Subscribe to Updates
Get the latest creative news from FooBar about art, design and business.
Author: kannadanewsnow09
ರಾಮನಗರ: ಲೋಕಸಭಾ ಚುನಾವಣೆಯಲ್ಲಿ ಮಂಡ್ಯ ಕ್ಷೇತ್ರದಿಂದ ಗೆದ್ದು, ಕೇಂದ್ರ ಸಚಿವರಾಗಿದ್ದಾರೆ. ಈ ಬೆನ್ನಲ್ಲೇ ಚನ್ನಪಟ್ಟಣ ವಿಧಾನಸಭಾ ಉಪ ಚುನಾವಣೆಗೆ ಅಭ್ಯರ್ಥಿಗಳ ಆಯ್ಕೆ ಗರಿಗೆದರಿದೆ. ಆ ಬಗ್ಗೆ ಹೆಚ್.ಡಿ ಕುಮಾರಸ್ವಾಮಿ ಏನು ಹೇಳಿದ್ರು ಅಂತ ಮುಂದೆ ಓದಿ. ಇಂದು ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಗೆ ಅಭ್ಯರ್ಥಿಗಳ ಆಯ್ಕೆ ವಿಚಾರದಲ್ಲಿ ನಮ್ಮಲ್ಲಿ ಯಾವುದೇ ಒಡಕಿಲ್ಲ. ಗೊಂದಲವಿಲ್ಲ ಎಂಬುದಾಗಿ ಸ್ಪಷ್ಟ ಪಡಿಸಿದ್ದಾರೆ. ಚನ್ನಪಟ್ಟಣ ವಿಧಾನಸಭಾ ಉಪ ಚುನಾವಣೆಗೆ ಸಿ.ಪಿ ಯೋಗೇಶ್ವರ್ ನಿಲ್ಲ ಬಹುದು, ಇಲ್ಲವೇ ಜೆಡಿಎಸ್ ಕಾರ್ಯಕರ್ತರೇ ನಿಲ್ಲಬಹುದು. ಈ ವಿಚಾರದಲ್ಲಿ ಯಾವುದೇ ಗೊಂದಲ, ಒಡಕಿಲ್ಲ ಅಂತ ತಿಳಿಸಿದ್ದಾರೆ. ನನಗೆ ಚನ್ನಪಟ್ಟಣ ಕ್ಷೇತ್ರವನ್ನು ಬಿಟ್ಟು ಕೊಡೋದಕ್ಕೆ ಮನಸ್ಸಿಲ್ಲ. ನನಗೆ ಮೂರು ಬಾರಿ ಶಸ್ತ್ರ ಚಿಕಿತ್ಸೆ ಆಗಿದೆ. ಈ ನಡುವೆಯೂ ಅಭಿವೃದ್ಧಿ ಕಾರ್ಯ, ಸಾಮಾಜಿಕ ಸೇವೆಯಲ್ಲಿ ತೊಡಗಿದ್ದೇನೆ ಎಂದರು. ನಾನು ಬದುಕಿರೋವರೆಗೂ ಚನ್ನಪಟ್ಟಣ ಕ್ಷೇತ್ರವನ್ನು ಮರೆಯುವುದಿಲ್ಲ. ನಾನು ಕೇಂದ್ರ ಮಂತ್ರಿಯಾದ ಬಳಿಕ ಕ್ಷೇತ್ರದ ಜನತೆಯನ್ನು ಮರೆಯುವುದಿಲ್ಲ. ಕ್ಷೇತ್ರದ ಜನತೆಯ ಕೆಲಸಗಳನ್ನು…
ಬೆಂಗಳೂರು: ಕರ್ನಾಟಕ ದ್ವಿತಿಯ ಪಿಯುಸಿ ಪರೀಕ್ಷೆ-2ರ ಫಲಿತಾಂಶವನ್ನು ಇಂದು ಪ್ರಕಟಿಸಲಾಗಿದೆ. ಈ ಬೆನ್ನಲ್ಲೇ ದ್ವಿತೀಯ ಪಿಯುಸಿ ಪರೀಕ್ಷೆ-3ರ ಅಂತಿಮ ವೇಳಾಪಟ್ಟಿಯನ್ನು ಪ್ರಕಟಿಸಿದೆ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯಿಂದ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ದ್ವಿತೀಯ ಪಿಯು ಪರೀಕ್ಷೆ-3 ದಿನಾಂಕ 24-06-2024ರಿಂದ ಆರಂಭಗೊಂಡು, 05-07-2024ರವರೆಗೆ ನಡೆಯಲಿದೆ ಎಂದು ತಿಳಿಸಿದೆ. ದ್ವಿತೀಯ ಪಿಯುಸಿ ಪರೀಕ್ಷೆ-3ಗೆ ಕಲಾ ವಿಭಾಗದಲ್ಲಿ 19,113 ವಿದ್ಯಾರ್ಥಿಗಳು, 11,698 ವಿದ್ಯಾರ್ಥಿನಿಯರು ಸೇರಿದಂತೆ 30,811 ಮಂದಿ ನೋಂದಾಯಿಸಿಕೊಂಡಿದ್ದಾರೆ ಅಂತ ಹೇಳಿದೆ. ವಿಜ್ಞಾನ ವಿಭಾಗದಲ್ಲಿ 19,783 ವಿದ್ಯಾರ್ಥಿಗಳು, ವಾಣಿಜ್ಯ ವಿಭಾಗದಲ್ಲಿ 25,401 ವಿದ್ಯಾರ್ಥಿಗಳು ಸೇರಿದಂತೆ ಒಟ್ಟು 44,358 ಹುಡುಗರು, 31,637 ಹುಡುಗಿಯರು ಸೇರಿ 75,995 ವಿದ್ಯಾರ್ಥಿಗಳು ಪರೀಕ್ಷೆ-3ಕ್ಕೆ ನೋಂದಾಯಿಸಿಕೊಂಡಿದ್ದಾರೆ. ದ್ವಿತೀಯ ಪಿಯುಸಿ ಪರೀಕ್ಷೆ-3 ರಾಜ್ಯದ 248 ಕೇಂದ್ರಗಳಲ್ಲಿ ನಡೆಯಲಿದೆ. ಈ ಪರೀಕ್ಷಾ ಕೇಂದ್ರಗಳಲ್ಲಿ ಸಿಸಿಟಿವಿ ಕಣ್ಗಾವಲು ಇರಿಸಲಾಗಿದೆ. ಅಲ್ಲದೇ ಜಿಲ್ಲಾ ಮತ್ತು ತಾಲ್ಲೂಕು ಹಂತದಲ್ಲಿ ವಿಚಕ್ಷಣದಳಗಳನ್ನು ರಚಿಸಲಾಗಿದೆ ಅಂತ ತಿಳಿಸಿದೆ. ಹೀಗಿದೆ ದ್ವಿತೀಯ ಪಿಯುಸಿ ಪರೀಕ್ಷೆ-3ರ ವೇಳಾಪಟ್ಟಿ ದಿನಾಂಕ 24-06-2024ರ ಸೋಮವಾರ-…
ಬೆಂಗಳೂರು: ಸೂರಜ್ ರೇವಣ್ಣ ವಿರುದ್ಧ ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣ ದಾಖಲಾದ ನಂತ್ರ ಪೊಲೀಸರು ಬಂಧಿಸಿದ್ದಾರೆ. ರಾಜ್ಯ ಸರ್ಕಾರ ಈ ಪ್ರಕರಣವನ್ನು ಸಿಐಡಿ ತನಿಖೆಗೂ ವಹಿಸಿ ಆದೇಶಿಸಿದೆ. ಈ ಪ್ರಕರಣದ ಬಗ್ಗೆ ಹೆಚ್.ಡಿ ರೇವಣ್ಣ ಏನು ಹೇಳಿದ್ರು ಅಂತ ಮುಂದೆ ಓದಿ. ಈ ಕುರಿತಂತೆ ಸುದ್ದಿಗಾರರೊಂದಿಗೆ ಮಾತನಾಡಿದಂತ ಹೆಚ್.ಡಿ ರೇವಣ್ಣ ಅವರು ನಮ್ಮ ಕುಟುಂಬದ ವಿರುದ್ಧ ರಾಜಕೀಯ ಷಡ್ಯಂತ್ರ ನಡೆಯುತ್ತಿದೆ. ಸೂರಜ್ ರೇವಣ್ಣ ಅವರನ್ನು ಬಂಧಿಸಿದ ನಂತ್ರ ಹಾಸನದಲ್ಲಿ ಮೆಡಿಕಲ್ ಟೆಸ್ಟ್ ಮಾಡದೇ ಯಾಕೆ ಬೆಂಗಳೂರಿಗೆ ಕರೆತಂದ್ರ.? ಇದೆಲ್ಲ ನಮ್ಮನ್ನು ಹೆದರಿಸೋಕೆ ಮಾಡ್ತಿದ್ದಾರೆ ಅಂತ ಕಿಡಿಕಾರಿದರು. ಸೂರಜ್ ರೇವಣ್ಣ ವಿರುದ್ಧ ಪ್ರಕರಣ ದಾಖಲಾಗೋ ಮೊದಲೇ ಅವರೇ ಸಂತ್ರಸ್ತ ವ್ಯಕ್ತಿಯ ವಿರುದ್ಧ ದೂರು ಕೊಟ್ಟಿದ್ದಾರೆ. ತಪ್ಪು ಮಾಡಿದ್ರೆ ಸೂರಜ್ ರೇವಣ್ಣ ಯಾಕೆ ದೂರು ಕೊಡೋಕೆ ಹೋಗ್ತಾ ಇದ್ದರು? ನಾನು ಈಗ ಏನೂ ಹೇಳಲ್ಲ. ಟೈಂ ಬಂದಾಗ ಹೇಳ್ತೀನಿ. ನಾವೇನು ತಪ್ಪು ಮಾಡಿ ಓಡಿ ಹೋಗಿಲ್ಲ ಎಂಬುದಾಗಿ ಗುಡುಗಿದರು. https://kannadanewsnow.com/kannada/first-file-signed-by-union-minister-hdk-disrupted-devadari-mining-put-on-hold/ https://kannadanewsnow.com/kannada/breaking-police-seize-suraj-revannas-mobile-phone-in-unnatural-sexual-assault-case/
ಬೆಂಗಳೂರು: ಕರ್ನಾಟಕ ಕೌಶಲ್ಯಾಭಿವೃದ್ದಿ ನಿಗಮವು ರಾಜ್ಯದ ಯುವಕರಿಗೆ ಹೊರದೇಶಗಳಲ್ಲಿ ಉದ್ಯೋಗ ಒದಗಿಸುವ ಮಹತ್ವದ ಯೋಜನೆಯನ್ನು ಅನುಷ್ಠಾನಗೊಳಿಸಿದೆ. ಇದರ ಭಾಗವಾಗಿ ಸ್ಲೋವಾಕಿಯಾ ರಾಷ್ಟ್ರದಲ್ಲಿ ಬಿಇ, ಡಿಪ್ಲೊಮೊ, ಐಟಿಐ ಮತ್ತಿತರ ವೃತ್ತಿಪರ ಕೋರ್ಸ್ಗಳನ್ನು ಮುಗಿಸಿದ 94 ಯುವಕರಿಗೆ ಉದ್ಯೋಗ ನೀಡುವಲ್ಲಿ ಕೌಶಲ್ಯಾಭಿವೃದ್ಧಿ ನಿಗಮವು ಯಶಸ್ವಿಯಾಗಿದೆ. ಕೌಶಲ್ಯಾಭಿವೃದ್ಧಿ, ಜೀವನೋಪಾಯ ಹಾಗೂ ವೈದ್ಯಕೀಯ ಶಿಕ್ಷಣ ಸಚಿವ ರಾದ ಡಾ.ಶರಣಪ್ರಕಾಶ್ ಪಾಟೀಲ್ ಅವರು ತೆಗೆದುಕೊಂಡ ದಿಟ್ಟನಿರ್ಧಾರದಿಂದಾಗಿ ಉದ್ಯೋಗವಿಲ್ಲದೆ ಕೆಲಸ ಹರಸುತ್ತಿದ್ದ ಯುವಕರು ಇದೀಗ ವಿದೇಶದಲ್ಲಿ ಕೈತುಂಬ ಸಂಬಳ ಪಡೆಯುತ್ತಿದ್ದು, ತಮ್ಮ ಭವಿಷ್ಯವ ರೂಪಿಸಿಕೊಂಡಿದ್ದಾರೆ. ಯುವಕರ ಕೌಶಲ್ಯಾ ಅರ್ಹತೆಗೆ ತಕ್ಕಂತೆ ಉದ್ಯೋಗಗಳನ್ನುನೀಡಲಾಗುತ್ತಿದೆ. ಅವರಿಗೆ ಇಲ್ಲಿಯೇ ತರಬೇತಿ, ವೀಸಾ ವ್ಯವಸ್ಥೆ, ಗೃಹ ಇಲಾಖೆಯಲ್ಲಿ ದಾಖಲಾತಿಗಳ ಪ್ರಮಾಣಪತ್ರ ಪರಿಶೀಲನೆ ಮಾತ್ರವಲ್ಲದೆ ಹೊರರಾಷ್ಟ್ರಗಳಿಗೆ ತೆರಳುವವರಿಗೆ ಊಟ, ವಸತಿವ್ಯವಸ್ಥೆ, ಸಂಬಂಧಪಟ್ಟವರ ಭೇಟಿಗೆ ಬೇಕಾದ ಇನ್ನಿತರಸೌಲಭ್ಯಗಳನ್ನು ಸಹ ಇಲಾಖೆಯ ಅಧಿಕಾರಿಗಳೇ ನಿಗಾವಹಿಸುತ್ತಾರೆ. ಐಟಿಬಿಟಿ, ವಿಜ್ಞಾನ, ಕೈಗಾರಿಕೆ, ಆರೋಗ್ಯ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಕರ್ನಾಟಕ ಇತರೆ ರಾಜ್ಯಗಳಿಗೆ ಹೋಲಿಸಿದರೆ ಸಾಕಷ್ಟು ಮುಂಚೂಣಿಯಲ್ಲಿದೆ. ಇದನ್ನು ಮನಗಂಡ ಸ್ಲೋವಾಕಿಯಾ ರಾಷ್ಟ್ರವು ಎರಡೂವರೆ ಸಾವಿರ…
ಬೆಂಗಳೂರು: ಕೊರೋನಾ ( Corona ) ಸಂದರ್ಭದಲ್ಲಿ ರಾಜ್ಯಾಧ್ಯಂತ 3,800 ರೂಟ್ ಗಳಲ್ಲಿ ಸಾರಿಗೆ ಬಸ್ ( KSRTC Bus ) ಸಂಚಾರ ಸ್ಥಗಿತಗೊಳಿಸಲಾಗಿತ್ತು. ಹೀಗೆ ಸ್ಥಗಿತಗೊಂಡಿದ್ದರಿಂದ ರಾಜ್ಯದ ಜನರು ತೊಂದರೆಗೆ ಸಿಲುಕುವಂತಾಗಿದೆ. ಇಂತಹ ರೂಟ್ ಗಳಲ್ಲಿ ಶೀಘ್ರವೇ ಬಸ್ ಸಂಚಾರ ಆರಂಭಗೊಳಿಸಲಾಗುತ್ತಿದೆ. ಈ ಬಗ್ಗೆ ಮಾಹಿತಿ ಹಂಚಿಕೊಂಡಿರುವಂತ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ( Minister Ramalingareddy ) ಅವರು, ಕೋವಿಡ್ ವೇಳೆ ರಾಜ್ಯಾದ್ಯಂತ 3,800 ಸರ್ಕಾರಿ ಬಸ್ ರೂಟ್ಗಳನ್ನು ಸ್ಥಗಿತಗೊಳಿಸಲಾಗಿತ್ತು. ಈ ಪೈಕಿ ಬಹುತೇಕ ಕಡೆಗೆ ರೂಟ್ ಬಸ್ಗಳ ಓಡಾಟ ಆರಂಭವಾಗದೆ ಜನರು ಪರದಾಡುವಂತಾಗಿತ್ತು. ಈಗ ಸಾರಿಗೆ ಇಲಾಖೆ ಸ್ಥಗಿತಗೊಳಿಸಿದ್ದ ಬಸ್ ರೂಟ್ಗಳ ಪುನರಾರಂಭಕ್ಕೆ ಚಿಂತನೆ ನಡೆಸಿದೆ ಎಂದಿದ್ದಾರೆ. “ಕೋವಿಡ್ ವೇಳೆ ಸ್ಥಗಿತಗೊಳಿಸಲಾಗಿದ್ದ ಬಸ್ ಸೇವೆ ಪುನರಾರಂಭಿಸಲು ಕ್ರಮ ವಹಿಸಲಾಗುತ್ತಿದೆ. ಹಿಂದಿನ ಸರ್ಕಾರದ ಅವಧಿಯಲ್ಲಿ ನೂತನ ಬಸ್ಗಳನ್ನು ಖರೀದಿಸಿಲ್ಲ. ಇದರಿಂದ ಬಸ್ ಕೊರತೆ ಇದ್ದು, ಈಗ ಖರೀದಿಗೆ ಕ್ರಮವಹಿಸಲಾಗುತ್ತಿದೆ. ಆದಷ್ಟು ಬೇಗ ಸಮಸ್ಯೆ ಬಗೆಹರಿಸಲಾಗುತ್ತದೆ” ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ…
ನವದೆಹಲಿ: ನೀಟ್, ಯುಜಿಸಿ-ನೆಟ್ ವಿವಾದದ ಮಧ್ಯೆ ಕೇಂದ್ರವು ಶನಿವಾರ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (National Testing Agency -NTA) ಮಹಾನಿರ್ದೇಶಕರನ್ನು ಬದಲಿಸಿದೆ. ನೂತನ ಮುಖ್ಯಸ್ಥರನ್ನಾಗಿ ಪ್ರದೀಪ್ ಸಿಂಗ್ ಖರೋಲಾ ( Pradeep Singh Kharola ) ಅವರನ್ನು ಕೇಂದ್ರ ಸರ್ಕಾರ ನೇಮಕ ಮಾಡಿದೆ. ನೀಟ್-ಯುಜಿ ಮತ್ತು ಯುಜಿಸಿ-ನೆಟ್ ಪರೀಕ್ಷೆಗಳ ನಿರ್ವಹಣೆಯಲ್ಲಿ ಅಕ್ರಮ ನಡೆದಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ರಾಷ್ಟ್ರೀಯ ಪರೀಕ್ಷಾ ಏಜೆನ್ಸಿಯ ಮುಖ್ಯಸ್ಥ ಸುಬೋಧ್ ಕುಮಾರ್ ಸಿಂಗ್ ಅವರನ್ನು ಶನಿವಾರ ರಾತ್ರಿ ಹುದ್ದೆಯಿಂದ ತೆಗೆದುಹಾಕಲಾಗಿದೆ. ಅವರನ್ನು ಸಿಬ್ಬಂದಿ ಮತ್ತು ತರಬೇತಿ ಇಲಾಖೆಯಲ್ಲಿ ಕಡ್ಡಾಯ ಕಾಯುವಿಕೆಯಲ್ಲಿ ಇರಿಸಲಾಗಿದೆ. 1985 ರ ಬ್ಯಾಚ್ನ ನಿವೃತ್ತ ಅಧಿಕಾರಿ ಪ್ರದೀಪ್ ಸಿಂಗ್ ಖರೋಲಾ ಅವರನ್ನು ನಿಯಮಿತ ಮುಖ್ಯಸ್ಥರನ್ನು ನೇಮಿಸುವವರೆಗೆ ಅಥವಾ ಮುಂದಿನ ಆದೇಶದವರೆಗೆ ಅವರ ಸ್ಥಾನದಲ್ಲಿ ನೇಮಿಸಲಾಗಿದೆ. https://twitter.com/ANI/status/1804545970035884311 ಕಳೆದ ಎರಡು ತಿಂಗಳುಗಳಿಂದ, ದೇಶದ ಎರಡು ಅತಿದೊಡ್ಡ ಸ್ಪರ್ಧಾತ್ಮಕ ಪರೀಕ್ಷೆಗಳಾದ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ-ಪದವಿಪೂರ್ವ (ನೀಟ್-ಯುಜಿ) ಮತ್ತು ವಿಶ್ವವಿದ್ಯಾಲಯ ಧನಸಹಾಯ ಆಯೋಗ-ರಾಷ್ಟ್ರೀಯ ಅರ್ಹತಾ ಪರೀಕ್ಷೆ…
ಶಿವಮೊಗ್ಗ: ಶಿವಮೊಗ್ಗ ಡಿಸಿಸಿ ಬ್ಯಾಂಕ್ ಚುನಾವಣೆಗೆ ಇಂದು ನಾಮಪತ್ರ ಹಿಂಪಡೆಯೋದಕ್ಕೆ ಕೊನೆಯ ದಿನವಾಗಿತ್ತು. ಇಂದು 7 ಮಂದಿ ತಮ್ಮ ಉಮೇಧುವಾರಿಕೆಯನ್ನು ಹಿಂಪಡೆದಿದ್ದಾರೆ. ಹೀಗಾಗಿ ಕಣದಲ್ಲಿ ಶಾಸಕ ಬೇಳೂರು ಗೋಪಾಲಕೃಷ್ಣ ಸೇರಿದಂತೆ 28 ಮಂದಿ ಇದ್ದಾರೆ. ಶಿವಮೊಗ್ಗ ಡಿಸಿಸಿ ಬ್ಯಾಂಕ್ ನಿರ್ದೇಶಕರ ಸ್ಥಾನಕ್ಕೆ ಜೂನ್.28ರಂದು ಚುನಾವಣೆ ನಡೆಯಲಿದೆ. 13 ನಿರ್ದೇಶಕರ ಸ್ಥಾನಕ್ಕೆ ಒಟ್ಟು ಬರೋಬ್ಬರಿ 35 ಮಂದಿ ನಾಮಪತ್ರವನ್ನು ಸಲ್ಲಿಸಿದ್ದರು. ನಾಮಪತ್ರ ಹಿಂಪಡೆಯಲು ಇಂದು ಕೊನೆಯ ದಿನವಾಗಿತ್ತು. ಈ ಸಂದರ್ಭದಲ್ಲಿ ಎಂ.ಶ್ರೀಕಾಂತ್, ಆರ್.ಸಿ ನಾಯಕ್, ದುದ್ದೇಶ್, ಹೆಚ್.ಎನ್ ವಿಜಯ ಕುಮಾರ್, ಹೆಚ್.ಮಲ್ಲಿಕಾರ್ಜುನ್, ವಿಜಯ್ ಕುಮಾರ್(ಧನಿ) ಹಾಗೂ ಹೆಚ್.ಜಿ ಮಲ್ಲಯ್ಯ ಎಂಬುವರು ನಾಮಪತ್ರವನ್ನು ಹಿಂಪಡೆದಿದ್ದಾರೆ. ಇನ್ನೂ ಶಿವಮೊಗ್ಗ ಡಿಸಿಸಿ ಬ್ಯಾಂಕ್ ಚುನಾವಣೆಯಲ್ಲಿ ಈಗ ಸಾಗರ ಶಾಸಕ ಬೇಳೂರು ಗೋಪಾಲಕೃಷ್ಣ, ದುಗ್ಗಪ್ಪ ಗೌಡ, ಎಸ್.ಕೆ ಮರಿಯಪ್ಪ, ಆರ್.ಎಂ ಮಂಜುನಾಥ್ ಗೌಡ, ಯೋಗೀಶ್, ಎಸ್ ಪಿ ದಿನೇಶ್, ಡಿ.ಆನಂದ್, ಪರಮೇಶ್ವರ್ ಸೇರಿದಂತೆ 28 ಮಂದಿ ಕಣದಲ್ಲಿ ಇದ್ದಾರೆ. ಈಗಾಗಲೇ ಶಾಸಕ ಬೇಳೂರು ಗೋಪಾಲಕೃಷ್ಣ ಅವರಿಗೆ ಜಿಲ್ಲೆಯ ಅನೇಕ ವ್ಯವಸಾಯ…
ನವದೆಹಲಿ: ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರ ಅಧ್ಯಕ್ಷತೆಯಲ್ಲಿ ನಡೆದ 53 ನೇ ಜಿಎಸ್ಟಿ ಕೌನ್ಸಿಲ್ ಸಭೆಯಲ್ಲಿ ಜಿಎಸ್ಟಿ ಅನುಸರಣೆಯನ್ನು ಸುವ್ಯವಸ್ಥಿತಗೊಳಿಸುವ ಮತ್ತು ತೆರಿಗೆದಾರರ ಹೊರೆಯನ್ನು ಕಡಿಮೆ ಮಾಡುವ ಗುರಿಯನ್ನು ಹೊಂದಿರುವ ಶಿಫಾರಸುಗಳನ್ನು ತರಲಾಯಿತು. ಹೊಸ ಸರ್ಕಾರ ರಚನೆಯಾದ ನಂತರ ಇದು ಜಿಎಸ್ಟಿ ಮಂಡಳಿಯ ಮೊದಲ ಸಭೆಯಾಗಿದೆ. ಹೀಗಿವೆ ಇಂದಿನ 53ನೇ ಜಿಎಸ್ಟಿ ಕೌನ್ಸಿಲ್ ಸಭೆಯ ಹೈಲೈಟ್ಸ್ ಬಡ್ಡಿ ಮತ್ತು ದಂಡ ಮನ್ನಾ: 2017-18, 2018-19 ಮತ್ತು 2019-20ರ ಹಣಕಾಸು ವರ್ಷಗಳಿಗೆ ಸಿಜಿಎಸ್ಟಿ ಕಾಯ್ದೆಯ ಸೆಕ್ಷನ್ 73 ರ ಅಡಿಯಲ್ಲಿ ಬೇಡಿಕೆ ನೋಟಿಸ್ಗಳಿಗೆ ಬಡ್ಡಿ ಮತ್ತು ದಂಡವನ್ನು ಮನ್ನಾ ಮಾಡಲು ಕೌನ್ಸಿಲ್ ಶಿಫಾರಸು ಮಾಡಿದೆ. ಈ ಪರಿಹಾರವು ವಂಚನೆ, ನಿಗ್ರಹ ಅಥವಾ ಉದ್ದೇಶಪೂರ್ವಕ ತಪ್ಪು ಹೇಳಿಕೆಯನ್ನು ಒಳಗೊಂಡಿರದ ಪ್ರಕರಣಗಳಿಗೆ ಅನ್ವಯಿಸುತ್ತದೆ. ಇನ್ ಪುಟ್ ಟ್ಯಾಕ್ಸ್ ಕ್ರೆಡಿಟ್ ಗಾಗಿ ವಿಸ್ತೃತ ಸಮಯ: ತೆರಿಗೆದಾರರು ಈಗ 2017-18 ರಿಂದ 2020-21 ರವರೆಗಿನ ಇನ್ವಾಯ್ಸ್ ಅಥವಾ ಡೆಬಿಟ್ ನೋಟುಗಳಿಗೆ ಇನ್ಪುಟ್ ಟ್ಯಾಕ್ಸ್ ಕ್ರೆಡಿಟ್ ಅನ್ನು ನವೆಂಬರ್…
ಬೆಂಗಳೂರು: ನಗರದಲ್ಲಿ ಕಂದಾಯ ಸಚಿವ ಕೃಷ್ಣ ಭೈರೇಗೌಡ ಅವರು ಸರ್ಕಾರಿ ಭೂಮಿ ಒತ್ತುವರಿದಾರರ ವಿರುದ್ಧ ಸಮರ ಸಾರಿದ್ದಾರೆ. ಇಂದು ಅಕ್ರಮ ಸರ್ಕಾರಿ ಭೂ ಒತ್ತುವರಿದಾರರ ವಿರುದ್ಧ ಎಫ್ಐಆರ್ ದಾಖಲಿಸಿ, ಬಿಸಿ ಮುಟ್ಟಿಸಿದ್ದಾರೆ. ಈ ಕುರಿತಂತೆ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿರುವಂತ ಅವರು, ಕಂದಾಯ ಇಲಾಖೆಯ ಸಚಿವನಾಗಿ ನಾನು ಜವಾಬ್ದಾರಿ ವಹಿಸುತ್ತಿದ್ದಂತೆ ನಿರ್ಧರಿಸಿದ ಮೊದಲ ಕೆಲಸ ಸರ್ಕಾರಿ ಜಮೀನಿನ ಒತ್ತುವರಿ ತೆರವು. ಕಳೆದ ವರ್ಷ 2023ರ ಜೂನ್ ತಿಂಗಳ ಮೊದಲ ವಾರವೇ ಇಲಾಖೆಗೆ ಸಂಬಂಧಿಸಿದ ಎಲ್ಲಾ ಅಧಿಕಾರಿಗಳ ಸಭೆ ಕರೆಯಲಾಗಿತ್ತು. ಸಭೆಯಲ್ಲಿ ಬೆಂಗಳೂರು ನಗರ ಮತ್ತು ಗ್ರಾಮೀಣ ಭಾಗದಲ್ಲಿ ಒತ್ತುವರಿಯಾಗಿರುವ ಎಲ್ಲಾ ಸರ್ಕಾರಿ ಜಮೀನಿನ ವಿವರವನ್ನು ಕೇಳಲಾಗಿತ್ತು. ಅಲ್ಲದೆ, ಯಾವುದೇ ಭೂ ಮಾಫಿಯಾ ಮರ್ಜಿಗೆ ಒಳಗಾಗದೆ ಅಥವಾ ಬೆದರಿಕೆಗಳಿಗೆ ಬಗ್ಗದೆ ವಾರಾಂತ್ಯಗಳಲ್ಲಿ ಒತ್ತುವರಿ ಕಾರ್ಯಾಚರಣೆ ನಡೆಸಬೇಕು ಎಂದು ಅಧಿಕಾರಿಗಳಿಗೆ ಆದೇಶಿಸಲಾಗಿತ್ತು ಎಂದಿದ್ದಾರೆ. ಪರಿಣಾಮ ಕಳೆದ ವರ್ಷ ಜೂನ್ ತಿಂಗಳಿನಿಂದಲೇ ಬೆಂಗಳೂರು ನಗರ-ಗ್ರಾಮೀಣ ಭಾಗದಲ್ಲಿ ಒತ್ತುವರಿ ತೆರವು ಕೆಲಸ ಆರಂಭಿಸಲಾಗಿತ್ತು. ಅದರಂತೆ ನೂರಾರು ಕೋಟಿ ಮೌಲ್ಯದ…
ಬಳ್ಳಾರಿ : ನಗರ ಜೆಸ್ಕಾಂ ಉಪವಿಭಾಗ-2 ರ ವ್ಯಾಪ್ತಿಯ 110/11ಕೆ.ವಿ ಸೋಮಸಮುದ್ರ ವಿದ್ಯುತ್ ಉಪ-ಕೇಂದ್ರದ ನಿರ್ವಹಣೆ ಕಾರ್ಯ ಕೈಗೊಳ್ಳುತ್ತಿರುವುರಿಂದ ಜೂ.23 ಬೆಳಿಗ್ಗೆ 9 ಗಂಟೆಯಿಂದ ಸಂಜೆ 4 ಗಂಟೆಯವರೆಗೆ 11 ಕೆ.ವಿ. ಫೀಡರ್ ವ್ಯಾಪ್ತಿಯ ನಗರ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರ ಅಶೋಕ ರೆಡ್ಡಿ ತಿಳಿಸಿದ್ದಾರೆ. ವಿದ್ಯುತ್ ವ್ಯತ್ಯಯವಾಗಲಿರುವ ಪ್ರದೇಶಗಳು: ಎಫ್-6 ಫೀಡರ್ನ ತಾಳೂರು ರೋಡ್, ಸ್ನೇಹ ಕಾಲೋನಿ, ಶ್ರೀನಗರ, ರೇಣುಕಾ ನಗರ, ಭಗತ್ಸಿಂಗ್ ನಗರ, ಕನ್ನಡ ನಗರ, ಮಹಾನಂದಿ ಕೊಟ್ಟಂ, ಪಾರ್ವತಿ ನಗರ, ಎಸ್.ಪಿ.ಸರ್ಕಲ್, ಶಾಸ್ತ್ರೀ ನಗರ, ಬ್ಯಾಂಕ್ ಕಾಲೋನಿ, ಬಸವನಕುಂಟೆ, ಸಿರುಗುಪ್ಪ ರೋಡ್, ರಾಮ ನಗರ, ಹವಂಬಾವಿ. ಎಫ್-10 ಫೀಡರ್ನ ಅಶೋಕ ನಗರ, ಹವಂಬಾವಿ, ಟಿ.ಎಂ.ಜಿ ಲೇಔಟ್, ರಾಮ ನಗರ, ಜಯನಗರ, ಗಾಯತ್ರಿ ನಗರ, ಭುವನಗಿರಿ ಕಾಲೋನಿ, ವೀರನಗೌಡ ಕಾಲೋನಿ, ಗಣೇಶ ನಗರ. ಎಫ್-14 ಫೀಡರ್ನ ಜಿಲ್ಲಾ ಕೋರ್ಟ್ ಸಂಕೀರ್ಣ ಸೇರಿದಂತೆ ಮುಂತಾದ ಪ್ರದೇಶಗಳಲ್ಲಿ ವಿದ್ಯುತ್ ಕಡಿತಗೊಳಿಸಲಾಗುತ್ತದೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. https://kannadanewsnow.com/kannada/ration-card-holders-note-release-of-foodgrains-for-june/ https://kannadanewsnow.com/kannada/gst-council-waives-penalties-on-past-tax-notices-to-ease-compliance-burden/












