Subscribe to Updates
Get the latest creative news from FooBar about art, design and business.
Author: kannadanewsnow09
ಬೆಂಗಳೂರು: ಆಕ್ಸಿಯಮ್ -4 ಕಾರ್ಯಾಚರಣೆಯ ಭಾಗವಾಗಿ ಅಂತರರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣ ( International Space Station -ISS) ನಲ್ಲಿರುವ ಭಾರತೀಯ ಗಗನ್ಯಾತ್ರಿ ಶುಭಾಂಶು ಶುಕ್ಲಾ, ಐಎಸ್ಎಸ್ಗೆ ತಮ್ಮ ಸುರಕ್ಷಿತ ಪ್ರಯಾಣವನ್ನು ಖಚಿತಪಡಿಸಿಕೊಳ್ಳುವಲ್ಲಿ ಇಸ್ರೋ ತಂಡದ ಪ್ರಯತ್ನಗಳನ್ನು ಶ್ಲಾಘಿಸಿದ್ದಾರೆ. ಅಲ್ಲದೇ ಇಸ್ರೋ ಅಧ್ಯಕ್ಷರಿಗೆ ಪೋನ್ ಕರೆ ಮಾಡಿ ಧನ್ಯವಾದ ತಿಳಿಸಿದ್ದಾರೆ. ಜುಲೈ 6 ರಂದು ಶುಕ್ಲಾ ಅವರು ಇಸ್ರೋ ಅಧ್ಯಕ್ಷ ವಿ ನಾರಾಯಣನ್ ಅವರಿಗೆ ಕರೆ ಮಾಡಿದ್ದರು ಎಂದು ಬಾಹ್ಯಾಕಾಶ ಸಂಸ್ಥೆ ತಿಳಿಸಿದೆ. ಕರೆಯ ಸಮಯದಲ್ಲಿ, ನಾರಾಯಣನ್ ಅವರು ಶುಕ್ಲಾ ಅವರ ಯೋಗಕ್ಷೇಮದ ಬಗ್ಗೆ ತಮ್ಮ ತೀವ್ರ ಆಸಕ್ತಿಯನ್ನು ವ್ಯಕ್ತಪಡಿಸಿದರು ಮತ್ತು ಐಎಸ್ಎಸ್ನಲ್ಲಿ ನಡೆಸಲಾಗುತ್ತಿರುವ ವಿವಿಧ ವೈಜ್ಞಾನಿಕ ಪ್ರಯೋಗಗಳು ಮತ್ತು ಚಟುವಟಿಕೆಗಳ ಬಗ್ಗೆ ವಿಚಾರಿಸಿದರು. ಬಾಹ್ಯಾಕಾಶ ಇಲಾಖೆಯ ಕಾರ್ಯದರ್ಶಿಯೂ ಆಗಿರುವ ನಾರಾಯಣನ್, ಶುಕ್ಲಾ ಅವರು ಭೂಮಿಗೆ ಹಿಂದಿರುಗಿದ ನಂತರ ಎಲ್ಲಾ ಪ್ರಯೋಗಗಳು ಮತ್ತು ಚಟುವಟಿಕೆಗಳನ್ನು ಸೂಕ್ಷ್ಮವಾಗಿ ದಾಖಲಿಸುವ ಮಹತ್ವವನ್ನು ಒತ್ತಿ ಹೇಳಿದರು, ಏಕೆಂದರೆ ಇದು ಭಾರತದ ಮಾನವ ಬಾಹ್ಯಾಕಾಶ ಹಾರಾಟ ಕಾರ್ಯಕ್ರಮವಾದ ಗಗನ್ಯಾನ್ನ…
ಬೆಂಗಳೂರು: ಮೃತಪಟ್ಟ ರೈತರ ಹೆಸರಿನಲ್ಲಿರುವ ಜಮೀನು ಇ-ಪೌತಿ ಮಾಡಿಸಿಕೊಳ್ಳದೇ ಹಾಗೆಯೇ ಬಿಟ್ಟರೇ ಆ ಕುಟುಂಬ ಸರಕಾರದ ಸೌಲಭ್ಯಗಳಿಂದ ವಂಚಿತವಾಗಲಿದ್ದೀರಿ ಎಂಬುದಾಗಿ ರಾಜ್ಯ ಸರ್ಕಾರ ಎಚ್ಚರಿಸಿದೆ. ಪಿಎಂ ಕಿಸಾನ್ ಸಮ್ಮಾನ, ಫಸಲ್ ವಿಮಾ ಯೋಜನೆ ಸೇರಿ ಹಲವು ಸರಕಾರಿ ಸೌಲಭ್ಯಗಳು ಕಳೆದುಕೊಳ್ಳಬೇಕಾಗುತ್ತದೆ. ಹೀಗಾಗಿ ಸಂಬಂಧಪಟ್ಟ ಕುಟುಂಬದ ವಾರಸುದಾರರು ಇ-ಪೌತಿ ಆಂದೋಲನದಲ್ಲಿ ಭಾಗವಹಿಸಿ ತಮ್ಮ ಜಮೀನನ್ನು ವರ್ಗಾಯಿಸಿಕೊಳ್ಳಲು ಅವಕಾಶವಿದೆ. ಹೀಗಾಗಿ ರೈತರು ಯಾವುದೇ ಕಾರಣಕ್ಕೂ ಇದನ್ನು ತಪ್ಪಿಸಿಕೊಳ್ಳಬೇಡಿ ಎಂಬುದಾಗಿ ಸರ್ಕಾರ ಮನವಿ ಮಾಡಿದೆ. ರಾಜ್ಯದಲ್ಲಿ ಮೃತಪಟ್ಟ ಜಮೀನು ಮಾಲೀಕರ ಹೆಸರಿನಲ್ಲಿರುವ ಪಹಣಿಗಳನ್ನು ವಾರಸುದಾರರ ಹೆಸರಿಗೆ ನೋಂದಣಿ ಮಾಡಿಕೊಡಲು ಈ ಹಿಂದಿನಿಂದಲೂ ಅಭಿಯಾನಗಳು ನಡೆದಿವೆ. ಹೋಬಳಿ, ಗ್ರಾಮ ಮಟ್ಟದಲ್ಲಿ ಅಭಿಯಾನ ನಡೆದಿವೆ. ಆದರೂ ಇನ್ನು ಕೆಲವು ಪ್ರಕರಣ ಬಾಕಿ ಇದ್ದು, ಕಂದಾಯ ಇಲಾಖೆ ಸಚಿವರ ನಿರ್ದೇಶನದ ಮೇರೆಗೆ ಮನೆ ಬಾಗಿಲಿಗೆ ಕಂದಾಯ ಸೇವೆಗಳ ‘ಇ-ಪೌತಿ’ ಆಂದೋಲನ ಆರಂಭಿಸಲಾಗಿದೆ. ಈ ಯೋಜನೆಯಡಿ ಕಂದಾಯ ನಿರೀಕ್ಷಕರು ಮತ್ತು ಗ್ರಾಮ ಅಭಿವೃದ್ಧಿ ಅಧಿಕಾರಿಗಳು ರೈತರ ಮನೆ ಬಾಗಿಲಿಗೆ ತೆರಳಿ, ವಾರಸುದಾರರಿಗೆ…
ಬೆಂಗಳೂರು: ರೈತರು ತಮ್ಮ ಜಮೀನುಗಳನ್ನು ಪೌತಿ ಮಾಡಿಸಿಕೊಳ್ಳಲು ಇನ್ಮುಂದೆ ಕಂದಾಯ ಇಲಾಖೆ ಕಚೇರಿವರೆಗೂ ಅಲೆಯಬೇಕಿಲ್ಲ. ಸರಕಾರವೇ ಇ-ಪೌತಿ ಆಂದೋಲನದ ಮೂಲಕ ನಿಮ್ಮ ಮನೆ ಬಾಗಿಲಿಗೆ ಬರಲಿದೆ. ರಾಜ್ಯದಲ್ಲಿ ಮೃತಪಟ್ಟ ಜಮೀನು ಮಾಲೀಕರ ಹೆಸರಿನಲ್ಲಿರುವ ಪಹಣಿಗಳನ್ನು ವಾರಸುದಾರರ ಹೆಸರಿಗೆ ನೋಂದಣಿ ಮಾಡಿಕೊಡಲು ಈ ಹಿಂದಿನಿಂದಲೂ ಅಭಿಯಾನಗಳು ನಡೆದಿವೆ. ಹೋಬಳಿ, ಗ್ರಾಮ ಮಟ್ಟದಲ್ಲಿ ಅಭಿಯಾನ ನಡೆದಿವೆ. ಆದರೂ ಇನ್ನು ಕೆಲವು ಪ್ರಕರಣ ಬಾಕಿ ಇದ್ದು, ಕಂದಾಯ ಇಲಾಖೆ ಸಚಿವರ ನಿರ್ದೇಶನದ ಮೇರೆಗೆ ಮನೆ ಬಾಗಿಲಿಗೆ ಕಂದಾಯ ಸೇವೆಗಳ ‘ಇ-ಪೌತಿ’ ಆಂದೋಲನ ಆರಂಭಿಸಲಾಗಿದೆ. ಈ ಯೋಜನೆಯಡಿ ಕಂದಾಯ ನಿರೀಕ್ಷಕರು ಮತ್ತು ಗ್ರಾಮ ಅಭಿವೃದ್ಧಿ ಅಧಿಕಾರಿಗಳು ರೈತರ ಮನೆ ಬಾಗಿಲಿಗೆ ತೆರಳಿ, ವಾರಸುದಾರರಿಗೆ ಮೊಬೈಲ್ ಮೂಲಕ ಪೌತಿ ಖಾತೆಯನ್ನು ನೋಂದಾಯಿಸಲಿದ್ದಾರೆ. ಈ ಪ್ರಕ್ರಿಯೆಯಲ್ಲಿ ಆಧಾರ್ ಸೀಡಿಂಗ್ನ ಮೂಲಕ ಭೂಮಿ ಹಿಡುವಳಿಯ ನಿಖರ ಮಾಹಿತಿಯನ್ನು ಸಂಗ್ರಹಿಸಲಾಗುತ್ತದೆ. ಜಿಲ್ಲೆಯಲ್ಲಿ ಮೃತಪಟ್ಟ 75,000 ಜಮೀನುಗಳ ಮಾಲೀಕರ ಪಹಣಿಗಳನ್ನು ವಾರಸುದಾರರ ಹೆಸರಿಗೆ ನೋಂದಣಿ ಮಾಡಿಕೊಡಲು ಇ-ಪೌತಿ ಆಂದೋಲನವನ್ನು ಆರಂಭಿಸಿದೆ. ಆಧಾರ್ ಜೋಡಣೆಯಿಂದ ಕೃಷಿ ಭೂಮಿಯ…
ಬೆಂಗಳೂರು: ನಗರದಲ್ಲಿ ಸಿನಿಮಾ ಸ್ಟೈಲ್ ನಲ್ಲಿ ರಾಬರಿ ಮಾಡೋದಕ್ಕೆ ಯತ್ನಿಸಿದ್ದಾರೆ. ಸೂಪರ್ ಮಾರ್ಕೆಟ್ ಗೆ ನುಗ್ಗಿ ದರೋಡೆಗೆ ಮುಂದಾದಂತ ದುಷ್ಕರ್ಮಿಗಳ ಯತ್ನ ವಿಫಲವಾಗಿದೆ. ಬೆಂಗಳೂರಿನ ರಿಚ್ಮಂಡ್ ಟೌನ್ ನ ಸೂಪರ್ ಮಾರ್ಕೆಟ್ ಗೆ ನುಗ್ಗಿ ದರೋಡೆ ಮಾಡೋದಕ್ಕೆ ಸಿನಿಮಾ ಸ್ಟೈಲ್ ನಲ್ಲಿ ನುಗ್ಗಿದ್ದಾರೆ. ದಿನಿಸಿ ಖರೀದಿ ನೆಪದಲ್ಲಿ ತೆರಳಿದ್ದಂತ ಇಬ್ಬರು ಖದೀಮರು ಈ ಕೃತ್ಯ ಎಸಗೋದಕ್ಕೆ ಮುಂದಾಗಿದ್ದಾರೆ. ಸೂಪರ್ ಮಾರ್ಕೆಟ್ ಸಿಬ್ಬಂದಿಗೆ ಚಾಕು ತೋರಿಸಿ ದರೋಡೆ ಯತ್ನ ನಡೆಸಿದ್ದಾರೆ. ಆದರೇ ಸಿಬ್ಬಂದಿ ಚಾಕು ತೋರಿಸಿದರೂ ಹೆದರದೇ ಮುಂದೆ ಸಾಗಿ ದರೋಡೆ ಕೋರರಲ್ಲಿ ಒಬ್ಬನನ್ನು ಹಿಡಿದುಕೊಂಡಿದ್ದಾರೆ. ಈ ವೇಳೆಯಲ್ಲಿ ಸೂಪರ್ ಮಾರ್ಕೆಟ್ ನಲ್ಲಿ ಕದ್ದಿದ್ದಂತ ವಸ್ತುಗಳನ್ನು ಬಿಟ್ಟು ಸ್ಥಳದಿಂದ ಬೈಕ್ ನಲ್ಲಿ ಪರಾರಿಯಾಗಿದ್ದಾರೆ. ಈ ಎಲ್ಲಾ ಕೃತ್ಯವು ಸೂಪರ್ ಮಾರ್ಕೆಟ್ ನಲ್ಲಿದ್ದಂತ ಸಿಸಿಟಿವಿ ಕ್ಯಾಮರಾದಲ್ಲಿ ದಾಖಲಾಗಿದೆ. https://kannadanewsnow.com/kannada/important-information-for-the-public-these-documents-are-mandatory-for-aadhaar-registration-and-renewal/ https://kannadanewsnow.com/kannada/breaking-icc-ceo/
ನವದೆಹಲಿ: ಭಾರತೀಯ ವಿಶಿಷ್ಟ ಗುರುತಿನ ಪ್ರಾಧಿಕಾರ (Unique Identification Authority of India – UIDAI) ಆಧಾರ್ ನೋಂದಣಿ ( Aadhaar registration ) ಮತ್ತು 2025–26ರ ಮೌಲ್ಯಮಾಪನ ವರ್ಷಕ್ಕೆ ಅನ್ವಯವಾಗುವ ಮಾರ್ಪಾಡುಗಳಿಗಾಗಿ ಪರಿಷ್ಕೃತ ಮಾನ್ಯ ದಾಖಲೆಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಆಧಾರ್ ಸುತ್ತಲಿನ ಪ್ರಮುಖ ನಿಯಮಗಳಲ್ಲಿ ಒಂದೆಂದರೆ, ಪ್ರತಿಯೊಬ್ಬ ವ್ಯಕ್ತಿಯು ಒಂದೇ ಆಧಾರ್ ಸಂಖ್ಯೆಯನ್ನು ಮಾತ್ರ ಹೊಂದಲು ಅನುಮತಿಸಲಾಗಿದೆ. ಒಬ್ಬ ವ್ಯಕ್ತಿಯು ಬಹು ಆಧಾರ್ ಐಡಿಗಳನ್ನು ಪಡೆದಿರುವ ಸಂದರ್ಭಗಳಲ್ಲಿ – ಬಹುಶಃ ವ್ಯವಸ್ಥೆಯ ದೋಷಗಳು ಅಥವಾ ಪುನರಾವರ್ತಿತ ಅರ್ಜಿಗಳಿಂದಾಗಿ – ಬಯೋಮೆಟ್ರಿಕ್ ವಿವರಗಳೊಂದಿಗೆ ರಚಿಸಲಾದ ಮೊದಲ ಆಧಾರ್ ಮಾತ್ರ ಸಕ್ರಿಯ ಮತ್ತು ಮಾನ್ಯವಾಗಿರುತ್ತದೆ. ಹೆಚ್ಚುವರಿಯಾಗಿ, ಆಧಾರ್ ಸೇವೆಗಳಿಗೆ ಸ್ವೀಕಾರಾರ್ಹ ದಾಖಲೆಗಳ ಪಟ್ಟಿಯನ್ನು ಆಧಾರ್ (ದಾಖಲಾತಿ ಮತ್ತು ನವೀಕರಣ) ಮೊದಲ ತಿದ್ದುಪಡಿ ನಿಯಮಗಳು, 2025 ರ ಪ್ರಕಾರ ಪರಿಷ್ಕರಿಸಲಾಗಿದೆ. ನವೀಕರಿಸಿದ ಮಾರ್ಗಸೂಚಿಗಳು ಈಗ ಗುರುತು, ವಿಳಾಸ, ಜನ್ಮ ದಿನಾಂಕ ಮತ್ತು ಕುಟುಂಬ ಸಂಬಂಧಗಳನ್ನು ಪರಿಶೀಲಿಸಲು ಬಳಸಬಹುದಾದ ದಾಖಲೆಗಳ ಪ್ರಕಾರಗಳನ್ನು ಸ್ಪಷ್ಟವಾಗಿ ನಿರ್ದಿಷ್ಟಪಡಿಸುತ್ತವೆ. ಪರಿಶೀಲನೆಗೆ…
ಯಾದಗಿರಿ: ಜಿಲ್ಲೆಯಲ್ಲಿ ಕಲುಷಿತ ನೀರು ಸೇವಿಸಿ ಮೂವರು ಸಾವನ್ನಪ್ಪಿದ್ದರೇ, 20ಕ್ಕೂ ಹೆಚ್ಚು ಜನರು ಅಸ್ವಸ್ಥರಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಯಾದಗಿರಿಯ ಸುರಪುರ ತಾಲ್ಲೂಕಿನ ತಿಪ್ಪನಟಗಿ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಕಲುಷಿತ ನೀರು ಸೇವಿಸಿ ಅಸ್ವಸ್ಥರಾಗಿದ್ದಂತ ದೇವಿಕೆಮ್ಮ ಹೊಟ್ಟಿ, ವೆಂಕಮ್ಮ, ರಾಮಣ್ಣ ಪೂಜಾರಿ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾರೆ. 10 ದಿನಗಳ ಹಿಂದೆ ಅಸ್ವಸ್ಥರಾಗಿ ಆಸ್ಪತ್ರೆಗೆ ದಾಖಲಾಗಿದ್ದರು. ಇಂದು ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆ. ಇನ್ನೂ ತಿಪ್ಪನಟಗಿ ಗ್ರಾಮದಲ್ಲಿ 20ಕ್ಕೂ ಹೆಚ್ಚು ಜನರು ಕಲುಷಿತ ನೀರು ಸೇವಿಸಿದ್ದರಿಂದ ಅಸ್ಪಸ್ಥರಾಗಿದ್ದರೇ, 6 ಮಂದಿ ಸ್ಥಿತಿ ಗಂಭೀರವಾಗಿರುವುದಾಗಿ ತಿಳಿದು ಬಂದಿದೆ. https://kannadanewsnow.com/kannada/15-lakhs-financial-assistance-to-the-ashraf-family-who-was-killed-in-mangalore/ https://kannadanewsnow.com/kannada/breaking-icc-ceo/
ಮಂಗಳೂರು: ಕೇರಳ ಮೂಲದ ಅಶ್ರಫ್ ಮಂಗಳೂರಲ್ಲಿ ಗುಂಪು ದಾಳಿಯಲ್ಲಿ ಬಲಿಯಾಗಿದ್ದರು. ಹೀಗೆ ಹತ್ಯೆಗೆ ಒಳಗಾದಂತ ಅಶ್ರಫ್ ಕುಟುಂಬಕ್ಕೆ ಸಚಿವ ಜಮೀರ್ ಅಹ್ಮದ್ ಹಾಗೂ ಸ್ಪೀಕರ್ ಯು.ಟಿ ಖಾದರ್ ಜೊತೆಗೂಡಿ 15 ಲಕ್ಷ ಆರ್ಥಿಕ ನೆರವನ್ನು ನೀಡಿದ್ದಾರೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಸಂಸದ ಕೆ.ಸಿ.ವೇಣುಗೋಪಾಲ್ ಕೋರಿಕೆಯಂತೆ,ಗುಂಪು ಹತ್ಯೆ ಅಶ್ರಫ್ ಕುಟುಂಬಸ್ಥರೊಂದಿಗೆ ಸಭಾಧ್ಯಕ್ಷ ಯು.ಟಿ.ಖಾದರ್,ಸಚಿವ ಜಮೀರ್ ಅಹ್ಮದ್ ಖಾನ್,ಎಐಸಿಸಿ ಕಾರ್ಯದರ್ಶಿ ಬಿ.ಕೆ.ಹರಿಪ್ರಸಾದ್,ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್ ಅಹ್ಮದ್ ಚರ್ಚೆ ಹಾಗೂ ಪರಿಹಾರ ವಿತರಣೆ ಮಾಡಿದರು. ಮಂಗಳೂರಿನ ಕುಡುಪುವಿನಲ್ಲಿ ನಡೆದ ಗುಂಪು ಹತ್ಯೆಗೆ ಸಂಬಂಧಿಸಿದಂತೆ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೇರಳ ಸಂಸದ ಕೆ.ಸಿ.ವೇಣುಗೋಪಾಲ್ ರವರ ಕೋರಿಕೆ ಹಾಗೂ ಸೂಚನೆಯ ಮೇರೆಗೆ ಸಭಾಧ್ಯಕ್ಷ ಯು.ಟಿ.ಖಾದರ್,ಸಚಿವ ಜಮೀರ್ ಅಹ್ಮದ್ ಖಾನ್, ಎಐಸಿಸಿ ಕಾರ್ಯದರ್ಶಿಗಳಾದ ಬಿ.ಕೆ.ಹರಿಪ್ರಸಾದ್ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್ ಅಹ್ಮದ್, ಕಾಂಗ್ರೆಸ್ ಮುಖಂಡರಾದ ಜಿ ಎ ಬಾವ ಹಾಗೂ ಮಂಜೇಶ್ವರ ಶಾಸಕರಾದ ಎ ಕೆ ಎಂ ಅಶ್ರಫ್, ರವರು ಗುಂಪು ಹಲ್ಲೆಯಲ್ಲಿ ಹತ್ಯೆಗೀಡಾದ ಅಶ್ರಫ್ ರವರ ಕುಟುಂಬಸ್ಥರೊಂದಿಗೆ…
ಶಿವಮೊಗ್ಗ: ಮುಖ್ಯಮಂತ್ರಿಗಳ ಬಗ್ಗೆ ಆಡಳಿತ ಪಕ್ಷವಾದ ಕಾಂಗ್ರೆಸ್ಸಿನ ಶಾಸಕರಿಗೇ ವಿಶ್ವಾಸ ಇಲ್ಲವಾಗಿದೆ; ರಾಜ್ಯದ ಜನರಿಗೂ ವಿಶ್ವಾಸ ಇಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಅವರು ತಿಳಿಸಿದ್ದಾರೆ. ಇಂದು ಇಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಮುಂದಿನ ದಿನಗಳಲ್ಲಿ ರಾಜಕೀಯ ವಿದ್ಯಮಾನಗಳು ಯಾವ ರೀತಿ ಆಗಲಿದೆ. ಸ್ಥಾನಪಲ್ಲಟ ಯಾವ ರೀತಿ ಆಗಲಿದೆ ಎಂಬುದನ್ನು ನಾವು ಕಾದು ನೋಡುತ್ತೇವೆ ಎಂದು ಪ್ರಶ್ನೆಗೆ ಉತ್ತರ ಕೊಟ್ಟರು. ಸ್ಥಾನಪಲ್ಲಟ ಆದರೆ ನಮಗೇನೂ ವ್ಯತ್ಯಾಸ ಆಗುವುದಿಲ್ಲ; ರಾಜ್ಯದ ಜನರಿಗೂ ವ್ಯತ್ಯಾಸ ಆಗುವುದಿಲ್ಲ; 15 ಬಜೆಟ್ ಮಂಡಿಸಿದ ಅನುಭವಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಆಡಳಿತದಲ್ಲಿ ಹಣಕಾಸು ವ್ಯವಸ್ಥೆ ಸಂಪೂರ್ಣ ಹಾಳಾಗಿದೆ. ಯಾರೇ ಮುಖ್ಯಮಂತ್ರಿ ಆದರೂ ರಾಜ್ಯವು ಅಭಿವೃದ್ಧಿ ಕಾಣಲು ಸಾಧ್ಯವಾಗದು ಎಂದು ಇನ್ನೊಂದು ಪ್ರಶ್ನೆಗೆ ಉತ್ತರಿಸಿದರು. ರಾಜ್ಯದಲ್ಲಿ ರಾಜಕೀಯ ಅನಿಶ್ಚಿತತೆ ಕಾಡುತ್ತಿದೆ. ಸುರ್ಜೇವಾಲಾ ಅವರು ಪದೇಪದೇ ಬೆಂಗಳೂರಿಗೆ ಬರುತ್ತಿದ್ದಾರೆ. ಶಾಸಕರ ಅಭಿಪ್ರಾಯ ಪಡೆದುಕೊಳ್ಳುತ್ತಿದ್ದಾರೆ. ಇವತ್ತು ಮತ್ತೆ ಬಂದಿದ್ದಾರೆ. 3 ದಿನಗಳ ಕಾಲ ಇರುತ್ತಾರೆ. ಡಿ.ಕೆ.ಶಿವಕುಮಾರ್ ಜೊತೆ 100…
ಬೆಳಗಾವಿ: ಜಿಲ್ಲೆಯಲ್ಲಿ ಬೆಚ್ಚಿ ಬೀಳಿಸೋ ಕೃತ್ಯ ಎನ್ನುವಂತೆ ಕೋರ್ಟ್ ಆವರಣದಲ್ಲೇ ವಕೀಲನ ಮೇಲೆ ವ್ಯಕ್ತಿಯೊಬ್ಬ ಮಾರಣಾಂತಿಕ ಹಲ್ಲೆ ನಡೆಸಿರುವಂತ ಘಟನೆ ನಡೆದಿದೆ. ಶಾಲೆಯೊಂದರಲ್ಲಿ ವಿದ್ಯಾರ್ಥಿಗಳ ನಡುವೆ ಗಲಾಟೆ ನಡೆದಿತ್ತು. ಈ ವಿಚಾರವಾಗಿ ವಕೀಲ ಜಹೀರ್ ಅಬ್ಬಾಸ್ ಹುಕ್ಕೇರಿ ಎಂಬುವರು ಪ್ರಶ್ನಿಸಿದ್ದರು. ಹೀಗೆ ಪ್ರಶ್ನಿಸಿದ್ದಕ್ಕೆ ಸೋಹಿಲ್ ಇನಾಮದಾರ್ ಸೇರಿದಂತೆ ಇಬ್ಬರು ಹಲ್ಲೆ ಮಾಡಿದ್ದಾರೆ ಎಂಬುದಾಗಿ ಆರೋಪಿಸಲಾಗಿದೆ. ಬೆಳಗಾವಿಯ ಕೋರ್ಟ್ ಆವರಣದಲ್ಲೇ ವಕೀಲ ಜಹೀರ್ ಅಬ್ಬಾಸ್ ಹುಕ್ಕೇರಿಯ ಮೇಲೆ ಇಬ್ಬರು ಆರೋಪಿಗಳುಕಲ್ಲು, ರಾಡ್ ನಿಂದ ಮಾರಣಾಂತಿಕವಾಗಿ ಹಲ್ಲೆ ಮಾಡಿದ್ದಾರೆ. ದುಷ್ಕರ್ಮಿಗಳ ಹಲ್ಲೆಯಿಂದಾಗಿ ವಕೀಲ ಜಹೀರ್ ತಲೆ, ಕಿವಿ, ಮೂಗು, ಹೊಟ್ಟೆ ಭಾಗಕ್ಕೆ ಗಂಭೀರ ಗಾಯವಾಗಿದ್ದಾವೆ. ಜಮೀನು ವ್ಯಾಜ್ಯದ ಕೇಸ್ ವಿಚಾರಣೆ ಮುಗಿಸಿ ಕೋರ್ಟ್ ನಿಂದ ಹೊರಬರುತ್ತಿದ್ದಂತ ವೇಳೆಯಲ್ಲಿ ಅವರ ಮೇಲೆ ಏಕಾಏಕಿ ಹಲ್ಲೆಯಾಗಿದೆ. ಹಲ್ಲೆ ನಡೆಸಿದಂತ ನಂತ್ರ ಇಬ್ಬರು ಆರೋಪಿಗಳು ಪರಾರಿಯಾಗಿದ್ದಾರೆ. ಗಾಯಾಳು ವಕೀಲ ಜಹೀರ್ ಗೆ ಬೆಳಗಾವಿಯ ಬಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ. https://kannadanewsnow.com/kannada/opposition-party-leaders-gain-confidence-to-present-the-greater-bangalore-authority-report-in-the-cabinet-meeting-dks/ https://kannadanewsnow.com/kannada/breaking-tahawwur-rana-reveals-pakistan-army-link-to-26-11-terror/
ಬೆಂಗಳೂರು: “ವಿರೋಧ ಪಕ್ಷದ ನಾಯಕರನ್ನು ವಿಶ್ವಾಸಕ್ಕೆ ಪಡೆದ ನಂತರ ಗ್ರೇಟರ್ ಬೆಂಗಳೂರು ಪ್ರಾಧಿಕಾರ ವರದಿ ಬಗ್ಗೆ ಸಚಿವ ಸಂಪುಟ ಸಭೆಯಲ್ಲಿ ಪ್ರಸ್ತಾಪಿಸಲಾಗುವುದು” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು. ಗ್ರೇಟರ್ ಬೆಂಗಳೂರು ಪ್ರಾಧಿಕಾರ ಕುರಿತು ವಿಧಾನಸೌಧದಲ್ಲಿ ಅಧಿಕಾರಿಗಳ ಜತೆ ಸೋಮವಾರ ಸಭೆ ನಡೆಸಿದ ಬಳಿಕ ಬೆಂಗಳೂರು ನಗರಾಭಿವೃದ್ಧಿ ಸಚಿವರೂ ಆದ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದರು. “ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಅಡಿಯಲ್ಲಿ ಪಾಲಿಕೆಗಳನ್ನು ಹೇಗೆ ವಿಂಗಡಿಸಬೇಕು ಎಂಬುದರ ಬಗ್ಗೆ ಸಮಿತಿಯವರು ಅಂತಿಮ ವರದಿ ನೀಡಿದ್ದಾರೆ. ಈ ವಿಚಾರವಾಗಿ ವಿರೋಧ ಪಕ್ಷದ ನಾಯಕರ ಜೊತೆ ಚರ್ಚೆ ಮಾಡಿ ಅವರನ್ನು ವಿಶ್ವಾಸಕ್ಕೆ ಪಡೆಯಬೇಕು ಎಂದು ಸಮಿತಿ ಅಧ್ಯಕ್ಷರಿಗೆ ಸೂಚಿಸಿದ್ದೇನೆ. ಇದಾದ ಬಳಿಕ ಸಚಿವ ಸಂಪುಟ ಸಭೆಯ ಮುಂದೆ ವರದಿ ಬಗ್ಗೆ ಪ್ರಸ್ತಾಪ ಮಾಡುತ್ತೇನೆ. ಈಗ ಹಾಲಿ ಇರುವ ಪಾಲಿಕೆ ವ್ಯಾಪ್ತಿಯಲ್ಲೇ ಇದನ್ನು ಜಾರಿಗೊಳಿಸುತ್ತೇವೆ. ಮುಂದಿನ ದಿನಗಳಲ್ಲಿ ಇದನ್ನು ವಿಸ್ತರಣೆ ಮಾಡಲಾಗುವುದು. ಸಚಿವ ಸಂಪುಟ ಸಭೆಯಲ್ಲಿ ಇದನ್ನು ಪ್ರಸ್ತಾಪಿಸಿ, ಆದಷ್ಟು ಬೇಗ…