Subscribe to Updates
Get the latest creative news from FooBar about art, design and business.
Author: kannadanewsnow09
ಬೆಂಗಳೂರು: ರಾಜ್ಯ ಸರ್ಕಾರದ ( Karnataka Government ) ಗ್ಯಾರಂಟಿ ಯೋಜನೆಗಳಲ್ಲಿ ಗೃಹ ಜ್ಯೋತಿ ಯೋಜನೆಯೂ ಒಂದಾಗಿದೆ. ಈ ಯೋಜನೆಯ ಅಡಿಯಲ್ಲಿ ನೋಂದಾಯಿತ ಜನರಿಗೆ 200 ಯೂನಿಟ್ ವರೆಗೆ ಉಚಿತ ವಿದ್ಯುತ್ ಸೌಲಭ್ಯ ದೊರೆಯುತ್ತಿದೆ. ಈಗಾಗಲೇ ಈ ಗೃಹ ಜ್ಯೋತಿ ಯೋಜನೆಗೆ ( Gruha Jyothi Scheme ) ರಾಜ್ಯದ ಕೋಟ್ಯಂತರ ಜನರು ನೋಂದಾಯಿಸಿಕೊಂಡಿದ್ದಾರೆ. ಇನ್ಮುಂದೆ ನೋಂದಾಯಿಸಿಕೊಳ್ಳೋರಿಗೆ ಸೇವಾ ಸಿಂಧು ಪೋರ್ಟಲ್ ಬದಲಾಗಿ ಮತ್ತೊಂದು ಪೋರ್ಟಲ್ ನಲ್ಲಿ ನೋಂದಾಯಿಸಿಕೊಳ್ಳೋದಕ್ಕೆ ಅವಕಾಶ ನೀಡಲಾಗಿದೆ. ಈ ಸಂಬಂಧ ರಾಜ್ಯ ಸರ್ಕಾರದಿಂದ ಮಾಹಿತಿ ಬಿಡುಗಡೆ ಮಾಡಿದ್ದು, ಗೃಹ ಜ್ಯೋತಿ” ಯೋಜನೆಯಡಿ ರಾಜ್ಯದಲ್ಲಿನ ಪ್ರತಿ ಮನೆಗೆ ಪ್ರತಿ ತಿಂಗಳಿಗೆ ಗರಿಷ್ಠ 200 ಯೂನಿಟ್ಗಳವರೆಗಿನ ಬಳಕೆಯ ಮಿತಿಯಲ್ಲಿ ಪ್ರತಿ ಗ್ರಾಹಕರ ಮಾಸಿಕ ಸರಾಸರಿ ಬಳಕೆಯ (ಆರ್ಥಿಕ ವರ್ಷ 2022-23ರ ಬಳಕೆಯ ಆಧಾರದನ್ವಯ) ಯೂನಿಟ್ಗಳ ಮೇಲೆ ಶೇ.10ರಷ್ಟು ಹೆಚ್ಚಿನ ಬಳಕೆಯ ಮಿತಿಯನ್ನು ಅನುಮತಿಸಿ, ಅದಕ್ಕನುಗುಣವಾಗಿ ವಿದ್ಯುತ್ ಬಿಲ್ಲಿನ ಮೊತ್ತವನ್ನು ಉಚಿತವಾಗಿ ಒದಗಿಸಲು; ಹಾಗೂ 200 ಯೂನಿಟ್ಗಳ ಬಳಕೆಯನ್ನು ಮೀರಿದ ಗ್ರಾಹಕರು ಪೂರ್ಣ…
ಉತ್ತರಾಖಂಡ: ಉತ್ತರಾಖಂಡ ವಿಧಾನಸಭೆ ಬುಧವಾರ ಐತಿಹಾಸಿಕ ಏಕರೂಪ ನಾಗರಿಕ ಸಂಹಿತೆ (Uniform Civil Code -UCC) ಮಸೂದೆಯನ್ನು ಅಂಗೀಕರಿಸಿದೆ. ಇದಕ್ಕೂ ಮುನ್ನ ಮಂಗಳವಾರ, ಉತ್ತರಾಖಂಡ ಸರ್ಕಾರವು ವಿಧಾನಸಭೆಯಲ್ಲಿ ಮಸೂದೆಯನ್ನು ಮಂಡಿಸಿತು. ಸ್ವಾತಂತ್ರ್ಯದ ನಂತರ ಯಾವುದೇ ರಾಜ್ಯದಲ್ಲಿ ಇಂತಹ ಮೊದಲ ಕ್ರಮವಾಗಿದೆ. ಧರ್ಮವನ್ನು ಲೆಕ್ಕಿಸದೆ ಎಲ್ಲಾ ನಾಗರಿಕರಿಗೆ ಏಕರೂಪದ ಮದುವೆ, ವಿಚ್ಛೇದನ, ಭೂಮಿ, ಆಸ್ತಿ ಮತ್ತು ಉತ್ತರಾಧಿಕಾರ ಕಾನೂನುಗಳನ್ನು ಸ್ಥಾಪಿಸುವ ಉದ್ದೇಶದಿಂದ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಈ ಮಸೂದೆಯನ್ನು ಮಂಡಿಸಿದರು. https://twitter.com/ANI/status/1755213277494235255 ಮಸೂದೆಯ ಬಗ್ಗೆ ಸಿಎಂ ಧಾಮಿ ಹೇಳಿದ್ದೇನು? ಇದಕ್ಕೂ ಮುನ್ನ ಇಂದು, ಮಸೂದೆಯ ಬಗ್ಗೆ ವಿವರವಾದ ಚರ್ಚೆಗಳು ನಡೆದವು. ವಿಧಾನಸಭೆಯಲ್ಲಿ ಮಾತನಾಡಿದ ಸಿಎಂ ಧಾಮಿ, ಇದು ಸಾಮಾನ್ಯ ಮಸೂದೆಯಲ್ಲ. “ಭಾರತವು ವಿಶಾಲ ರಾಷ್ಟ್ರವಾಗಿದೆ ಮತ್ತು ಇದು ರಾಜ್ಯಗಳಿಗೆ ಗಮನಾರ್ಹ ಪ್ರಗತಿ ಸಾಧಿಸಲು ಮತ್ತು ಇಡೀ ದೇಶದ ಮೇಲೆ ಪ್ರಭಾವ ಬೀರುವ ಪೂರ್ವನಿದರ್ಶನಗಳನ್ನು ಸ್ಥಾಪಿಸಲು ಸಾಕಷ್ಟು ಅವಕಾಶಗಳನ್ನು ಒದಗಿಸುತ್ತದೆ ಎಂದರು. ಇತಿಹಾಸವನ್ನು ರಚಿಸಲು ಮತ್ತು ಇಡೀ ರಾಷ್ಟ್ರಕ್ಕೆ ಮಾರ್ಗದರ್ಶಿ ಮಾರ್ಗವನ್ನು ಒದಗಿಸಲು…
ಬೆಂಗಳೂರು: ನಾಳೆ ಬೆಂಗಳೂರಿನ ವಿಧಾನಸೌಧದ ಮುಂಬಾಗದಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ರಾಜ್ಯ ಮಟ್ಟದ ಜನಸ್ಪಂದನ ಕಾರ್ಯಕ್ರಮವನ್ನು ನಡೆಸಲಿದ್ದಾರೆ. ಈ ಹಿನ್ನಲೆಯಲ್ಲಿ ಬೆಂಗಳೂರಲ್ಲಿ ಸಂಚಾರ ಮಾರ್ಗ ಬದಲಾವಣೆಯನ್ನು ಮಾಡಲಾಗಿದೆ. ಅದೇನು ಅಂತ ಮುಂದೆ ಓದಿ. ಈ ಕುರಿತಂತೆ ಬೆಂಗಳೂರು ನಗರ ಸಂಚಾರ ಪೊಲೀಸರು ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿದ್ದು, ಮುಖ್ಯಮಂತ್ರಿಗಳು ದಿನಾಂಕ: 08.02.2024 ರಂದು ವಿಧಾನ ಸೌಧದಲ್ಲಿ ಜನಸ್ಪಂದನ ಕಾರ್ಯಕ್ರವನ್ನು ನಡೆಸುತ್ತಿದ್ದು, ಈ ಹಿನ್ನೆಲೆಯಲ್ಲಿ ಕಾರ್ಯಕ್ರಮದ ಪೂರ್ವ ತಯಾರಿ ಸಲುವಾಗಿ ದಿ. 07.02.2024 ರಂದು ಮತ್ತು ಕಾರ್ಯಕ್ರಮದ ದಿನ ದಿ. 08.02.2024 ಗಳಂದು ವಿಧಾನ ಸೌಧದ ಆವರಣದಲ್ಲಿರುವ ಕೆಂಗಲ್ ಹನುಮಂತಯ್ಯ ವೃತ್ತದಿಂದ ಗೇಟ್ ನಂಬರ್-04 ರವರಗೆ ಸಂಚಾರವನ್ನು ನಿಷೇಧಿಸಲಾಗಿರುತ್ತದೆ ಎಂದು ತಿಳಿಸಿದೆ. ದಿ. 07.02.2024 ಮತ್ತು 08.02.2024 ಗಳಂದು ವಾಹನ ಸಂಚಾರಕ್ಕೆ ಪರ್ಯಾಯ ಮಾರ್ಗ 1. ವಾಹನ ಸಂಚಾರಕ್ಕೆ ಪರ್ಯಾಯ ಮಾರ್ಗವಾಗಿ ಡಿ. ದೇವರಾಜು ಅರಸು ರಸ್ತೆಯಲ್ಲಿ ಬರುವ ವಾಹನಗಳು ಎ.ಜಿ.ಎಸ್. ವೃತ್ತ ಮೂಲಕ ಎಂ.ಎಸ್. ಬಿಲ್ಡಿಂಗ್ ಒಳಭಾಗದಿಂದ ಪ್ರವೇಶಿಸಿ ಡಾ|| ಬಿ.ಆರ್. ಅಂಬೇಡ್ಕರ್…
ಬೆಂಗಳೂರು: ಹಳಿ ನಿರ್ವಹಣಾ ಕಾಮಗಾರಿ ಹಿನ್ನಲೆಯಲ್ಲಿ ನೈರುತ್ಯ ರೈಲ್ವೆಯಿಂದ ವಿವಿಧ ರೈಲುಗಳನ್ನು ಭಾಗಶಃ ರದ್ದುಗೊಳಿಸಲಾಗಿದೆ. I. ಹಳಿ ನಿರ್ವಹಣಾ ಕಾಮಗಾರಿ: ರೈಲುಗಳ ಭಾಗಶಃ ರದ್ದು ದೇವನೂರು, ಬಳ್ಳೇಕೆರೆ ಹಾಲ್ಟ್ ಮತ್ತು ಬೀರೂರು ನಿಲ್ದಾಣದ ಯಾರ್ಡ್ ಗಳಲ್ಲಿ ಅಗತ್ಯ ಹಳಿ ನಿರ್ವಹಣಾ ಕಾಮಗಾರಿ ಸಲುವಾಗಿ ಈ ಕೆಳಗಿನ ರೈಲುಗಳನ್ನು ಭಾಗಶಃ ರದ್ದುಪಡಿಸಲಾಗುತ್ತಿದೆ. 1. ಫೆಬ್ರವರಿ 12, 20, 25, ಮಾರ್ಚ್ 4, 11, 18, 25 ಮತ್ತು ಏಪ್ರಿಲ್ 1, 2024 ರಂದು ರೈಲು ಸಂಖ್ಯೆ 16214 ಎಸ್ಎಸ್ಎಸ್ ಹುಬ್ಬಳ್ಳಿ-ಅರಸೀಕೆರೆ ಡೈಲಿ ಎಕ್ಸ್ ಪ್ರೆಸ್ ರೈಲು ಬೀರೂರು ಮತ್ತು ಅರಸೀಕೆರೆ ನಿಲ್ದಾಣಗಳ ನಡುವೆ ಭಾಗಶಃ ರದ್ದಾಗಲಿದೆ. ಈ ರೈಲು ಅರಸೀಕೆರೆ ನಿಲ್ದಾಣದ ಬದಲು ಬೀರೂರು ನಿಲ್ದಾಣದಲ್ಲಿ ಕೊನೆಗೊಳ್ಳಲಿದೆ. 2. ಫೆಬ್ರವರಿ 13, 21, 26, ಮಾರ್ಚ್ 5, 12, 19, 26 ಮತ್ತು ಏಪ್ರಿಲ್ 2, 2024 ರಂದು ರೈಲು ಸಂಖ್ಯೆ 16213 ಅರಸೀಕೆರೆ-ಎಸ್ಎಸ್ಎಸ್ ಹುಬ್ಬಳ್ಳಿ ಡೈಲಿ ಎಕ್ಸ್ ಪ್ರೆಸ್ ರೈಲು ಅರಸೀಕೆರೆ-ಬೀರೂರು…
ಬೆಂಗಳೂರು: ರಾಜ್ಯ ಸರ್ಕಾರಿ ನೌಕರರು ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆ ತೇರ್ಗಡೆ ಹೊಂದೋದು ಕಡ್ಡಾಯವಾಗಿದೆ. ಈ ಪರೀಕ್ಷೆ ಪಾಸ್ ಮಾಡಿದ್ರೆ ಮಾತ್ರವೇ ಬಡ್ತಿ ಸೇರಿದಂತೆ ವಿವಿಧ ಸವಲತ್ತುಗಳನ್ನು ಪಡೆಯೋದಕ್ಕೆ ಸಾಧ್ಯವಾಗುತ್ತದೆ. ಇದೀಗ ರಾಜ್ಯ ಸರ್ಕಾರಿ ನೌಕರರಿಗೆ ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆ ಬಗ್ಗೆ ಸರ್ಕಾರ ಮಹತ್ವದ ಮಾಹಿತಿಯನ್ನು ನೀಡಿದೆ. ಅದೇನು ಅಂತ ಮುಂದೆ ಓದಿ. ಈ ಕುರಿತಂತೆ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಅಧಿಸೂಚನೆ ಹೊರಡಿಸಿದ್ದು, ಕರ್ನಾಟಕ ಸರ್ಕಾರವು ರಚಿಸಿರುವ ಕರ್ನಾಟಕ ನಾಗರಿಕ ಸೇವಾ ನಿಯಮಗಳು 2012ಕ್ಕೆ ತಿದ್ದುಪಡಿ ಮಾಡುವ ಸಲುವಾಗಿ ಈ ಕೆಳಗಿನ ನಿಯಮಗಳ ಕರಡನ್ನು, ಅಧಿನಿಯಮದ 3ನೇ ಪ್ರಕರಣದ 2ನೇ ಉಪ ಪ್ರಕರಣದ ಎ ಖಂಡದ ಮೂಲಕ ಅಗತ್ಯಪಡಿಸಲಾದಂತೆ ಬಾಧಿತರಾಗುವ ಸಂಭವಿರುವ ಎಲ್ಲಾ ವ್ಯಕ್ತಿಗಳ ಮಾಹಿತಿಗಾಗಿ ಪ್ರಕಟಿಸಲಾಗಿದೆ ಎಂದಿದ್ದಾರೆ. ಈ ಕರಡನ್ನು ಅಧಿಕೃತ ರಾಜ್ಯಪತ್ರದಲ್ಲಿ ಪ್ರಕಟಗೊಂಡ ದಿನಾಂಕದಿಂದ ಹದಿನೈದು ದಿನಗಳ ನಂತ್ರ ಪರಿಗಣನೆಗೆ ತೆಗೆದುಕೊಳ್ಳಲಾಗುವುದೆಂದು ಸೂಚಿಸಲಾಗಿದೆ. ಈ ಕರಡಿನ ಬಗ್ಗೆ ಯಾವುದೇ ಆಕ್ಷೇಪಣೆ ಅಥವಾ ಸಲಹೆಯನ್ನು…
ಊಟಿ: ತಮಿಳುನಾಡಿನ ಊಟಿಯಲ್ಲಿ ನಿರ್ಮಾಣ ಹಂತದ ಕಟ್ಟಡ ಕುಸಿದು ಆರು ಕಾರ್ಮಿಕರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಪ್ರಸ್ತುತ ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ. ಲವ್ ಡೇಲ್ ಬಳಿ ನಡೆದ ಘಟನೆಯಲ್ಲಿ ಇನ್ನೂ ಇಬ್ಬರು ಕಾರ್ಮಿಕರು ಗಂಭೀರವಾಗಿ ಗಾಯಗೊಂಡಿದ್ದು, ಒಬ್ಬರು ಕಾಣೆಯಾಗಿದ್ದಾರೆ ಎಂದು ಎಎನ್ಐ ಸುದ್ದಿ ಸಂಸ್ಥೆ ವರದಿ ಮಾಡಿದೆ. ಗಾಯಾಳುಗಳನ್ನು ಊಟಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಬಗ್ಗೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ. https://kannadanewsnow.com/kannada/bjp-protest/ https://kannadanewsnow.com/kannada/breaking-delhi-delhi-liquor-scam-court-summons-cm-kejriwal-to-appear-before-it-by-february-17/
ಬೆಂಗಳೂರು: ದೆಹಲಿ ಚಲೋ ವಿರೋಧಿಸಿ ವಿಧಾನಸೌಧದ ಬಳಿಯಲ್ಲಿ ಬಿಜೆಪಿ ಪ್ರತಿಭಟನೆ ನಡೆಸುತ್ತಿದ್ದರೇ, ಇದನ್ನು ವಿರೋಧಿಸಿ ಯುವ ಕಾಂಗ್ರೆಸ್ ನಿಂದ ರಾಜ್ಯ ಬಿಜೆಪಿ ಕಚೇರಿಯಲ್ಲಿ ಪ್ರತಿಭಟನೆ ನಡೆಸಲಾಗುತ್ತಿದೆ. ಇದೀಗ ರಾಜ್ಯ ಬಿಜೆಪಿ ಕಚೇರಿ ಮುಂದೆ ಹೈಡ್ರಾಮಾವೇ ನಡೆಯುತ್ತಿದ್ದು, ಕಚೇರಿಗೆ ಮುತ್ತಿಗೆಗೆ ಯತ್ನಿಸಿದಂತ ಕಾಂಗ್ರೆಸ್ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬೆಂಗಳೂರಿನ ಮಲ್ಲೇಶ್ವರಂ ಕಚೇರಿಗೆ ಇಂದು ಕರ್ನಾಟಕ ಯುವ ಕಾಂಗ್ರೆಸ್ ನಿಂದ ಮುತ್ತಿಗೆ ಪ್ರತಿಭಟನೆ ನಡೆಸಲಾಯಿತು. ಕಾಂಗ್ರೆಸ್ ಕಾರ್ಯಕರ್ತರಿಂದ ಮುತ್ತಿಗೆ ಹಾಕೋದಕ್ಕೆ ಯತ್ನಿಸಿದ್ರೇ, ಅವರನ್ನು ತಡೆಯೋದಕ್ಕೆ ಬಿಜೆಪಿ ಕಾರ್ಯಕರ್ತರು ಹನುಮಧ್ವಜ ಹಿಡಿದು, ಮೋದಿ ಪರ ಘೋಷಣೆಗಳನ್ನು ಕೂಗಿದಂತ ಘಟನೆ ನಡೆದಿದೆ. ಬಿಜೆಪಿ ಹಾಗೂ ಕಾಂಗ್ರೆಸ್ ಕಾರ್ಯಕರ್ತರನ್ನು ತಡೆಯೋದಕ್ಕೆ ಸ್ಥಳದಲ್ಲಿ ಇದ್ದಂತ ಪೊಲೀಸರು ಹರಸಾಹಸ ನಡೆಸಿದ್ದಾರೆ. ಕೊನೆಗೆ ರಾಜ್ಯ ಬಿಜೆಪಿ ಕಚೇರಿಗೆ ಮುತ್ತಿಗೆ ಹಾಕೋದಕ್ಕೆ ಯತ್ನಿಸಿದಂತ ಯುವ ಕಾಂಗ್ರೆಸ್ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. https://kannadanewsnow.com/kannada/congress-to-split-within-a-month-of-modi-becoming-pm-for-third-time-bommai/ https://kannadanewsnow.com/kannada/breaking-delhi-delhi-liquor-scam-court-summons-cm-kejriwal-to-appear-before-it-by-february-17/
ಬೆಂಗಳೂರು: ನರೇಂದ್ರ ಮೋದಿಯವರು ಮೂರನೆ ಬಾರಿ ಪ್ರಧಾನಿಯಾದ ಒಂದು ತಿಂಗಳಲ್ಲಿ ಕಾಂಗ್ರೆಸ್ ದೇಶಾದ್ಯಂತ ಇಬ್ಬಾಗವಾಗಲಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭವಿಷ್ಯ ನುಡಿದಿದ್ದಾರೆ. ರಾಜ್ಯ ಸರ್ಕಾರದ ವೈಫಲ್ಯ ಖಂಡಿಸಿ ಬಿಜೆಪಿ ವತಿಯಿಂದ ಏರ್ಪಡಿಸಿದ್ದ ಪ್ರತಿಭಟನೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು ಕರ್ನಾಟಕದ ಇತಿಹಾಸದಲ್ಲಿ ಇಷ್ಟು ದೊಡ್ಡ ನಾಟಕ ಮಾಡುವ ಸರ್ಕಾರ ಇನ್ನೊಂದಿಲ್ಲ. ಸಿದ್ದರಾಮಯ್ಯ ಎರಡನೇ ಬಾರಿ ಸಿಎಂ ಆದ ಮೇಲೆ ತಮ್ಮ ತತ್ವ ಸಿದ್ದಾಂತ ಗಾಳಿಗೆ ತೂರಿ ತಮ್ಮ ಸ್ಥಾನ ಉಳಿಸಿಕೊಳ್ಳಲು ಹೋರಾಟ ಮಾಡುತ್ತಿದ್ದಾರೆ ಎಂದು ಹೇಳಿದರು. ಅನ್ಯಾಯಕ್ಕೆ ಸಿದ್ದರಾಮಯ್ಯ ಕಾರಣ ರಾಜ್ಯದಲ್ಲಿ ಯಾವುದೇ ಅಭಿವೃದ್ಧಿ ಕಾಮಗಾರಿ ಆರಂಭವಾಗಿಲ್ಲ. ಬರಗಾಲ ಬಿದ್ದಿದೆ ಬರ ಪರಿಹಾರ ನೀಡಿಲ್ಲ. ಯಾವ ನೈತಿಕತೆ ಇಟ್ಟುಕೊಂಡು ದೆಹಲಿಯಲ್ಲಿ ಪ್ರತಿಭಟನೆ ಮಾಡಿದ್ದಾರೆ. ನಾಚಿಕೆಯಾಗಬೇಕು ಇವರಿಗೆ. ಯುಪಿಎ ಸರ್ಕಾರದ ಅವಧಿಯಲ್ಲಿ ರಾಜ್ಯಕ್ಕೆ ಎಷ್ಟು ಅನುದಾನ ಬಂದಿದೆ. ಎನ್ ಡಿಎ ಅವಧಿಯಲ್ಲಿ ಎಷ್ಟು ಬಂದಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಲಿ, ಯುಪಿಎ ಅವಧಿಯಲ್ಲಿ 82 ಸಾವಿರ ಕೋಟಿ ಮಾತ್ರ ಬಂದಿದೆ. ಮೋದಿ…
ಪೂರ್ವಜರ ಆರಾಧನೆಗೆ ಅಮವಾಸ ಪ್ರಮುಖ ದಿನ. ಇಲ್ಲಿಯವರೆಗೆ ಅಮಾವಾಸ್ಯೆಯ ಬಗ್ಗೆ ನಾವು ಹೀಗೆಯೇ ಯೋಚಿಸಿದ್ದೇವೆ. ಅಮಾವಾಸ್ಯೆ ಬರಬಹುದಾದ ದಿನವನ್ನು ಅವಲಂಬಿಸಿ, ಫಲಿತಾಂಶಗಳು ಬದಲಾಗುತ್ತವೆ, ವಿಶೇಷವಾಗಿ ಶುಕ್ರವಾರದಂದು ಬಂದರೆ, ಆ ದಿನ ನೀವು ದೇವಿಗೆ ಪೂಜೆಯನ್ನು ಸೇರಿಸಬಹುದು. ಶ್ರೀ ಸಿಗಂದೂರು ಚೌಡೇಶ್ವರಿ ಜ್ಯೋತಿಷ್ಯ ಪೀಠ ನಂ 1ಕೇರಳ ಕೊಳ್ಳೇಗಾಲದ ಮಹಾ ಮಾಂತ್ರಿಕ ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ತಂತ್ರಿ ನಂ:- 9686268564 ನಂ 1ವಶೀಕರಣ ಸ್ಪೆಷಲಿಸ್ಟ್ ಒಂದು ಕರೆಯಲ್ಲಿ ಪರಿಹಾರ ತಿಳಿಸುತ್ತಾರೆ ತಾವು ಎಷ್ಟೋ ಜ್ಯೋತಿಷ್ಯರಲ್ಲಿ ಕೇಳಿಯು ಪರಿಹಾರ ಸಿಗದೇ ಮನನೊಂದಿದ್ದರೆ ಪರಿಹಾರ ನಿಮ್ಮ ಸಮಸ್ಯೆಗಳಾದ ಅತ್ತೆ-ಸೊಸೆ ಕಿರಿಕಿರಿ, ಪ್ರೀತಿಯಲ್ಲಿ ನಂಬಿ ಮೋಸ, ಇಷ್ಟ ಪಟ್ಟವರು ನಿಮ್ಮಂತೆ ಆಗಲು, ಗಂಡ ಹೆಂಡತಿ ಕಿರಿಕಿರಿ, ಮದುವೆಯಲ್ಲಿ ಅಡೆತಡೆ, ಸಂತಾನ ಸಮಸ್ಯೆ, ಮಕ್ಕಳು ಹೇಳಿದ ಮಾತು ಕೇಳದಿದ್ದರೆ, ವಿದ್ಯಾಭ್ಯಾಸದಲ್ಲಿ ಕಿರಿಕಿರಿ, ಆರೋಗ್ಯ ಸಮಸ್ಯೆ, ಆಸ್ತಿಯಲ್ಲಿ ಕಿರಿಕಿರಿ, ಮಾಟ ಮಂತ್ರ, ಶತ್ರು ನಾಶ, ಶತ್ರು ವಶೀಕರಣ,ಭಾನಮತಿ ಕೃತಿಮ ವಶೀಕರಣ ಇನ್ನೂ ನಿಮ್ಮ ಜೀವನದ ಗುಪ್ತ ಘೋರ ನಿಗೂಢ ಸಮಸ್ಯೆಗಳಿಗೆ ಚೌಡಮ್ಮ ಪೂಜಾ…
ಬೆಂಗಳೂರು: ಒಂದು ರೀತಿಯಲ್ಲಿ ಅಘೋಷಿತ ತುರ್ತು ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ಟೀಕಿಸಿದರು. ನಗರದಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ವಿಧಾನಸೌಧದ ಮಹಾದ್ವಾರಕ್ಕೆ ಬೀಗ ಹಾಕಿದ್ದಾರೆ. ಶಾಸಕರು ವಿಧಾನಸೌಧದ ಒಳಗೆ ಹೋಗಲು ಅವಕಾಶ ಕೊಡುವುದಿಲ್ಲ. ಯಾಕೆ ನಮಗೆ ಅಧಿಕಾರ ಇಲ್ಲವೇ ಹಾಗಿದ್ದರೆ ಎಂದು ಪ್ರಶ್ನಿಸಿದರು. ರಾಜ್ಯದಲ್ಲಿ ನಮ್ಮ ಕಾರ್ಯಕರ್ತರು ಹೋರಾಟ ಮಾಡಿದರೆ ಅವರ ಮೇಲೆ ಲಾಠಿಪ್ರಹಾರ ಮಾಡುತ್ತಾರೆ. ಒಟ್ಟಾರೆಯಾಗಿ ಅಧಿಕಾರದ ಅಮಲಿನಲ್ಲಿ ಇರುವ ಈ ರಾಜ್ಯ ಸರಕಾರವು ದರ್ಪದಿಂದ ನಡೆದುಕೊಳ್ಳುತ್ತಿದೆ. ಲೋಕಸಭೆ ಚುನಾವಣೆ ಹತ್ತಿರ ಬರುತ್ತಿದ್ದಂತೆ ಇವರಿಗೆ ಗಾಬರಿ ಆಗುತ್ತಿದೆ. ನರೇಂದ್ರ ಮೋದಿಯವರ ಹೆಸರು ಕೇಳಿದರೆ ಗಾಬರಿ ಆಗುತ್ತದೆ. ಜೈಶ್ರೀರಾಮ್ ಎಂದು ಕೂಗಿದರೂ ಕಾಂಗ್ರೆಸ್ನವರು ಪ್ರಜ್ಞೆ ತಪ್ಪಿ ಬೀಳುತ್ತಿದ್ದಾರೆ ಎಂದು ವಿಶ್ಲೇಷಿಸಿದರು. ಒಟ್ಟಾರೆಯಾಗಿ ಇವತ್ತು ರಾಜ್ಯದಲ್ಲಿರುವ ಕಾಂಗ್ರೆಸ್ ಸರಕಾರ, ಮುಖ್ಯಮಂತ್ರಿ ಸಿದ್ದರಾಮಯ್ಯನವರು ಬಿಜೆಪಿ ಮುಖಂಡರ ಮೇಲೆ, ಕಾರ್ಯಕರ್ತರ ಮೇಲೆ ದಬ್ಬಾಳಿಕೆ ಮಾಡುತ್ತಿರುವುದು ಖಂಡನೀಯ ಎಂದರು. ರಾಜ್ಯದ ಅಧ್ಯಕ್ಷನಾಗಿ ಇದನ್ನು ಖಂಡಿಸುತ್ತೇನೆ. ಇವತ್ತು…