Subscribe to Updates
Get the latest creative news from FooBar about art, design and business.
Author: kannadanewsnow09
ಶಿವಮೊಗ್ಗ: ಇಂದು ನಾಗರ ಪಂಚಮಿ. ರಾಜ್ಯಾಧ್ಯಂತ ಸಡಗರ, ಸಂಭ್ರಮದಿಂದ ಹುತ್ತಕ್ಕೆ ಹಾಲೆರೆದು ಪೂಜಿಸಲಾಗಿದೆ. ಇಂತಹ ನಾಗರ ಪಂಚಮಿ ದಿನದಂದೇ ಹಾವು ಕಚ್ಚಿ ಬಾಣಂತಿಯೊಬ್ಬರು ಸಾವನ್ನಪ್ಪಿರುವಂತ ಘಟನೆ ಸಾಗರ ತಾಲ್ಲೂಕಲ್ಲಿ ನಡೆದಿದೆ. ಶಿವಮೊಗ್ಗ ಜಿಲ್ಲೆಯ ಸಾಗರ ತಾಲ್ಲೂಕಿನ ಹುತ್ತಾದಿಂಬ ಗ್ರಾಮದಲ್ಲಿ ನಾಗರ ಪಂಚಮಿಯ ಇಂದಿನ ದಿನದಂದೇ ಬಾಣಂತಿಯಾಗಿದ್ದಂತ ರಂಜಿತಾ(22) ಎಂಬುವರು ಸಾವನ್ನಪ್ಪಿರುವುದಾಗಿ ತಿಳಿದು ಬಂದಿದೆ. ರಂಜಿತಾ ಅವರು ಹುತ್ತಾದಿಂಬ ಗ್ರಾಮದಲ್ಲಿ ಜಾನು+ಪ್ರಾಥಮಿಕ ಚಿಕಿತ್ಸೆ ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮೆಗ್ಗಾನ್ ಗೆ ಕರೆದೊಯ್ಯಲು ವೈದ್ಯರು ಸೂಚಿಸಿದ್ದಾರೆ. ಹೀಗೆ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ಕರೆದೊಯ್ಯುತ್ತಿದ್ದ ವೇಳೆಯಲ್ಲಿ ರಂಜಿತಾ ಮಾರ್ಗಮಧ್ಯೆ ಸಾವನ್ನಪ್ಪಿದ್ದಾರೆ. ಅಂದಹಾಗೇ ರಂಜಿತಾ ಅವರು ಮೂರು ತಿಂಗಳ ಹಿಂದಷ್ಟೇ ಎರಡನೇ ಮಗುವಿಗೆ ಜನ್ಮ ನೀಡಿದ್ದರು. ಇಂದು ಹಾವು ಕಚ್ಚಿ ಸಾವನ್ನಪ್ಪಿದ್ದರಿಂದ ಇಬ್ಬರು ಮಕ್ಕಳು ತಾಯಿಯನ್ನು ಕಳೆದುಕೊಂಡಂತೆ ಆಗಿದೆ.
ಮಂಗಳೂರು: ಕರ್ನಾಟಕ ರಾಜ್ಯ ಕಾನೂನು ವಿವಿಯು ಹಬ್ಬ-ಹರಿದಿನಗಳಂದು ಹಾಗೂ ವಾರಾಂತ್ಯದ ಭಾನುವಾರದಂದು ಪರೀಕ್ಷೆ ನಡೆಸಲು ತಯಾರಿ ನಡೆದಿದೆ ಎಂಬ ಮಾಹಿತಿ ಬಂದಿದೆ. ಆ.25ರಂದು ಹಬ್ಬದ ದಿನದಂದೇ ಪರೀಕ್ಷೆ ನಿಗದಿ ಮಾಡಲಿದೆ ಎನ್ನಲಾಗುತ್ತಿದೆ. ಇಂತಹ ಎಲ್ ಎಲ್ ಬಿ ಪರೀಕ್ಷೆಗಳನ್ನು ಮುಂದೂಡುವಂತೆ ವಿದ್ಯಾರ್ಥಿ ಹೋರಾಟಗಾರ ಕ್ರಿಸ್ಟನ್ ಮನೆಜಸ್ ಅವರು ಕುಲಪತಿಗಳಿಗೆ ಪತ್ರ ಬರೆದು ಆಗ್ರಹಿಸಿದ್ದಾರೆ. ಈ ಬಗ್ಗೆ ಹುಬ್ಬಳ್ಳಿಯ ಕರ್ನಾಟಕ ರಾಜ್ಯ ಕಾನೂನು ವಿವಿಯ ಕುಲಪತಿಗಳಿಗೆ ಪತ್ರ ಬರೆದಿರುವಂತ ಅವರು, ಹಬ್ಬ ಹರಿದಿನಗಳಂದು, ರಾಷ್ಟ್ರೀಯ ರಜಾದಿನಗಳಂದು ಹಾಗೂ ವಾರಾಂತ್ಯದ ಭಾನುವಾರದಂದು ಶೈಕ್ಷಣಿಕ ತರಗತಿಗಳನ್ನು ಹಾಗೂ ಪರೀಕ್ಷೆಗಳನ್ನು ನಡೆಸುವುದು ಸರಿಯಲ್ಲ ಎಂಬ ಸಂಪ್ರದಾಯ ಬಹುಕಾಲ ಹಿಂದಿನಿಂದಲೇ ನಡೆದು ಬಂದಿರುವ ಸಂಪ್ರದಾಯ ಎಂದು ಹೇಳಿದ್ದಾರೆ. ಕರ್ನಾಟಕ ಕಾನೂನು ವಿಶ್ವವಿದ್ಯಾಲಯವು ಈ ಸಂಪ್ರದಾಯಕ್ಕೆ ವಿರುದ್ದವಾಗಿ ನಡೆದುಕೊಳ್ಳುತ್ತಿರುವುದು ವಿಷಾದದ ಸಂಗತಿ. ಕಳೆದ ಸೆಮಿಸ್ಟರ್ ಪರೀಕ್ಷೆ ವೇಳೆ ಕ್ರೈಸ್ತ ಧರ್ಮೀಯರ ಹಬ್ಬದ ದಿನದಂದು ಪರೀಕ್ಷೆ ನಿಗದಿ ಪಡಿಸಿ, ವ್ಯಾಪಕ ಆಕ್ಷೇಪ ವ್ಯಕ್ತವಾದ ನಂತರ ಬದಲಾವಣೆ ಮಾಡಲಾಗಿತ್ತು. ಈ ಬಾರಿ ಹಿಂದೂಗಳ…
ಶಿವಮೊಗ್ಗ: ವಿದ್ಯುತ್ ನಿರ್ವಹಣಾ ಕಾಮಗಾರಿಯ ಹಿನ್ನಲೆಯಲ್ಲಿ ದಿನಾಂಕ 11-08-2024ರಂದು ಸೊರಬ ತಾಲ್ಲೂಕಿನ ಕೆಲ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. ಈ ಕುರಿತಂತೆ ಶಿವಮೊಗ್ಗ ಜಿಲ್ಲೆಯ ಸೊರಬ ತಾಲ್ಲೂಕಿನ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿದ್ದು, ದಿನಾಂಕ:11.08.2024 ರಂದು 110/11 ಕೆವಿ ಸೊರಬ ವಿದ್ಯುತ್ ವಿತರಣಾ ಕೇಂದ್ರದಿಂದ ವಿದ್ಯುತ್ ಸರಬರಾಜಾಗುವ ಕೆಳಕಂಡ ನೀಡಗಳಿಗೆ ವಿದ್ಯುತ್ ವ್ಯತ್ಯಯವಾಗಲಿದೆ ಎಂದಿದ್ದಾರೆ. ‘ದಿನಾಂಕ:11.08.2024 ರಂದು ಕೆಳಕಂಡ ಫೀಡರ್ಗಳ ತುರ್ತು ನಿರ್ವಹಣಾ ಕಾಮಗಾರಿಯನ್ನು ನಡೆಸಲು ಉದ್ದೇಶಿಸಿರುವುದರಿಂದ, 10/11 ಕೆವಿ ವಿ.ವಿ ಕೇಂದ್ರ ಸೊರಬದಿಂದ ವಿದ್ಯುತ್ ಸರಬರಾಜಾಗುವ ಎಫ್-21 ಸೊರಬ ಪಟ್ಟಣ ಸೇರಿದಂತೆ ಎಫ್2 ಸಾರೇಕೊಪ್ಪ, ಎಫ್-3 ಬಳ್ಳಬೈಲು, ಎಫ್ ಓಟೂರು, ಎಫ್ ಚಿಕ್ಲಾವಲ, ಎಫ್9 ಒಳಾಗಿ, ಎಫ್-11 ಮಂಟಿ, ಎಫ್15 ಕಲ್ಲಂಬ ಎನ್ಜೆವೈ, ಎಫ್-16 ಕಸೂರು ಎಸ್ವೈ, ಎಫ್17 ಯಲವ, ಎನ್ಟಿಮೈ ಎಫ್-23 ತಾವರೆಹಳ್ಳಿ, ಎಫ್-24 ಕಕ್ಕರಸಿ, ಎಫ್-25 ನಡಹಳ್ಳಿ ಹಾಗೂ ಎಫ್26 ಸೊರಬ ಇಂಡಸ್ಟ್ರೀಯಲ್ ಫೀಡಲ್ಗಳ ವ್ಯಾಪ್ತಿಗೊಳಪಡುವ ಎಲ್ಲಾ ಗ್ರಾಮಗಳಿಗೆ ಬೆಳಗ್ಗೆ 10:00 ರಿಂದ…
ನವದೆಹಲಿ: ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ (ಇಡಿ) ಮತ್ತು ಕೇಂದ್ರ ತನಿಖಾ ದಳ (ಸಿಬಿಐ) ದಾಖಲಿಸಿರುವ ಪ್ರಕರಣಗಳಲ್ಲಿ ಸಿಸೋಡಿಯಾ ಅವರಿಗೆ ಸುಪ್ರೀಂ ಕೋರ್ಟ್ ಜಾಮೀನು ನೀಡಿದ ನಂತರ ದೆಹಲಿಯ ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಇಂದು ಜೈಲಿನಿಂದ ಹೊರಬಂದರು. ಈ ಬೆಳವಣಿಗೆಗೆ ಪ್ರತಿಕ್ರಿಯಿಸಿದ ಎಎಪಿಯ ಸಂಜಯ್ ಸಿಂಗ್, ನ್ಯಾಯಾಲಯದ ತೀರ್ಪನ್ನು ಶ್ಲಾಘಿಸಿದರು, ಇದನ್ನು “ಸತ್ಯದ ಗೆಲುವು” ಮತ್ತು “ಕೇಂದ್ರದ ಸರ್ವಾಧಿಕಾರದ ಮುಖಕ್ಕೆ ಕಪಾಳಮೋಕ್ಷ” ಎಂದು ಕರೆದರು. ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಗೋಪಾಲ್ ರೈ, “ಇದು ಕೇವಲ ಜಾಮೀನು ಅಲ್ಲ, ಆದರೆ ಬಿಜೆಪಿಯ ಸೋಲು” ಎಂದು ಹೇಳಿದರು. ಸುಪ್ರೀಂ ಕೋರ್ಟ್ ತೀರ್ಪನ್ನು ಸ್ವಾಗತಿಸಿರುವ ಬಿಆರ್ಎಸ್ ಕಾರ್ಯಕಾರಿ ಅಧ್ಯಕ್ಷ ಕೆ.ಟಿ.ರಾಮರಾವ್, ತಮ್ಮ ಸಹೋದರಿ ಮತ್ತು ಪಕ್ಷದ ಎಂಎಲ್ಸಿ ಕೆ.ಕವಿತಾ ಸೇರಿದಂತೆ ಎಲ್ಲರಿಗೂ ಶೀಘ್ರದಲ್ಲೇ ಜಾಮೀನು ಸಿಗುತ್ತದೆ ಎಂದು ಆಶಿಸಿದ್ದಾರೆ. ಸಿಸೋಡಿಯಾ ಅವರ ಜಾಮೀನು ಅರ್ಜಿಯನ್ನು ಆಲಿಸಿದ ಸುಪ್ರೀಂ ಕೋರ್ಟ್, 17 ತಿಂಗಳ ಸುದೀರ್ಘ ಸೆರೆವಾಸ ಮತ್ತು ವಿಚಾರಣೆಯ ವಿಳಂಬದ ಹಿನ್ನೆಲೆಯಲ್ಲಿ ಪಿಎಂಎಲ್ಎಯ ‘ತ್ರಿವಳಿ…
ಬೆಂಗಳೂರು : ಕರ್ನಾಟಕ ಮಾಧ್ಯಮ ಅಕಾಡೆಮಿಯು ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಅಥವಾ ಪದವಿ ಪಡೆದಿರುವ ಮಹಿಳಾ ವಿದ್ಯಾರ್ಥಿಗಳಿಗೆ ಪತ್ರಿಕಾಲಯದಲ್ಲಿ ತರಬೇತಿ ಪಡೆಯಲು ಅರ್ಜಿ ಆಹ್ವಾನಿಸಿದೆ. ಪ್ರಸಕ್ತ ಸಾಲಿನಲ್ಲಿ 5 ಮಂದಿ ಮಹಿಳಾ ವಿದ್ಯಾರ್ಥಿಗಳಿಗೆ ಪ್ರಮುಖ ದಿನಪತ್ರಿಕೆಗಳ ಕಾರ್ಯಾಲಯಗಳಲ್ಲಿ 2 ತಿಂಗಳ ಕಾಲ ತರಬೇತಿ ಪಡೆಯಲು, ಮಾಸಿಕ ತಲಾ 20,000/- ರೂ ಗಳನ್ನು ಶಿಶ್ಯವೇತನ ನೀಡಲಾಗುವುದು. ಕರ್ನಾಟಕದ ಯಾವುದೇ ವಿಶ್ವವಿದ್ಯಾಲಯಗಳಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ/ಪದವಿಯಲ್ಲಿ ಅತಿ ಹೆಚ್ಚು ಅಂಕ ಗಳಿಸಿರುವ ವಿದ್ಯಾರ್ಥಿಗಳಿಗೆ ಆದ್ಯತೆ ನೀಡಲಾಗಿದೆ. ಮಹಿಳಾ ವಿದ್ಯಾರ್ಥಿಗಳು ಆಗಸ್ಟ್ 26 ರೊಳಗೆ ತಮ್ಮ ಸ್ವವಿವರ, ದೂರವಾಣಿ ಸಂಖ್ಯೆ, ಇ-ಮೇಲ್ ವಿಳಾಸ, ಆರ್ಥಿಕ ಸ್ಥಿತಿ, ಅಂಕಪಟ್ಟಿಗಳ ಫೋಟೋ ಪ್ರತಿಯನ್ನು ಸ್ಕ್ಯಾನ್ ಮಾಡಿ karnatakamediaacademy@gmail.com ಗೆ ಇಮೇಲ್ ಮೂಲಕ ಕಳುಹಿಸಬಹುದು. 28 ವರ್ಷದೊಳಗಿನ ಮಹಿಳಾ ವಿದ್ಯಾರ್ಥಿಗಳಿಗೆ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದ್ದು, ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಅಕಾಡೆಮಿಯು ಅರ್ಹತಾ ಪರೀಕ್ಷೆ ನಡೆಸಲಿದೆ. ಈ ಪರೀಕ್ಷೆಯ ದಿನಾಂಕ, ಸ್ಥಳ ಮತ್ತು ಸಮಯವನ್ನು ಸಂದರ್ಶನದ ವೇಳೆ ತಿಳಿಸಲಾಗುವುದು…
ನವದೆಹಲಿ: ತಮ್ಮನ್ನು ಏಕವಚನದಲ್ಲಿ ಕೀಳಾಗಿ ನಿಂದಿಸಿದ ಡಿಸಿಎಂ ಡಿಕೆ ಶಿವಕುಮಾರ್ ವಿರುದ್ಧ ತೀವ್ರ ಮಟ್ಟದಲ್ಲಿ ವಾಗ್ದಾಳಿ ನಡೆಸಿದ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು; ದಿಕೆಶಿಯನ್ನು ನಪುಂಸಕ ಎಂದು ಕರೆದರು. ನವದೆಹಲಿಯಲ್ಲಿ ಮಾಧ್ಯಮಗಳ ಜತೆ ಮಾತನಾಡಿದ ಅವರು; ಡಿ.ಕೆ.ಶಿವಕುಮಾರ್ ಗೆ ವ್ಯಕ್ತಿತ್ವ ಎನ್ನುವುದು ಇದೆಯಾ? ಅವರದ್ದು ಒಂದು ನಾಲಿಗೆನಾ.. ಆತ ಮನುಷ್ಯನಾ? ಎಂದು ಆಕ್ರೋಶ ವ್ಯಕ್ತಪಡಿಸಿದರು. ಧೈರ್ಯ ಎನ್ನುವುದು ಇದ್ದರೆ ಗಂಡಸ್ತನದಿಂದ ರಾಜಕೀಯ ಮಾಡಬೇಕು. ಸಂಪುಸಕ ಮಾಡುವ ಕೆಲಸ ಮಾಡುತ್ತಿದ್ದಾನೆ. ನನ್ನನ್ನು ಪ್ರಶ್ನೆ ಮಾಡುತ್ತಾನೆ. ಯಾರ ಮಗನನ್ನು ಬೆಳೆಸಬೇಕು ಎಂದು ಜನ ನಿರ್ಧಾರ ಮಾಡುತ್ತಾರೆ. ಒಳ್ಳೆಯದು, ಕೆಟ್ಟದು ಏನು ಎನ್ನುವುದು ಅವರಿಗೆ ಗೊತ್ತಿದೆ ಎಂದು ಕೇಂದ್ರ ಸಚಿವರು ಕಿಡಿ ಕಾರಿದರು. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಜನರೇ ನಿರ್ಧಾರ ಮಾಡುತ್ತಾರೆ. ಮೊದಲು ನೆಟ್ಟಗೆ ಬದುಕು. ನನ್ನನ್ನು ಕೆಣಕಬೇಡ ಶಿವಕುಮಾರ್..ಹುಷಾರು! ಎಂದು ಕುಮಾರಸ್ವಾಮಿ ಅವರು ಎಚ್ಚರಿಕೆ ಕೊಟ್ಟರು. ನಿನ್ನ ಯೋಗ್ಯತೆ, ಹಣೆಬರಹ ನನಗೆ ಬಹಳ ಚನ್ನಾಗಿ ಗೊತ್ತಿದೆ. ನಿನ್ನ ಬಗ್ಗೆ ನನ್ನಲ್ಲಿರುವ ಮಾಹಿತಿ ತೆಗೆದಿಟ್ಟರೆ ನೀನು ಬದುಕಲು…
ಮಂಡ್ಯ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಲೂಟಿ ಮಾಡಿದ 14 ನಿವೇಶನ ಹಾಗೂ ಅವರ ಬೆಂಬಲಿಗರು ಲೂಟಿ ಮಾಡಿದ 400-500 ನಿವೇಶನಗಳನ್ನು ಸರ್ಕಾರಕ್ಕೆ ಮರಳಿ ನೀಡಬೇಕು. ಈ ಪ್ರಕರಣವನ್ನು ಸಿಬಿಐಗೆ ವಹಿಸಬೇಕು. ತನಿಖೆ ಮುಗಿಯುವವರೆಗೆ ಮುಖ್ಯಮಂತ್ರಿ ಸ್ಥಾನದಲ್ಲಿರಬಾರದು, ರಾಜೀನಾಮೆ ನೀಡಬೇಕು ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಆಗ್ರಹಿಸಿದರು. ಬಿಜೆಪಿ ಪಾದಯಾತ್ರೆಯ ನಡುವೆ ಮಂಡ್ಯದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮುಡಾ ಹಗರಣದಲ್ಲಿ ʼನಾನು ಕಳ್ಳ ಅಲ್ಲ, ನನ್ನ ಬಿಟ್ಟುಬಿಡಿʼ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನಮಗಿಂತ ಮುಂದೆ ಹೋಗಿ ಹೇಳುತ್ತಿದ್ದಾರೆ. ಈ ಹಿಂದೆ ರೀಡು ಮಾಡಿದವರು ಕೂಡ ಇವರೇ. ಅದರ ಸಂಬಂಧ ರಚನೆಯಾದ ಕೆಂಪಣ್ಣ ಆಯೋಗವನ್ನು ಮುಚ್ಚಿ ಹಾಕಿದ್ದಾರೆ. ಈಗ ದೇಸಾಯಿ ಆಯೋಗ ರಚಿಸಿದ್ದಾರೆ ಎಂದು ದೂರಿದರು. ಟಿ.ಜೆ.ಅಬ್ರಹಾಂ ಕಳ್ಳ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಅವರು ವಿರೋಧ ಪಕ್ಷದ ನಾಯಕರಾಗಿದ್ದಾಗ ಅಬ್ರಹಾಂ ಅವರನ್ನು ಬೆಂಬಲಿಸಿದ್ದರು. ಅಬ್ರಹಾಂ ಬಿ.ಎಸ್.ಯಡಿಯೂರಪ್ಪ ವಿರುದ್ಧ ದಾಖಲಿಸಿದ ಪ್ರಕರಣ ನ್ಯಾಯಾಲಯದಲ್ಲಿದೆ. ಅಬ್ರಹಾಂ ಫ್ರಾಡ್ ಆಗಿದ್ದರೆ ಆ ಪ್ರಕರಣವನ್ನು ಸರ್ಕಾರ ವಾಪಸ್ ಪಡೆಯಲಿ. ಬಿಜೆಪಿ…
ನವದೆಹಲಿ: ಬಾರ್ಕ್ಲೇಸ್-ಹುರುನ್ ಇಂಡಿಯಾ ವರದಿಯ ಅತ್ಯಂತ ಮೌಲ್ಯಯುತ ಕುಟುಂಬ ವ್ಯವಹಾರಗಳ ಪಟ್ಟಿಯಲ್ಲಿ ಅಂಬಾನಿ ಕುಟುಂಬವು 25.75 ಟ್ರಿಲಿಯನ್ ಮೌಲ್ಯದೊಂದಿಗೆ ಅಗ್ರಸ್ಥಾನದಲ್ಲಿದೆ. ಇದು ಭಾರತದ ಜಿಡಿಪಿಯ ಶೇಕಡಾ 10 ಕ್ಕೆ ಸಮನಾಗಿದೆ. ಶ್ರೇಯಾಂಕಗಳು ಮಾರ್ಚ್ 20, 2024 ರಂತೆ ಕಂಪನಿಯ ಮೌಲ್ಯಮಾಪನಗಳನ್ನು ಆಧರಿಸಿವೆ ಮತ್ತು ಖಾಸಗಿ ಹೂಡಿಕೆಗಳು ಮತ್ತು ದ್ರವ ಸ್ವತ್ತುಗಳನ್ನು ಹೊರಗಿಡುತ್ತವೆ ಮತ್ತು ದ್ವಿಗುಣ ಎಣಿಕೆಯನ್ನು ತಡೆಗಟ್ಟಲು ಅಡ್ಡ-ಹಿಡುವಳಿಗಳಿಗೆ ಸರಿಹೊಂದಿಸುತ್ತವೆ. ಅಂಬಾನಿ ಕುಟುಂಬದ ನಂತರ ಬಜಾಜ್ ಕುಟುಂಬ 7.13 ಟ್ರಿಲಿಯನ್ ಮೌಲ್ಯದೊಂದಿಗೆ ಎರಡನೇ ಸ್ಥಾನದಲ್ಲಿದೆ ಮತ್ತು ನೀರಜ್ ಬಜಾಜ್ ನೇತೃತ್ವ ವಹಿಸಿದ್ದಾರೆ. ಬಿರ್ಲಾ ಕುಟುಂಬವು 5.39 ಟ್ರಿಲಿಯನ್ ಆಸ್ತಿಯೊಂದಿಗೆ ಮೂರನೇ ಸ್ಥಾನದಲ್ಲಿದೆ. ಒಟ್ಟಾರೆಯಾಗಿ, ಅಗ್ರ ಮೂರು ಕುಟುಂಬ ವ್ಯವಹಾರಗಳ ಹಿತಾಸಕ್ತಿಗಳು 460 ಬಿಲಿಯನ್ ಡಾಲರ್ ಮೌಲ್ಯದ್ದಾಗಿದೆ, ಇದು ಸಿಂಗಾಪುರದ ಜಿಡಿಪಿಗೆ ಸಮನಾಗಿದೆ ಎಂದು ವರದಿ ತಿಳಿಸಿದೆ. ಈ ಪಟ್ಟಿಯಲ್ಲಿ 4.71 ಟ್ರಿಲಿಯನ್ ಮೌಲ್ಯದ ಸಜ್ಜನ್ ಜಿಂದಾಲ್ ನೇತೃತ್ವದ ಕುಟುಂಬ ನಾಲ್ಕನೇ ಸ್ಥಾನದಲ್ಲಿದ್ದರೆ, ನಾಡರ್ ಕುಟುಂಬ 4.30 ಟ್ರಿಲಿಯನ್ ಮೌಲ್ಯದ ಐದನೇ ಸ್ಥಾನದಲ್ಲಿದೆ.…
ಮೈಸೂರು: ಮೂಡಾ ಅಕ್ರಮದಲ್ಲಿ ಶ್ರೀಮತಿ ಪಾರ್ವತಿ ಹಾಗೂ ಸಿದ್ದರಾಮಯ್ಯ ಅವರ ತಪ್ಪೇನಿದೆ? ಎಂಬುದಾಗಿ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಪ್ರಶ್ನಿಸಿದ್ದಾರೆ. ಇಂದು ಮೈಸೂರಿನಲ್ಲಿ ಜನಾಂದೋಲನ ಕಾರ್ಯಕ್ರಮದಲ್ಲಿ ಮಾತನಾಡಿದಂತ ಅವರು, ಇಲ್ಲಿ ಅಕ್ರಮ ಏನು ನಡೆದಿದೆ? ಸಿದ್ದರಾಮಯ್ಯ ಅವರ ಧರ್ಮಪತ್ನಿ ಪಾರ್ವತಿ ಅವರಿಗೆ ಅವರ ಸಹೋದರ ಖರೀದಿ ಮಾಡಿದ ಜಮೀನನ್ನು ಅರಿಶಿನ ಕುಂಕುಮಕ್ಕೆ ಉಡುಗೊರೆಯಾಗಿ ನೀಡಿದ್ದರು. ಆ ಜಮೀನನ್ನು ಮುಡಾದವರು ಅಕ್ರಮವಾಗಿ ಒತ್ತುವರಿ ಮಾಡಿಕೊಂಡ ಪರಿಣಾಮ ಅವರು ಪರಿಹಾರ ಅರ್ಜಿ ಹಾಕಿದರು. ನನ್ನಂತಹವನಾಗಿದ್ದರೆ ಶೇ.100ರಷ್ಟು ಪರಿಹಾರ ನೀಡಿ ಎಂದು ಹೋರಾಟ ಮಾಡುತ್ತಿದ್ದೆ. ಆದರೆ ಪಾರ್ವತಿ ಅವರು ಮುಡಾದವರು 50:50 ಅನುಪಾತದಲ್ಲಿ ಪರಿಹಾರ ಪಡೆಯಲು ಒಪ್ಪಿದರು. ಅವರು ಪರಿಹಾರದ ಅರ್ಜಿ ಹಾಕುವಾಗ ಇಂತಹುದೇ ಜಾಗದಲ್ಲಿ ಪರಿಹಾರ ನೀಡಿ ಎಂದು ಕೇಳಿಲ್ಲ. ಮೂಡಾದವರು ತಮ್ಮ ತಪ್ಪಿನ ಅರಿವಾಗಿ ಒಂದು ನಿರ್ಣಯಕ್ಕೆ ಬಂದು ಪಾರ್ವತಿ ಅವರಿಗೆ 14 ನಿವೇಶನ ಹಂಚಿಕೆ ಮಾಡಿದ್ದಾರೆ. ಇದರಲ್ಲಿ ತಪ್ಪೇನಿದೆ? ಸಿದ್ದರಾಮಯ್ಯ ಅವರು ನನ್ನ ಪತ್ನಿಗೆ ನಿವೇಶನ ನೀಡಿ ಎಂದು ಒತ್ತಡ ಹಾಕಿದ್ದಾರಾ?…
ಮೈಸೂರು: ಮಿಸ್ಟರ್ ಅಶೋಕ್, ಮಿಸ್ಟರ್ ವಿಜಯೇಂದ್ರ ನೀವು ಆಪರೇಶನ್ ಕಮಲದ ಮೂಲಕ ಈ ಹಿಂದೆ ಅನೇಕ ಸರ್ಕಾರ ತೆಗೆದಿದ್ದೀರಿ. ಮಿಸ್ಟರ್ ಕುಮಾರಸ್ವಾಮಿ, ನಿನ್ನ ಮುಖಂಡತ್ವದಲ್ಲಿ ಕೇವಲ 19 ಸೀಟುಗಳನ್ನು ಮಾತ್ರ ಗೆದ್ದಿದ್ದೀರಿ. ಈ ಡಿ.ಕೆ. ಶಿವಕುಮಾರ್ ಅಧ್ಯಕ್ಷತೆಯಲ್ಲಿ ಕಾಂಗ್ರೆಸ್ 136 ಸೀಟು ಗೆದ್ದಿದೆ. ಬ್ರಿಟಿಷರು 200 ವರ್ಷ ಆಳಿದರೂ ಈ ಕಾಂಗ್ರೆಸ್ ಅಳಿಸಲು ಆಗಲಿಲ್ಲ. ಬಡವರ ಶಕ್ತಿಯಿಂದ ಅಧಿಕಾರಕ್ಕೆ ಬಂದಿರುವ ಕಾಂಗ್ರೆಸ್ ಪಕ್ಷವನ್ನು ನೀನು ಎರಡು ಜನ್ಮ ಎತ್ತಿ ಬಂದರೂ ಅಳಿಸಲು ಸಾಧ್ಯವಿಲ್ಲ. ನೀನು ಏನೇ ಕುತಂತ್ರ ಮಾಡಿದರೂ ಕಾಂಗ್ರೆಸ್ ಅಳಿಸಲು ಸಾಧ್ಯವಿಲ್ಲ ಎಂಬುದಾಗಿ ಡಿಸಿಎಂ ಡಿಕೆಶಿ ಗುಡುಗಿದ್ದಾರೆ. ವಿಜಯೇಂದ್ರ, ಅಶೋಕ, ಕುಮಾರಸ್ವಾಮಿ ನಿಮಗೆ ಸಿದ್ದರಾಮಯ್ಯನವರ ರಾಜೀನಾಮೆ ಬೇಕಾ? ಮಾಧ್ಯಮಗಳು ನನ್ನನ್ನು ಬಂಡೆ ಎಂದರು. ಕಲ್ಲು ಪ್ರಕೃತಿ, ಕಡಿದರೆ ಆಕೃತಿ, ಪೂಜಿಸಿದರೆ ಸಂಸ್ಕೃತಿ. ಈ ಬಂಡೆ ಸಿದ್ದರಾಮಯ್ಯನ ಜತೆ ಇದೆ. ಈ ಬಂಡೆ ಜತೆ 135 ಶಾಸಕರೂ ಇದ್ದಾರೆ. ಕೋಟ್ಯಂತರ ಜನ ಸಿದ್ದರಾಮಯ್ಯನವರ ಜತೆಗಿದ್ದಾರೆ. ಇದನ್ನು ಗಮನದಲ್ಲಿಟ್ಟುಕೊಳ್ಳಿ. ಹೀಗಾಗಿ ನಿಮ್ಮಿಂದ ಏನೂ…