Author: kannadanewsnow09

ಚಿತ್ರದುರ್ಗ: ಆಪರೇಷನ್ ಕಮಲಕ್ಕೆ ಸಾವಿರಾರು ಕೋಟಿ ಎಲ್ಲಿಂದ ಬಂತು ಮಿಸ್ಟರ್ ಮೋದಿಯವರೇ? ಕಾಂಗ್ರೆಸ್ ಮತ್ತು ಬೇರೆ ಪಕ್ಷದ ಶಾಸಕರುಗಳಿಗೆ ಕೋಟಿ ಕೋಟಿ ಕೊಡುವುದಕ್ಕೆ ಸಾವಿರಾರು ಕೋಟಿ ಹಣ ಎಲ್ಲಿಂದ ಬಂತು. ಅದು ಕಪ್ಪು ಹಣ ಅಲ್ಲವೇ ದೇಶದ ಜನಕ್ಕೆ ಉತ್ತರಿಸಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆಗ್ರಹಿಸಿದರು. ಚಿತ್ರದುರ್ಗ ಲೋಕಸಭಾ ಅಭ್ಯರ್ಥಿ ಚಂದ್ರಪ್ಪ ಅವರ ಪರವಾಗಿ ಆಯೋಜಿಸಿದ್ದ ಬೃಹತ್ ಬಹಿರಂಗ ಸಭೆಯನ್ನು ಉದ್ಘಾಟಿಸಿ ಮಾತನಾಡಿದರು. ವಿದೇಶದಿಂದ ಕಪ್ಪು ಹಣ ತಂದು ಪ್ರತಿಯೊಬ್ಬ ಭಾರತೀಯನ ಕುಟುಂಬಕ್ಕೆ 15 ಲಕ್ಷ ರೂಪಾಯಿ ಕೊಡ್ತೀವಿ ಅಂದ್ರಲ್ಲಾ ಕೊಟ್ರಾ? ರೈತರ ಆದಾಯ ದುಪ್ಪಟ್ಟು ಮಾಡ್ತೀವಿ ಅಂತ ಭಾಷಣ ಮಾಡಿದ್ರು. ಆದಾಯ ಒಂದು ರೂಪಾಯಿ ಕೂಡ ಹೆಚ್ಚಾಗಲಿಲ್ಲ. ವರ್ಷಕ್ಕೆ 2 ಕೋಟಿ ಉದ್ಯೋಗ ಸೃಷ್ಟಿ ಮಾಡ್ತೀವಿ ಅಂದ್ರಲ್ಲಾ? ಮಾಡಿದ್ರಾ ಮೋದಿಯವರೇ? ಪೆಟ್ರೋಲ್, ಡೀಸೆಲ್, ಅಡುಗೆ ಗ್ಯಾಸ್, ರಸಗೊಬ್ಬರ, ಎಣ್ಣೆ, ಕಾಳು ಬೇಳೆ ಎಲ್ಲವೂ ಅತ್ಯಂತ ಕಡಿಮೆ ಬೆಲೆಗೆ ಸಿಗುವಂತೆ ಮಾಡ್ತೀನಿ ಅಂದಿದ್ರಲ್ಲಾ ಮಾಡಿದ್ರಾ ಮಿಸ್ಟರ್ ಮೋದಿ? ನಿಮ್ಮ ಕಾಲದಲ್ಲಿ ಆದ…

Read More

ನವದೆಹಲಿ: ಮುಂಬರುವ ಲೋಕಸಭಾ ಮತ್ತು ವಿಧಾನಸಭಾ ಚುನಾವಣೆಗಳಲ್ಲಿ ಯಾವುದೇ ನಿಜವಾದ ಮತದಾರರಿಗೆ ಮತದಾನದ ಹಕ್ಕನ್ನು ನಿರಾಕರಿಸಲಾಗುವುದಿಲ್ಲ ಎಂದು ಖಚಿತಪಡಿಸಿಕೊಳ್ಳುವ ಪ್ರಯತ್ನದಲ್ಲಿ, ಚುನಾವಣಾ ಆಯೋಗ (ಇಸಿ) ಮತದಾರರ ಗುರುತಿನ ಚೀಟಿಯ ಮೂಲಕ ವ್ಯಕ್ತಿಯ ಗುರುತನ್ನು ದೃಢೀಕರಿಸುವವರೆಗೆ ಮತದಾರರ ಗುರುತನ್ನು ಪರಿಶೀಲಿಸುವಾಗ ಸಣ್ಣ ಗುಮಾಸ್ತ ಅಥವಾ ಕಾಗುಣಿತ ದೋಷಗಳನ್ನು ಕಡೆಗಣಿಸುವಂತೆ ರಾಜ್ಯ ಚುನಾವಣಾ ಅಧಿಕಾರಿಗಳಿಗೆ ಸೂಚನೆ ನೀಡಿದೆ. ಇದಲ್ಲದೆ, ಮತ್ತೊಂದು ವಿಧಾನಸಭಾ ಕ್ಷೇತ್ರದ ಚುನಾವಣಾ ನೋಂದಣಿ ಅಧಿಕಾರಿ ನೀಡಿದ ಮತದಾರರ ಗುರುತಿನ ಚೀಟಿಯು ಅವರು ಹಾಜರಾಗುವ ಮತಗಟ್ಟೆಯ ಮತದಾರರ ಪಟ್ಟಿಯಲ್ಲಿ ವ್ಯಕ್ತಿಯ ಹೆಸರು ಕಾಣಿಸಿಕೊಳ್ಳುವವರೆಗೆ ಗುರುತಿನ ಉದ್ದೇಶಗಳಿಗಾಗಿ ಮಾನ್ಯವಾಗಿರುತ್ತದೆ ಎಂದು ಆಯೋಗ ಸ್ಪಷ್ಟಪಡಿಸಿದೆ. ಆದಾಗ್ಯೂ, ಗುರುತಿನ ಚೀಟಿಯಲ್ಲಿನ ಛಾಯಾಚಿತ್ರದಲ್ಲಿ ವ್ಯತ್ಯಾಸವಿದ್ದರೆ, ಮತದಾರನು ಚುನಾವಣಾ ಆಯೋಗವು ನಿರ್ದಿಷ್ಟಪಡಿಸಿದ ಪರ್ಯಾಯ ಫೋಟೋ ದಾಖಲೆಗಳಲ್ಲಿ ಒಂದನ್ನು ಹಾಜರುಪಡಿಸಬೇಕು. ಕಳೆದ ತಿಂಗಳು ಹೊರಡಿಸಿದ ಆದೇಶದಲ್ಲಿ, ಚುನಾವಣಾ ಆಯೋಗವು ತಮ್ಮ ಮತದಾರರ ಗುರುತಿನ ಚೀಟಿಯನ್ನು ತೋರಿಸಲು ಸಾಧ್ಯವಾಗದ ಮತದಾರರು ತಮ್ಮ ಗುರುತನ್ನು ಸ್ಥಾಪಿಸಲು ಪರ್ಯಾಯ ಫೋಟೋ ಗುರುತಿನ ದಾಖಲೆಗಳಲ್ಲಿ ಒಂದನ್ನು ಒದಗಿಸಬೇಕಾಗುತ್ತದೆ…

Read More

ಹಾವೇರಿ: ಕೇಂದ್ರದಲ್ಲಿ ನರೇಂದ್ರ ಮೋದಿಯವರು ಬಂದ ಮೇಲೆ ಸಮ್ಮಿಶ್ರ ಸರ್ಕಾರದ ಕಾಲ ಮುಗಿದು ಹೋಗಿದೆ. ದೇಶದ ಅಭಿವೃದ್ಧಿ ಮತ್ತು ಸುರಕ್ಷತೆಯ ದೃಷ್ಟಿಯಿಂದ ಏಕ ಪಕ್ಷದ ಆಡಳಿತ ಒಳ್ಳೆಯದು ಎಂದು ದೇಶದ ಜನರು ತೀರ್ಮಾನಿಸಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಹಾವೇರಿ ಗದಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಅಭಿಪ್ರಾಯ ಪಟ್ಟಿದ್ದಾರೆ. ಇಂದು ಹಿರೇಕೆರೂರು ವಿಧಾನಸಭಾ ಕ್ಷೇತ್ರದ ಕುಡುಪಲಿ, ಕಡೂರು, ಬುಳ್ಳಾಪೂರ, ಹಳ್ಳೂರು ಗ್ರಾಮಗಳಲ್ಲಿ ಚುನಾವಣಾ ಪ್ರಚಾರ ನಡೆಸಿ ಮಾತನಾಡಿದ ಅವರು, ಪಧಾನಿ ನರೇಂದ್ರ ಮೋದಿಯವರು ಈ ಚುನಾವಣೆಯ ಕೇಂದ್ರಬಿಂದುವಾಗಿದ್ದಾರೆ. ಸಾಮಾನ್ಯವಾಗಿ ಎರಡು ವ್ಯಕ್ತಿತ್ವದ ನಡುವೆ ಚುನಾವಣೆಯಾಗುತ್ತದೆ. ಆದರೆ, ಇಲ್ಲಿ ನರೇಂದ್ರಮೋದಿ ಪರ ಹಾಗೂ ನರೇಂದ್ರ ಮೋದಿ ವಿರುದ್ಧ ಚುನಾವಣೆ ನಡೆಯುತ್ತಿದೆ. ದೇಶದಲ್ಲಿ ನರೇಂದ್ರ ಮೋದಿಯಂತಹ ವ್ಯಕ್ತಿತ್ವ ಬೇರೆ ಯಾರೂ ಇಲ್ಲ ಎಂದು ಹೇಳಿದರು. ಲೋಕಸಭೆಯ 543 ಸ್ಥಾನದಲ್ಲಿ ಸ್ಪರ್ಧೆ ಮಾಡಲು ಸಾಧ್ಯವಾಗದಿರುವ ಪಕ್ಷಗಳು ದೇಶ ಆಳುವ ಬಗ್ಗೆ ಮಾತನಾಡುತ್ತವೆ. ಹಿಂದೆ ಸಣ್ಣ ಸಣ್ಣ ಪಕ್ಷಗಳು ಸೇರಿ ಸರ್ಕಾರ ಆಳಿರುವುದನ್ನು…

Read More

ಬೆಂಗಳೂರು: ರಾಜ್ಯದಲ್ಲಿ ಬಿಸಿಲ ಬೇಗೆಯಿಂದ ತತ್ತರಿಸಿ ಜನ, ಜಾನುವಾರು ತತ್ತರಿಸಿ ಹೋಗಿದ್ದಾರೆ. ಅಬ್ಬಾ ಎಷ್ಟು ಹೊತ್ತಿಗೆ ಮಳೆ ಬರುತ್ತಪ್ಪ ಅಂತ ಕಾಯ್ತಿದ್ದಾರೆ. ಹೀಗೆ ಮಳೆಗಾಗಿ ಕಾಯುತ್ತಿರೋ ಜನತೆಗೆ ಕೂಲ್ ಆಗೋ ಸುದ್ದಿಯನ್ನು ಹವಾಮಾನ ಇಲಾಖೆ ನೀಡಿದೆ. ಅದೇ ಮುಂದಿನ 5 ದಿನ ಭಾರೀ ಮಳೆಯಾಗವಿದೆ ಅಂತ ಮುನ್ಸೂಚನೆ ನೀಡಿದೆ. ಈ ಕುರಿತಂತೆ ಹವಾಮಾನ ಇಲಾಖೆಯಿಂದ ಮುನ್ಸೂಚನೆ ನೀಡಲಾಗಿದ್ದು, ಮುಂದಿನ ಐದು ದಿನಗಳ ಕಾಲ ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ ಎಂಬುದಾಗಿ ಮುನ್ಸೂಚನೆ ನೀಡಿದೆ. ರಾಜ್ಯದಲ್ಲಿ ಮುಂದಿನ ಐದು ದಿನ ಉತ್ತಮ ಮಳೆಯಾಗಲಿದೆ. ಕೊಡಗು, ಹಾಸನ, ಚಿಕ್ಕಮಗಳೂರು, ಧಾರವಾಡ, ಉಡುಪಿ, ಉತ್ತರ ಕನ್ನಡ, ಚಿತ್ರದುರ್ಗ, ಹಾವೇರಿ, ತುಮಕೂರು, ಚಾಮರಾಜನಗರ ಹಾಗೂ ಶಿವಮೊಗ್ಗ ಜಿಲ್ಲೆಯಲ್ಲಿ ಮಧೆಯಾಗುವ ಸಾಧ್ಯತೆಯಿದೆ ಅಂತ ತಿಳಿಸಿದೆ. ಅಂದಹಾಗೇ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಬೇಸಿಗೆಯ ಬಿಸಿಲ ತಾಪ ಹೆಚ್ಚಾಗಿದೆ. 35 ಡಿಗ್ರಿ ಸೆಲ್ಸಿಯಸ್ ಗಿಂತ ಹೆಚ್ಚಾಗಿ, ಬಿಸಿಲ ಶಾಕಕ್ಕೆ ಜನರು ತತ್ತರಿಸಿ ಹೋಗಿದ್ದಾರೆ. ಇದೇ ಸಂದರ್ಭದಲ್ಲಿ ಮುಂದಿನ…

Read More

ಮಂಗಳೂರು: ಕರಾವಳಿಯಲ್ಲಿ ಕಳೆದ 30 ವರ್ಷದಿಂದ ಕಮಲವನ್ನ ನೋಡಿರುವ ಜನರು ಈ ಬಾರಿ ಬದಲಾವಣೆ ಬಯಸಿದ್ದಾರೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು ಹೇಳಿದರು. ಮಂಗಳೂರಿನಲ್ಲಿ‌ ಇಂದು ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಪೂಜಾರಿ ಅವರ ನಾಮಪತ್ರ ಸಲ್ಲಿಕೆ ವೇಳೆ ಬೃಹತ್ ಮೆರವಣಿಗೆಯಲ್ಲಿ ಪಾಲ್ಗೊಂಡು‌ ಸಚಿವರು ಮಾತನಾಡುತ್ತಿದ್ದರು. ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಒಗ್ಗಟ್ಟಿನ ಹೋರಾಟ ಪ್ರದರ್ಶಿಸುತ್ತಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲೂ ಈ ಬಾರಿ ಕೈ ಕಾರ್ಯಕರ್ತರು ಒಗ್ಗಟ್ಟಾಗಿ ಕಾಂಗ್ರೆಸ್ ಅಭ್ಯರ್ಥಿ ಗೆಲುವಿಗೆ ಪಣ ತೊಟ್ಟಿದ್ದಾರೆ. ಕರಾವಳಿಯ ಜನರು ಈ ಬಾರಿ ಕಾಂಗ್ರೆಸ್ ಅಭ್ಯರ್ಥಿಗೆ ಆಶೀರ್ವಾದ ಮಾಡಬೇಕು ಎಂದು ಮನವಿ ಮಾಡಿದರು. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳಿದ 30 ವರ್ಷಗಳಿಂದ ಜನರು ಬಿಜೆಪಿಯನ್ನ ನೋಡಿ ಆಗಿದೆ. ಈ ಬಾರಿ ಕರಾವಳಿ ಭಾಗದ ಜನರು ಬದಲಾವಣೆ ಬಯಸಿದ್ದಾರೆ. ಚುನಾವಣೆ ಸಂದರ್ಭಗಳಲ್ಲಿ ಬಿಜೆಪಿ ಯಾವ ರೀತಿ ಅಧಿಕಾರ ದುರಪಯೋಗ ಮಾಡಿಕೊಳ್ಳಿತ್ತಿದೆ ಎಂಬುದನ್ನ ಜನರು ನೋಡುತ್ತಿದ್ದಾರೆ. ಎಲೆಕ್ಟೋರಲ್ ಬಾಂಡ್ ಬಗ್ಗೆ ಬಿಜೆಪಿಯವರ ಬಳಿ ಉತ್ತರವಿಲ್ಲ. ಕೇಂದ್ರ ಬಿಜೆಪಿ…

Read More

ಬೆಂಗಳೂರು: ಲೋಕಸಭಾ ಚುನಾವಣೆ ಹೊತ್ತಿನಲ್ಲಿ ಕರ್ನಾಟಕ ಕಾಂಗ್ರೆಸ್ ಪಕ್ಷದಲ್ಲಿ ಮಹತ್ವದ ಬದಲಾವಣೆ ಮಾಡಲಾಗಿದೆ. ಬರೋಬ್ಬರಿ 44 ಉಪಾಧ್ಯಕ್ಷರು, 144 ಪ್ರಧಾನ ಕಾರ್ಯದರ್ಶಿಗಳನ್ನು ನೇಮಕ ಮಾಡಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ ವೇಣುಗೋಪಾಲ್ ಆದೇಶಿಸಿದ್ದಾರೆ. ಈ ಕುರಿತಂತೆ ಇಂದು ಆದೇಶ ಹೊರಡಿಸಿದ್ದು, ಗೌರವಾನ್ವಿತ ಕಾಂಗ್ರೆಸ್ ಅಧ್ಯಕ್ಷರು ಪರಿಷ್ಕೃತ ಪ್ರಸ್ತಾಪವನ್ನು ಅನುಮೋದಿಸಿದ್ದಾರೆ. ಕರ್ನಾಟಕ ಪ್ರದೇಶದ ಮಾಧ್ಯಮ ಮತ್ತು ಸಾಮಾಜಿಕ ಮಾಧ್ಯಮ ವಿಭಾಗದ ಉಪಾಧ್ಯಕ್ಷರು, ಪ್ರಧಾನ ಕಾರ್ಯದರ್ಶಿಗಳು, ಖಜಾಂಚಿ, ಉಪಾಧ್ಯಕ್ಷರ ನೇಮಕ ಮಾಡಲಾಗಿದೆ. ಈ ತಕ್ಷಣದಿಂದ ಜಾರಿಗೆ ಬರುವಂತೆ ನೇಮಕ ಮಾಡಿ ಆದೇಶಿಸಿರೋದಾಗಿ ಹೇಳಿದ್ದಾರೆ. ಅಂದಹಾಗೇ ಉಪಾಧ್ಯಕ್ಷರಾಗಿ ಡಾ.ಬಿಎಲ್ ಶಂಕರ್, ಅಜಯ್ ಕುಮಾರ್ ಶರನಾಯ್ಕ್, ಮೆಹಬೂಬ್ ಸುಡ್ಗರ್, ಆನಂದ್ ನ್ಯಾಮಗೌಡ, ವಿಎಸ್ ಉಗ್ರಪ್ಪ, ಒಬೆದುಲ್ಲ ಶರೀಫ್ ಸೇರಿದಂತೆ 44 ಮಂದಿಯನ್ನು ನೇಮಕ ಮಾಡಲಾಗಿದೆ. ಇನ್ನೂ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿಯನ್ನಾಗಿ ದಯಾನಂದ್ ಎಸ್ ಪಾಟೀಲ್, ಕೊಡಿಹಳ್ಳಿ ಎನ್ ಐ, ಮುರುಳಿ ಕೃಷ್ಣ.ಬಿ, ಹುಮಾಯೂನ್ ಖಾನ್, ಡಾ.ಉಮೇಶ್ ಬಾಬು, ಜಿಎ ಭಾವ, ಜೆ ಹುಚ್ಚಪ್ಪ, ಪ್ರಭಾಕರ ರೆಡ್ಡಿ, ಎ…

Read More

ಮೈಸೂರು : ನನ್ನನ್ನು ರಾಷ್ಟ್ರಪತಿ, ಪ್ರಧಾನಮಂತ್ರಿ ಮಾಡ್ತೀನಿ ಅಂದ್ರೂ ನಾನು ಬಿಜೆಪಿ ಕಡೆ ತಲೆ ಹಾಕಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸ್ಪಷ್ಟವಾಗಿ ನುಡಿದರು. ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ‌ ನಡೆದ ಪರಿಶಿಷ್ಟ ಜಾತಿ, ವರ್ಗಗಳ ಕಾರ್ಯಕರ್ತರು ಮತ್ತು ಮುಖಂಡರ ಸಭೆಯಲ್ಲಿ ಲೋಕಸಭಾ ಅಭ್ಯರ್ಥಿ ಎಂ.ಲಕ್ಷ್ಮಣ್ ಪರ ಮತಯಾಚಿಸಿ ಮಾತನಾಡಿದರು. ನಮಗೆ ಸೈದ್ಧಾಂತಿಕ ಸ್ಪಷ್ಟತೆ ಇದ್ದಾಗ ಮಾತ್ರ ರಾಜಕೀಯ ಶಕ್ತಿ ಬರುತ್ತದೆ. BJP-RSS ಕಡೆ ತಲೆ ಹಾಕಬೇಡಿ. ಶೂದ್ರರಿಗೆ-ದಲಿತರಿಗೆ-ಮಹಿಳೆಯರಿಗೆ RSS ಗರ್ಭಗುಡಿಯೊಳಗೆ ಪ್ರವೇಶವನ್ನೇ ಕೊಡಲ್ಲ. ಮೋದಿ ಪ್ರಧಾನಿಯಾದರೆ ದೇಶ ತೊರೆಯುತ್ತೇನೆ ಎಂದಿದ್ದ ದೇವೇಗೌಡರು‌ ಈಗ ಮೋದಿಗೂ‌ ತಮಗೂ‌ ಅವಿನಾಭಾವ ಸಂಬಂಧ ಇದೆ ಎನ್ನುತ್ತಿದ್ದಾರೆ. ರಾಜಕಾರಣಿಯಾದವರಿಗೆ ಸೈದ್ಧಾಂತಿಕ ಸ್ಪಷ್ಟತೆ ಇರಬೇಕು ಎಂದರು. BJP ಮತ್ತು RSS ಸಾಮಾಜಿಕ ನ್ಯಾಯದ ವಿರೋಧಿ. ಹೀಗಾಗಿ ಮೀಸಲಾತಿಯನ್ನು ಇಷ್ಟ ಪಡುವುದಿಲ್ಲ. ಮೀಸಲಾತಿ ಎನ್ನುವುದು ಭಿಕ್ಷೆಯಲ್ಲ. ಅದು ಶೋಷಿತ ಜನ ಸಮುದಾಯಗಳ ಹಕ್ಕು. ಎಲ್ಲಿಯವರೆಗೆ ಜಾತಿ ವ್ಯವಸ್ಥೆ ಇರುತ್ತದೋ ಅಲ್ಲಿಯವರೆಗೂ ಮೀಸಲಾತಿ ಇದ್ದೇ ಇರಬೇಕು ಎಂದರು ಸ್ವಾತಂತ್ರ್ಯ ಪೂರ್ವದಲ್ಲಿ ,…

Read More

ಮೈಸೂರು : ಈ ಲೋಕಸಭಾ ಚುನಾವಣೆಯನ್ನು ಸವಾಲಾಗಿ ಸ್ವೀಕರಿಸಿ ಬಿಜೆಪಿ ಮಾಡಿರುವ ನಂಬಿಕೆ ದ್ರೋಹಕ್ಕೆ, ಜನ ದ್ರೋಹಕ್ಕೆ ಪಾಠ ಕಲಿಸಿ ಎಂದು ಸಿ.ಎಂ.ಸಿದ್ದರಾಮಯ್ಯ ಕರೆ ನೀಡಿದರು. ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಎಂ.ಲಕ್ಷ್ಮಣ್ ಅವರ ನಾಮಪತ್ರ ಸಲ್ಲಿಸಿದ ಬಳಿಕ ನಡೆದ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಿದರು. ಜನರನ್ನು ಕೇವಲ ಭಾವನಾತ್ಮಕವಾಗಿ ಕೆರಳಿಸಿ ಅವರ ಬದುಕಿಗೆ ಬೆಂಕಿ ಇಡುವ ಕೆಲಸವನ್ನು ನಾವು ಮಾಡುವುದಿಲ್ಲ. ನಾವು ಜನರ ಭಾವನೆಗಳನ್ನು ಕೆರಳಿಸುವಿದಿಲ್ಲ. ಬದಲಿಗೆ ಭಾವನೆಗಳನ್ನು ಗೌರವಿಸುತ್ತಲೇ ಜನರ ಬದುಕನ್ನು ಸುಧಾರಿಸಲು ಕಾರ್ಯಕ್ರಮ ರೂಪಿಸುತ್ತೇವೆ ಎಂದರು. ಜನರಿಗೆ ಬದುಕು ಮುಖ್ಯ. ಬೆಲೆ ಏರಿಕೆ ಈ ಕಾರಣಕ್ಕೇ ಮೊದಲ ಬಾರಿ ಮುಖ್ಯಮಂತ್ರಿಯಾಗಿ ಹಲವು ಭಾಗ್ಯಗಳ ಕಾರ್ಯಕ್ರಮ ಜಾರಿ ಮಾಡಿದೆವು. ಎರಡನೇ ಬಾರಿ ಮುಖ್ಯಮಂತ್ರಿಯಾಗಿ ಎಂಟು ತಿಂಗಳಲ್ಲಿ ಐದೂ ಗ್ಯಾರಂಟಿಗಳನ್ನು ಜಾರಿ ಮಾಡಿ ಪ್ರತೀ ಫಲಾನುಭವಿ ಕುಟುಂಬಗಳಿಗೆ ತಿಂಗಳಿಗೆ 4-5 ಸಾವಿರ ಉಳಿತಾಯ ಆಗುತ್ತಿದೆ. ಇದರಿಂದ ಜನರ ಬದುಕಿನ ಸಂಕಷ್ಟ ಕಡಿಮೆಯಾಗುತ್ತಿದೆ ಎಂದರು. ಸೋಲಿನ ಭಯದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಲಕ್ಷ್ಮಣ್…

Read More

ಜ್ಯೋತಿಷ್ಯಶಾಸ್ತ್ರದ ಪ್ರಕಾರ, ಪ್ರತಿಯೊಂದು ಗ್ರಹಗಳ ಚಲನೆಯು 12 ರಾಶಿಚಕ್ರ ಚಿಹ್ನೆಗಳಿಗೆ ವಿವಿಧ ಪ್ರಯೋಜನಗಳನ್ನು ನೀಡುತ್ತದೆ. ಇದು ಕೆಲವೊಮ್ಮೆ ಶುಭ ಮತ್ತು ಕೆಲವೊಮ್ಮೆ ಅಶುಭ. ಹಾಗೆಯೇ ಒಂದು ರಾಶಿಯಲ್ಲಿ ಎರಡು ಗ್ರಹಗಳು ಸೇರಿಕೊಂಡಾಗ ಕೆಲವು ಯೋಗಗಳು ಉಂಟಾಗುತ್ತವೆ. ಜ್ಯೋತಿಷ್ಯದ ಈ ಲೇಖನದಲ್ಲಿ, ರೂಪುಗೊಂಡ ಎರಡು ಯೋಗಗಳು ಮತ್ತು ಅದೃಷ್ಟವನ್ನು ತರುವ ರಾಶಿಚಕ್ರ ಚಿಹ್ನೆಗಳ ಬಗ್ಗೆ ನೀವು ತಿಳಿಯಬಹುದು. ಶ್ರೀ ಸಿಗಂದೂರು ಚೌಡೇಶ್ವರಿ ಜ್ಯೋತಿಷ್ಯ ಪೀಠ ನಂ 1ಕೇರಳ ಕೊಳ್ಳೇಗಾಲದ ಮಹಾ ಮಾಂತ್ರಿಕ ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ನಕ್ಷತ್ರಿ ತಂತ್ರಿ ನಂ:- 9686268564. ನಂ 1ವಶೀಕರಣ ಸ್ಪೆಷಲಿಸ್ಟ್ ಒಂದು ಕರೆಯಲ್ಲಿ ಪರಿಹಾರ ತಿಳಿಸುತ್ತಾರೆ ತಾವು ಎಷ್ಟೋ ಜ್ಯೋತಿಷ್ಯರಲ್ಲಿ ಕೇಳಿಯು ಪರಿಹಾರ ಸಿಗದೇ ಮನನೊಂದಿದ್ದರೆ ಪರಿಹಾರ ನಿಮ್ಮ ಸಮಸ್ಯೆಗಳಾದ ಅತ್ತೆ-ಸೊಸೆ ಕಿರಿಕಿರಿ, ಪ್ರೀತಿಯಲ್ಲಿ ನಂಬಿ ಮೋಸ, ಇಷ್ಟ ಪಟ್ಟವರು ನಿಮ್ಮಂತೆ ಆಗಲು, ಗಂಡ ಹೆಂಡತಿ ಕಿರಿಕಿರಿ, ಮದುವೆಯಲ್ಲಿ ಅಡೆತಡೆ, ಸಂತಾನ ಸಮಸ್ಯೆ, ಮಕ್ಕಳು ಹೇಳಿದ ಮಾತು ಕೇಳದಿದ್ದರೆ, ವಿದ್ಯಾಭ್ಯಾಸದಲ್ಲಿ ಕಿರಿಕಿರಿ, ಆರೋಗ್ಯ ಸಮಸ್ಯೆ, ಆಸ್ತಿಯಲ್ಲಿ ಕಿರಿಕಿರಿ,…

Read More

ಬೆಂಗಳೂರು: ಹಿರಿಯ ಪತ್ರಕರ್ತ ಎಂ.ಕೆ.ಭಾಸ್ಕರ ರಾವ್ ಅವರ ನಿಧನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ತೀವ್ರ ಸಂತಾಪ ಸೂಚಿಸಿದ್ದಾರೆ. ಎಂ.ಕೆ.ಭಾಸ್ಕರರಾವ್ ಅವರು ಪ್ರಜಾವಾಣಿ ಪತ್ರಿಕೆಯಲ್ಲಿಯೇ ಮೂರು ದಶಕಕ್ಕೂ ಅಧಿಕ ಕಾಲ ಕೆಲಸ ಮಾಡಿದ್ದರು. ಹಲವಾರು ಪ್ರಶಸ್ತಿಗಳಿಗೆ ಅವರು ಭಾಜನರಾಗಿದ್ದರು. ಸಮಾಜಮುಖಿ ಪತ್ರಕರ್ತರಾಗಿದ್ದ ಭಾಸ್ಕರರಾವ್ ತಮ್ಮ ಹರಿತ ಬರವಣಿಗೆ ಮಾತ್ರವಲ್ಲದೇ ಮಾತಿನಿಂದಲೂ ಗುರುತಿಸಿಕೊಂಡಿದ್ದರು. ಚುನಾವಣೆ ವೇಳೆ ಹಲವಾರು ಚಾನೆಲ್‍ಗಳಲ್ಲಿ ವಿಶ್ಲೇಷಣೆ ಮಾಡುತಿದ್ದರು. ಪ್ರಚಲಿತ ವಿದ್ಯಮಾನಗಳ ಕುರಿತು ನಿಖರವಾಗಿ ಮಾತನಾಡುವ ಜ್ಞಾನ ಅವರಲ್ಲಿತ್ತು ಎಂದು ತಿಳಿಸಿದ್ದಾರೆ. ಅವರ ಕುಟುಂಬಸ್ಥರು ಹಾಗೂ ಅಭಿಮಾನಿಗಳಿಗೆ ಅಗಲಿಕೆಯ ನೋವು ಸಹಿಸುವ ಶಕ್ತಿಯನ್ನು ಭಗವಂತನು ಕರುಣಿಸಲಿ. ಅವರ ಆತ್ಮಕ್ಕೆ ಚಿರಶಾಂತಿ ದೊರೆಯಲಿ ಎಂದು ಪ್ರಾರ್ಥಿಸಿದ್ದಾರೆ. ಅಂದಹಾಗೇ, ಹಿರಿಯ ಪತ್ರಕರ್ತ ಎಂ.ಕೆ.ಭಾಸ್ಕರ್ ರಾವ್ ಅವರು ಕ್ಯಾನ್ಸರ್ ಗೆ ಬಲಿಯಾಗಿದ್ದಾರೆ. ಸಂಯುಕ್ತ ಕರ್ನಾಟಕ ಮತ್ತು ಪ್ರಜಾವಾಣಿ ಪತ್ರಿಕೆಗಳಲ್ಲಿ ಕಾರ್ಯ ನಿರ್ವಹಿಸಿದ್ದ ಎಂ ಕೆ ಭಾಸ್ಕರ್ ರಾವ್ ಅವರ ವರದಿಗಾರಿಕಾ ಶೈಲಿ ವಿಶೇಷ ಹಾಗೂ ವಿಭಿನ್ನವಾಗಿತ್ತು. ರಾಯಚೂರು ಜಿಲ್ಲೆಯ ಪ್ರಜಾವಾಣಿ ವರದಿಗಾರರಾಗಿದ್ದ ಸಂದರ್ಭದಲ್ಲಿ ನಕ್ಸಲ್ ನಾಯಕ ಗದ್ದರ್,…

Read More