Author: ವಸಂತ ಬಿ ಈಶ್ವರಗೆರೆ

ವಸಂತ ಬಿ ಈಶ್ವರಗೆರೆ (Vasantha B Eshwaragere) ಅವರು ಕರ್ನಾಟಕದ ಪತ್ರಕರ್ತರು ಮತ್ತು ಕವಿ. ಉದಯ ನ್ಯೂಸ್, ಟಿವಿ5 ಕನ್ನಡ ಸೇರಿದಂತೆ ವಿವಿಧ ಸುದ್ದಿ ಮಾಧ್ಯಮಗಳಲ್ಲಿ ಸುಮಾರು 15 ವರ್ಷಗಳ ಅನುಭವವನ್ನು ಹೊಂದಿದ್ದಾರೆ. ಪ್ರಸ್ತುತ ಅವರು Kannada News Now ಡಿಜಿಡಿಲ್‌ ಮಾಧ್ಯಮದಲ್ಲಿ ಸಂಪಾದಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಇವರು ತಾಜಾ ಸುದ್ದಿ, ಸಾಹಿತ್ಯ, ಸಾಮಾಜಿಕ ವರದಿಗಾರಿಕೆ, ನ್ಯಾಯಾಂಗ ಸಂಬಂಧಿತ ವರದಿ ಮತ್ತು ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿದ ಸುದ್ದಿಗಳ ವರದಿಯಲ್ಲಿ ಸಕ್ರಿಯರಾಗಿದ್ದಾರೆ. ಗುಡವಿ ಪಕ್ಷಿಧಾಮದಂತಹ ಪ್ರವಾಸಿ ತಾಣಗಳ ಕುರಿತು ಲೇಖನಗಳನ್ನು ಬರೆದಿದ್ದಾರೆ.

ಹುಬ್ಬಳ್ಳಿ: ರಾಜ್ಯದಲ್ಲಿ ಮತ್ತೊಂದು ಪತ್ನಿ ಕಿರುಕುಳಕ್ಕೆ ಆತ್ಮಹತ್ಯೆ ಕೇಸ್ ಎನ್ನುವಂತೆ ಪತ್ನಿಯ ಕಿರುಕುಳ ತಾಳಲಾರದೇ ಪತಿಯೊಬ್ಬ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿರುವಂತ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ. ಹುಬ್ಬಳ್ಳಿಯ ಚಾಮುಂಡೇಶ್ವರಿ ನಗರದಲ್ಲಿ ಪೀಟಲ್ ಎಂಬಾತನೇ ಪತ್ನಿ ಕಿರುಕುಳ ತಾಳಲಾರದೇ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿಯಾಗಿದ್ದಾರೆ. ಕೆಲ ದಿನಗಳಿಂದ ಪೀಟರ್ ಹಾಗೂ ಪತ್ನಿ ಪಿಂಕಿ ನಡುವೆ ಜಗಳ ಆಗಿತ್ತು. ಇದರಿಂದ ಬೇಸತ್ತು ಪೀಟರ್ ಡೆತ್ ನೋಟ್ ಬರೆದಿಟ್ಟು ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಡೆತ್ ನೋಟ್ ನಲ್ಲಿ ಪತ್ನಿ ಪಿಂಕಿ ಟಾರ್ಟರ್ ನಿಂದ ನಾನು ಸಾಯುತ್ತಾ ಇದ್ದೇನೆ. ಡ್ಯಾಡಿ ಆಯಾಮ್ ಸಾರಿ. ಪಿಂಕಿ ಇಸ್ ಕಿಲ್ಲಿಂಗ್ ಮೀ, ಸೀ ವಾಂಟ್ ಮೈ ಡೆತ್ ಎಂಬುದಾಗಿ ಬರೆಯಲಾಗಿದೆ. ಈ ಸಂಬಂಧ ಹುಬ್ಬಳ್ಳಿಯ ಅಶೋಕನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. https://kannadanewsnow.com/kannada/fire-breaks-out-at-electric-bike-showroom-in-bengaluru-over-30-bikes-gutted/ https://kannadanewsnow.com/kannada/shocking-class-8-student-dies-after-collapsing-due-to-low-bp-in-hostel/

Read More

ಬೆಂಗಳೂರು: ನಗರದ ರಾಜಾಜಿನಗರದ ರಾಜ್ ಕುಮಾರ್ ರಸ್ತೆಯಲ್ಲಿರುವಂತ ಎಲೆಕ್ಟ್ರಿಕ್ ಬೈಕ್ ಶೋರೂಂನಲ್ಲಿ ಆಕಸ್ಮಿಕ ಬೆಂಕಿ ಅವಘಡ ಉಂಟಾಗಿದೆ. ಇದರಿಂದಾಗಿ 30ಕ್ಕೂ ಹೆಚ್ಚು ಎಲೆಕ್ಟ್ರಿಕ್ ಬೈಕ್ ಗಳು ಬೆಂಕಿಗೆ ಆಹುತಿಯಾಗಿರುವುದಾಗಿ ತಿಳಿದು ಬಂದಿದೆ. ಬೆಂಗಳೂರಿನ ಹೃದಯ ಭಾಗದ ರಾಜಾಜಿನಗರದ ರಾಜ್ ಕುಮಾರ್ ರಸ್ತೆಯಲ್ಲಿರುವಂತ ಒಕಿನೋವಾ ಎಲೆಕ್ಟ್ರಿಕ್ ಬೈಕ್ ಶೋರೂಂನಲ್ಲಿ ಭೀಕರ ಅಗ್ನಿ ಅವಘಡ ಉಂಟಾಗಿದೆ. ಬೆಂಕಿ ಕಾಣಿಸಿಕೊಂಡ ತಕ್ಷಣ ಸಿಬ್ಬಂದಿಗಳು ಹೊರ ಓಡಿ ಬಂದಿದ್ದಾರೆ. ಹೀಗಾಗಿ ಒಳಗೆ ಯಾರೂ ಇಲ್ಲ ಎಂಬುದಾಗಿ ಹೇಳಲಾಗುತ್ತಿದೆ. ವಿಷಯ ತಿಳಿದು ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ಹಾಗೂ ರಾಜಾಜಿನಗರ ಠಾಣೆಯ ಪೊಲೀಸರು ಆಗಮಿಸಿದ್ದಾರೆ. ಇದೀಗ ಅಗ್ನಿಶಾಮಕ ಸಿಬ್ಬಂದಿಯಿಂದ ಬೆಂಕಿ ನಂದಿಸುವ ಕಾರ್ಯ ಮುಂದುವರೆದಿದೆ. ಬೆಂಕಿಗೆ ನಿಖರ ಕಾರಣ ತಿಳಿದು ಬಂದಿಲ್ಲ. https://kannadanewsnow.com/kannada/2-year-old-girl-dies-after-carrot-stuck-in-throat/ https://kannadanewsnow.com/kannada/shocking-class-8-student-dies-after-collapsing-due-to-low-bp-in-hostel/

Read More

ಚೆನ್ನೈ: ಬೇಯಿಸದ ಕ್ಯಾರೆಟ್ ತಿನ್ನುವಾಗ ಉಸಿರುಗಟ್ಟಿ 2 ವರ್ಷದ ಬಾಲಕಿ ಲಿತಿಶಾ ಸಾವನ್ನಪ್ಪಿದ ದುರಂತ ಘಟನೆ ಚೆನ್ನೈನ ವಾಷರ್ಮನ್ ಪೇಟ್ ಪ್ರದೇಶದಲ್ಲಿ ನಡೆದಿದೆ. ಮಗುವಿನ ಸಾವು ಕುಟುಂಬದಲ್ಲಿ ಆಘಾತಗಳನ್ನು ಉಂಟುಮಾಡಿದೆ. ಪೋಷಕರ ಜಾಗರೂಕತೆಯ ಮಹತ್ವವನ್ನು ಎತ್ತಿ ತೋರಿಸಿದೆ. ವರದಿಗಳ ಪ್ರಕಾರ, ಲಿತಿಶಾ ಅವರ ತಾಯಿ ಪ್ರಮೀಳಾ ಅವರನ್ನು ಕೊರುಕ್ಕುಪೇಟೆಯಲ್ಲಿರುವ ತನ್ನ ಅಜ್ಜಿಯ ಮನೆಗೆ ಕರೆದೊಯ್ದಿದ್ದರು. ಆಟವಾಡುವಾಗ, ಲಿತಿಶಾ ಬೇಯಿಸದ ಕ್ಯಾರೆಟ್ ತುಂಡನ್ನು ತೆಗೆದುಕೊಂಡು ಬಾಯಿಗೆ ಹಾಕಿದಳು. ಅದು ಅವಳ ಗಂಟಲಿನಲ್ಲಿ ಸಿಲುಕಿಕೊಂಡಿತು. ತಕ್ಷಣದ ವೈದ್ಯಕೀಯ ಚಿಕಿತ್ಸೆಯ ಹೊರತಾಗಿಯೂ, ಲಿತಿಶಾ ಸ್ಟಾನ್ಲಿ ಸರ್ಕಾರಿ ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆ ಉಸಿರುಗಟ್ಟಿ ಸಾವನ್ನಪ್ಪಿದ್ದಾರೆ. ಚೆನ್ನೈನಲ್ಲಿ ಮಗುವಿನ ಸಾವು ಪೋಷಕರ ಜಾಗರೂಕತೆಯ ಮಹತ್ವವನ್ನು ಎತ್ತಿ ತೋರಿಸುತ್ತದೆ ಲಿತಿಶಾ ಅವರ ತಾಯಿ ಪ್ರಮೀಳಾ ತನ್ನ ಮಗುವಿನೊಂದಿಗೆ ಕೊರುಕ್ಕುಪೇಟೆಯಲ್ಲಿರುವ ತನ್ನ ಮನೆಗೆ ಹೋಗಿದ್ದಾಗ ಈ ಘಟನೆ ನಡೆದಿದೆ. ಅಲ್ಲಿ ಆಟವಾಡುತ್ತಿದ್ದ ಲಿತಿಶಾ ಬೇಯಿಸದ ಕ್ಯಾರೆಟ್ ತುಂಡನ್ನು ತಿಂದು ಗಂಟಲಿನಲ್ಲಿ ಸಿಲುಕಿಕೊಂಡಿದ್ದಳು. ಲಿತಿಶಾ ಅವರ ತಾಯಿ ಮತ್ತು ಸಂಬಂಧಿಕರು ಅವಳನ್ನು ವಾಷರ್ಮನ್ಪೇಟೆಯ…

Read More

ಬೆಂಗಳೂರು: ಕಾಂಗ್ರೆಸ್‌ ಸರ್ಕಾರ ಮಾಡಿದ ಪಾಪದಿಂದಾಗಿ ಜನರು ಮೈಕ್ರೋ ಫೈನಾನ್ಸ್‌ನಲ್ಲಿ ಸಾಲ ಪಡೆಯುತ್ತಿದ್ದಾರೆ. ಸರ್ಕಾರವೇ ಸಾಲ ನೀಡಿದ್ದರೆ ಜನರು ಆತ್ಮಹತ್ಯೆ ಮಾಡಿಕೊಳ್ಳುವ ಪರಿಸ್ಥಿತಿ ಬರುತ್ತಿರಲಿಲ್ಲ‌ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಆಕ್ರೋಶ ವ್ಯಕ್ತಪಡಿಸಿದರು. ವಿಧಾನಸೌಧದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಡಾ.ಬಿ.ಆರ್.ಅಂಬೇಡ್ಕರ್‌ ಅಭಿವೃದ್ಧಿ ನಿಗಮದ ಗಂಗಾ ಕಲ್ಯಾಣ ಯೋಜನೆಗೆ 2022-23 ರಲ್ಲಿ ಬಿಜೆಪಿ ಸರ್ಕಾರ 60 ಕೋಟಿ ರೂ. ಅನುದಾನ ನೀಡಿತ್ತು. 2024-25 ರಲ್ಲಿ ಕಾಂಗ್ರೆಸ್‌ 40 ಕೋಟಿ ರೂ. ನೀಡಿದೆ. ಅಂಬೇಡ್ಕರ್‌ ಅಭಿವೃದ್ಧಿ ನಿಗಮದ ಸ್ವಯಂ ಉದ್ಯೋಗ ಯೋಜನೆಗೆ ಬಿಜೆಪಿ 100 ಕೋಟಿ ರೂ. ನೀಡಿದರೆ, ಕಾಂಗ್ರೆಸ್‌ 45 ಕೋಟಿ ರೂ. ನೀಡಿದೆ. ತಾಂಡಾ ಅಭಿವೃದ್ಧಿ ನಿಗಮದ ಸ್ವಯಂ ಉದ್ಯೋಗ ಯೋಜನೆಗೆ ಬಿಜೆಪಿ 110 ಕೋಟಿ ರೂ. ನೀಡಿದರೆ ಕಾಂಗ್ರೆಸ್‌ 60 ಕೋಟಿ ರೂ. ನೀಡಿದೆ. ಕರ್ನಾಟಕ ಆದಿ ಜಾಂಬವ ಅಭಿವೃದ್ಧಿ ನಿಗಮಕ್ಕೆ ಬಿಜೆಪಿ 100 ಕೋಟಿ ರೂ. ನೀಡಿದರೆ, ಕಾಂಗ್ರೆಸ್‌ 50 ಕೋಟಿ ರೂ. ನೀಡಿದೆ. ಜೊತೆಗೆ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ…

Read More

ಬೆಂಗಳೂರು: ನಗರದಲ್ಲಿ ಮತ್ತೊಂದು ಭೀಕರ ಅಗ್ನಿ ಅವಘಡ ಸಂಭವಿಸಿದೆ. ಬೆಂಕಿಯಿಂದಾಗಿ ಹೋಂಡಾ ಶೋರೂಂ ಒಂದು ಧಗಧಗಿಸಿ ಹೊತ್ತಿ ಉರಿಯುತ್ತಿದೆ. ಬೆಂಗಳೂರಿನ ರಾಜ್ ಕುಮಾರ್ ರಸ್ತೆಯಲ್ಲಿರುವಂತ ಪ್ಲಾನೆಟ್ ಹೋಂಡಾ ಶೋ ರೂಂನಲ್ಲಿ ಅಗ್ನಿ ಅವಘಡ ಸಂಭವಿಸಿದೆ. ಬೆಂಕಿಯ ಕೆನ್ನಾಲಿಗೆ ಶೋರೂಂ ವ್ಯಾಪಿಸಿದ್ದು, ಧಗಧಗಿಸಿ ಹೊತ್ತಿ ಉರಿಯುತ್ತಿದೆ. ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿರುವಂತ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿದ್ದಾವೆ. ಬೆಂಕಿ ಹೊತ್ತಿ ಕೊಳ್ಳೋದಕ್ಕೆ ಕಾರಣ ಏನೆಂದು ತನಿಖೆಯಿಂದ ತಿಳಿಯಬೇಕಿದೆ. https://kannadanewsnow.com/kannada/uttarakhand-becomes-first-state-to-implement-uniform-civil-code/ https://kannadanewsnow.com/kannada/shocking-class-8-student-dies-after-collapsing-due-to-low-bp-in-hostel/

Read More

ಡೆಹ್ರಾಡೂನ್: ಮಹತ್ವದ ಕ್ರಮದಲ್ಲಿ, ಉತ್ತರಾಖಂಡ ಸೋಮವಾರ (ಜನವರಿ 27) ಏಕರೂಪ ನಾಗರಿಕ ಸಂಹಿತೆಯನ್ನು (Uniform Civil Code -UCC) ಜಾರಿಗೆ ತಂದಿದೆ. ಹಾಗೆ ಮಾಡಿದ ಮೊದಲ ಭಾರತೀಯ ರಾಜ್ಯವಾಗಿದೆ. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ, “ಇಂದು ನಮ್ಮ ರಾಜ್ಯಕ್ಕೆ ಮಾತ್ರವಲ್ಲ, ಇಡೀ ದೇಶಕ್ಕೆ ಐತಿಹಾಸಿಕ ದಿನವಾಗಿದೆ, ಏಕೆಂದರೆ ನಾವು ರಾಜ್ಯದಲ್ಲಿ ಯುಸಿಸಿ (Uniform Civil Code- UCC) ಅನ್ನು ಜಾರಿಗೆ ತರುತ್ತಿದ್ದೇವೆ” ಎಂದು ಹೇಳಿದರು. https://twitter.com/ANI/status/1883785919951769736 ಕೊಟ್ಟ ಮಾತನ್ನು ಉಳಿಸಿಕೊಂಡಿದ್ದೇವೆ: ಸಿಎಂ ಧಾಮಿ ಉತ್ತರಾಖಂಡದಲ್ಲಿ 2022 ರ ವಿಧಾನಸಭಾ ಚುನಾವಣೆಯ ಸಮಯದಲ್ಲಿ ಬಿಜೆಪಿಯ ದೊಡ್ಡ ಭರವಸೆಗಳಲ್ಲಿ ಒಂದಾದ ಯುಸಿಸಿ ಅನುಷ್ಠಾನವು ಒಂದು ದೊಡ್ಡ ಹೆಜ್ಜೆಯಾಗಿದೆ. ಇದಕ್ಕೂ ಮುನ್ನ ಜನವರಿಯಲ್ಲಿ, ಉತ್ತರಾಖಂಡದ ರಾಜ್ಯ ರಚನೆಯ ದಿನದಂದು ಮಾತನಾಡಿದ ಧಾಮಿ, “ನಾವು 2025 ಅನ್ನು ಉತ್ತರಾಖಂಡಕ್ಕೆ ರಾಜ್ಯ ಸ್ಥಾನಮಾನದ ರಜತ ಮಹೋತ್ಸವ ವರ್ಷವಾಗಿ ಆಚರಿಸುತ್ತಿದ್ದೇವೆ. ಇದು ದೊಡ್ಡ ಸಾಧನೆಗಳ ವರ್ಷವಾಗಲಿದೆ. ಯುಸಿಸಿ ತರುವ ನಮ್ಮ ಭರವಸೆಯನ್ನು ನಾವು ಉಳಿಸಿಕೊಂಡಿದ್ದೇವೆ. ನಾವು ಅದನ್ನು…

Read More

ನವದೆಹಲಿ: ಕೇಂದ್ರ ಗೃಹ ಸಚಿವ ಅಮಿತ್ ಶಾ ಸೋಮವಾರ ಉತ್ತರ ಪ್ರದೇಶದ ಪ್ರಯಾಗ್ ರಾಜ್ ಗೆ ತಲುಪಿ ಸಂಗಮ್ ಘಾಟ್ ನಲ್ಲಿ ಪವಿತ್ರ ಸ್ನಾನ ಮಾಡಿದರು ಮತ್ತು ಮಹಾ ಕುಂಭ ಮೇಳದಲ್ಲಿ ಸಂತರಿಂದ ಆಶೀರ್ವಾದ ಪಡೆದರು. ಪ್ರಯಾಗ್ ರಾಜ್ ನ ತ್ರಿವೇಣಿ ಸಂಗಮದಲ್ಲಿ ಸ್ನಾನ ಮಾಡಿದ ಅಮಿತ್ ಶಾ ಅವರೊಂದಿಗೆ ಬಾಬಾ ರಾಮ್ ದೇವ್ ಮತ್ತು ಇತರ ಸಾಧುಗಳು ಸೇರಿಕೊಂಡರು. https://twitter.com/ANI/status/1883781034476752994 ಪ್ರಯಾಗ್ ರಾಜ್ ಗೆ ಆಗಮಿಸಿದ ಅಮಿತ್ ಶಾ ಅವರನ್ನು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಮತ್ತು ಅವರ ಕ್ಯಾಬಿನೆಟ್ ಸಚಿವರು ಆತ್ಮೀಯವಾಗಿ ಸ್ವಾಗತಿಸಿದರು. ಮಹಾ ಕುಂಭವನ್ನು “ಸನಾತನ ಸಂಸ್ಕೃತಿಯ ವಿಶಿಷ್ಟ ಸಂಕೇತ” ಎಂದು ಕರೆದ ಶಾ, ತಮ್ಮ ಅಧಿಕೃತ ಎಕ್ಸ್ ಹ್ಯಾಂಡಲ್ನಲ್ಲಿ ಪೋಸ್ಟ್ನಲ್ಲಿ, “ಕುಂಭವು ಸಾಮರಸ್ಯದಲ್ಲಿ ಬೇರೂರಿರುವ ಸನಾತನ ಧರ್ಮದ ಜೀವನ ತತ್ವವನ್ನು ಪ್ರದರ್ಶಿಸುತ್ತದೆ” ಎಂದು ಬರೆದಿದ್ದಾರೆ. “ಪವಿತ್ರ ನಗರ ಪ್ರಯಾಗ್ರಾಜ್ನಲ್ಲಿ ಏಕತೆ ಮತ್ತು ಸಮಗ್ರತೆಯ ಈ ದೊಡ್ಡ ಉತ್ಸವದಲ್ಲಿ ಸಂಗಮದಲ್ಲಿ ಸ್ನಾನ ಮಾಡಲು ಮತ್ತು ಸಂತರ ಆಶೀರ್ವಾದ ಪಡೆಯಲು…

Read More

ಶಿವಮೊಗ್ಗ : ಜ.28 ರಂದು ಹೊಸ 11 ಕೆ.ವಿ ಮಾರ್ಗದ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಹಳೆಬೊಮ್ಮನಕಟ್ಟೆ, ಮಹಾರಾಣಿ ಶಾಲೆ ಹತ್ತಿರ, ಪಾರ್ವತಮ್ಮ ಲೇಔಟ್, ದೇವಂಗೆ 2 ನೇ ಹಂತ ಮತ್ತು ಸುತ್ತಮುತ್ತ ಪ್ರದೇಶಗಳ ವ್ಯಾಪ್ತಿಯಲ್ಲಿ ದಿನಾಂಕ 28.01.2025 ರಂದು ಬೆಳಗ್ಗೆ 10.00 ಘಂಟೆಯಿಂದ ಸಂಜೆ 5.00 ಘಂಟೆಯವರೆಗೆ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆಯಲ್ಲಿ ಕೋರಿದೆ. ಕುಕ್ಕುಟ-ಪಶು ಆಹಾರ ತಯಾರಿಕಾ ಘಟಕ-ಮಾರಾಟ ಕೇಂದ್ರಗಳು ಪರವಾನಗಿ ಪಡೆಯುವುದು ಕಡ್ಡಾಯ ಪಶುಪಾಲನೆ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯಿಂದ ಕರ್ನಾಟಕ ಕುಕ್ಕುಟ, ಜಾನುವಾರು ಆಹಾರ (ತಯಾರಿಕೆ ಮತ್ತು ಮಾರಾಟ ನಿಯಂತ್ರಣ) ಆಜ್ಞೆ 1987 ರ ಪ್ರಕಾರ ಕುಕ್ಕುಟ (ಕೋಳಿ) ಮತ್ತು ಜಾನುವಾರು (ಪಶು) ಆಹಾರ ತಯಾರಿಕಾ ಘಟಕಗಳು ಮತ್ತು ಮಾರಾಟ ಮಾಡುವ ಅಂಗಡಿ ಹಾಗೂ ಸಂಘ ಸಂಸ್ಥೆಗಳು ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯಿಂದ ಕುಕ್ಕುಟ/ಪಶು ಆಹಾರ ಉತ್ಪಾದಿಸಲು ಮತ್ತು ಮಾರಾಟ ಮಾಡಲು ಪರವಾನಗಿ (ಲೈಸೆನ್ಸ್) ಪಡೆಯುವುದು ಕಡ್ಡಾಯವಾಗಿದೆ. ಈಗಾಗಲೆ ಸ್ಥಳೀಯ ಸಂಸ್ಥೆಗಳಾದ ಗ್ರಾಮ ಪಂಚಾಯತಿ,…

Read More

ಶಿವಮೊಗ್ಗ : ಪಶುಪಾಲನೆ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯಿಂದ ಕರ್ನಾಟಕ ಕುಕ್ಕುಟ, ಜಾನುವಾರು ಆಹಾರ (ತಯಾರಿಕೆ ಮತ್ತು ಮಾರಾಟ ನಿಯಂತ್ರಣ) ಆಜ್ಞೆ 1987 ರ ಪ್ರಕಾರ ಕುಕ್ಕುಟ (ಕೋಳಿ) ಮತ್ತು ಜಾನುವಾರು (ಪಶು) ಆಹಾರ ತಯಾರಿಕಾ ಘಟಕಗಳು ಮತ್ತು ಮಾರಾಟ ಮಾಡುವ ಅಂಗಡಿ ಹಾಗೂ ಸಂಘ ಸಂಸ್ಥೆಗಳು ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯಿಂದ ಕುಕ್ಕುಟ/ಪಶು ಆಹಾರ ಉತ್ಪಾದಿಸಲು ಮತ್ತು ಮಾರಾಟ ಮಾಡಲು ಪರವಾನಗಿ (ಲೈಸೆನ್ಸ್) ಪಡೆಯುವುದು ಕಡ್ಡಾಯವಾಗಿದೆ. ಈಗಾಗಲೆ ಸ್ಥಳೀಯ ಸಂಸ್ಥೆಗಳಾದ ಗ್ರಾಮ ಪಂಚಾಯತಿ, ಪಟ್ಟಣ ಪಂಚಾಯತಿ, ಪುರಸಭೆ, ನಗರಸಭೆ, ಮಹಾನಗರ ಪಾಲಿಕೆ ಮತ್ತು ಸ್ಥಳೀಯವಾಗಿ ಕೈಗಾರಿಕಾ ಇಲಾಖೆಯಿಂದ ಪರವಾನಗಿ ಪಡೆದಿದ್ದರೂ ಕೂಡ ಸರ್ಕಾರದ ಮೇಲ್ಕಾಣಿಸಿದ ಆಜ್ಞೆಯ ಪ್ರಕಾರ ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯಿಂದ ಪರವಾನಗಿ ಪಡೆಯುವುದು ಕಡ್ಡಾಯವಾಗಿದೆ. ಮತ್ತು ಈ ರೀತಿ ಪಡೆದ ಪರವಾನಗಿಯು ಪ್ರತಿ ವರ್ಷ ಡಿಸೆಂಬರ್-31 ಕ್ಕೆ ಮುಕ್ತಾಯವಾಗುವುದರಿಂದ ನವೀಕರಣವನ್ನು 2025 ರ ಜನವರಿ 01 ರಿಂದ ಪಡೆಯಬೇಕಾಗಿರುತ್ತದೆ. ಪ್ರಸ್ತುತ ವರ್ಷ 2025ನೇ ಸಾಲಿಗೆ…

Read More

ಶಿವಮೊಗ್ಗ : 2024-25ನೇ ಸಾಲಿನಲ್ಲಿ ಪ್ರಥಮ ವರ್ಷದ ಪೂರ್ಣಾವಧಿ ಪಿಹೆಚ್.ಡಿ. ಅಧ್ಯಯನದಲ್ಲಿ ತೊಡಗಿರುವ ಹಿಂದುಳಿದ ವರ್ಗಗಳ ಅರ್ಹ ಹೊಸ ವಿದ್ಯಾರ್ಥಿಗಳಿಂದ ಮಾಸಿಕ ವ್ಯಾಸಂಗ ವೇತನ/ಫೆಲೋಶಿಫ್‌ಗಾಗಿ ಆಫ್‌ಲೈನ್ ಮೂಲಕ ಆಹ್ವಾನಿಸಲಾಗಿದ್ದ ಅರ್ಜಿ ಅವಧಿಯನ್ನು ಫೆ.10 ರವರೆಗೆ ವಿಸ್ತರಿಸಲಾಗಿದೆ. ಅರ್ಜಿಗಳನ್ನು ಆಹ್ವಾನಿಸಲಾಗಿದೆ. 2024-25ನೇ ಸಾಲಿನಲ್ಲಿ ಪೂರ್ಣಾವಧಿ ಪಿಹೆಚ್.ಡಿ. ಅಧ್ಯಯನ ಪ್ರಾರಂಭಿಸಿರುವ ದಿನಾಂಕ:10.1.2024 ಮತ್ತು ಅದರ ನಂತರ ಪ್ರಥಮ ವರ್ಷದ ಪಿಹೆಚ್.ಡಿ ಪ್ರಾರಂಭಿಸಿರುವ ಕರ್ನಾಟಕ ರಾಜ್ಯದ ಹಿಂದುಳಿದ ವರ್ಗಗಳ ಪ್ರವರ್ಗ- 1, II(ಎ), III(ಎ) ಹಾಗೂ III(ಬಿ)ಗೆ ಸೇರಿದ ಅರ್ಹ ವಿದ್ಯಾರ್ಥಿಗಳಿಂದ ಮಾಸಿಕ ವ್ಯಾಸಂಗ ವೇತನ/ಫೆಲೋಶಿಪ್‌ಗಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಕರ್ನಾಟಕದ ಶಾಸನಬದ್ಧ ವಿಶ್ವವಿದ್ಯಾಲಯಗಳಲ್ಲಿ/ಅಧೀನಕ್ಕೆ ಒಳಪಡುವ ಸಂಸ್ಥೆಗಳಲ್ಲಿ ಪ್ರಥಮ ವರ್ಷದ ಪಿಹೆಚ್.ಡಿ. ಅಧ್ಯಯನ ಮಾಡುತ್ತಿರುವ ಹೊಸ ವಿದ್ಯಾರ್ಥಿಗಳು ಮಾತ್ರ ಆಫ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದ್ದು, ಅರ್ಜಿ ಸಲ್ಲಿಸಲು ದಿನಾಂಕ:20-01-2025 ಕೊನೆಯ ದಿನಾಂಕವೆಂದು ನಿಗದಿಪಡಿಸಲಾಗಿತ್ತು. ವಿದ್ಯಾರ್ಥಿಗಳ ಮತ್ತು ಪೋಷಕರ ಮನವಿಯಂತೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವನ್ನು ಫೆ.10 ರವರೆಗೆ ವಿಸ್ತರಿಸಲಾಗಿದೆ. ವಿದ್ಯಾರ್ಥಿಗಳು ಆನ್‌ಲೈನ್ ಅರ್ಜಿ ಪ್ರತಿ ಹಾಗೂ ಒಂದು…

Read More