Subscribe to Updates
Get the latest creative news from FooBar about art, design and business.
Author: kannadanewsnow09
ಬೆಳಗಾವಿ: ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಗೆ 400 ಸ್ಥಾನಗಳನ್ನು ನೀಡಿದರೆ ಸಂವಿಧಾನವನ್ನು ಬದಲಾವಣೆ ಮಾಡುವುದಾಗಿ ಬಿಜೆಪಿ ಹಾಗೂ ಆರ್ ಎಸ್ ಎಸ್ ಹೇಳುತ್ತಿದ್ದು, ಈ ಚುನಾವಣೆ ಎರಡನೇ ಸ್ವಾತಂತ್ರ್ಯ ಹೋರಾಟವಾಗಿದೆ. ಈ ಹೋರಾಟದಲ್ಲಿ ಕಾಂಗ್ರೆಸ್ ಗೆಲ್ಲಲಿದ್ದು ಬಿಜೆಪಿ 200 ಸ್ಥಾನ ಗೆಲ್ಲುವುದೂ ಕಷ್ಟವಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ವ್ಯಕ್ತಪಡಿಸಿದರು. ಅವರು ಇಂದು ಬೆಳಗಾವಿಯಲ್ಲಿ ಆಯೋಜಿಸಿರುವ ಜಂಟಿ ಪತ್ರಿಕಾ ಗೋಷ್ಠಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಅಂಬೇಡ್ಕರ್ ಸಂವಿಧಾನ ಎಲ್ಲರಿಗೂ ಸಮಾನ ಅವಕಾಶ, ಸಮಸಮಾಜ ನೀಡುತ್ತದೆ. ಇದಕ್ಕೆ ವಿರುದ್ದವಾಗಿ ಬಿಜೆಪಿಯವರು ನಡೆಯುತ್ತಿದ್ದಾರೆ. ಅಂಬೇಡ್ಕರ್ ಅವರು ದೇಶಕ್ಕೆ ಕೇವಲ ರಾಜಕೀಯ ಸ್ವಾತಂತ್ರ್ಯ ಸಾಕಾಗುವುದಿಲ್ಲ. ಎಲ್ಲರಿಗೂ ಆರ್ಥಿಕ, ಸಾಮಾಜಿಕ ಸ್ವಾತಂತ್ರ್ಯ ದೊರೆಯುವಂತಾಗಬೇಕು ಎಂದಿದ್ದಾರೆ. ಈ ಶಕ್ತಿಯನ್ನು ದುರ್ಬಲರಿಗೆ ತುಂಬವ ಸಲುವಾಗಿಯೇ ಕಾಂಗ್ರೆಸ್ ಸರ್ಕಾರ ಗ್ಯಾರಂಟಿಗಳನ್ನು ಜಾರಿ ಮಾಡಿದೆ ಎಂದರು. 8 ತಿಂಗಳಲ್ಲಿ 5 ಗ್ಯಾರಂಟಿಳನ್ನು ಜಾರಿ ಮಾಡಿದ ಕಾಂಗ್ರೆಸ್ ನ ಮೇಲೆ ಜನರಿಗೆ ವಿಶ್ವಾಸವಿದೆ ರಾಜ್ಯದ ಬಡ ಜನರ ತುತ್ತಿನ ಚೀಲ ತುಂಬಿಸುವ ಅನ್ನಭಾಗ್ಯ ಯೋಜನೆಗಾಗಿ ಅಕ್ಕಿ ಪೂರೈಸಲು…
ಬೆಂಗಳೂರು: ಬರಗಾಲದ ಪರಿಹಾರದ ವಿಚಾರದಲ್ಲಿ ಕರ್ನಾಟಕದ ಕಾಂಗ್ರೆಸ್ ಸರಕಾರ ಇನ್ನೂ ಕುಂಭಕರ್ಣ ನಿದ್ರೆಯಲ್ಲಿದೆ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಅವರು ಟೀಕಿಸಿದರು. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ”ದಲ್ಲಿ ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಹಣ ಬಂದು ಕ್ಷಣದಲ್ಲಿ ರೈತರಿಗೆ ನೀಡುವುದಾಗಿ ಹೇಳಿದ್ದರು. ಕ್ಷಣಗಳು ಹೋಗಿ ಗಂಟೆಗಳಾಗಿ, ಈಗ ದಿನಗಳೇ ಕಳೆದಿವೆ. ರೈತರು ಈ ಬಿಸಿಲಿನ ಬೇಗೆಯಿಂದ ಹಾಹಾಕಾರ ಪಡುತ್ತಿದ್ದಾರೆ. ರಾಜ್ಯ ಸರಕಾರವು ಬೇರೆ ರಾಜಕಾರಣ ಮಾಡುತ್ತಿದೆ. ರೈತರ ಕಷ್ಟಕ್ಕೆ ಸ್ಪಂದಿಸದ ಕಟುಕ- ಕರುಣೆ ಇಲ್ಲದ ರಾಜ್ಯ ಸರಕಾರ ಇದು ಎಂದು ಆರೋಪಿಸಿದರು. ಮೇವು ಇಲ್ಲದೆ ದನಕರುಗಳನ್ನು ಕಟುಕರಿಗೆ ಮಾರಾಟ ಮಾಡುವ ಸ್ಥಿತಿಗೆ ರೈತರು ಬರುತ್ತಿರುವುದು ಬೇಸರದ ಸಂಗತಿ. ಈ ಸರಕಾರ ಒಂಥರ ಬೂಟಾಟಿಕೆ ಮಾಡುತ್ತಿದೆ. ಜಾಹೀರಾತುಗಳನ್ನು ಕೊಡುತ್ತಿದೆ. ಆದರೆ, ರೈತರ ಸಂಕಷ್ಟಕ್ಕೆ ಸ್ಪಂದಿಸುವ ಗಂಭೀರತೆ ಎಲ್ಲೂ ಕಾಣಿಸುತ್ತಿಲ್ಲ ಎಂದು ಆಕ್ಷೇಪ ವ್ಯಕ್ತಪಡಿಸಿದರು. ಕಳೆದ ಮುಂಗಾರು, ಹಿಂಗಾರು ಮಳೆ ಕೈಕೊಟ್ಟಿತ್ತು. ಇಂಥ ಸಂದರ್ಭದಲ್ಲಿ ಉರಿಯುವ ಮನೆಯಲ್ಲಿ ಗಳ…
ನ್ಯೂಯಾರ್ಕ್: ಇಲ್ಲಿನ ಲಾಂಗ್ ಐಲ್ಯಾಂಡ್ನಲ್ಲಿ ಶುಕ್ರವಾರ ನಡೆದ ಸಾಮೂಹಿಕ ಗುಂಡಿನ ದಾಳಿಯಲ್ಲಿ ಕನಿಷ್ಠ ಆರು ಮಂದಿ ಗಾಯಗೊಂಡಿದ್ದಾರೆ ಎಂದು ನಸ್ಸಾವು ಕೌಂಟಿ ಪೊಲೀಸರು ತಿಳಿಸಿದ್ದಾರೆ. ಶಂಕಿತನ ಬಗ್ಗೆ ಅಧಿಕಾರಿಗಳು ಯಾವುದೇ ಮಾಹಿತಿಯನ್ನು ಬಿಡುಗಡೆ ಮಾಡಿಲ್ಲ. ವೆಸ್ಟ್ಬರಿಯಲ್ಲಿ ನಡೆದ ಸಭೆಯಲ್ಲಿ ಈ ಘಟನೆ ನಡೆದಿದ್ದು, ಅವರು 18 ನೇ ಹುಟ್ಟುಹಬ್ಬದ ಪಾರ್ಟಿಯಲ್ಲಿ ಭಾಗವಹಿಸುತ್ತಿದ್ದರು ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ. ಎಲ್ಲಾ ಬಲಿಪಶುಗಳಿಗೆ ಮಾರಣಾಂತಿಕವಲ್ಲದ ಗಾಯಗಳಾಗಿವೆ ಎಂದು ಫಾಕ್ಸ್ ನ್ಯೂಸ್ ಅಂಗಸಂಸ್ಥೆ ತನ್ನ ವರದಿಯಲ್ಲಿ ತಿಳಿಸಿದೆ. ಮಾಧ್ಯಮ ಸಂಸ್ಥೆಯ ಪ್ರಕಾರ, ಪ್ರತ್ಯಕ್ಷದರ್ಶಿಯೊಬ್ಬರ ಪ್ರಕಾರ ಇದು ಮನೆಯ ಪಾರ್ಟಿಯಂತೆ ಇರಲಿಲ್ಲ,… ಅದೊಂದು ಅಕ್ಷರಶಃ ಹುಟ್ಟುಹಬ್ಬದ ಪಾರ್ಟಿಯಾಗಿತ್ತು. ಬಂದೂಕು ಗುಂಡುಗಳ ಶಬ್ದ ಕೇಳಿದಾಗ ಪಾರ್ಟಿ ಬಹುತೇಕ ಮುಗಿದಿದೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ. ಇದ್ದಕ್ಕಿದ್ದಂತೆ ನೀವು ಪಟಾಕಿ ಶಬ್ದವನ್ನು ಕೇಳಿದ್ದೀರಿ ಮತ್ತು ನಂತರ ಗುಂಡು ಹಾರಿಸುತ್ತೀರಿ ಮತ್ತು ಎಲ್ಲರೂ ಓಡಲು ಪ್ರಾರಂಭಿಸುತ್ತಾರೆ. ಎಲ್ಲರೂ ತಮ್ಮ ಸ್ನೇಹಿತರಿಗಾಗಿ ಕಿರುಚುತ್ತಿದ್ದರು.” ‘ಪಾರ್ಟಿಯ ಆಯೋಜಿಸಿದ್ದಂತ ವ್ಯಕ್ತಿ ಗಾಯಗೊಂಡಿದ್ದಾರೆ ಎಂಬುದಾಗಿ ಹೇಳಿದ್ದಾರೆ. https://kannadanewsnow.com/kannada/prajwal-revanna-arrives-in-bengaluru-from-dubai-likely-to-be-arrested-today/ https://kannadanewsnow.com/kannada/us-warns-uk-of-covid-19-leak-from-wuhan-lab/
ದಾವಣಗೆರೆ : ಹತ್ತತ್ತು ವರ್ಷ ಪ್ರಧಾನಿಯಾಗಿರುವ ಮೋದಿಯವರೇ ಕೇವಲ ಹತ್ತೇ ಹತ್ತು ಜನೋಪಯೋಗಿ ಕೆಲಸ ಮಾಡಿದ್ದರೆ ತೋರಿಸಿ ನಾನು ರಾಜಕೀಯ ನಿವೃತ್ತಿ ಪಡೆಯುತ್ತೇನೆ ಎಂದು ಮುಖ್ಯಮಂತ್ರಿ ನೇರ ಸವಾಲು ಹಾಕಿದರು. ದಾವಣಗೆರೆ ಲೋಕಸಭಾ ಅಭ್ಯರ್ಥಿ ಪ್ರಭಾ ಮಲ್ಲಿಕಾರ್ಜುನ್ ಅವರ ಪರವಾಗಿ ನಡೆದ ಪ್ರಜಾಧ್ವನಿ-2 ಜನಸಮಾವೇಶ ಉದ್ಘಾಟಿಸಿ ಮಾತನಾಡಿದರು. ಎರಡು ಬಾರಿ ಮುಖ್ಯಮಂತ್ರಿಯಾಗಿ ತಾವು ರಾಜ್ಯದಲ್ಲಿ ಜಾರಿಮಾಡಿದ ಅಭಿವೃದ್ಧಿ ಕಾರ್ಯಗಳು, ಯೋಜನೆಗಳು, ಭಾಗ್ಯಗಳ ಪಟ್ಟಿ ಮಾಡಿದ ಸಿ.ಎಂ ಸಿದ್ದರಾಮಯ್ಯ ಅವರು ನೀವು ಪ್ರಧಾನಿಯಾಗಿ ಮಾಡಿದ ಸಾಧನೆಗಳನ್ನು ತಾಕತ್ತಿದ್ದರೆ ಭಾರತೀಯರ ಮುಂದೆ ಹೇಳಿ ನೋಡೋಣ ಎಂದು ಸವಾಲು ಹಾಕಿದರು. ಮೋದಿಯವರ ಸಾಧನೆಗಳ ಪಟ್ಟಿ ಹಾಕಬೇಕು ಎಂದರೆ ಅವರು ಹೇಳಿದ ಸುಳ್ಳುಗಳ ಪಟ್ಟಿ ಮಾಡಬಹುದು, ಭಾರತೀಯರಿಗೆ ಹಾಕಿದ ಮೂರು ನಾಮಗಳ ಪಟ್ಟಿ ಮಾಡಬಹುದು, ಕನ್ನಡಿಗರ ಕೈಗೆ ಕೊಟ್ಟ ಚೊಂಬಿನ ಪಟ್ಟಿ ಮಾಡಬಹುದು ಎಂದು ವ್ಯಂಗ್ಯವಾಡಿದರು. ಶೋಕಿ ಮಾಡೋಕೆ, ಟಿಎ-ಡಿಎ ತಗೊಳೋಕೆ ಸಿದ್ದೇಶ್ವರ್ ಅವರನ್ನು ಪಾರ್ಲಿಮೆಂಟಿಗೆ ಕಳಿಸಿದ್ರಾ: ಸಿ.ಎಂ ಪ್ರಶ್ನೆ ರಾಜ್ಯದ ಪರವಾಗಿ, ದಾವಣಗೆರೆ ಜಿಲ್ಲೆಯ ಪರವಾಗಿ,…
ಬೆಂಗಳೂರು: ಲೈಂಗಿಕ ದೌರ್ಜನ್ಯ ಪ್ರಕರಣ ದಾಖಲಾಗುತ್ತಿದ್ದಂತೆ ಕರ್ನಾಟಕದಿಂದ ಸಂಸದ ಪ್ರಜ್ವಲ್ ರೇವಣ್ಣ ವಿದೇಶಕ್ಕೆ ಹಾರಿದ್ದರು. ನಿನ್ನೆ ಮಾಜಿ ಸಚಿವ ಹೆಚ್.ಡಿ ರೇವಣ್ಣ ಬಂಧನದ ಬೆನ್ನಲ್ಲೇ, ಇಂದು ದುಬೈನಿಂದ ಬೆಂಗಳೂರಿಗೆ ಸಂಸದ ಪ್ರಜ್ವಲ್ ರೇವಣ್ಣ ಆಗಮಿಸುತ್ತಿದ್ದಾರೆ ಎಂಬುದಾಗಿ ತಿಳಿದು ಬಂದಿದೆ. ಹೀಗಾಗಿ ಪ್ರಜ್ವಲ್ ರೇವಣ್ಣ ಅವರು ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಇಂದೇ ಎಸ್ಐಟಿ ಅಧಿಕಾರಿಗಳಿಂದ ಬಂಧಿಸೋ ಸಾಧ್ಯತೆ ಇದೆ. ನಿನ್ನೆಯಷ್ಟೇ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಯಲವು ನಿರೀಕ್ಷಣಾ ಜಾಮೀನನ್ನು ಸಂಸದ ಪ್ರಜ್ವಲ್ ರೇವಣ್ಣ ಹಾಗೂ ಮಾಜಿ ಸಚಿವ ಹೆಚ್ ಡಿ ರೇವಣ್ಣಗೆ ನೀಡೋದಕ್ಕೆ ನಿರಾಕರಿಸಿತ್ತು. ಈ ಹಿನ್ನಲೆಯಲ್ಲಿ ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡ ಅವರ ಮನೆಯಲ್ಲಿದ್ದಂತ ಹೆಚ್.ಡಿ ರೇವಣ್ಣ ಅವರನ್ನು ಎಸ್ಐಟಿ ಅಧಿಕಾರಿಗಳು ಬಂಧಿಸಿದ್ದರು. ಲೈಂಗಿಕ ದೌರ್ಜನ್ಯ, ಅಪಹರಣ, ಅತ್ಯಾಚಾರ ಪ್ರಕರಣದಲ್ಲಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಎಫ್ಐಆರ್ ದಾಖಲಾಗಿದೆ. ಈ ಹಿನ್ನಲೆಯಲ್ಲಿ ಅವರಿಗೆ ಜಾಮೀನು ಸಿಗೋದು ಡೌಟ್ ಎನ್ನಲಾಗುತ್ತಿದೆ. ಹೀಗಾಗಿ ಕುಟುಂಬದವರು ಜಾಮೀನು ಸಿಗೋದು ಇರಲಿ, ಬಿಡಲಿ, ಮೊದಲು ಎಸ್ಐಟಿ ಅಧಿಕಾರಿಗಳ…
ಗದಗ/ಬೆಳಗಾವಿ: ಮಹಿಳೆ ಅಪಹರಣ ಪ್ರಕರಣದಲ್ಲಿ ಮಾಜಿ ಸಚಿವ ಹೆಚ್.ಡಿ ರೇವಣ್ಣ ಅವರನ್ನು ಎಸ್ಐಟಿ ಅಧಿಕಾರಿಗಳು ಬಂಧಿಸಿದೆ. ಅವರಿಗೆ ಕೋರ್ಟ್ ನಿರೀಕ್ಷಣಾ ಜಾಮೀನು ನಿರಾಕರಿಸಿದ ಬೆನ್ನಲ್ಲೇ ಅವರನ್ನು ವಶಕ್ಕೆ ಪಡೆದಿತ್ತು. ಹಾಗಾದ್ರೇ ಈ ಬಗ್ಗೆ ಸಿಎಂ ಸಿದ್ಧರಾಮಯ್ಯ, ಡಿಸಿಎಂ ಡಿ.ಕೆ ಶಿವಕುಮಾರ್ ಏನು ಹೇಳಿದ್ರು ಅಂತ ಮುಂದೆ ಓದಿ. ಬೆಳಗಾವಿಯ ಚಿಕ್ಕೋಡಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಸಿಎಂ ಸಿದ್ಧರಾಮಯ್ಯ ಅವರು, ಹೆಚ್.ಡಿ ರೇವಣ್ಣ ಬಂಧನ ಪ್ರಕರಣದಲ್ಲಿ ನಾನು ಮಧ್ಯಪ್ರವೇಶಿಸುವುದಿಲ್ಲ. ಈ ಪ್ರಕರಣದಲ್ಲಿ ಕಾನೂನು ರೀತಿ ಕ್ರಮ ತೆಗೆದುಕೊಳ್ಳಬೇಕು ಎಂದರು. ಇದೇ ವೇಳೆಯಲ್ಲಿ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಸಂಸದ ಪ್ರಜ್ವಲ್ ರೇವಣ್ಣ ಅವರು ನೇರವಾಗಿ ಕೋರ್ಟ್ ಗೆ ಹಾಜರಾಗುತ್ತಾರೆ ಎಂಬ ಸಿಎಸ್ ಪುಟ್ಟರಾಜು ಮಾತಿಗೆ ಪ್ರತಿಕ್ರಿಯಿಸಿದಂತ ಅವರು, ಸಿಎಸ್ ಪುಟ್ಟರಾಜು ಏನು ಲಾಯಾರಾ ಎಂದು ಸಿಎಂ ಸಿದ್ಧರಾಮಯ್ಯ ಪ್ರಶ್ನಿಸಿದರು. ಇನ್ನೂ ಡಿಸಿಎಂ ಡಿ.ಕೆ ಶಿವಕುಮಾರ್ ಅವರು ಗದಗದಲ್ಲಿ ಮಾಜಿ ಸಚಿವ ಹೆಚ್.ಡಿ ರೇವಣ್ಣ ಬಂಧನದ ಬಗ್ಗೆ ಪ್ರತಿಕ್ರಿಯಿಸಿ, ನ್ಯಾಯಾಲಯ ಉಂಟು, ಕಾನೂನು ಉಂಟು. ನಾವು ಯಾವುದಕ್ಕೂ…
ಗದಗ: ಬಸವರಾಜ ಬೊಮ್ಮಾಯಿ ಅವರೇ ನೀವು ರಿಜೆಕ್ಟ್ ಪೀಸ್. ಲೋಕಸಭಾ ಚುನಾವಣೆಗೆ ನಿಂತಿರುವ ನಿಮಗೆ ಮೂರು ಪ್ರಶ್ನೆಗಳನ್ನು ಕೇಳುತ್ತೇನೆ. ನಿಮ್ಮ ನಾಯಕತ್ವದಲ್ಲಿ ವಿಧಾನಸಭೆ ಚುನಾವಣೆ ಎದುರಿಸಲಾಯಿತು. ನಿಮ್ಮ ಅಕ್ಕಪಕ್ಕದ ಕ್ಷೇತ್ರದ ಅಭ್ಯರ್ಥಿಗಳೇ ಗೆಲ್ಲಲಿಲ್ಲ. ರೈತರ ಆದಾಯ ಜಾಸ್ತಿ ಮಾಡುತ್ತೇವೆ, 15 ಲಕ್ಷ ತರುತ್ತೇವೆ ಎಂದರು. ಕೊಟ್ಟ ಮಾತು ಉಳಿಸಿಕೊಂಡಿದ್ದಾರೆಯೇ ಎಂದು ಡಿಸಿಎಂ ಡಿ.ಕೆ ಶಿವಕುಮಾರ್ ಹೇಳಿದರು. ಗದಗದಲ್ಲಿ ನಡೆದ ಚುನಾವಣಾ ಪ್ರಚಾರ ಸಭೆಯಲ್ಲಿ ಮಾತನಾಡಿದಂತ ಅವರು, ಶಿವಕುಮಾರ್ ಉದಾಸಿ ಅವರ ಮೇಲೆ ಒಂದೇ ಒಂದು ಆರೋಪವಿಲ್ಲ. ಆದರೂ ಅವರಿಗೆ ಏಕೆ ಬಿಜೆಪಿ ಟಿಕೆಟ್ ನೀಡಲಿಲ್ಲ. ಏಕೆಂದರೆ ಬಿಜೆಪಿ ಒಂದೇ ಒಂದು ಕೆಲಸ ಮಾಡಿಲ್ಲ. ನುಡಿದಂತೆ ನಡೆದಿಲ್ಲ ಅದಕ್ಕೆ ಉದಾಸಿ ಅವರೇ ಕೈ ಮುಗಿದು ನನಗೆ ಟಿಕೆಟ್ ಬೇಡ ಎಂದರು. ಬೊಮ್ಮಾಯಿ ಅವರೇ ಹಾವೇರಿ ಜಿಲ್ಲೆಯಲ್ಲಿ ಐದು ಸ್ಥಾನಗಳನ್ನು ಗೆದ್ದಿದ್ದೇವೆ. ರಾಜ್ಯದಲ್ಲಿ 136 ಸ್ಥಾನಗಳನ್ನು ಗೆದ್ದಿದ್ದೇವೆ. ಈ ದಾನ ಧರ್ಮ ಮಾಡುವ ಕೈ ಅಧಿಕಾರಕ್ಕೆ ಬಂದ ಒಂದೇ ಗಂಟೆಯಲ್ಲಿ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದಿದ್ದೇವೆ.…
ಚಿಕ್ಕೋಡಿ: ಮಾಜಿ ಸಚಿವ ಹೆಚ್.ಡಿ ರೇವಣ್ಣ ಅವರ ಪ್ರಕರಣದಲ್ಲಿ ನಾವು ಮಧ್ಯಪ್ರವೇಶ ಮಾಡುವುದಿಲ್ಲ ಎಂಬುದಾಗಿ ಮುಖ್ಯಮಂತ್ರಿ ಸಿದ್ಧರಾಮಯ್ಯ ತಿಳಿಸಿದ್ದಾರೆ. ಇಂದು ಎಸ್ಐಟಿ ಅಧಿಕಾರಿಗಳಿಂದ ಕಿಡ್ನಾಪ್ ಪ್ರಕರಣದಲ್ಲಿ ಮಾಜಿ ಸಚಿವ ಹೆಚ್.ಡಿ ರೇವಣ್ಣ ಅವರನ್ನು ಬಂಧಿಸಲಾಗಿತ್ತು. ಈ ಬಗ್ಗೆ ಹೆಚ್.ಡಿ ರೇವಣ್ಣ ಬಂಧನದ ಬಳಿಕ ಮೊದಲ ಪ್ರತಿಕ್ರಿಯೆ ನೀಡಿರುವಂತ ಸಿಎಂ ಸಿದ್ಧರಾಮಯ್ಯ ಅವರು, ಈ ಸಂಬಂಧ ನಾನು ಪೊಲೀಸರ ಜೊತೆ ಮಾತನಾಡುತ್ತೇನೆ. ನಾವು ಇದರಲ್ಲಿ ಮದ್ಯಪ್ರವೇಶ ಮಾಡಲ್ಲ ಎಂದರು. ಹೆಚ್.ಡಿ ರೇವಣ್ಣ ಅಪಹರಣ ಪ್ರಕರಣವೊಂದರಲ್ಲಿ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ನಿರೀಕ್ಷಣಾ ಜಾಮೀನಿಗೆ ಅರ್ಜಿ ಹಾಕಿದ್ದರು. ಆದ್ರೇ ಅವರ ಅರ್ಜಿಯನ್ನು ವಜಾ ಮಾಡಲಾಗಿದೆ. ಅವರಿಗೆ ಜಾಮೀನು ಸಿಕ್ಕಿಲ್ಲ. ಹೀಗಾಗಿ ಅವರನ್ನು ಕಸ್ಟಡಿಗೆ ತೆಗೆದುಕೊಂಡಿರಬೇಕು ಅನಿಸುತ್ತೆ ಎಂದರು. https://kannadanewsnow.com/kannada/former-minister-hd-revanna-suspended-from-jds/ https://kannadanewsnow.com/kannada/bigg-news-%e0%b2%a8%e0%b2%be%e0%b2%b3%e0%b3%86-%e0%b2%aa%e0%b3%8d%e0%b2%b0%e0%b2%9c%e0%b3%8d%e0%b2%b5%e0%b2%b2%e0%b3%8d-%e0%b2%b0%e0%b3%87%e0%b2%b5%e0%b2%a3%e0%b3%8d%e0%b2%a3-%e0%b2%ac/
ಬೆಂಗಳೂರು: ಸಂಸದ ಪ್ರಜ್ವಲ್ ರೇವಣ್ಣ ಅವರು ಲೈಂಗಿಕ ದೌರ್ಜನ್ಯ ಆರೋಪದಲ್ಲಿ ಜೆಡಿಎಸ್ ಪಕ್ಷದಿಂದ ಅಮಾತನತುಗೊಳಿಸಲಾಗಿತ್ತು. ಈಗ ಸಂತ್ರಸ್ತೆಯನ್ನು ಕಿಡ್ನಾಪ್ ಮಾಡಿದಂತ ಪ್ರಕರಣದಲ್ಲಿ ಮಾಜಿ ಸಚಿವ ಹೆಚ್.ಡಿ ರೇವಣ್ಣ ಅವರನ್ನು ಎಸ್ಐಟಿ ಅಧಿಕಾರಿಗಳು ಬಂಧಿಸಿದ್ದಾರೆ. ಈ ಹಿನ್ನಲೆಯಲ್ಲಿ ಅವರನ್ನು ಜೆಡಿಎಸ್ ಪಕ್ಷದಿಂದ ಅಮಾನತುಗೊಳಿಸೋ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ಜೆಡಿಎಸ್ ಶಾಸಕ ಹೆಚ್.ಡಿ ರೇವಣ್ಣ ಅವರನ್ನು ಕಿಡ್ನಾಪ್ ಪ್ರಕರಣದಲ್ಲಿ ಎಸ್ಐಟಿ ಅಧಿಕಾರಿಗಳು ಬಂದಿಸಿದ್ದಾರೆ. ಬೆಂಗಳೂರಿನ ಜನಪ್ರತಿನಿಧಿಗಳ ಕೋರ್ಟ್ ನಿರೀಕ್ಷಣಾ ಜಾಮೀನು ನಿರಾಕರಿಸಿದ ನಂತ್ರ ಎಸ್ಐಟಿ ಅಧಿಕಾರಿಗಳು ಬಂಧಿಸಿದ್ದರು. ಈ ಬೆನ್ನಲ್ಲೇ ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ನೇತೃತ್ವದಲ್ಲಿ ಜೆಡಿಎಸ್ ಕೋರ್ ಕಮಿಟಿ ಸಭೆ ನಡೆಯುತ್ತಿದೆ. ಸಿಎಸ್ ಪುಟ್ಟರಾಜು, ಟಿ.ಎ ಶರವಣ ಸೇರಿದಂತೆ ವಿವಿಧ ಜೆಡಿಎಸ್ ಮುಖಂಡರು ಭಾಗಿಯಾಗಿದ್ದಾರೆ. ಜೆಡಿಎಸ್ ಶಾಸಕ ಹೆಚ್.ಡಿ ರೇವಣ್ಣ ಅವರ ಬಂಧನದ ಬಗ್ಗೆ ಕೋರ್ ಕಮಿಟಿ ಸಭೆಯಲ್ಲಿ ಬಿಸಿ ಬಿಸಿ ಚರ್ಚೆ ನಡೆಯುತ್ತಿದೆ. ಮುಂದಿನ ನಡೆಯ ಬಗ್ಗೆಯೂ ಚರ್ಚೆ ನಡೆಸಲಾಗುತ್ತಿದ್ದು, ಈ ಜೆಡಿಎಸ್ ಕೋರ್…
ಬೆಂಗಳೂರು: ಪ್ರಜ್ವಲ್ ರೇವಣ್ಣ ಇಷ್ಟೆಲ್ಲಾ ಅತ್ಯಾಚಾರಗಳನ್ನು ನಡೆಸುತ್ತಿದ್ದರೂ ತಂದೆ ಎಚ್.ಡಿ. ರೇವಣ್ಣ ಅವರೇನು ಮಾಡುತ್ತಿದ್ದರು? ಇಷ್ಟೆಲ್ಲಾ ಆಗುತ್ತಿದ್ದರೂ ನೋಡಿಕೊಂಡು ಸುಮ್ಮನಿದ್ದರೇ? ಅಥವಾ ಅಪ್ಪ ಮಗ ಇಬ್ಬರೂ ಮಹಿಳೆಯರನ್ನು ದುರ್ಬಳಕೆ ಮಾಡಿಕೊಳ್ಳುತ್ತಿದ್ದರೇ? ಮಾಜಿ ಪ್ರಧಾನಿ ದೇವೇಗೌಡರ ಕುಟುಂಬಕ್ಕೆ ಎಲ್ಲಾ ಗೊತ್ತಿದ್ದರೂ ಸುಮ್ಮನಿದ್ದರೇ? ಪ್ರಜ್ವಲ್ ಕೃತ್ಯಗಳು ಬಿಜೆಪಿಗೆ ಗೊತ್ತಿದ್ದೂ ಮೈತ್ರಿ ಅಭ್ಯರ್ಥಿಯಾಗಿ ಹಾಸನದಿಂದ ಕಣಕ್ಕಿಳಿಸಿತೆ? ಬೇಲಿ ಎದ್ದು ಹೊಲ ಮೆಯ್ದರೆ ರಾಷ್ಟ್ರದ ಹೆಣ್ಣುಮಕ್ಕಳ ಪರಿಸ್ಥಿತಿಯೇನು ಎಂದು ಆಮ್ ಆದ್ಮಿ ಪಾರ್ಟಿ ರಾಜ್ಯ ಮಹಿಳಾ ಘಟಕದ ಅಧ್ಯಕ್ಷೆ ವೀಣಾ ಸೆರಾವು ಆಕ್ರೋಶ ವ್ಯಕ್ತಪಡಿಸಿದರು. ನಗರದ ಫ್ರೀಡಂ ಪಾರ್ಕ್ನಲ್ಲಿ ಮಹಿಳಾ ಸಂಘಟನೆಗಳ ಒಕ್ಕೂಟ ಹಾಗೂ ಆಮ್ ಆದ್ಮಿ ಪಾರ್ಟಿ ಸಹಯೋಗದೊಂದಿಗೆ ಮೇಣದ ಬತ್ತಿ ಹಚ್ಚುವ ಮೂಲಕ ಹಾಸನದ ಸಂಸದ ಪ್ರಜ್ವಲ್ ಪ್ರಕರಣದಲ್ಲಿ ನೊಂದಿರುವ ಸಾವಿರಾರು ಹೆಣ್ಣುಮಕ್ಕಳಿಗೆ ರಕ್ಷಣೆ, ಧೈರ್ಯ ಹಾಗೂ ಸಾಂತ್ವನ ನೀಡಲಾಯಿತು. ಈ ಸಂದರ್ಭ ಸುದ್ದಿಗಾರರ ಜೊತೆ ಮಾತನಾಡಿದ ವೀಣಾ ಸೆರಾವು, ನಾವಿಲ್ಲಿ ಹೆಣ್ಣು ಮಕ್ಕಳಿಗೆ ಬೆಂಬಲ ಕೊಡಲು ಕ್ಯಾಂಡಲ್ ಹಚ್ಚಿದ್ದೇವೆ, ನೀವೇನು ಮಾಡಿದ್ದೀರಾ? ಎಂದು…