Subscribe to Updates
Get the latest creative news from FooBar about art, design and business.
Author: kannadanewsnow09
ಶಿವಮೊಗ್ಗ: ಲೋಕಸಭಾ ಚುನಾವಣೆಯಲ್ಲಿ ಕರ್ನಾಟಕದ 28 ಸ್ಥಾನಗಳಲ್ಲಿ 20ಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ಲುವುದಾಗಿ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ವಿಶ್ವಾಸ ವ್ಯಕ್ತ ಪಡಿಸಿದ್ದಾರೆ. ಶಿವಮೊಗ್ಗದಲ್ಲಿ ನಡೆದ ಪ್ರಜಾಧ್ವನಿ 2 ಚುನಾವಣಾ ಪ್ರಚಾರ ಸಮಾವೇಶದಲ್ಲಿ ಮಾತನಾಡಿದಂತ ಅವರು, ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆದಿದೆ. ಐದು ಗ್ಯಾರಂಟಿಗಳನ್ನು ನಾವು ಕೊಟ್ಟ ಮಾತನ್ನು ಉಳಿಸಿಕೊಂಡಿದ್ದೇವೆ. ಕರ್ನಾಟಕದ 28 ಸ್ಥಾನಗಳಲ್ಲಿ 20 ಕ್ಕೂ ಸ್ಥಾನಗಳನ್ನು ಗೆಲ್ಲುತ್ತೇವೆ. ಶಿವಮೊಗ್ಗದಲ್ಲಿ ಕಾಂಗ್ರೆಸ್ ಗೆಲ್ಲಲಿದೆ ಎನ್ನುವ ವಿಶ್ವಾಸ ನನಗಿದೆ ಎಂದರು. ಶಿವಮೊಗ್ಗ ಕುವೆಂಪು ಅವರ ನಾಡು, ಬಂಗಾರಪ್ಪ ಅವರಿಗೆ ಆಶೀರ್ವಾದ ಮಾಡಿದ ನಾಡು. ಈ ಬಾರಿ ಶಿವಮೊಗ್ಗ ಹಾಗೂ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಆಶೀರ್ವಾದ ಮಾಡಬೇಕು. ಕುವೆಂಪು ಅವರು ಈ ನೆಲವನ್ನು ಸರ್ವಜನಾಂಗದ ಶಾಂತಿಯ ತೋಟ ಎಂದು ಕರೆದಿದ್ದಾರೆ. ಈ ಕನಸನ್ನು ನನಸು ಮಾಡಬೇಕು ಎಂದು ಹೇಳಿದರು. ಬಂಗಾರಪ್ಪ ಅವರ ಸಂಪುಟದಲ್ಲಿ ಮಂತ್ರಿಯಾಗಿದ್ದ ಸಮಯದಲ್ಲಿ ಮಲ್ಲಿಕಾರ್ಜುನ ಖರ್ಗೆ ಅವರ ಆತ್ಮೀಯತೆಯನ್ನು ಅತ್ಯಂತ ಹತ್ತಿರದಿಂದ ಕಂಡಿದ್ದೇನೆ. ನಾನು ಮತ್ತು ಸಿದ್ದರಾಮಯ್ಯ ಅವರು ಗ್ಯಾರಂಟಿಗಳನ್ನು ಕೊಟ್ಟಂತೆ…
ಬೆಂಗಳೂರು: ಪ್ರಜ್ವಲ್ ರೇವಣ್ಣ ಅವರ ಅಶ್ಲೀಲ ವೀಡಿಯೋ ಪ್ರಕರಣ ದಿನಕ್ಕೊಂದು ತಿರುವು ಪಡೆಯುತ್ತಿದೆ. ಎಸ್ಐಟಿಯಿಂದ ತನಿಖೆಯನ್ನು ತೀವ್ರಗೊಳಿಸಿರೋ ಬೆನ್ನಲ್ಲೇ, ಏಪ್ರಿಲ್.8ರಂದೇ ನವೀನ್ ಗೌಡ ಎಂಬುವರು ಫೇಸ್ ಬುಕ್ ನಲ್ಲಿ ಪ್ರಜ್ವಲ್ ರೇವಣ್ಣ ವೀಡಿಯೋ ಬಿಡುಗಡೆಗೆ ಕ್ಷಣಗಣನೆ, 8am ಎಂಬುದಾಗಿ ಪೋಸ್ಟ್ ಮಾಡಿದ್ದ ವಿಷಯ ಬೆಳಕಿಗೆ ಬಂದಿದೆ. ಇಂದು ಶಿವಮೊಗ್ಗದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರು ಪ್ರಜ್ವಲ್ ರೇವಣ್ಣ ಅಶ್ಲೀಲ ವೀಡಿಯೋ ಪ್ರಕರಣ ಇದೊಂದು ಲೈಂಗಿಕ ದೌರ್ಜನ್ಯವಲ್ಲ. ಇದು ಸಾಮೂಹಿಕ ಅತ್ಯಾಚಾರವಾಗಿದೆ. ಪ್ರಜ್ವಲ್ 400 ಮಹಿಳೆಯರ ಮೇಲೆ ಅತ್ಯಾಚಾರ ಎಸಗಿರೋದಾಗಿ ಗುಡುಗಿದ್ದರು. ಅಲ್ಲದೇ ಇಂತವರಿಗೆ ಮತ ನೀಡಿ ಅಂತ ಪ್ರಧಾನಿ ಮೋದಿ ಹೇಳಿರೋ ಬಗ್ಗೆ ಕಿಡಿಕಾರಿದ್ದರು. ಈ ಬೆನ್ನಲ್ಲೇ ಪ್ರಜ್ವಲ್ ರೇವಣ್ಣ ವೀಡಿಯೋ ಬಿಡುಗಡೆಗೆ ಕ್ಷಣಗಣನೆ, 8am ಎಂಬುದಾಗಿ ಫೇಸ್ ಬುಕ್ ನಲ್ಲಿ ಏಪ್ರಿಲ್.8ರಂದೇ ನವೀನ್ ಗೌಡ ಎಂಬುವರು ಪೋಸ್ಟ್ ಮಾಡಿದ್ದರ ಬಗ್ಗೆ ಮಾಹಿತಿ ದೊರೆತಿದೆ. ಪ್ರಜ್ವಲ್ ರೇವಣ್ಣ ವೀಡಿಯೋ ಬಿಡುಗಡೆಯಾಗಿ, ಈ ಸಂಬಂಧ ಸಂತ್ರಸ್ತೆಯರಿಂದ ಪೊಲೀಸರಿಗೆ ದೂರು ನೀಡಿ, ಎಫ್ಐಆರ್ ದಾಖಲಾದ…
ತೆಲಂಗಾಣ: ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಫೇಕ್ ವೀಡಿಯೋ ಪ್ರಕರಣ ಸಂಬಂಧ ತೆಲಂಗಾಣ ಕಾಂಗ್ರೆಸ್ ಘಟಕದ ಐಟಿ ಸೆಲ್ ನ ಐವರನ್ನು ಪೊಲೀಸರು ಬಂಧಿಸಿದ್ದಾರೆ. ಅಮಿತ್ ಶಾ ಫೇಕ್ ವೀಡಿಯೋ ಶೇರ್ ಮಾಡಿದ ಪ್ರಕರಣ ಸಂಬಂಧ ತೆಲಂಗಾಣ ಕಾಂಗ್ರೆಸ್ ಘಟಕದ ಐಟಿ ಸೆಲ್ ನ ಐವರನ್ನು ಪೊಲೀಸರು ಬಂಧಿಸಿದ್ದಾರೆ. ಐಟಿ ಸೆಲ್ ಐವರನ್ನು ಬಂಧಿಸಿರುವಂತ ಪೊಲೀಸರು ತೀವ್ರ ವಿಚಾರಣೆ ನಡೆಸುತ್ತಿದ್ದಾರೆ. ಅಂದಹಾಗೇ ಅಮಿತ್ ಶಾ ಅವರು ಮಾತನಾಡಿದ್ದಂತ ಓರಿಜಿನಲ್ ವೀಡಿಯೋ ತಿರುಚಿ ಫೇಕ್ ವೀಡಿಯೋ ಕ್ರಿಯೇಟ್ ಮಾಡಿ ಮೀಸಲಾತಿ ತೆಗೆದು ಹಾಕುವ ಬಗ್ಗೆ ವೀಡಿಯೋ ತಿರುಚಿ ಸೋಷಿಯಲ್ ಮೀಡಿಯಾಗಳಲ್ಲಿ ಶೇರ್ ಮಾಡಲಾಗಿತ್ತು. ಅಮಿತ್ ಶಾ ಹೇಳಿಕೆ ಚಿರುಚಿದಂತ ವೀಡಿಯೋವನ್ನು ತೆಲಂಗಾಣದ ಕೆಲ ನಾಯಕರು ಸೋಷಿಯಲ್ ಮೀಡಿಯಾಗಳಲ್ಲಿ ಶೇರ್ ಮಾಡಿದ್ದರು. ಆ ನಂತ್ರ ಫೇಕ್ ವೀಡಿಯೋ ಸಂಬಂಧ ಕೇಸ್ ದಾಖಲಾಗಿತ್ತು. ಈ ಪ್ರಕರಣದಲ್ಲಿ ಇದೀಗ ತೆಲಂಗಾಣ ಕಾಂಗ್ರೆಸ್ ಐಟಿ ಸೆಲ್ ನ ಐವರನ್ನು ಬಂಧಿಸಲಾಗಿದೆ. https://kannadanewsnow.com/kannada/johnson-johnson-to-pay-rs-648-crore-compensation-for-cancer-cases/ https://kannadanewsnow.com/kannada/breaking-sc-orders-implementation-of-one-third-womens-quota-in-bar-associations/
ಬೆಂಗಳೂರು: ಬಿಟ್ ಕಾಯಿನ್ ಪ್ರಕರಣದಲ್ಲಿ ಪ್ರಮುಖ ಆರೋಪಿ ಎಂಬುದಾಗಿ ಡಿವೈಎಸ್ಪಿ ಶ್ರೀಧರ್ ಕೆ. ಪೂಜಾರಿ ಎಂಬುದಾಗಿ ಹೇಳಲಾಗಿತ್ತು. ಅಲ್ಲದೇ ಕೋರ್ಟ್ ಕೂಡ ಘೋಷಿತ ಆರೋಪಿ ಎಂಬುದಾಗಿ ಆದೇಶಿಸಿತ್ತು. ಈ ಆದೇಶವನ್ನು ಹೈಕೋರ್ಟ್ ರದ್ದುಗೊಳಿಸುವ ಮೂಲಕ ಡಿವೈಎಸ್ಪಿ ಶ್ರೀಧರ್ ಕೆ ಪೂಜಾರ್ ಗೆ ಬಿಗ್ ರಿಲೀಫ್ ನೀಡಿದೆ. ಬಿಟ್ ಕಾಯಿನ್ ಪ್ರಕರಣದಲ್ಲಿ ವಿಚಾರಣೆಗೆ ಸಹಕರಿಸದೇ ಡಿವೈಎಸ್ಪಿ ಶ್ರೀಧರ್ ಕೆ ಪೂಜಾರ್ ತಲೆ ಮರೆಸಿಕೊಂಡಿದ್ದರು. ಹೀಗಾಗಿ ವಿಚಾರಣಾ ನ್ಯಾಯಾಲಯವು ಅವರನ್ನು ಘೋಷಿತ ಆರೋಪಿ ಎಂಬುದಾಗಿ ಘೋಷಿಸಿ, ವಾರೆಂಟ್ ಜಾರಿಗೊಳಿಸತ್ತು. ಈ ವಾರೆಂಟ್ ಪ್ರಶ್ನಿಸಿ ಶ್ರೀಧರ್ ಪೂಜಾರಿ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ಇಂದು ಅರ್ಜಿಯ ವಿಚಾರಣೆ ನಡೆಸಿದಂತ ಹೈಕೋರ್ಟ್ ನ್ಯಾಯಪೀಠವು ಮೇ.8ರಂದು ಬೆಳಿಗ್ಗೆ 9 ಗಂಟೆಗೆ ತನಿಖಾಧಿಕಾರಿಗಳ ಮುಂದೆ ಹಾಜರಾಗಬೇಕು. ಬೆಳಿಗ್ಗೆ 9 ರಿದಂ ಸಂಜೆ6ರವರೆಗೆ ಕಸ್ಟಡಿಗೆ ಪಡೆದು ತನಿಖೆ ನಡೆಸಬೇಕು. ನಂತ್ರ 2 ಲಕ್ಷ ರೂ ಬಾಂಡ್ ಪಡೆದು ಬಿಡುಗಡೆ ಮಾಡಬೇಕು. ಪೊಲೀಸರ ತನಿಖೆಗೆ ಆರೋಪಿ ಶ್ರೀಧರ್ ಸಹಕರಿಸಬೇಕು. ಜಾಮೀನು ಅರ್ಜಿ ಸಲ್ಲಿಸಿದ್ದರೇ…
ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರ ಜಾರಿಗೊಳಿಸಿದಂತ ಶಕ್ತಿ ಯೋಜನೆಗೆ ಭರ್ಜರಿ ರೆಸ್ಪಾನ್ ದೊರೆತಿದೆ. ಸಾರಿಗೆ ಬಸ್ಸುಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣದ ಅವಕಾಶ ನೀಡಿದ ಬಳಿಕ, ಇಂದಿನವರೆಗೆ ಸಾರಿಗೆ ಬಸ್ಸುಗಳಲ್ಲಿ 200 ಕೋಟಿಗೂ ಹೆಚ್ಚು ಮಹಿಳೆಯರು ಉಚಿತವಾಗಿ ಪ್ರಯಾಣಿಸಿದ್ದಾರೆ. ದಿನಾಂಕ 11-06-202 ರಿಂದ 30-06-2023ರವರೆಗೆ ನಾಲ್ಕು ಸಾರಿಗೆ ನಿಗಮಗಳಲ್ಲಿ 10,54,45,047 ಮಹಿಳೆಯರು ಉಚಿತವಾಗಿ ಪ್ರಯಾಣಿಸಿದ್ದಾರೆ. ಇವರ ಟಿಕೆಟ್ ಮೌಲ್ಯ 248,30,13,266 ಆಗಿದೆ. ದಿನಾಂಕ 01-07-2023 ರಿಂದ 31-07-2023ರವರೆಗೆ 19,63,00,625 ಮಹಿಳೆಯರು ಉಚಿತವಾಗಿ ಪ್ರಯಾಣಿಸಿದ್ದರೇ, ದಿನಾಂಕ 01-08-2023 ರಿಂದ 31-08-2023ರವರೆಗೆ 20,03,60,680 ಮಹಿಳೆಯರು, ದಿನಾಂಕ 01-09-2023 ರಿಂದ 30-09-2023ರವರೆಗೆ 18,95,49,754 ಮಹಿಳೆಯರು ಉಚಿತವಾಗಿ ಪ್ರಯಾಣಿಸಿದ್ದಾರೆ. ದಿನಾಂಕ 01-10-2023ರಿಂದ 31-10-2023ರವರೆಗೆ 18,26,17,460 ಮಹಿಳೆಯರು, 01-11-2023 ರಿಂದ 30-11-2023ರವರೆಗೆ 18,25,74,439 ಮಹಿಳೆಯರು ಉಚಿತವಾಗಿ ಸಾರಿಗೆ ಬಸ್ಸುಗಳಲ್ಲಿ ಸಂಚರಿಸಿದ್ದಾರೆ. ದಿನಾಂಕ 01-12-2023ರಿಂದ 31-12-2023ರವರೆಗೆ 19,55,52,662 ಮಹಿಳೆಯರು, ದಿನಾಂಕ 01-01-2024ರಿಂದ 31-01-2024ರವರೆಗೆ 19,26,34,708 ಮಹಿಳೆಯರು ಉಚಿತವಾಗಿ ನಾಲ್ಕು ಸಾರಿಗೆ ನಿಗಮಗಳಲ್ಲಿ ಪ್ರಯಾಣಿಸಿದ್ದಾರೆ. ಒಟ್ಟಾರೆಯಾಗಿ ದಿನಾಂಕ 11-06-2023ರಿಂದ 01-05-2023ರವರೆಗೆ ಕೆ ಎಸ್…
ಬೆಂಗಳೂರು: ಹಾಸನ ಪೆನ್ ಡ್ರೈವ್ ಪ್ರಕರಣಕ್ಕೆ ಈಗ ಹೊಸ ಟ್ವಿಸ್ಟ್ ಸಿಕ್ಕಿದೆ. ಅದೇ ಸೋಷಿಯಲ್ ಮೀಡಿಯಾದಲ್ಲಿ ವೀಡಿಯೋ ವೈರಲ್ ಮಾಡಿದಂತ ಸೂತ್ರಧಾರಿಯ ಸುಳಿವು ಪತ್ತೆಯಾಗಿರೋದಾಗಿ ತಿಳಿದು ಬಂದಿದೆ. ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವೀಡಿಯೋ ಪ್ರಕರಣ ರಾಷ್ಟ್ರಮಟ್ಟದಲ್ಲಿ ಸದ್ದು ಮಾಡಿದೆ. ದಿನಕ್ಕೊಂದು ತಿರುವು ಪಡೆದುಕೊಳ್ಳುತ್ತಿರುವ ಪ್ರಕರಣದಲ್ಲಿ, ಇದೀಗ ಮತ್ತೊಂದು ಹೊಸ ಟ್ವಿಸ್ಟ್ ಸಿಕ್ಕಿದೆ. ಅದೇ ವಾಟ್ಸ್ ಆಪ್ ನಲ್ಲಿ ಮೊದಲು ಶೇರ್ ಮಾಡಿದಂತ ಆರೋಪಿಯ ಸುಳಿವು ಪತ್ತೆಯಾಗಿದೆಯಂತೆ. ಮೊದಲು ಯಾರು ವಾಟ್ಸ್ ಆಪ್ ನಲ್ಲಿ ಕಾಪಿ ಮಾಡಿದ್ರೋ ಆ ವ್ಯಕ್ತಿಯ ಸುಳಿವು ಪತ್ತೆಯಾಗಿದೆ. ಪ್ರಜ್ವಲ್ ರೇವಣ್ಣ ಅಶ್ಲೀಲ ವೀಡಿಯೋವನ್ನು ಮೊದಲು ವಾಟ್ಸ್ ಆಪ್ ನಲ್ಲಿ ಶೇರ್ ಮಾಡಿದ್ದೇ ಶ್ರೇಯಸ್ ಶಿಷ್ಯ ಎಂಬುದಾಗಿ ತಿಳಿದು ಬಂದಿದೆ. ಕೈ ಮುಖಂಡನಿಗೆ ಮೊದಲು ವಾಟ್ಸ್ ಮೂಲಕ ಶ್ರೇಯಸ್ ಶಿಷ್ಯ ಪ್ರಜ್ವಲ್ ರೇವಣ್ಣ ಅವರ ವೀಡಿಯೋ ಕಳುಹಿಸಿರೋದಾಗಿ ಪತ್ತೆಯಾಗಿದೆ ಎನ್ನಲಾಗಿದೆ. ಸ್ವತಹ ಪ್ರಜ್ವಲ್ ರೇವಣ್ಣ ಮಾಜಿ ಕಾರು ಚಾಲಕ ಕಾರ್ತಿಕ್ ನಂಬರ್ ನಿಂದಲೇ ಅಶ್ಲೀಲ ವೀಡಿಯೋ ಶೇರ್…
ಶಿವಮೊಗ್ಗ: 400 ಮಹಿಳೆಯ ಮೇಲೆ ಪ್ರಜ್ವಲ್ ರೇವಣ್ಣ ಅತ್ಯಾಚಾರ ನಡೆಸಿದ್ದಾರೆ. ಕೃತ್ಯದ ವೀಡಿಯೋ ಸಹ ಮಾಡಿಕೊಂಡಿದ್ದಾನೆ. ಇದು ಲೈಂಗಿಕರ ಹಗರಣವಲ್ಲ ಸಾಮೂಹಿಕ ಅತ್ಯಾಚಾರ ಎಂಬುದಾಗಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಗಂಭೀರ ಆರೋಪ ಮಾಡಿದ್ದಾರೆ. ನಗರದಲ್ಲಿ ಇಂದು ಪ್ರಜಾಧ್ವನಿ ಸಮಾವೇಶದಲ್ಲಿ ಭಾಗಿಯಾಗಿ ಮಾತನಾಡಿದಂತ ಅವರು, ಪ್ರಜ್ವಲ್ ರೇವಣ್ಣ ಕೃತ್ಯ ನಡೆಸಿರೋದಲ್ಲದೇ ವೀಡಿಯೋ ಕೂಡ ಮಾಡಿಕೊಂಡಿದ್ದಾನೆ. ಇದು ಲೈಂಗಿಕ ಹಗರಣವಲ್ಲ. ಬದಲಾಗಿ ಸಾಮೂಹಿಕ ಅತ್ಯಾಚಾರವಾಗಿದೆ ಎಂಬುದಾಗಿ ಆಕ್ರೋಶ ಹೊರ ಹಾಕಿದರು. ಪ್ರಧಾನಿ ನರೇಂದ್ರ ಮೋದಿಯವರು ಅತ್ಯಾಚಾರಿಯನ್ನು ಸಮರ್ಥನೆ ಮಾಡಿಕೊಂಡಿದ್ದಾರೆ. ಪ್ರಜ್ವಲ್ ರೇವಣ್ಣಗೆ ವೋಟ್ ಹಾಕಿದ್ರೆ ನನಗೆ ಮತ ಹಾಕಿದಂತೆ ಅಂದಿದ್ದಾರೆ. ಬಿಜೆಪಿ ನಾಯಕರಿಗೆ ಅತ್ಯಾಚಾರ ಅನ್ನೋದು ಗೊತ್ತಿಲ್ವ ಅಂತ ಪ್ರಶ್ನಿಸಿದರು https://kannadanewsnow.com/kannada/johnson-johnson-to-pay-rs-648-crore-compensation-for-cancer-cases/ https://kannadanewsnow.com/kannada/pakistan-wants-to-make-rahul-gandhi-the-prime-minister-of-india-pm-modi/
ನಾವು ಕಷ್ಟಪಟ್ಟು ದುಡಿದ ಹಣವನ್ನು ಖರ್ಚು ಮಾಡಬೇಕು ಆದರೆ ಆ ಖರ್ಚುಗಳನ್ನು ಒಳ್ಳೆಯದಕ್ಕೆ ಖರ್ಚು ಮಾಡಬೇಕು ಮತ್ತು ವ್ಯರ್ಥ ಮಾಡಬಾರದು. ಕಟ್ಟುನಿಟ್ಟಾಗಿ ಹೇಳುವುದಾದರೆ, ವ್ಯರ್ಥವಾದರೆ ಒಬ್ಬರ ಜೀವನದಲ್ಲಿ ಪ್ರಗತಿಯಿಲ್ಲ. ಒಬ್ಬರ ಪ್ರಗತಿಯನ್ನು ಹಣದಿಂದ ನಿರ್ಧರಿಸಲಾಗುತ್ತದೆ. ಎಷ್ಟರಮಟ್ಟಿಗೆ ಹಣ ಉಳಿತಾಯ ಮತ್ತು ಮಂಗಳಕರವಾಗಿ ಖರ್ಚು ಮಾಡಿದರೆ ಅವರ ಜೀವನದಲ್ಲಿ ಪ್ರಗತಿಯುಂಟಾಗುತ್ತದೆ. ಈ ಆಧ್ಯಾತ್ಮಿಕ ಪೋಸ್ಟ್ನಲ್ಲಿ, ಅಂತಹ ವ್ಯರ್ಥಗಳನ್ನು ತಪ್ಪಿಸುವ ಮೂಲಕ ಉಳಿತಾಯವನ್ನು ಹೆಚ್ಚಿಸಲು ಮಾಡಬಹುದಾದ ಪರಿಹಾರವನ್ನು ನಾವು ನೋಡಲಿದ್ದೇವೆ . ಶ್ರೀ ಸಿಗಂದೂರು ಚೌಡೇಶ್ವರಿ ಜ್ಯೋತಿಷ್ಯ ಪೀಠ ನಂ 1ಕೇರಳ ಕೊಳ್ಳೇಗಾಲದ ಮಹಾ ಮಾಂತ್ರಿಕ ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ನಕ್ಷತ್ರಿ ತಂತ್ರಿ ನಂ:- 9686268564. ನಂ 1ವಶೀಕರಣ ಸ್ಪೆಷಲಿಸ್ಟ್ ಒಂದು ಕರೆಯಲ್ಲಿ ಪರಿಹಾರ ತಿಳಿಸುತ್ತಾರೆ ತಾವು ಎಷ್ಟೋ ಜ್ಯೋತಿಷ್ಯರಲ್ಲಿ ಕೇಳಿಯು ಪರಿಹಾರ ಸಿಗದೇ ಮನನೊಂದಿದ್ದರೆ ಪರಿಹಾರ ನಿಮ್ಮ ಸಮಸ್ಯೆಗಳಾದ ಅತ್ತೆ-ಸೊಸೆ ಕಿರಿಕಿರಿ, ಪ್ರೀತಿಯಲ್ಲಿ ನಂಬಿ ಮೋಸ, ಇಷ್ಟ ಪಟ್ಟವರು ನಿಮ್ಮಂತೆ ಆಗಲು, ಗಂಡ ಹೆಂಡತಿ ಕಿರಿಕಿರಿ, ಮದುವೆಯಲ್ಲಿ ಅಡೆತಡೆ, ಸಂತಾನ ಸಮಸ್ಯೆ, ಮಕ್ಕಳು…
ಕಲಿಯುಗದಲ್ಲಿ ಜನರು ಸಾಲದ ಬಾಧೆಯಿಂದ ನರಳುತ್ತಾರೆ ಎಂಬುದು ಸಿದ್ಧರಿಗೆ ತಿಳಿದಿತ್ತು. ಅದಕ್ಕೇ ಅವರು ಈ ಮೈತ್ರೇಯ ಮುಹೂರ್ತ ವನ್ನು ಕಂಡುಹಿಡಿದು ಹೇಳಿದ್ದಾರೆ. ಈ ಮೈತ್ರೇಯ ಮುಹೂರ್ತದ ಸಮಯದಲ್ಲಿ ಸಾಲವನ್ನು ಹಿಂತಿರುಗಿಸಿದಾಗ, ಸಾಲದ ಸಮಸ್ಯೆ ಶೀಘ್ರದಲ್ಲೇ ಪರಿಹಾರವಾಗುತ್ತದೆ ಎಂದು ನಂಬಲಾಗಿದೆ. ಮೈತ್ರೇಯ ಮುಹೂರ್ತದ ಸಮಯವನ್ನು ಬಳಸಿಕೊಂಡು ಅನೇಕರು ಸಾಲದ ಸಮಸ್ಯೆಯಿಂದ ಹೊರಬಂದಿದ್ದಾರೆ ಎಂಬುದು ಗಮನಾರ್ಹ. ಈ ಆಧ್ಯಾತ್ಮಿಕ ಪೋಸ್ಟ್ ಮೂಲಕ ಈ ಮೇ ತಿಂಗಳಲ್ಲಿ ಮೈತ್ರೇಯ ಮುಹೂರ್ತ ಯಾವಾಗ ಬರುತ್ತಿದೆ ಎಂದು ತಿಳಿದುಕೊಳ್ಳೋಣ. ಮೇನಲ್ಲಿ ಅಮೃತ ಸಿದ್ಧಿ ಯೋಗ ಮೈತ್ರೇಯ ಮುಹೂರ್ತ 06-05-2024 ಸೋಮವಾರ ಬೆಳಿಗ್ಗೆ 7:30 – 8:30 AM ಮೈತ್ರೇಯ ಮುಹೂರ್ತ. ಮಂಗಳವಾರ 07-05-2024 ರಂದು ಮಧ್ಯಾಹ್ನ 12:30 ರಿಂದ 1:30 ರವರೆಗೆ ಮೈತ್ರೇಯ ಮುಹೂರ್ತ ಇದೆ. 23-05-2024 ರಿಂದ 6:30 – 7:30 PM ಮೈತ್ರೇಯ ಮುಹೂರ್ತದ ಸಮಯ. ಶ್ರೀ ಸಿಗಂದೂರು ಚೌಡೇಶ್ವರಿ ಜ್ಯೋತಿಷ್ಯ ಪೀಠ ನಂ 1ಕೇರಳ ಕೊಳ್ಳೇಗಾಲದ ಮಹಾ ಮಾಂತ್ರಿಕ ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ನಕ್ಷತ್ರಿ…
ಯಾದಗಿರಿ : ನರೇಂದ್ರ ಮೋದಿಯವರ ಬಳಿ ಹಣ ಜಾಸ್ತಿ ಇದ್ದರೆ, ಕೇಂದ್ರ ಸರ್ಕಾರದಲ್ಲಿ ಖಾಲಿ ಇರುವ 30 ಲಕ್ಷ ಹುದ್ದೆಗಳನ್ನು ಏಕೆ ತುಂಬಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನಿಸಿದರು. ಅವರು ಇಂದು ಯಾದಗಿರಿಯಲ್ಲಿ ಆಯೋಜಿಸಲಾಗಿದ್ದ ಪ್ರಜಾಧ್ವನಿ -02 ಲೋಕಸಭಾ ಚುನಾವಣಾ ಪ್ರಚಾರ ಕಾರ್ಯಕ್ರಮದಲ್ಲಿ ಭಾಗವಹಿಸಿ ತಮ್ಮ ಪಕ್ಷದ ಅಭ್ಯರ್ಥಿಯಾದ ಜಿ ಕುಮಾರ ನಾಯ್ಕ ಅವರ ಪರವಾಗಿ ಮತದಾರರಲ್ಲಿ ಮತ ಯಾಚಿಸಿ ಮಾತನಾಡಿದರು. ನರೇಂದ್ರ ಮೋದಿಯವರ ಬಳಿ ಹಣ ಜಾಸ್ತಿ ಇದ್ದರೆ, ಕೇಂದ್ರ ಸರ್ಕಾರದಲ್ಲಿ ಖಾಲಿ ಇರುವ 30 ಲಕ್ಷ ಹುದ್ದೆಗಳನ್ನು ತುಂಬಲು ಏನು ಅಡ್ಡಿಯಾಗಿತ್ತು? ಅದನ್ನು ತುಂಬಿದ್ದರೆ ಸುಮಾರು 50% ಹಿಂದುಳಿದವರು, ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡದವರಿಗೆ ಕೆಲಸ ದೊರಕುತ್ತಿತ್ತು. ಇನ್ನುಳಿದ 50% ಇತರರಿಗೆ ದೊರಕುತ್ತಿತ್ತು. ಈ ಖಾಲಿ ಹುದ್ದೆಗಳನ್ನು ಏಕೆ ತುಂಬಿಲ್ಲ ಎಂದು ಪ್ರಶ್ನಿಸಿದರು. ರಾಜ್ಯ ಸರ್ಕಾರದ ಬಳಿ ಸಂಬಳ ಕೊಡಲು ದುಡ್ಡಿಲ್ಲ ಎನ್ನುವ ಮೋದಿ ಮತ್ತು ಬಿಜೆಪಿ ಆರೋಪಕ್ಕೆ ಉತ್ತರಿಸಿದ ಮುಖ್ಯಮಂತ್ರಿಗಳು, ದುಡ್ಡಿಲ್ಲದೇ ಹೋಗಿದ್ದರೆ 8 ತಿಂಗಳಲ್ಲಿ 5…