Author: kannadanewsnow09

ಬೆಂಗಳೂರು: ಆದರಣೀಯ ಪ್ರಧಾನಿ ನರೇಂದ್ರ ಮೋದಿಜೀ ಅವರ ಜನಪ್ರಿಯತೆ ಉತ್ತುಂಗದಲ್ಲಿದೆ. ಮೋದಿಜೀ ಅವರ ಜನಪ್ರಿಯತೆಯನ್ನು ಮತವಾಗಿ ಪರಿವರ್ತಿಸುವ ಸವಾಲನ್ನು ನಮ್ಮ ಕಾರ್ಯಕರ್ತರು ಸ್ವೀಕರಿಸಿ ಅದರಲ್ಲಿ ಯಶ ಕಾಣಬೇಕಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ತಿಳಿಸಿದರು. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ನಡೆದ ಬಿಜೆಪಿ ರಾಜ್ಯ ಚುನಾವಣಾ ವಿಭಾಗ ಮತ್ತು ಕಾನೂನು ವಿಭಾಗದ ರಾಜ್ಯ ಮಟ್ಟದ ಕಾರ್ಯಾಗಾರವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಕಾನೂನು ಘಟಕವು ಚುನಾವಣೆ ಸಂದರ್ಭದಲ್ಲಿ ಕಾಂಗ್ರೆಸ್ ವಿರುದ್ಧ ಕೇಸು ದಾಖಲಿಸುವುದು ಒಂದು ಸಹಜ ಪ್ರಕ್ರಿಯೆ. ನಮ್ಮ ಎದುರಾಳಿಗಳನ್ನು ಹದ್ದುಬಸ್ತಿನಲ್ಲಿ ಇಡುವ ಕೆಲಸ ಆಗಲೇಬೇಕು. ಇಲ್ಲವಾದರೆ, ಎಲುಬಿಲ್ಲದ ನಾಲಿಗೆ ಏನು ಬೇಕಾದರೂ ಮಾತನಾಡುತ್ತದೆ ಎಂದರು. ರಾಜ್ಯದ ಕಾಂಗ್ರೆಸ್ ಸರಕಾರ ಹತಾಶ ಸ್ಥಿತಿಯಲ್ಲಿದೆ. ಕೇವಲ 9 ತಿಂಗಳ ಹಿಂದೆ ಅಧಿಕಾರ ಪಡೆದ ಈ ಕಾಂಗ್ರೆಸ್ ಸರಕಾರವು ಯಾವುದೋ ಒಂದು ಭ್ರಮೆಯಲ್ಲಿತ್ತು. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಸಿಕ್ಕಿದ ಅಭೂತಪೂರ್ವ ಬೆಂಬಲದಿಂದ ಅಧಿಕಾರದ ಅಮಲಿನಲ್ಲಿ ಅದು ತೇಲುತ್ತಿತ್ತು.…

Read More

ಶಿವಮೊಗ್ಗ: ಜಿಲ್ಲೆಯಲ್ಲಿ ಬಿಜೆಪಿ ವಿರುದ್ಧ ಸಿಡಿದೆದ್ದು, ಬಂಡಾಯ ಅಭ್ಯರ್ಥಿಯಾಗಿ ಕಣಕ್ಕೆ ಇಳಿಯೋದಾಗಿ ಮಾಜಿ ಡಿಸಿಎಂ ಕೆ.ಎಸ್ ಈಶ್ವರಪ್ಪ ಘೋಷಣೆ ಮಾಡಿದ್ದರು. ಚುನಾವಣಾ ಪ್ರಚಾರಕ್ಕೂ ಇಳಿದಿದ್ದಾರೆ. ಹೀಗೆ ಧಾರ್ಮಿಕ ಕೇಂದ್ರದಲ್ಲಿ ಚುನಾವಣಾ ಪ್ರಚಾರ ನಡೆಸಿದಂತ ಅವರ ವಿರುದ್ಧ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣ ದಾಖಲಾಗಿದೆ. ಶಿವಮೊಗ್ಗದ ಗೋಪಾಳದ ರಂಗನಾಥ ಸ್ವಾಮಿ ದೇವಾಲಯಕ್ಕೆ ತೆರಳಿದ್ದಂತ ಬಿಜೆಪಿ ಬಂಡಾಯ ನಾಯಕ ಕೆ.ಎಸ್ ಈಶ್ವಪರ್ಪ ಅವರು, ಅಲ್ಲಿಯೇ ಲೋಕಸಭಾ ಚುನಾವಣೆ ಸಂಬಂಧ ಪ್ರಚಾರ ನಡೆಸಿದ್ದಾರೆ ಎಂಬುದಾಗಿ ಹೇಳಲಾಗುತ್ತಿದೆ. ಹೀಗಾಗಿ ಅವರ ವಿರುದ್ಧ ಚುನಾವಣಾಧಿಕಾರಿಗಳು ಪೊಲೀಸರಿಗೆ ದೂರು ನೀಡಿದ್ದರು. ತುಂಗಾನಗರ ಪೊಲೀಸ್ ಠಾಣೆಗೆ ಈಶ್ವರಪ್ಪ ವಿರುದ್ಧ ನೀಡಿದಂತ ದೂರಿನ ಹಿನ್ನಲೆಯಲ್ಲಿ, ಅವರ ವಿರುದ್ಧ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣ ದಾಖಲಾಗಿದೆ. ಈ ಮೂಲಕ ಬಿಜೆಪಿ ಬಂಡಾಯ ಅಭ್ಯರ್ಥಿಗೆ ನೀತಿ ಸಂಹಿತೆ ಉಲ್ಲಂಘನೆಯ ಪ್ರಕರಣದ ಬಿಸಿ ಮುಟ್ಟಿದಂತೆ ಆಗಿದೆ. https://kannadanewsnow.com/kannada/congress-had-earlier-declared-tandas-as-revenue-villages-priyank-kharge/ https://kannadanewsnow.com/kannada/not-asking-for-votes-sunita-kejriwal-reads-out-husbands-message-from-lock-up-at-opposition-rally/

Read More

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಲ್ಲಿ ನಡು ರಸ್ತೆಯಲ್ಲೇ ಮಹಿಳೊಯಬ್ಬರನ್ನು ಚಾಕುವಿನಿಂದ ಇರಿದು ಕೊಲೆ ಮಾಡಿರುವಂತ ಘಟನೆ ನಡೆದಿದೆ. ಈ ಘಟನೆಯನ್ನು ಕಂಡ ಬೆಂಗಳೂರು ಜನತೆ ಬೆಚ್ಚಿ ಬಿದ್ದಿದ್ದಾರೆ. ಬೆಂಗಳೂರಿನ ಜಯನಗರ 11ನೇ ಮುಖ್ಯ ರಸ್ತೆಯಲ್ಲಿ ಶಾಲಿನಿ ಗ್ರೌಂಡ್ ನಲ್ಲಿ ಫರೀದಾ ಖಾನ್ (42) ಎಂಬುವರನ್ನು ಚಾಕುವಿನಿಂದ ಇರಿದು ಕೊಲೆ ಮಾಡಿರೋ ಘಟನೆ ನಡೆದಿದೆ. ದುಷ್ಕರ್ಮಿಯೊಬ್ಬ ಚಾಕುವಿನಿಂದ ಇರಿದು ಕೊಲೆಗೈದು ಪರಾರಿಯಾಗಿರೋದಾಗಿ ತಿಳಿದು ಬಂದಿದೆ. ಈ ವಿಷಯ ತಿಳಿದು ಸ್ಥಳಕ್ಕೆ ಜಯನಗರ ಠಾಣೆಯ ಪೊಲೀಸರು ಆಗಮಿಸಿ, ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಈ ಬಗ್ಗೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ. https://kannadanewsnow.com/kannada/state-government-transfers-information-commissioner-hemant-nimbalkar/ https://kannadanewsnow.com/kannada/sslc-exam-8-41-lakh-students-appear-today-one-debar/

Read More

ಬೆಂಗಳೂರು: ಲೋಕಸಭಾ ಚುನಾವಣೆಯಲ್ಲಿ ಉತ್ತರ ಕನ್ನಡ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಅಂಜಲಿ ನಿಂಬಾಳ್ಕರ್ ಕಣಕ್ಕೆ ಇಳಿದಿದ್ದರು. ಅವರ ಪತಿ ಹೇಮಂತ್ ನಿಂಬಾಳ್ಕರ್ ವಾರ್ತಾ ಇಲಾಖೆಯ ಆಯುಕ್ತರಾಗಿದ್ದರು. ಇಂತಹ ಅವರು ಅಧಿಕಾರ ದುರುಪಯೋಗ ಮಾಡಿಕೊಳ್ಳುತ್ತಿದ್ದಾರೆ ಅಂತ ಚುನಾವಣಾ ಆಯೋಗಕ್ಕೆ ಬಿಜೆಪಿ ದೂರು ನೀಡಿತ್ತು. ಈ ಹಿನ್ನಲೆಯಲ್ಲಿ ಅವರನ್ನು ವರ್ಗಾವಣೆ ಮಾಡಿ, ರಾಜ್ಯ ಸರ್ಕಾರ ಆದೇಶಿಸಿದೆ. ರಾಜ್ಯದ ವಾರ್ತಾ ಇಲಾಖೆಯ ಆಯುಕ್ತರಾಗಿದ್ದಂತ ಹೇಮಂತ್ ನಿಂಬಾಳ್ಕರ್ ಅವರ ಪತ್ನಿ ಕಾಂಗ್ರೆಸ್ ಪಕ್ಷದಿಂದ ಲೋಕಸಭಾ ಚುನಾವಣೆಗೆ ಉತ್ತರ ಕನ್ನಡ ಕ್ಷೇತ್ರದಿಂದ ಕಣಕ್ಕೆ ಇಳಿದಿದ್ದರು. ಅಂಜಲಿ ನಿಂಬಾಳ್ಕರ್ ಕಾಂಗ್ರೆಸ್ ಅಭ್ಯರ್ಥಿಯಾಗಿರುವ ಕಾರಣ, ಅವರ ಪತಿ ಅಧಿಕಾರವನ್ನು ದುರುಪಯೋಗ ಮಾಡಿಕೊಳ್ಳಲಿದ್ದಾರೆ. ಅವರನ್ನು ವರ್ಗಾವಣೆ ಮಾಡುವಂತೆ ಚುನಾವಣಾ ಆಯೋಗಕ್ಕೆ ಬಿಜೆಪಿ ದೂರು ನೀಡಿತ್ತು. ಬಿಜೆಪಿ ದೂರಿನ ಹಿನ್ನಲೆಯಲ್ಲಿ ವಾರ್ತಾ ಇಲಾಖೆಯ ಆಯುಕ್ತಾಗಿದ್ದಂತ ಹೇಮಂತ್ ನಿಂಬಾಳ್ಕರ್ ವರ್ಗಾವಣೆ ಮಾಡುವಂತೆ ಚುನಾವಣಾ ಆಯೋಗ ರಾಜ್ಯ ಸರ್ಕಾರಕ್ಕೆ ಸೂಚಿಸಿತ್ತು. ಇಂದು ಚುನಾವಣಾ ಆಯೋಗದ ಸೂಚನೆಯ ಮೇರೆಗೆ ರಾಜ್ಯ ಸರ್ಕಾರವು ವಾರ್ತಾ ಇಲಾಖೆಯ ಆಯುಕ್ತ ಹೇಮಂತ್ ನಿಂಬಾಳ್ಕರ್…

Read More

ಬೆಂಗಳೂರು: ಕನ್ನಡದ ಹಲವು ಸಿನಿಮಾಗಳಲ್ಲಿ ತನ್ನ ವಿಶಿಷ್ಟ ನಟನೆಯ ಮೂಲಕ ಗುರ್ತಿಸಿಕೊಂಡಿದ್ದಂತ ಸ್ಯಾಂಡಲ್ ವುಡ್ ನಟ ಪ್ರಕಾಶ್ ಹೆಗ್ಗೋಡು ಇಂದು ನಿಧನರಾಗುವ ಮೂಲಕ ಇನ್ನಿಲ್ಲವಾಗಿದ್ದಾರೆ. ರಂಗಭೂಮಿ ಕಲಾವಿದ, ಚಿತ್ರ ನಟ , ಸಂಘಟಕ, ಸಾಮಾಜಿಕ ಹೋರಾಟಗಾರ ಏಸು ಪ್ರಕಾಶ್ ಕಲ್ಲುಕೊಪ್ಪ ( ಪ್ರಕಾಶ್ ಹೆಗ್ಗೋಡು) ಇನ್ನಿಲ್ಲ. 58 ವರ್ಷ ವಯಸ್ಸಿನ ಪ್ರಕಾಶ್ ಅಲ್ಪಕಾಲದ ಅನಾರೋಗ್ಯದಿಂದ ಇಂದು ಸಂಜೆ ನಿಧನರಾಗಿದ್ದಾರೆ. ಕ್ಯಾನ್ಸರ್ ಖಾಯಿಲೆಯಿಂದ ಬಳಲುತ್ತಿದ್ದಂತ ಅವರು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಇಂದು ಅವರು ಚಿಕಿತ್ಸೆ ಫಲಿಸದೇ ಅವರ ಇಂದು ನಿಧನರಾಗಿದ್ದಾರೆ. ಇಬ್ಬರು ಪುತ್ರಿಯರು, ಹಾಗೂ ಓರ್ವ ಪುತ್ರ, ಪತ್ನಿಯನ್ನು ನಟ ಪ್ರಕಾಶ್ ಹೆಗ್ಗೋಡು ಅಗಲಿದ್ದಾರೆ. ಇಂದು ನಿಧನರಾದಂತ ಅವರ ಪಾರ್ಥೀವ ಶರೀರದ ಅಂತಿಮ ದರ್ಶನಕ್ಕೆ ಭಾನುವಾರದ ನಾಳೆ ಬೆಳಗ್ಗೆ 9 ಗಂಟೆಯಿಂದ ಕಲ್ಲುಕೊಪ್ಪದ (ಪುರಪ್ಪೇಮನೆ) ಅವರ ಸ್ವಗೃಹದಲ್ಲಿ ಸಾರ್ವಜನಿಕರಿಗೆ ಅವಕಾಶ ಕಲ್ಪಿಸಲಾಗಿದೆ. ಆ ಬಳಿಕ ನಾಳೆ ಕುಟುಂಬಸ್ಥರಿಂದ ಸ್ವಗ್ರಾಹಮದಲ್ಲಿ ಅಂತ್ಯಕ್ರಿಯೆ ನೆರವೇರಲಿದೆ. ಅಂದಹಾಗೆ ಕನ್ನಡದ ಯಶ್ ನಟನೆಯ ಕಿರಾತಕ ಸೇರಿದಂತೆ…

Read More

ಬೆಂಗಳೂರು: ಮೊದಲ ಹಂತದ ಲೋಕಸಭಾ ಚುನಾವಣೆಗೆ ಇದೇ 26-04-2024ರಂದು ಮತದಾನ ನಡೆಯಲಿದೆ. ಈ ಚುನಾವಣೆಗೆ ಮಾ.28ರಿಂದ ನಾಮಪತ್ರ ಸಲ್ಲಿಕೆ ಆರಂಭಗೊಂಡಿದೆ. ಇಂದಿನವರೆಗೆ ಎಷ್ಟು ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದಾರೆ ಅಂತ ಮುಂದೆ ಓದಿ. ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಿಗೆ ದಿನಾಂಕ 26-04-2024ರಂದು ಮತದಾನ ನಡೆಯಲಿದೆ. ಉಡುಪಿ ಚಿಕ್ಕಮಗಳೂರು ಸೇರಿದಂತೆ 14 ಜಿಲ್ಲೆಗಳ ಲೋಕಸಭಾ ಕ್ಷೇತ್ರಗಳಿಗೆ ಮೊದಲ ಹಂತದಲ್ಲಿ ಮತದಾನ ನಡೆಯಲಿದೆ. ಮೊದಲ ಹಂತದ ಲೋಕಸಭಾ ಕ್ಷೇತ್ರಗಳಿಗೆ ಮಾರ್ಚ್.28ರಂದು ಅಧಿಸೂಚನೆ ಹೊರಡಿಸಲಾಗಿತ್ತು. ಅಂದಿನಿಂದಲೇ ನಾಮಪತ್ರ ಸಲ್ಲಿಕೆ ಆರಂಭಗೊಂಡಿತ್ತು. ಅಂದಿನಿಂದ ಇಂದಿನವರೆಗೆ 50 ಮಂದಿ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದಾರೆ. ಪುರುಷ ಅಭ್ಯರ್ಥಿಗಳು 44 ಆಗಿದ್ದರೇ, ಮಹಿಳಾ ಅಭ್ಯರ್ಥಿಗಳು 6 ಮಂದಿಯಾಗಿದ್ದಾರೆ. ಒಟ್ಟು 50 ಮಂದಿ ಅಭ್ಯರ್ಥಿಗಳು ಮೊದಲ ಹಂತದ ಲೋಕಸಭಾ ಚುನಾವಣೆಗೆ ನಾಮಪತ್ರವನ್ನು ಈವರೆಗೆ ಸಲ್ಲಿಸಿದ್ದಾರೆ. https://twitter.com/ceo_karnataka/status/1774080974755946571 https://kannadanewsnow.com/kannada/basavaraj-bommai-urges-people-to-vote-for-modi-to-become-pm-again/ https://kannadanewsnow.com/kannada/sslc-exam-8-41-lakh-students-appear-today-one-debar/

Read More

ಹಾವೇರಿ: ಮಾಜಿ ಮುಖ್ಯಮಂತ್ರಿ ಹಾಗೂ ಹಾವೇರಿ – ಗದಗ ಲೋಕಸಭಾ ಕ್ಷೇತ್ರದ ಅಭ್ಯರ್ಥಿಯಾದ ಬಸವರಾಜ ಬೊಮ್ಮಾಯಿ ಇಂದು ಹಾವೇರಿ ತಾಲೂಕಿನ ವಿವಿಧ ಹಳ್ಳಿಗಳಲ್ಲಿ ಬಿರುಸಿನ ಪ್ರಚಾರ ನಡೆಸಿದರು. ಇದರ ಮಧ್ಯೆಯೇ ಮಠಗಳು ಹಾಗೂ ದೇವಸ್ಥಾನಗಳಿಗೆ ಭೇಟಿ ನೀಡಿ ಆಶೀರ್ವಾದ ಪಡೆದುಕೊಂಡರು. ಶನಿವಾರ ಬೆಳಿಗ್ಗೆಯಿಂದಲೇ ಪ್ರಚಾರ ಆರಂಭಿಸಿದ ಬಸವರಾಜ ಬೊಮ್ಮಾಯಿಯವರು, ಭಾರತೀಯ ಜನತಾ ಪಕ್ಷದ ಹಾವೇರಿ ಜಿಲ್ಲೆಯ ವತಿಯಿಂದ ಏರ್ಪಡಿಸಲಾದ ಹಾವೇರಿ ವಿಧಾನಸಭಾ ಮತಕ್ಷೇತ್ರದ ಗ್ರಾಮೀಣ ಕಾರ್ಯಕರ್ತರ ಸಭೆಯಲ್ಲಿ ಭಾಗವಹಿಸಿ ಮಾತನಾಡಿದರು. ನಂತರ ಹಾವೇರಿ ತಾಲೂಕಿನ ಕನವಳ್ಳಿ ಗ್ರಾಮದಲ್ಲಿರುವ ಪಾರ್ವತಿ ಪರಮೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದುಕೊಂಡರು. ನಂತರ ಗ್ರಾಮದ ಪ್ರಮುಖ ಬೀದಿಗಳಲ್ಲಿ ರೋಡ್ ಷೋ ಮಾಡುವ ಮೂಲಕ ಮತಯಾಚನೆ ಮಾಡಿದರು. ಗುತ್ತಲ ಪಟ್ಟಣದ ಕಲ್ಮಠಕ್ಕೆ ಭೇಟಿ ನೀಡಿ ಶ್ರೀ ಗುರುಸಿದ್ದ ಮಹಾಸ್ವಾಮಿಗಳ ದರ್ಶನ ಪಡೆದು ಪ್ರಮುಖ ಬೀದಿಗಳಲ್ಲಿ ರೋಡ್ ಷೋ ಮಾಡುವ ಮೂಲಕ ಮತಯಾಚನೆಯನ್ನು ಮಾಡಿದರು. ತದನಂತರ ಹೇಮಗಿರಿ ಚನ್ನಬಸವೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ ಆಶೀರ್ವಾದ ಪಡೆದುಕೊಂಡರು. ಹಾವನೂರು…

Read More

ಬೆಂಗಳೂರು: ಬಿಜೆಪಿ ಕಳಂಕಿತರನ್ನು ಪಕ್ಷಕ್ಕೆ ಸೇರಿಸಿಕೊಂಡು ಶುದ್ಧೀಕರಣ ಮಾಡುವ ಕೆಲಸಕ್ಕೆ ಕೈ ಹಾಕಿದೆ. ಇದು ಪ್ರಜಾಪ್ರಭುತ್ವದ ಅಣಕ. ಸ್ವಯಂ ಘೋಷಿತ ವಿಶ್ವನಾಯಕ ನರೇಂದ್ರ ಮೋದಿ ಅವರು ʼನಾ ಖಾವೂಂಗಾ, ನಾ ಖಾನೇದೂಂಗಾʼ ಎಂದು ಹೇಳುತ್ತಾ ಬಂದಿದ್ದರು. ಈಗ ಅದಕ್ಕೆ ಹೊಸ ವ್ಯಾಖ್ಯಾನ ನೀಡುವ ಕಾಲ ಬಂದಿದೆ. ʼಮೋದಿ ಅವರು ತಿನ್ನಕ್ಕೆ ಬಿಡಲ್ಲ, ನುಂಗುವವರನ್ನು ಮುಟ್ಟೊದಿಲ್ಲʼ ಎಂಬುದಾಗಿ ಮಾಜಿ ಪರಿಷತ್ ಸದಸ್ಯ ರಮೇಶ್ ಬಾಬು ಹಿಗ್ಗಾಮುಗ್ಗಾ ವಾಗ್ಧಾಳಿ ನಡೆಸಿದ್ದಾರೆ. ಇಂದು ಕ್ವೀನ್ಸ್ ರಸ್ತೆಯ ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದಂತ ಅವರು, 2014 ರಿಂದ ಇಲ್ಲಿಯ ತನಕ ಇ.ಡಿ, ಐ.ಟಿ, ಸಿಬಿಐ ಸೇರಿದಂತೆ ಈ ರೀತಿಯ ಕೇಂದ್ರಿಯ ತನಿಖಾ ಸಂಸ್ಥೆಗಳನ್ನು ಬಿಜೆಪಿ ದುರುಪಯೋಗ ಪಡಿಸಿಕೊಳ್ಳುತ್ತಾ ಬಂದಿದೆ. ಶೇ 99 ರಷ್ಟು ಪ್ರಕರಣಗಳನ್ನು ವಿರೋಧ ಪಕ್ಷ ಮತ್ತು ಅದರ ನಾಯಕರ ಮೇಲೆ ಹೂಡಲಾಗಿದೆ. ಬಿಜೆಪಿಯವರ ಮೇಲೂ ಒಂದಷ್ಟು ಪ್ರಕರಣಗಳಿವೆ ಆದರೆ ಈ ಪ್ರಕರಣಗಳು ಮುಂದಕ್ಕೂ ಹೋಗುತ್ತಿಲ್ಲ, ಹಿಂದಕ್ಕೂ ಹೋಗುತ್ತಿಲ್ಲ. ನಿಂತಲ್ಲೇ ನಿಂತಿವೆ. ಪ್ರಸ್ತುತ ಬೆಂಗಳೂರು ಉತ್ತರ ಲೋಕಸಭಾ…

Read More

ಹುಬ್ಬಳ್ಳಿ: ಈಸ್ಟರ್ ಸಂಡೆಯ ನಡುವೆಯೂ ನಾಳೆ ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯದಿಂದ ಪರೀಕ್ಷೆ ನಡೆಸೋದಕ್ಕೆ ನಿರ್ಧಾರ ಕೈಗೊಳ್ಳಲಾಗಿತ್ತು. ಈ ಬಗ್ಗೆ ನಿಮ್ಮ ಕನ್ನಡ ನ್ಯೂಸ್ ನೌ ಚುನಾವಣಾ ಹೊತ್ತಲ್ಲೇ ‘ಕಾನೂನು ವಿವಿ’ ಅವಾಂತರ: ಕಾಂಗ್ರೆಸ್ ಪಕ್ಷದ ವಿರುದ್ದ ತಿರುಗಿಬಿದ್ದ ‘ಕ್ರೈಸ್ತ ಸಮುದಾಯ’ ಎಂಬುದಾಗಿ ಸುದ್ದಿಯನ್ನು ಪ್ರಕಟಿಸಲಾಗಿತ್ತು. ಈ ಸುದ್ದಿಯ ಬೆನ್ನಲ್ಲೇ ನಾಳೆ ನಿಗದಿಯಾಗಿದ್ದಂತ ಕಾನೂನು ವಿವಿ ಪರೀಕ್ಷೆ ಮುಂದೂಡಿಕೆ ಮಾಡಲಾಗಿದೆ. ಇಂದು ಈ ಕುರಿತಂತೆ ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯದ ಮೌಲ್ಯಮಾಪನದ ಕುಲಸಚಿವರು ಸುತ್ತೋಲೆ ಹೊರಡಿಸಿದ್ದಾರೆ. ಅದರಲ್ಲಿ ಕುಲಪತಿಗಳ ಆದೇಶದ ಮೇರೆಗೆ ದಿನಾಂಕ 31-03-2024ರ ಭಾನುವಾರದ ನಾಳೆ ಜರುಗಲಿರುವ ಪರೀಕ್ಷೆಗಳನ್ನು ಈಸ್ಟರ್ ಸಂಡೆ ಪ್ರಯುಕ್ತ ಮುಂದೂಡಲಾಗಿದೆ. ಈ ಪರೀಕ್ಷೆಯನ್ನು ನಡೆಸುವ ದಿನಾಂಕವನ್ನು ನಂತ್ರ ತಿಳಿಸಲಾಗುವುದು ಎಂದಿದ್ದಾರೆ. ಈ ವಿಷಯವನ್ನು ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯದ ಎಲ್ಲಾ ಸಂಯೋಜಿತ ಮಹಾವಿದ್ಯಾಲಯದ ಪ್ರಾಂಶುಪಾಲರು, ಸಿಬ್ಬಂದಿಗಳಿಗೆ ಮತ್ತು ವಿದ್ಯಾರ್ಥಿಗಳ ಗಮನಕ್ಕೆ ತರುವಂತೆ ಸೂಚಿಸಿದ್ದಾರೆ. https://kannadanewsnow.com/kannada/decision-on-my-next-move-will-be-announced-on-april-3-sumalatha-ambareesh/ https://kannadanewsnow.com/kannada/sslc-exam-8-41-lakh-students-appear-today-one-debar/

Read More

ಬೆಂಗಳೂರು: ಕೆಪಿಎಸ್ ಸಿಯಲ್ಲಿ ನೇಮಕಾತಿ ಆಯ್ಕೆ ಪಟ್ಟಿಯೇ ನಾಪತ್ತೆಯಾಗಿದೆ. ಈ ಆಯ್ಕೆ ಪಟ್ಟಿಯನ್ನು ಹುಡುಕಿಕೊಡುವಂತೆ ಪೊಲೀಸರಿಗೆ ಕೆಪಿಎಸ್ಸಿ ಅಧಿಕಾರಿಯಿಂದ ದೂರು ನೀಡಲಾಗಿದೆ. ಈ ದೂರು ಆಧರಿಸಿ, ಪೊಲೀಸರು ಎಫ್ಐಆರ್ ಕೂಡ ದಾಖಲಿಸಿಕೊಂಡಿದ್ದಾರೆ. 2016ರಲ್ಲಿ ನಡೆದ ಕೊಳಗೇರಿ ಮಂಡಳಿ ಜೂನಿಯರ್ ಇಂಜಿನಿಯರ್ ನೇಮಕಾತಿಗೆ ಸಂಬಂಧಿಸಿದಂತೆ 2018ರಲ್ಲಿ ಹೆಚ್ಚುವರಿ ಆಯ್ಕೆ ಪಟ್ಟಿ ಪ್ರಕಟಿಸಲಾಗಿತ್ತು. ಇದನ್ನು ಪ್ರಶ್ನಿಸಿ ಹೈಕೋರ್ಟ್ ಗೆ ಅಭ್ಯರ್ಥಿಗಳು ಹೋಗಿದ್ದರು. ಹೈಕೋರ್ಟ್ ಆದೇಶದಂತೆ ಆಯ್ಕೆ ಪಟ್ಟಿಯನ್ನು ತಯಾರಿಸಲಾಗಿತ್ತು. ಕೆಪಿಎಸ್ಸಿ ಗೌಪ್ಯ ಶಾಖೆ-3ರಲ್ಲಿ ಆಯ್ಕೆ ಪಟ್ಟಿಯನ್ನು ತಯಾರಿಸಲಾಗಿತ್ತು. ಜನವರಿ.22ರಂದು ಕಾರ್ಯದರ್ಶಿಯವರ ಆಪ್ತ ಶಾಖೆಯಲ್ಲಿ ಕಡತ ಸ್ವೀಕಾರ ಮಾಡಲಾಗಿತ್ತು. ಆ ಬಳಿಕ ಆ ಕಡತವೇ ನಾಪತ್ತೆಯಾಗಿದೆ ಎಂಬುದಾಗಿ ಇಂದು ಕೆಪಿಎಸ್ಸಿ ಅಧಿಕಾರಿಯಿಂದ ದೂರು ನೀಡಲಾಗಿದೆ. ಕೆಪಿಎಸ್ಸಿ ಎಲ್ಲಾ ಶಾಖೆಯಲ್ಲೂ ಹುಡುಕಾಡಿದರೂ ಕಡತ ಪತ್ತೆಯಾಗಿಲ್ಲ. ಕಡತ ಪತ್ತೆಯಾದ್ರೆ ಶಾಖೆ-2ಕ್ಕೆ ಹಿಂದಿರುಗಿಸುವಂತೆ ಜ್ಞಾಪನ ಹೊರಡಿಸಿದ್ದಂತ ಕೆಪಿಎಸ್ಸಿಗೆ ಈವರೆಗೆ ಕಡತ ಸಿಕ್ಕಿರಲಿಲ್ಲ. ಸುಮಾರು ಒಂದು ತಿಂಗಳು ಶೋಧ ನಡೆಸಿದಂತ ಅಧಿಕಾರಿ, ಸಿಬ್ಬಂದಿಗಳಿಗೆ ಕಡತ ಸಿಗದ ಕಾರಣ, ನಾಪತ್ತೆಯಾಗಿರುವಂತ ಆಯ್ಕೆಪಟ್ಟಿಯ ಕಡತದ…

Read More