Subscribe to Updates
Get the latest creative news from FooBar about art, design and business.
Author: kannadanewsnow09
ಶಿವಮೊಗ್ಗ: ಜಿಲ್ಲೆಯ ಸಾಗರ ತಾಲೂಕಿನ ಸಮೀಪದಲ್ಲೇ ಕಲ್ಲುಕ್ವಾರೆ ನಡೆಯುತ್ತಿದೆ. ಸರ್ಕಾರಿ ಭೂಮಿಯನ್ನು ಒತ್ತುವರಿ ಮಾಡಿಕೊಂಡು ಕಲ್ಲುಕ್ವಾರಿ ನಡೆಸುತ್ತಿದ್ದಾರೆ. ಅದನ್ನು ತಕ್ಷಣದಿಂದ ನಿಲ್ಲಿಸಿ, ಆ ಸರ್ಕಾರಿ ಭೂಮಿಯನ್ನು ಗೋಶಾಲೆಗಾಗಿ ಮೀಸಲಿಡಿ ಅಂತ ಶಾಸಕ ಬೇಳೂರು ಗೋಪಾಲಕೃಷ್ಣ ಕೆಡಿಪಿ ಸಭೆಯಲ್ಲೇ ಖಡಕ್ ಆದೇಶ ಮಾಡಿದ್ರು. ಆದ್ರೇ ಸಾಗರ ತಾಲೂಕು ಆಡಳಿತ ಮಾತ್ರ, ಅದರ ಗೋಜಿಗೇ ಹೋಗಿಲ್ಲ. ಕಲ್ಲುಕ್ವಾರಿ ಬಂದ್ ಮಾಡಿಸಿ, ಸರ್ಕಾರಿ ಭೂಮಿ ಒತ್ತುವರಿ ತೆರವು ಮಾಡಿಸೋ ಕೆಲಸ ಮಾತ್ರ ಈವರೆಗೆ ಆಗಿಲ್ಲ. ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ತ್ಯಾಗರ್ತಿ ಬಳಿಯ ನಾಡಕಲಸಿ ಗ್ರಾಮ ಪಂಚಾಯ್ತಿ ವ್ಯಾಪ್ತಿಯಲ್ಲಿ ಬರೋಬ್ಬರಿ 48 ಎಕರೆ ಸರ್ಕಾರಿ ಭೂಮಿಯನ್ನು ಒತ್ತುವರಿ ಮಾಡಲಾಗಿದೆ. ಈ ಬಗ್ಗೆ ಕೆಲ ದಿನಗಳ ಹಿಂದೆ ನಡೆದಿದ್ದಂತ ಸಾಗರ ತಾಲ್ಲೂಕು ಪ್ರಗತಿ ಪರಿಶೀಲನಾ ಸಭೆಯಲ್ಲಿ ಶಾಸಕ ಬೇಳೂರು ಗೋಪಾಲಕೃಷ್ಣ ಅವರು ತಹಶೀಲ್ದಾರ್ ಅವರನ್ನು ತರಾಟೆಗೆ ತೆಗೆದುಕೊಂಡಿದ್ದರು. ಸರ್ಕಾರಿ ಭೂಮಿ ಒತ್ತುವರಿಯನ್ನು ತೆರವುಗೊಳಿಸಬೇಕು. ಕೂಡಲೇ ಆ ಕೆಲಸ ಮಾಡಬೇಕು. ಆ ಭೂಮಿಯನ್ನು ಗೋಶಾಲೆಗೆ ಮೀಸಲಿಡಬೇಕು. ಒತ್ತುವರಿ ಮಾಡಿರೋರು…
ಬೆಂಗಳೂರು: ಸಂಚಾರಿ ಕುರಿಗಾಹಿಗಳ ಮೇಲಿನ ದೌರ್ಜನ್ಯ ತಡೆಗೆ ವಿಶೇಷ ಕಾಯ್ದೆ ಜಾರಿಗೆ ತರಲಾಗುತ್ತದೆ. 2024-25 ನೇ ಸಾಲಿನಲ್ಲಿ ಕುರಿಗಾಹಿ ಸಮುದಾಯಗಳಿಗೆ ಘೋಷಿಸಿರುವ ಕಾರ್ಯಕ್ರಮಗಳ ಜಾರಿಗೆ ಆದೇಶ ಹೊರಡಿಸಲು ಸಿಎಂ ಸಿದ್ಧರಾಮಯ್ಯ ಸೂಚಿಸಿದ್ದಾರೆ. ಅವರು ಇಂದು ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಅಲೆಮಾರಿ ಕುರಿಗಾಹಿ ಸಮುದಾಯಗಳ ಮುಖಂಡರ ಸಭೆ ನಡೆಸಿ ಅವರ ಸಮಸ್ಯೆಗಳನ್ನು ಆಲಿಸಿದರು. ಅರಣ್ಯ ಪ್ರದೇಶದಲ್ಲಿ ಕುರಿಗಳನ್ನು ಮಾತ್ರ ಮೇಯಿಸಲು ಅವಕಾಶ ನೀಡುವ ಬಗ್ಗೆ ಅರಣ್ಯ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಲಾಗುವುದು ಎಂದು ಮುಖ್ಯಮಂತ್ರಿಗಳು ತಿಳಿಸಿದರು. ಕುರಿಗಳು ಸತ್ತರೆ ಒಂದು ಕುರಿಗೆ 5 ಸಾವಿರ ರೂಪಾಯಿ ಪರಿಹಾರ ನೀಡುವ ಅನುಗ್ರಹ ಯೋಜನೆ ಜಾರಿಯಲ್ಲಿದೆ. ಈ ಮೊತ್ತವನ್ನು ಇನ್ನಷ್ಟು ಹೆಚ್ಚಿಸುವ ಬಗ್ಗೆ ಪರಿಶೀಲನೆ ಮಾಡಲಾಗುವುದು ಎಂದು ಸಿಎಂ ಭರವಸೆ ನೀಡಿದರು. ರಾಜ್ಯದಲ್ಲಿನ ವಲಸೆ ಕುರಿಗಾರರ ಮತ್ತು ಅವರ ಸ್ವತ್ತುಗಳ ಮೇಲಿನ ದೌರ್ಜನ್ಯ ತಡೆಯುವ ಕಾಯ್ದೆ ರೂಪಿಸುವುದು, ಕುರಿಗಳಿಗೆ ಉಚಿತ ಲಸಿಕೆ ನೀಡಲೂ ಅಗತ್ಯ ಸೂಚನೆ ನೀಡಲಾಗುವುದು ಎಂದರು. ಕುರಿಗಾಹಿಗಳಿಗೆ ಗುರುತಿನ ಚೀಟಿ ವಿತರಣೆ ನೀಡಲು…
‘ಡೆಂಘಿ ಜ್ವರ’ದಿಂದ ಸಾವುಗಳು ಆಗದಂತೆ ಮುನ್ನೆಚ್ವರಿಕೆ ವಹಿಸಿ: ಅಧಿಕಾರಿಗಳಿಗೆ ‘ಸಚಿವ ದಿನೇಶ್ ಗುಂಡೂರಾವ್’ ಖಡಕ್ ಸೂಚನೆ
ಬೆಂಗಳೂರು: ರಾಜ್ಯದಲ್ಲಿ ಡೆಂಘಿ ನಿಯಂತ್ರಣ ಕುರಿತಂತೆ ಬೆಂಗಳೂರಿನಲ್ಲಿ ಇಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹಾಗೂ ಅಧಿಕಾರಿಗಳೊಂದಿಗೆ ಸಿಎಂ ಸಿದ್ದರಾಮಯ್ಯ ಅವರು ಸಭೆ ನಡೆಸಿದರು. ಡೆಂಘಿ ಜ್ವರ ವಿಚಾರದಲ್ಲಿ ಹೆಚ್ಚು ಮುಂಜಾಗೃತೆ ವಹಿಸುವಂತೆ ಸಿಎಂ ಅಧಿಕಾರಿಗಳಿಗೆ ಸೂಚನೆ ನೀಡಿದರು. ಸಿಎಂ ಸಭೆಗು ಮುನ್ನ ಆರೋಗ್ಯ ಇಲಾಖೆ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, ಡೆಂಘಿ ಪ್ರಕರಣಗಳು ಹೆಚ್ಚಾಗುತ್ತಿದ್ದರೂ, ಟೆಸ್ಟಿಂಗ್ ಕಡಿಮೆ ಮಾಡುವುದು ಬೇಡ. ಟೆಸ್ಟಿಂಗ್ ಹೆಚ್ಚು ಮಾಡಿ ಸಾಧ್ಯವಾದಷ್ಟು ಡೆಂಘಿ ಪ್ರಕರಣಗಳನ್ನ ಆರಂಭಿಕ ಹಂತದಲ್ಲಿಯೇ ಪತ್ತೆಹಚ್ಚುವ ಕಾರ್ಯ ನಡೆಯಬೇಕು ಎಂದು ಸೂಚನೆ ನೀಡಿದರು. ಡೆಂಘಿ ಪ್ರಕರಣಗಳು ಹೆಚ್ಚಾಗುತ್ತಿವೆ ಎಂದು ಆತಂಕ ಪಡುವುದು ಬೇಡ. ಡೆಂಘಿ ಜ್ವರದಿಂದ ಸಾವುಗಳಾಗದಂತೆ ಮುನ್ನೆಚ್ವರಿಕೆ ವಹಿಸುವುದು ಮುಖ್ಯ. ಡೆಂಘಿ ಜ್ವರದ ಬಗ್ಗೆ ಸಾರ್ವಜನಿಕರಲ್ಲಿ ಹೆಚ್ವಿನ ಜಾಗೃತಿ ಮೂಡಿಸಿ ಎಂದು ಸಚಿವ ದಿನೇಶ್ ಗುಂಡೂರಾವ್ ಅವರು ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದರು. ಪ್ರತಿ ಶುಕ್ರವಾರ source reduction activity (ರೋಗ ಹರಡುವ ಮೂಲ ಪತ್ತೆ ಮತ್ತು…
ಬೆಂಗಳೂರು : ಗ್ರಾಮೀಣ ಪ್ರದೇಶಗಳ ವ್ಯಾಪ್ತಿಯಲ್ಲಿ ಕುಡಿಯುವ ನೀರು ಸರಬರಾಜು ಕಲುಷಿತಗೊಳ್ಳದಂತೆ ಎಚ್ಚರಿಕೆ ನೀಡಲಾಗಿದ್ದು ಈ ಹಿನ್ನೆಲೆಯಲ್ಲಿ ಗ್ರಾಮೀಣ ನೀರು ಸರಬರಾಜು ಅಧಿಕಾರಿಗಳು ಹಾಗೂ ಎಂಜನಿಯರುಗಳು ಈ ತಿಂಗಳ 14ರಿಂದ 21ರವರೆಗಿನ ವಾರದಲ್ಲಿ ರಾಜ್ಯದ ಗ್ರಾಮೀಣ ಭಾಗಗಳಲ್ಲಿ ಮೂರು ಲಕ್ಷ ನೀರಿನ ಮಾದರಿಗಳನ್ನು ಸಂಗ್ರಹಿಸಿ ಪರೀಕ್ಷೆಗಾಗಿ ಪ್ರಯೋಗಾಲಯಕ್ಕೆ ಕಳುಹಿಸಿಕೊಟ್ಟಿದ್ದಾರೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ. ಕೋಲಾರ ಜಿಲ್ಲೆಯ ಮುಳಬಾಗಿಲು ಬಳಿಯ ಮುಣಜೇನಹಳ್ಳಿ ಹಾಗೂ ಬೆಳಗಾವಿ ಜಿಲ್ಲೆಯ ಗೋಕಾಕ್ ಬಳಿಯ ಕನಸಗೇರಿ ಗ್ರಾಮದಲ್ಲಿ ಈಚೆಗೆ ಕುಡಿಯುವ ನೀರು ಕಲುಷಿತಗೊಂಡ ಹಿನ್ನೆಲೆಯಲ್ಲಿ ಗ್ರಾಮಗಳಲ್ಲಿ ಪರ್ಯಾಯ ಜಲಮೂಲಗಳನ್ನು ಬಳಸಿ ಶುದ್ಧ ನೀರು ಸರಬರಾಜು ಮಾಡಲು ಎಲ್ಲ ರೀತಿಯ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ. ಅಸ್ವಸ್ಥರಾದ ಗ್ರಾಮಸ್ಥರ ಆರೋಗ್ಯದ ಬಗ್ಗೆ ಎಚ್ಚರವಹಿಸಲಾಗಿದೆ ಎಂದೂ ಅವರು ತಿಳಿಸಿದ್ದಾರೆ. ಗ್ರಾಮೀಣ ನೀರು ಸರಬರಾಜು ಇಲಾಖೆಯ ಹಿರಿಯ ಅಧಿಕಾರಿಗಳ ಸಭೆ ನಡೆಸಿದ ಸಚಿವರಿಗೆ ಅಪರ ಮುಖ್ಯ…
ಬೆಂಗಳೂರು ; ತೊನ್ನು ಸಮಸ್ಯೆಯನ್ನು ಅತ್ಯಾಧುನಿಕ ಚಿಕಿತ್ಸೆ ಮೂಲಕ ಗುಣಪಡಿಸುವ ಸೌಲಭ್ಯವಿದೆ. ಯಾರು ತೊನ್ನು ರೋಗದಿಂದ ಮಾನಸಿಕವಾಗಿ ವಿಚಲಿತರಾಗುವ ಅವಶ್ಯಕತೆ ಇಲ್ಲ ಎಂದು ಕಾರ್ಯಕ್ರಮದಲ್ಲಿ ಇ.ಎಸ್.ಐ ಮಾದರಿ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕರಾದ ಡಾ.ಥಾಮಸ್ ಪ್ರಸನ್ನ ರಾಜ್ ಹೇಳಿದ್ದಾರೆ. ರಾಜಾಜಿನಗರದ ಇ.ಎಸ್.ಐ ಆಸ್ಪತ್ರೆಯಲ್ಲಿ ಭಾರತೀಯ ಚರ್ಮ, ಕುಷ್ಠ ಮತ್ತು ಲೈಂಗಿಕ ರೋಗ ತಜ್ಞ ವೈದ್ಯರ ಸಂಘ ಕರ್ನಾಟಕ ಘಟಕದಿಂದ ವಿಶ್ವ ತೊನ್ನು ರೋಗ ದಿನಾಚರಣೆ ಆಚರಿಸಲಾಯಿತು. ತೊನ್ನು ರೋಗಕ್ಕೆ ಆಧುನಿಕ ಚಿಕಿತ್ಸಾ ಪದ್ಧತಿಯಲ್ಲಿ ಪರಿಣಾಮಕಾರಿ ಚಿಕಿತ್ಸೆ ಲಭ್ಯವಿದೆ ಎಂದರು. ಇ.ಎಸ್.ಐ ಆಸ್ಪತ್ರೆಯ ಆವರಣದಲ್ಲಿ ವೈದ್ಯಕೀಯ ಸಿಬ್ಬಂದಿ ತೊನ್ನು ರೋಗ ಮಾರಕ ರೋಗವಲ್ಲ ಮಾರಣಾಂತಿಕ ಕಾಯಿಲೆ ಅಲ್ಲವೇ ಅಲ್ಲ ಇದನ್ನು ಸಹಜವಾಗಿ ಸ್ವೀಕರಿಸಿ ಎಂಬ ಜಾಗೃತಿ ಮೂಡಿಸುವ ನಾಟಕ ಪ್ರದರ್ಶಿಸಿದರು. ತೊನ್ನು ರೋಗ ಜಾಗೃತಿ ಚರ್ಮ ರೋಗ ವಿಭಾಗದ ತಜ್ಞರು ಹಾಗೂ ಮುಖ್ಯಸ್ಥರಾದ ಡಾಕ್ಟರ್ ಗಿರೀಶ್ ಎಂ.ಎಸ್, ಡಾ.ಚೇತನ್, ಡಾ.ಬಿಂದುಶ್ರೀ, ಡಾ.ಭಾವನ ,ಡಾ.ಚರಣ್ ಎಸ್.ಆರ್, ಡಾ.ಸಂಹಿತ ಮತ್ತಿತರರು ಭಾಗವಹಿಸಿದ್ದರು. https://kannadanewsnow.com/kannada/important-information-for-railway-passengers-change-in-service-of-these-trains-cancellation-of-services/ https://kannadanewsnow.com/kannada/karnataka-records-5374-dengue-cases-five-deaths-till-yesterday-siddaramaiah/
ಬೆಂಗಳೂರು: ರಾಜ್ಯದಲ್ಲಿ ನಿನ್ನೆಯ ವರೆಗೆ ಒಟ್ಟು 5374 ಪ್ರಕರಣ ವರದಿಯಾಗಿದ್ದು, 5 ಮರಣಗಳು ಸಂಭವಿಸಿವೆ. ಭಾರತ ಸರ್ಕಾರವು ಡೆಂಗಿ ಪ್ರಕರಣಗಳಲ್ಲಿ Case fatality rate ಅಂದರೆ ಮರಣ ಪ್ರಮಾಣ ಶೇ. 0.5 ನ್ನು ಮೀರುವಂತಿಲ್ಲ ಎಂದು ನಿಗದಿ ಪಡಿಸಿದೆ. ರಾಜ್ಯದಲ್ಲಿ ಮರಣ ಪ್ರಮಾಣ ಇನ್ನೂ ಕಡಿಮೆ ಪ್ರಮಾಣದಲ್ಲಿದೆ. ಅಂದರೆ, Case fatality rate 0.09% ಇದೆ ಅಂತ ಸಿಎಂ ಸಿದ್ಧರಾಮಯ್ಯ ತಿಳಿಸಿದ್ದಾರೆ. ಇಂದು ಡೆಂಗ್ಯೂ ನಿಯಂತ್ರಣ ಸಂಬಂಧ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, ಇಲಾಖೆಯ ಹಿರಿಯ ಅಧಿಕಾರಿಗಳ ಜೊತೆಗೆ ಮಹತ್ವದ ಸಭೆ ನಡೆಸಿದರು. ಬೆಂಗಳೂರು, ಚಿಕ್ಕಮಗಳೂರು, ಮೈಸೂರು, ಹಾವೇರಿ, ಶಿವಮೊಗ್ಗ, ಚಿತ್ರದುರ್ಗ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪ್ರಕರಣಗಳು ಕಾಣಿಸಿಕೊಂಡಿವೆ ಎಂದರು. ಬಿಬಿಎಂಪಿ ವ್ಯಾಪ್ತಿಯಲ್ಲಿ 1230 ಪ್ರಕರಣಗಳು ವರದಿಯಾಗಿವೆ. ಸರ್ಕಾರ ಇದನ್ನು ಗಂಭೀರವಾಗಿ ಪರಿಗಣಿಸಿದ್ದು, ನಿಯಂತ್ರಣಕ್ಕೆ ಎಲ್ಲ ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಸೂಚನೆ ನೀಡಲಾಗಿದೆ. ಎಲ್ಲ ಸರ್ಕಾರಿ ಆಸ್ಪತ್ರೆಗಳಲ್ಲಿ ಅಗತ್ಯ ಚಿಕಿತ್ಸಾ ಸೌಲಭ್ಯಗಳು, ಔಷಧಿಗಳು ಲಭ್ಯವಿರುವುದನ್ನು ಖಾತರಿಪಡಿಸಲು ಸೂಚಿಸಲಾಗಿದೆ. ಆಶಾ ಕಾರ್ಯಕರ್ತೆಯರು, ನರ್ಸಿಂಗ್ ವಿದ್ಯಾರ್ಥಿಗಳು,…
ಹಣದ ಮಳೆಯಾದರೆ ಯಾರಾದರೂ ಇಷ್ಟವಿಲ್ಲ ಬೇಡ ಎಂದು ಹೇಳುತ್ತಾರಾ? ಇಂದಿನ ಜಗತ್ತು ಈ ಹಣದ ಸುತ್ತ ಸುತ್ತುತ್ತಿದೆ. ಹಸಿವಾದರೆ ಅಡುಗೆ ಮಾಡಿ ಹಣ ತಿನ್ನುವಂತಿಲ್ಲ. ಆದರೆ ಹಣವಿಲ್ಲದೆ ಏನನ್ನೂ ಖರೀದಿಸಲು ಸಾಧ್ಯವಿಲ್ಲ. ಶ್ರೀ ಸಿಗಂದೂರು ಚೌಡೇಶ್ವರಿ ಜ್ಯೋತಿಷ್ಯ ಪೀಠ ನಂ 1ಕೇರಳ ಕೊಳ್ಳೇಗಾಲದ ಮಹಾ ಮಾಂತ್ರಿಕ ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ನಕ್ಷತ್ರಿ ತಂತ್ರಿ ನಂ:- 9686268564. ನಂ 1ವಶೀಕರಣ ಸ್ಪೆಷಲಿಸ್ಟ್ ಒಂದು ಕರೆಯಲ್ಲಿ ಪರಿಹಾರ ತಿಳಿಸುತ್ತಾರೆ ತಾವು ಎಷ್ಟೋ ಜ್ಯೋತಿಷ್ಯರಲ್ಲಿ ಕೇಳಿಯು ಪರಿಹಾರ ಸಿಗದೇ ಮನನೊಂದಿದ್ದರೆ ಪರಿಹಾರ ನಿಮ್ಮ ಸಮಸ್ಯೆಗಳಾದ ಅತ್ತೆ-ಸೊಸೆ ಕಿರಿಕಿರಿ, ಪ್ರೀತಿಯಲ್ಲಿ ನಂಬಿ ಮೋಸ, ಇಷ್ಟ ಪಟ್ಟವರು ನಿಮ್ಮಂತೆ ಆಗಲು, ಗಂಡ ಹೆಂಡತಿ ಕಿರಿಕಿರಿ, ಮದುವೆಯಲ್ಲಿ ಅಡೆತಡೆ, ಸಂತಾನ ಸಮಸ್ಯೆ, ಮಕ್ಕಳು ಹೇಳಿದ ಮಾತು ಕೇಳದಿದ್ದರೆ, ವಿದ್ಯಾಭ್ಯಾಸದಲ್ಲಿ ಕಿರಿಕಿರಿ, ಆರೋಗ್ಯ ಸಮಸ್ಯೆ, ಆಸ್ತಿಯಲ್ಲಿ ಕಿರಿಕಿರಿ, ಮಾಟ ಮಂತ್ರ, ಶತ್ರು ನಾಶ, ಶತ್ರು ವಶೀಕರಣ,ಭಾನಮತಿ ಕೃತಿಮ ವಶೀಕರಣ ಇನ್ನೂ ನಿಮ್ಮ ಜೀವನದ ಗುಪ್ತ ಘೋರ ನಿಗೂಢ ಸಮಸ್ಯೆಗಳಿಗೆ ಚೌಡಮ್ಮ ಪೂಜಾ ಪದ್ಧತಿಯಿಂದ…
ಬೆಂಗಳೂರು: ವಿವಿಧ ಕಾರಣಗಳಿಂದಾಗಿ ಕೆಲ ರೈಲುಗಳ ಸಂಚಾರದಲ್ಲಿ ಬದಲಾವಣೆ ಮಾಡಿದ್ದರೇ, ಮತ್ತೆ ಕೆಲ ರೈಲುಗಳ ಸಂಚಾರವನ್ನು ನೈರುತ್ಯ ರೈಲ್ವೆ ಇಲಾಖೆಯು ರದ್ದುಗೊಳಿಸಿದೆ. ಈ ಕುರಿತಂತೆ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿದ್ದು, ಕೆಂಗೇರಿ-ಹೆಜ್ಜಾಲ ನಿಲ್ದಾಣಗಳ ನಡುವಿನ ರೈಲ್ವೆ ಲೆವೆಲ್ ಕ್ರಾಸಿಂಗ್ (ರೈಲ್ವೆ ಗೇಟ್) ನಂ. 15 ಮತ್ತು ಕೆಎಸ್ಆರ್ ಬೆಂಗಳೂರು-ಬೆಂಗಳೂರು ಕ್ಯಾಂಟ್ ನಿಲ್ದಾಣಗಳ ನಡುವಿನ ಸೇತುವೆ ಸಂಖ್ಯೆ 855ರಲ್ಲಿ ತಾತ್ಕಾಲಿಕ ಗರ್ಡರ್ಗಳನ್ನು ಅಳವಡಿಸುವ ಮತ್ತು ತೆರವುಗೊಳಿಸುವುದಕ್ಕಾಗಿ ಲೈನ್ ಬ್ಲಾಕ್ / ಪವರ್ ಬ್ಲಾಕ್ ಇರುವುದರಿಂದ ಈ ಕೆಳಗಿನ ರೈಲುಗಳ ಸೇವೆಯಲ್ಲಿ ಬದಲಾವಣೆ ಮಾಡಲಾಗುತ್ತಿದೆ. ಅವುಗಳ ವಿವರ ಈ ಕೆಳಗಿನಂತಿವೆ ಅಂತ ತಿಳಿಸಿದೆ. ಎ) ರೈಲುಗಳ ಸಂಚಾರ ರದ್ದು: ಜುಲೈ 1, 2, 8 ಮತ್ತು 9, 2024 ರಂದು ರೈಲು ಸಂಖ್ಯೆ16021 ಡಾ. ಎಮ್ಜಿಆರ್ ಚೆನ್ನೈ ಸೆಂಟ್ರಲ್-ಮೈಸೂರು ದೈನಂದಿನ ಎಕ್ಸ್ಪ್ರೆಸ್ ರೈಲು ಸಂಚಾರ ರದ್ದಾಗಲಿದೆ. ಜುಲೈ 2, 3, 9 ಮತ್ತು 10, 2024 ರಂದು ರೈಲು ಸಂಖ್ಯೆ 16022 ಮೈಸೂರು-ಡಾ ಎಮ್ಜಿಆರ್ ಚೆನ್ನೈ…
ಬೆಂಗಳೂರು: ರಾಜ್ಯಾಧ್ಯಂತ ಡೆಂಘಿ ಪತ್ತೆ ಮತ್ತು ಚಿಕಿತ್ಸೆಯನ್ನು ಗಂಭೀರವಾಗಿ ಪರಿಗಣಿಸಿ. ಅಗತ್ಯ ಚಿಕಿತ್ಸೆ, ಚುಚ್ವುಮದ್ದು, ಪ್ಲೇಟ್ ಲೆಟ್ಸ್ ಗಳ ಸಂಗ್ರಹಿಸುವಂತೆ ಸಿಎಂ ಸಿದ್ಧರಾಮಯ್ಯ ಆರೋಗ್ಯ ಇಲಾಖೆಯ ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದ್ದಾರೆ. ರಾಜ್ಯದಲ್ಲಿ ಡೆಂಘಿ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಆರೋಗ್ಯ ಸಚಿವರು ಹಾಗೂ ಸರ್ಕಾರದ ಹಿರಿಯ ಅಧಿಕಾರಿಗಳ ಸಭೆ ನಡೆಸಿದರು. ಈ ಸಭೆಯಲ್ಲಿ ರಾಜ್ಯದಲ್ಲಿ ನಿನ್ನೆಯ ವರೆಗೆ ಒಟ್ಟು 5374 ಪ್ರಕರಣ ವರದಿಯಾಗಿದ್ದು, 5 ಮರಣಗಳು ಸಂಭವಿಸಿವೆ. ಭಾರತ ಸರ್ಕಾರವು ಡೆಂಗಿ ಪ್ರಕರಣಗಳಲ್ಲಿ Case fatality rate ಅಂದರೆ ಮರಣ ಪ್ರಮಾಣ ಶೇ. 0.5 ನ್ನು ಮೀರುವಂತಿಲ್ಲ ಎಂದು ನಿಗದಿ ಪಡಿಸಿದೆ. ರಾಜ್ಯದಲ್ಲಿ ಮರಣ ಪ್ರಮಾಣ ಇನ್ನೂ ಕಡಿಮೆ ಪ್ರಮಾಣದಲ್ಲಿದೆ. ಅಂದರೆ, Case fatality rate 0.09% ಇದೆ ಎಂದರು. ಬೆಂಗಳೂರು, ಚಿಕ್ಕಮಗಳೂರು, ಮೈಸೂರು, ಹಾವೇರಿ, ಶಿವಮೊಗ್ಗ, ಚಿತ್ರದುರ್ಗ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪ್ರಕರಣಗಳು ಕಾಣಿಸಿಕೊಂಡಿವೆ. *ಬಿಬಿಎಂಪಿ ವ್ಯಾಪ್ತಿಯಲ್ಲಿ 1230 ಪ್ರಕರಣಗಳು ವರದಿಯಾಗಿವೆ. ಸರ್ಕಾರ ಇದನ್ನು ಗಂಭೀರವಾಗಿ ಪರಿಗಣಿಸಿದ್ದು, ನಿಯಂತ್ರಣಕ್ಕೆ ಎಲ್ಲ ಅಗತ್ಯ ಕ್ರಮಗಳನ್ನು…
ಬೆಂಗಳೂರು: ಕರ್ನಾಟಕ ಭಾರತ್ ಗೌರವ್ ದಕ್ಷಿಣ ಯಾತ್ರಾ” ಯೋಜನೆಯಡಿ ದಕ್ಷಿಣ ಭಾರತದಲ್ಲಿನ ಪುಣ್ಯ ಕ್ಷೇತ್ರಗಳಾದ ರಾಮೇಶ್ವರ-ಕನ್ಯಾಕುಮಾರಿ-ಮಧುರೆ-ತಿರುವನಂತಪುರಕ್ಕೆ ವಿಶೇಷ ಪ್ರವಾಸ ಆಯೋಜಿಸಲಾಗಿದೆ. ಧಾರ್ಮಿಕ ದತ್ತಿ ಇಲಾಖೆಯ ವತಿಯಿಂದ, IRCTC ಮತ್ತು ಭಾರತೀಯ ರೈಲ್ವೇ ಇಲಾಖೆಯ ಸಹಯೋಗದೊಂದಿಗೆ ಪುಣ್ಯ ಕ್ಷೇತ್ರಗಳಾದ ವಾರಣಾಸಿ, ಅಯೋಧ್ಯೆ ಮತ್ತು ಪ್ರಯಾಗ್ರಾಜ್ ಕ್ಷೇತ್ರಗಳಿಗೆ ಕಡಿಮೆ ವೆಚ್ಚದಲ್ಲಿ ತೆರಳಲು ಅನುಕೂಲವಾಗುವಂತೆ ರಿಯಾಯ್ತಿ ದರದಲ್ಲಿ ಪ್ಯಾಕೇಜ್ ರೂಪಿಸಿ “ಕರ್ನಾಟಕ ಭಾರತ್ ಗೌರವ್ ಕಾಶಿ ದರ್ಶನ” ಯೋಜನೆಯನ್ನು ಈಗಾಗಲೇ ಜಾರಿಗೆ ತರಲಾಗಿರುತ್ತದೆ. ಈ ಯೋಜನೆಯಡಿ ವಿಶೇಷ ರೈಲು 10 ಟ್ರಿಪ್ ಗಳನ್ನು ಯಶಸ್ವಿಯಾಗಿ ಪೂರೈಸಿದ್ದು, ಒಟ್ಟು 5917 ಯಾತ್ರಾರ್ಥಿಗಳು ಪ್ರಯಾಣಿಸಿರುತ್ತಾರೆ. ಕಾಶಿ-ರಾಮೇಶ್ವರ ಕ್ಷೇತ್ರಗಳ ಬಗ್ಗೆ ಹಿಂದೂ ಪುರಾಣಗಳಲ್ಲಿ ಹೇಳುವಂತೆ ಹಾಗೂ ಉತ್ತರ ಭಾರತದ ಕೆಲವು ಭಾಗಗಳಲ್ಲಿ (ವಾರಣಾಸಿ ಒಳಗೊಂಡಂತೆ) ಪ್ರಸ್ತುತ ಬಿಸಿಲಿನ ವಾತಾವರಣವಿದ್ದು, ಈ ಯೋಜನೆಯಡಿ ವಯೋವೃದ್ದರು ಅಧಿಕ ಸಂಖ್ಯೆಯಲ್ಲಿ ಯಾತ್ರೆ ಕೈಗೊಳ್ಳುತ್ತಿರುವುದರಿಂದ, ಸದರಿ ಯಾತ್ರಾರ್ಥಿಗಳ ಆರೋಗ್ಯದ ಹಿತದೃಷ್ಠಿಯನ್ನು ಗಮನದಲ್ಲಿಟ್ಟುಕೊಂಡು ಪ್ರಸ್ತಾಪಿತ “ಕರ್ನಾಟಕ ಭಾರತ್ ಗೌರವ್” ಯೋಜನೆಯಡಿ ದಕ್ಷಿಣ ಭಾರತದಲ್ಲಿನ ಪುಣ್ಯ ಕ್ಷೇತ್ರಗಳಾದ ರಾಮೇಶ್ವರ-ಕನ್ಯಾಕುಮಾರಿ-ಮಧುರೆ-ತಿರುವನಂತಪುರ…












