Author: kannadanewsnow09

ಬೆಂಗಳೂರು : “ವಿಡಿಯೋ ಮಾಡಿಕೊಂಡವರ ಕೃತ್ಯದ ಬಗ್ಗೆ ಮಾತನಾಡುವುದು ಬಿಟ್ಟು, ವಿಡಿಯೋ ಹಂಚಿಕೆಯ ಬಗ್ಗೆ ಮಾತನಾಡಲಾಗುತ್ತಿದೆ. ಇದರಲ್ಲಿ ಡಿ.ಕೆ.ಶಿವಕುಮಾರ್ ಅವರ ಮಧ್ಯ ಪ್ರವೇಶವಾಗಿಲ್ಲ” ಎಂದು ಕೃಷಿ ಸಚಿವ ಚೆಲುವರಾಯಸ್ವಾಮಿ ಅವರು ಕಿಡಿಕಾರಿದರು. ಕೆಪಿಸಿಸಿ ಕಚೇರಿಯಲ್ಲಿ ಬುಧವಾರ ನಡೆದ ಜಂಟಿ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, “ಈ ಹಗರಣದಲ್ಲಿ ಯಾವುದೇ ಕಾರಣಕ್ಕೂ ಡಿ.ಕೆ.ಶಿವಕುಮಾರ್ ಅವರು ಮಧ್ಯ ಪ್ರವೇಶ ಮಾಡಿಲ್ಲ. ನೂರಕ್ಕೆ ನೂರರಷ್ಟು ಈ ವಿಚಾರಕ್ಕೂ ಅವರಿಗೂ ಸಂಬಂಧವಿಲ್ಲ. ಅವರು ಟೀಕೆ ಮಾಡಿದ ಕಾರಣಕ್ಕೆ ಕೆಪಿಸಿಸಿ ಅಧ್ಯಕ್ಷರು ತಿರುಗೇಟು ನೀಡಿದ್ದಾರೆ. ಈ ವಿಚಾರಕ್ಕೂ ಮೊದಲೇ ಇಬ್ಬರ ನಡುವೆ ಟೀಕೆ, ಟಿಪ್ಪಣಿಗಳು ನಡೆದಿವೆ ಎಂದರು. ಈ ಅನಾಚಾರವನ್ನು ಯಾರೋ ವಿಡಿಯೋ ಮಾಡಿದ್ದಲ್ಲ. ಸ್ವತಃ ಅವರೇ ಮಾಡಿಕೊಂಡಿರುವುದು. ಇದು ಹಾಸನದಲ್ಲಿಯೇ ಎಲ್ಲರಿಗೂ ಹಂಚಿಕೆಯಾಗಿದೆ. ಸಾಮಾಜಿಕ ಜಾಲತಾಣಗಳಿಗೆ ಸೋರಿಕೆಯಾದ ನಂತರ ಯಾವುದೂ ಸಹ ಯಾರ ಹಿಡಿತಕ್ಕೂ ಸಿಗುವುದಿಲ್ಲ. ವಿಚಾರ ಗಾಳಿಗೆ ಹೋದ ಮೇಲೆ ಯಾವ ದಿಕ್ಕಿಗೆ ಹೋಗುತ್ತದೆ ಎನ್ನುವುದು ಯಾರಿಗೂ ತಿಳಿದಿಲ್ಲ ಎಂದರು. ಇಂತಹ ಸೂಕ್ಷ್ಮವಾದ ವಿಚಾರವನ್ನು ಜನತಾದಳದವರು ಬೀದಿ ರಂಪ ಮಾಡುತ್ತಿದ್ದಾರೆ.…

Read More

ದಕ್ಷಿಣ ಕನ್ನಡ: ಜಿಲ್ಲೆಯ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಕೆ.ವಸಂತ ಬಂಗೇರ(79) ಅವರು ಇಂದು ಅನಾರೋಗ್ಯದಿಂದ ನಿಧನರಾಗಿದ್ದಾರೆ. ಈ ಮೂಲಕ ಬೆಳ್ತಂಗಡಿ ಕ್ಷೇತ್ರದ ಮಾಜಿ ಶಾಸಕ, ಬೆಳ್ತಂಗಡಿ ಗುರುದೇವ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಕೆ. ವಸಂತ ಬಂಗೇರ ಇನ್ನಿಲ್ಲವಾಗಿದ್ದಾರೆ.  ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯ ಕುವೆಟ್ಟು ಗ್ರಾಮದಲ್ಲಿ ಕೇದೆ ಸುಬ್ಬ ಪೂಜಾರಿ ಹಾಗೂ ದೇವಕಿ ದಂಪತಿಯ ಪುತ್ರರಾಗಿ ವಸಂತ ಬಂಗೇರ ಅವರು ಜನವರಿ.15, 1946ರಲ್ಲಿ ಜನಿಸಿದ್ದರು. ಬೆಳ್ತಂಗಡಿಯ ಬೋರ್ಡ್ ಹೈಸ್ಕೂಲಿನಲ್ಲಿ ತಮ್ಮ ಎಸ್ ಎಸ್ ಎಲ್ ಸಿ ವ್ಯಾಸಂಗ ಮುಗಿಸಿದಂತ ಅವರು ಮುಲ್ಕಿ, ಉಜಿರೆಯ ಎಸ್ ಡಿಎಂ ಕಾಲೇಜಿನಲ್ಲಿ ಪಿಯುಸಿ ಮುಗಿಸಿದರು. 1972ರಲ್ಲೇ ಚುನಾವಣಾ ರಾಜಕೀಯಕ್ಕೆ ಧುಮುಕಿದಂತ ವಸಂತ ಬಂಗೇರ ಅವರು, ಕುವೆಟ್ಟು ಗ್ರಾಮ ಪಂಚಾಯ್ತಿ ಚುನಾವಣೆಯಲ್ಲಿ ಅವಿರೋಧವಾಗಿ ಆಯ್ಕೆಯಾಗಿ, ಸದಸ್ಯರಾಗಿ, ಆನಂತ್ರ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದರು. 1983ರಲ್ಲಿ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದಿಂದ ಬಿಜೆಪಿಯ ಅಭ್ಯರ್ಥಿಯಾಗಿ ವಿಧಾನಸಭಾ ಚುನಾವಣೆಗೆ ಕಣಕ್ಕೆ ಇಳಿದರು. ಪ್ರಥಮ ಬಾರಿಗೆ ವಿಧಾನಸಭೆಯ ಸದಸ್ಯರಾಗಿಯೂ ಪ್ರವೇಶ ಮಾಡಿದ್ದರು.…

Read More

ಬೆಂಗಳೂರು: ಕುಮಾರಸ್ವಾಮಿ ಕಿಂಗ್ ಆಫ್ ಬ್ಲಾಕ್ ಮೇಲರ್ ಎಂದಿರುವ ಡಿಸಿಎಂ ಡಿಕೆಶಿಗೆ ತಿರುಗೇಟು ಕೊಟ್ಟಿರುವ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು; ಇಡೀ ಪ್ರಕರಣವನ್ನು ಸ್ವಾರ್ಥಕ್ಕಾಗಿ ಬಳಸಿಕೊಂಡ ವ್ಯಕ್ತಿ ನೀನು ಎಂದು ಕಿಡಿ ಕಾರಿದರು. ನಗರ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ಕೋರ್ಟ್ ಬಳಿ ಮಾಧ್ಯಮಗಳ ಜತೆ ಮಾತನಾಡಿದರು ಅವರು, ಮಹಿಳೆಯರ ಅಶ್ಲೀಲ ವಿಡಿಯೋಗಳನ್ನು ತುಂಬಲಾಗಿದ್ದ ಪೆನ್ ಡ್ರೈವ್ ಗಳನ್ನು ಹಾದಿಬೀದಿಯಲ್ಲಿ ಸುರಿದಿರುವ ಕಿಡಿಗೇಡಿಗಳನ್ನು ರಾಜ್ಯ ಸರಕಾರ ರಕ್ಷಣೆ ಮಾಡುತ್ತಿದೆ ಎಂದು ಕುಮಾರಸ್ವಾಮಿ ಅವರು ನೇರ ಆರೋಪ ಮಾಡಿದರು. ಡಿ.ಕೆ.ಶಿವಕುಮಾರ್ ಸಂಸ್ಕೃತಿ ಎಂಥದು ಎಂದು ಎಲ್ಲರಿಗೂ ಗೊತ್ತಿದೆ. ವಕೀಲರಾದ ದೇವರಾಜೇಗೌಡ ಜತೆ ಯಾಕಪ್ಪ ಮಾತಾನಾಡಿದೆ ನೀನು? ನಿನಗೇನಿತ್ತು ಅವರ ಹತ್ತಿರ ಕೆಲಸ ಡಿ.ಕೆ.ಶಿವಕುಮಾರ್? ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು. ಕುಮಾರಸ್ವಾಮಿ ಬ್ಲಾಕ್ ಮೇಲರ್ ಅಲ್ಲ ಕುಮಾರಸ್ವಾಮಿ ಬ್ಲಾಕ್ ಮೇಲರ್ ಅಲ್ಲ. ಐದು ಜನರನ್ನು ಇಟ್ಟಕೊಂಡಿದ್ದೀನಿ ಅಂತ ಹೇಳಿದ್ದೀಯಾ ಅಲ್ಲವೇ ನೀನು? ನಿಮ್ಮ ಮುಖ್ಯಮಂತ್ರಿಗೆ ಮಾನ ಮರ್ಯಾದೆ ಇದೆಯಾ? ಡಾ.ಜಿ.ಪರಮೇಶ್ವರ ಅವರೇ ನಿಮಗೆ ಬೆನ್ನು ಮೂಳೆ ಇದೆಯಾ? ನನ್ನನ್ನು…

Read More

ನವದೆಹಲಿ: ಜಮ್ಮು ಮತ್ತು ಕಾಶ್ಮೀರದ ಪೂಂಚ್ನಲ್ಲಿ ವಾಯುಪಡೆಯ ಬೆಂಗಾವಲು ವಾಹನದ ಮೇಲೆ ದಾಳಿ ನಡೆದ ಕೆಲವು ದಿನಗಳ ನಂತರ, ಇಂಡಿಯಾ ಟುಡೇ ಟಿವಿ ದಾಳಿಯ ಹಿಂದಿನ ಮೂವರು ಭಯೋತ್ಪಾದಕರ ವಿವರಗಳನ್ನು ರಿವೀಲ್ ಮಾಡಿದೆ. ಭಯೋತ್ಪಾದಕ ದಾಳಿಯಲ್ಲಿ ಐಎಎಫ್ ಕಾರ್ಪೊರಲ್ ಭಾರತೀಯ ವಾಯುಪಡೆಯ ಸೈನಿಕ ಸಾವನ್ನಪ್ಪಿದ್ದು, ಇತರ ನಾಲ್ವರು ಗಾಯಗೊಂಡಿದ್ದಾರೆ. ಮೂಲಗಳ ಪ್ರಕಾರ, ಪೂಂಚ್ ದಾಳಿಯ ತನಿಖೆಯಲ್ಲಿ ಮೂರು ಹೆಸರುಗಳು ಹೊರ ಬಂದಿವೆ. ಇಲಿಯಾಸ್ (ಮಾಜಿ ಪಾಕಿಸ್ತಾನ ಸೇನಾ ಕಮಾಂಡೋ), ಅಬು ಹಮ್ಜಾ (ಲಷ್ಕರ್ ಕಮಾಂಡರ್) ಮತ್ತು ಹಡೂನ್ ಎಂಬುದಾಗಿ ತಿಳಿದು ಬಂದಿವೆ. ವಿಶೇಷವೆಂದರೆ, ಇಲಿಯಾಸ್ ‘ಫೌಜಿ’ ಎಂಬ ಕೋಡ್ ಹೆಸರಿನಿಂದಲೂ ಹೋಗುತ್ತಾನೆ. ಜೈಶ್-ಎ-ಮೊಹಮ್ಮದ್ನ ಅಂಗಸಂಸ್ಥೆಯಾದ ಪೀಪಲ್ಸ್ ಆಂಟಿ-ಫ್ಯಾಸಿಸ್ಟ್ ಫ್ರಂಟ್ (ಪಿಎಎಫ್ಎಫ್) ಗಾಗಿ ಭಯೋತ್ಪಾದಕರು ದಾಳಿ ನಡೆಸಿದ್ದಾರೆ ಎಂದು ಮೂಲಗಳು ತಿಳಿಸಿವೆ. ಭಯೋತ್ಪಾದಕರನ್ನು ಪತ್ತೆಹಚ್ಚಲು ರಾಜೌರಿ ಮತ್ತು ಪೂಂಚ್ ಕಾಡುಗಳಲ್ಲಿ ಭಾರಿ ಶೋಧ ಕಾರ್ಯಾಚರಣೆ ನಡೆಯುತ್ತಿದೆ ಎಂದು ಮೂಲಗಳು ತಿಳಿಸಿವೆ. ಅಧಿಕಾರಿಗಳು ಹಲವಾರು ಶಂಕಿತರನ್ನು ಹೆಡೆಮುರಿ ಕಟ್ಟಿದ್ದಾರೆ. ಮೂವರು ಭಯೋತ್ಪಾದಕರೊಂದಿಗಿನ ಸಂಪರ್ಕದ ಬಗ್ಗೆ ಅನೇಕರನ್ನು…

Read More

ಬೆಂಗಳೂರು: ವಕೀಲರಾದ ದೇವರಾಜೇಗೌಡ ಎಂಬುವವರು ನಿಯಮಾವಳಿಗಳ ವಿರುದ್ಧವಾಗಿ ವಕೀಲ ವೃತ್ತಿಗೆ ಅಗೌರವ ತಂದು ತನ್ನ ಕಕ್ಷಿದಾರ ನೀಡಿದ ಮಾಹಿತಿ ಮತ್ತು ದಾಖಲೆಗಳನ್ನು ಸಾರ್ವಜನಿಕಗೊಳಿಸಿ ಸಮಾಜದಲ್ಲಿ ಅಶಾಂತಿಯುಂಟು ಮಾಡಿರುವುದರ ವಿರುದ್ಧ ಸ್ವಯಂಪ್ರೇರಿತ ದೂರು ದಾಖಲಿಸಿ ತುರ್ತಾಗಿ ಕ್ರಮಕೈಗೊಳ್ಳುವಂತೆ ರಾಜ್ಯ ವಕೀಲರ ಪರಿಷತ್ತಿಗೆ ದೂರು ನೀಡಲಾಗಿದೆ. ಇಂದು ಈ ಕುರಿತಂತೆ ವಕೀಲ ಸೂರ್ಯ ಮುಕುಂದರಾಜ್, ಟಿ.ಎಸ್ ಸತ್ಯಾನಂದ ಅವರು ರಾಜ್ಯ ವಕೀಲರ ಪರಿಷತ್ತಿಗೆ ದೂರು ನೀಡಿದ್ದಾರೆ. ಅದರಲ್ಲಿ  ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನ್ಯಾಯಾಂಗ ವ್ಯವಸ್ಥೆಗೆ ತನ್ನದೇ ಆದ ಘನತೆ ಮತ್ತು ಗೌರವವಿದ್ದು, ವಕೀಲ ವೃತ್ತಿ ಸದರಿ ವ್ಯವಸ್ಥೆಯ ಭಾಗವಾಗಿ ತನ್ನದೇ ಆದ ವೃತ್ತಿ ಗಾಂರ್ಭೀಯತೆಯನ್ನು ಹೊಂದಿದೆ. ವಕೀಲರಾದ ನಾವುಗಳು ನಮ್ಮ ವೃತ್ತಿಗೆ ಸಂಬಂಧಿಸಿದಂತೆ ಸಾಂವಿಧಾನಿಕವಾಗಿ ಹಲವು ನಿಯಮಗಳನ್ನು ರೂಪಿಸಿಕೊಂಡಿದ್ದು, ರಾಷ್ಟ್ರೀಯ ವಕೀಲ ಪರಿಷತ್ತು ಹಾಗೂ ರಾಜ್ಯ ವಕೀಲ ಪರಿಷತ್ತ್ ಅನ್ನು ರೂಪಿಸಿಕೊಂಡು ಸಾಂಸ್ಥಿಕ ಸ್ವಾಯತ್ತ ಸಂಸ್ಥೆಗಳನ್ನು ಹೊಂದಿದ್ದು, ಅದರ ಮೂಲಕ ಹಲವು ನಿಯಮಾವಳಿಗಳನ್ನು ವಕೀಲ ವೃತ್ತಿಗೆ ಸಂಬಂಧಿಸಿದಂತೆ ರೂಪಿಸಿಕೊಂಡಿದ್ದೇವೆ ಎಂದಿದ್ದಾರೆ. ಮೇಲ್ಕಂಡ ಸ್ವಾಯತ್ತ ಸಂಸ್ಥೆಗಳ ಜೊತೆಗೆ…

Read More

ಬೆಂಗಳೂರು: ವಿವಾದಾತ್ಮಕವಾದಂತ ಪೋಸ್ಟ್ ಒಂದನ್ನು ಎಕ್ಸ್ ನಲ್ಲಿ ಮಾಡಿದಂತ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ ಹಾಗೂ ಬಿಜೆಪಿಯ ಅಮಿತ್ ಮಾಳವೀಯ ಅವರಿದೆ ಕರ್ನಾಟಕ ಪೊಲೀಸರು ಸಮನ್ಸ್ ಜಾರಿಗೊಳಿಸಿದ್ದಾರೆ. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ವಿರುದ್ಧ ಬಿಜೆಪಿ ಟ್ವೀಟ್ ಮಾಡಿದ್ದಕ್ಕೆ ಸಂಬಂಧಿಸಿದಂತೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಮತ್ತು ಪಕ್ಷದ ಮುಖಂಡ ಅಮಿತ್ ಮಾಳವೀಯ ಅವರಿಗೆ ಬೆಂಗಳೂರು ಹೈಗ್ರೌಂಡ್ಸ್ ಪೊಲೀಸ್ ಠಾಣೆಗೆ ಪೊಲೀಸರು ಬುಧವಾರ ಸಮನ್ಸ್ ಜಾರಿ ಮಾಡಿದ್ದಾರೆ. ಈ ವಿವಾದಾತ್ಮಕ ಪೋಸ್ಟ್ ಸಂಬಂಧ 7 ದಿನಗಳಲ್ಲಿ ಉತ್ತರಿಸುವಂತೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ, ಅಮಿತ್ ಮಾಳವೀಯ ಅವರಿಗೆ ಬೆಂಗಳೂರಿನ ಹೈಗ್ರೌಂಡ್ಸ್ ಠಾಣೆಯ ಪೊಲೀಸರು ಸೂಚಿಸಲಾಗಿದೆ. https://twitter.com/ANI/status/1788165375269507449 https://kannadanewsnow.com/kannada/sslc-results-to-be-declared-tomorrow-at-10-30-am-heres-how-to-check-the-result-sslc-exam-results-2024/ https://kannadanewsnow.com/kannada/these-accounts-will-be-closed-after-this-period-punjab-national-bank-to-customers/

Read More

ಬೆಂಗಳೂರು: ರಾಜ್ಯದ ಬಿಜೆಪಿ ನಾಯಕರೇ, ನಿಮಗೆ ಮಾನ-ಮರ್ಯಾದೆ ಎನ್ನುವುದೇನಾದರೂ ಇದ್ದರೆ ಮೊದಲು ಜನರನ್ನು ತಪ್ಪುದಾರಿಗೆಳೆಯುವ ಈ ಹೇಳಿಕೆಯನ್ನು ವಾಪಸು ಪಡೆಯುವಂತೆ ಸಿಎಂ ಸಿದ್ಧರಾಮಯ್ಯ ಆಗ್ರಹಿಸಿದ್ದಾರೆ. ಇಂದು ಎಕ್ಸ್ ನಲ್ಲಿ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವಂತ ಅವರು, ಬಿಜೆಪಿ ನಾಯಕರೇ, ನಮ್ಮ ಕೈಗೆ ಬಡಿಗೆ ಕೊಟ್ಟು ಮತ್ತೆ ಮತ್ತೆ ಯಾಕೆ ಬಡಿಸಿಕೊಳ್ಳೀರಿ? ನಿಮ್ಮ ಸುಳ್ಳುಗಳನ್ನು ಬಯಲು ಮಾಡಲು ಅವಕಾಶ ಕೊಟ್ಟು ಸಮಾಜದ ಎದುರು ಯಾಕೆ ಬೆತ್ತಲಾಗುತ್ತೀರಿ? ಕಾಂಗ್ರೆಸ್ ಸರ್ಕಾರ ಹೊಸಕೋಟೆಯ ಅವಿಮುಕ್ತೇಶ್ವರ ಸ್ವಾಮಿ ದೇವಸ್ಥಾನದ ಬ್ರಹ್ಮೋತ್ಸವ ಸಮಿತಿಗೆ ಮುಸ್ಲಿಮ್ ಸಮುದಾಯದ ನವಾಜ್ ಅವರನ್ನು ಸದಸ್ಯರನ್ನಾಗಿ ಮಾಡಿದೆ ಎಂದು ಎದೆಬಡಿದುಕೊಳ್ಳೀರಲ್ಲಾ? ಎಂದು ಪ್ರಶ್ನಿಸಿದ್ದಾರೆ. ನಿಮ್ಮದೇ ಪಕ್ಷದ ಸರ್ಕಾರ 2020 ಮತ್ತು 2022ರ ಸಾಲಿನಲ್ಲಿ ಇದೇ ಬ್ರಹ್ಮೋತ್ಸವ ಸಮಿತಿಗೆ ಮುಸ್ಲಿಮ್ ಸಮುದಾಯ ವ್ಯಕ್ತಿಗಳನ್ನು ಸದಸ್ಯರನ್ನಾಗಿ ಮಾಡಿದಾಗ ನಿಮ್ಮಲ್ಲಿ ಈಗ ಉಕ್ಕಿ ಹರಿಯುತ್ತಿರುವ ಹಿಂದುತ್ವದ ಅಭಿಮಾನ ಆಗ ಎಲ್ಲಿ ಅಡಗಿ ಕೂತಿತ್ತು? ಎಂದು ಕೇಳಿದ್ದಾರೆ. ಹೊಸಕೋಟೆಯ ಅವಿಮುಕ್ತೇಶ್ವರ ಸ್ವಾಮಿ ದೇವಸ್ಥಾನ ಸರ್ವಧರ್ಮಗಳನ್ನು ಸಮಭಾವದಿಂದ ಕಾಣುವ ಹಿಂದು ಧರ್ಮದ…

Read More

ನವದೆಹಲಿ: ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಮಧ್ಯಂತರ ಜಾಮೀನು ಕುರಿತು ಶುಕ್ರವಾರ ಆದೇಶ ಹೊರಡಿಸಬಹುದು ಎಂದು ಸುಪ್ರೀಂ ಕೋರ್ಟ್ ಹೇಳಿದೆ. ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಜಾಮೀನು ಅರ್ಜಿಯ ಕುರಿತು ಮೇ 10 ರಂದು ಆದೇಶ ಹೊರಡಿಸಬಹುದು ಎಂದು ಸುಪ್ರೀಂ ಕೋರ್ಟ್ ಬುಧವಾರ ತಿಳಿಸಿದೆ. ನ್ಯಾಯಮೂರ್ತಿ ಸಂಜೀವ್ ಖನ್ನಾ ಅವರು ವಿಚಾರಣೆಯ ಸಮಯದಲ್ಲಿ ಎಎಸ್ಜಿ ಎಸ್.ವಿ.ರಾಜು ಅವರಿಗೆ ಈ ವಿಷಯ ತಿಳಿಸಿದರು ಎಂದು ಸುದ್ದಿ ಸಂಸ್ಥೆ ಪಿಟಿಐ ವರದಿ ಮಾಡಿದೆ. ಕೇಜ್ರಿವಾಲ್ ಅವರ ಜಾಮೀನು ಅರ್ಜಿಯನ್ನು ಸುಪ್ರೀಂ ಕೋರ್ಟ್ ಮಂಗಳವಾರ ಆಲಿಸಿ ಆದೇಶವನ್ನು ಕಾಯ್ದಿರಿಸಿದೆ. ವಿಚಾರಣೆಯ ಸಮಯದಲ್ಲಿ, ಚುನಾವಣೆಯ ದೃಷ್ಟಿಯಿಂದ ಕೇಜ್ರಿವಾಲ್ ಅವರನ್ನು ಮಧ್ಯಂತರ ಜಾಮೀನಿನ ಮೇಲೆ ಬಿಡುಗಡೆ ಮಾಡಿದರೆ ಅವರು ತಮ್ಮ ಅಧಿಕೃತ ಕರ್ತವ್ಯಗಳನ್ನು ನಿರ್ವಹಿಸಲು ಬಯಸುವುದಿಲ್ಲ ಎಂದು ಸುಪ್ರೀಂ ಕೋರ್ಟ್ ಹೇಳಿದೆ. ಕೇಜ್ರಿವಾಲ್ ಅವರ ವಕೀಲ ಅಭಿಷೇಕ್ ಸಿಂಘ್ವಿ ಅವರು, ದೆಹಲಿ ಲೆಫ್ಟಿನೆಂಟ್ ಗವರ್ನರ್ ಅವರು ಕಡತಗಳಿಗೆ ಸಹಿ ಹಾಕಿಲ್ಲ…

Read More

ಬೆಂಗಳೂರು: ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರು ಲೈಂಗಿಕ ದೌರ್ಜನ್ಯ ನಡೆಸಿದ್ದಾರೆಂಬ ಆರೋಪದ ಪ್ರಕರಣಗಳ ತನಿಖೆಗೆ ರಚಿಸಲಾಗಿರುವ ವಿಶೇಷ ತನಿಖಾ ದಳವು ದಾಖಲಿಸುವ ಪ್ರಕರಣಗಳಲ್ಲಿ ನ್ಯಾಯಾಲಯದಲ್ಲಿ ಹಾಜರಾಗಲು ಹಾಗೂ ಪ್ರಕರಣಗಳನ್ನು ನಡೆಸಲು ಇಬ್ಬರು ಹೆಚ್ಚುವರಿ ಸರ್ಕಾರಿ ಅಭಿಯೋಜಕರನ್ನು ನೇಮಕ ಮಾಡಲಾಗಿದೆ. ಈ ಕುರಿತಂತೆ ಇಂದು ಸಿಎಂ ಕಚೇರಿಯಿಂದ ಮಾಧ್ಯಮ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ಎಸ್.ಐ. ಟಿ. ಮುಂದೆ ದಾಖಲಾಗುವ ಪ್ರಕರಣಗಳಿಗೆ ಇಬ್ಬರು ಹೆಚ್ಚುವರಿ ವಿಶೇಷ ಸರ್ಕಾರಿ ಅಭಿಯೋಜಕರ ನೇಮಕ ಮಾಡಲಾಗಿದೆ. ಇದು ತಂಡವನ್ನು ಬಲಪಡಿಸುವ ಉದ್ದೇಶದಿಂದ ಹಿರಿಯ ವಕೀಲರಾದ ಅಶೋಕ್ ನಾಯಕ್ ಹಾಗೂ ಜಯನಾ ಕೊಠಾರಿ ಅವರನ್ನು ಹೆಚ್ಚುವರಿ ವಿಶೇಷ ಸರ್ಕಾರಿ ಅಭಿಯೋಜಕರನ್ನಾಗಿ ನೇಮಕ ಮಾಡಿ ಸರ್ಕಾರ ಆದೇಶ ಹೊರಡಿಸಿದೆ ಎಂದು ತಿಳಿಸಿದೆ. https://kannadanewsnow.com/kannada/state-government-issues-order-revising-duration-syllabus-of-degree-programmes/ https://kannadanewsnow.com/kannada/these-accounts-will-be-closed-after-this-period-punjab-national-bank-to-customers/

Read More

ಬೆಂಗಳೂರು: ರಾಜ್ಯ ಸರ್ಕಾರದಿಂದ ಉನ್ನತ ಶಿಕ್ಷಣ ವ್ಯಾಪ್ತಿಯಲ್ಲಿನ ವಿಶ್ವವಿದ್ಯಾಲಯಗಳು ಮತ್ತು ಕಾಲೇಜುಗಳಲ್ಲಿ 2024-25ನೇ ಸಾಲಿನಿಂದ ಜಾರಿಗೆ ಬರುವಂತೆ ಪದವಿ ಕಾರ್ಯಕ್ರಮಗಳ ಅವಧಿ ಮತ್ತು ಪಠ್ಯಕ್ರಮವನ್ನು ಪರಿಷ್ಕರಿಸಿ ಆದೇಶಿಸಿದೆ. ಈ ಸಂಬಂಧ ಉನ್ನತ ಶಿಕ್ಷಣ ಇಲಾಖೆಯ ಸರ್ಕಾರದ ಉಪ ಕಾರ್ಯದರ್ಶಿ ಕೆ. ವಿಕೇಶ್ ಬಾಬು ಅವರು ನಡವಳಿಯನ್ನು ಹೊರಡಿಸಿದ್ದಾರೆ. ಅದರಲ್ಲಿ ದಿನಾಂಕ: 07.08.2021ರ ಆದೇಶದಲ್ಲಿ ಭಾರತ ಸರ್ಕಾರವು ಪಕಟಿಸಿರುವ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ರಾಜ್ಯದ ಉನ್ನತ ಶಿಕ್ಷಣ ಇಲಾಖೆಯಡಿ ವಿಶ್ವವಿದ್ಯಾಲಯಗಳು ಮತ್ತು ಸಂಯೋಜಿತ ಕಾಲೇಜುಗಳಲ್ಲಿ 2021-22ನೇ ಶೈಕ್ಷಣಿಕ ವರ್ಷದಿಂದ ಅಗತ್ಯ ಮಾರ್ಗಸೂಚಿಗಳನುಸಾರ ಅನುಷ್ಠಾನಗೊಳಿಸಲಾಗಿರುತ್ತದೆ ಎಂದಿದ್ದಾರೆ. ದಿನಾಂಕ: 11.10.2023ರ ಆದೇಶದಲ್ಲಿ ಹೊಸ ಶಿಕ್ಷಣ ನೀತಿಯನ್ನು ರೂಪಿಸುವ ಉದ್ದೇಶದಿಂದ ಕರ್ನಾಟಕ ರಾಜ್ಯ ಶಿಕ್ಷಣ ನೀತಿಯ ಕರಡನ್ನು ಸಿದ್ಧಪಡಿಸಲು ಶ್ರೇಷ್ಠ ಶಿಕ್ಷಣ ತಜ್ಞರಾದ Prof. Sukhdev Torat, ಇವರ ಅಧ್ಯಕ್ಷತೆಯಲ್ಲಿ ರಾಜ್ಯ ಶಿಕ್ಷಣ ನೀತಿ ಆಯೋಗವನ್ನು ರಚಿಸಲಾಗಿರುತ್ತದೆ ಎಂದು ತಿಳಿಸಿದ್ದಾರೆ. ರಾಜ್ಯ ಶಿಕ್ಷಣ ನೀತಿ ಆಯೋಗವು ದಿನಾಂಕ: 18.01.2024ರಂದು ಸರ್ಕಾರಕ್ಕೆ ಮಧ್ಯಂತರ ವರದಿಯನ್ನು ಸಲ್ಲಿಸಿರುತ್ತದೆ ಎಂದು ಹೇಳಿದ್ದಾರೆ.…

Read More