Author: kannadanewsnow09

ಬೆಂಗಳೂರು: ನಗರದ ಕುಂದಲಹಳ್ಳಿ ಬಳಿಯ ರಾಮೇಶ್ವರಂ ಕೆಫೆಯಲ್ಲಿ ನಡೆದಿದ್ದಂತ ಬಾಂಬ್ ಸ್ಪೋಟ ಪ್ರಕರಣಕ್ಕೆ ಈಗ ಬಿಗ್ ಟ್ವಿಸ್ಟ್ ಸಿಕ್ಕಿದೆ. ಈ ಸ್ಪೋಟದ ಹಿಂದೆ ಐಸಿಸ್ ಉಗ್ರರ ಕೈವಾಡವಿರುವಂತ ಶಂಕೆಯು ವ್ಯಕ್ತವಾಗಿದೆ. ಇದಕ್ಕೆ ಪುಷ್ಠಿ ಎನ್ನುವಂತೆ ಐಸಿಸ್ ಉಗ್ರರ ಜೊತೆಗೆ ನಂಟಿದ್ದಂತ ಮಿನಾಜ್ ಸುಲೇಮಾನ್ ಎಂಬಾತನನ್ನು ಎನ್ಐಎ ಅಧಿಕಾರಿಗಳು ವಶಕ್ಕೆ ಪಡೆದು ತೀವ್ರ ವಿಚಾರಣೆ ನಡೆಸುತ್ತಿದ್ದಾರೆ. ಉಗ್ರ ಕೃತ್ಯದ ಸಂಚಿನ ಮೇಲೆ ಜೈಲಿನಲ್ಲಿದ್ದ ಮಿನಾಜ್ ಸೇರಿ ನಾಲ್ವರನ್ನು ಎನ್ಐಎ ಬಂಧಿಸಿದೆ. ಬೆಂಗಳೂರು, ಮುಂಬೈ, ದೆಹಲಿಯಲ್ಲಿದ್ದಂತ ನಾಲ್ವರು ಶಂಕಿತರನ್ನು ಎನ್ಐಎ ವಶಕ್ಕೆ ಪಡೆದು, ಅಜ್ಞಾತ ಸ್ಥಳದಲ್ಲಿ ತೀವ್ರವಾಗಿ ವಿಚಾರಣೆ ನಡೆಸುತ್ತಿದ್ದಾರೆ. ರಾಮೇಶ್ವರಂ ‘ಕೆಫೆ ಬಾಂಬ್ ಸ್ಪೋಟ’ ಪ್ರಕರಣ: ಶಂಕಿತ ನಾಲ್ವರನ್ನು ವಶಕ್ಕೆ ಪಡೆದು ‘NIA ವಿಚಾರಣೆ’ ಬೆಂಗಳೂರಿನ ಕುಂದಲಹಳ್ಳಿಯ ರಾಮೇಶ್ವರಂ ಕೆಫೆಯಲ್ಲಿ ಉಂಟಾಗಿದ್ದಂತ ಬಾಂಬ್ ಸ್ಪೋಟ ಪ್ರಕರಣ ಸಂಬಂಧ ಮಹತ್ವದ ಮೈಲುಗಲ್ಲನ್ನು ತನಿಖಾ ತಂಡ ಎನ್ಐಎ ಸಾಧಿಸಿದೆ. ಈ ಪ್ರಕರಣ ಸಂಬಂಧ ಶಂಕಿತ ನಾಲ್ವರನ್ನು ವಶಕ್ಕೆ ಪಡೆದು ಅಜ್ಞಾತ ಸ್ಥಳದಲ್ಲಿ ವಿಚಾರಣೆ ನಡೆಸುತ್ತಿರೋದಾಗಿ ತಿಳಿದು ಬಂದಿದೆ.…

Read More

ಬೆಂಗಳೂರು: ನಗರದಲ್ಲಿ ಹನಿ ನೀರಿಗೂ ಹಾಹಾಕಾರವೆದ್ದಿದೆ. ಜಲಕ್ಷಾಮವೇ ಸಿಲಿಕಾನ್ ಸಿಟಿಯಲ್ಲಿ ಉಂಟಾಗಿದೆ. ಈ ಕಾರಣದಿಂದಾಗಿ ಬೇಕಾಬಿಟ್ಟಿ ನೀರು ವ್ಯರ್ಥ ಮಾಡೋದಕ್ಕೆ ರಾಜ್ಯ ಸರ್ಕಾರ ಬ್ರೇಕ್ ಹಾಕಿದೆ. ವಾಹನ ತೊಳೆಯುವುದು ಸೇರಿದಂತೆ ಅನಗತ್ಯವಾಗಿ ನೀರನ್ನು ಬಳಕೆ ಮಾಡಿದ್ರೇ 5000 ದಂಡ ವಿಧಿಸುವುದಾಗಿ ಎಚ್ಚರಿಕೆ ನೀಡಿದೆ. ಈ ಸಂಬಂಧ ಬೆಂಗಳೂರು ಜಲ ಮಂಡಳಿಯು ಆದೇಶ ಹೊರಡಿಸಿದ್ದು, ಬೆಂಗಳೂರು ಮಹಾನಗರದಲ್ಲಿ ಖಾಯಂ ವಾಸಿಗಳು ಹಾಗೂ ಬಂದು ಹೋಗುವವರನ್ನು ಸೇರಿಸಿ ಸುಮಾರು 1 ಕೋಟಿ 40 ಲಕ್ಷ ಜನಸಂಖ್ಯೆನ್ನು ಗುರುತಿಸಲಾಗಿದೆ. ಎಲ್ಲರಿಗೂ ಕುಡಿಯುವ ನೀರನ್ನು ಪೂರೈಕೆ ಮಾಡುವುದು ಅವಶ್ಯವಾಗಿರುತ್ತದೆ. ಪ್ರಸ್ತುತ ನಗರದಲ್ಲಿ ಪ್ರತಿದಿನ ಉಷ್ಣಾಂಶ ಏರುತ್ತಿದ್ದು, ಇತ್ತೀಚಿನ ದಿನಗಳಲ್ಲಿ ಮಳೆಯ ಕೊರತೆಯಿಂದ ಅಂತರ್ಜಲ ಕುಸಿದಿದೆ ಎಂದು ಹೇಳಿದೆ. ಬೆಂಗಳೂರು ನಗರದಲ್ಲಿ ನೀರನ್ನು ಪೋಲು ಮಾಡುವುದನ್ನು ತಡೆಗಟ್ಟಲು ಅಗತ್ಯವೆಂದು ಮನಗಂಡು ಕುಡಿಯುವ ನೀರನ್ನು ಸಾರ್ವಜನಿಕರು ಮಿತವಾಗಿ ಬಳಸುವಂತೆ ಖಡಕ್ ಸೂಚನೆ ನೀಡಿದೆ. ಬೆಂಗಳೂರು ನಗರದ ಜನರು ಬೇಕಾಬಿಟ್ಟಿಯಾಗಿ ನೀರು ವ್ಯರ್ಥ ಮಾಡಬಾರದು. ವಾಹನಗಳ ಸ್ವಚ್ಛತೆಗೆ, ಕೈತೋಟಕ್ಕೆ, ಕಟ್ಟಡ ನಿರ್ಮಾಣ, ರಸ್ತೆ…

Read More

ಬೆಂಗಳೂರು: ಯಾರಿಗೆ ಜಾತಿ ಗೊತ್ತಿಲ್ವೋ ಅವರೇ ಜಾತ್ಯಾತೀತರು ಎಂಬುದಾಗಿ ಹೇಳುವ ಮೂಲಕ, ಸಿಎಂ ಸಿದ್ಧರಾಮಯ್ಯ ವಿರುದ್ಧ ಸಂಸದ ಅನಂತ್ ಕುಮಾರ್ ಹೆಗಡೆ ವಾಗ್ಧಾಳಿ ನಡೆಸಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು ಅಪ್ಪ ಯಾರು ಗೊತ್ತಿಲ್ವೋ ಅವರ ಜಾತಿ ಗೊತ್ತಿರಲ್ಲ. ಯಾರಿಗೆ ಜಾತಿ ಗೊತ್ತಿಲ್ಲವೋ ಅವರೇ ಜಾತ್ಯಾತೀತರು ಎಂಬುದಾಗಿ ಸಿದ್ದರಾಮಯ್ಯ ವಿರುದ್ಧ ಬಿಜೆಪಿ ಸಂಸದ ಅನಂತ್ ಕುಮಾರ್ ಹೆಗಡೆ ವಾಗ್ಧಾಳಿ ನಡೆಸಿದರು. ಸಿದ್ದರಾಮುಲ್ಲಾ ಸರ್ಕಾರಕ್ಕೆ ನಿಯತ್ತೇ ಇಲ್ಲ. ಕಾಂಗ್ರೆಸ್ ಜನರನ್ನು ಹುಚ್ಚರನ್ನಾಗಿ ಮಾಡುತ್ತಿದೆ. ಜಾತ್ಯಾತೀತ ಭೂತ ತಲೆಗೆ ಬಿಟ್ಟದ್ದು ಇಂದಿರಾಗಾಂಧಿ. ಕಾಂಗ್ರೆಸ್ ನಿಂದ ಸಂವಿಧಾನದ ಮೇಲೆ ನಿರಂತರ ಅತ್ಯಾಚಾರವಾಗುತ್ತಿದೆ. ಸಂವಿಧಾನದ ಮೂಲಕ ಧರ್ಮ ಒಡೆದರು ಎಂಬುದಾಗಿ ಕಾಂಗ್ರೆಸ್ ವಿರುದ್ಧ ಸಂಸದ ಅನಂತ್ ಕುಮಾರ್ ಹೆಗಡೆ ಕಿಡಿಕಾರಿದರು. https://kannadanewsnow.com/kannada/rameswaram-cafe-blast-case-nia-takes-four-suspects-into-custody/ https://kannadanewsnow.com/kannada/electoral-bond-contempt-of-court-case-filed-against-sbi-for-violating-sc-order/

Read More

ಬೆಂಗಳೂರು: ನಗರದ ಕುಂದಲಹಳ್ಳಿಯ ರಾಮೇಶ್ವರಂ ಕೆಫೆಯಲ್ಲಿ ಉಂಟಾಗಿದ್ದಂತ ಬಾಂಬ್ ಸ್ಪೋಟ ಪ್ರಕರಣ ಸಂಬಂಧ ಮಹತ್ವದ ಮೈಲುಗಲ್ಲನ್ನು ತನಿಖಾ ತಂಡ ಎನ್ಐಎ ಸಾಧಿಸಿದೆ. ಈ ಪ್ರಕರಣ ಸಂಬಂಧ ಶಂಕಿತ ನಾಲ್ವರನ್ನು ವಶಕ್ಕೆ ಪಡೆದು ಅಜ್ಞಾತ ಸ್ಥಳದಲ್ಲಿ ವಿಚಾರಣೆ ನಡೆಸುತ್ತಿರೋದಾಗಿ ತಿಳಿದು ಬಂದಿದೆ. ಹೌದು ಬೆಂಗಳೂರಿನ ರಾಮೇಶ್ವರಂ ಕೆಫೆ ಬಾಂಬ್ ಸ್ಪೋಟ ಪ್ರಕರಣ ಸಂಬಂಧ ನಾಲ್ವರನ್ನು ಎನ್ಐಎ ಅಧಿಕಾರಿಗಳು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಬೆಂಗಳೂರು, ಮುಂಬೈ, ದೆಹಲಿಯಲ್ಲಿ ನಾಲ್ವರನ್ನು ವಶಕ್ಕೆ ಎನ್ಐಎ ಅಧಿಕಾರಿಗಳು ಪಡೆದಿದ್ದಾರೆ. ಮಿನಾಜ್ ಸೇರಿ ನಾಲ್ವರು ಶಂಕಿತರನ್ನು ವಶಕ್ಕೆ ಪಡೆದು ಅಜ್ಞಾತ ಸ್ಥಳದಲ್ಲಿ ವಿಚಾರಣೆ ನಡೆಸುತ್ತಿದ್ದಾರೆ. ಬಂಧಿತರನ್ನು ಬಳ್ಳಾರಿ ಸೈಯದ್ ಸಮೀರ್, ಮುಂಬೈನ ಅನಾಸ್ ಇಕ್ಬಾಲ್ ಹಾಗೂ ದೆಹಲಿಯ ಶ್ಯಾನ್ ರೆಹಮಾನ್ @ ಹುಸೇನ್ ಎಂಬುದಾಗಿ ತಿಳಿದು ಬಂದಿದೆ. ಅವರನ್ನು ತೀವ್ರ ವಿಚಾರಣೆಗೆ ಎನ್ಐಎ ಒಳಪಡಿಸಿದೆ. ಅಂದಹಾಗೇ ಈ ಮೂವರು ಬಳ್ಳಾರಿಯ ಮಾಡ್ಯೂಲ್ ಕೇಸ್ ನ ನಾಲ್ವರು ಆರೋಪಿಗಳಾಗಿದ್ದಾರೆ. 2023 ಡಿಸೆಂಬರ್ 14ರಂದು ದಾಖಲಾಗಿದ್ದ ಪ್ರಕರಣದಲ್ಲಿ ಇವರು ಆರೋಪಿಗಳಾಗಿದ್ದಾರೆ. https://kannadanewsnow.com/kannada/%e0%b2%ac%e0%b3%86%e0%b2%82%e0%b2%97%e0%b2%b3%e0%b3%82%e0%b2%b0%e0%b2%b2%e0%b3%8d%e0%b2%b2%e0%b2%bf-%e0%b2%a8%e0%b3%80%e0%b2%b0%e0%b2%bf%e0%b2%97%e0%b2%be%e0%b2%97%e0%b2%bf-%e0%b2%b9%e0%b2%be%e0%b2%b9/ https://kannadanewsnow.com/kannada/ration-card-is-for-essential-items-not-address-proof-hc/

Read More

ನವದೆಹಲಿ: 2024 ರ ಲೋಕಸಭಾ ಚುನಾವಣೆಗೆ ಸುಮಾರು ಹತ್ತು ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಂದ ಕಾಂಗ್ರೆಸ್ ಪಕ್ಷವು ತನ್ನ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಶೀಘ್ರದಲ್ಲೇ ಬಿಡುಗಡೆ ಮಾಡಲಿದೆ. ಕರ್ನಾಟಕ 11 ಕ್ಷೇತ್ರಗಳಿಗೆ ಕಾಂಗ್ರೆಸ್ ಅಭ್ಯರ್ಥಿಗಳನ್ನು ಫೈನಲ್ ಮಾಡಿದ್ದು, ಮೊದಲ ಪಟ್ಟಿಯಲ್ಲೇ ಹೆಸರು ಘೋಷಿಸೋ ಸಾಧ್ಯತೆ ಇದೆ. ರಾಷ್ಟ್ರ ರಾಜಧಾನಿಯಲ್ಲಿ ಗುರುವಾರ ನಡೆದ ಪಕ್ಷದ ಮೊದಲ ಸಭೆ ನಡೆಸಿದ ಪಕ್ಷದ ಕೇಂದ್ರ ಚುನಾವಣಾ ಸಮಿತಿ (ಸಿಇಸಿ) ಕೇರಳದ ವಯನಾಡ್ ನಿಂದ ರಾಹುಲ್ ಗಾಂಧಿ ಅವರ ಹೆಸರನ್ನು ತೆರವುಗೊಳಿಸಿದ ಹೆಸರುಗಳು ಈ ಪಟ್ಟಿಯಲ್ಲಿ ಸೇರುವ ಸಾಧ್ಯತೆಯಿದೆ. ಪಕ್ಷದ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಅಧ್ಯಕ್ಷತೆಯಲ್ಲಿ ನಡೆದ ಸಿಇಸಿ ಸಭೆಯಲ್ಲಿ ಸೋನಿಯಾ ಗಾಂಧಿ ಸೇರಿದಂತೆ ಹಿರಿಯ ನಾಯಕರು ಭಾಗವಹಿಸಿದ್ದರು. ರಾಹುಲ್ ಗಾಂಧಿ ಗುಜರಾತ್ನಿಂದ ವರ್ಚುವಲ್ ಮೂಲಕ ಸಭೆಯಲ್ಲಿ ಭಾಗವಹಿಸಿದ್ದರು. ಸೋಮವಾರ ಮತ್ತೆ ಸಭೆ ಸೇರಲಿರುವ ಸಿಇಸಿ ಕರ್ನಾಟಕದ 11 ಅಭ್ಯರ್ಥಿಗಳ ಹೆಸರನ್ನು ಸಹ ಅನುಮೋದಿಸಿದೆ. “ನಿನ್ನೆಯ ಸಭೆಯಲ್ಲಿ ಚರ್ಚಿಸಲಾದ ರಾಜ್ಯಗಳ ಅಭ್ಯರ್ಥಿಗಳ ಘೋಷಣೆ ಇಂದು ಅಥವಾ…

Read More

ಕೇರಳ: ಭಾರತದಲ್ಲೇ ಮೊದಲ ಸರ್ಕಾರಿ ಸ್ವಾಮ್ಯದ ಒಟಿಟಿ ಪ್ಲಾಟ್ ಫಾರ್ಮ್ ಸಿಸ್ಪೇಸ್ ಗೆ ಕೇರಳ ಸರ್ಕಾರ ಗುರುವಾರ ಚಾಲನೆ ನೀಡಿದೆ. ಇದು ಮಲಯಾಳಂ ಚಿತ್ರರಂಗದ ಮುಂದಿನ ಪ್ರಯಾಣದಲ್ಲಿ ನಿರ್ಣಾಯಕ ಹೆಜ್ಜೆ ಆಗಲಿದೆ ಅಂತ ಸಿಎಂ ಪಿಣರಾಯಿ ವಿಜಯನ್ ಬಣ್ಣಿಸಿದ್ದಾರೆ. ಮುಖ್ಯವಾಹನಿಯ ಚಲನಚಿತ್ರೋದ್ಯಮಕ್ಕೆ ಹಾನಿಯಾಗದಂತೆ ಕಲಾತ್ಮಕ ಮತ್ತು ಸಾಂಸ್ಕೃತಿಕ ಮೌಲ್ಯವುಳ್ಳ ಚಲನಚಿತ್ರಗಳಿಗೆ ಪ್ರಾಮುಖ್ಯತೆ ನೀಡುವ ಕ್ರಮ ಇದಾಗಿದೆ. ಲಾಭ ಗಳಿಸುವುದು ಖಾಸಗಿ ವಲಯದ ಒಟಿಟಿ ಪ್ಲಾಟ್ ಫಾರ್ಮ್ ಗಳ ಪ್ರಧಾನ ಉದ್ದೇಶವಾದರೇ, ಸಿಸ್ಪೇಸ್ ಗುಣಮಟ್ಟದ ಚಲನಚಿತ್ರಗಳನ್ನು ಮನೆಗೆ ತರುವ ಮಾಧ್ಯಮವಾಗಿ ಕೆಲಸ ಮಾಡಲಿದೆ ಎಂದು ಸಿಎಂ ಪಿಣರಾಯಿ ವಿಜಯನ್ ಹೇಳಿದ್ದಾರೆ. ಅಂದಹಾಗೇ ಕೇರಳ ಸರ್ಕಾರದಿಂದ ಭಾರತದಲ್ಲೇ ಮೊದಲು ಎನ್ನುವಂತೆ ಆರಂಭಿಸಿರುವಂತ ಸರ್ಕಾರಿ ಸ್ವಾಮ್ಯದ ಒಟಿಟಿ ಪ್ಲಾಟ್ ಫಾರ್ಮ್ ಅನ್ನು ಕೇರಳ ರಾಜ್ಯ ಚಲನಚಿತ್ರ ಅಭಿವೃದ್ಧಿ ನಿಗಮವು ನಿರ್ವಹಣೆಯನ್ನು ಮಾಡಲಿದೆ. https://kannadanewsnow.com/kannada/%e0%b2%ac%e0%b3%86%e0%b2%82%e0%b2%97%e0%b2%b3%e0%b3%82%e0%b2%b0%e0%b2%b2%e0%b3%8d%e0%b2%b2%e0%b2%bf-%e0%b2%a8%e0%b3%80%e0%b2%b0%e0%b2%bf%e0%b2%97%e0%b2%be%e0%b2%97%e0%b2%bf-%e0%b2%b9%e0%b2%be%e0%b2%b9/ https://kannadanewsnow.com/kannada/electoral-bond-contempt-of-court-case-filed-against-sbi-for-violating-sc-order/

Read More

ರಾತ್ರಿಯಿಡೀ ನಿದ್ದೆ ಮಾಡದೆ ಶಿವನನ್ನು ಪೂಜಿಸುವ ಅದ್ಭುತ ದಿನ ಈ ಮಹಾ ಶಿವರಾತ್ರಿ. ಈ ವರ್ಷ ಮಹಾ ಶಿವರಾತ್ರಿ 8-3-2024 ಶುಕ್ರವಾರ ಬರಲಿದೆ. ಈ ಶಿವರಾತ್ರಿ ಪ್ರತಿ ವರ್ಷ ಬರುತ್ತದೆ. ಆದರೆ ಈ ಬಾರಿಯ ಶಿವರಾತ್ರಿ ಬೇರೆ ವರ್ಷಗಳಂತಿಲ್ಲ. ಇದು ಅಪರೂಪದ ಶಿವರಾತ್ರಿ ಎಂದು ಹೇಳಲಾಗುತ್ತದೆ. ಇಂತಹ ಶಿವರಾತ್ರಿಯನ್ನು 300 ವರ್ಷಗಳ ಹಿಂದಿನಿಂದಲೂ ಆಚರಿಸಿಕೊಂಡು ಬರುತ್ತಿದ್ದೇವೆ. 300 ವರ್ಷಗಳ ನಂತರ ಅದೇ ಶಕ್ತಿಶಾಲಿ ಶಿವರಾತ್ರಿ ನಾಳೆ ಬರಲಿದೆ. ನಾಳೆ ಶಿವರಾತ್ರಿಯ ವಿಶೇಷತೆ ಏನು? ಈ ಶಿವರಾತ್ರಿಯ ಮೂಲಕ ಯೋಗವನ್ನು ಪಡೆಯಲಿರುವ ಆ 3 ರಾಶಿಯವರು ಯಾರು? ಇನ್ನಷ್ಟು ತಿಳಿದುಕೊಳ್ಳಲು ಈ ಜ್ಯೋತಿಷ್ಯ ಸಂಬಂಧಿತ ಪೋಸ್ಟ್ ಅನ್ನು ಓದುತ್ತಿರಿ. ಶ್ರೀ ಸಿಗಂದೂರು ಚೌಡೇಶ್ವರಿ ಜ್ಯೋತಿಷ್ಯ ಪೀಠ ನಂ 1ಕೇರಳ ಕೊಳ್ಳೇಗಾಲದ ಮಹಾ ಮಾಂತ್ರಿಕ ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ನಕ್ಷತ್ರಿ ತಂತ್ರಿ ನಂ:- 9686268564. ನಂ 1ವಶೀಕರಣ ಸ್ಪೆಷಲಿಸ್ಟ್ ಒಂದು ಕರೆಯಲ್ಲಿ ಪರಿಹಾರ ತಿಳಿಸುತ್ತಾರೆ ತಾವು ಎಷ್ಟೋ ಜ್ಯೋತಿಷ್ಯರಲ್ಲಿ ಕೇಳಿಯು ಪರಿಹಾರ ಸಿಗದೇ ಮನನೊಂದಿದ್ದರೆ…

Read More

ಬೆಂಗಳೂರು: 2023-24ನೇ ಸಾಲಿನ ಎಸ್ ಎಸ್ ಎಲ್ ಸಿ ಪರೀಕ್ಷಾ ಕೇಂದ್ರಗಳಲ್ಲಿ ಸಿಸಿಟಿವಿಯನ್ನು ಕಡ್ಡಾಯವಾಗಿ ಅಳವಡಿಸಿವಂತೆ ಶಾಲಾ ಶಿಕ್ಷಣ ಇಲಾಖೆ ಆದೇಶ ಮಾಡಿದೆ. ಈ ಕುರಿತಂತೆ ಶಾಲಾ ಶಿಕ್ಷಣ ಇಲಾಖೆಯ ಆಯುಕ್ತರು ಆದೇಶ ಹೊರಡಿಸಿದ್ದು, 2023-24 ನೇ ಸಾಲ್ಲಿನಲ್ಲಿ ನಡೆಯಲಿರುವ ಎಸ್‌ಎಸ್‌ಎಲ್‌ಸಿ ಯ ಎಲ್ಲಾ ಪರೀಕ್ಷಾ ಕೇಂದ್ರಗಳಲ್ಲಿ ಸಿಸಿಟಿವಿ ಯನ್ನು ಕಡ್ಡಾಯವಾಗಿ ಅಳವಡಿಸುವಂತೆ ಮಾನ್ಯ ಸರ್ಕಾರದ ಪ್ರಧಾನ ಕಾರ್ಯದರ್ಶಿಗಳು, ಶಾಲಾ ಶಿಕ್ಷಣ ಇಲಾಖೆ ಹಾಗೂ ಸಾಕ್ಷರತಾ ಇಲಾಖೆ ಬೆಂಗಳೂರು ಇವರ ಉಲ್ಲೇಖ(1) ರಲ್ಲಿ ನೀಡಿದ ನಿರ್ದೇಶನದಂತ ಎಸ್‌ಎಸ್‌ಎಲ್‌ಸಿ ಪರೀಕ್ಷಾ ಕೇಂದ್ರಗಳಲ್ಲಿ ಸಿಸಿಟಿವಿ ಅಳವಡಿಸಲು ಅಗತ್ಯ ಕ್ರಮ ವಹಿಸುವುದು ಕಡ್ಡಾಯವಾಗಿರುತ್ತದೆ. ಪರೀಕ್ಷಾ ಕೇಂದ್ರಗಳಲ್ಲಿರುವ ಸಿಸಿಟಿವಿ ಕ್ಯಾಮರಾಗಳು ಸುಸ್ಥಿತಿಯಲ್ಲಿ ಇರುವ ಬಗ್ಗೆ ಪರಿಶೀಲಿಸಿ ದೃಢಪಡಿಸಿಕೊಳ್ಳಲು ಆಯಾ ಜಿಲ್ಲೆಯ ಉಪನಿರ್ದೇಶಕರು/ಕ್ಷೇತ್ರ ಶಿಕ್ಷಣಾಧಿಕಾರಿಗಳು ಖುದ್ದಾಗಿ ಪರೀಕ್ಷಾ ಕೆಂದ್ರಗಳಿಗೆ ಬೇಟಿ ನೀಡಿ ಪರಿಶೀಲನೆ ಮಾಡಿ ದೃಢಪಡಿಸಿಕೊಳ್ಳತಕ್ಕದ್ದು ಎಂದಿದ್ದಾರೆ. ಅಲ್ಲದೆ ಉಲ್ಲೇಖ (2) ರ ಸುತ್ತೋಲೆಯನ್ವಯ ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷಾ ಮುಖ್ಯ ಅಧೀಕ್ಷಕರುಗಳು ಪರೀಕ್ಷೆಗಾಗಿ ಕಚೇರಿಯನ್ನು ಮಾಡಿಕೊಂಡಿರುವ ಅಂದರೆ ಮಾರ್ಗಾಧಿಕಾರಿಗಳಿಂದ…

Read More

ಬೆಂಗಳೂರು: ರಾಜ್ಯದ ಅನೇಕ ಭಾಗಗಳಲ್ಲಿ ನಕ್ಷೆಯಲ್ಲಿ ಜಮೀನು ಇರದೇ ರೈತರು ಕೃಷಿ ನಿರತರಾಗಿದ್ದಾರೆ. ಈ ರೈತರಿಗೆ ಅನುಕೂಲ ಕಲ್ಪಿಸಿಕೊಡುವ ನಿಟ್ಟಿನಲ್ಲಿ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ. ಅದೇ ನಕ್ಷೆಯಿಲ್ಲದ ಜಮೀನುಗಳಲ್ಲಿ ಕೃಷಿ ನಿರತ ರೈತರಿಗೆ ಸಾಗುವಳಿ ಚೀಟಿ ನೀಡಲು ಮುಂದಾಗಿದೆ. ಈ ಕುರಿತಂತೆ ಮಾಹಿತಿ ಹಂಚಿಕೊಂಡಿರುವಂತ ಕಂದಾಯ ಸಚಿವ ಕೃಷ್ಣಭೈರೇಗೌಡ ಅವರು, ರಾಜ್ಯದಲ್ಲಿ ಅರಣ್ಯ ಮತ್ತು ಕಂದಾಯ ಭೂಮಿಯ ಗಡಿ ವಿಚಾರದಲ್ಲಿ ದಶಕಗಳಿಂದಲೂ ಸಮಸ್ಯೆಗಳಿವೆ. ಅರಣ್ಯಭೂಮಿಯ ಗಡಿಯನ್ನು ಗುರುತಿಸದ ಕಾರಣ ಅರಣ್ಯ ಪ್ರದೇಶಗಳ ವ್ಯಾಪ್ತಿಯಲ್ಲಿರುವ ರೈತರು ಸಾಕಷ್ಟು ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಆರ್‌ಟಿಸಿ, ಪೋಡಿ, ಫೌತಿಖಾತೆ ಸೇರಿದಂತೆ ಈ ಭಾಗದಲ್ಲಿರುವವರಿಗೆ ಕಂದಾಯ ಇಲಾಖೆ ಸೇವೆಗಳನ್ನು ತಲುಪಿಸುವುದುನೀಡುವುದು ದುಸ್ಥರವಾಗಿದೆ. ರಸ್ತೆ, ಕುಡಿಯುವ ನೀರು ಸೇರಿದಂತೆ ಮೂಲಭೂತ ಸೌಲಭ್ಯಗಳನ್ನು ಒದಗಿಸುವುದೂ ಸಹ ಸವಾಲಿನ ಕೆಲಸವಾಗಿದೆ ಎಂದಿದ್ದಾರೆ. ಈ ಸಮಸ್ಯೆಯನ್ನು ಗಂಭೀರವಾಗಿ ಪರಿಗಣಿಸಿದ್ದ ರಾಜ್ಯ ಸರ್ಕಾರ ಕಂದಾಯ ಹಾಗೂ ಅರಣ್ಯ ಇಲಾಖೆ ವತಿಯಿಂದ ರಾಜ್ಯಾದ್ಯಂತ ಜಂಟಿ ಸರ್ವೇ ನಡೆಸಿ  ಜನ ಎದುರಿಸುತ್ತಿರುವ ಸಮಸ್ಯೆಗಳನ್ನು ಬಗೆಹರಿಸುವ ನಿಟ್ಟಿನಲ್ಲಿ ಕಳೆದ ಚಳಿಗಾಲದ…

Read More

ಬೆಂಗಳೂರು: ಗುರುವಾರದಂದು ಹೈಕೋರ್ಟ್ ನಿಂದ 5, 8 ಮತ್ತು 9ನೇ ತರಗತಿ ಬೋರ್ಡ್ ಪರೀಕ್ಷೆ ನೀಡಲಾಗಿದ್ದಂತ ತಡೆಯಾಜ್ಞೆಯನ್ನು ತೆರವುಗೊಳಿಸಲಾಗಿತ್ತು. ಈ ಬೆನ್ನಲ್ಲೇ ನಿಗದಿತ ವೇಳಾಪಟ್ಟಿಯಂತೆ 5, 8 ಮತ್ತು 9ನೇ ತರಗತಿ ಬೋರ್ಡ್ ಪರೀಕ್ಷೆ ನಡೆಯಲಿದೆ. ವಿದ್ಯಾರ್ಥಿಗಳು ಯಾವುದೇ ಗೊಂದಲಕ್ಕೆ ಒಳಗಾಗದಂತೆ ಶಾಲಾ ಶಿಕ್ಷಣ ಇಲಾಖೆ ಮಾಹಿತಿ ನೀಡಿದೆ. ಈ ಕುರಿತಂತೆ ಶಾಲಾ ಶಿಕ್ಷಣ ಇಲಾಖೆಯ ಆಯುಕ್ತರು ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ರಾಜ್ಯ ಪಠ್ಯಕ್ರಮದ ಸರ್ಕಾರಿ, ಅನುದಾನಿತ, ಅನುದಾನ ರಹಿತ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ 5, 8 ಮತ್ತು 9ನೇ ತರಗತಿಗಳ ವಿದ್ಯಾರ್ಥಿಗಳಿಗೆ 2023-24ನೇ ಸಾಲಿನ ಸಂಕಲನಾತ್ಮಕ ಮೌಲ್ಯಮಾಪನ-2 (SA-2) ಮೌಲ್ಯಾಂಕನ ನಡೆಸುವ ಸಂಬಂಧ ಘನ ಉಚ್ಚ ನ್ಯಾಯಾಲಯಲ್ಲಿ ದಾಖಲಾಗಿದ್ದ ಪ್ರಕರಣಕ್ಕೆ ಸಂಬಂದಿಸಿದಂತೆ ಸರ್ಕಾರದ ದಿ:6-10-2023 ಮತ್ತು 9-10-2023ರ ಅಧಿಸೂಚನೆಗಳನ್ನು ಏಕ ಸದಸ್ಯ ಪೀಠದಲ್ಲಿ ರದ್ದು(Quash) ಮಾಡಲಾಗಿರುತ್ತದೆ ಎಂದಿದ್ದಾರೆ. ಸದರಿ ತೀರ್ಪಿನ ವಿರುದ್ಧ ಸರ್ಕಾರವು ದಿನಾಂಕ: 7-3-202400 ಘನ ಉಚ್ಚನ್ಯಾಯಾಲಯದಲ್ಲಿ ಮೇಲ್ಮನವಿ ಸಲ್ಲಿಸಿದ್ದು, ಘನ ಉಚ್ಛ ನ್ಯಾಯಾಲಯದ ದ್ವಿಸದಸ್ಯ ಪೀಠವು…

Read More