Subscribe to Updates
Get the latest creative news from FooBar about art, design and business.
Author: kannadanewsnow09
ವರದಿ: ವಸಂತ ಬಿ ಈಶ್ವರಗೆರೆ, ಸಂಪಾದಕರು ಬೆಂಗಳೂರು: ರಾಜ್ಯ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಪಡೆದಂತ ಶಿಕ್ಷಕರ ಪಟ್ಟಿಯನ್ನು ಶಾಲಾ ಶಿಕ್ಷಣ ಇಲಾಖೆಯಿಂದ ಪ್ರಕಟಿಸಲಾಗಿದೆ. 2024-25ನೇ ಸಾಲಿಗೆ 20 ಪ್ರಾಥಮಿಕ ಶಾಲಾ ಶಿಕ್ಷಕರಿಗೆ, 11 ಪ್ರೌಢ ಶಾಲಾ ಶಿಕ್ಷಕರಿಗೆ ಪ್ರಶಸ್ತಿಯನ್ನು ನೀಡಲಾಗಿದೆ. ಈ ಕುರಿತಂತೆ ಶಾಲಾ ಶಿಕ್ಷಣ ಇಲಾಖೆಯಿಂದ ಪಟ್ಟಿಯನ್ನು ಬಿಡುಗಡೆ ಮಾಡಲಾಗಿದ್ದು, ರಾಜ್ಯ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗಾಗಿ ಪ್ರಾಥಮಿಕ ಶಾಲಾ ವಿಭಾಗದಿಂದ 20 ಶಿಕ್ಷಕರು ಮತ್ತು ಪ್ರೌಢಶಾಲಾ ವಿಭಾಗದಿಂದ ಓರ್ವ ವಿಶೇಷ ಶಿಕ್ಷಕ ಒಳಗೊಂಡಂತೆ 11 ಶಿಕ್ಷಕರನ್ನು ಆಯ್ಕೆ ಮಾಡಿರುವುದಾಗಿ ತಿಳಿಸಿದೆ. 2024-25ನೇ ಸಾಲಿನ ರಾಜ್ಯ ಮಟ್ಟದ ಶಿಕ್ಷಕರ ಪ್ರಶಸ್ತಿಗೆ ಆಯ್ಕೆಯಾದ ಈ ಪುರಸ್ಕೃತರ ಪಟ್ಟಿಯಲ್ಲಿನ ಮಹಿಳಾ ಶಿಕ್ಷಕರುಗಳಿಗೆ ಅಕ್ಷರ ಮಾತೆ ಸಾವಿತ್ರಿಬಾಯಿ ಪುಲೆ ಇವರ ಹೆಸರಿನಲ್ಲಿ ದಿನಾಂಕ 05-09-2024ರಂದು ನಡೆಯುವ ರಾಜ್ಯಮಟ್ಟದ ಶಿಕ್ಷಕರ ದಿನಾಚರಣೆಯಂದು ಪ್ರಶಸ್ತಿ ಪ್ರದಾನ ಮಾಡಲು ಅನುಮತಿ ನೀಡಲಾಗಿದೆ ಎಂದು ಹೇಳಿದ್ದಾರೆ. ಈ ರಾಜ್ಯ ಪ್ರಶಸ್ತಿ ಪುರಸ್ಕೃತ ಶಿಕ್ಷಕರು/ಮುಖ್ಯ ಶಿಕ್ಷಕರು/ವಿಶೇಷ ಶಿಕ್ಷಕರುಗಳಿಗೆ ಸರ್ಕಾರದ ಆದೇಶ…
ಬೆಂಗಳೂರು: ಗೌರಿ ಗಣೇಶ ಹಬ್ಬದ ಸಂದರ್ಭದಲ್ಲಿ ಆಯೋಜಕರು ಪ್ರಸಾದವನ್ನು ಸಾರ್ವಜನಿಕರಿಗೆ ವಿತರಣೆ ಮಾಡುವ ವೇಳೆಯಲ್ಲಿ ಯಾವುದೇ ಅನಾಹುತ ನಡೆಯದಂತೆ ರಾಜ್ಯ ಸರ್ಕಾರ ಎಚ್ಚರಿಕೆ ವಹಿಸಿದೆ. ಮುಂಜಾಗ್ರತಾ ಕ್ರಮವಾಗಿ ಗಣೇಶೋತ್ಸವದ ವೇಳೆ ಪ್ರಸಾದ ವಿನಿಯಮಕ್ಕೆ ಈ ನಿಮಯವನ್ನು ಪಾಲಿಸುವುದು ಕಡ್ಡಾಯಗೊಳಿಸಿ ಆದೇಶಿಸಿದೆ. ಈ ಕುರಿತಂತೆ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆಯ ಆಯುಕ್ತರು ಆದೇಶ ಹೊರಡಿಸಿದ್ದು, ದಿನಾಂಕ:06.09.2024 ಮತ್ತು 07.09.2024ರಂದು ಗೌರಿ ಗಣೇಶ ಹಬ್ಬವಿರುವುದರಿಂದ ಗಣೇಶ ಮೂರ್ತಿಗಳ ಪ್ರತಿಷ್ಟಾಪನೆ ಮಾಡಿದ ಸ್ಥಳಗಳಲ್ಲಿ ಹೆಚ್ಚಿನ ಸಂಖ್ಯೆಯ ಭಕ್ತಾದಿಗಳು ಪಾಲ್ಗೊಂಡು ಪುಸಾದ ರೂಪದಲ್ಲಿ ವಿತರಿಸಲಾಗುವ ಆಹಾರ ಪದಾರ್ಥಗಳನ್ನು ಸೇವಿಸುವ ಹಿನ್ನೆಲೆಯಲ್ಲಿ ಪುಸಾದದ ನೈರ್ಮಲ್ಯತೆ, ಗುಣಮಟ್ಟ ಮತ್ತು ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಬೇಕು ಅಂತ ತಿಳಿಸಿದೆ. ಈ ದೃಷ್ಟಿಯಿಂದ ಗಣೇಶ ಮೂರ್ತಿಗಳ ಪ್ರತಿಷ್ಠಾಪನೆಗಾಗಿ ಸ್ಥಳೀಯ ಸಂಸ್ಥೆಗಳಿಂದ ಅನುಮತಿ ನೀಡುವ ಸಂದರ್ಭದಲ್ಲಿ FSSAI ನೊಂದಣಿ/ಪರವಾನಗಿ ಪಡೆದಿರುವ ವ್ಯಕ್ತಿ/ಸಂಸ್ಥೆಗಳಿಂದ ಮಾತ್ರ ಅಲ್ಲಿ ವಿನಿಯೋಗವಾಗುವ ಪುಸಾದವನ್ನು ಸಿದ್ಧಪಡಿಸಲಾಗುತ್ತಿದೆಯೇ ಎಂಬುದನ್ನು ಖಚಿತಪಡಿಸಿಕೊಳ್ಳುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಅಗತ್ಯ ನಿರ್ದೇಶನಗಳನ್ನು ನೀಡುವಂತೆ ತಿಳಿಸಿದ್ದಾರೆ. ವರದಿ: ವಸಂತ ಬಿ ಈಶ್ವರಗೆರೆ, ಸಂಪಾದಕರು…
ಬೆಂಗಳೂರು: ಜನರೇಟೀವ್ ಎಐ ಮತ್ತು ಮುಂಚೂಣಿಗೆ ಬರುತ್ತಿರುವ ಆಧುನಿಕ ತಂತ್ರಜ್ಞಾನಗಳಿಗೆ ಸಂಬಂಧಿಸಿದ ಕೌಶಲಗಳನ್ನು ಕಲಿಸಲು ರಾಜ್ಯ ಸರ್ಕಾರದೊಂದಿಗೆ ಒಡಂಬಡಿಕೆ ಮಾಡಿಕೊಳ್ಳಲು ಮೈಕ್ರೋಸಾಫ್ಟ್ ಕಂಪನಿಯು ಉತ್ಸುಕವಾಗಿದೆ ಎಂದು ಭಾರೀ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ ಹೇಳಿದ್ದಾರೆ. ಮಂಗಳವಾರ ಇಲ್ಲಿ ತಮ್ಮನ್ನು ಭೇಟಿಯಾದ ಮೈಕ್ರೋಸಾಫ್ಟ್ ಕಂಪನಿಯ ಭಾರತ ಮತ್ತು ದಕ್ಷಿಣ ಏಷ್ಯಾದ ಅಧ್ಯಕ್ಷ ಪುನೀತ್ ಚಾಂದೋಕ್ ನೇತೃತ್ವದ ಉನ್ನತ ಮಟ್ಟದ ನಿಯೋಗದ ಜತೆ ಅವರು ವಿಚಾರ ವಿನಿಮಯ ನಡೆಸಿದರು. ಕರ್ನಾಟಕವನ್ನು ಭಾರತದ ಎಐ ತಂತ್ರಜ್ಞಾನದ ಪ್ರಮುಖ ತಾಣವನ್ನಾಗಿ ಮಾಡಲು ಮೈಕ್ರೋಸಾಫ್ಟ್ ಬಯಸಿದೆ. ಹೂಡಿಕೆದಾರರಿಗೆ ನೆರವು ನೀಡುವಂತಹ ಪ್ರಕ್ರಿಯೆಗಳಿಗೆ ಎಐ ತಂತ್ರಜ್ಞಾನವನ್ನು ಹೇಗೆ ಅನ್ವಯಿಸಬಹುದು ಮತ್ತು ಇದಕ್ಕೆ ಪರಿಣತರನ್ನು ಹೇಗೆ ತೊಡಗಿಸಬಹುದು ಎಂದು ಕಂಪನಿಯು ಚಿಂತಿಸುತ್ತಿದೆ ಎಂದು ಅವರು ಮಾಹಿತಿ ನೀಡಿದ್ದಾರೆ. ರಾಜ್ಯ ಸರಕಾರವು ತಂತ್ರಜ್ಞಾನದ ಬಳಕೆಯ ಪರವಾಗಿದ್ದು, ಮೈಕ್ರೋಸಾಫ್ಟ್ ತರಹದ ದೈತ್ಯ ಕಂಪನಿಗಳು ಇದಕ್ಕೆ ಮುಂದಡಿ ಇಡಬೇಕು. ಮೊದಲಿಗೆ ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆಯ ಆಡಳಿತದಲ್ಲಿ ಎಐ ತಂತ್ರಜ್ಞಾನ ಅಳವಡಿಕೆ…
ಬೆಂಗಳೂರು: ಹಾಲಿನ ಖರೀದಿ ದರದಲ್ಲಿ ₹1.50 ಕಡಿತ ಮಾಡಿರುವ ಬಗ್ಗೆ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು ಕಿಡಿಕಾರಿದ್ದಾರೆ. ಈ ಬಗ್ಗೆ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಕೇಂದ್ರ ಸಚಿವರು; ಕೂಡಲೇ ಈ ಬಗ್ಗೆ ಮುಖ್ಯಮಂತ್ರಿಗಳು ಕ್ರಮ ವಹಿಸಿ ಹಾಲು ಖರೀದಿ ದರಕ್ಕೆ ತಡೆ ಒಡ್ಡಬೇಕು ಎಂದು ಆಗ್ರಹಿಸಿದ್ದಾರೆ. ಅಧಿಕಾರ ದರ್ಪದ ಅಮಲಿನಿಂದ ಕೊಬ್ಬಿರುವ ರಾಜ್ಯ ಕಾಂಗ್ರೆಸ್ ಸರಕಾರ ಅನ್ನದಾತನ ಮೇಲೆ ಬರೆಯ ಬರೆ ಎಳೆಯುತ್ತಿದೆ. ರೈತನ ಜೀವನಾಧಾರವಾಗಿರುವ ಹಾಲಿನ ಮೇಲೆ ಕಾಂಗ್ರೆಸ್ ಆಡಳಿತದ ಕಾಕದೃಷ್ಟಿ ಬಿದ್ದಿದೆ. ಪರಿಣಾಮ; ಹಾಲಿನ ಖರೀದಿ ದರಕ್ಕೆ ಕತ್ತರಿ ಪ್ರಯೋಗವಾಗಿದೆ ಎಂದು ಸಚಿವರು ಕಟುವಾಗಿ ಟೀಕಿಸಿದ್ದಾರೆ. ಕೆಲ ಹಾಲು ಒಕ್ಕೂಟಗಳು ಏಕಪಕ್ಷೀಯವಾಗಿ ಹಾಲಿನ ಖರೀದಿ ದರದಲ್ಲಿ ₹1.50 ಕಡಿತ ಮಾಡಿವೆ. ಹೊಸ ಖರೀದಿ ದರ ₹30.50 ರಿಂದ ₹29ಕ್ಕೆ ಕುಸಿದಿದೆ. ಕಾಮಧೇನುವನ್ನೇ ನಂಬಿದ್ದ ರೈತನ ಕರುಳಿಗೆ ಕೊಳ್ಳಿ ಬಿದ್ದಿದೆ. ನಮ್ಮದು ರೈತಪರ ಸರಕಾರ ಎನ್ನುವ ಮುಖ್ಯಮಂತ್ರಿಗಳು ಇತ್ತ ಗಮನ ಹರಿಸಬೇಕು. ಅವರಿಗೆ ಅಷ್ಟು ಸಮಯ ಇದೆ ಎಂದು…
ಬೆಂಗಳೂರು: ನರ್ಸಿಂಗ್ ಕಾಲೇಜುಗಳನ್ನು ನಡೆಸಲು ಅನುಮತಿ ಪಡೆದಿರುವ ಕಟ್ಟಡಗಳಲ್ಲಿ ನರ್ಸಿಂಗ್ ಕೋರ್ಸುಗಳನ್ನು ಮಾತ್ರ ನಡೆಸಬೇಕು. ಬೇರೆ ಯಾವುದೇ ಕೋರ್ಸುಗಳನ್ನು ನಡೆಸುತ್ತಿದ್ದರೆ ಅಂತಹ ಕಾಲೇಜುಗಳ ಅನುಮತಿಯನ್ನು ಹಿಂಪಡೆಯಬೇಕು ಎಂದು ವೈದ್ಯಕೀಯ ಶಿಕ್ಷಣ ಸಚಿವರಾದ ಡಾ. ಶರಣ್ ಪ್ರಕಾಶ್ ಪಾಟೀಲ್ ಅಧಿಕಾರಿಗಳಿಗೆ ಸೂಚನೆ ನೀಡಿದರು. ರಾಜ್ಯದ ನರ್ಸಿಂಗ್ ಕಾಲೇಜುಗಳಲ್ಲಿ ಅಧಿಕ ಶುಲ್ಕ ವಸೂಲು ಮಾಡುತ್ತಿರುವ ಬಗ್ಗೆ ನಮ್ಮ ಕಚೇರಿಗೆ ಹಲವಾರು ದೂರುಗಳು ಸಲ್ಲಿಕೆಯಾಗಿವೆ. ಇದರಿಂದ ವಿದ್ಯಾರ್ಥಿಗಳ ಹಣಕಾಸಿನ ಹೊರೆಯನ್ನು ಹೊರಬೇಕಾಗಿದೆ. ಇದನ್ನ ತಪ್ಪಿಸುವ ನಿಟ್ಟಿನಲ್ಲಿ ವೈದ್ಯಕೀಯ ಶಿಕ್ಷಣ ಇಲಾಖೆಯ ಜಂಟಿ ಕಾರ್ಯದರ್ಶಿಗಳ ನೇತೃತ್ವದಲ್ಲಿ 5 ಜನ ಸದಸ್ಯರುಗಳ “ಶುಲ್ಕ ನಿಯಂತ್ರಣ ಪ್ರಾಧಿಕಾರವನ್ನು” ರಚಿಸಲಾಗುವುದು. ನರ್ಸಿಂಗ್ ಕಾಲೇಜುಗಳ ಶುಲ್ಕಗಳನ್ನ ಪರಿಶೀಲಿಸುವ ಕಾರ್ಯವನ್ನು ಈ ಪ್ರಾಧಿಕಾರಕ್ಕೆ ವಹಿಸಲಾಗಿದೆ. ಸರಕಾರ ನಿಗದಿಪಡಿಸಿರುವ ಶುಲ್ಕಕ್ಕೂ ಹೆಚ್ಚು ಶುಲ್ಕವನ್ನು ವಸೂಲು ಮಾಡುತ್ತಿರುವ ಸಂಸ್ಥೆಗಳ ಎಸೆನ್ಶಿಯಲ್ ಸರ್ಟಿಫಿಕೇಟ್ ಹಾಗೂ ಫೀಸಿಬಲಿಟಿ ಸರ್ಟಿಫಿಕೇಟ್ ನ್ನ ರದ್ದುಗೊಳಿಸುವಂತೆಯೂ ಅಧಿಕಾರಿಗಳಿಗೆ ಸಚಿವ ಡಾ. ಶರಣ ಪ್ರಕಾಶ್ ಪಾಟೀಲ್ ಸೂಚನೆ ನೀಡಿದರು . ಪ್ರಸ್ತುತ ಸರಕಾರಿ ಕೋಟಾದ ಅಡಿಯಲ್ಲಿ ಭರ್ತಿಯಾಗುವ…
ಬೆಂಗಳೂರು : ಆನೆ ಮತ್ತು ಮಾನವ ಸಂಘರ್ಷದಿಂದ ರಾಜ್ಯದಲ್ಲಿ ಪ್ರತಿವರ್ಷ 50 ಸಾವು ಸಂಭವಿಸುತ್ತಿದ್ದು, ಅಮೂಲ್ಯ ಜೀವ, ಬೆಳೆ ಉಳಿಸಲು ರೈಲ್ವೆ ಬ್ಯಾರಿಕೇಡ್ ಪರಿಹಾರವಾಗಿದ್ದು, 324 ಕಿ.ಮೀ. ತಡೆಗೋಡೆ ನಿರ್ಮಾಣಕ್ಕೆ 2 ವರ್ಷದಲ್ಲಿ 500 ಕೋಟಿ ಹೆಚ್ಚಿನ ಅನುದಾನ ನೀಡುವಂತೆ ಅರಣ್ಯ ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಮನವಿ ಮಾಡಿದ್ದಾರೆ. ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿಂದು 49 ಅರಣ್ಯ ಅಧಿಕಾರಿ ಮತ್ತು ಸಿಬ್ಬಂದಿಗೆ ಮುಖ್ಯಮಂತ್ರಿಗಳ ವಿಶಿಷ್ಟ ಸೇವಾ ಪದಕ ಪ್ರದಾನ ಹಾಗೂ 267 ಅರಣ್ಯ ವೀಕ್ಷಕರಿಗೆ ನೇಮಕಾತಿ ಪತ್ರ ವಿತರಣಾ ಸಮಾರಂಭದಲ್ಲಿ ಮಾತನಾಡಿದ ಅವರು ರಾಜ್ಯದಲ್ಲಿ ಈವರೆಗೆ ಸುಮಾರು 333 ಕಿ.ಮೀ. ರೈಲ್ವೆ ಬ್ಯಾರಿಕೇಡ್ ನಿರ್ಮಿಸಲಾಗಿದ್ದು, 101 ಕಿ.ಮೀ. ಕಾಮಗಾರಿ ಪ್ರಗತಿಯಲ್ಲಿದೆ ಎಂದರು. ಒತ್ತುವರಿ ತೆರವಿನ ಬಗ್ಗೆ ಸ್ಪಷ್ಟನೆ ನೀಡಿದ ಈಶ್ವರ ಖಂಡ್ರೆ 2015ರ ನಂತರದ ಒತ್ತುವರಿ ತೆರವು ಮಾಡಲಾಗುತ್ತಿದೆ. ಜೊತೆಗೆ 2015ರ ಸರ್ಕಾರದ ಆದೇಶ ಮತ್ತು ನಡವಳಿಯಂತೆ 3 ಎಕರೆಗಿಂತ ಮೇಲ್ಪಟ್ಟ ದೊಡ್ಡ ಒತ್ತುವರಿ ತೆರವು…
ಬೆಂಗಳೂರು: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯು ಸಾರ್ವಜನಿಕರಿಗೆ ಲಘು / ಭಾರಿ ವಾಹನ ಚಾಲನಾ ತರಬೇತಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಆ ಬಗ್ಗೆ ಸಂಪೂರ್ಣ ಮಾಹಿತಿ ಮುಂದಿದೆ ಓದಿ. ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ (ಬೆ.ಮ.ಸಾ.ಸಂ) ತರಬೇತಿ ಕೇಂದ್ರದಲ್ಲಿ ಸಾರ್ವಜನಿಕರಿಗೆ ಲಘು ಮತ್ತು ಭಾರಿ ವಾಹನಗಳ ಚಾಲನಾ ತರಬೇತಿ ನೀಡಲಾಗುತ್ತಿದೆ. ತರಬೇತಿ ಪಡೆಯಲು ಆಸಕ್ತರು ಅರ್ಜಿ ಸಲ್ಲಿಸಲು ಹಾಗೂ ಹೆಚ್ಚಿನ ಮಾಹಿತಿಗಾಗಿ ಕೆಳಗಿನ ದೂರವಾಣಿ ಸಂಖ್ಯೆಯನ್ನು ಸಂಪರ್ಕಿಸಬಹುದು. ಅರ್ಜಿದಾರರು ಸಲ್ಲಿಸಬೇಕಾಗಿರುವ ದಾಖಲೆಗಳು ಮತ್ತು ಅರ್ಹತೆ ಲಘು ವಾಹನ ಚಾಲನಾ ತರಬೇತಿ ವಯೋಮಿತಿ ಕನಿಷ್ಟ 18 ವರ್ಷ. ದಾಖಲೆಗಳು: – ಜನನ ಪ್ರಮಾಣ ಪತ್ರ ಅಥವಾ ಎಸ್.ಎಸ್.ಎಲ್.ಸಿ ಅಂಕಪಟ್ಟಿ ಅಥವಾ ಟಿ.ಸಿ ಅಥವಾ ನೋಟರಿಯಿಂದ ಪ್ರಮಾಣ ಪತ್ರ. – ಆಧಾರ್ ಕಾರ್ಡ್. – 5 ಪಾಸ್ಪೋರ್ಟ್ ಅಳತೆಯ ಭಾವಚಿತ್ರ. ಭಾರಿ ವಾಹನ ಚಾಲನಾ ತರಬೇತಿ: 1. ವಯೋಮಿತಿ: ಕನಿಷ್ಟ 20 ವರ್ಷ. 2. ದಾಖಲೆಗಳು: – ಜನನ ಪ್ರಮಾಣ ಪತ್ರ ಅಥವಾ ಎಸ್.ಎಸ್.ಎಲ್.ಸಿ ಅಂಕಪಟ್ಟಿ…
ಮಂಡ್ಯ: ಪ್ರಧಾನಮಂತ್ರಿ ಫಸಲ್ ಭೀಮಾ ಯೋಜನೆಯಲ್ಲಿ 2023-24ನೇ ಸಾಲಿನ ಮುಂಗಾರು ಬೆಳೆ ನಷ್ಟ ವಿಮಾ ಯೋಜನೆಯನ್ನು ತಡೆಹಿಡಿದಿದ್ದಾರೆಂದು ಆರೋಪಿಸಿ ಮದ್ದೂರು ತಾಲೂಕಿನ ಕೊಪ್ಪದಲ್ಲಿ ರೈತ ಸಂಘದ ವತಿಯಿಂದ ಮದ್ದೂರು – ನಾಗಮಂಗಲ ರಸ್ತೆ ಮಾರ್ಗದ ಸಂಚಾರ ತಡೆದು ಮಂಗಳವಾರ ಪ್ರತಿಭಟಿಸಲಾಯಿತು. ವಿಮಾ ಯೋಜನೆ ಹಣ ತಡೆ ಹಿಡಿದಿರುವ ಅಧಿಕಾರಿಗಳ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು ಹಾಗೂ ರಸ್ತೆ ಸಂಚಾರ ತಡೆದ ಹಿನ್ನೆಲೆಯಲ್ಲಿ ಕೆಲಕಾಲ ಸಂಚಾರ ಅಸ್ತವ್ಯಸ್ತಗೊಂಡಿತ್ತು. ಬಳಿಕ ಪ್ರತಿಭಟನೆ ರ್ಯಾಲಿ ಉದ್ದೇಶಿಸಿ ಮಾತನಾಡಿದ ರೈತ ಮುಖಂಡ ಕೀಳಘಟ್ಟ ನಂಜುಂಡಯ್ಯ ಮುಂಗಾರು 2023-24ನೇ ಸಾಲಿನ ಬೆಳೆ ನಷ್ಟ ವಿಮಾ ಹಣವನ್ನು ರೈತರಿಗೆ ಈ ವಾರದಲ್ಲಿ ತಕ್ಷಣ ಬಿಡುಗಡೆ ಮಾಡಬೇಕು. ಕೃಷಿ ಇಲಾಖೆಯವರು ಫಸಲ್ ಭೀಮಾ ಯೋಜನೆಯ ವಿಮೆಯ ವರದಿಯನ್ನು ಮರು ಪರಿಶೀಲಿಸಿ ನಾಗಮಂಗಲ ತಾಲೂಕಿನಲ್ಲಿ ಗ್ರಾಮ ಪಂಚಾಯಿತಿ ವಾರು ಸಮಿಕ್ಷೆ ಮಾಡಿದಂತೆ ಮದ್ದೂರು ಮತ್ತು ಮಳವಳ್ಳಿ ತಾಲೂಕುಗಳಲ್ಲೂ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಸರ್ವೆ ಮಾಡಬೇಕು ಹಾಗೂ ಮದ್ದೂರು ತಾಲೂಕಿನಲ್ಲಿ ಹೋಬಳಿ ಮಟ್ಟದಲ್ಲಿ…
ಬೆಂಗಳೂರು: ನಗರದಲ್ಲಿ ಉತ್ತಮ ಸಾರಿಗೆ ಒದಗಿಸುತ್ತಿರುವಂತ ಬಿಎಂಟಿಸಿ ಬಸ್ಸಲ್ಲಿ ಟಿಕೆಟ್ ಇಲ್ಲದೇ ಪ್ರಯಾಣಿಸಿದಂತ ಪ್ರಯಾಣಿಕರ ವಿರುದ್ಧ ಸಮರವನ್ನೇ ಸಾರಿ ಬರೋಬ್ಬರಿ 2,778 ಕೇಸ್ ಪತ್ತೆ ಹಚ್ಚಿ 5.58 ಲಕ್ಷ ದಂಡವನ್ನು ವಸೂಲಿ ಮಾಡಿದೆ. ಈ ಕುರಿತಂತೆ ಪತ್ರಿಕಾ ಪ್ರಕಟಣೆಯಲ್ಲಿ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ತಿಳಿಸಿದ್ದು, ತನ್ನ ವಾಹನಗಳಲ್ಲಿ ಸಂಚರಿಸುವ ಪ್ರಯಾಣಿಕರು ಟಿಕೇಟನ್ನು ಪಡೆಯದೆ ಅನಧಿಕೃತವಾಗಿ ಪ್ರಯಾಣ ಮಾಡುವವರನ್ನು ಮತ್ತು ಸಂಸ್ಥೆಯ ಸಾರಿಗೆ ಆದಾಯದ ಸೋರಿಕೆಯನ್ನು ತಡೆಗಟ್ಟುವ ನಿಟ್ಟಿನಲ್ಲಿ, ನಗರದಾದ್ಯಂತ ಸಂಚರಿಸುವ ವಾಹನಗಳನ್ನು ನಮ್ಮ ಸಂಸ್ಥೆಯ ತನಿಖಾ ತಂಡಗಳು ಜುಲೈ-2024 ರ ಮಾಹೆಯಲ್ಲಿ ಒಟ್ಟು 18,489 ಟ್ರಿಪ್ಗಳನ್ನು ತಪಾಸಿಸಿ 2778 ಟಿಕೇಟ್ ರಹಿತ ಪ್ರಯಾಣಿಕರನ್ನು ಪತ್ತೆ ಹಚ್ಚಿ, ಅವರಿಂದ ಒಟ್ಟು ರೂ. 5,58,910/- ದಂಡ ವಸೂಲಿ ಮಾಡಿ ಸಂಸ್ಥೆಯ ನಿರ್ವಾಹಕರ ವಿರುದ್ಧ 1699 ಪ್ರಕರಣಗಳನ್ನು ದಾಖಲಿಸಿರುತ್ತಾರೆ ಎಂದಿದೆ. ಮಹಿಳಾ ಪ್ರಯಾಣಿಕರಿಗೆಂದೇ ಮೀಸಲಾಗಿರುವ ಆಸನಗಳಲ್ಲಿ ಕುಳಿತು ಪ್ರಯಾಣಿಸಿರುವ 550 ಪುರುಷ ಪ್ರಯಾಣಿಕರಿಂದ ಒಟ್ಟು ರೂ. 55,000/-ನ್ನು ಮೋಟಾರು ವಾಹನ ಕಾಯ್ದೆ 1988ರ ಕಾಲಂ…
ತಿರುವನಂತಪುರಂ: ತನ್ನ ಮೇಲೆ ಲೈಂಗಿಕ ದೌರ್ಜನ್ಯ ನಡೆದಿದೆ ಎಂದು ಮಹಿಳೆಯೊಬ್ಬರು ನೀಡಿದ ದೂರಿಗೆ ಸಂಬಂಧಿಸಿದಂತೆ ನಟ ನಿವಿನ್ ಪೌಲಿ, ಮಲಯಾಳಂ ನಿರ್ಮಾಪಕ ಎ.ಕೆ.ಸುನಿಲ್ ಮತ್ತು ಇತರ ನಾಲ್ವರ ವಿರುದ್ಧ ಕೇರಳ ಪೊಲೀಸರು ಲೈಂಗಿಕ ದೌರ್ಜನ್ಯ ಪ್ರಕರಣ ದಾಖಲಿಸಿದ್ದಾರೆ. ಸೆಕ್ಷನ್ 376 (ಅತ್ಯಾಚಾರ) ಸೇರಿದಂತೆ ಭಾರತೀಯ ದಂಡ ಸಂಹಿತೆಯ (ಐಪಿಸಿ) ಸಂಬಂಧಿತ ವಿಭಾಗಗಳ ಅಡಿಯಲ್ಲಿ ಅವರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಎರ್ನಾಕುಲಂನ ಊನುಕಲ್ ಪೊಲೀಸರು ಟಿಎನ್ಎಂಗೆ ಖಚಿತಪಡಿಸಿದ್ದಾರೆ. ವರದಿಗಳ ಪ್ರಕಾರ, ಈ ಪ್ರಕರಣದಲ್ಲಿ ನಿವಿನ್ ಪೌಲಿಯನ್ನು ಆರನೇ ಆರೋಪಿ ಎಂದು ಹೆಸರಿಸಲಾಗಿದೆ. ಮಹಿಳೆ ಎರ್ನಾಕುಲಂ ಗ್ರಾಮೀಣ ಪೊಲೀಸ್ ವರಿಷ್ಠಾಧಿಕಾರಿ ವೈಭವ್ ಸಕ್ಸೇನಾ ಅವರಿಗೆ ದೂರು ನೀಡಿದ್ದರು. ದೂರಿನಲ್ಲಿ, ಅವರು ಚಲನಚಿತ್ರದಲ್ಲಿ ಪಾತ್ರದ ಭರವಸೆ ನೀಡಿದ್ದರು, ಇದಕ್ಕಾಗಿ ನವೆಂಬರ್ 2023 ರಲ್ಲಿ ದುಬೈಗೆ ಬರಲು ಕೇಳಲಾಯಿತು ಎಂದು ಆರೋಪಿಸಿದ್ದಾರೆ. ನಂತರ ದುಬೈನ ಹೋಟೆಲ್ ಕೋಣೆಯಲ್ಲಿ ತನ್ನ ಮೇಲೆ ಲೈಂಗಿಕ ದೌರ್ಜನ್ಯ ಎಸಗಲಾಗಿದೆ ಎಂದು ಅವರು ಹೇಳಿದರು. ಈ ಬಗ್ಗೆ ಹೆಚ್ಚಿನ ಮಾಹಿತಿ ಲಭ್ಯವಾಗಬೇಕಿದೆ.…












