗೆ ನೇರವಾಗಿ ಸವಾಲೊಂದನ್ನು ಹಾಕಿದ್ದಾರೆ. ಆ ಬಗ್ಗೆ ಮುಂದೆ ಓದಿ. ಇಂದು ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದಂತ ಅವರು, ಪ್ರಪಂಚದ ಅತಿದೊಡ್ಡ ಲೈಂಗಿಕ ದೌರ್ಜನ್ಯ ಪ್ರಕರಣದ ಬಗ್ಗೆ ನಾವು ಮಾತನಾಡುತ್ತಿದ್ದೇವೆ. ನೂರಾರು ಹಿಂದೂ ಮಹಿಳೆಯರ ಮಾಂಗಲ್ಯ ಹರಣ ಮಾಡಿರುವ ಪ್ರಕರಣ. ಮಾನಹರಣ, ಶೀಲ ಹರಣ, ಮನೆ ಹಾಳು ಮಾಡಿರುವ ಪ್ರಕರಣ ಇದಾಗಿದೆ ಎಂದರು. ಅನೇಕ ಹೆಣ್ಣು ಮಕ್ಕಳ ಭವಿಷ್ಯ ಮಂಕಾಗಿ ಹೋಗಿದೆ. ಅನೇಕರು ಊರು ಬಿಟ್ಟು ಹೋಗಿದ್ದಾರೆ. ಇಂತಹ ಹೆಣ್ಣು ಮಕ್ಕಳ ಮಾನ ಕಾಪಾಡುವುದು ಬಿಟ್ಟು ಪ್ರಕರಣದ ಹಾದಿ ತಪ್ಪಿಸುವುದು ನಿಲ್ಲಿಸಬೇಕು ಎಂದು ಎಚ್ಚರಿಸಿದರು. ಇಲ್ಲಿ ತಪ್ಪು ಮಾಡಿದವರಿಗೆ, ಮಾನ ಹಾನಿ ಮಾಡಿದವರಿಗೆ ಶಿಕ್ಷೆ ಆಗಬೇಕು. ಆದರೆ ಮಾನ, ಮನೆ, ಮಾಂಗಲ್ಯ ದೋಚಿದ್ದು…